Homeಚಳವಳಿಅಗ್ನಿಪಥ ಯೋಜನೆ: ಹಿಂಸಾಚಾರದಲ್ಲಿ ಭಾಗಿಯಾದವರು ಸೇನೆ ಸೇರಲು ಸಾಧ್ಯವಿಲ್ಲ- ಲೆ. ಜನರಲ್ ಪುರಿ

ಅಗ್ನಿಪಥ ಯೋಜನೆ: ಹಿಂಸಾಚಾರದಲ್ಲಿ ಭಾಗಿಯಾದವರು ಸೇನೆ ಸೇರಲು ಸಾಧ್ಯವಿಲ್ಲ- ಲೆ. ಜನರಲ್ ಪುರಿ

- Advertisement -
- Advertisement -

ಅಗ್ನಿಪಥ ಯೋಜನೆ ವಿರೋಧಿಸಿ ದೇಶದಾದ್ಯಂತ ಪ್ರತಿಭಟನೆಗಳು ಭುಗಿಲೆದ್ದಿರುವ ಬೆನ್ನಲ್ಲೇ, ’ಹಿಂಸಾಚಾರ, ವಿದ್ವಂಸಕ ಕೃತ್ಯಗಳಲ್ಲಿ ಭಾಗಿಯಾದವರು ಸೇನೆಗೆ ಸೇರಲು ಸಾಧ್ಯವಿಲ್ಲ’ ಎಂದು ಮಿಲಿಟರಿ ವ್ಯವಹಾರಗಳ ಇಲಾಖೆಯ ಹೆಚ್ಚುವರಿ ಕಾರ್ಯದರ್ಶಿ ಲೆಫ್ಟಿನೆಂಟ್ ಜನರಲ್ ಪುರಿ ಎಚ್ಚರಿಕೆ ನೀಡಿದ್ದಾರೆ.

ಸುದ್ದಿಗೋಷ್ಠಿಯಲ್ಲಿ ಸರ್ಕಾರವು ಯೋಜನೆಯನ್ನು ಪರಿಶೀಲಿಸಲು ಅಥವಾ ಹಿಂದೆಗೆದುಕೊಳ್ಳಲು ಪ್ರಸ್ತಾಪಿಸಿದೆಯೇ ಎಂಬ ಪ್ರಶ್ನೆಗೆ, ಉತ್ತರಿಸಿರುವ ಅವರು, “ಇಲ್ಲ, ಈ ಯೋಜನೆಯನ್ನು ಏಕೆ ಹಿಂತೆಗೆದುಕೊಳ್ಳಬೇಕು..? ಎಂದಿದ್ದಾರೆ.

ಪ್ರತಿಭಟನಾಕಾರರಿಗೆ ಎಚ್ಚರಿಕೆ ನೀಡಿರುವ ಲೆಫ್ಟಿನೆಂಟ್ ಜನರಲ್ ಪುರಿ, ಇಂತಹ ಪ್ರತಿಭಟನೆಯಿಂದ ಅಗ್ನಿಪಥ ಯೋಜನೆಯಲ್ಲಿ ಯಾವುದೇ ಸ್ಥಾನ ಪಡೆಯುವುದಿಲ್ಲ ಎಂದಿದ್ದಾರೆ.

“ಸೇನೆಯ ಅಡಿಪಾಯ ಶಿಸ್ತು. ಬೆಂಕಿ ಹಚ್ಚುವಿಕೆ ಅಥವಾ ವಿಧ್ವಂಸಕ ಕೃತ್ಯಗಳಿಗೆ ಇಲ್ಲಿ ಜಾಗವಿಲ್ಲ. ಪ್ರತಿಯೊಬ್ಬ ವ್ಯಕ್ತಿಗೂ ಹಿಂಸಾತ್ಮಕ ಪ್ರತಿಭಟನೆ ಅಥವಾ ವಿಧ್ವಂಸಕ ಕೃತ್ಯದ ಭಾಗವಾಗಿಲ್ಲ ಎಂದು ಪ್ರಮಾಣಪತ್ರವನ್ನು ನೀಡುತ್ತಾರೆ. 100% ಪೊಲೀಸ್ ಪರಿಶೀಲನೆ ನಡೆಯಲಿದೆ. ಪೊಲೀಸ್ ಪರಿಶೀಲನೆ ಇಲ್ಲದೆ ಯಾರೂ ಸೇನೆ ಸೇರಲು ಸಾಧ್ಯವಿಲ್ಲ. ಉದ್ಯೋಗಾಕಾಂಕ್ಷಿಗಳ ವಿರುದ್ಧ ಯಾವುದೇ ಎಫ್‌ಐಆರ್ ದಾಖಲಿಸಿದ್ದರೂ, ಅವರು ಸೇರಲು ಸಾಧ್ಯವಿಲ್ಲ” ಎಂದಿದ್ದಾರೆ.

ಇದನ್ನೂ ಓದಿ: ಅಗ್ನಿಪಥ್ ವಿರೋಧಿಸಿ ಇಂದು ಭಾರತ್ ಬಂದ್: ಬಿಹಾರದಲ್ಲಿ 350 ರೈಲುಗಳ ಸಂಚಾರ ರದ್ದು

ಸೇನೆಗೆ ಸಂಬಂಧಿಸಿದಂತೆ, ಲೆಫ್ಟಿನೆಂಟ್ ಜನರಲ್ ಬನ್ಸಿ ಪೊನ್ನಪ್ಪ, ಅವರು ನೇಮಕಾತಿ ಕುರಿತು ಕರಡು ಅಧಿಸೂಚನೆಯನ್ನು ಸೋಮವಾರ ಹೊರಡಿಸಲಾಗುವುದು.  ಒಟ್ಟು ದೇಶಾದ್ಯಂತ 83 ನೇಮಕಾತಿ ರ್‍ಯಾಲಿಗಳನ್ನು ಆಯೋಜಿಸಲಾಗುವುದು. ನವೆಂಬರ್ 21 ರೊಳಗೆ ನೌಕಾಪಡೆಯ ಮೊದಲ ಬ್ಯಾಚ್ ಪುರುಷ ಮತ್ತು ಮಹಿಳೆ ಇಬ್ಬರೂ ತರಬೇತಿಗೆ ಸೇರುತ್ತಾರೆ ಎಂದಿದ್ದಾರೆ.

ಇನ್ನು ಮೊದಲ ಬ್ಯಾಚ್‌ನಲ್ಲಿ, 3,000 ಅಗ್ನಿವೀರರನ್ನು ನೌಕಾಪಡೆಗೆ ಸೇರಿಸಲಾಗುವುದು, ಅವರಲ್ಲಿ 20% ಮಹಿಳೆಯರು ಇರುತ್ತಾರೆ ಎಂದು ಮೂಲಗಳು ತಿಳಿಸಿವೆ.

ಯೋಜನೆ ಘೋಷಿಸಿ ಒಂದು ವಾರವಾಗುತ್ತಿದ್ದರೂ ಪ್ರತಿಭಟನೆಗಳು ಜೋರಾಗುತ್ತಲೇ ಇವೆ. ಕಾಶ್ಮೀರದಿಂದ ಕೇರಳದವರೆಗೆ ಪ್ರತಿಭಟನೆಗಳು ವ್ಯಾಪಿಸಿದ್ದು, ಉದ್ಯೋಗ ಆಕಾಂಕ್ಷಿಗಳು ಇಂದು ಭಾರತ್ ಬಂದ್‌ಗೆ ಕರೆ ನೀಡಿದ್ದಾರೆ. ಈ ಹಿನ್ನೆಲೆಯಲ್ಲಿ ಬಿಹಾರದಲ್ಲಿ ಇಂದು 350 ರೈಲುಗಳ ಸಂಚಾರ ರದ್ದುಗೊಳಿಸಲಾಗಿದೆ.


ಇದನ್ನೂ ಓದಿ: ಅಗ್ನಿಪಥ ಯೋಜನೆಗೆ ವಿರೋಧ: ತೆಲಂಗಾಣ ಹಿಂಸಾಚಾರ ಆರೋಪದಲ್ಲಿ ಮಾಜಿ ಸೈನಿಕರ ಬಂಧನ

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

1 COMMENT

LEAVE A REPLY

Please enter your comment!
Please enter your name here

- Advertisment -

ಪಶ್ಚಿಮ ಬಂಗಾಳ| ಚುನಾವಣಾ ಫಲಿತಾಂಶದ ಬಳಿಕ ಮುಸ್ಲಿಂ ಸಮುದಾಯದ ಮನೆ- ಅಂಗಡಿಗಳ ಮೇಲೆ ದಾಳಿ: ಎಪಿಸಿಆರ್

ಪಶ್ಚಿಮ ಬಂಗಾಳದ ಇತ್ತೀಚಿನ ಚುನಾವಣಾ ಫಲಿತಾಂಶದ ಬಳಿಕ ಭಾರತೀಯ ಜನತಾ ಪಕ್ಷದ ಸದಸ್ಯರು ಸರಣಿ ಹಿಂಸಾತ್ಮಕ ಘಟನೆಗಳನ್ನು ನಡೆಸಿದ್ದಾರೆ ಎಂದು ನಾಗರಿಕ ಹಕ್ಕುಗಳ ರಕ್ಷಣಾ ಸಂಘ (ಎಪಿಸಿಆರ್) ದಾಖಲಿಸಿದೆ. ವಿಶೇಷವಾಗಿ, ಮುಸ್ಲಿಮರ ವಿರುದ್ಧ...

ದುಬಾರಿ ರ‍್ಯಾಲಿ, ರೋಡ್ ಶೋ ನಡೆಸುತ್ತಾ ದೇಶದ ಜನರಿಗೆ ಮಿತವ್ಯಯದ ಸಲಹೆ ನೀಡಿದ ಪ್ರಧಾನಿ ಮೋದಿ

ನಾಲ್ಕು ರಾಜ್ಯಗಳು ಮತ್ತು ಒಂದು ಕೇಂದ್ರಾಡಳಿತ ಪ್ರದೇಶದ ವಿಧಾನಸಭೆ ಚುನಾವಣೆಗಳು ಪೂರ್ಣಗೊಂಡ ಬಳಿಕ, ಮೇ 10ರಂದು ಪ್ರಧಾನಿ ನರೇಂದ್ರ ಮೋದಿಯವರು ದೇಶದ ಜನರಿಗೆ ಕೆಲವು ಸಲಹೆಗಳನ್ನು ನೀಡಿದ್ದು, ಕೋವಿಡ್ ಸಂದರ್ಭದ ಮಿತಿಗಳನ್ನು ಹಾಕಿಕೊಳ್ಳುವಂತೆ...

ಮೇ 15 ರಂದು ರಾಷ್ಟ್ರವ್ಯಾಪಿ ಮನರೇಗಾ ಕಾರ್ಮಿಕರ ಮುಷ್ಕರ; ದೇಶದಾದ್ಯಂತ ಕಾರ್ಮಿಕ ಸಂಘಟನೆಗಳ ಬೆಂಬಲ

ವಿಬಿ ಜಿರಾಮ್‌ (ಜಿ) ಕಾಯ್ದೆಯನ್ನು ಹಿಂಪಡೆಯುವ ಜೊತೆಗೆ ಗ್ರಾಮೀಣ ಉದ್ಯೋಗ ಯೋಜನೆಯಡಿಯಲ್ಲಿ ಬಲವಾದ ಉದ್ಯೋಗ ಖಾತರಿಗಳನ್ನು ನೀಡುವಂತೆ ಒತ್ತಾಯಿಸಿ ಕೃಷಿ ಮತ್ತು ಗ್ರಾಮೀಣ ಕಾರ್ಮಿಕರ ಸಂಘಗಳ ಜಂಟಿ ವೇದಿಕೆ ಮತ್ತು ಮನರೇಗಾ ಸಂಘರ್ಷ...

ಕಾಂಗ್ರೆಸ್‌ಗೆ ಕಗ್ಗಂಟಾದ ಕೇರಳ ಸಿಎಂ ಆಯ್ಕೆ : ಮೂವರು ಪ್ರಭಾವಿಗಳಲ್ಲಿ ಹೈಕಮಾಂಡ್ ಒಲವು ಯಾರ ಪರ?

ಕೇರಳ ವಿಧಾನಸಭಾ ಚುನಾವಣೆಯಲ್ಲಿ ಭರ್ಜರಿ ಜಯ ಗಳಿಸಿರುವ ಕಾಂಗ್ರೆಸ್ ನೇತೃತ್ವದ ಯುನೈಟೆಡ್ ಡೆಮಾಕ್ರಟಿಕ್ ಫ್ರಂಟ್ (ಯುಡಿಎಫ್)ಗೆ ಮುಖ್ಯಮಂತ್ರಿ ಆಯ್ಕೆ ಕಗ್ಗಂಟಾಗಿದೆ. ಯುಡಿಎಫ್‌ ಮೈತ್ರಿಕೂಟ ಗೆದ್ದಿರುವ ಒಟ್ಟು 102 ಸ್ಥಾನಗಳ ಪೈಕಿ 63 ಸ್ಥಾನಗಳನ್ನು...

ಏಪ್ರಿಲ್‌ನಲ್ಲಿ ಗಾಜಾ ಮತ್ತು ಪಶ್ಚಿಮ ದಂಡೆಯಾದ್ಯಂತ ಇಸ್ರೇಲಿ ಪಡೆಗಳಿಂದ 122 ಪ್ಯಾಲೆಸ್ಟೀನಿಯನ್ನರ ಹತ್ಯೆ: ವಿಶ್ವಸಂಸ್ಥೆಯ ಹಕ್ಕುಗಳ ಕಚೇರಿ

ಏಪ್ರಿಲ್‌ನಲ್ಲಿ ಆಕ್ರಮಿತ ಪ್ಯಾಲೆಸ್ಟೀನಿಯನ್ ಪ್ರದೇಶಗಳಲ್ಲಿ ಇಸ್ರೇಲಿ ಪಡೆಗಳು ಮತ್ತು ವಸಾಹತುಗಾರರು 22 ಮಕ್ಕಳು ಮತ್ತು ಎಂಟು ಮಹಿಳೆಯರು ಸೇರಿದಂತೆ ಕನಿಷ್ಠ 122 ಪ್ಯಾಲೆಸ್ಟೀನಿಯನ್ನರನ್ನು ಕೊಂದಿದ್ದಾರೆ ಎಂದು ಆಕ್ರಮಿತ ಪ್ಯಾಲೆಸ್ಟೀನಿಯನ್ ಪ್ರದೇಶದಲ್ಲಿನ ವಿಶ್ವಸಂಸ್ಥೆಯ ಮಾನವ...

2026ರ ತಮಿಳುನಾಡು ವಿಧಾನಸಭಾ ಚುನಾವಣೆಯ ಫಲಿತಾಂಶ: ರಾಜಕೀಯ ಸ್ಥಿತ್ಯಂತರಗಳ ಅವಲೋಕನ

"2026ರ ತಮಿಳುನಾಡು ವಿಧಾನಸಭಾ ಚುನಾವಣೆಯು ರಾಜ್ಯದ ರಾಜಕೀಯ ಇತಿಹಾಸದ ಹಾದಿಯನ್ನೇ ಬದಲಿಸಿದೆ. ಟಿವಿಕೆ ಪಕ್ಷದ ನಾಯಕ ಜೋಸೆಫ್ ವಿಜಯ್ ರಾಜ್ಯದ ನೂತನ ಮುಖ್ಯಮಂತ್ರಿಯಾಗಿ ಪದಗ್ರಹಣ ಮಾಡುವ ಮೂಲಕ ದಶಕಗಳ ಕಾಲ ನಡೆದಿದ್ದ ಡಿಎಂಕೆ-ಎಐಎಡಿಎಂಕೆ...

ಬಂಗಾಳದಲ್ಲಿ ‘ಅಧಿಕಾರಿ’ ಆಡಳಿತ: ಜಾತ್ಯತೀತ ಮುಖವಾಡ ಕಳಚಿ ಹಿಂದುತ್ವದ ಅಸ್ತ್ರ ಹಿಡಿದು ಗದ್ದುಗೆ ಏರಿದ ಸುವೇಂದು! 

ಕೋಲ್ಕತ್ತಾ/ನವದೆಹಲಿ: ಪಶ್ಚಿಮ ಬಂಗಾಳದ ಮುಖ್ಯಮಂತ್ರಿ ಗಾದಿಗೆ ಸುವೇಂದು ಅಧಿಕಾರಿ ಅವರ ಪದಾರ್ಪಣೆಯು, ಹಳೆಯ ಭ್ರಷ್ಟ ವ್ಯವಸ್ಥೆಯನ್ನು ಗುಡಿಸಿ ಹಾಕಲು ಬಂದ 'ಹೊರಗಿನ' ವ್ಯಕ್ತಿಯ ಕಥೆಯಲ್ಲ. ಬದಲಿಗೆ, ಬಂಗಾಳದ ಹಿಂಸಾತ್ಮಕ, ಬಣ ರಾಜಕೀಯ ಮತ್ತು...

ಬಂಗಾಳ ಚುನಾವಣೆ : SIRನಲ್ಲಿ ಅತಿ ಹೆಚ್ಚು ಹೆಸರು ಅಳಿಸಿದ ಕ್ಷೇತ್ರಗಳು ಬಿಜೆಪಿ ಪಾಲು

ಪಶ್ಚಿಮ ಬಂಗಾಳದ ವಿಧಾನಸಭೆ ಚುನಾವಣೆಯಲ್ಲಿ ಭರ್ಜರಿ ಗೆಲುವು ಸಾಧಿಸಿರುವ ಬಿಜೆಪಿ, ಸರ್ಕಾರ ರಚಿಸಲು ಅಣಿಯಾಗಿದೆ. ಈ ನಡುವೆ ಹಲವು ಪ್ರಶ್ನೆಗಳು, ಗೊಂದಲಗಳು ಹಾಗೆಯೇ ಮುಂದುವರಿದಿದೆ. ಚುನಾವಣೆ ಘೋಷಣೆಗೆ ಮುನ್ನವೇ ಬಂಗಾಳದ ಮತದಾರರ ಪಟ್ಟಿಯ ವಿಶೇಷ...

ತಮಿಳುನಾಡು ರಾಜ್ಯಪಾಲರ ನಡೆ ಎಷ್ಟು ಸಮಂಜಸ?

'ಮಳೆ ನಿಂತರೂ ಮರದ ಹನಿ ನಿಲ್ಲಲ್ಲ' ಎಂಬ ಮಾತಿಗೆ ಅನ್ವರ್ಥದಂತೆ ಚುನಾವಣೆ ಮುಗಿದರೂ ಸರ್ಕಾರ ರಚನೆಯ ಸರ್ಕಸ್ ಮಾತ್ರ ನಿಲ್ಲುವ ಸೂಚನೆ ಕಾಣುತ್ತಿಲ್ಲ. ತಮಿಳುನಾಡಿನ ರಾಜಕೀಯ ವಿದ್ಯಮಾನಗಳನ್ನು ನೋಡುತ್ತಿದ್ದರೆ ಅಲ್ಲಿ ನಡೆಯುತ್ತಿರವ ಬೆಳವಣಿಗೆಗಳು...

ಬಿಜೆಪಿಯಿಂದ ಯಡಿಯೂರಪ್ಪ ಅಭಿಮಾನೋತ್ಸವ: ಲಿಂಗಾಯತ ಮತಕ್ಕಾಗಿ ಮಾಸ್ಟರ್ ಫ್ಲಾನ್…?  

ದಕ್ಷಿಣ ಭಾರತದ ರಾಜಕಾರಣದಲ್ಲಿ ಬಿಜೆಪಿ ಎನ್ನುವುದು ಒಂದು ಕಾಲಕ್ಕೆ ಕೇವಲ ನಗರ ಪ್ರದೇಶಗಳಿಗೆ ಸೀಮಿತವಾಗಿದ್ದ ಪಕ್ಷ. ಆದರೆ, ಅದೇ ಬಿಜೆಪಿಯನ್ನು ಕರ್ನಾಟಕದಲ್ಲಿ ಬೇರೂರುವಂತೆ ಮಾಡಿದ್ದು ಬೂಕನಕೆರೆ ಸಿದ್ದಲಿಂಗಪ್ಪ ಯಡಿಯೂರಪ್ಪ ಅಂದರೆ ಬಿ.ಎಸ್. ಯಡಿಯೂರಪ್ಪ....