Homeಮುಖಪುಟ’ಅಗ್ನಿವೀರರಿಗೆ ಬಿಜೆಪಿ ಕಚೇರಿಯಲ್ಲಿ ಗಾರ್ಡ್ ಕೆಲಸ’: ಬಿಜೆಪಿ ನಾಯಕ ವಿಜಯವರ್ಗಿಯ ವಿವಾದಿತ ಹೇಳಿಕೆಗೆ ಖಂಡನೆ

’ಅಗ್ನಿವೀರರಿಗೆ ಬಿಜೆಪಿ ಕಚೇರಿಯಲ್ಲಿ ಗಾರ್ಡ್ ಕೆಲಸ’: ಬಿಜೆಪಿ ನಾಯಕ ವಿಜಯವರ್ಗಿಯ ವಿವಾದಿತ ಹೇಳಿಕೆಗೆ ಖಂಡನೆ

’ಈ ಹೇಳಿಕೆಗಳು ಕೂಡ ‘ಫ್ರಿಂಜ್’ ಅಂಶಗಳ ಹೇಳಿಕೆಗಳೇ ಎಂಬುದನ್ನು ಪ್ರಧಾನಿ ಸ್ಪಷ್ಟಪಡಿಸಬೇಕು’ ಟಿಎಂಸಿ ಆಗ್ರಹ

- Advertisement -
- Advertisement -

ಒಕ್ಕೂಟ ಸರ್ಕಾರ ಘೋಷಿಸಿರುವ ಅಗ್ನಿಪಥ ಯೋಜನೆ ವಿರೋಧಿಸಿ ದೇಶದಾದ್ಯಂತ ಪ್ರತಿಭಟನೆಗಳು ಭುಗಿಲೆದ್ದಿರುವ ಬೆನ್ನಲ್ಲೇ ಬಿಜೆಪಿ ರಾಷ್ಟ್ರೀಯ ಪ್ರಧಾನ ಕಾರ್ಯದರ್ಶಿ ಕೈಲಾಶ್ ವಿಜಯವರ್ಗಿಯ ಅವರು ಬಿಜೆಪಿ ಕಚೇರಿಗಳಿಗೆ ಭದ್ರತಾ ಸಿಬ್ಬಂದಿಯನ್ನು ನೇಮಿಸಿಕೊಳ್ಳುವಾಗ ಅಗ್ನಿವೀರರಿಗೆ ಆದ್ಯತೆ ನೀಡಲಾಗುವುದು’ ಎಂದು ವಿವಾದಿತ ಹೇಳಿಕೆ ನೀಡಿದ್ದಾರೆ.

“ಶಿಸ್ತು ಮತ್ತು ಆಜ್ಞೆಗಳು ಪಾಲಿಸುವುದು ಮಿಲಿಟರಿ ತರಬೇತಿಯ ಅವಿಭಾಜ್ಯ ಅಂಗವಾಗಿದೆ. ಅಗ್ನಿವೀರರು 25 ವರ್ಷ ವಯಸ್ಸಿನಲ್ಲಿ ನಾಲ್ಕು ವರ್ಷಗಳ ಕಾಲ ರಕ್ಷಣಾ ಕ್ಷೇತ್ರದಲ್ಲಿ ಸೇವೆ ಸಲ್ಲಿಸಿ ಹೊರಬಂದಾಗ, ಅವರ ಬಳಿ 11 ಲಕ್ಷ ರೂಪಾಯಿ ಇರುತ್ತದೆ. ಅವರು ಹೆಮ್ಮೆಯಿಂದ ಪ್ರದರ್ಶಿಸಬಹುದಾದ ಅಗ್ನಿವೀರರ ಟ್ಯಾಗ್ ಹೊಂದಿರುತ್ತಾರೆ. ನಾನು ಬಿಜೆಪಿ ಕಚೇರಿಗೆ ಭದ್ರತಾ ಸಿಬ್ಬಂದಿಯನ್ನು ನೇಮಿಸಲು ಬಯಸಿದರೆ, ನಾನು ಅಗ್ನಿವೀರರಿಗೆ ಆದ್ಯತೆ ನೀಡುತ್ತೇನೆ” ಎಂದು ಬಿಜೆಪಿಯ ಹಿರಿಯ ನಾಯಕ ವಿಜಯವರ್ಗಿಯವರು ಇಂದೋರ್‌ನ ಪತ್ರಿಕಾಗೋಷ್ಠಿಯಲ್ಲಿ ಹೇಳಿದ್ದರು.

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ
₹100 ₹200 ₹500 ₹1000 Others

ಇದನ್ನೂ ಓದಿ: ಸಾಯಿ ಪಲ್ಲವಿಯವರಿಂದ ಮಾಧ್ಯಮಗಳು ಕಲಿಯುವುದು ಬಹಳಷ್ಟಿದೆ: ಬೆಂಬಲಕ್ಕೆ ನಿಂತ ನಟ ಕಿಶೋರ್

ವಿಜಯವರ್ಗಿಯ ಅವರ ವಿಡಿಯೋ ವೈರಲ್ ಆಗುತ್ತಿದ್ದಂತೆಯೇ ಈ ಹೇಳಿಕೆಗೆ ವಿವಿಧ ವಲಯಗಳಿಂದ ಖಂಡನೆ ವ್ಯಕ್ತವಾಗಿದೆ. ಬಿಜೆಪಿ ಸಂಸದ ವರುಣ್ ಗಾಂಧಿ ಟ್ವಿಟ್ಟರ್‌ನಲ್ಲಿ ವಿಡಿಯೊ ಹಂಚಿಕೊಂಡಿದ್ದು, ರಾಜಕೀಯ ಪಕ್ಷದ ಕಚೇರಿಗಳನ್ನು ಕಾವಲು ಕಾಯಲು ಭಾರತೀಯ ಸೈನಿಕರನ್ನು ಆಹ್ವಾನಿಸಿರುವುದನ್ನು ಟೀಕಿಸಿದ್ದಾರೆ.

ಪಶ್ಚಿಮ ಬಂಗಾಳ ಮುಖ್ಯಮಂತ್ರಿ ಮಮತಾ ಬ್ಯಾನರ್ಜಿ ಅವರ ತೃಣಮೂಲ ಕಾಂಗ್ರೆಸ್‌ ಕೂಡ ಖಂಡನೆ ವ್ಯಕ್ತಪಡಿಸಿದೆ. “ಭಾರತದ ಯುವಕರು ಬಿಜೆಪಿ ಕಚೇರಿಯ ಬಾಗಿಲ ಕಾಯುವ ದ್ವಾರಪಾಲಕರಾಗಬಾರದು, ಯುವ ಶಕ್ತಿ ಮೋದಿ ಸರ್ಕಾರಕ್ಕಿಂತ ಭಿನ್ನವಾಗಿ ಈ ದೇಶಕ್ಕೆ ಸೇವೆ ಸಲ್ಲಿಸಲು ಬಯಸುತ್ತದೆ. ಇವೂ ಕೂಡ ‘ಫ್ರಿಂಜ್’ ಅಂಶಗಳ ಹೇಳಿಕೆಗಳೇ ಎಂಬುದನ್ನು ಪ್ರಧಾನಿ ಸ್ಪಷ್ಟಪಡಿಸಬೇಕು” ಎಂದು ಆಗ್ರಹಿಸಿದೆ.

ಇದನ್ನೂ ಓದಿ: 60 ಲಕ್ಷ ಹುದ್ದೆಗಳು ಖಾಲಿಯಿದ್ದರೂ ವಿದ್ಯಾವಂತ ಯುವಕರು ಇ-ರಿಕ್ಷಾ ಓಡಿಸುತ್ತಿದ್ದಾರೆ: BJP ಸಂಸದ ವರುಣ್ ಗಾಂಧಿ ಆಕ್ರೋಶ

 

ಮಧ್ಯಪ್ರದೇಶ ಕಾಂಗ್ರೆಸ್ ಕೂಡ ವಿಜಯವರ್ಗಿಯವರ ಹೇಳಿಕೆಯನ್ನು ಟೀಕಿಸಿದೆ. ಇದರ ರಾಜ್ಯ ಘಟಕದ ಅಧ್ಯಕ್ಷ ಕೆ.ಕೆ.ಮಿಶ್ರಾ ಮಾತನಾಡಿ, ’ಈ ಹೇಳಿಕೆಯು ಕೇವಲ ದೇಶದ ಯುವಕರಲ್ಲದೇ ಭಾರತೀಯ ಸೇನೆಯ ಶೌರ್ಯಕ್ಕೆ ಮಾಡಿದ ಘೋರ ಅವಮಾನವಾಗಿದ್ದು, ಪ್ರತಿಭಟನೆ ನಡೆಸುತ್ತಿರುವ ಯುವಕರ ಗಾಯದ ಮೇಲೆ ಉಪ್ಪು ಸವರುವ ಅವಿವೇಕದ ಪ್ರಯತ್ನವಾಗಿದೆ’ ಎಂದಿದ್ದಾರೆ.

ಎಐಎಂಐಎಂ ಅಧ್ಯಕ್ಷ ಅಸಾದುದ್ದೀನ್ ಓವೈಸಿ ಆಕ್ರೋಶ ವ್ಯಕ್ತಪಡಿಸಿ ಟ್ವೀಟ್ ಮಾಡಿದ್ದಾರೆ. “ತರಬೇತಿ ಪಡೆದ ಗುತ್ತಿಗೆ ಸೈನಿಕರನ್ನು ಅವರ ಕಚೇರಿಗಳಿಗೆ ಚೌಕಿದಾರರನ್ನಾಗಿ ನೇಮಿಸಿಕೊಳ್ಳುತ್ತೇವೆ ಎಂದು ಬಿಜೆಪಿ ನಾಯಕರು ಹೇಳುತ್ತಾರೆ. ಇದು ಗೌರವದ ವೃತ್ತಿಯಾಗಿರುವ ಸೈನ್ಯಕ್ಕೆ ಮತ್ತು ಸೈನಿಕರಿಗೆ ಮೋದಿಯವರ ಪಕ್ಷ ನೀಡುವ ಗೌರವವೇ? ದೇಶದಲ್ಲಿ ಈ ರೀತಿಯ ಆಡಳಿತ ಪಕ್ಷವಿರುವುದು ವಿಷಾದನೀಯ” ಎಂದಿದ್ದಾರೆ.


ಇದನ್ನೂ ಓದಿ: ಅಗ್ನಿಪಥ್ ವಿರೋಧಿಸಿ ಇಂದು ಭಾರತ್ ಬಂದ್: ಬಿಹಾರದಲ್ಲಿ 350 ರೈಲುಗಳ ಸಂಚಾರ ರದ್ದು

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

2 COMMENTS

  1. ಒಬ್ಬ ಮೂರ್ಖನಿಗೂ ಗೊತ್ತಿಲ್ಲ ಅಗ್ನಿಪಥ ಯೋಜನೆ ಬಗ್ಗೆ ಆದ್ರೂ ಬಾಯಿಗೆ ಬಂದಂಗೆ ಬೊಗಳೋದು ನಿಲ್ಲಸಲ್ಲ,, ಓ ಮೂರ್ಖರೆ ಮೊದಲು ಅಗ್ನಿಪಥ ಅಂದ್ರೆ ಏನು ಅದರ ಒಳ ಷಡ್ಯಂತ್ರಗಳು ಏನು ಅಂತ ನೀವು ತಿಳ್ಕೊಳಿ ಜನರಿಗೆ ಎಲ್ಲ ಅರ್ಥ ಆಗಿದೆ,, ಯಾರೋ ಊದಿದ ಪುಂಗಿಗೆ ಸ್ಕ್ರಿಪ್ಟ್ ಬರೆಯೋಕೆ ಬರೋಕು ಮುಂಚೆ ಮನೇಲಿ ಸ್ವಲ್ಪ ನಿಮಗಿಂತ ಹೆಚ್ಚು ಓದಿರುವ ನಿಮ್ಮ ಆಪ್ತ ಸಲಹೆಗಾರರ ಹತ್ತಿರ ಸಲಹೆ ಪಡೆಯೋದು ಉತ್ತಮ ಅನ್ಸುತ್ತೆ ಅಲ್ವಾ ಅವಿವೇಕಿಗಳೆ..?
    ಕೆಲವು ನಾಯಿಗಳು ಯಾವಾಗ್ಲೂ ಬೊಗಳ್ತಾವೆ ಬರಿ ಸಾಬರ್ ಬಗ್ಗೆ ಮಾತ್ರ,, ದೇಶದ ಒಳಿತಿಗಾಗಿ ಒಂದು ಮಾತು ಬರಲ್ಲ ಎಂಜಲು ಅಲ್ಲ ಕ್ಷಮಿಸಿ ಹೇಸಿಗೆ ತಿನ್ನೋ ನಾಯಿಗಳು.. ಈಗ ಬೊಗಳರೋ ಹೇಸಿಗೆ ನಾಯಿಗಳ ದೇಶದ ಮಾನ ಹೋಯ್ತು ಈಗ ದೇಶದ ಯುವಕರು ಏನ್ ಮಾಡಬೇಕು ಬೊಗಳರೋ 2 ರೂಪಾಯಿ ಬಿಖಾರಿಗಳೇ….

  2. ಹೀಗೊಂದು ಪಕ್ಷದ ಒಬ್ಬ ಮೂರ್ಖನಿಗೂ ಗೊತ್ತಿಲ್ಲ ಅಗ್ನಿಪಥ ಯೋಜನೆ ಬಗ್ಗೆ ಆದ್ರೂ ಬಾಯಿಗೆ ಬಂದಂಗೆ ಬೊಗಳೋದು ನಿಲ್ಲಸಲ್ಲ,, ಓ ಮೂರ್ಖರೆ ಮೊದಲು ಅಗ್ನಿಪಥ ಅಂದ್ರೆ ಏನು ಅದರ ಒಳ ಷಡ್ಯಂತ್ರಗಳು ಏನು ಅಂತ ನೀವು ತಿಳ್ಕೊಳಿ ಜನರಿಗೆ ಎಲ್ಲ ಅರ್ಥ ಆಗಿದೆ,, ಯಾರೋ ಊದಿದ ಪುಂಗಿಗೆ ಸ್ಕ್ರಿಪ್ಟ್ ಬರೆಯೋಕೆ ಬರೋಕು ಮುಂಚೆ ಮನೇಲಿ ಸ್ವಲ್ಪ ನಿಮಗಿಂತ ಹೆಚ್ಚು ಓದಿರುವ ನಿಮ್ಮ ಆಪ್ತ ಸಲಹೆಗಾರರ ಹತ್ತಿರ ಸಲಹೆ ಪಡೆಯೋದು ಉತ್ತಮ ಅನ್ಸುತ್ತೆ ಅಲ್ವಾ ಅವಿವೇಕಿಗಳೆ..?
    ಕೆಲವು ನಾಯಿಗಳು ಯಾವಾಗ್ಲೂ ಬೊಗಳ್ತಾವೆ ಬರಿ ಸಾಬರ್ ಬಗ್ಗೆ ಮಾತ್ರ,, ದೇಶದ ಒಳಿತಿಗಾಗಿ ಒಂದು ಮಾತು ಬರಲ್ಲ ಎಂಜಲು ಅಲ್ಲ ಕ್ಷಮಿಸಿ ಹೇಸಿಗೆ ತಿನ್ನೋ ನಾಯಿಗಳು.. ಈಗ ಬೊಗಳರೋ ಹೇಸಿಗೆ ನಾಯಿಗಳ ದೇಶದ ಮಾನ ಹೋಯ್ತು ಈಗ ದೇಶದ ಯುವಕರು ಏನ್ ಮಾಡಬೇಕು ಬೊಗಳರೋ 2 ರೂಪಾಯಿ ಬಿಖಾರಿಗಳೇ….

LEAVE A REPLY

Please enter your comment!
Please enter your name here

- Advertisment -

ತೆಲಂಗಾಣ ಜಾತಿ ಸಮೀಕ್ಷೆ: ಜನರ ಆರ್ಥಿಕ ಭವಿಷ್ಯ ನಿರ್ಧರಿಸುತ್ತಿರುವ ಜಾತಿ ಹಿನ್ನೆಲೆ

ತೆಲಂಗಾಣದಲ್ಲಿರುವ ಎಲ್ಲಾ ಪರಿಶಿಷ್ಟ ಜಾತಿ ಕಾರ್ಮಿಕರಲ್ಲಿ ಸುಮಾರು ಅರ್ಧದಷ್ಟು ಜನರು ದಿನಗೂಲಿ ಕಾರ್ಮಿಕರು. ಆದರೆ, ಸಾಮಾನ್ಯ ಜಾತಿ ಕಾರ್ಮಿಕರಲ್ಲಿ 10 ರಲ್ಲಿ ಒಬ್ಬರು ಮಾತ್ರ ದಿನಗೂಲಿ ಮಾಡುತ್ತಾರೆ. ಬ್ರಾಹ್ಮಣರು ಎಸ್‌ಟಿ ಸಮುದಾಯದ ಕೋಲಂಗಿಂತ...

ಲೆಬನಾನ್‌ನಲ್ಲಿ ಯೇಸುವಿನ ಪ್ರತಿಮೆ ಧ್ವಂಸ ಮಾಡಿದ ಇಸ್ರೇಲಿ ಸೈನಿಕ; ಫೋಟೋ ವೈರಲ್

ಇಸ್ರೇಲಿ ಸೈನಿಕನೊಬ್ಬ ದಕ್ಷಿಣ ಲೆಬನಾನ್‌ನಲ್ಲಿ ಸ್ಲೆಡ್ಜ್ ಹ್ಯಾಮರ್‌ನಿಂದ ಯೇಸುಕ್ರಿಸ್ತನ ಪ್ರತಿಮೆಯನ್ನು ಧ್ವಂಸ ಮಾಡುತ್ತಿರುವುದನ್ನು ತೋರಿಸುವ ವೈರಲ್ ಚಿತ್ರದ ಸತ್ಯಾಸತ್ಯತೆಯನ್ನು ಇಸ್ರೇಲ್ ರಕ್ಷಣಾ ಪಡೆಗಳು (ಐಡಿಎಫ್‌) ದೃಢಪಡಿಸಿದ್ದು, ವ್ಯಾಪಕ ಆಕ್ರೋಶಕ್ಕೆ ಕಾರಣವಾಗಿದೆ. ಎಕ್ಸ್ ನಲ್ಲಿ 6.8...

TCS ನಾಸಿಕ್ ಪ್ರಕರಣ : ಮಾಧ್ಯಮಗಳ ಸುಳ್ಳು ಮತ್ತು ಕಂಪನಿ ಹೇಳಿದ ಸತ್ಯ

ಮಹಾರಾಷ್ಟ್ರದ ನಾಸಿಕ್‌ನಲ್ಲಿರುವ ಟಾಟಾ ಕನ್ಸಲ್ಟೆನ್ಸಿ ಸರ್ವಿಸಸ್ (ಟಿಸಿಎಸ್‌) ಕಂಪನಿಯ ಬಿಪಿಒ ಘಟಕದಲ್ಲಿ ನಡೆದಿದೆ ಎನ್ನಲಾದ ಪ್ರಕರಣವೊಂದು ಪ್ರಸ್ತುತ ಇಡೀ ದೇಶದಾದ್ಯಂತ ಭಾರೀ ಚರ್ಚೆಯ ವಿಷಯವಾಗಿದೆ. ಈ ಪ್ರಕರಣದಲ್ಲಿ ಮುಖ್ಯವಾಗಿ ಲೈಂಗಿಕ ಕಿರುಕುಳ ಮತ್ತು...

‘ಅಮೆರಿಕದೊಂದಿಗೆ ಮಾತುಕತೆ ಇಲ್ಲ..’; ಇಸ್ಲಾಮಾಬಾದ್‌ ಸಭೆಯಲ್ಲಿ ಇರಾನ್ ಭಾಗವಹಿಸುವುದು ಅನುಮಾನ

ಯುನೈಟೆಡ್ ಸ್ಟೇಟ್ಸ್ (ಅಮೆರಿಕ) ಜೊತೆ ಹೊಸ ಸುತ್ತಿನ ಮಾತುಕತೆಗಾಗಿ ಇಸ್ಲಾಮಾಬಾದ್‌ಗೆ ಸಂಧಾನಕಾರರನ್ನು ಕಳುಹಿಸುವ ಯಾವುದೇ ಯೋಜನೆ ಇಲ್ಲ ಎಂದು ಇರಾನ್ ಸೂಚಿಸಿದೆ. ಕದನ ವಿರಾಮ ಮುಕ್ತಾಯಗೊಳ್ಳಲು 48 ಗಂಟೆಗಳ ಮೊದಲು ಯುದ್ಧ ನಿರತ...

ಇರಾನ್, ಇಸ್ರೇಲ್-ಅಮೆರಿಕ ಯುದ್ಧ : ವಿನಾಶದ ನಡುವೆಯೂ ಲಾಭ ಪಡೆದವರು ಯಾರು?

ಅಂತಾರಾಷ್ಟ್ರೀಯ ಹಣಕಾಸು ನಿಧಿ (ಐಎಂಎಫ್‌) 2026ರ ಜಾಗತಿಕ ಬೆಳವಣಿಗೆಯ ಅಂದಾಜನ್ನು ಶೇಕಡ 3.3 ರಿಂದ 3.1ಕ್ಕೆ ಇಳಿಸಿದೆ. ಇರಾನ್ ವಿರುದ್ಧದ ಅಮೆರಿಕ-ಇಸ್ರೇಲ್ ಯುದ್ಧದ ಪರಿಣಾಮ ಮತ್ತು ಹಾರ್ಮುಝ್ ಜಲಸಂಧಿಯನ್ನು ಮುಚ್ಚಿರುವುದು ವಿಶ್ವ ಆರ್ಥಿಕತೆಯ...

ಕ್ಷೇತ್ರ ಮರುವಿಂಗಡಣೆ ವಿರುದ್ಧ ದಕ್ಷಿಣದ ರಾಜ್ಯಗಳ ಪಟ್ಟು: ಭವಿಷ್ಯದ ಮರುಚಿಂತನೆಗೆ ಇದುವೇ ಸೂಕ್ತ ಕಾಲ

ಲೋಕಸಭೆಯಲ್ಲಿ 131 ನೇ ಸಾಂವಿಧಾನಿಕ ತಿದ್ದುಪಡಿ ಮಸೂದೆಯನ್ನು ತಿರಸ್ಕರಿಸಿರುವುದು ಭಾರತದ ಪ್ರಜಾಪ್ರಭುತ್ವ ಪಥದಲ್ಲಿ ಮಹತ್ವದ ಕ್ಷಣವಾಗಿದೆ. ಇದು ಕೇವಲ ಶಾಸಕಾಂಗದ ಹಿನ್ನಡೆಯನ್ನು ಮಾತ್ರವಲ್ಲ, ಒಕ್ಕೂಟ ವ್ಯವಸ್ಥೆಯ ಸೂಕ್ಷ್ಮ ಸಮತೋಲನವನ್ನು ಹಾಳುಮಾಡುವ ಅಪಾಯವನ್ನುಂಟುಮಾಡುವ ಪ್ರಸ್ತಾಪಗಳ...

ಮೋದಿ ಸರ್ಕಾರದ ಯೂಟರ್ನ್ : ಜನಸಂಖ್ಯಾ ಸ್ಫೋಟದ ಕಳವಳದಿಂದ ಹೆಚ್ಚು ಜನಸಂಖ್ಯೆಯ ರಾಜ್ಯಗಳಿಗೆ ಗಿಫ್ಟ್ ಕೊಡುವವರೆಗೆ

ಭಾರತದ ಜನಸಂಖ್ಯೆಯ ಬಗ್ಗೆ ಪ್ರಧಾನಮಂತ್ರಿ ನರೇಂದ್ರ ಮೋದಿ ಮತ್ತು ಅವರ ಸರ್ಕಾರ ನಿಜವಾಗಿಯೂ ಬಹಳ ಕಳವಳ ವ್ಯಕ್ತಪಡಿಸುತ್ತಿದೆ– ಅಥವಾ ಅವರು ನಮಗೆ ಆ ರೀತಿ ನಂಬುವಂತೆ ಮಾಡಿದ್ದಾರೆ. ಏಕೆಂದರೆ... 2019ರ ಸ್ವಾತಂತ್ರ್ಯ ದಿನಾಚರಣೆಯಂದು ಮೋದಿಯವರು,...

ದೇಶವನ್ನುದ್ದೇಶಿಸಿ ಮೋದಿ ಭಾಷಣ : ಚುನಾವಣಾ ನೀತಿ ಸಂಹಿತೆಯ ಉಲ್ಲಂಘನೆ

ಕ್ಷೇತ್ರ ಮರುವಿಂಗಡನೆಗೆ ಉದ್ದೇಶಿಸಿದ್ದ ಸಂವಿಧಾನದ 131ನೇ ತಿದ್ದುಪಡಿ ಮಸೂದೆಗೆ ಲೋಕಸಭೆಯಲ್ಲಿ ಸೋಲಾದ ಬೆನ್ನಲ್ಲೇ ಶನಿವಾರ (ಏ.18) ದೇಶವನ್ನುದ್ದೇಶಿಸಿ ಮಾತನಾಡಿದ ಪ್ರಧಾನಿ ನರೇಂದ್ರ ಮೋದಿ, ಪ್ರತಿಪಕ್ಷಗಳ ವಿರುದ್ಧ ತೀವ್ರ ವಾಗ್ದಾಳಿ ನಡೆಸಿದ್ದು, ಸಂಸತ್ತಿನಲ್ಲಿ ವಿರೋಧ...

ಫ್ಯಾಕ್ಟ್‌ಚೆಕ್ : ಅತ್ಯಾಚಾರ ಅಪರಾಧಿ ಪರ ವಕೀಲೆಗೆ ಟಿಎಂಸಿಯಿಂದ ರಾಜ್ಯಸಭೆ ಸೀಟ್; ಬಿಜೆಪಿ ಆರೋಪದ ಸತ್ಯಾಸತ್ಯತೆ ಏನು?

ಪಶ್ಚಿಮ ಬಂಗಾಳ ವಿಧಾನಸಭೆ ಚುನಾವಣೆಗೆ ಪಾಣಿಹತಿ ಕ್ಷೇತ್ರದಿಂದ ಬಿಜೆಪಿ ಅಭ್ಯರ್ಥಿಯಾಗಿರುವ ಆರ್‌ಜಿ ಕರ್‌ ಸಂತ್ರಸ್ತೆಯ ತಾಯಿ ಮತ್ತು ವಕೀಲೆ ಹಾಗೂ ತೃಣಮೂಲ ಕಾಂಗ್ರೆಸ್ (ಟಿಎಂಸಿ) ರಾಜ್ಯಸಭಾ ಸದಸ್ಯೆ ಮೇನಕಾ ಗುರುಸ್ವಾಮಿ ಅವರ ಎಐ-ರಚಿತ...

ತಾರತಮ್ಯ ಮುಕ್ತ ಕ್ಯಾಂಪಸ್ ನಿರ್ಮಾಣದತ್ತ ಮಹತ್ವದ ಹೆಜ್ಜೆ; ‘ರೋಹಿತ್ ವೇಮುಲ ಮಸೂದೆ’ಗೆ ಸಚಿವ ಸಂಪುಟ ಅನುಮೋದನೆ

ಕರ್ನಾಟಕ ಸರ್ಕಾರದ ಸಚಿವ ಸಂಪುಟ ಗುರುವಾರ (ಏ.16) ದಂದು ಕರ್ನಾಟಕ ರೋಹಿತ್ ವೇಮುಲ (ಹೊರಗಿಡುವಿಕೆ ಅಥವಾ ಅನ್ಯಾಯ ತಡೆಗಟ್ಟುವಿಕೆ) (ಶಿಕ್ಷಣ ಮತ್ತು ಘನತೆಯ ಹಕ್ಕು) ಮಸೂದೆ’ಗೆ ಅನುಮೋದನೆ ನೀಡಿದೆ. ಹೈದರಾಬಾದ್‌ನ ಕೆಂದ್ರೀಯ ವಿಶ್ವವಿದ್ಯಾಲಯದಲ್ಲಿ...