Homeಮುಖಪುಟ’ಅಗ್ನಿವೀರರಿಗೆ ಬಿಜೆಪಿ ಕಚೇರಿಯಲ್ಲಿ ಗಾರ್ಡ್ ಕೆಲಸ’: ಬಿಜೆಪಿ ನಾಯಕ ವಿಜಯವರ್ಗಿಯ ವಿವಾದಿತ ಹೇಳಿಕೆಗೆ ಖಂಡನೆ

’ಅಗ್ನಿವೀರರಿಗೆ ಬಿಜೆಪಿ ಕಚೇರಿಯಲ್ಲಿ ಗಾರ್ಡ್ ಕೆಲಸ’: ಬಿಜೆಪಿ ನಾಯಕ ವಿಜಯವರ್ಗಿಯ ವಿವಾದಿತ ಹೇಳಿಕೆಗೆ ಖಂಡನೆ

’ಈ ಹೇಳಿಕೆಗಳು ಕೂಡ ‘ಫ್ರಿಂಜ್’ ಅಂಶಗಳ ಹೇಳಿಕೆಗಳೇ ಎಂಬುದನ್ನು ಪ್ರಧಾನಿ ಸ್ಪಷ್ಟಪಡಿಸಬೇಕು’ ಟಿಎಂಸಿ ಆಗ್ರಹ

- Advertisement -
- Advertisement -

ಒಕ್ಕೂಟ ಸರ್ಕಾರ ಘೋಷಿಸಿರುವ ಅಗ್ನಿಪಥ ಯೋಜನೆ ವಿರೋಧಿಸಿ ದೇಶದಾದ್ಯಂತ ಪ್ರತಿಭಟನೆಗಳು ಭುಗಿಲೆದ್ದಿರುವ ಬೆನ್ನಲ್ಲೇ ಬಿಜೆಪಿ ರಾಷ್ಟ್ರೀಯ ಪ್ರಧಾನ ಕಾರ್ಯದರ್ಶಿ ಕೈಲಾಶ್ ವಿಜಯವರ್ಗಿಯ ಅವರು ಬಿಜೆಪಿ ಕಚೇರಿಗಳಿಗೆ ಭದ್ರತಾ ಸಿಬ್ಬಂದಿಯನ್ನು ನೇಮಿಸಿಕೊಳ್ಳುವಾಗ ಅಗ್ನಿವೀರರಿಗೆ ಆದ್ಯತೆ ನೀಡಲಾಗುವುದು’ ಎಂದು ವಿವಾದಿತ ಹೇಳಿಕೆ ನೀಡಿದ್ದಾರೆ.

“ಶಿಸ್ತು ಮತ್ತು ಆಜ್ಞೆಗಳು ಪಾಲಿಸುವುದು ಮಿಲಿಟರಿ ತರಬೇತಿಯ ಅವಿಭಾಜ್ಯ ಅಂಗವಾಗಿದೆ. ಅಗ್ನಿವೀರರು 25 ವರ್ಷ ವಯಸ್ಸಿನಲ್ಲಿ ನಾಲ್ಕು ವರ್ಷಗಳ ಕಾಲ ರಕ್ಷಣಾ ಕ್ಷೇತ್ರದಲ್ಲಿ ಸೇವೆ ಸಲ್ಲಿಸಿ ಹೊರಬಂದಾಗ, ಅವರ ಬಳಿ 11 ಲಕ್ಷ ರೂಪಾಯಿ ಇರುತ್ತದೆ. ಅವರು ಹೆಮ್ಮೆಯಿಂದ ಪ್ರದರ್ಶಿಸಬಹುದಾದ ಅಗ್ನಿವೀರರ ಟ್ಯಾಗ್ ಹೊಂದಿರುತ್ತಾರೆ. ನಾನು ಬಿಜೆಪಿ ಕಚೇರಿಗೆ ಭದ್ರತಾ ಸಿಬ್ಬಂದಿಯನ್ನು ನೇಮಿಸಲು ಬಯಸಿದರೆ, ನಾನು ಅಗ್ನಿವೀರರಿಗೆ ಆದ್ಯತೆ ನೀಡುತ್ತೇನೆ” ಎಂದು ಬಿಜೆಪಿಯ ಹಿರಿಯ ನಾಯಕ ವಿಜಯವರ್ಗಿಯವರು ಇಂದೋರ್‌ನ ಪತ್ರಿಕಾಗೋಷ್ಠಿಯಲ್ಲಿ ಹೇಳಿದ್ದರು.

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ
₹100 ₹200 ₹500 ₹1000 Others

ಇದನ್ನೂ ಓದಿ: ಸಾಯಿ ಪಲ್ಲವಿಯವರಿಂದ ಮಾಧ್ಯಮಗಳು ಕಲಿಯುವುದು ಬಹಳಷ್ಟಿದೆ: ಬೆಂಬಲಕ್ಕೆ ನಿಂತ ನಟ ಕಿಶೋರ್

ವಿಜಯವರ್ಗಿಯ ಅವರ ವಿಡಿಯೋ ವೈರಲ್ ಆಗುತ್ತಿದ್ದಂತೆಯೇ ಈ ಹೇಳಿಕೆಗೆ ವಿವಿಧ ವಲಯಗಳಿಂದ ಖಂಡನೆ ವ್ಯಕ್ತವಾಗಿದೆ. ಬಿಜೆಪಿ ಸಂಸದ ವರುಣ್ ಗಾಂಧಿ ಟ್ವಿಟ್ಟರ್‌ನಲ್ಲಿ ವಿಡಿಯೊ ಹಂಚಿಕೊಂಡಿದ್ದು, ರಾಜಕೀಯ ಪಕ್ಷದ ಕಚೇರಿಗಳನ್ನು ಕಾವಲು ಕಾಯಲು ಭಾರತೀಯ ಸೈನಿಕರನ್ನು ಆಹ್ವಾನಿಸಿರುವುದನ್ನು ಟೀಕಿಸಿದ್ದಾರೆ.

ಪಶ್ಚಿಮ ಬಂಗಾಳ ಮುಖ್ಯಮಂತ್ರಿ ಮಮತಾ ಬ್ಯಾನರ್ಜಿ ಅವರ ತೃಣಮೂಲ ಕಾಂಗ್ರೆಸ್‌ ಕೂಡ ಖಂಡನೆ ವ್ಯಕ್ತಪಡಿಸಿದೆ. “ಭಾರತದ ಯುವಕರು ಬಿಜೆಪಿ ಕಚೇರಿಯ ಬಾಗಿಲ ಕಾಯುವ ದ್ವಾರಪಾಲಕರಾಗಬಾರದು, ಯುವ ಶಕ್ತಿ ಮೋದಿ ಸರ್ಕಾರಕ್ಕಿಂತ ಭಿನ್ನವಾಗಿ ಈ ದೇಶಕ್ಕೆ ಸೇವೆ ಸಲ್ಲಿಸಲು ಬಯಸುತ್ತದೆ. ಇವೂ ಕೂಡ ‘ಫ್ರಿಂಜ್’ ಅಂಶಗಳ ಹೇಳಿಕೆಗಳೇ ಎಂಬುದನ್ನು ಪ್ರಧಾನಿ ಸ್ಪಷ್ಟಪಡಿಸಬೇಕು” ಎಂದು ಆಗ್ರಹಿಸಿದೆ.

ಇದನ್ನೂ ಓದಿ: 60 ಲಕ್ಷ ಹುದ್ದೆಗಳು ಖಾಲಿಯಿದ್ದರೂ ವಿದ್ಯಾವಂತ ಯುವಕರು ಇ-ರಿಕ್ಷಾ ಓಡಿಸುತ್ತಿದ್ದಾರೆ: BJP ಸಂಸದ ವರುಣ್ ಗಾಂಧಿ ಆಕ್ರೋಶ

 

ಮಧ್ಯಪ್ರದೇಶ ಕಾಂಗ್ರೆಸ್ ಕೂಡ ವಿಜಯವರ್ಗಿಯವರ ಹೇಳಿಕೆಯನ್ನು ಟೀಕಿಸಿದೆ. ಇದರ ರಾಜ್ಯ ಘಟಕದ ಅಧ್ಯಕ್ಷ ಕೆ.ಕೆ.ಮಿಶ್ರಾ ಮಾತನಾಡಿ, ’ಈ ಹೇಳಿಕೆಯು ಕೇವಲ ದೇಶದ ಯುವಕರಲ್ಲದೇ ಭಾರತೀಯ ಸೇನೆಯ ಶೌರ್ಯಕ್ಕೆ ಮಾಡಿದ ಘೋರ ಅವಮಾನವಾಗಿದ್ದು, ಪ್ರತಿಭಟನೆ ನಡೆಸುತ್ತಿರುವ ಯುವಕರ ಗಾಯದ ಮೇಲೆ ಉಪ್ಪು ಸವರುವ ಅವಿವೇಕದ ಪ್ರಯತ್ನವಾಗಿದೆ’ ಎಂದಿದ್ದಾರೆ.

ಎಐಎಂಐಎಂ ಅಧ್ಯಕ್ಷ ಅಸಾದುದ್ದೀನ್ ಓವೈಸಿ ಆಕ್ರೋಶ ವ್ಯಕ್ತಪಡಿಸಿ ಟ್ವೀಟ್ ಮಾಡಿದ್ದಾರೆ. “ತರಬೇತಿ ಪಡೆದ ಗುತ್ತಿಗೆ ಸೈನಿಕರನ್ನು ಅವರ ಕಚೇರಿಗಳಿಗೆ ಚೌಕಿದಾರರನ್ನಾಗಿ ನೇಮಿಸಿಕೊಳ್ಳುತ್ತೇವೆ ಎಂದು ಬಿಜೆಪಿ ನಾಯಕರು ಹೇಳುತ್ತಾರೆ. ಇದು ಗೌರವದ ವೃತ್ತಿಯಾಗಿರುವ ಸೈನ್ಯಕ್ಕೆ ಮತ್ತು ಸೈನಿಕರಿಗೆ ಮೋದಿಯವರ ಪಕ್ಷ ನೀಡುವ ಗೌರವವೇ? ದೇಶದಲ್ಲಿ ಈ ರೀತಿಯ ಆಡಳಿತ ಪಕ್ಷವಿರುವುದು ವಿಷಾದನೀಯ” ಎಂದಿದ್ದಾರೆ.


ಇದನ್ನೂ ಓದಿ: ಅಗ್ನಿಪಥ್ ವಿರೋಧಿಸಿ ಇಂದು ಭಾರತ್ ಬಂದ್: ಬಿಹಾರದಲ್ಲಿ 350 ರೈಲುಗಳ ಸಂಚಾರ ರದ್ದು

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

2 COMMENTS

  1. ಒಬ್ಬ ಮೂರ್ಖನಿಗೂ ಗೊತ್ತಿಲ್ಲ ಅಗ್ನಿಪಥ ಯೋಜನೆ ಬಗ್ಗೆ ಆದ್ರೂ ಬಾಯಿಗೆ ಬಂದಂಗೆ ಬೊಗಳೋದು ನಿಲ್ಲಸಲ್ಲ,, ಓ ಮೂರ್ಖರೆ ಮೊದಲು ಅಗ್ನಿಪಥ ಅಂದ್ರೆ ಏನು ಅದರ ಒಳ ಷಡ್ಯಂತ್ರಗಳು ಏನು ಅಂತ ನೀವು ತಿಳ್ಕೊಳಿ ಜನರಿಗೆ ಎಲ್ಲ ಅರ್ಥ ಆಗಿದೆ,, ಯಾರೋ ಊದಿದ ಪುಂಗಿಗೆ ಸ್ಕ್ರಿಪ್ಟ್ ಬರೆಯೋಕೆ ಬರೋಕು ಮುಂಚೆ ಮನೇಲಿ ಸ್ವಲ್ಪ ನಿಮಗಿಂತ ಹೆಚ್ಚು ಓದಿರುವ ನಿಮ್ಮ ಆಪ್ತ ಸಲಹೆಗಾರರ ಹತ್ತಿರ ಸಲಹೆ ಪಡೆಯೋದು ಉತ್ತಮ ಅನ್ಸುತ್ತೆ ಅಲ್ವಾ ಅವಿವೇಕಿಗಳೆ..?
    ಕೆಲವು ನಾಯಿಗಳು ಯಾವಾಗ್ಲೂ ಬೊಗಳ್ತಾವೆ ಬರಿ ಸಾಬರ್ ಬಗ್ಗೆ ಮಾತ್ರ,, ದೇಶದ ಒಳಿತಿಗಾಗಿ ಒಂದು ಮಾತು ಬರಲ್ಲ ಎಂಜಲು ಅಲ್ಲ ಕ್ಷಮಿಸಿ ಹೇಸಿಗೆ ತಿನ್ನೋ ನಾಯಿಗಳು.. ಈಗ ಬೊಗಳರೋ ಹೇಸಿಗೆ ನಾಯಿಗಳ ದೇಶದ ಮಾನ ಹೋಯ್ತು ಈಗ ದೇಶದ ಯುವಕರು ಏನ್ ಮಾಡಬೇಕು ಬೊಗಳರೋ 2 ರೂಪಾಯಿ ಬಿಖಾರಿಗಳೇ….

  2. ಹೀಗೊಂದು ಪಕ್ಷದ ಒಬ್ಬ ಮೂರ್ಖನಿಗೂ ಗೊತ್ತಿಲ್ಲ ಅಗ್ನಿಪಥ ಯೋಜನೆ ಬಗ್ಗೆ ಆದ್ರೂ ಬಾಯಿಗೆ ಬಂದಂಗೆ ಬೊಗಳೋದು ನಿಲ್ಲಸಲ್ಲ,, ಓ ಮೂರ್ಖರೆ ಮೊದಲು ಅಗ್ನಿಪಥ ಅಂದ್ರೆ ಏನು ಅದರ ಒಳ ಷಡ್ಯಂತ್ರಗಳು ಏನು ಅಂತ ನೀವು ತಿಳ್ಕೊಳಿ ಜನರಿಗೆ ಎಲ್ಲ ಅರ್ಥ ಆಗಿದೆ,, ಯಾರೋ ಊದಿದ ಪುಂಗಿಗೆ ಸ್ಕ್ರಿಪ್ಟ್ ಬರೆಯೋಕೆ ಬರೋಕು ಮುಂಚೆ ಮನೇಲಿ ಸ್ವಲ್ಪ ನಿಮಗಿಂತ ಹೆಚ್ಚು ಓದಿರುವ ನಿಮ್ಮ ಆಪ್ತ ಸಲಹೆಗಾರರ ಹತ್ತಿರ ಸಲಹೆ ಪಡೆಯೋದು ಉತ್ತಮ ಅನ್ಸುತ್ತೆ ಅಲ್ವಾ ಅವಿವೇಕಿಗಳೆ..?
    ಕೆಲವು ನಾಯಿಗಳು ಯಾವಾಗ್ಲೂ ಬೊಗಳ್ತಾವೆ ಬರಿ ಸಾಬರ್ ಬಗ್ಗೆ ಮಾತ್ರ,, ದೇಶದ ಒಳಿತಿಗಾಗಿ ಒಂದು ಮಾತು ಬರಲ್ಲ ಎಂಜಲು ಅಲ್ಲ ಕ್ಷಮಿಸಿ ಹೇಸಿಗೆ ತಿನ್ನೋ ನಾಯಿಗಳು.. ಈಗ ಬೊಗಳರೋ ಹೇಸಿಗೆ ನಾಯಿಗಳ ದೇಶದ ಮಾನ ಹೋಯ್ತು ಈಗ ದೇಶದ ಯುವಕರು ಏನ್ ಮಾಡಬೇಕು ಬೊಗಳರೋ 2 ರೂಪಾಯಿ ಬಿಖಾರಿಗಳೇ….

LEAVE A REPLY

Please enter your comment!
Please enter your name here

- Advertisment -

ಉತ್ತರ ಪ್ರದೇಶ| ಫಿರೋಜಾಬಾದ್ ಖಾಕಿ ದೌರ್ಜನ್ಯ; ಪೊಲೀಸರ ಭೂಟು ಕಾಲಿನ ಒದೆತಕ್ಕೆ ಗರ್ಭಿಣಿ ಸಾವು

ಉತ್ತರ ಪ್ರದೇಶದ ಫಿರೋಜಾಬಾದ್‌ನ ಶಿಕೋಹಾಬಾದ್ ಪ್ರದೇಶದಲ್ಲಿ ಕಳ್ಳತನ ಪ್ರಕರಣದ ಶಂಕಿತ ಆರೋಪಿಯೊಬ್ಬನನ್ನು ಬಂಧಿಸಲು ಬಂದಿದ್ದ ಪೊಲೀಸರು ಆತನ ಗರ್ಭಿಣಿ ಹೆಂಡತಿಗೆ ಒದ್ದಿದ್ದರಿಂದ ಆಕೆ ಮೃತಪಟ್ಟಿದ್ದು, ಈ ಘಟನೆಗೆ ಸಂಬಂಧಿಸಿದಂತೆ ಇಬ್ಬರು ಸಬ್‌ಇನ್ಸ್‌ಪೆಕ್ಟರ್‌ಗಳು ಸೇರಿದಂತೆ...

ಕೋಲ್ಕತ್ತಾ | 48 ದಿನಗಳಿಂದ ಮುಸ್ಲಿಂ ಕಾಲೋನಿಗೆ ನೀರು ಬಂದ್ : ಬಿಜೆಪಿ ಸರ್ಕಾರದಿಂದ ದ್ವೇಷ ಸಾಧನೆ ಆರೋಪ

ಉತ್ತರ ಕೋಲ್ಕತ್ತಾದ ಕಾಶಿಪುರದ ಜ್ಯೋತಿನಗರ ಕಾಲೋನಿ ನಿವಾಸಿಗಳು ಕಳೆದ 48 ದಿನಗಳಿಂದ ಕುಡಿಯುವ ನೀರಿಗಾಗಿ ಹಾಹಾಕಾರಪಡುತ್ತಿದ್ದಾರೆ. ಇಲ್ಲಿನ ನೂರಾರು ಕುಟುಂಬಗಳಿಗೆ ನೀರಿನ ಮೂಲವಾಗಿರುವ ಐದು ಸಾರ್ವಜನಿಕ ನಲ್ಲಿಗಳು ಸಂಪೂರ್ಣವಾಗಿ ಒಣಗಿ ಹೋಗಿವೆ. ಇದರಿಂದಾಗಿ...

ಗುರುಗ್ರಾಮ| ಮಹಿಳಾ ಬೈಕರ್‌ಗೆ ಡಿಕ್ಕಿ ಹೊಡೆದು ಪರಾರಿಯಾಗಿದ್ದ ಕಾರು ಚಾಲಕನ ಬಂಧನ

ಗುರುಗ್ರಾಮದಲ್ಲಿ ಮಹಿಳಾ ಸ್ಪೋರ್ಟ್ಸ್ ಬೈಕ್ ಸವಾರೆಗೆ ಕಾರಿನಿಂದ ಡಿಕ್ಕಿ ಹೊಡೆದು ಪರಾರಿಯಾಗಿದ್ದ ಪ್ರಕರಣಕ್ಕೆ ಸಂಬಂಧಿಸಿದಂತೆ, ಚಾಲಕ ಕಲ್ಯಾಣ್ ಬೈನ್ಸ್ಲಾನನ್ನು ರಾಜಸ್ಥಾನದ ರಾಜ್‌ಗಢದಲ್ಲಿ ಮಂಗಳವಾರ ಬಂಧಿಸಲಾಗಿದೆ ಎಂದು ಗುರುಗ್ರಾಮ ಕಮಿಷನರ್ ಸಿಬಾಶ್ ಕಬೀರಾಜ್ ತಿಳಿಸಿದ್ದಾರೆ. ಈ...

ಸರ್ಕಾರ ಆಧಾರ್ ವ್ಯವಸ್ಥೆಯನ್ನು ನಂಬುವುದಾದರೆ, SIR‌ ತಪಾಸಣೆಗೂ ಇದನ್ನೇ ಬಳಸಲಿ: ಆರ್‌ ಎಸ್‌ ಶರ್ಮಾ ಸಲಹೆ

ಪ್ರಸ್ತುತ ಚರ್ಚೆಯಲ್ಲಿರುವ ಮತದಾರರ ಪಟ್ಟಿ ಪರಿಷ್ಕರಣೆ (SIR) ಮತ್ತು ದಾಖಲೆಗಳ ತಪಾಸಣೆ ಪ್ರಕ್ರಿಯೆಗೆ ಸಂಬಂಧಿಸಿದಂತೆ ಆಧಾರ್‌ ವ್ಯವಸ್ಥೆಯ ಮಾಜಿ ಮುಖ್ಯಸ್ಥ (UIDAI) ಶರ್ಮಾ ಅವರು ಮಹತ್ವದ ಸಲಹೆಯೊಂದನ್ನು ನೀಡಿದ್ದಾರೆ. ಪ್ರತಿ ಬಾರಿ ಸಾವಿರಾರು...

ಸೋಶಿಯಲ್ ಮೀಡಿಯಾಗಳಲ್ಲಿ ಅಪ್ರಾಪ್ತರಿಗೆ ಹೆಚ್ಚುತ್ತಿರುವ ಅಪಾಯ; ಲೈಂಗಿಕ ಶೋಷಣೆ ತಡೆಗೆ ಮೆಟಾದಿಂದ ಮಹತ್ವದ ನಿರ್ಧಾರ!

ಸಾಮಾಜಿಕ ಜಾಲತಾಣಗಳ ಬಳಕೆ ಯುವಜನರು ಮತ್ತು ಮಕ್ಕಳ ದೈನಂದಿನ ಬದುಕಿನ ಅವಿಭಾಜ್ಯ ಭಾಗವಾಗಿರುವ ಬೆನ್ನಲ್ಲೇ, ಆನ್‌ಲೈನ್‌ನಲ್ಲಿ ಮಕ್ಕಳ ಲೈಂಗಿಕ ಶೋಷಣೆ ಮತ್ತು ದೌರ್ಜನ್ಯಕ್ಕೆ ಸಂಬಂಧಿಸಿದ ಪ್ರಕರಣಗಳನ್ನು ಎದುರಿಸಲು ಮೆಟಾ ಮಹತ್ವದ ನಿರ್ಧಾರ ಕೈಗೊಂಡಿದೆ....

ಬೆಂಗಳೂರಿನ ಎನ್‌ಎಲ್‌ಎಸ್‌ಐಯು‌ನಲ್ಲಿ ಉಮರ್ ಖಾಲಿದ್ ಸಾಕ್ಷ್ಯಚಿತ್ರ ಪ್ರದರ್ಶನ; ಕೇಂದ್ರದ ಹಸ್ತಕ್ಷೇಪಕ್ಕೆ ಎಬಿವಿಪಿ ಮನವಿ

ಬೆಂಗಳೂರಿನಲ್ಲಿರುವ ನ್ಯಾಷನಲ್ ಲಾ ಸ್ಕೂಲ್ ಆಫ್ ಇಂಡಿಯಾ ಯೂನಿವರ್ಸಿಟಿಯಲ್ಲಿ (ಎನ್‌ಎಲ್‌ಎಸ್‌ಐಯು‌) ಜೈಲಿನಲ್ಲಿರುವ ಹೋರಾಟಗಾರ ಉಮರ್ ಖಾಲಿದ್ ಕುರಿತಾದ ಸಾಕ್ಷ್ಯಚಿತ್ರದ ಪ್ರದರ್ಶನವನ್ನು ಕಾಯಂ ಆಗಿ ರದ್ದುಗೊಳಿಸಲು ಆರ್‌ಎಸ್ಎಸ್ ಸಂಯೋಜಿತ ವಿದ್ಯಾರ್ಥಿ ಸಂಘಟನೆ ಎಬಿವಿಪಿ ಕೇಂದ್ರ...

‘NAZA’ಗೆ ವೆನಿಸ್ ವಿಶೇಷ ಜ್ಯೂರಿ ಪ್ರಶಸ್ತಿ; ಸ್ವದೇಶ ಇಸ್ರೇಲ್‌ನ ಎಐ ಹತ್ಯಾಕಾಂಡ ಬಯಲಿಗೆಳೆದ ನಿರ್ದೇಶಕರಿಗೆ ಪೌರತ್ವ ಕಸಿಯುವ ಬೆದರಿಕೆ

ವೆನಿಸ್ ಚಲನಚಿತ್ರೋತ್ಸವದಲ್ಲಿ ವಿಶೇಷ ಜ್ಯೂರಿ ಪ್ರಶಸ್ತಿ ಗೆದ್ದ ‘NAZA’ ಸಾಕ್ಷ್ಯಚಿತ್ರದ ನಿರ್ದೇಶಕರ ವಿರುದ್ಧ ಇಸ್ರೇಲಿ ಸಂಸ್ಕೃತಿ ಸಚಿವ ಮಿಕಿ ಜೋಹರ್ ತೀವ್ರ ಆಕ್ರೋಶ ವ್ಯಕ್ತಪಡಿಸಿದ್ದು, ‘ರಾಜ್ಯಕ್ಕೆ ದ್ರೋಹ’ ಎಸಗಿದ್ದಾರೆಂದು ಆರೋಪಿಸಿ ಅವರ ಇಸ್ರೇಲಿ...

ಕರ್ನಾಟಕದಲ್ಲಿ ಬರದ ಬರೆ; ನೀರು, ವಿದ್ಯುತ್‌ ಕೊರತೆ ಸಾಧ್ಯತೆ: ಸಿಎಂ ಡಿಕೆ ಶಿವಕುಮಾರ್‌ ಎಚ್ಚರಿಕೆ

ದುರ್ಬಲ ಮುಂಗಾರು ಹಾಗೂ ಮಳೆಯ ಕೊರತೆಯಿಂದ ಕರ್ನಾಟಕದಲ್ಲಿ ಬರ ಪರಿಸ್ಥಿತಿ ಮತ್ತಷ್ಟು ಬಿಗಡಾಯಿಸುತ್ತಿದ್ದು, ಮುಂದಿನ ದಿನಗಳಲ್ಲಿ ರಾಜ್ಯವು ಕುಡಿಯುವ ನೀರು ಮತ್ತು ವಿದ್ಯುತ್‌ ಕೊರತೆಯನ್ನು ಎದುರಿಸುವ ಸಾಧ್ಯತೆಯಿದೆ ಎಂದು ಮುಖ್ಯಮಂತ್ರಿ ಡಿ.ಕೆ. ಶಿವಕುಮಾರ್‌...

2,000 ರೂ.ವರೆಗಿನ UPI ಪಾವತಿಗೆ ಶುಲ್ಕವಿಲ್ಲ ಎಂದ ಕೇಂದ್ರ ಸರ್ಕಾರ

ಡಿಜಿಟಲ್ ಪಾವತಿ ಬಳಸುವ ಕೋಟ್ಯಂತರ ಸಾಮಾನ್ಯ ಜನರಿಗೆ ಕೇಂದ್ರ ಹಣಕಾಸು ಸಚಿವಾಲಯ ಮಹತ್ವದ ಸ್ಪಷ್ಟನೆ ನೀಡಿದ್ದು, 2,000 ರೂಪಾಯಿವರೆಗಿನ ಯುಪಿಐ (UPI) ವಹಿವಾಟುಗಳಿಗೆ ಯಾವುದೇ ರೀತಿಯ ಶುಲ್ಕ ವಿಧಿಸುವಂತಿಲ್ಲ ಎಂದು ಅಧಿಸೂಚನೆ ಹೊರಡಿಸಿದೆ....

ಯಾದಗಿರಿ| ಸಿದ್ಧಲಿಂಗೇಶ್ವರ ದೇವಸ್ಥಾನಕ್ಕೆ ತೆರಳಿದ್ದ ದಲಿತರ ಮೇಲೆ ಮಾರಣಾಂತಿಕ ಹಲ್ಲೆ

ಸಿದ್ಧಲಿಂಗೇಶ್ವರ ದೇವಸ್ಥಾನಕ್ಕೆ ತೆರಳಿದ್ದ ದಲಿತ ಸಮುದಾಯದ ಭಕ್ತರ ಮೇಲೆ ಸವರ್ಣೀಯರು ಮಾರಣಾಂತಿಕ ಹಲ್ಲೆ ನಡೆದಿರುವ ಆರೋಪ ಯಾದಗಿರಿ ಜಿಲ್ಲೆಯ ವಡಗೇರಾ ತಾಲೂಕಿನ ಗುರುಸುಣಿಗಿ ಗುಡ್ಡದಲ್ಲಿ ಕೇಳಿಬಂದಿದೆ. ಚಾಮನಾಳ ಗ್ರಾಮದ ದಲಿತ ಭಕ್ತರನ್ನು ಗುರಿಯಾಗಿಸಿಕೊಂಡು ಗುರುಸುಣಿಗಿ...