Homeಚಳವಳಿಅಗ್ನಿಪಥ್‌ ಯೋಜನೆ: ಯುವಕರಿಗೆ 4 ವರ್ಷಗಳಲ್ಲ, ಪೂರ್ಣಾವಧಿಯ ಉದ್ಯೋಗ ನೀಡಿ- ಕೇಜ್ರಿವಾಲ್ ಒತ್ತಾಯ

ಅಗ್ನಿಪಥ್‌ ಯೋಜನೆ: ಯುವಕರಿಗೆ 4 ವರ್ಷಗಳಲ್ಲ, ಪೂರ್ಣಾವಧಿಯ ಉದ್ಯೋಗ ನೀಡಿ- ಕೇಜ್ರಿವಾಲ್ ಒತ್ತಾಯ

- Advertisement -
- Advertisement -

ಒಕ್ಕೂಟ ಸರ್ಕಾರ ಜಾರಿಗೆ ತಂದಿರುವ ಅಗ್ನಿಪಥ್‌ ಯೋಜನೆ ವಿರುದ್ಧ ಪ್ರತಿಭಟನೆ ನಡೆಸುತ್ತಿರುವ ಉದ್ಯೋಗಾಕಾಂಕ್ಷಿಗಳಿಗೆ ಬೆಂಬಲ ವ್ಯಕ್ತಪಡಿಸಿರುವ ದೆಹಲಿ ಮುಖ್ಯಮಂತ್ರಿ ಅರವಿಂದ್ ಕೇಜ್ರಿವಾಲ್, ’ಯುವಕರಿಗೆ ಕೇವಲ ನಾಲ್ಕು ವರ್ಷಗಳಲ್ಲ, ಪೂರ್ಣಾವಧಿಯ ಉದ್ಯೋಗ ನೀಡಿ’ ಎಂದು ಸರ್ಕಾರವನ್ನು ಒತ್ತಾಯಿಸಿದ್ದಾರೆ.

ಯುವಕರು ಕೇವಲ ನಾಲ್ಕು ವರ್ಷಗಳಲ್ಲು ಅವರ ಜೀವನದುದ್ದಕ್ಕೂ ದೇಶಕ್ಕಾಗಿ ಸೇವೆ ಸಲ್ಲಿಸುವ ಅವಕಾಶವನ್ನು ಕೇಂದ್ರ ಸರ್ಕಾರ ನೀಡಬೇಕು ಎಂದು ಕೇಂದ್ರ ಸರ್ಕಾರಕ್ಕೆ ಮನವಿ ಮಾಡಿದ್ದಾರೆ.

ಮಂಗಳವಾರ (ಜೂನ್.14) ಘೋಷಿಸಲಾದ ಅಗ್ನಿಪಥ್‌ ಯೋಜನೆ ಮೂಲಕ ನಾಲ್ಕು ವರ್ಷಗಳ ಅಲ್ಪಾವಧಿಯ ಒಪ್ಪಂದದ ಮೇಲೆ ಸೇನೆ, ನೌಕಾಪಡೆ ಮತ್ತು ವಾಯುಪಡೆಯಲ್ಲಿ ಸೈನಿಕರನ್ನು ನೇಮಿಸಿಕೊಳ್ಳ ಬಹುದಾಗಿದೆ. ಈ ಯೋಜನೆ ವಿರುದ್ಧ ಯುವಕರು ಬೀದಿಗಿಳಿದು ಹೋರಾಟ ನಡೆಸುತ್ತಿದ್ದಾರೆ.

ಇದನ್ನೂ ಓದಿ: ‘ಅಗ್ನಿ ಪಥ್’ ಯೋಜನೆ ಸೇನೆಗೆ ಅಪಾಯಕಾರಿ: ಕೊಡಗಿನ ವೀರ ಯೋಧರ ಆತಂಕ

ಈ ಬಗ್ಗೆ ತಮ್ಮ ಟ್ವಿಟರ್‌ ಖಾತೆಯಲ್ಲಿ ಬರೆದುಕೊಂಡಿರುವ ಅವರು, “ಸೇನಾ ನೇಮಕಾತಿಯಲ್ಲಿ ಕೇಂದ್ರ ಸರ್ಕಾರದ ಹೊಸ ಯೋಜನೆಗೆ ದೇಶದ ಎಲ್ಲೆಡೆ ವಿರೋಧ ವ್ಯಕ್ತವಾಗುತ್ತಿದೆ. ಯುವಕರು ತುಂಬಾ ಕೋಪಗೊಂಡಿದ್ದಾರೆ. ಆದರೆ, ಅವರ ಬೇಡಿಕೆಗಳು ಸರಿಯಾಗಿವೆ. ಸೇನೆ ನಮ್ಮ ದೇಶದ ಹೆಮ್ಮೆ, ನಮ್ಮ ಯುವಕರು ತಮ್ಮ ಇಡೀ ಜೀವನವನ್ನು ದೇಶಕ್ಕಾಗಿ ನೀಡಲು ಬಯಸುತ್ತಾರೆ, ಅವರ ಕನಸುಗಳನ್ನು ನಾಲ್ಕು ವರ್ಷಗಳಿಗೆ ಕಟ್ಟಬೇಡಿ” ಎಂದಿದ್ದಾರೆ.

ಮತ್ತೊಂದು ಟ್ವೀಟ್‌ನಲ್ಲಿ “ಕೇಂದ್ರ ಸರ್ಕಾರಕ್ಕೆ ಮನವಿ: ಯುವಕರಿಗೆ ನಾಲ್ಕು ವರ್ಷ ಅಲ್ಲ, ಇಡೀ ಜೀವನ ದೇಶ ಸೇವೆ ಮಾಡುವ ಅವಕಾಶ ನೀಡಬೇಕು. ಕಳೆದ ಎರಡು ವರ್ಷಗಳಿಂದ ಸೇನೆಯಲ್ಲಿ ನೇಮಕಾತಿ ನಡೆಯದ ಕಾರಣ ವಯೋಮಿತಿ ಮೀರಿದವರಿಗೂ ಅವಕಾಶ ನೀಡಬೇಕು” ಎಂದು ಮನವಿ ಮಾಡಿದ್ದಾರೆ.

ದೇಶದಾದ್ಯಂತ ಉದ್ಯೋಗಾಕಾಂಕ್ಷಿಗಳು ಸರ್ಕರದ ನಿರ್ಧಾರವನ್ನು ವಿರೋಧಿಸಿ ಪ್ರತಿಭಟನೆ ನಡೆಸುತ್ತಿದ್ದಾರೆ. ನರೇಂದ್ರ ಮೋದಿ ನೇತೃತ್ವದ ಬಿಜೆಪಿ ಸರ್ಕಾರ ಜಾರಿಗೆ ತಂದಿರುವ ‘ಅಗ್ನಿಪಥ್‌‌’ ಯೋಜನೆ ವಿರೋಧಿಸಿ ಮತ್ತು ಸೇನಾ ನೇಮಕಾತಿ ಮಾಡುವಂತೆ ಆಗ್ರಹಿಸಿ ಬಿಹಾರ, ಉತ್ತರ ಪ್ರದೇಶ, ಹರಿಯಾಣ ಮತ್ತು ಜಮ್ಮುವಿನಲ್ಲಿ ಸೇನಾ ಉದ್ಯೋಗಾಕಾಂಕ್ಷಿಗಳು ಭಾರಿ ಪ್ರತಿಭಟನೆ ನಡೆಸುತ್ತಿದ್ದಾರೆ. ಬಿಹಾರದಲ್ಲಿ ಪ್ರತಿಭಟನೆ ಹಿಂಸೆಗೆ ತಿರುಗಿದೆ.

ಇದೇ ವೇಳೆ ರಾಜ್ಯದ ನಾವಡದಲ್ಲಿ ಬಿಜೆಪಿ ಕಚೇರಿಗೆ ಬೆಂಕಿ ಹಚ್ಚಲಾಗಿದ್ದು, ಕಚೇರಿಯನ್ನು ಧ್ವಂಸ ಮಾಡಲಾಗಿದೆ. ಗುರುವಾರ ದೆಹಲಿಯ ನಾಂಗ್ಲೋಯ್ ರೈಲು ನಿಲ್ದಾಣದಲ್ಲಿ ಹಳಿಗಳ ಮೇಲೆ ಮಲಗಿ ರೈಲನ್ನು ನಿಲ್ಲಿಸಿ ಪ್ರತಿಭಟಿಸಿದ್ದಾರೆ.


ಇದನ್ನೂ ಓದಿ: ಅಗ್ನಿಪಥ್‌‌‌‌‌ ಯೋಜನೆ ವಿರೋಧಿಸಿ ಹಲವು ರಾಜ್ಯಗಳಲ್ಲಿ ಪ್ರತಿಭಟನೆ: ಬಿಹಾರ ಬಿಜೆಪಿ ಕಚೇರಿಗೆ ಬೆಂಕಿ ಹಚ್ಚಿ ಧ್ವಂಸ

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ಪಶ್ಚಿಮ ಏಷ್ಯಾ ಸಂಘರ್ಷ| ‘ಈ ಯುದ್ಧವನ್ನು ಕೊನೆಗೊಳಿಸಲು ಒಂದೇ ಮಾರ್ಗ…’: ಮೂರು ಷರತ್ತುಗಳನ್ನು ಮುಂದಿಟ್ಟ ಇರಾನ್

ಇರಾನ್ ಅಧ್ಯಕ್ಷ ಮಸೌದ್ ಪೆಜೆಶ್ಕಿಯಾನ್ ಅವರು ಅಮೆರಿಕ ಮತ್ತು ಇಸ್ರೇಲ್ ಜೊತೆಗಿನ ನಡೆಯುತ್ತಿರುವ ಸಂಘರ್ಷವನ್ನು ಕೊನೆಗೊಳಿಸಲು ಮೂರು ಷರತ್ತುಗಳನ್ನು ನಿಗದಿಪಡಿಸಿದ್ದಾರೆ. ಇದರಲ್ಲಿ ದೇಶವು ಭವಿಷ್ಯದ ದಾಳಿಗಳನ್ನು ಎದುರಿಸುವುದಿಲ್ಲ ಎಂಬ ಖಾತರಿಗಳು ಸೇರಿವೆ. ಬುಧವಾರ ತಮ್ಮ...

ಖಾಸಗಿ ಜಾಗದ ನಮಾಝ್‌ಗೆ ಅಧಿಕಾರಿಗಳಿಂದ ಅಡ್ಡಿ : ಮುಸ್ಲಿಂ ವ್ಯಕ್ತಿಗೆ ಭದ್ರತೆ ಒದಗಿಸಲು ಕೋರ್ಟ್ ಆದೇಶ

ಉತ್ತರ ಪ್ರದೇಶದ ಬರೇಲಿ ಜಿಲ್ಲೆಯ ಮುಸ್ಲಿಂ ವ್ಯಕ್ತಿಯೊಬ್ಬರು ತಮ್ಮ ಖಾಸಗಿ ಜಾಗದಲ್ಲಿ ಇತರರೊಂದಿಗೆ ನಮಾಝ್ ಮಾಡುವುದಕ್ಕೆ ಅಡ್ಡಿಪಡಿಸಲಾಗಿದೆ ಎಂದು ಆರೋಪಿಸಿದ ಹಿನ್ನೆಲೆ, ಅವರಿಗೆ ದಿನದ 24 ಗಂಟೆಯೂ ರಕ್ಷಣೆ ನೀಡಲು ಇಬ್ಬರು ಭದ್ರತಾ...

‘ಒಳಮೀಸಲಾತಿ ಜಾರಿಗೆ ಎಐಸಿಸಿ ಅಧ್ಯಕ್ಷ ಮಲ್ಲಿಕಾರ್ಜುನ ಖರ್ಗೆ ಬಿಡುತ್ತಿಲ್ಲ’: ಮಂದಕೃಷ್ಣ ಮಾದಿಗ ಆರೋಪ

‘ಒಳಮೀಸಲಾತಿ ಜಾರಿಗೆ ತರುತ್ತೇವೆಂದು ಹೇಳಿದ್ದ ಕಾಂಗ್ರೆಸ್, ಈಗ ಒಳಮೀಸಲಾತಿ ಅನುಷ್ಠಾನದಲ್ಲಿ ಮೀನಾಮೇಷ ಎಣಿಸುತ್ತಿದೆ. ಕಾಂಗ್ರೆಸ್ ನ ಹೈಕಮಾಂಡ್ ಸೋನಿಯಾ ಗಾಂಧಿ, ರಾಹುಲ್ ಗಾಂಧಿ ಹಾಗೂ ಪ್ರಿಯಾಂಕಾ ಗಾಂಧಿ. ಈ ಮೂವರನ್ನು ನಿಯಂತ್ರಿಸುವವರು ಕಾಂಗ್ರೆಸ್...

ಸಾವರ್ಕರ್ ಕುರಿತು ಹೇಳಿಕೆ : ರಾಹುಲ್ ಗಾಂಧಿ ವಿರುದ್ಧದ ಮಾನನಷ್ಟ ಮೊಕದ್ದಮೆ ರದ್ದು

ಭಾರತ್ ಜೋಡೋ ಯಾತ್ರೆಯ ಸಂದರ್ಭದಲ್ಲಿ (2022ರಲ್ಲಿ) ಹಿಂದುತ್ವ ಸಿದ್ಧಾಂತವಾದಿ ವಿನಾಯಕ ದಾಮೋದರ್ ಸಾವರ್ಕರ್ ಕುರಿತು ನೀಡಿದ್ದ ಹೇಳಿಕೆಗೆ ಸಂಬಂಧಿಸಿದಂತೆ ಲೋಕಸಭೆಯ ವಿರೋಧ ಪಕ್ಷದ ನಾಯಕ ರಾಹುಲ್ ಗಾಂಧಿ ವಿರುದ್ಧ ದಾಖಲಾಗಿದ್ದ ಮಾನನಷ್ಟ ಮೊಕದ್ದಮೆಯನ್ನು...

‘ಒಳಮೀಸಲಾತಿ ಜಾರಿಯಲ್ಲಿ ಸರ್ಕಾರ ನಿರ್ಲಕ್ಷ್ಯ ಧೋರಣೆ ತೋರಿದರೆ ಹೋರಾಟ ವಿಧಾನಸೌಧಕ್ಕೆ ಸ್ಥಳಾಂತರವಾಗುತ್ತದೆ’: ಮಾದರ ಚೆನ್ನಯ್ಯ ಸ್ವಾಮೀಜಿ

ಕಳೆದ 35 ವರ್ಷಗಳಿಂದ ಹಲವಾರು ಹೋರಾಟಗಾರರು ತಮ್ಮ ಜೀವ-ಜೀವನವನ್ನು ಅರ್ಪಿಸಿ, ಮನೆ-ಮಠವನ್ನು ಬಿಟ್ಟು ಒಳಮೀಸಲಾತಿ ಹೋರಾಟವನ್ನು ಅಂತಿಮ ಘಟ್ಟಕ್ಕೆ ತಂದಿದ್ದಾರೆ. ಅನೇಕರು ಬದುಕನ್ನು ಮಾತ್ರವಲ್ಲ, ಪ್ರಾಣವನ್ನೂ ಕಳೆದುಕೊಂಡಿದ್ದಾರೆ. ಇದು 2ನೇ ಸ್ವಾತಂತ್ರ್ಯ ಹೋರಾಟವಾಗಿದೆ....

ಎಸ್‌ಎನ್‌ಡಿಪಿ ಪ್ರಧಾನ ಕಾರ್ಯದರ್ಶಿ ಹುದ್ದೆಯಿಂದ ವೆಳ್ಳಾಪ್ಪಳ್ಳಿ ನಟೇಶನ್ ಅನರ್ಹ

ಶ್ರೀ ನಾರಾಯಣ ಧರ್ಮ ಪರಿಪಾಲನ ಯೋಗಂ (ಎಸ್‌ಎನ್‌ಡಿಪಿ ಯೋಗಂ) ನ ಪ್ರಧಾನ ಕಾರ್ಯದರ್ಶಿ ಮತ್ತು ಮತ್ತು ಎಸ್‌ಎನ್ ಟ್ರಸ್ಟ್‌ನ ಕಾರ್ಯದರ್ಶಿ ಸ್ಥಾನದಿಂದ ವೆಳ್ಳಾಪ್ಪಳ್ಳಿ ನಟೇಶನ್ ಅವರನ್ನು ಕೇರಳ ಹೈಕೋರ್ಟ್ ಗುರುವಾರ (ಮಾ.12) ಅನರ್ಹಗೊಳಿಸಿದ್ದು,...

‘ಫಾರೂಕ್ ಅಬ್ದುಲ್ಲಾರನ್ನು ಕೊಲ್ಲುವುದು ಸರ್ಕಾರದ ಉದ್ದೇಶವೇ?’..ರಾಜ್ಯ ಸಭೆಯಲ್ಲಿ ಖರ್ಗೆ ಪ್ರಶ್ನೆ

ಜಮ್ಮು ಕಾಶ್ಮೀರದ ಮಾಜಿ ಮುಖ್ಯಮಂತ್ರಿ ಹಾಗೂ ನ್ಯಾಷನಲ್ ಕಾನ್ಫರೆನ್ಸ್ (ಎನ್‌ಸಿ) ಪಕ್ಷದ ಮುಖ್ಯಸ್ಥ ಫಾರೂಕ್ ಅಬ್ದುಲ್ಲಾ ಅವರ ಹತ್ಯೆ ಯತ್ನ ವಿಚಾರವನ್ನು ವಿಪಕ್ಷ ಸದಸ್ಯರು ಗುರುವಾರ (ಮಾ.12) ರಾಜ್ಯಸಭೆಯಲ್ಲಿ ಪ್ರಸ್ತಾಪಿಸಿದರು. ಘಟನೆ ಬಗ್ಗೆ...

56 ಸಾವಿರ ಹುದ್ದೆಗಳ ನೇಮಕಾತಿಯಲ್ಲಿ ಒಳಮೀಸಲಾತಿ ಅನ್ವಯಕ್ಕೆ ಆಗ್ರಹಿಸಿ ಎಡಗೈ ಸಮುದಾಯದಿಂದ ಬೃಹತ್ ಪ್ರತಿಭಟನೆ 

ಸರ್ಕಾರವು ಒಳ ಮೀಸಲಾತಿಯನ್ನು ತಪ್ಪಿಸುವ ಹುನ್ನಾರದಿಂದ ತರಾತುರಿಯಲ್ಲಿ 56,432 ಹುದ್ದೆಗಳ ನೇಮಕಾತಿಗೆ ಆದೇಶ ಹೊರಡಿಸಿದೆ. ನೇಮಕಾತಿಯಲ್ಲಿ ಒಳಮೀಸಲಾತಿ ಅಳವಡಿಸದೆ, ಎಡಗೈ ಸಮುದಾಯಗಳಿಗೆ ಸರ್ಕಾರ ಮತ್ತೆ ವಂಚಿಸುತ್ತಿದೆ ಎಂದು ‘ಒಳಮೀಸಲಾತಿ ಹೋರಾಟ ಸಮಿತಿ’ ಆರೋಪಿಸಿದೆ....

ಲೋಕಸಭೆ ಸ್ಪೀಕರ್ ಓಂ ಬಿರ್ಲಾ ವಿರುದ್ಧದ ಅವಿಶ್ವಾಸ ನಿರ್ಣಯಕ್ಕೆ ಸೋಲು

ಲೋಕಸಭೆ ಸ್ಪೀಕರ್ ಓಂ ಬಿರ್ಲಾ ವಿರುದ್ಧ ವಿರೋಧ ಪಕ್ಷಗಳು ಮಂಡಿಸಿದ್ದ ಅವಿಶ್ವಾಸ ನಿರ್ಣಯವು ಬುಧವಾರ (ಮಾ.11) ಧ್ವನಿ ಮತದ ಮೂಲಕ ತಿರಸ್ಕಾರಗೊಂಡಿದೆ. ಸದನದಲ್ಲಿ ವಿರೋಧ ಪಕ್ಷಗಳ ತೀವ್ರ ಗದ್ದಲ ಮತ್ತು ಘೋಷಣೆಗಳ ನಡುವೆಯೇ ಸ್ಪೀಕರ್...

ಉತ್ತರ ಪ್ರದೇಶ| ರಸ್ತೆ ಗುಂಡಿಗೆ ಇಳಿದ ಆಂಬ್ಯುಲೆನ್ಸ್; ಮರುಜೀವ ಪಡೆದ ಮೆದುಳು ನಿಷ್ಕ್ರಿಯಗೊಂಡಿದ್ದ ಮಹಿಳೆ!

ಉತ್ತರ ಪ್ರದೇಶದ ಬರೇಲಿಯ ಖಾಸಗಿ ಆಸ್ಪತ್ರೆಯೊಂದರ ವೈದ್ಯರು ಮೆದುಳು ನಿಷ್ಕ್ರಿಯ ಎಂದು ಘೋಷಿಸಿದ್ದು, ಮಹಿಳೆಯೊಬ್ಬರ ಮೃತದೇಹವನ್ನು ಅಂತ್ಯಕ್ರಿಯೆಗಾಗಿ ಮನೆಗೆ ಸಾಗಿಸುತ್ತಿದ್ದಾಗ ಆಂಬ್ಯುಲೆನ್ಸ್ ರಸ್ತೆಯ ಗುಂಡಿಗೆ ಇಳಿದ ನಂತರ ಆಕೆ ಜೀವಂತವಾಗಿರುವ ಲಕ್ಷಣಗಳು ಕಂಡುಬಂದು...