Homeಚಳವಳಿಅಗ್ನಿಪಥ ಯೋಜನೆಗೆ ಆಕ್ರೋಶ: ಯೋಜನೆ ಹಿಂತೆಗೆದುಕೊಳ್ಳಲು ತಮಿಳುನಾಡು ಸಿಎಂ ಸ್ಟಾಲಿನ್ ಆಗ್ರಹ

ಅಗ್ನಿಪಥ ಯೋಜನೆಗೆ ಆಕ್ರೋಶ: ಯೋಜನೆ ಹಿಂತೆಗೆದುಕೊಳ್ಳಲು ತಮಿಳುನಾಡು ಸಿಎಂ ಸ್ಟಾಲಿನ್ ಆಗ್ರಹ

- Advertisement -
- Advertisement -

ಶನಿವಾರ ತಮಿಳುನಾಡಿನಲ್ಲಿ ಅಗ್ನಿಪಥ ಯೋಜನೆ ವಿರುದ್ಧದ ಪ್ರತಿಭಟನೆಗಳು ಭುಗಿಲೆದ್ದ ಹಿನ್ನೆಲೆ, ಒಕ್ಕೂಟ ಸರ್ಕಾರವು ತಕ್ಷಣವೇ ಸೇನಾ ನೇಮಕಾತಿ ಯೋಜನೆಯನ್ನು ಹಿಂತೆಗೆದುಕೊಳ್ಳುವಂತೆ ಮುಖ್ಯಮಂತ್ರಿ ಎಂ.ಕೆ ಸ್ಟಾಲಿನ್ ಅವರು ಒತ್ತಾಯಿಸಿ ಹೇಳಿಕೆ ನೀಡಿದ್ದಾರೆ. ’ಈ ಯೋಜನೆ ರಾಷ್ಟ್ರದ ಹಿತಾಸಕ್ತಿಗಳಿಗೆ ವಿರುದ್ಧವಾಗಿದೆ ಎಂದಿದ್ದಾರೆ.

ಮಾಜಿ ಸೇನಾ ಮುಖ್ಯಸ್ಥ ಲೆಫ್ಟಿನೆಂಟ್ ಜನರಲ್ ರಾಜ್ ಕಾಡ್ಯಾನ್ ಅವರನ್ನು ಉಲ್ಲೇಝಿಸಿರುವ ಸಿಎಂ ಸ್ಟಾಲಿನ್, “ಕೇವಲ ನಾಲ್ಕು ವರ್ಷಗಳ ಕಾಲ ಗುತ್ತಿಗೆ ಸೇವೆಯಲ್ಲಿ ಸೈನ್ಯಕ್ಕೆ ಸೇರುವ ವ್ಯಕ್ತಿ ತನ್ನ ಪ್ರಾಣವನ್ನು ತ್ಯಾಗ ಮಾಡುವ ಮಟ್ಟಿಗೆ ಬದ್ಧನಾಗಿರುತ್ತಾನೆ ಎಂದು ನೀವು ಹೇಗೆ ನಿರೀಕ್ಷಿಸುತ್ತಿರಿ” ಎಂದಿದ್ದಾರೆ. ಜೊತೆಗೆ ನಿವೃತ್ತ ಮೇಜರ್ ಜನರಲ್ ಜಿಡಿ ಬಕ್ಷಿ ಅವರು ಈ ಯೋಜನೆಯಿಂದ ವಿಸ್ಮಯಗೊಂಡಿದ್ದಾರೆ ಎಂದು ಹೇಳಿದ್ದಾರೆ.

’ಇತರ ಸೇನಾ ಪರಿಣತರು ಕೂಡ ರಕ್ಷಣಾ ಸೇವೆಗಳು ಅರೆಕಾಲಿಕ ಉದ್ಯೋಗವಾಗಲು ಸಾಧ್ಯವಿಲ್ಲ. ಅಂತಹ ನೇಮಕಾತಿಯು ಸೇನೆಯಲ್ಲಿ ಶಿಸ್ತನ್ನು ಹಾಳು ಮಾಡುತ್ತದೆ ಎಂದಿದ್ದಾರೆ’ ಎಂದು ಸ್ಟಾಲಿನ್ ಹೇಳಿದ್ದಾರೆ.

ಇದನ್ನೂ ಓದಿ: ಪರಿಷ್ಕೃತ ಪಠ್ಯ ಪುಸ್ತಕಗಳನ್ನು ವಿರೋಧಿಸಿ ನಡೆದ ಬೃಹತ್ ಪ್ರತಿಭಟನೆ ಚಿತ್ರಗಳಲ್ಲಿ ನೋಡಿ

“ದೇಶದ ಸುರಕ್ಷತೆಯನ್ನು ಪರಿಗಣಿಸಬೇಕು. ಜೊತೆಗೆ ಈ ಯೋಜನೆಯು ಸಶಸ್ತ್ರ ಪಡೆಗಳಿಗೆ ಸೇರುವ ಲಕ್ಷಗಟ್ಟಲೆ ಯುವಕರ ಗುರಿಯನ್ನು ಹಾಳು ಮಾಡುತ್ತದೆ. ಕೇಂದ್ರ ಸರ್ಕಾರವು ಈ ಯೋಜನೆಯನ್ನು ತಕ್ಷಣವೇ ಹಿಂಪಡೆಯಬೇಕು” ಎಂದು ಸ್ಟಾಲಿನ್ ಆಗ್ರಹಿಸಿದ್ದಾರೆ.

ಇನ್ನು 500 ಕ್ಕೂ ಹೆಚ್ಚು ಸೇನಾ ಆಕಾಂಕ್ಷಿಗಳು ಚೆನ್ನೈನ ಸೆಕ್ರೆಟರಿಯೇಟ್ ಬಳಿ ಪ್ರತಿಭಟನೆ ನಡೆಸಿದ್ದು, ಅಗ್ನಿಪಥ್ ಯೋಜನೆಯನ್ನು ಕೇಂದ್ರ ಹಿಂಪಡೆಯಬೇಕು ಎಂದು ಒತ್ತಾಯಿಸಿದ್ದಾರೆ. ಇವರಲ್ಲಿ ಹೆಚ್ಚಿನವರು 19 ರಿಂದ 23 ವರ್ಷ ವಯಸ್ಸಿನವರಾಗಿದ್ದು, ದೈಹಿಕ ಪರೀಕ್ಷೆಯಲ್ಲಿ ತೇರ್ಗಡೆ ಹೊಂದಿ, ಲಿಖಿತ ಪರೀಕ್ಷೆಯ ದಿನಕ್ಕಾಗಿ ಕಾಯುತ್ತಿದ್ದಾರೆ.

“ನಾವು 2019 ರಲ್ಲಿ ಸೇನಾ ನೇಮಕಾತಿಯ ಭಾಗವಾಗಿದ್ದೇವೆ. ಆದರೆ ಸಾಂಕ್ರಾಮಿಕ ರೋಗದಿಂದಾಗಿ ಸಾಮಾನ್ಯ ಪ್ರವೇಶ ಪರೀಕ್ಷೆಯನ್ನು (CEE) ಇನ್ನೂ ನಡೆಸಿಲ್ಲ. ದಿನಾಂಕಗಳನ್ನು ಮಾರ್ಚ್ 2021 ರಲ್ಲಿ ಘೋಷಿಸಲಾಗಿತ್ತು. ನಂತರ ದಿನಾಂಕ ಬದಲಾಯಿಸಲಾಯಿತು. ಡಿಸೆಂಬರ್‌ನಲ್ಲಿ, ಪರೀಕ್ಷೆಯನ್ನು ರದ್ದುಗೊಳಿಸಲಾಯಿತು” ಎಂದು ರಾಣಿಪೇಟೆಯ ಪ್ರತಿಭಟನಾಕಾರ ಟಿ. ರಮೇಶ್ ಹೇಳಿದ್ದಾರೆ.

2019 ರಲ್ಲಿ ದೈಹಿಕ ಪರೀಕ್ಷೆಗೆ ಹಾಜರಾದವರಿಗೆ ಯಾವುದೇ ವಯಸ್ಸಿನ ಮಿತಿ ಸಡಿಲಿಕೆಯನ್ನು ಕೇಂದ್ರವು ಉಲ್ಲೇಖಿಸಿಲ್ಲ ಎಂದು ಪ್ರತಿಭಟನಾಕಾರರು ಆರೋಪಿಸಿದ್ದಾರೆ.

“ಪೊಲೀಸ್ ಅನುಮತಿಯಿಲ್ಲದೆ ಪ್ರತಿಭಟನೆಯನ್ನು ನಡೆಸಿದರೆ ಪ್ರಕರಣ ದಾಖಲಿಸಲಾಗುವುದು ಎಂದು ಪ್ರತಿಭಟನಾಕಾರರಿಗೆ ಎಚ್ಚರಿಕೆ ನೀಡಲಾಗಿದೆ” ಎಂದು ಪೊಲೀಸ್ ಅಧಿಕಾರಿಯೊಬ್ಬರು ತಿಳಿಸಿದ್ದಾರೆ.

ಉತ್ತರ ಪ್ರದೇಶ, ಬಿಹಾರ, ಜಾರ್ಖಂಡ್, ತೆಲಂಗಾಣ, ಮಧ್ಯಪ್ರದೇಶ ಸೇರಿದಂತೆ ಇತರೆ ರಾಜ್ಯಗಳಲ್ಲಿ ಪ್ರತಿಭಟನೆಗಳು ಹಿಂಸಾಚಾರಕ್ಕೆ ತಿರುಗಿವೆ. ಅಷ್ಟರಮಟ್ಟಿಗೆ ಯುವಜನರು ಕೇಂದ್ರ ಸರ್ಕಾರದ ವಿರುದ್ಧ ತಮ್ಮ ಆಕ್ರೋಶ ಹೊರ ಹಾಕಿದ್ದಾರೆ. ಅಷ್ಟೇ ಅಲ್ಲದೇ ಕೊಡಗಿನ ವೀರ ಯೋಧರೂ ಈ ಯೋಜನೆಯ ಕುರಿತು ಆತಂಕ ವ್ಯಕ್ತಪಡಿಸುತ್ತಿದ್ದಾರೆ.


ಇದನ್ನೂ ಓದಿ: ಯಾರಿಗೂ ಯಾರ ಜೀವವನ್ನು ತೆಗೆಯುವ ಹಕ್ಕು ಇಲ್ಲ- ಸ್ಪಷ್ಟನೆ ನೀಡಿದ ನಟಿ ಸಾಯಿ ಪಲ್ಲವಿ

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

31 ವರ್ಷಗಳ ಹಳೇ ಸಾಲ ತೀರಿಸಲು 1200 ಕಿ.ಮೀ ಪ್ರಯಾಣಿಸಿದ ಕೇರಳದ ಇಸ್ಮಾಯಿಲ್

"ನನ್ನ ಕಣ್ಣುಗಳಿಂದ ಆನಂದಬಾಷ್ಪಗಳು ಉದುರಿದವು. ನನ್ನ ಮನಸ್ಸಿಗೆ ಅದೆಷ್ಟು ನೆಮ್ಮದಿ ಸಿಕ್ಕಿತೆಂದರೆ, ಅದನ್ನು ವಿವರಿಸಲು ಪದಗಳೇ ಸಾಲದು. ಆತನಿಗೂ ಅಷ್ಟೇ ದೊಡ್ಡ ಸಮಾಧಾನ." ಹೀಗೆ ಭಾವುಕರಾಗಿ ನುಡಿಯುತ್ತಾರೆ ಮೊಹಮ್ಮದ್ ಇಸ್ಮಾಯಿಲ್. 1995ರಲ್ಲಿ ಸೌದಿ...

ಬಂಡಾಯದ ಬಳಿಕ ಟಿಎಂಸಿಗೆ ಮತ್ತೊಂದು ಸವಾಲು : ಪಕ್ಷದ ಬ್ಯಾಂಕ್ ಖಾತೆಗಳು ಫ್ರೀಝ್

ಮಮತಾ ಬ್ಯಾನರ್ಜಿ ನೇತೃತ್ವದ ತೃಣಮೂಲ ಕಾಂಗ್ರೆಸ್ (ಟಿಎಂಸಿ) ಪಕ್ಷದ ಮೂರು ಬ್ಯಾಂಕ್ ಖಾತೆಗಳಲ್ಲಿರುವ 440 ಕೋಟಿ ರೂಪಾಯಿ ಹಣವನ್ನು ಭಾಗಶಃ ಬಳಸಲು ಕಲ್ಕತ್ತಾ ಹೈಕೋರ್ಟ್ ಅನುಮತಿ ನೀಡಿದ ಮರುದಿನವೇ, ಪಶ್ಚಿಮ ಬಂಗಾಳ ಪೊಲೀಸರು...

ಮಂದಿರ ನಿರ್ಮಾಣದ ಕ್ರೆಡಿಟ್‌ಗೆ ಇದ್ದ ಯಜಮಾನಿಕೆ, ಕೊಳ್ಳೆ ಹೊಡೆದಾಗ ಯಾಕಿಲ್ಲ ಸೇವಕರೇ?

ಬಾಲರಾಮನ ಪ್ರಾಣಪ್ರತಿಷ್ಠಾಪನೆಗೆ ಮುನ್ನ ಪ್ರಧಾನಿಯವರು 11 ದಿನಗಳ ಕಾಲ ಕಠಿಣ ಉಪವಾಸ ವ್ರತ ಆಚರಿಸಿದ್ದರು, ಕೇವಲ ಎಳನೀರು ಕುಡಿದರು, ನೆಲದ ಮೇಲೆ ಮಲಗಿದರು ಎಂದು ಇಡೀ ದೇಶಕ್ಕೆ ಸಾರಲಾಗಿತ್ತು. ಅಯೋಧ್ಯೆಯಿಂದ ಹೊಸ ಕಾಲದ...

‘ಫ್ರೀ ಪ್ಯಾಲೆಸ್ತೀನ್’ ಘೋಷಣೆಯನ್ನು ತಮಾಷೆ ಮಾಡಿದ ಸೈಫ್ ಅಲಿ ಖಾನ್ – ನಿರೂಪಕಿ ಅನುಪಮಾ ಚೋಪ್ರಾ

ಸ್ಪ್ಯಾನಿಷ್ ನಟ ಜೇವಿಯರ್ ಬಾರ್ಡೆಮ್ ಅವರ "ಫ್ರೀ ಪ್ಯಾಲೆಸ್ತೀನ್" ಹೇಳಿಕೆ ಕುರಿತು ಸೈಫ್ ಅಲಿ ಖಾನ್ ಮತ್ತು ಚಲನಚಿತ್ರ ಪತ್ರಕರ್ತೆ ಅನುಪಮಾ ಚೋಪ್ರಾ ನಗುತ್ತಿರುವ ಕ್ಲಿಪ್ ಆನ್‌ಲೈನ್‌ನಲ್ಲಿ ವೈರಲ್ ಆಗಿದ್ದು, ನಟನ ಅಸೂಕ್ಷ್ಮ...

ತೆಲಂಗಾಣ : ಪೋಕ್ಸೋ ಪ್ರಕರಣದ ಆರೋಪಿಯಿಂದ ಸಂತ್ರಸ್ತೆ ಸೇರಿ 6 ಜನರ ಹತ್ಯೆ

ಪೋಕ್ಸೋ ಪ್ರಕರಣದ ಆರೋಪಿಯೊಬ್ಬ ಸಂತ್ರಸ್ತೆ ಸೇರಿದಂತೆ ಒಟ್ಟು ಆರು ಜನರನ್ನು ಭೀಕರವಾಗಿ ಹತ್ಯೆ ಮಾಡಿರುವ ಘಟನೆ ತೆಲಂಗಾಣದ ರಂಗಾರೆಡ್ಡಿ ಜಿಲ್ಲೆಯ ಶಾಬಾದ್ ಮಂಡಲದಲ್ಲಿ ಶುಕ್ರವಾರ (ಜು.10) ರಾತ್ರಿ ನಡೆದಿದೆ. 28 ವರ್ಷ ವಯಸ್ಸಿನ...

‘ನನ್ನನ್ನು ಮೌನಗೊಳಿಸಲು, ನೀವು ನನ್ನನ್ನು ಕೊಲ್ಲಬೇಕಾಗುತ್ತದೆ’: ಟಿಎಂಸಿ ಬಿಕ್ಕಟ್ಟಿನ ನಡುವೆ ಬಿಜೆಪಿ ವಿರುದ್ಧ ಮಮತಾ ಬ್ಯಾನರ್ಜಿ ಆಕ್ರೋಶ  

ಕೋಲ್ಕತ್ತಾ: ಪಶ್ಚಿಮ ಬಂಗಾಳದ ಆಡಳಿತಾರೂಢ ತೃಣಮೂಲ ಕಾಂಗ್ರೆಸ್ (TMC) ಪಕ್ಷದಲ್ಲಿ ಆಂತರಿಕ ಬಿಕ್ಕಟ್ಟು ತಾರಕಕ್ಕೇರಿರುವ ಬೆನ್ನಲ್ಲೇ, ಪಕ್ಷದ ಸುಪ್ರೀಮೋ ಹಾಗೂ ಮುಖ್ಯಮಂತ್ರಿ ಮಮತಾ ಬ್ಯಾನರ್ಜಿ ಅವರು ಇತ್ತೀಚಿನ ತಿಂಗಳುಗಳಲ್ಲೇ ಅತ್ಯಂತ ಪ್ರಬಲವಾದ ರಾಜಕೀಯ...

ಸುಪ್ರೀಂ ಕೋರ್ಟ್‌ನಲ್ಲಿ ಜಡ್ಜ್‌ಗಳನ್ನೇ ‘ನ್ಯಾಯಾಂಗ ಸೇವಕರು’ ಎಂದ ಅರ್ಜಿದರ

ಸುಪ್ರೀಂ ಕೋರ್ಟ್‌ನಲ್ಲಿ ಶುಕ್ರವಾರ ಅತ್ಯಂತ ನಾಟಕೀಯ ಹಾಗೂ ಆಘಾತಕಾರಿ ದೃಶ್ಯವೊಂದು ತೆರೆದುಕೊಂಡಿದೆ. ಪ್ರಕರಣವೊಂದರ ವಿಚಾರಣೆ ವೇಳೆ ಖುದ್ದಾಗಿ ಹಾಜರಾಗಿದ್ದ ಅರ್ಜಿದಾರನೊಬ್ಬ, ಲಕ್ನೋದ ಪೊಲೀಸ್ ಅಧಿಕಾರಿಯೊಬ್ಬರ ವಿರುದ್ಧ ಎಫ್‌ಐಆರ್ (FIR) ದಾಖಲಿಸಲು ನಾನು ನ್ಯಾಯಪೀಠಕ್ಕೆ...

ಮದ್ಯದ ಅಮಲಿನಲ್ಲಿ ಸಾರಿಗೆ ಬಸ್‌ ಅಪಹರಿಸಿದ ವ್ಯಕ್ತಿ; 21 ಕಿ.ಮೀ. ಪ್ರಯಾಣದ ನಂತರ ಅಪಘಾತ

ತೆಲಂಗಾಣದ ಜನಗಾಂವ್ ಬಸ್ ನಿಲ್ದಾಣದಲ್ಲಿ ನಿಂತಿದ್ದ ತೆಲಂಗಾಣ ರಾಜ್ಯ ರಸ್ತೆ ಸಾರಿಗೆ ನಿಗಮದ (ಟಿಜಿಎಸ್‌ಆರ್‌ಟಿಸಿ) ಬಸ್‌ ಅನ್ನು ವ್ಯಕ್ತಿಯೊಬ್ಬ ಕುಡಿದ ಮತ್ತಿನಲ್ಲಿ ಕದ್ದಿದ್ದಾನೆ. ನಂತರ ಅದನ್ನು ಸುಮಾರು 21 ಕಿ.ಮೀ. ದೂರ ಓಡಿಸಿ,...

ಬೆಂಗಳೂರಿನಲ್ಲಿ: ರಸ್ತೆ ಬದಿ ವಾರಗಟ್ಟಲೆ ವಾಹನ ನಿಲ್ಲಿಸಿದರೆ ಜಪ್ತಿ ಮಾಡಿ ‘ಹರಾಜು’ ಹಾಕಲಿದೆ ಸರ್ಕಾರ!

ಸಿಲಿಕಾನ್ ಸಿಟಿಯ ಟ್ರಾಫಿಕ್ ದಟ್ಟಣೆಗೆ ಮುಕ್ತಿ ಹಾಡಲು ಮತ್ತು ಪಾದಚಾರಿಗಳ ಹಕ್ಕನ್ನು ರಕ್ಷಿಸಲು ರಾಜ್ಯ ಸರ್ಕಾರ ಈಗ ಅತ್ಯಂತ ಕಠಿಣ ಹೆಜ್ಜೆಯನ್ನಿಟ್ಟಿದೆ. ನಗರದ ರಸ್ತೆ ಬದಿ ಹಾಗೂ ಫುಟ್‌ಪಾತ್‌ಗಳಲ್ಲಿ ತಿಂಗಳುಗಟ್ಟಲೆ ಧೂಳು ತಿನ್ನುತ್ತಾ...

ಸರ್ಕಾರಿ ಶಾಲೆಗಳಲ್ಲಿ 86 ಲಕ್ಷ ವಿದ್ಯಾರ್ಥಿಗಳ ಕುಸಿತ, ಖಾಸಗಿ ಶಾಲೆಗಳತ್ತ ಮುಖ ಮಾಡಿದ 88 ಲಕ್ಷ ಮಕ್ಕಳು: ಕಳವಳಕಾರಿ ವರದಿ

ನವದೆಹಲಿ: ದೇಶದ ಶಾಲಾ ಶಿಕ್ಷಣ ವ್ಯವಸ್ಥೆಯಲ್ಲಿ ಮಹತ್ತರ ಬದಲಾವಣೆಗಳು ಕಂಡುಬರುತ್ತಿದ್ದು, ಸರ್ಕಾರಿ ಶಾಲೆಗಳ ದಾಖಲಾತಿಯಲ್ಲಿ ಭಾರಿ ಕುಸಿತ ಉಂಟಾಗಿದೆ. 2023–24 ಮತ್ತು 2025–26ರ ಶೈಕ್ಷಣಿಕ ವರ್ಷಗಳ ನಡುವಿನ ಅವಧಿಯಲ್ಲಿ ದೇಶಾದ್ಯಂತ ಸರ್ಕಾರಿ ಶಾಲೆಗಳಲ್ಲಿ...