Homeಚಳವಳಿಅಗ್ನಿಪಥ ಯೋಜನೆಗೆ ಆಕ್ರೋಶ: ಯೋಜನೆ ಹಿಂತೆಗೆದುಕೊಳ್ಳಲು ತಮಿಳುನಾಡು ಸಿಎಂ ಸ್ಟಾಲಿನ್ ಆಗ್ರಹ

ಅಗ್ನಿಪಥ ಯೋಜನೆಗೆ ಆಕ್ರೋಶ: ಯೋಜನೆ ಹಿಂತೆಗೆದುಕೊಳ್ಳಲು ತಮಿಳುನಾಡು ಸಿಎಂ ಸ್ಟಾಲಿನ್ ಆಗ್ರಹ

- Advertisement -
- Advertisement -

ಶನಿವಾರ ತಮಿಳುನಾಡಿನಲ್ಲಿ ಅಗ್ನಿಪಥ ಯೋಜನೆ ವಿರುದ್ಧದ ಪ್ರತಿಭಟನೆಗಳು ಭುಗಿಲೆದ್ದ ಹಿನ್ನೆಲೆ, ಒಕ್ಕೂಟ ಸರ್ಕಾರವು ತಕ್ಷಣವೇ ಸೇನಾ ನೇಮಕಾತಿ ಯೋಜನೆಯನ್ನು ಹಿಂತೆಗೆದುಕೊಳ್ಳುವಂತೆ ಮುಖ್ಯಮಂತ್ರಿ ಎಂ.ಕೆ ಸ್ಟಾಲಿನ್ ಅವರು ಒತ್ತಾಯಿಸಿ ಹೇಳಿಕೆ ನೀಡಿದ್ದಾರೆ. ’ಈ ಯೋಜನೆ ರಾಷ್ಟ್ರದ ಹಿತಾಸಕ್ತಿಗಳಿಗೆ ವಿರುದ್ಧವಾಗಿದೆ ಎಂದಿದ್ದಾರೆ.

ಮಾಜಿ ಸೇನಾ ಮುಖ್ಯಸ್ಥ ಲೆಫ್ಟಿನೆಂಟ್ ಜನರಲ್ ರಾಜ್ ಕಾಡ್ಯಾನ್ ಅವರನ್ನು ಉಲ್ಲೇಝಿಸಿರುವ ಸಿಎಂ ಸ್ಟಾಲಿನ್, “ಕೇವಲ ನಾಲ್ಕು ವರ್ಷಗಳ ಕಾಲ ಗುತ್ತಿಗೆ ಸೇವೆಯಲ್ಲಿ ಸೈನ್ಯಕ್ಕೆ ಸೇರುವ ವ್ಯಕ್ತಿ ತನ್ನ ಪ್ರಾಣವನ್ನು ತ್ಯಾಗ ಮಾಡುವ ಮಟ್ಟಿಗೆ ಬದ್ಧನಾಗಿರುತ್ತಾನೆ ಎಂದು ನೀವು ಹೇಗೆ ನಿರೀಕ್ಷಿಸುತ್ತಿರಿ” ಎಂದಿದ್ದಾರೆ. ಜೊತೆಗೆ ನಿವೃತ್ತ ಮೇಜರ್ ಜನರಲ್ ಜಿಡಿ ಬಕ್ಷಿ ಅವರು ಈ ಯೋಜನೆಯಿಂದ ವಿಸ್ಮಯಗೊಂಡಿದ್ದಾರೆ ಎಂದು ಹೇಳಿದ್ದಾರೆ.

’ಇತರ ಸೇನಾ ಪರಿಣತರು ಕೂಡ ರಕ್ಷಣಾ ಸೇವೆಗಳು ಅರೆಕಾಲಿಕ ಉದ್ಯೋಗವಾಗಲು ಸಾಧ್ಯವಿಲ್ಲ. ಅಂತಹ ನೇಮಕಾತಿಯು ಸೇನೆಯಲ್ಲಿ ಶಿಸ್ತನ್ನು ಹಾಳು ಮಾಡುತ್ತದೆ ಎಂದಿದ್ದಾರೆ’ ಎಂದು ಸ್ಟಾಲಿನ್ ಹೇಳಿದ್ದಾರೆ.

ಇದನ್ನೂ ಓದಿ: ಪರಿಷ್ಕೃತ ಪಠ್ಯ ಪುಸ್ತಕಗಳನ್ನು ವಿರೋಧಿಸಿ ನಡೆದ ಬೃಹತ್ ಪ್ರತಿಭಟನೆ ಚಿತ್ರಗಳಲ್ಲಿ ನೋಡಿ

“ದೇಶದ ಸುರಕ್ಷತೆಯನ್ನು ಪರಿಗಣಿಸಬೇಕು. ಜೊತೆಗೆ ಈ ಯೋಜನೆಯು ಸಶಸ್ತ್ರ ಪಡೆಗಳಿಗೆ ಸೇರುವ ಲಕ್ಷಗಟ್ಟಲೆ ಯುವಕರ ಗುರಿಯನ್ನು ಹಾಳು ಮಾಡುತ್ತದೆ. ಕೇಂದ್ರ ಸರ್ಕಾರವು ಈ ಯೋಜನೆಯನ್ನು ತಕ್ಷಣವೇ ಹಿಂಪಡೆಯಬೇಕು” ಎಂದು ಸ್ಟಾಲಿನ್ ಆಗ್ರಹಿಸಿದ್ದಾರೆ.

ಇನ್ನು 500 ಕ್ಕೂ ಹೆಚ್ಚು ಸೇನಾ ಆಕಾಂಕ್ಷಿಗಳು ಚೆನ್ನೈನ ಸೆಕ್ರೆಟರಿಯೇಟ್ ಬಳಿ ಪ್ರತಿಭಟನೆ ನಡೆಸಿದ್ದು, ಅಗ್ನಿಪಥ್ ಯೋಜನೆಯನ್ನು ಕೇಂದ್ರ ಹಿಂಪಡೆಯಬೇಕು ಎಂದು ಒತ್ತಾಯಿಸಿದ್ದಾರೆ. ಇವರಲ್ಲಿ ಹೆಚ್ಚಿನವರು 19 ರಿಂದ 23 ವರ್ಷ ವಯಸ್ಸಿನವರಾಗಿದ್ದು, ದೈಹಿಕ ಪರೀಕ್ಷೆಯಲ್ಲಿ ತೇರ್ಗಡೆ ಹೊಂದಿ, ಲಿಖಿತ ಪರೀಕ್ಷೆಯ ದಿನಕ್ಕಾಗಿ ಕಾಯುತ್ತಿದ್ದಾರೆ.

“ನಾವು 2019 ರಲ್ಲಿ ಸೇನಾ ನೇಮಕಾತಿಯ ಭಾಗವಾಗಿದ್ದೇವೆ. ಆದರೆ ಸಾಂಕ್ರಾಮಿಕ ರೋಗದಿಂದಾಗಿ ಸಾಮಾನ್ಯ ಪ್ರವೇಶ ಪರೀಕ್ಷೆಯನ್ನು (CEE) ಇನ್ನೂ ನಡೆಸಿಲ್ಲ. ದಿನಾಂಕಗಳನ್ನು ಮಾರ್ಚ್ 2021 ರಲ್ಲಿ ಘೋಷಿಸಲಾಗಿತ್ತು. ನಂತರ ದಿನಾಂಕ ಬದಲಾಯಿಸಲಾಯಿತು. ಡಿಸೆಂಬರ್‌ನಲ್ಲಿ, ಪರೀಕ್ಷೆಯನ್ನು ರದ್ದುಗೊಳಿಸಲಾಯಿತು” ಎಂದು ರಾಣಿಪೇಟೆಯ ಪ್ರತಿಭಟನಾಕಾರ ಟಿ. ರಮೇಶ್ ಹೇಳಿದ್ದಾರೆ.

2019 ರಲ್ಲಿ ದೈಹಿಕ ಪರೀಕ್ಷೆಗೆ ಹಾಜರಾದವರಿಗೆ ಯಾವುದೇ ವಯಸ್ಸಿನ ಮಿತಿ ಸಡಿಲಿಕೆಯನ್ನು ಕೇಂದ್ರವು ಉಲ್ಲೇಖಿಸಿಲ್ಲ ಎಂದು ಪ್ರತಿಭಟನಾಕಾರರು ಆರೋಪಿಸಿದ್ದಾರೆ.

“ಪೊಲೀಸ್ ಅನುಮತಿಯಿಲ್ಲದೆ ಪ್ರತಿಭಟನೆಯನ್ನು ನಡೆಸಿದರೆ ಪ್ರಕರಣ ದಾಖಲಿಸಲಾಗುವುದು ಎಂದು ಪ್ರತಿಭಟನಾಕಾರರಿಗೆ ಎಚ್ಚರಿಕೆ ನೀಡಲಾಗಿದೆ” ಎಂದು ಪೊಲೀಸ್ ಅಧಿಕಾರಿಯೊಬ್ಬರು ತಿಳಿಸಿದ್ದಾರೆ.

ಉತ್ತರ ಪ್ರದೇಶ, ಬಿಹಾರ, ಜಾರ್ಖಂಡ್, ತೆಲಂಗಾಣ, ಮಧ್ಯಪ್ರದೇಶ ಸೇರಿದಂತೆ ಇತರೆ ರಾಜ್ಯಗಳಲ್ಲಿ ಪ್ರತಿಭಟನೆಗಳು ಹಿಂಸಾಚಾರಕ್ಕೆ ತಿರುಗಿವೆ. ಅಷ್ಟರಮಟ್ಟಿಗೆ ಯುವಜನರು ಕೇಂದ್ರ ಸರ್ಕಾರದ ವಿರುದ್ಧ ತಮ್ಮ ಆಕ್ರೋಶ ಹೊರ ಹಾಕಿದ್ದಾರೆ. ಅಷ್ಟೇ ಅಲ್ಲದೇ ಕೊಡಗಿನ ವೀರ ಯೋಧರೂ ಈ ಯೋಜನೆಯ ಕುರಿತು ಆತಂಕ ವ್ಯಕ್ತಪಡಿಸುತ್ತಿದ್ದಾರೆ.


ಇದನ್ನೂ ಓದಿ: ಯಾರಿಗೂ ಯಾರ ಜೀವವನ್ನು ತೆಗೆಯುವ ಹಕ್ಕು ಇಲ್ಲ- ಸ್ಪಷ್ಟನೆ ನೀಡಿದ ನಟಿ ಸಾಯಿ ಪಲ್ಲವಿ

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

14 ವರ್ಷದೊಳಗಿನ ಮಕ್ಕಳ ಧಾರ್ಮಿಕ ಶಿಕ್ಷಣ ನಿಯಂತ್ರಣಕ್ಕೆ ಅರ್ಜಿ: ಕೇಂದ್ರ ಶಿಕ್ಷಣ ಕಾರ್ಯದರ್ಶಿಗೆ ಸುಪ್ರೀಂ ಕೋರ್ಟ್ ನೋಟಿಸ್

14 ವರ್ಷಕ್ಕಿಂತ ಕಡಿಮೆ ವಯಸ್ಸಿನ ಮಕ್ಕಳಿಗೆ ಧಾರ್ಮಿಕ ಶಿಕ್ಷಣ ನೀಡುತ್ತಿರುವ ಸಂಸ್ಥೆಗಳ ನೋಂದಣಿ, ಮೇಲ್ವಿಚಾರಣೆ ಮತ್ತು ನಿಯಂತ್ರಣಕ್ಕೆ ಸಂಬಂಧಿಸಿದಂತೆ ಸಲ್ಲಿಸಲಾದ ಅರ್ಜಿಯನ್ನು ಪರಿಗಣಿಸುವಲ್ಲಿ ವಿಳಂಬವಾಗಿದೆ ಎಂಬ ಆರೋಪದ ಹಿನ್ನೆಲೆಯಲ್ಲಿ ಕೇಂದ್ರ ಶಿಕ್ಷಣ ಕಾರ್ಯದರ್ಶಿ...

ಸರ್ಕಾರದ 100 ದಿನ: ಪ್ರಚಾರದ ಸ್ವರೂಪವನ್ನೇ ಬದಲಿಸಿದ ಸರ್ಕಾರಿ ಜಾಹೀರಾತು

ಸಾಂಪ್ರದಾಯಿಕ ಪತ್ರಿಕಾ ಜಾಹೀರಾತುಗಳು, ಬ್ಯಾನರ್‌ಗಳು ಹಾಗೂ ಸರ್ಕಾರಿ ಕಾರ್ಯಕ್ರಮಗಳ ನಡುವೆ ಪ್ರಸಾರವಾಗುತ್ತಿದ್ದ ಜಾಹೀರಾತುಗಳ ಕಾಲವೀಗ ಬದಲಾಗಿದೆ. ಪ್ರಜೆಗಳ ಮನಸ್ಸನ್ನು ತಲುಪಲು ಅಧಿಕಾರದಲ್ಲಿರುವವರು ಆಯ್ದುಕೊಳ್ಳುವ ಮಾರ್ಗಗಳು ದಿನದಿಂದ ದಿನಕ್ಕೆ ರೂಪಾಂತರಗೊಳ್ಳುತ್ತಿವೆ. ಇದಕ್ಕೆ ಜ್ವಲಂತ ನಿದರ್ಶನ...

‘ಉಮರ್ ಖಾಲಿದ್ ಒಬ್ಬ ದೇಶಭಕ್ತ..’; ಸಾಕ್ಷ್ಯಚಿತ್ರ ಪ್ರದರ್ಶನ ವಿರೋಧಿಸಿದ ಎಬಿವಿಪಿ ವಿರುದ್ಧ ಹರಿಪ್ರಸಾದ್ ವಾಗ್ದಾಳಿ

ಬೆಂಗಳೂರಿನ ನ್ಯಾಷನಲ್ ಲಾ ಸ್ಕೂಲ್ ಆಫ್ ಇಂಡಿಯಾ ಯುನಿವರ್ಸಿಟಿಯಲ್ಲಿ (ಎನ್‌ಎಲ್‌ಎಸ್‌ಐಯು) ಹೋರಾಟಗಾರ ಉಮರ್ ಖಾಲಿದ್ ಕುರಿತ ಸಾಕ್ಷ್ಯಚಿತ್ರ ಪ್ರದರ್ಶನವನ್ನು ವಿರೋಧಿಸಿದ್ದಕ್ಕಾಗಿ ಕರ್ನಾಟಕ ಪ್ರದೇಶ ಕಾಂಗ್ರೆಸ್ ಸಮಿತಿ ಅಧ್ಯಕ್ಷ ಬಿಕೆ ಹರಿಪ್ರಸಾದ್ ಅವರು ಮಂಗಳವಾರ...

ಜಂತರ್ ಮಂತರ್ ಹಲ್ಲೆ ಪ್ರಕರಣ: ಎಸ್‌ಸಿ/ಎಸ್‌ಟಿ, ಪೋಕ್ಸೊ ಕಾಯ್ದೆಯಡಿ ಬಂಧಿಸಲಾಗಿದ್ದ ಆರೋಪಿ ಸ್ವತಂತ್ರ ಭಾರದ್ವಾಜ್‌ಗೆ ಮಧ್ಯಂತರ ಜಾಮೀನು

ನವದೆಹಲಿ: ಜಂತರ್ ಮಂತರ್‌ನಲ್ಲಿ ನಡೆದ ಪ್ರತಿಭಟನೆಯ ಸಂದರ್ಭದಲ್ಲಿ ವ್ಯಕ್ತಿಯೊಬ್ಬರ ಮೇಲೆ ಹಲ್ಲೆ ನಡೆಸಿದ ಆರೋಪ ಎದುರಿಸುತ್ತಿರುವ ಸ್ವತಂತ್ರ ಭಾರದ್ವಾಜ್‌ಗೆ ದೆಹಲಿಯ ಪಟಿಯಾಲ ಹೌಸ್ ನ್ಯಾಯಾಲಯ ಮೂರು ವಾರಗಳ ಮಧ್ಯಂತರ ಜಾಮೀನು ಮಂಜೂರು ಮಾಡಿದೆ....

ವಿಡಿಯೋದಲ್ಲಿ ‘ಅಸ್ಸಲಾಮು ಅಲೈಕುಮ್’ – ‘ಇನ್ಶಾ ಅಲ್ಲಾ’ ಎಂದಿದ್ದಕ್ಕೆ ಐಪಿಎಸ್ ಅಧಿಕಾರಿ ವರ್ಗಾವಣೆ

'ಅಸ್ಸಲಾಮು ಅಲೈಕುಮ್' ಮತ್ತು 'ಇನ್ಶಾ ಅಲ್ಲಾ' ಎಂದಿದ್ದಕ್ಕೆ ಬಲಪಂಥೀಯ ಸಂಘಟನೆಯೊಂದು ಪಶ್ಚಿಮ ಬಂಗಾಳದ ಗೃಹ ಕಾರ್ಯದರ್ಶಿಗೆ ದೂರು ನೀಡಿದ ಬೆನ್ನಲ್ಲೇ, ಭಾರತೀಯ ಪೊಲೀಸ್ ಸೇವೆ (ಐಪಿಎಸ್) ಅಧಿಕಾರಿ ಬುಷ್ರಾ ಬಾನೋ ಅವರನ್ನು ವರ್ಗಾವಣೆ...

ಪಾನ್ ಮಸಾಲಾ ಜಾಹೀರಾತು ವಿವಾದ: ಶಾರುಖ್, ಅಜಯ್ , ಶ್ರಾಫ್‌ ಅರ್ಜಿ ವಜಾಗೊಳಿಸಿದ ದೆಹಲಿ ಹೈಕೋರ್ಟ್‌

ವಿಮಲ್ ಇಲಾಯಚಿ ಹೆಸರಿನಲ್ಲಿ ನಿಷೇಧಿತ ಪಾನ್ ಮಸಾಲಾ ಉತ್ಪನ್ನದ ಪರೋಕ್ಷ ಪ್ರಚಾರ ನಡೆಸಿದ ಆರೋಪಕ್ಕೆ ಸಂಬಂಧಿಸಿದಂತೆ ಬಾಲಿವುಡ್ ನಟರಾದ ಶಾರುಖ್ ಖಾನ್, ಅಜಯ್ ದೇವಗನ್ ಹಾಗೂ ಟೈಗರ್ ಶ್ರಾಫ್ ಅವರಿಗೆ ಮಹಾರಾಷ್ಟ್ರ ಆಹಾರ...

“ಏಕರೂಪತೆಯು ಸಮಾನತೆಯಲ್ಲ”: 21 ಎನ್‌ಡಿಎ ಆಡಳಿತದ ರಾಜ್ಯಗಳಲ್ಲಿ ಯುಸಿಸಿ ಜಾರಿ ಕುರಿತ ಅಮಿತ್ ಶಾ ಘೋಷಣೆಗೆ ವಿಪಕ್ಷಗಳ ಕಿಡಿ

2029ರ ಲೋಕಸಭಾ ಚುನಾವಣೆಗೂ ಮುನ್ನ ಬಿಜೆಪಿ ನೇತೃತ್ವದ ಎನ್‌ಡಿಎ ಆಡಳಿತವಿರುವ ಎಲ್ಲಾ 21 ರಾಜ್ಯಗಳಲ್ಲಿ ಏಕರೂಪ ನಾಗರಿಕ ಸಂಹಿತೆಯನ್ನು (ಯುಸಿಸಿ) ಜಾರಿಗೊಳಿಸಲಾಗುವುದು ಎಂದು ಅಮಿತ್ ಶಾ ಘೋಷಿಸಿದ ಬೆನ್ನಲ್ಲೇ, ವಿಪಕ್ಷಗಳು ಬಿಜೆಪಿ ತನ್ನ...

ಉತ್ತರ ಪ್ರದೇಶ| ಫಿರೋಜಾಬಾದ್ ಖಾಕಿ ದೌರ್ಜನ್ಯ; ಪೊಲೀಸರ ಭೂಟು ಕಾಲಿನ ಒದೆತಕ್ಕೆ ಗರ್ಭಿಣಿ ಸಾವು

ಉತ್ತರ ಪ್ರದೇಶದ ಫಿರೋಜಾಬಾದ್‌ನ ಶಿಕೋಹಾಬಾದ್ ಪ್ರದೇಶದಲ್ಲಿ ಕಳ್ಳತನ ಪ್ರಕರಣದ ಶಂಕಿತ ಆರೋಪಿಯೊಬ್ಬನನ್ನು ಬಂಧಿಸಲು ಬಂದಿದ್ದ ಪೊಲೀಸರು ಆತನ ಗರ್ಭಿಣಿ ಹೆಂಡತಿಗೆ ಒದ್ದಿದ್ದರಿಂದ ಆಕೆ ಮೃತಪಟ್ಟಿದ್ದು, ಈ ಘಟನೆಗೆ ಸಂಬಂಧಿಸಿದಂತೆ ಇಬ್ಬರು ಸಬ್‌ಇನ್ಸ್‌ಪೆಕ್ಟರ್‌ಗಳು ಸೇರಿದಂತೆ...

ಕೋಲ್ಕತ್ತಾ | 48 ದಿನಗಳಿಂದ ಮುಸ್ಲಿಂ ಕಾಲೋನಿಗೆ ನೀರು ಬಂದ್ : ಬಿಜೆಪಿ ಸರ್ಕಾರದಿಂದ ದ್ವೇಷ ಸಾಧನೆ ಆರೋಪ

ಉತ್ತರ ಕೋಲ್ಕತ್ತಾದ ಕಾಶಿಪುರದ ಜ್ಯೋತಿನಗರ ಕಾಲೋನಿ ನಿವಾಸಿಗಳು ಕಳೆದ 48 ದಿನಗಳಿಂದ ಕುಡಿಯುವ ನೀರಿಗಾಗಿ ಹಾಹಾಕಾರಪಡುತ್ತಿದ್ದಾರೆ. ಇಲ್ಲಿನ ನೂರಾರು ಕುಟುಂಬಗಳಿಗೆ ನೀರಿನ ಮೂಲವಾಗಿರುವ ಐದು ಸಾರ್ವಜನಿಕ ನಲ್ಲಿಗಳು ಸಂಪೂರ್ಣವಾಗಿ ಒಣಗಿ ಹೋಗಿವೆ. ಇದರಿಂದಾಗಿ...

ಗುರುಗ್ರಾಮ| ಮಹಿಳಾ ಬೈಕರ್‌ಗೆ ಡಿಕ್ಕಿ ಹೊಡೆದು ಪರಾರಿಯಾಗಿದ್ದ ಕಾರು ಚಾಲಕನ ಬಂಧನ

ಗುರುಗ್ರಾಮದಲ್ಲಿ ಮಹಿಳಾ ಸ್ಪೋರ್ಟ್ಸ್ ಬೈಕ್ ಸವಾರೆಗೆ ಕಾರಿನಿಂದ ಡಿಕ್ಕಿ ಹೊಡೆದು ಪರಾರಿಯಾಗಿದ್ದ ಪ್ರಕರಣಕ್ಕೆ ಸಂಬಂಧಿಸಿದಂತೆ, ಚಾಲಕ ಕಲ್ಯಾಣ್ ಬೈನ್ಸ್ಲಾನನ್ನು ರಾಜಸ್ಥಾನದ ರಾಜ್‌ಗಢದಲ್ಲಿ ಮಂಗಳವಾರ ಬಂಧಿಸಲಾಗಿದೆ ಎಂದು ಗುರುಗ್ರಾಮ ಕಮಿಷನರ್ ಸಿಬಾಶ್ ಕಬೀರಾಜ್ ತಿಳಿಸಿದ್ದಾರೆ. ಈ...