Homeಮುಖಪುಟ’ಅಗ್ನಿವೀರರಿಗೆ ಬಿಜೆಪಿ ಕಚೇರಿಯಲ್ಲಿ ಗಾರ್ಡ್ ಕೆಲಸ’: ಬಿಜೆಪಿ ನಾಯಕ ವಿಜಯವರ್ಗಿಯ ವಿವಾದಿತ ಹೇಳಿಕೆಗೆ ಖಂಡನೆ

’ಅಗ್ನಿವೀರರಿಗೆ ಬಿಜೆಪಿ ಕಚೇರಿಯಲ್ಲಿ ಗಾರ್ಡ್ ಕೆಲಸ’: ಬಿಜೆಪಿ ನಾಯಕ ವಿಜಯವರ್ಗಿಯ ವಿವಾದಿತ ಹೇಳಿಕೆಗೆ ಖಂಡನೆ

’ಈ ಹೇಳಿಕೆಗಳು ಕೂಡ ‘ಫ್ರಿಂಜ್’ ಅಂಶಗಳ ಹೇಳಿಕೆಗಳೇ ಎಂಬುದನ್ನು ಪ್ರಧಾನಿ ಸ್ಪಷ್ಟಪಡಿಸಬೇಕು’ ಟಿಎಂಸಿ ಆಗ್ರಹ

- Advertisement -
- Advertisement -

ಒಕ್ಕೂಟ ಸರ್ಕಾರ ಘೋಷಿಸಿರುವ ಅಗ್ನಿಪಥ ಯೋಜನೆ ವಿರೋಧಿಸಿ ದೇಶದಾದ್ಯಂತ ಪ್ರತಿಭಟನೆಗಳು ಭುಗಿಲೆದ್ದಿರುವ ಬೆನ್ನಲ್ಲೇ ಬಿಜೆಪಿ ರಾಷ್ಟ್ರೀಯ ಪ್ರಧಾನ ಕಾರ್ಯದರ್ಶಿ ಕೈಲಾಶ್ ವಿಜಯವರ್ಗಿಯ ಅವರು ಬಿಜೆಪಿ ಕಚೇರಿಗಳಿಗೆ ಭದ್ರತಾ ಸಿಬ್ಬಂದಿಯನ್ನು ನೇಮಿಸಿಕೊಳ್ಳುವಾಗ ಅಗ್ನಿವೀರರಿಗೆ ಆದ್ಯತೆ ನೀಡಲಾಗುವುದು’ ಎಂದು ವಿವಾದಿತ ಹೇಳಿಕೆ ನೀಡಿದ್ದಾರೆ.

“ಶಿಸ್ತು ಮತ್ತು ಆಜ್ಞೆಗಳು ಪಾಲಿಸುವುದು ಮಿಲಿಟರಿ ತರಬೇತಿಯ ಅವಿಭಾಜ್ಯ ಅಂಗವಾಗಿದೆ. ಅಗ್ನಿವೀರರು 25 ವರ್ಷ ವಯಸ್ಸಿನಲ್ಲಿ ನಾಲ್ಕು ವರ್ಷಗಳ ಕಾಲ ರಕ್ಷಣಾ ಕ್ಷೇತ್ರದಲ್ಲಿ ಸೇವೆ ಸಲ್ಲಿಸಿ ಹೊರಬಂದಾಗ, ಅವರ ಬಳಿ 11 ಲಕ್ಷ ರೂಪಾಯಿ ಇರುತ್ತದೆ. ಅವರು ಹೆಮ್ಮೆಯಿಂದ ಪ್ರದರ್ಶಿಸಬಹುದಾದ ಅಗ್ನಿವೀರರ ಟ್ಯಾಗ್ ಹೊಂದಿರುತ್ತಾರೆ. ನಾನು ಬಿಜೆಪಿ ಕಚೇರಿಗೆ ಭದ್ರತಾ ಸಿಬ್ಬಂದಿಯನ್ನು ನೇಮಿಸಲು ಬಯಸಿದರೆ, ನಾನು ಅಗ್ನಿವೀರರಿಗೆ ಆದ್ಯತೆ ನೀಡುತ್ತೇನೆ” ಎಂದು ಬಿಜೆಪಿಯ ಹಿರಿಯ ನಾಯಕ ವಿಜಯವರ್ಗಿಯವರು ಇಂದೋರ್‌ನ ಪತ್ರಿಕಾಗೋಷ್ಠಿಯಲ್ಲಿ ಹೇಳಿದ್ದರು.

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ
₹100 ₹200 ₹500 ₹1000 Others

ಇದನ್ನೂ ಓದಿ: ಸಾಯಿ ಪಲ್ಲವಿಯವರಿಂದ ಮಾಧ್ಯಮಗಳು ಕಲಿಯುವುದು ಬಹಳಷ್ಟಿದೆ: ಬೆಂಬಲಕ್ಕೆ ನಿಂತ ನಟ ಕಿಶೋರ್

ವಿಜಯವರ್ಗಿಯ ಅವರ ವಿಡಿಯೋ ವೈರಲ್ ಆಗುತ್ತಿದ್ದಂತೆಯೇ ಈ ಹೇಳಿಕೆಗೆ ವಿವಿಧ ವಲಯಗಳಿಂದ ಖಂಡನೆ ವ್ಯಕ್ತವಾಗಿದೆ. ಬಿಜೆಪಿ ಸಂಸದ ವರುಣ್ ಗಾಂಧಿ ಟ್ವಿಟ್ಟರ್‌ನಲ್ಲಿ ವಿಡಿಯೊ ಹಂಚಿಕೊಂಡಿದ್ದು, ರಾಜಕೀಯ ಪಕ್ಷದ ಕಚೇರಿಗಳನ್ನು ಕಾವಲು ಕಾಯಲು ಭಾರತೀಯ ಸೈನಿಕರನ್ನು ಆಹ್ವಾನಿಸಿರುವುದನ್ನು ಟೀಕಿಸಿದ್ದಾರೆ.

ಪಶ್ಚಿಮ ಬಂಗಾಳ ಮುಖ್ಯಮಂತ್ರಿ ಮಮತಾ ಬ್ಯಾನರ್ಜಿ ಅವರ ತೃಣಮೂಲ ಕಾಂಗ್ರೆಸ್‌ ಕೂಡ ಖಂಡನೆ ವ್ಯಕ್ತಪಡಿಸಿದೆ. “ಭಾರತದ ಯುವಕರು ಬಿಜೆಪಿ ಕಚೇರಿಯ ಬಾಗಿಲ ಕಾಯುವ ದ್ವಾರಪಾಲಕರಾಗಬಾರದು, ಯುವ ಶಕ್ತಿ ಮೋದಿ ಸರ್ಕಾರಕ್ಕಿಂತ ಭಿನ್ನವಾಗಿ ಈ ದೇಶಕ್ಕೆ ಸೇವೆ ಸಲ್ಲಿಸಲು ಬಯಸುತ್ತದೆ. ಇವೂ ಕೂಡ ‘ಫ್ರಿಂಜ್’ ಅಂಶಗಳ ಹೇಳಿಕೆಗಳೇ ಎಂಬುದನ್ನು ಪ್ರಧಾನಿ ಸ್ಪಷ್ಟಪಡಿಸಬೇಕು” ಎಂದು ಆಗ್ರಹಿಸಿದೆ.

ಇದನ್ನೂ ಓದಿ: 60 ಲಕ್ಷ ಹುದ್ದೆಗಳು ಖಾಲಿಯಿದ್ದರೂ ವಿದ್ಯಾವಂತ ಯುವಕರು ಇ-ರಿಕ್ಷಾ ಓಡಿಸುತ್ತಿದ್ದಾರೆ: BJP ಸಂಸದ ವರುಣ್ ಗಾಂಧಿ ಆಕ್ರೋಶ

 

ಮಧ್ಯಪ್ರದೇಶ ಕಾಂಗ್ರೆಸ್ ಕೂಡ ವಿಜಯವರ್ಗಿಯವರ ಹೇಳಿಕೆಯನ್ನು ಟೀಕಿಸಿದೆ. ಇದರ ರಾಜ್ಯ ಘಟಕದ ಅಧ್ಯಕ್ಷ ಕೆ.ಕೆ.ಮಿಶ್ರಾ ಮಾತನಾಡಿ, ’ಈ ಹೇಳಿಕೆಯು ಕೇವಲ ದೇಶದ ಯುವಕರಲ್ಲದೇ ಭಾರತೀಯ ಸೇನೆಯ ಶೌರ್ಯಕ್ಕೆ ಮಾಡಿದ ಘೋರ ಅವಮಾನವಾಗಿದ್ದು, ಪ್ರತಿಭಟನೆ ನಡೆಸುತ್ತಿರುವ ಯುವಕರ ಗಾಯದ ಮೇಲೆ ಉಪ್ಪು ಸವರುವ ಅವಿವೇಕದ ಪ್ರಯತ್ನವಾಗಿದೆ’ ಎಂದಿದ್ದಾರೆ.

ಎಐಎಂಐಎಂ ಅಧ್ಯಕ್ಷ ಅಸಾದುದ್ದೀನ್ ಓವೈಸಿ ಆಕ್ರೋಶ ವ್ಯಕ್ತಪಡಿಸಿ ಟ್ವೀಟ್ ಮಾಡಿದ್ದಾರೆ. “ತರಬೇತಿ ಪಡೆದ ಗುತ್ತಿಗೆ ಸೈನಿಕರನ್ನು ಅವರ ಕಚೇರಿಗಳಿಗೆ ಚೌಕಿದಾರರನ್ನಾಗಿ ನೇಮಿಸಿಕೊಳ್ಳುತ್ತೇವೆ ಎಂದು ಬಿಜೆಪಿ ನಾಯಕರು ಹೇಳುತ್ತಾರೆ. ಇದು ಗೌರವದ ವೃತ್ತಿಯಾಗಿರುವ ಸೈನ್ಯಕ್ಕೆ ಮತ್ತು ಸೈನಿಕರಿಗೆ ಮೋದಿಯವರ ಪಕ್ಷ ನೀಡುವ ಗೌರವವೇ? ದೇಶದಲ್ಲಿ ಈ ರೀತಿಯ ಆಡಳಿತ ಪಕ್ಷವಿರುವುದು ವಿಷಾದನೀಯ” ಎಂದಿದ್ದಾರೆ.


ಇದನ್ನೂ ಓದಿ: ಅಗ್ನಿಪಥ್ ವಿರೋಧಿಸಿ ಇಂದು ಭಾರತ್ ಬಂದ್: ಬಿಹಾರದಲ್ಲಿ 350 ರೈಲುಗಳ ಸಂಚಾರ ರದ್ದು

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

2 COMMENTS

  1. ಒಬ್ಬ ಮೂರ್ಖನಿಗೂ ಗೊತ್ತಿಲ್ಲ ಅಗ್ನಿಪಥ ಯೋಜನೆ ಬಗ್ಗೆ ಆದ್ರೂ ಬಾಯಿಗೆ ಬಂದಂಗೆ ಬೊಗಳೋದು ನಿಲ್ಲಸಲ್ಲ,, ಓ ಮೂರ್ಖರೆ ಮೊದಲು ಅಗ್ನಿಪಥ ಅಂದ್ರೆ ಏನು ಅದರ ಒಳ ಷಡ್ಯಂತ್ರಗಳು ಏನು ಅಂತ ನೀವು ತಿಳ್ಕೊಳಿ ಜನರಿಗೆ ಎಲ್ಲ ಅರ್ಥ ಆಗಿದೆ,, ಯಾರೋ ಊದಿದ ಪುಂಗಿಗೆ ಸ್ಕ್ರಿಪ್ಟ್ ಬರೆಯೋಕೆ ಬರೋಕು ಮುಂಚೆ ಮನೇಲಿ ಸ್ವಲ್ಪ ನಿಮಗಿಂತ ಹೆಚ್ಚು ಓದಿರುವ ನಿಮ್ಮ ಆಪ್ತ ಸಲಹೆಗಾರರ ಹತ್ತಿರ ಸಲಹೆ ಪಡೆಯೋದು ಉತ್ತಮ ಅನ್ಸುತ್ತೆ ಅಲ್ವಾ ಅವಿವೇಕಿಗಳೆ..?
    ಕೆಲವು ನಾಯಿಗಳು ಯಾವಾಗ್ಲೂ ಬೊಗಳ್ತಾವೆ ಬರಿ ಸಾಬರ್ ಬಗ್ಗೆ ಮಾತ್ರ,, ದೇಶದ ಒಳಿತಿಗಾಗಿ ಒಂದು ಮಾತು ಬರಲ್ಲ ಎಂಜಲು ಅಲ್ಲ ಕ್ಷಮಿಸಿ ಹೇಸಿಗೆ ತಿನ್ನೋ ನಾಯಿಗಳು.. ಈಗ ಬೊಗಳರೋ ಹೇಸಿಗೆ ನಾಯಿಗಳ ದೇಶದ ಮಾನ ಹೋಯ್ತು ಈಗ ದೇಶದ ಯುವಕರು ಏನ್ ಮಾಡಬೇಕು ಬೊಗಳರೋ 2 ರೂಪಾಯಿ ಬಿಖಾರಿಗಳೇ….

  2. ಹೀಗೊಂದು ಪಕ್ಷದ ಒಬ್ಬ ಮೂರ್ಖನಿಗೂ ಗೊತ್ತಿಲ್ಲ ಅಗ್ನಿಪಥ ಯೋಜನೆ ಬಗ್ಗೆ ಆದ್ರೂ ಬಾಯಿಗೆ ಬಂದಂಗೆ ಬೊಗಳೋದು ನಿಲ್ಲಸಲ್ಲ,, ಓ ಮೂರ್ಖರೆ ಮೊದಲು ಅಗ್ನಿಪಥ ಅಂದ್ರೆ ಏನು ಅದರ ಒಳ ಷಡ್ಯಂತ್ರಗಳು ಏನು ಅಂತ ನೀವು ತಿಳ್ಕೊಳಿ ಜನರಿಗೆ ಎಲ್ಲ ಅರ್ಥ ಆಗಿದೆ,, ಯಾರೋ ಊದಿದ ಪುಂಗಿಗೆ ಸ್ಕ್ರಿಪ್ಟ್ ಬರೆಯೋಕೆ ಬರೋಕು ಮುಂಚೆ ಮನೇಲಿ ಸ್ವಲ್ಪ ನಿಮಗಿಂತ ಹೆಚ್ಚು ಓದಿರುವ ನಿಮ್ಮ ಆಪ್ತ ಸಲಹೆಗಾರರ ಹತ್ತಿರ ಸಲಹೆ ಪಡೆಯೋದು ಉತ್ತಮ ಅನ್ಸುತ್ತೆ ಅಲ್ವಾ ಅವಿವೇಕಿಗಳೆ..?
    ಕೆಲವು ನಾಯಿಗಳು ಯಾವಾಗ್ಲೂ ಬೊಗಳ್ತಾವೆ ಬರಿ ಸಾಬರ್ ಬಗ್ಗೆ ಮಾತ್ರ,, ದೇಶದ ಒಳಿತಿಗಾಗಿ ಒಂದು ಮಾತು ಬರಲ್ಲ ಎಂಜಲು ಅಲ್ಲ ಕ್ಷಮಿಸಿ ಹೇಸಿಗೆ ತಿನ್ನೋ ನಾಯಿಗಳು.. ಈಗ ಬೊಗಳರೋ ಹೇಸಿಗೆ ನಾಯಿಗಳ ದೇಶದ ಮಾನ ಹೋಯ್ತು ಈಗ ದೇಶದ ಯುವಕರು ಏನ್ ಮಾಡಬೇಕು ಬೊಗಳರೋ 2 ರೂಪಾಯಿ ಬಿಖಾರಿಗಳೇ….

LEAVE A REPLY

Please enter your comment!
Please enter your name here

- Advertisment -

ಶೂಟ್ ಮಾಡಿಕೊಂಡು ಪ್ರಾಣ ಬಿಟ್ಟ ಕಾನ್ಫಿಡೆಂಟ್ ಗ್ರೂಪ್ ಸಂಸ್ಥಾಪಕ ಸಿ.ಜೆ. ರಾಯ್: ಐಟಿ ದಾಳಿ ಒತ್ತಡದಿಂದ ಆತ್ಮಹತ್ಯೆ ಶಂಕೆ

ಬೆಂಗಳೂರು: ಖ್ಯಾತ ರಿಯಲ್ ಎಸ್ಟೇಟ್ ಉದ್ಯಮಿ, ಕಾನ್ಫಿಡೆಂಟ್ ಗ್ರೂಪ್ (Confident Group) ಅಧ್ಯಕ್ಷ ಡಾ. ಸಿ.ಜೆ. ರಾಯ್ ಅವರು ಶುಕ್ರವಾರ ಬೆಂಗಳೂರಿನ ತಮ್ಮ ಕಚೇರಿಯಲ್ಲಿ ಗನ್ ನಿಂದ ಶೂಟ್ ಮಾಡಿಕೊಂಡು ಆತ್ಮಹತ್ಯೆಗೆ ಶರಣಾಗಿದ್ದಾರೆ.  ಕೇರಳ...

ಕಾಂಗ್ರೆಸ್ ಆಳ್ವಿಕೆಯಲ್ಲಿ ನುಸುಳಲುಕೋರರು ಬಹುಸಂಖ್ಯಾತರಾದರು; ನುಸುಳುಕೋರರಿಂದ ಅಸ್ಸಾಂ ರಕ್ಷಿಸಲು ಬಿಜೆಪಿಗೆ ಮತ ಹಾಕಿ: ಅಮಿತ್ ಶಾ

ಧೇಮಾಜಿ (ಅಸ್ಸಾಂ): ಕಾಂಗ್ರೆಸ್ ಆಳ್ವಿಕೆಯಲ್ಲಿ ಅಸ್ಸಾಂನ ಜನಸಂಖ್ಯಾಶಾಸ್ತ್ರ ಬದಲಾಗಿದೆ ಎಂದು ಹೇಳಿರುವ ಕೇಂದ್ರ ಗೃಹ ಸಚಿವ ಅಮಿತ್ ಶಾ , ಪ್ರಧಾನಿ ನರೇಂದ್ರ ಮೋದಿ ನೇತೃತ್ವದ ಬಿಜೆಪಿ ನೇತೃತ್ವದ ಸರ್ಕಾರ ಈ ಪ್ರವೃತ್ತಿಯನ್ನು...

ಕೊಲ್ಕತ್ತಾ ಅಗ್ನಿ ಅವಘಡ| ಈವರೆಗೆ ವಾವ್ ಮೊಮೋ ಕಂಪನಿ ಗೋದಾಮು ಸೇರಿದಂತೆ ಇತರೆಡೆ 21 ಜನರು ಸಾವನ್ನಪ್ಪಿರುವ ಮಾಹಿತಿ ಲಭ್ಯ  

ಜನವರಿ 26 ರ ಮುಂಜಾನೆ ಕೋಲ್ಕತ್ತಾದ ಆನಂದಪುರ ಪ್ರದೇಶದಲ್ಲಿ ಸಂಭವಿಸಿದ ಭೀಕರ ಬೆಂಕಿ ಅಪಘಾತದಲ್ಲಿ ಸಾವನ್ನಪ್ಪಿದವರ ಸಂಖ್ಯೆ ಗುರುವಾರ 21 ಕ್ಕೆ ಏರಿದ್ದು, 28 ಜನರು ಇನ್ನೂ ನಾಪತ್ತೆಯಾಗಿದ್ದಾರೆ.  ಬೆಂಕಿಯ ಅವಘಡದಲ್ಲಿ ಎರಡು ಗೋದಾಮುಗಳು...

ಮುಟ್ಟಿನ ಆರೋಗ್ಯ ಮೂಲಭೂತ ಹಕ್ಕು, ಬದುಕುವ ಹಕ್ಕಿನ ಭಾಗ : ಸುಪ್ರೀಂ ಕೋರ್ಟ್

ಮುಟ್ಟಿನ ಆರೋಗ್ಯ ಸಂವಿಧಾನದ 21ನೇ ವಿಧಿಯಡಿ ಖಾತ್ರಿಪಡಿಸಿದ ಮೂಲಭೂತ ಹಕ್ಕು, ಬದುಕುವ ಹಕ್ಕಿನ ಭಾಗ ಎಂದು ಸುಪ್ರೀಂ ಕೋರ್ಟ್ ಶುಕ್ರವಾರ (ಜ.30) ಮಹತ್ವದ ತೀರ್ಪು ನೀಡಿದೆ. ಎಲ್ಲಾ ರಾಜ್ಯಗಳು ಮತ್ತು ಕೇಂದ್ರಾಡಳಿತ ಪ್ರದೇಶಗಳ ಸರ್ಕಾರಿ,...

ಅತ್ಯಾಚಾರ ಪ್ರಕರಣದಲ್ಲಿ ಎಸ್‌ಪಿ ನಾಯಕ ಮೊಯಿದ್ ಖಾನ್ ಖುಲಾಸೆ: ಬಂಧನದ ಎರಡು ವರ್ಷಗಳ ನಂತರ ಬುಲ್ಡೋಜರ್ ನಿಂದ ಮನೆ ಕೆಡವಿದ್ದ ಯೋಗಿ ಸರ್ಕಾರ

2024 ರಲ್ಲಿ ಅಪ್ರಾಪ್ತ ಬಾಲಕಿಯ ಮೇಲೆ ನಡೆದ ಸಾಮೂಹಿಕ ಅತ್ಯಾಚಾರ ಪ್ರಕರಣದಲ್ಲಿ ಸಮಾಜವಾದಿ ಪಕ್ಷದ ನಾಯಕ ಮೊಯಿದ್ ಖಾನ್ ಅವರನ್ನು ಉತ್ತರ ಪ್ರದೇಶದ ಅಯೋಧ್ಯೆಯ ಪೋಕ್ಸೋ ನ್ಯಾಯಾಲಯವು ಖುಲಾಸೆಗೊಳಿಸಿದೆ.  ಅಪ್ರಾಪ್ತ ಬಾಲಕಿಯ ಮೇಲೆ ನಡೆದ...

ಸಿಎಂ ಸಿದ್ದರಾಮಯ್ಯ, ಡಿಕೆಶಿ ವಿರುದ್ಧ ‘ಸ್ಕ್ಯಾಮ್ ಲಾರ್ಡ್’ ಪೋಸ್ಟ್: ಕರ್ನಾಟಕ ಬಿಜೆಪಿ ಎಕ್ಸ್ ಹ್ಯಾಂಡಲ್ ವಿರುದ್ಧ ಪ್ರಕರಣ ದಾಖಲು

ಕರ್ನಾಟಕ ಮುಖ್ಯಮಂತ್ರಿ ಸಿದ್ದರಾಮಯ್ಯ, ಉಪಮುಖ್ಯಮಂತ್ರಿ ಡಿಕೆ ಶಿವಕುಮಾರ್ ಮತ್ತು ಇತರ ಸಚಿವರನ್ನು ಗುರಿಯಾಗಿಸಿಕೊಂಡು "ಮಾನಹಾನಿಕರ" ಪೋಸ್ಟ್ ಪೋಸ್ಟ್ ಮಾಡಿದ್ದಕ್ಕಾಗಿ ಮತ್ತು ರಾಜ್ಯವನ್ನು "ಲೂಟಿ" ಮಾಡುವಲ್ಲಿ ಅವರು ಭಾಗಿಯಾಗಿದ್ದಾರೆ ಎಂದು ಆರೋಪಿಸಿ ಬಿಜೆಪಿಯ 'ಎಕ್ಸ್'...

‘ನೀವು ಮುಂದೆ ಬರಲು ಸಿದ್ಧರಿದ್ದೀರಾ, ಅಥವಾ ಟ್ವೀಟ್ ಮಾಡುತ್ತಲೇ ಇರುತ್ತೀರಾ?’; ಮೋಹನ್ ದಾಸ್ ಪೈಗೆ ರಾಮಲಿಂಗಾರೆಡ್ಡಿ ಓಪನ್ ಚಾಲೆಂಜ್..!

ಬೆಂಗಳೂರಿನಲ್ಲಿ ಬಿಎಂಟಿಸಿ (BMTC) ಬಸ್‌ಗಳ ಕೊರತೆಯನ್ನು ಎತ್ತಿ, ಖಾಸಗಿ ಕಂಪನಿಗಳಿಗೆ ನಗರ ಬಸ್ ಸೇವೆಗೆ ಅವಕಾಶ ನೀಡಬೇಕು ಎಂದು ಸಲಹೆ ನೀಡಿದ್ದ, ಮೋಹನ್ ದಾಸ್ ಪೈ ಹೇಳಿಕೆಗೆ ಸಾರಿಗೆ ಸಚಿವ ರಾಮಲಿಂಗಾ ರೆಡ್ಡಿ...

ಪ್ಯಾಲೆಸ್ತೀನ್ ಸಿನಿಮಾಗಳ ಪ್ರದರ್ಶನಕ್ಕೆ ಅನುಮತಿ ನಿರಾಕರಣೆ; ರಾಜ್ಯ ಸರ್ಕಾರ ಗಟ್ಟಿ ದನಿಯಲ್ಲಿ ಪ್ರತಿಭಟಿಸಬೇಕು : ನಟ ಪ್ರಕಾಶ್ ರಾಜ್

ಬೆಂಗಳೂರು ಅಂತಾರಾಷ್ಟ್ರೀಯ ಚಲನಚಿತ್ರೋತ್ಸವದಲ್ಲಿ ಪ್ಯಾಲೆಸ್ತೀನಿಯನ್ ಸಿನಿಮಾಗಳ ಪ್ರದರ್ಶನಕ್ಕೆ ಅನುಮತಿ ನಿರಾಕರಿಸಿರುವ ಕೇಂದ್ರ ಸರ್ಕಾರದ ಕ್ರಮವನ್ನು ರಾಜ್ಯ ಸರ್ಕಾರ ಗಟ್ಟಿ ದನಿಯಲ್ಲಿ ಪ್ರತಿರೋಧಿಸಬೇಕು, ಪ್ರತಿಭಟಿಸಬೇಕು ಎಂದು ನಟ ಪ್ರಕಾಶ್ ರಾಜ್ ಒತ್ತಾಯಿಸಿದರು. ಗುರುವಾರ (ಜ.29) ಸಂಜೆ...

ಗೌರಿ ಲಂಕೇಶರ ನೆರಳು ನನ್ನ ಮೇಲೆ ಬಿದ್ದಿರುವ ಕಾರಣಕ್ಕೆ ‘ಲ್ಯಾಂಡ್‍ ಲಾರ್ಡ್‌’ನಂತಹ ಸಿನಿಮಾ ಮಾಡಲು ಕೈ ಹಾಕಿದ್ದೇನೆ: ನಟ ದುನಿಯಾ ವಿಜಯ್

ಗೌರಿ ಲಂಕೇಶ್ ಹಾಗೂ ಇತರ ಹೋರಾಟಗಾರರ ನೆರಳು ನನ್ನ ಮೇಲೆ ಬಿದ್ದಿರುವ ಕಾರಣಕ್ಕೆ ನಾನು 'ಲ್ಯಾಂಡ್‍ಲಾರ್ಡ್' ನಂತಹ ಸಿನೆಮಾ ಮಾಡುವುದಕ್ಕೆ ಕೈ ಹಾಕಿದ್ದೇನೆ ಎಂದು ನಟ ದುನಿಯಾ ವಿಜಯ್ ಹೇಳಿದರು. ಗುರುವಾರ (ಜ.29) ಬೆಂಗಳೂರಿನ...

ಜಾತಿ ತಾರತಮ್ಯ ತಡೆಗಟ್ಟುವ ಯುಜಿಸಿಯ ಹೊಸ ನಿಯಮಕ್ಕೆ ಸುಪ್ರೀಂ ಕೋರ್ಟ್ ತಡೆ

ಉನ್ನತ ಶಿಕ್ಷಣ ಸಂಸ್ಥೆಗಳಲ್ಲಿ ಜಾತಿ ಆಧಾರಿತ ತಾರತಮ್ಯವನ್ನು ತಡೆಗಟ್ಟಲು ಕೇಂದ್ರ ಸರ್ಕಾರ ಜಾರಿಗೆ ತಂದಿರುವ ವಿಶ್ವವಿದ್ಯಾಲಯ ಅನುದಾನ ಆಯೋಗದ (ಉನ್ನತ ಶಿಕ್ಷಣ ಸಂಸ್ಥೆಗಳಲ್ಲಿ ಸಮಾನತೆಯ ಪ್ರಚಾರ) ನಿಯಮಗಳು, 2026ಕ್ಕೆ ಸುಪ್ರೀಂ ಕೋರ್ಟ್ ಗುರುವಾರ...