Homeಕರ್ನಾಟಕಅಗ್ನಿಪಥ್‌‌: ಬೆಳಗಾವಿಯಲ್ಲಿ ಆಂದೋಲನ ತಡೆಯಲು ಬಿಗಿ ಭದ್ರತೆ; ವಿದ್ಯಾರ್ಥಿ ನಾಯಕರು ವಶಕ್ಕೆ

ಅಗ್ನಿಪಥ್‌‌: ಬೆಳಗಾವಿಯಲ್ಲಿ ಆಂದೋಲನ ತಡೆಯಲು ಬಿಗಿ ಭದ್ರತೆ; ವಿದ್ಯಾರ್ಥಿ ನಾಯಕರು ವಶಕ್ಕೆ

- Advertisement -
- Advertisement -

ರಕ್ಷಣಾ ಪಡೆಗಳಲ್ಲಿ ಗುತ್ತಿಗೆ ಮಾದರಿಯ ನೇಮಕಾತಿ ಯೋಜನೆಯಾದ ಅಗ್ನಿಪಥ್ ಯೋಜನೆಯ ವಿರುದ್ಧ ಯಾವುದೇ ರೀತಿಯ ಆಂದೋಲನಗಳನ್ನು ತಡೆಯಲು ಬೆಳಗಾವಿ ಪೊಲೀಸರು ಭದ್ರತಾ ಕ್ರಮಗಳನ್ನು ಬಿಗಿಗೊಳಿಸಿದ್ದಾರೆ ಎಂದು ದಿ ಹಿಂದೂ ಪತ್ರಿಕೆ ವರದಿ ಮಾಡಿದೆ. ಈ ಮಧ್ಯೆ ‘ಅಗ್ನಿಪಥ್’ ವಿರುದ್ಧ ಪ್ರತಿಭಟನೆ ನಡೆಸುತ್ತಿದ್ದ ಯುವಕರನ್ನು ಮುಂಜಾಗ್ರತಾ ಕ್ರಮವಾಗಿ ವಶಕ್ಕೆ ತೆಗೆದುಕೊಳ್ಳಲಾಗಿದೆ ಎಂದು ಪತ್ರಿಕೆ ಹೇಳಿದೆ.

ಪೊಲೀಸರು ಕೆಲವು ಯುವ ಮುಖಂಡರನ್ನು ಮುಂಜಾಗ್ರತಾ ಕ್ರಮವಾಗಿ ವಶಕ್ಕೆ ತೆಗೆದುಕೊಂಡಿದ್ದಾರೆ. ಅಖಿಲ ಭಾರತ ಪ್ರಜಾಸತ್ತಾತ್ಮಕ ಯುವ ಸಂಘಟನೆ (AIDYO) ಮುಖಂಡ ಸಿದ್ದಲಿಂಗ ಬಾಗೇವಾಡಿ ಹಾಗೂ ರಾಜು ಗಾಣಗಿ ಅವರನ್ನು ಬಂಧಿಸಲಾಗಿದೆ.
ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ
₹100 ₹200 ₹500 ₹1000 Others

ಬೆಳಗಾವಿಯಲ್ಲಿ ಸೋಮವಾರದ ಪ್ರತಿಭಟನೆಗೆ ಅನುಮತಿ ಪಡೆಯಲು ಭಾನುವಾರ ಖಡೇ ಬಜಾರ್ ಪೊಲೀಸ್ ಠಾಣೆಗೆ ತೆರಳಿದ್ದ ಇಬ್ಬರು ಮುಖಂಡರನ್ನು ವಶಕ್ಕೆ ಪಡೆಯಲಾಗಿದೆ ಎಂದು  AIDYO ಕಾರ್ಯಕರ್ತರು ತಿಳಿಸಿದ್ದಾರೆ.

ಇದನ್ನೂ ಓದಿ: ಬಿಹಾರ, ಯುಪಿಯಲ್ಲಿ ‘ಅಗ್ನಿಪಥ್‌ ಯೋಜನೆ’ ವಿರೋಧಿಸಿ ಸೇನಾ ಆಕಾಂಕ್ಷಿಗಳ ಬೃಹತ್‌‌ ಪ್ರತಿಭಟನೆ

ರಾಣಿ ಚನ್ನಮ್ಮ ವೃತ್ತ ಮತ್ತು ಸುತ್ತಮುತ್ತಲಿನ ಪ್ರದೇಶಗಳಲ್ಲಿ ಜಮಾಯಿಸಿದ ವಿದ್ಯಾರ್ಥಿಗಳು ಹೋರಾಟಗಾರರನ್ನು ಪೊಲೀಸರು ವಶಕ್ಕೆ ಪಡೆದು ಬಸ್‌ಗಳಲ್ಲಿ ಕರೆದೊಯ್ದರು. ಕನಿಷ್ಠ ಎರಡು ಬಸ್‌ಗಳು ವಿದ್ಯಾರ್ಥಿಗಳನ್ನು ವಶಕ್ಕೆ ಪಡೆಯಲಾಗಿದೆ ಎಂದು ಹೋರಾಟಗಾರರು ಹೇಳಿದ್ದಾರೆ.

ಪ್ರಧಾನಿ ನರೇಂದ್ರ ಮೋದಿ ಅವರು ಕರ್ನಾಟಕಕ್ಕೆ ಭೇಟಿ ನೀಡುತ್ತಿರುವ ದಿನದಂದು ಎಐಡಿಎಸ್‌ಒ, ಎಐಡಿವೈಒ ಮುಂತಾದ ಸಂಘಟನೆಗಳು ಪ್ರತಿಭಟನೆ ನಡೆಸಲು ಮುಂದಾಗಿವೆ ಎಂಬ ಮಾಹಿತಿ ಲಭ್ಯವಾಗಿದೆ ಎಂದು ಹಿರಿಯ ಪೊಲೀಸ್ ಅಧಿಕಾರಿಯೊಬ್ಬರ ಹೇಳಿಕೆಯನ್ನು ದಿ ಹಿಂದೂ ಉಲ್ಲೇಖಿಸಿದೆ.

ಆದರೆ ಇದನ್ನು ಎಐಡಿಎಸ್‌ಒ ಮುಖಂಡರು ನಿರಾಕರಿಸಿದ್ದು, “ಇದು ಅಖಿಲ ಭಾರತ ಕರೆಯಾಗಿತ್ತು. ಪ್ರಧಾನಿ ಭೇಟಿಗೂ ಇದಕ್ಕೂ ಸಂಬಂಧವಿಲ್ಲ. ಇದು ಸಂಪೂರ್ಣವಾಗಿ ಕಾಕತಾಳೀಯ’’ ಎಂದು ಸಂಚಾಲಕ ಮಹಾಂತೇಶ ಬಿ. ಹೇಳಿದ್ದಾರೆ.

ಇದನ್ನೂ ಓದಿ: ಅಗ್ನಿಪಥ್‌‌‌‌‌ ಯೋಜನೆ ವಿರೋಧಿಸಿ ಹಲವು ರಾಜ್ಯಗಳಲ್ಲಿ ಪ್ರತಿಭಟನೆ: ಬಿಹಾರ ಬಿಜೆಪಿ ಕಚೇರಿಗೆ ಬೆಂಕಿ ಹಚ್ಚಿ ಧ್ವಂಸ

ಪೊಲೀಸರ ತಂಡವೂ ಸಾಮಾಜಿಕ ಜಾಲತಾಣಗಳಲ್ಲಿ ಸಕ್ರಿಯವಾಗಿತ್ತು. ಎಡಪಂಥೀಯ ಸಂಘಟನೆಗಳು ಸೋಮವಾರ ಪ್ರತಿಭಟನೆಗೆ ಕರೆ ನೀಡಿದ ವಿಚಾರವನ್ನು ಸಾಮಾಜಿಕ ಮಾಧ್ಯಮದಲ್ಲಿ ಯುವ ಇನ್ಸ್‌ಪೆಕ್ಟರ್  ಪತ್ತೆಹಚ್ಚಿದ್ದಾರೆ ಎಂದು ‘ದಿ ಹಿಂದೂ’ ಹೇಳಿದೆ.

ಹಲವು ವಿದ್ಯಾರ್ಥಿ ನಾಯಕರ ವಾಟ್ಸಾಪ್ ಮತ್ತು ಇತರ ಸಾಮಾಜಿಕ ಮಾಧ್ಯಮ ಖಾತೆಗಳನ್ನು ಪೊಲೀಸರು ನಿರ್ಬಂಧಿಸಿದ್ದಾರೆ ಎಂದು ಹೋರಾಟಗಾರರು ದೂರಿದ್ದಾರೆ. ಜನರು ಗುಂಪು ಸೇರಿರುವ ವೀಡಿಯೊಗಳನ್ನು ಸೆರೆಹಿಡಿಯಲು ಪೊಲೀಸರು ಡ್ರೋನ್‌ಗಳನ್ನು ಬಳಸಿದ್ದಾರೆ. ಯುವಕರನ್ನು ಬೀದಿಗಿಳಿಸಲು ಪ್ರೇರೇಪಿಸುತ್ತಿದ್ದಾರೆಯೇ ಎಂಬುವುದನ್ನು ಗಮನಿಸಲು ಸೈನಿಕರ ಪರೀಕ್ಷಾ ತರಬೇತಿ ಕೇಂದ್ರಗಳ ನಿಗಾ ವಹಿಸಿದ್ದಾರೆ.

ಕೆಲವು ತುರ್ತು ಸ್ಪಂದನಾ ಘಟಕದ ವ್ಯಾನ್‌ಗಳು ಮತ್ತು ಚನ್ನಮ್ಮ ಪಡೆ ವಾಹನಗಳು ಕಾಲೇಜುಗಳ ಬಳಿ ನಿಂತಿದ್ದವು ಎಂದು ವರದಿ ಉಲ್ಲೇಖಿಸಿದೆ. ಬೆಳಗಾವಿಯ ಹಲವು ಪಟ್ಟಣಗಳ ರೈಲ್ವೆ ನಿಲ್ದಾಣ, ಬಸ್ ನಿಲ್ದಾಣಗಳಲ್ಲಿ ಪೊಲೀಸರು ಬೀಡುಬಿಟ್ಟು, ವಿದ್ಯಾರ್ಥಿಗಳು ಪ್ರತಿಭಟನೆಗೆ ಸೇರುತ್ತಿದ್ದಾರೆಯೇ ಎಂದು ತಿಳಿಯಲು ಕಾನ್ಸ್‌ಟೇಬಲ್‌ಗಳು ವಿದ್ಯಾರ್ಥಿಗಳ ಗುರುತಿನ ಚೀಟಿಗಳನ್ನು ಪರಿಶೀಲಿಸಿದ್ದಾರೆ.

ಇದನ್ನೂ ಓದಿ: ಅಗ್ನಿಪಥ್‌ ಯೋಜನೆ: ಯುವಕರಿಗೆ 4 ವರ್ಷಗಳಲ್ಲ, ಪೂರ್ಣಾವಧಿಯ ಉದ್ಯೋಗ ನೀಡಿ- ಕೇಜ್ರಿವಾಲ್ ಒತ್ತಾಯ

ರಾಪಿಡ್ ಆಕ್ಷನ್ ಫೋರ್ಸ್ (RAF) ತುಕಡಿಯು ನಗರದ ಸೂಕ್ಷ್ಮ ಪ್ರದೇಶಗಳ ಮಾರ್ಗದಲ್ಲಿ ಪಥಸಂಚಲನ ನಡೆಸಿದೆ. ಆರ್‌ಎಎಫ್ ಸಿಬ್ಬಂದಿ ರಾಣಿ ಚನ್ನಮ್ಮ ವೃತ್ತದಲ್ಲಿ ತಮ್ಮ ಟ್ರಕ್‌ನಲ್ಲಿ ಅಳವಡಿಸಲಾದ ನೀರಿನ ಫಿರಂಗಿಗಳನ್ನು ಪರೀಕ್ಷಿಸಿ, ಸಂಜೆವರೆಗೂ ವೃತ್ತದಲ್ಲಿ ನಿಲ್ಲಿಸಲಾಗಿತ್ತು ಎಂದು ವರದಿಯು ಉಲ್ಲೇಖಿಸಿದೆ.

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

2020ರ ದೆಹಲಿ ಗಲಭೆ ಪ್ರಕರಣ: ಐವರು ಆರೋಪಿಗಳನ್ನು ಖುಲಾಸೆಗೊಳಿಸಿದ ನ್ಯಾಯಾಲಯ

2020 ರ ದೆಹಲಿ ಗಲಭೆಗೆ ಸಂಬಂಧಿಸಿದಂತೆ ಬೆಂಕಿ ಹಚ್ಚುವಿಕೆ, ಗಲಭೆ ಮತ್ತು ವಿಧ್ವಂಸಕ ಕೃತ್ಯದ ಆರೋಪ ಹೊತ್ತಿರುವ ಐವರನ್ನು ನ್ಯಾಯಾಲಯ ಖುಲಾಸೆಗೊಳಿಸಿದೆ. ಅಬ್ದುಲ್ ಸತ್ತಾರ್, ಮುಹಮ್ಮದ್ ಖಾಲಿದ್, ಹುನೈನ್, ತನ್ವೀರ್ ಮತ್ತು ಆರಿಫ್ ವಿರುದ್ಧದ...

ಕಾರ್‌ ಚಲಾಯಿಸುವಾಗ ಫೋನ್‌ನಲ್ಲಿ ಮಾತನಾಡದಂತೆ ಹೇಳಿದ್ದಕ್ಕೆ ಪತ್ರಕರ್ತನ ಮೇಲೆ ರಾಡ್‌ನಿಂದ ಹಲ್ಲೆ

ಆ್ಯಪ್ ಆಧಾರಿತ ಟ್ಯಾಕ್ಸಿ ಬುಕಿಂಗ್‌ ಮಾಡುವ ಪ್ರಯಾಣಿಕರ ಸುರಕ್ಷತೆ ಮತ್ತು ಚಾಲಕರ ನಡವಳಿಕೆಯ ಕುರಿತ ಕಳವಳವಳಕಾರಿ ಘಟನೆಯೊಂದು ಹರಿಯಾಣದ ಫರಿದಾಬಾದ್‌ನಲ್ಲಿ ಬೆಳಕಿಗೆ ಬಂದಿದೆ. ರ್ಯಾಪಿಡೋ ಟ್ಯಾಕ್ಸಿ ಚಾಲಕನೊಬ್ಬ ಪ್ರಯಾಣಿಕನ ಮೇಲೆ ಕಬ್ಬಿಣದ ರಾಡ್‌ನಿಂದ...

ರಾಜಸ್ಥಾನ| ಎಥೆನಾಲ್ ಸ್ಥಾವರದ ವಿರುದ್ಧ ಪ್ರತಿಭಟನೆ: 40 ಜನರ ಬಂಧನ

ರಾಜಸ್ಥಾನದ ಹನುಮಾನ್‌ಗಢ ಜಿಲ್ಲೆಯ ರೈತರು, ಪ್ರಸ್ತಾವಿತ ಎಥೆನಾಲ್ ಕಾರ್ಖಾನೆಯ ವಿರುದ್ಧ ಎರಡನೇ ದಿನವೂ ಪ್ರತಿಭಟನೆ ಮುಂದುವರೆಸಿದ್ದಾರೆ, ಈ ಪ್ರದೇಶದಲ್ಲಿ ಹೆಚ್ಚಿನ ಭದ್ರತೆ ಮತ್ತು ಇಂಟರ್ನೆಟ್ ಸೇವೆಗಳನ್ನು ಸ್ಥಗಿತಗೊಳಿಸಲಾಗಿದೆ. ಗುರುವಾರ ಮುಂಜಾನೆ ಟಿಬ್ಬಿ ಬಳಿಯ ಗುರುದ್ವಾರದಲ್ಲಿ...

ವಿಧಾನಸಭೆಯಲ್ಲಿ ‘ಗೃಹಲಕ್ಷ್ಮಿ’ ಗದ್ದಲ : ಬಿಜೆಪಿ ಸದಸ್ಯರಿಂದ ಸಭಾತ್ಯಾಗ, ಕ್ಷಮೆ ಕೋರಿದ ಸಚಿವೆ ಲಕ್ಷ್ಮಿ ಹೆಬ್ಬಾಳ್ಕರ್

ಗೃಹಲಕ್ಷಿ ಯೋಜನೆಯ ಹಣ ಬಿಡುಗಡೆ ಸಂಬಂಧ ಸಚಿವರು ಸದನಕ್ಕೆ ತಪ್ಪು ಮಾಹಿತಿ ನೀಡಿದ್ದಾರೆ ಎಂಬ ವಿಚಾರ ಇಂದು (ಡಿ.17 ಬುಧವಾರ) ವಿಧಾನಸಭೆಯಲ್ಲಿ ದೊಡ್ಡ ಮಟ್ಟದ ವಾಗ್ವಾದ, ಆರೋಪ-ಪ್ರತ್ಯಾರೋಪ, ಗದ್ದಲ, ಪ್ರತಿಭಟನೆ, ಸಭಾತ್ಯಾಗ ಮತ್ತು...

ತಂಪು ಪಾನೀಯದಲ್ಲಿ ಮತ್ತು ಬರುವ ಔಷಧ ಬೆರೆಸಿ ಅಪ್ರಾಪ್ತ ಬಾಲಕಿಯರ ಮೇಲೆ ಅತ್ಯಾಚಾರ: ಆರೋಪಿ ಬಂಧನ

ಮುಂಬೈ ನಗರವನ್ನೇ ಬೆಚ್ಚಿಬೀಳಿಸಿದ ಆಘಾತಕಾರಿ ಘಟನೆಯಲ್ಲಿ, ವಕ್ತಿಯೋರ್ವ ಮತ್ತು ಬರುವ ತಂಪು ಪಾನೀಯ ನೀಡಿ ಅಪ್ರಾಪ್ತ ಬಾಲಕಿಯರ ಮೇಲೆ ಲೈಂಗಿಕ ದೌರ್ಜನ್ಯ ಎಸಗಿದ್ದಾನೆ. ಅಪರಾಧದ ಅಶ್ಲೀಲ ವೀಡಿಯೊಗಳನ್ನು ರೆಕಾರ್ಡ್ ಮಾಡಿ, ನಂತರ ವೀಡಿಯೊಗಳನ್ನು...

ಮನರೇಗಾ ಬದಲು ವಿಬಿ-ಜಿ ರಾಮ್ ಜಿ : ಲೋಕಸಭೆಯಲ್ಲಿ ಮಸೂದೆ ಅಂಗೀಕಾರದ ವೇಳೆ ಸಭಾತ್ಯಾಗಕ್ಕೆ ನಿರ್ಧರಿಸಿದ ವಿಪಕ್ಷಗಳು

ನರೇಗಾ ಬದಲು ತಂದಿರುವ ವಿಕಸಿತ್ ಭಾರತ್-ಗ್ಯಾರಂಟಿ ಫಾರ್ ರೋಜ್‌ಗಾರ್ ಅಂಡ್ ಅಜೀವಿಕಾ ಮಿಷನ್ (ಗ್ರಾಮೀಣ್) ಮಸೂದೆ, 2025 (ವಿಬಿ–ಜಿ ರಾಮ್ ಜಿ ಮಸೂದೆ) ಲೋಕಸಭೆಯಲ್ಲಿ ಅಂಗೀಕಾರದ ವೇಳೆ ಸಹಕರಿಸದಿರಲು ವಿರೋಧ ಪಕ್ಷಗಳ ಸಂಸದರು...

ಅಪ್ರಾಪ್ತ ಬಾಲಕಿ ಮೇಲೆ ಅತ್ಯಾಚಾರ ಆರೋಪ: ಮ್ಯೂಸಿಕ್ ಮೈಲಾರಿ ಮೇಲೆ ಪೋಕ್ಸೋ ಪ್ರಕರಣ ದಾಖಲು 

ಬೆಂಗಳೂರು: ಉತ್ತರ ಕರ್ನಾಟಕದ ಜನಪದ ಗಾಯಕ ಹಾಗೂ ಯೂಟ್ಯೂಬ್ ಸ್ಟಾರ್ ಎಂದೇ ಖ್ಯಾತಿ ಪಡೆದಿದ್ದ ‘ಮ್ಯೂಸಿಕ್ ಮೈಲಾರಿ’ಎಂಬಾತನನ್ನು ಅಪ್ರಾಪ್ತೆ ಮೇಲೆ ಲೈಂಗಿಕ ದೌರ್ಜನ್ಯ ಎಸಗಿದ ಆರೋಪದಡಿ ಮಹಾಲಿಂಗಪುರ ಪೊಲೀಸರು ಬಂಧಿಸಿದ್ದಾರೆ. ಈ ಪ್ರಕರಣಕ್ಕೆ ಸಂಬಂಧಿಸಿದಂತೆ ಮೈಲಾರಿ...

ಇಂಧನ ಖರೀದಿಗೆ ‘ಮಾಲಿನ್ಯ ನಿಯಂತ್ರಣ ಪ್ರಮಾಣಪತ್ರ’ ಕಡ್ಡಾಯಗೊಳಿಸಿದ ದೆಹಲಿ ಸರ್ಕಾರ

ರಾಷ್ಟ್ರ ರಾಜಧಾನಿ ದೆಹಲಿಯ ವಾಹನ ಮಾಲೀಕರು ಕಟ್ಟುನಿಟ್ಟಾದ ಆದೇಶ ಎದುರಿಸುತ್ತಾರೆ. ಡಿಸೆಂಬರ್ 18 ರಿಂದ ನಗರದಾದ್ಯಂತದ ಪೆಟ್ರೋಲ್ ಬಂಕ್‌ಗಳಲ್ಲಿ ಇಂಧನ ಖರೀದಿಗೆ ಮಾಲಿನ್ಯ ನಿಯಂತ್ರಣ ಪ್ರಮಾಣಪತ್ರ (ಪಿಯುಸಿ) ಕಡ್ಡಾಯಗೊಳಿಸಲಾಗಿದೆ. ದೆಹಲಿ ಪರಿಸರ ಸಚಿವ ಮಂಜಿಂದರ್...

ವೈದ್ಯೆಯ ಹಿಜಾಬ್ ಎಳೆದ ಬಿಹಾರ ಸಿಎಂ, ಅವಹೇಳನ ಮಾಡಿದ ಯುಪಿ ಸಚಿವನ ವಿರುದ್ದ ದೂರು ದಾಖಲು

ವೈದ್ಯೆಯ ಹಿಜಾಬ್ ಎಳೆದ ಬಿಹಾರದ ಮುಖ್ಯಮಂತ್ರಿ ನಿತೀಶ್ ಕುಮಾರ್ ಮತ್ತು ಈ ಘಟನೆಯ ಕುರಿತು ಮಾತನಾಡುವಾಗ ಮಹಿಳೆಯನ್ನು ಅವಮಾನಿಸಿದ ಉತ್ತರ ಪ್ರದೇಶದ ಸಂಪುಟ ಸಚಿವ ಸಂಜಯ್ ನಿಶಾದ್ ವಿರುದ್ದ ಲಕ್ನೋದ ಕೈಸರ್‌ಬಾಗ್ ಪೊಲೀಸ್...

1 ಲಕ್ಷ ರೂಪಾಯಿ ಸಾಲ 74 ಲಕ್ಷ ರೂಪಾಯಿಗೆ ಏರಿಕೆ, ಸಾಲ ತೀರಿಸಲು ಕಿಡ್ನಿ ಮಾರಿದ ರೈತ 

ಅಕ್ರಮವಾಗಿ ಸಾಲ ನೀಡುವವರಿಂದ 1 ಲಕ್ಷ ಸಾಲ ಪಡೆದಿದ್ದು, ಅದಕ್ಕೆ ಹೆಚ್ಚಿನ ದಿನದ ಬಡ್ಡಿ ಸೇರಿ 75 ಲಕ್ಷ ಸಾಲ ಏರಿಕೆಯಾದ ಕಾರಣ ವ್ಯಕ್ತಿಯೊಬ್ಬ ತನ್ನ ಕಿಡ್ನಿಯನ್ನೇ ಮಾರಾಟ ಮಾಡಿರುವ ಘಟನೆ ಮಹಾರಾಷ್ಟ್ರದಲ್ಲಿ...