Homeಮುಖಪುಟ’ಅಗ್ನಿವೀರರಿಗೆ ಬಿಜೆಪಿ ಕಚೇರಿಯಲ್ಲಿ ಗಾರ್ಡ್ ಕೆಲಸ’: ಬಿಜೆಪಿ ನಾಯಕ ವಿಜಯವರ್ಗಿಯ ವಿವಾದಿತ ಹೇಳಿಕೆಗೆ ಖಂಡನೆ

’ಅಗ್ನಿವೀರರಿಗೆ ಬಿಜೆಪಿ ಕಚೇರಿಯಲ್ಲಿ ಗಾರ್ಡ್ ಕೆಲಸ’: ಬಿಜೆಪಿ ನಾಯಕ ವಿಜಯವರ್ಗಿಯ ವಿವಾದಿತ ಹೇಳಿಕೆಗೆ ಖಂಡನೆ

’ಈ ಹೇಳಿಕೆಗಳು ಕೂಡ ‘ಫ್ರಿಂಜ್’ ಅಂಶಗಳ ಹೇಳಿಕೆಗಳೇ ಎಂಬುದನ್ನು ಪ್ರಧಾನಿ ಸ್ಪಷ್ಟಪಡಿಸಬೇಕು’ ಟಿಎಂಸಿ ಆಗ್ರಹ

- Advertisement -
- Advertisement -

ಒಕ್ಕೂಟ ಸರ್ಕಾರ ಘೋಷಿಸಿರುವ ಅಗ್ನಿಪಥ ಯೋಜನೆ ವಿರೋಧಿಸಿ ದೇಶದಾದ್ಯಂತ ಪ್ರತಿಭಟನೆಗಳು ಭುಗಿಲೆದ್ದಿರುವ ಬೆನ್ನಲ್ಲೇ ಬಿಜೆಪಿ ರಾಷ್ಟ್ರೀಯ ಪ್ರಧಾನ ಕಾರ್ಯದರ್ಶಿ ಕೈಲಾಶ್ ವಿಜಯವರ್ಗಿಯ ಅವರು ಬಿಜೆಪಿ ಕಚೇರಿಗಳಿಗೆ ಭದ್ರತಾ ಸಿಬ್ಬಂದಿಯನ್ನು ನೇಮಿಸಿಕೊಳ್ಳುವಾಗ ಅಗ್ನಿವೀರರಿಗೆ ಆದ್ಯತೆ ನೀಡಲಾಗುವುದು’ ಎಂದು ವಿವಾದಿತ ಹೇಳಿಕೆ ನೀಡಿದ್ದಾರೆ.

“ಶಿಸ್ತು ಮತ್ತು ಆಜ್ಞೆಗಳು ಪಾಲಿಸುವುದು ಮಿಲಿಟರಿ ತರಬೇತಿಯ ಅವಿಭಾಜ್ಯ ಅಂಗವಾಗಿದೆ. ಅಗ್ನಿವೀರರು 25 ವರ್ಷ ವಯಸ್ಸಿನಲ್ಲಿ ನಾಲ್ಕು ವರ್ಷಗಳ ಕಾಲ ರಕ್ಷಣಾ ಕ್ಷೇತ್ರದಲ್ಲಿ ಸೇವೆ ಸಲ್ಲಿಸಿ ಹೊರಬಂದಾಗ, ಅವರ ಬಳಿ 11 ಲಕ್ಷ ರೂಪಾಯಿ ಇರುತ್ತದೆ. ಅವರು ಹೆಮ್ಮೆಯಿಂದ ಪ್ರದರ್ಶಿಸಬಹುದಾದ ಅಗ್ನಿವೀರರ ಟ್ಯಾಗ್ ಹೊಂದಿರುತ್ತಾರೆ. ನಾನು ಬಿಜೆಪಿ ಕಚೇರಿಗೆ ಭದ್ರತಾ ಸಿಬ್ಬಂದಿಯನ್ನು ನೇಮಿಸಲು ಬಯಸಿದರೆ, ನಾನು ಅಗ್ನಿವೀರರಿಗೆ ಆದ್ಯತೆ ನೀಡುತ್ತೇನೆ” ಎಂದು ಬಿಜೆಪಿಯ ಹಿರಿಯ ನಾಯಕ ವಿಜಯವರ್ಗಿಯವರು ಇಂದೋರ್‌ನ ಪತ್ರಿಕಾಗೋಷ್ಠಿಯಲ್ಲಿ ಹೇಳಿದ್ದರು.

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ
₹100 ₹200 ₹500 ₹1000 Others

ಇದನ್ನೂ ಓದಿ: ಸಾಯಿ ಪಲ್ಲವಿಯವರಿಂದ ಮಾಧ್ಯಮಗಳು ಕಲಿಯುವುದು ಬಹಳಷ್ಟಿದೆ: ಬೆಂಬಲಕ್ಕೆ ನಿಂತ ನಟ ಕಿಶೋರ್

ವಿಜಯವರ್ಗಿಯ ಅವರ ವಿಡಿಯೋ ವೈರಲ್ ಆಗುತ್ತಿದ್ದಂತೆಯೇ ಈ ಹೇಳಿಕೆಗೆ ವಿವಿಧ ವಲಯಗಳಿಂದ ಖಂಡನೆ ವ್ಯಕ್ತವಾಗಿದೆ. ಬಿಜೆಪಿ ಸಂಸದ ವರುಣ್ ಗಾಂಧಿ ಟ್ವಿಟ್ಟರ್‌ನಲ್ಲಿ ವಿಡಿಯೊ ಹಂಚಿಕೊಂಡಿದ್ದು, ರಾಜಕೀಯ ಪಕ್ಷದ ಕಚೇರಿಗಳನ್ನು ಕಾವಲು ಕಾಯಲು ಭಾರತೀಯ ಸೈನಿಕರನ್ನು ಆಹ್ವಾನಿಸಿರುವುದನ್ನು ಟೀಕಿಸಿದ್ದಾರೆ.

ಪಶ್ಚಿಮ ಬಂಗಾಳ ಮುಖ್ಯಮಂತ್ರಿ ಮಮತಾ ಬ್ಯಾನರ್ಜಿ ಅವರ ತೃಣಮೂಲ ಕಾಂಗ್ರೆಸ್‌ ಕೂಡ ಖಂಡನೆ ವ್ಯಕ್ತಪಡಿಸಿದೆ. “ಭಾರತದ ಯುವಕರು ಬಿಜೆಪಿ ಕಚೇರಿಯ ಬಾಗಿಲ ಕಾಯುವ ದ್ವಾರಪಾಲಕರಾಗಬಾರದು, ಯುವ ಶಕ್ತಿ ಮೋದಿ ಸರ್ಕಾರಕ್ಕಿಂತ ಭಿನ್ನವಾಗಿ ಈ ದೇಶಕ್ಕೆ ಸೇವೆ ಸಲ್ಲಿಸಲು ಬಯಸುತ್ತದೆ. ಇವೂ ಕೂಡ ‘ಫ್ರಿಂಜ್’ ಅಂಶಗಳ ಹೇಳಿಕೆಗಳೇ ಎಂಬುದನ್ನು ಪ್ರಧಾನಿ ಸ್ಪಷ್ಟಪಡಿಸಬೇಕು” ಎಂದು ಆಗ್ರಹಿಸಿದೆ.

ಇದನ್ನೂ ಓದಿ: 60 ಲಕ್ಷ ಹುದ್ದೆಗಳು ಖಾಲಿಯಿದ್ದರೂ ವಿದ್ಯಾವಂತ ಯುವಕರು ಇ-ರಿಕ್ಷಾ ಓಡಿಸುತ್ತಿದ್ದಾರೆ: BJP ಸಂಸದ ವರುಣ್ ಗಾಂಧಿ ಆಕ್ರೋಶ

 

ಮಧ್ಯಪ್ರದೇಶ ಕಾಂಗ್ರೆಸ್ ಕೂಡ ವಿಜಯವರ್ಗಿಯವರ ಹೇಳಿಕೆಯನ್ನು ಟೀಕಿಸಿದೆ. ಇದರ ರಾಜ್ಯ ಘಟಕದ ಅಧ್ಯಕ್ಷ ಕೆ.ಕೆ.ಮಿಶ್ರಾ ಮಾತನಾಡಿ, ’ಈ ಹೇಳಿಕೆಯು ಕೇವಲ ದೇಶದ ಯುವಕರಲ್ಲದೇ ಭಾರತೀಯ ಸೇನೆಯ ಶೌರ್ಯಕ್ಕೆ ಮಾಡಿದ ಘೋರ ಅವಮಾನವಾಗಿದ್ದು, ಪ್ರತಿಭಟನೆ ನಡೆಸುತ್ತಿರುವ ಯುವಕರ ಗಾಯದ ಮೇಲೆ ಉಪ್ಪು ಸವರುವ ಅವಿವೇಕದ ಪ್ರಯತ್ನವಾಗಿದೆ’ ಎಂದಿದ್ದಾರೆ.

ಎಐಎಂಐಎಂ ಅಧ್ಯಕ್ಷ ಅಸಾದುದ್ದೀನ್ ಓವೈಸಿ ಆಕ್ರೋಶ ವ್ಯಕ್ತಪಡಿಸಿ ಟ್ವೀಟ್ ಮಾಡಿದ್ದಾರೆ. “ತರಬೇತಿ ಪಡೆದ ಗುತ್ತಿಗೆ ಸೈನಿಕರನ್ನು ಅವರ ಕಚೇರಿಗಳಿಗೆ ಚೌಕಿದಾರರನ್ನಾಗಿ ನೇಮಿಸಿಕೊಳ್ಳುತ್ತೇವೆ ಎಂದು ಬಿಜೆಪಿ ನಾಯಕರು ಹೇಳುತ್ತಾರೆ. ಇದು ಗೌರವದ ವೃತ್ತಿಯಾಗಿರುವ ಸೈನ್ಯಕ್ಕೆ ಮತ್ತು ಸೈನಿಕರಿಗೆ ಮೋದಿಯವರ ಪಕ್ಷ ನೀಡುವ ಗೌರವವೇ? ದೇಶದಲ್ಲಿ ಈ ರೀತಿಯ ಆಡಳಿತ ಪಕ್ಷವಿರುವುದು ವಿಷಾದನೀಯ” ಎಂದಿದ್ದಾರೆ.


ಇದನ್ನೂ ಓದಿ: ಅಗ್ನಿಪಥ್ ವಿರೋಧಿಸಿ ಇಂದು ಭಾರತ್ ಬಂದ್: ಬಿಹಾರದಲ್ಲಿ 350 ರೈಲುಗಳ ಸಂಚಾರ ರದ್ದು

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

2 COMMENTS

  1. ಒಬ್ಬ ಮೂರ್ಖನಿಗೂ ಗೊತ್ತಿಲ್ಲ ಅಗ್ನಿಪಥ ಯೋಜನೆ ಬಗ್ಗೆ ಆದ್ರೂ ಬಾಯಿಗೆ ಬಂದಂಗೆ ಬೊಗಳೋದು ನಿಲ್ಲಸಲ್ಲ,, ಓ ಮೂರ್ಖರೆ ಮೊದಲು ಅಗ್ನಿಪಥ ಅಂದ್ರೆ ಏನು ಅದರ ಒಳ ಷಡ್ಯಂತ್ರಗಳು ಏನು ಅಂತ ನೀವು ತಿಳ್ಕೊಳಿ ಜನರಿಗೆ ಎಲ್ಲ ಅರ್ಥ ಆಗಿದೆ,, ಯಾರೋ ಊದಿದ ಪುಂಗಿಗೆ ಸ್ಕ್ರಿಪ್ಟ್ ಬರೆಯೋಕೆ ಬರೋಕು ಮುಂಚೆ ಮನೇಲಿ ಸ್ವಲ್ಪ ನಿಮಗಿಂತ ಹೆಚ್ಚು ಓದಿರುವ ನಿಮ್ಮ ಆಪ್ತ ಸಲಹೆಗಾರರ ಹತ್ತಿರ ಸಲಹೆ ಪಡೆಯೋದು ಉತ್ತಮ ಅನ್ಸುತ್ತೆ ಅಲ್ವಾ ಅವಿವೇಕಿಗಳೆ..?
    ಕೆಲವು ನಾಯಿಗಳು ಯಾವಾಗ್ಲೂ ಬೊಗಳ್ತಾವೆ ಬರಿ ಸಾಬರ್ ಬಗ್ಗೆ ಮಾತ್ರ,, ದೇಶದ ಒಳಿತಿಗಾಗಿ ಒಂದು ಮಾತು ಬರಲ್ಲ ಎಂಜಲು ಅಲ್ಲ ಕ್ಷಮಿಸಿ ಹೇಸಿಗೆ ತಿನ್ನೋ ನಾಯಿಗಳು.. ಈಗ ಬೊಗಳರೋ ಹೇಸಿಗೆ ನಾಯಿಗಳ ದೇಶದ ಮಾನ ಹೋಯ್ತು ಈಗ ದೇಶದ ಯುವಕರು ಏನ್ ಮಾಡಬೇಕು ಬೊಗಳರೋ 2 ರೂಪಾಯಿ ಬಿಖಾರಿಗಳೇ….

  2. ಹೀಗೊಂದು ಪಕ್ಷದ ಒಬ್ಬ ಮೂರ್ಖನಿಗೂ ಗೊತ್ತಿಲ್ಲ ಅಗ್ನಿಪಥ ಯೋಜನೆ ಬಗ್ಗೆ ಆದ್ರೂ ಬಾಯಿಗೆ ಬಂದಂಗೆ ಬೊಗಳೋದು ನಿಲ್ಲಸಲ್ಲ,, ಓ ಮೂರ್ಖರೆ ಮೊದಲು ಅಗ್ನಿಪಥ ಅಂದ್ರೆ ಏನು ಅದರ ಒಳ ಷಡ್ಯಂತ್ರಗಳು ಏನು ಅಂತ ನೀವು ತಿಳ್ಕೊಳಿ ಜನರಿಗೆ ಎಲ್ಲ ಅರ್ಥ ಆಗಿದೆ,, ಯಾರೋ ಊದಿದ ಪುಂಗಿಗೆ ಸ್ಕ್ರಿಪ್ಟ್ ಬರೆಯೋಕೆ ಬರೋಕು ಮುಂಚೆ ಮನೇಲಿ ಸ್ವಲ್ಪ ನಿಮಗಿಂತ ಹೆಚ್ಚು ಓದಿರುವ ನಿಮ್ಮ ಆಪ್ತ ಸಲಹೆಗಾರರ ಹತ್ತಿರ ಸಲಹೆ ಪಡೆಯೋದು ಉತ್ತಮ ಅನ್ಸುತ್ತೆ ಅಲ್ವಾ ಅವಿವೇಕಿಗಳೆ..?
    ಕೆಲವು ನಾಯಿಗಳು ಯಾವಾಗ್ಲೂ ಬೊಗಳ್ತಾವೆ ಬರಿ ಸಾಬರ್ ಬಗ್ಗೆ ಮಾತ್ರ,, ದೇಶದ ಒಳಿತಿಗಾಗಿ ಒಂದು ಮಾತು ಬರಲ್ಲ ಎಂಜಲು ಅಲ್ಲ ಕ್ಷಮಿಸಿ ಹೇಸಿಗೆ ತಿನ್ನೋ ನಾಯಿಗಳು.. ಈಗ ಬೊಗಳರೋ ಹೇಸಿಗೆ ನಾಯಿಗಳ ದೇಶದ ಮಾನ ಹೋಯ್ತು ಈಗ ದೇಶದ ಯುವಕರು ಏನ್ ಮಾಡಬೇಕು ಬೊಗಳರೋ 2 ರೂಪಾಯಿ ಬಿಖಾರಿಗಳೇ….

LEAVE A REPLY

Please enter your comment!
Please enter your name here

- Advertisment -

ಸಂವಿಧಾನದ ಬುಡಕ್ಕೆ ಕೊಡಲಿ ಏಟು: ಆರ್‌ಎಸ್‌ಎಸ್-ಬಿಜೆಪಿಯ ಷಡ್ಯಂತ್ರ ಸೋಲಿಸಲು ಎರಡನೇ ಸ್ವಾತಂತ್ರ್ಯ ಸಂಗ್ರಾಮ ಅನಿವಾರ್ಯ – ಬಿ.ಕೆ. ಹರಿಪ್ರಸಾದ್

ಎಸ್‌ಐಆರ್ (SIR) ವಿರೋಧಿ ಹೋರಾಟದಲ್ಲಿ ನಮ್ಮ ಪಕ್ಷ ನಿಮ್ಮ ಜೊತೆಗಿದೆ ಎಂದು ಹೇಳಲು ಸರ್ಕಾರದ ಪ್ರತಿನಿಧಿಯಾಗಿ ನಾನು ಇಲ್ಲಿ ಬಂದಿದ್ದೇನೆ. ನೀವು ಮಂಡಿಸಿರುವ ಹಕ್ಕೊತ್ತಾಯಗಳ ಕುರಿತು ನೂತನ ಮುಖ್ಯಮಂತ್ರಿಗಳು, ಸಿದ್ದರಾಮಯ್ಯ ಸೇರಿದಂತೆ ಪಕ್ಷದ...

ಮತದಾರರ ಪಟ್ಟಿಯಿಂದ 65 ಲಕ್ಷ ಜನರನ್ನು ಹೊರಹಾಕಿದ್ದು ಯಾರು? ಈ ಅಕ್ರಮಕ್ಕೆ ಚುನಾವಣಾ ಆಯೋಗವೇ ಉತ್ತರಿಸಬೇಕು: ಮೊಹಮ್ಮದ್ ಯೂಸುಫ್ ಕನ್ನಿ

"ಬ್ರಿಟಿಷರ ವಿರುದ್ಧ ಹೋರಾಡಿ ದೇಶಕ್ಕೆ ಸ್ವಾತಂತ್ರ್ಯ ತಂದುಕೊಟ್ಟಿದ್ದೇವೆ. 1952ರ ಮೊದಲ ಚುನಾವಣೆಯ ಸಂದರ್ಭದಲ್ಲಿ ಸುಮಾರು 17.32 ಕೋಟಿ ಮತದಾರರಿದ್ದರು. 1955ರಲ್ಲಿ ಸಿಟಿಜನ್‌ಶಿಪ್ ಆಕ್ಟ್ ಜಾರಿಯಾದ ಬಳಿಕ ನಡೆದ 1957ರ ಚುನಾವಣೆಯಲ್ಲಿ ಈ ಸಂಖ್ಯೆ...

ಸರ್ಕಾರ-ನ್ಯಾಯಾಂಗ ವ್ಯವಸ್ಥೆ ಕೈಬಿಟ್ಟರೆ ರಾಜ್ಯದ ಜನ ಅನಾಥರಾಗುತ್ತಾರೆ : ಹಿರಿಯ ಸಾಹಿತಿ ಬಿ.ಟಿ. ಲಲಿತಾ ನಾಯ್ಕ್

ಎಸ್‌ಐಆರ್‌ ವಿಚಾರದಲ್ಲಿ ಇಂದು ನಾಡಿನ ಜನತೆ ಭೀಕರ ಸಂಕಷ್ಟದಲ್ಲಿದ್ದಾರೆ. ಈ ಗೊಂದಲವನ್ನು ಉಂಟು ಮಾಡಿದವರು ಯಾರು? ಕೇಂದ್ರ ಸರ್ಕಾರವೋ ಅಥವಾ ಕರ್ನಾಟಕ ಸರ್ಕಾರದ ಅಲಕ್ಷ್ಯ ಇದಕ್ಕೆ ಕಾರಣವೇ? ಅಥವಾ ನಮಗೆ ಸಂಬಂಧವೇ ಇಲ್ಲ...

ಎಸ್ಐಆರ್ ಹೆಸರಿನಲ್ಲಿ ನಡೆಯುತ್ತಿರುವ ಜನವಿರೋಧಿ ಹುನ್ನಾರಗಳನ್ನು ಸೋಲಿಸಬೇಕಿದೆ: ಎಸ್. ವರಲಕ್ಷ್ಮಿ

ಬೆಂಗಳೂರು: ರಾಜ್ಯಾದ್ಯಂತ ಎಸ್ಐಆರ್ (SIR) ವಿರುದ್ಧ ನಡೆಯುತ್ತಿರುವ ಸಮಾವೇಶವು ಆಕ್ರಮಣಕಾರಿ ಧೋರಣೆಯ ವಿರುದ್ಧದ ಬೃಹತ್ ಪ್ರತಿರೋಧವಾಗಿದೆ ಎಂದು ಸಿಐಟಿಯು ರಾಜ್ಯ ಪ್ರಧಾನ ಕಾರ್ಯದರ್ಶಿ ಎಸ್. ವರಲಕ್ಷ್ಮಿ ತಿಳಿಸಿದರು. ಎಸ್ಐಆರ್ ಸಮಸ್ಯೆಯಲ್ಲ ಎಂದು ಬಿಂಬಿಸುವ ಸಂಘಪರಿವಾರದವರ...

ಮತದಾನ ನಮ್ಮ ಜನ್ಮಸಿದ್ದ ಹಕ್ಕು, ಎಸ್‌ಐಆರ್ ಕುರಿತು ಜನ ಜಾಗೃತಿ ಅಗತ್ಯ: ಪೀಟರ್ ಮಚಾಡೋ

'ಮತದಾನ ನಮ್ಮ ಜನ್ಮಸಿದ್ದ ಹಕ್ಕು ಅದನ್ನು ನಾವು ಬಿಟ್ಟು ಕೊಡುವುದಿಲ್ಲ' ಎಂದು ಕರ್ನಾಟಕ ಕ್ರೈಸ್ತ ಸಮುದಾಯದ ಮಹಾ ಧರ್ಮಾಧ್ಯಕ್ಷ ರೆವೆಂಡರ್ ಫಾದರ್ ಪೀಟರ್ ಮಚಾಡೋ ಹೇಳಿದರು. ಬೆಂಗಳೂರಿನ ಫ್ರೀಡಂ ಪಾರ್ಕ್‌ನಲ್ಲಿ...

ಸುರಿವ ಮಳೆಯಲ್ಲಿಯೂ ಎಸ್‌ಐಆರ್ ವಿರೋಧಿ ಜಾಥಾಕ್ಕೆ ಜೊತೆಯಾದ ಮಳವಳ್ಳಿ, ಮದ್ದೂರು, ಮಂಡ್ಯ ಜನತೆ

ಮಂಡ್ಯ: ಮಳವಳ್ಳಿಯ ಬಸ್ ನಿಲ್ದಾಣದ ಬಳಿ ಸುರಿವ ಮಳೆಯಲ್ಲಿಯೂ 'ಎಸ್‌ಐಆರ್ (SIR) ವಿರೋಧಿ ಕರ್ನಾಟಕ' ಜಾಥಾಕ್ಕೆ ಹೋರಾಟಗಾರರು, ಬರಹಗಾರರು, ಜನಚಳವಳಿಗಳ ಮುಖಂಡರು ಹಾಗೂ ಪ್ರಗತಿಪರರು ಬೆಂಬಲ ವ್ಯಕ್ತಪಡಿಸಿದರು‌. ಈ ವೇಳೆ ಎಸ್‌ಐಆರ್ ಕುರಿತು ಮಾತನಾಡಿದ...

ಚಿತ್ರದುರ್ಗದಲ್ಲಿ ಸಮಾರೋಪಗೊಂಡ ಮಾರ್ಗ -3 SIR ವಿರೋಧಿ ಜನಜಾಗೃತಿ ಜಾಥ: ಜೂನ್ 20ರ ಸಮಾವೇಶದ ಯಶಸ್ಸಿಗೆ ಕರೆ

ಚುನಾವಣಾ ಆಯೋಗ ಜಾರಿಗೆ ತರಲು ಹೊರಟಿರುವ ಎಸ್‌ಐಆರ್ (SIR) ವ್ಯವಸ್ಥೆಯನ್ನು ವಿರೋಧಿಸಿ ಹಮ್ಮಿಕೊಳ್ಳಲಾಗಿದ್ದ ‘ಎಸ್‌ಐಆರ್ ವಿರೋಧಿ ಜನಜಾಗೃತಿ ಜಾಥಾ’ವು ದಾವಣಗೆರೆಯಲ್ಲಿ ಪ್ರಚಾರ ಮುಗಿಸಿ ಚಿತ್ರದುರ್ಗವನ್ನು ತಲುಪಿದ್ದು, ಇಲ್ಲಿ ಯಶಸ್ವಿಯಾಗಿ ಸಮಾರೋಪಗೊಂಡಿದೆ. ಎದ್ದೇಳು ಕರ್ನಾಟಕ,...

ಗದಗ | ಮನುವಾದದ ಜಾರಿಗೆ ಎಸ್‌ಐಆರ್‌ ಹೇರಿಕೆ : ಡಾ.ಇಸಾಬೆಲ್ಲ ಝೇವಿಯರ್

ದೇಶದಲ್ಲಿ ಮನುವಾದ ಜಾರಿಗೆ ತರುವುದು ಆರ್‌ಎಸ್‌ಎಸ್‌-ಸಂಘಪರಿವಾರದ ಮೂಲ ಉದ್ದೇಶ, ಅದಕ್ಕಾಗಿ ಜನರ ಮೇಲೆ ಮತದಾರರ ಪಟ್ಟಿಯ ವಿಶೇಷ ತೀವ್ರ ಪರಿಷ್ಕರಣೆ (ಎಸ್‌ಐಆರ್‌) ಯಂತಹ ಹೊಸ ಹೊಸ ಪ್ರಕ್ರಿಯೆಗಳನ್ನು ಹೇರಲಾಗುತ್ತಿದೆ ಎಂದು ಸಾಮಾಜಿಕ ಹೋರಾಟಗಾರ್ತಿ...

ಸಂವಿಧಾನ ವಿರೋಧಿ ‘SIR’ಗೆ ಹರಿಹರದಲ್ಲಿ ತೀವ್ರ ವಿರೋಧ: ಜನಜಾಗೃತಿ ಜಾಥಾದ ಮೂಲಕ ಕೇಂದ್ರ ಸರ್ಕಾರದ ವಿರುದ್ಧ ನಾಗರಿಕರ ಆಕ್ರೋಶ

ದಾವಣಗೆರೆ ಜಿಲ್ಲೆಯ ಹರಿಹರ ತಾಲ್ಲೂಕಿನಲ್ಲಿ ಇತ್ತೀಚೆಗೆ ಕೇಂದ್ರ ಚುನಾವಣಾ ಆಯೋಗದ 'SIR' (ವಿಶೇಷ ಗುರುತಿನ ಪರಿಶೀಲನೆ/ಮರುಪರಿಶೀಲನಾ ಕ್ರಮ) ಯೋಜನೆ ವಿರುದ್ಧ ಬೃಹತ್ ಜನಜಾಗೃತಿ ಜಾಥಾ ಯಶಸ್ವಿಯಾಗಿ ಸಂಚರಿಸಿತು. ಸಾರ್ವಜನಿಕರಲ್ಲಿ ಈ ಯೋಜನೆಯ ಕುರಿತು...

“ಎಸ್ಐಆರ್ ಮೂಲಕ ಮನುವಾದದ ಜಾರಿಗೆ ಕುತಂತ್ರ ರೂಪಿಸುತ್ತಿರುವ ಬಿಜೆಪಿ ಗೆಲ್ಲಲು ಬಿಡುವುದಿಲ್ಲ”:  ಮೈಸೂರಿನಲ್ಲಿ ಜನಾಕ್ರೋಶ

2026 ಜೂನ್ 16 ರಂದು ಹುಣುಸೂರು, ಹೆಚ್.ಡಿ ಕೋಟೆ, ಮೈಸೂರಿನಲ್ಲಿ ಸಾಗಿದ ಎಸ್ಐಆರ್ ವಿರೋಧಿ ಕರ್ನಾಟಕ ಜಾಥಾಕ್ಕೆ ಹುಣುಸೂರಿನ ಸಂವಿಧಾನ ಸರ್ಕಲ್ ನಿಂದ ಅಭೂತಪೂರ್ವ ಬೆಂಬಲ ಸಿಕ್ಕಿತು. ಬೆಳಗ್ಗೆ 8 ಗಂಟೆ ಸುಮಾರಿಗೆ ಎಸ್ಐಆರ್...