Homeಮುಖಪುಟ’ಅಗ್ನಿವೀರರಿಗೆ ಬಿಜೆಪಿ ಕಚೇರಿಯಲ್ಲಿ ಗಾರ್ಡ್ ಕೆಲಸ’: ಬಿಜೆಪಿ ನಾಯಕ ವಿಜಯವರ್ಗಿಯ ವಿವಾದಿತ ಹೇಳಿಕೆಗೆ ಖಂಡನೆ

’ಅಗ್ನಿವೀರರಿಗೆ ಬಿಜೆಪಿ ಕಚೇರಿಯಲ್ಲಿ ಗಾರ್ಡ್ ಕೆಲಸ’: ಬಿಜೆಪಿ ನಾಯಕ ವಿಜಯವರ್ಗಿಯ ವಿವಾದಿತ ಹೇಳಿಕೆಗೆ ಖಂಡನೆ

’ಈ ಹೇಳಿಕೆಗಳು ಕೂಡ ‘ಫ್ರಿಂಜ್’ ಅಂಶಗಳ ಹೇಳಿಕೆಗಳೇ ಎಂಬುದನ್ನು ಪ್ರಧಾನಿ ಸ್ಪಷ್ಟಪಡಿಸಬೇಕು’ ಟಿಎಂಸಿ ಆಗ್ರಹ

- Advertisement -
- Advertisement -

ಒಕ್ಕೂಟ ಸರ್ಕಾರ ಘೋಷಿಸಿರುವ ಅಗ್ನಿಪಥ ಯೋಜನೆ ವಿರೋಧಿಸಿ ದೇಶದಾದ್ಯಂತ ಪ್ರತಿಭಟನೆಗಳು ಭುಗಿಲೆದ್ದಿರುವ ಬೆನ್ನಲ್ಲೇ ಬಿಜೆಪಿ ರಾಷ್ಟ್ರೀಯ ಪ್ರಧಾನ ಕಾರ್ಯದರ್ಶಿ ಕೈಲಾಶ್ ವಿಜಯವರ್ಗಿಯ ಅವರು ಬಿಜೆಪಿ ಕಚೇರಿಗಳಿಗೆ ಭದ್ರತಾ ಸಿಬ್ಬಂದಿಯನ್ನು ನೇಮಿಸಿಕೊಳ್ಳುವಾಗ ಅಗ್ನಿವೀರರಿಗೆ ಆದ್ಯತೆ ನೀಡಲಾಗುವುದು’ ಎಂದು ವಿವಾದಿತ ಹೇಳಿಕೆ ನೀಡಿದ್ದಾರೆ.

“ಶಿಸ್ತು ಮತ್ತು ಆಜ್ಞೆಗಳು ಪಾಲಿಸುವುದು ಮಿಲಿಟರಿ ತರಬೇತಿಯ ಅವಿಭಾಜ್ಯ ಅಂಗವಾಗಿದೆ. ಅಗ್ನಿವೀರರು 25 ವರ್ಷ ವಯಸ್ಸಿನಲ್ಲಿ ನಾಲ್ಕು ವರ್ಷಗಳ ಕಾಲ ರಕ್ಷಣಾ ಕ್ಷೇತ್ರದಲ್ಲಿ ಸೇವೆ ಸಲ್ಲಿಸಿ ಹೊರಬಂದಾಗ, ಅವರ ಬಳಿ 11 ಲಕ್ಷ ರೂಪಾಯಿ ಇರುತ್ತದೆ. ಅವರು ಹೆಮ್ಮೆಯಿಂದ ಪ್ರದರ್ಶಿಸಬಹುದಾದ ಅಗ್ನಿವೀರರ ಟ್ಯಾಗ್ ಹೊಂದಿರುತ್ತಾರೆ. ನಾನು ಬಿಜೆಪಿ ಕಚೇರಿಗೆ ಭದ್ರತಾ ಸಿಬ್ಬಂದಿಯನ್ನು ನೇಮಿಸಲು ಬಯಸಿದರೆ, ನಾನು ಅಗ್ನಿವೀರರಿಗೆ ಆದ್ಯತೆ ನೀಡುತ್ತೇನೆ” ಎಂದು ಬಿಜೆಪಿಯ ಹಿರಿಯ ನಾಯಕ ವಿಜಯವರ್ಗಿಯವರು ಇಂದೋರ್‌ನ ಪತ್ರಿಕಾಗೋಷ್ಠಿಯಲ್ಲಿ ಹೇಳಿದ್ದರು.

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ
₹100 ₹200 ₹500 ₹1000 Others

ಇದನ್ನೂ ಓದಿ: ಸಾಯಿ ಪಲ್ಲವಿಯವರಿಂದ ಮಾಧ್ಯಮಗಳು ಕಲಿಯುವುದು ಬಹಳಷ್ಟಿದೆ: ಬೆಂಬಲಕ್ಕೆ ನಿಂತ ನಟ ಕಿಶೋರ್

ವಿಜಯವರ್ಗಿಯ ಅವರ ವಿಡಿಯೋ ವೈರಲ್ ಆಗುತ್ತಿದ್ದಂತೆಯೇ ಈ ಹೇಳಿಕೆಗೆ ವಿವಿಧ ವಲಯಗಳಿಂದ ಖಂಡನೆ ವ್ಯಕ್ತವಾಗಿದೆ. ಬಿಜೆಪಿ ಸಂಸದ ವರುಣ್ ಗಾಂಧಿ ಟ್ವಿಟ್ಟರ್‌ನಲ್ಲಿ ವಿಡಿಯೊ ಹಂಚಿಕೊಂಡಿದ್ದು, ರಾಜಕೀಯ ಪಕ್ಷದ ಕಚೇರಿಗಳನ್ನು ಕಾವಲು ಕಾಯಲು ಭಾರತೀಯ ಸೈನಿಕರನ್ನು ಆಹ್ವಾನಿಸಿರುವುದನ್ನು ಟೀಕಿಸಿದ್ದಾರೆ.

ಪಶ್ಚಿಮ ಬಂಗಾಳ ಮುಖ್ಯಮಂತ್ರಿ ಮಮತಾ ಬ್ಯಾನರ್ಜಿ ಅವರ ತೃಣಮೂಲ ಕಾಂಗ್ರೆಸ್‌ ಕೂಡ ಖಂಡನೆ ವ್ಯಕ್ತಪಡಿಸಿದೆ. “ಭಾರತದ ಯುವಕರು ಬಿಜೆಪಿ ಕಚೇರಿಯ ಬಾಗಿಲ ಕಾಯುವ ದ್ವಾರಪಾಲಕರಾಗಬಾರದು, ಯುವ ಶಕ್ತಿ ಮೋದಿ ಸರ್ಕಾರಕ್ಕಿಂತ ಭಿನ್ನವಾಗಿ ಈ ದೇಶಕ್ಕೆ ಸೇವೆ ಸಲ್ಲಿಸಲು ಬಯಸುತ್ತದೆ. ಇವೂ ಕೂಡ ‘ಫ್ರಿಂಜ್’ ಅಂಶಗಳ ಹೇಳಿಕೆಗಳೇ ಎಂಬುದನ್ನು ಪ್ರಧಾನಿ ಸ್ಪಷ್ಟಪಡಿಸಬೇಕು” ಎಂದು ಆಗ್ರಹಿಸಿದೆ.

ಇದನ್ನೂ ಓದಿ: 60 ಲಕ್ಷ ಹುದ್ದೆಗಳು ಖಾಲಿಯಿದ್ದರೂ ವಿದ್ಯಾವಂತ ಯುವಕರು ಇ-ರಿಕ್ಷಾ ಓಡಿಸುತ್ತಿದ್ದಾರೆ: BJP ಸಂಸದ ವರುಣ್ ಗಾಂಧಿ ಆಕ್ರೋಶ

 

ಮಧ್ಯಪ್ರದೇಶ ಕಾಂಗ್ರೆಸ್ ಕೂಡ ವಿಜಯವರ್ಗಿಯವರ ಹೇಳಿಕೆಯನ್ನು ಟೀಕಿಸಿದೆ. ಇದರ ರಾಜ್ಯ ಘಟಕದ ಅಧ್ಯಕ್ಷ ಕೆ.ಕೆ.ಮಿಶ್ರಾ ಮಾತನಾಡಿ, ’ಈ ಹೇಳಿಕೆಯು ಕೇವಲ ದೇಶದ ಯುವಕರಲ್ಲದೇ ಭಾರತೀಯ ಸೇನೆಯ ಶೌರ್ಯಕ್ಕೆ ಮಾಡಿದ ಘೋರ ಅವಮಾನವಾಗಿದ್ದು, ಪ್ರತಿಭಟನೆ ನಡೆಸುತ್ತಿರುವ ಯುವಕರ ಗಾಯದ ಮೇಲೆ ಉಪ್ಪು ಸವರುವ ಅವಿವೇಕದ ಪ್ರಯತ್ನವಾಗಿದೆ’ ಎಂದಿದ್ದಾರೆ.

ಎಐಎಂಐಎಂ ಅಧ್ಯಕ್ಷ ಅಸಾದುದ್ದೀನ್ ಓವೈಸಿ ಆಕ್ರೋಶ ವ್ಯಕ್ತಪಡಿಸಿ ಟ್ವೀಟ್ ಮಾಡಿದ್ದಾರೆ. “ತರಬೇತಿ ಪಡೆದ ಗುತ್ತಿಗೆ ಸೈನಿಕರನ್ನು ಅವರ ಕಚೇರಿಗಳಿಗೆ ಚೌಕಿದಾರರನ್ನಾಗಿ ನೇಮಿಸಿಕೊಳ್ಳುತ್ತೇವೆ ಎಂದು ಬಿಜೆಪಿ ನಾಯಕರು ಹೇಳುತ್ತಾರೆ. ಇದು ಗೌರವದ ವೃತ್ತಿಯಾಗಿರುವ ಸೈನ್ಯಕ್ಕೆ ಮತ್ತು ಸೈನಿಕರಿಗೆ ಮೋದಿಯವರ ಪಕ್ಷ ನೀಡುವ ಗೌರವವೇ? ದೇಶದಲ್ಲಿ ಈ ರೀತಿಯ ಆಡಳಿತ ಪಕ್ಷವಿರುವುದು ವಿಷಾದನೀಯ” ಎಂದಿದ್ದಾರೆ.


ಇದನ್ನೂ ಓದಿ: ಅಗ್ನಿಪಥ್ ವಿರೋಧಿಸಿ ಇಂದು ಭಾರತ್ ಬಂದ್: ಬಿಹಾರದಲ್ಲಿ 350 ರೈಲುಗಳ ಸಂಚಾರ ರದ್ದು

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

2 COMMENTS

  1. ಒಬ್ಬ ಮೂರ್ಖನಿಗೂ ಗೊತ್ತಿಲ್ಲ ಅಗ್ನಿಪಥ ಯೋಜನೆ ಬಗ್ಗೆ ಆದ್ರೂ ಬಾಯಿಗೆ ಬಂದಂಗೆ ಬೊಗಳೋದು ನಿಲ್ಲಸಲ್ಲ,, ಓ ಮೂರ್ಖರೆ ಮೊದಲು ಅಗ್ನಿಪಥ ಅಂದ್ರೆ ಏನು ಅದರ ಒಳ ಷಡ್ಯಂತ್ರಗಳು ಏನು ಅಂತ ನೀವು ತಿಳ್ಕೊಳಿ ಜನರಿಗೆ ಎಲ್ಲ ಅರ್ಥ ಆಗಿದೆ,, ಯಾರೋ ಊದಿದ ಪುಂಗಿಗೆ ಸ್ಕ್ರಿಪ್ಟ್ ಬರೆಯೋಕೆ ಬರೋಕು ಮುಂಚೆ ಮನೇಲಿ ಸ್ವಲ್ಪ ನಿಮಗಿಂತ ಹೆಚ್ಚು ಓದಿರುವ ನಿಮ್ಮ ಆಪ್ತ ಸಲಹೆಗಾರರ ಹತ್ತಿರ ಸಲಹೆ ಪಡೆಯೋದು ಉತ್ತಮ ಅನ್ಸುತ್ತೆ ಅಲ್ವಾ ಅವಿವೇಕಿಗಳೆ..?
    ಕೆಲವು ನಾಯಿಗಳು ಯಾವಾಗ್ಲೂ ಬೊಗಳ್ತಾವೆ ಬರಿ ಸಾಬರ್ ಬಗ್ಗೆ ಮಾತ್ರ,, ದೇಶದ ಒಳಿತಿಗಾಗಿ ಒಂದು ಮಾತು ಬರಲ್ಲ ಎಂಜಲು ಅಲ್ಲ ಕ್ಷಮಿಸಿ ಹೇಸಿಗೆ ತಿನ್ನೋ ನಾಯಿಗಳು.. ಈಗ ಬೊಗಳರೋ ಹೇಸಿಗೆ ನಾಯಿಗಳ ದೇಶದ ಮಾನ ಹೋಯ್ತು ಈಗ ದೇಶದ ಯುವಕರು ಏನ್ ಮಾಡಬೇಕು ಬೊಗಳರೋ 2 ರೂಪಾಯಿ ಬಿಖಾರಿಗಳೇ….

  2. ಹೀಗೊಂದು ಪಕ್ಷದ ಒಬ್ಬ ಮೂರ್ಖನಿಗೂ ಗೊತ್ತಿಲ್ಲ ಅಗ್ನಿಪಥ ಯೋಜನೆ ಬಗ್ಗೆ ಆದ್ರೂ ಬಾಯಿಗೆ ಬಂದಂಗೆ ಬೊಗಳೋದು ನಿಲ್ಲಸಲ್ಲ,, ಓ ಮೂರ್ಖರೆ ಮೊದಲು ಅಗ್ನಿಪಥ ಅಂದ್ರೆ ಏನು ಅದರ ಒಳ ಷಡ್ಯಂತ್ರಗಳು ಏನು ಅಂತ ನೀವು ತಿಳ್ಕೊಳಿ ಜನರಿಗೆ ಎಲ್ಲ ಅರ್ಥ ಆಗಿದೆ,, ಯಾರೋ ಊದಿದ ಪುಂಗಿಗೆ ಸ್ಕ್ರಿಪ್ಟ್ ಬರೆಯೋಕೆ ಬರೋಕು ಮುಂಚೆ ಮನೇಲಿ ಸ್ವಲ್ಪ ನಿಮಗಿಂತ ಹೆಚ್ಚು ಓದಿರುವ ನಿಮ್ಮ ಆಪ್ತ ಸಲಹೆಗಾರರ ಹತ್ತಿರ ಸಲಹೆ ಪಡೆಯೋದು ಉತ್ತಮ ಅನ್ಸುತ್ತೆ ಅಲ್ವಾ ಅವಿವೇಕಿಗಳೆ..?
    ಕೆಲವು ನಾಯಿಗಳು ಯಾವಾಗ್ಲೂ ಬೊಗಳ್ತಾವೆ ಬರಿ ಸಾಬರ್ ಬಗ್ಗೆ ಮಾತ್ರ,, ದೇಶದ ಒಳಿತಿಗಾಗಿ ಒಂದು ಮಾತು ಬರಲ್ಲ ಎಂಜಲು ಅಲ್ಲ ಕ್ಷಮಿಸಿ ಹೇಸಿಗೆ ತಿನ್ನೋ ನಾಯಿಗಳು.. ಈಗ ಬೊಗಳರೋ ಹೇಸಿಗೆ ನಾಯಿಗಳ ದೇಶದ ಮಾನ ಹೋಯ್ತು ಈಗ ದೇಶದ ಯುವಕರು ಏನ್ ಮಾಡಬೇಕು ಬೊಗಳರೋ 2 ರೂಪಾಯಿ ಬಿಖಾರಿಗಳೇ….

LEAVE A REPLY

Please enter your comment!
Please enter your name here

- Advertisment -

2020ರ ದೆಹಲಿ ಗಲಭೆ ಪ್ರಕರಣ: ಐವರು ಆರೋಪಿಗಳನ್ನು ಖುಲಾಸೆಗೊಳಿಸಿದ ನ್ಯಾಯಾಲಯ

2020 ರ ದೆಹಲಿ ಗಲಭೆಗೆ ಸಂಬಂಧಿಸಿದಂತೆ ಬೆಂಕಿ ಹಚ್ಚುವಿಕೆ, ಗಲಭೆ ಮತ್ತು ವಿಧ್ವಂಸಕ ಕೃತ್ಯದ ಆರೋಪ ಹೊತ್ತಿರುವ ಐವರನ್ನು ನ್ಯಾಯಾಲಯ ಖುಲಾಸೆಗೊಳಿಸಿದೆ. ಅಬ್ದುಲ್ ಸತ್ತಾರ್, ಮುಹಮ್ಮದ್ ಖಾಲಿದ್, ಹುನೈನ್, ತನ್ವೀರ್ ಮತ್ತು ಆರಿಫ್ ವಿರುದ್ಧದ...

ಕಾರ್‌ ಚಲಾಯಿಸುವಾಗ ಫೋನ್‌ನಲ್ಲಿ ಮಾತನಾಡದಂತೆ ಹೇಳಿದ್ದಕ್ಕೆ ಪತ್ರಕರ್ತನ ಮೇಲೆ ರಾಡ್‌ನಿಂದ ಹಲ್ಲೆ

ಆ್ಯಪ್ ಆಧಾರಿತ ಟ್ಯಾಕ್ಸಿ ಬುಕಿಂಗ್‌ ಮಾಡುವ ಪ್ರಯಾಣಿಕರ ಸುರಕ್ಷತೆ ಮತ್ತು ಚಾಲಕರ ನಡವಳಿಕೆಯ ಕುರಿತ ಕಳವಳವಳಕಾರಿ ಘಟನೆಯೊಂದು ಹರಿಯಾಣದ ಫರಿದಾಬಾದ್‌ನಲ್ಲಿ ಬೆಳಕಿಗೆ ಬಂದಿದೆ. ರ್ಯಾಪಿಡೋ ಟ್ಯಾಕ್ಸಿ ಚಾಲಕನೊಬ್ಬ ಪ್ರಯಾಣಿಕನ ಮೇಲೆ ಕಬ್ಬಿಣದ ರಾಡ್‌ನಿಂದ...

ರಾಜಸ್ಥಾನ| ಎಥೆನಾಲ್ ಸ್ಥಾವರದ ವಿರುದ್ಧ ಪ್ರತಿಭಟನೆ: 40 ಜನರ ಬಂಧನ

ರಾಜಸ್ಥಾನದ ಹನುಮಾನ್‌ಗಢ ಜಿಲ್ಲೆಯ ರೈತರು, ಪ್ರಸ್ತಾವಿತ ಎಥೆನಾಲ್ ಕಾರ್ಖಾನೆಯ ವಿರುದ್ಧ ಎರಡನೇ ದಿನವೂ ಪ್ರತಿಭಟನೆ ಮುಂದುವರೆಸಿದ್ದಾರೆ, ಈ ಪ್ರದೇಶದಲ್ಲಿ ಹೆಚ್ಚಿನ ಭದ್ರತೆ ಮತ್ತು ಇಂಟರ್ನೆಟ್ ಸೇವೆಗಳನ್ನು ಸ್ಥಗಿತಗೊಳಿಸಲಾಗಿದೆ. ಗುರುವಾರ ಮುಂಜಾನೆ ಟಿಬ್ಬಿ ಬಳಿಯ ಗುರುದ್ವಾರದಲ್ಲಿ...

ವಿಧಾನಸಭೆಯಲ್ಲಿ ‘ಗೃಹಲಕ್ಷ್ಮಿ’ ಗದ್ದಲ : ಬಿಜೆಪಿ ಸದಸ್ಯರಿಂದ ಸಭಾತ್ಯಾಗ, ಕ್ಷಮೆ ಕೋರಿದ ಸಚಿವೆ ಲಕ್ಷ್ಮಿ ಹೆಬ್ಬಾಳ್ಕರ್

ಗೃಹಲಕ್ಷಿ ಯೋಜನೆಯ ಹಣ ಬಿಡುಗಡೆ ಸಂಬಂಧ ಸಚಿವರು ಸದನಕ್ಕೆ ತಪ್ಪು ಮಾಹಿತಿ ನೀಡಿದ್ದಾರೆ ಎಂಬ ವಿಚಾರ ಇಂದು (ಡಿ.17 ಬುಧವಾರ) ವಿಧಾನಸಭೆಯಲ್ಲಿ ದೊಡ್ಡ ಮಟ್ಟದ ವಾಗ್ವಾದ, ಆರೋಪ-ಪ್ರತ್ಯಾರೋಪ, ಗದ್ದಲ, ಪ್ರತಿಭಟನೆ, ಸಭಾತ್ಯಾಗ ಮತ್ತು...

ತಂಪು ಪಾನೀಯದಲ್ಲಿ ಮತ್ತು ಬರುವ ಔಷಧ ಬೆರೆಸಿ ಅಪ್ರಾಪ್ತ ಬಾಲಕಿಯರ ಮೇಲೆ ಅತ್ಯಾಚಾರ: ಆರೋಪಿ ಬಂಧನ

ಮುಂಬೈ ನಗರವನ್ನೇ ಬೆಚ್ಚಿಬೀಳಿಸಿದ ಆಘಾತಕಾರಿ ಘಟನೆಯಲ್ಲಿ, ವಕ್ತಿಯೋರ್ವ ಮತ್ತು ಬರುವ ತಂಪು ಪಾನೀಯ ನೀಡಿ ಅಪ್ರಾಪ್ತ ಬಾಲಕಿಯರ ಮೇಲೆ ಲೈಂಗಿಕ ದೌರ್ಜನ್ಯ ಎಸಗಿದ್ದಾನೆ. ಅಪರಾಧದ ಅಶ್ಲೀಲ ವೀಡಿಯೊಗಳನ್ನು ರೆಕಾರ್ಡ್ ಮಾಡಿ, ನಂತರ ವೀಡಿಯೊಗಳನ್ನು...

ಮನರೇಗಾ ಬದಲು ವಿಬಿ-ಜಿ ರಾಮ್ ಜಿ : ಲೋಕಸಭೆಯಲ್ಲಿ ಮಸೂದೆ ಅಂಗೀಕಾರದ ವೇಳೆ ಸಭಾತ್ಯಾಗಕ್ಕೆ ನಿರ್ಧರಿಸಿದ ವಿಪಕ್ಷಗಳು

ನರೇಗಾ ಬದಲು ತಂದಿರುವ ವಿಕಸಿತ್ ಭಾರತ್-ಗ್ಯಾರಂಟಿ ಫಾರ್ ರೋಜ್‌ಗಾರ್ ಅಂಡ್ ಅಜೀವಿಕಾ ಮಿಷನ್ (ಗ್ರಾಮೀಣ್) ಮಸೂದೆ, 2025 (ವಿಬಿ–ಜಿ ರಾಮ್ ಜಿ ಮಸೂದೆ) ಲೋಕಸಭೆಯಲ್ಲಿ ಅಂಗೀಕಾರದ ವೇಳೆ ಸಹಕರಿಸದಿರಲು ವಿರೋಧ ಪಕ್ಷಗಳ ಸಂಸದರು...

ಅಪ್ರಾಪ್ತ ಬಾಲಕಿ ಮೇಲೆ ಅತ್ಯಾಚಾರ ಆರೋಪ: ಮ್ಯೂಸಿಕ್ ಮೈಲಾರಿ ಮೇಲೆ ಪೋಕ್ಸೋ ಪ್ರಕರಣ ದಾಖಲು 

ಬೆಂಗಳೂರು: ಉತ್ತರ ಕರ್ನಾಟಕದ ಜನಪದ ಗಾಯಕ ಹಾಗೂ ಯೂಟ್ಯೂಬ್ ಸ್ಟಾರ್ ಎಂದೇ ಖ್ಯಾತಿ ಪಡೆದಿದ್ದ ‘ಮ್ಯೂಸಿಕ್ ಮೈಲಾರಿ’ಎಂಬಾತನನ್ನು ಅಪ್ರಾಪ್ತೆ ಮೇಲೆ ಲೈಂಗಿಕ ದೌರ್ಜನ್ಯ ಎಸಗಿದ ಆರೋಪದಡಿ ಮಹಾಲಿಂಗಪುರ ಪೊಲೀಸರು ಬಂಧಿಸಿದ್ದಾರೆ. ಈ ಪ್ರಕರಣಕ್ಕೆ ಸಂಬಂಧಿಸಿದಂತೆ ಮೈಲಾರಿ...

ಇಂಧನ ಖರೀದಿಗೆ ‘ಮಾಲಿನ್ಯ ನಿಯಂತ್ರಣ ಪ್ರಮಾಣಪತ್ರ’ ಕಡ್ಡಾಯಗೊಳಿಸಿದ ದೆಹಲಿ ಸರ್ಕಾರ

ರಾಷ್ಟ್ರ ರಾಜಧಾನಿ ದೆಹಲಿಯ ವಾಹನ ಮಾಲೀಕರು ಕಟ್ಟುನಿಟ್ಟಾದ ಆದೇಶ ಎದುರಿಸುತ್ತಾರೆ. ಡಿಸೆಂಬರ್ 18 ರಿಂದ ನಗರದಾದ್ಯಂತದ ಪೆಟ್ರೋಲ್ ಬಂಕ್‌ಗಳಲ್ಲಿ ಇಂಧನ ಖರೀದಿಗೆ ಮಾಲಿನ್ಯ ನಿಯಂತ್ರಣ ಪ್ರಮಾಣಪತ್ರ (ಪಿಯುಸಿ) ಕಡ್ಡಾಯಗೊಳಿಸಲಾಗಿದೆ. ದೆಹಲಿ ಪರಿಸರ ಸಚಿವ ಮಂಜಿಂದರ್...

ವೈದ್ಯೆಯ ಹಿಜಾಬ್ ಎಳೆದ ಬಿಹಾರ ಸಿಎಂ, ಅವಹೇಳನ ಮಾಡಿದ ಯುಪಿ ಸಚಿವನ ವಿರುದ್ದ ದೂರು ದಾಖಲು

ವೈದ್ಯೆಯ ಹಿಜಾಬ್ ಎಳೆದ ಬಿಹಾರದ ಮುಖ್ಯಮಂತ್ರಿ ನಿತೀಶ್ ಕುಮಾರ್ ಮತ್ತು ಈ ಘಟನೆಯ ಕುರಿತು ಮಾತನಾಡುವಾಗ ಮಹಿಳೆಯನ್ನು ಅವಮಾನಿಸಿದ ಉತ್ತರ ಪ್ರದೇಶದ ಸಂಪುಟ ಸಚಿವ ಸಂಜಯ್ ನಿಶಾದ್ ವಿರುದ್ದ ಲಕ್ನೋದ ಕೈಸರ್‌ಬಾಗ್ ಪೊಲೀಸ್...

1 ಲಕ್ಷ ರೂಪಾಯಿ ಸಾಲ 74 ಲಕ್ಷ ರೂಪಾಯಿಗೆ ಏರಿಕೆ, ಸಾಲ ತೀರಿಸಲು ಕಿಡ್ನಿ ಮಾರಿದ ರೈತ 

ಅಕ್ರಮವಾಗಿ ಸಾಲ ನೀಡುವವರಿಂದ 1 ಲಕ್ಷ ಸಾಲ ಪಡೆದಿದ್ದು, ಅದಕ್ಕೆ ಹೆಚ್ಚಿನ ದಿನದ ಬಡ್ಡಿ ಸೇರಿ 75 ಲಕ್ಷ ಸಾಲ ಏರಿಕೆಯಾದ ಕಾರಣ ವ್ಯಕ್ತಿಯೊಬ್ಬ ತನ್ನ ಕಿಡ್ನಿಯನ್ನೇ ಮಾರಾಟ ಮಾಡಿರುವ ಘಟನೆ ಮಹಾರಾಷ್ಟ್ರದಲ್ಲಿ...