Homeಕರ್ನಾಟಕಅಗ್ನಿಪಥ್‌‌: ಬೆಳಗಾವಿಯಲ್ಲಿ ಆಂದೋಲನ ತಡೆಯಲು ಬಿಗಿ ಭದ್ರತೆ; ವಿದ್ಯಾರ್ಥಿ ನಾಯಕರು ವಶಕ್ಕೆ

ಅಗ್ನಿಪಥ್‌‌: ಬೆಳಗಾವಿಯಲ್ಲಿ ಆಂದೋಲನ ತಡೆಯಲು ಬಿಗಿ ಭದ್ರತೆ; ವಿದ್ಯಾರ್ಥಿ ನಾಯಕರು ವಶಕ್ಕೆ

- Advertisement -
- Advertisement -

ರಕ್ಷಣಾ ಪಡೆಗಳಲ್ಲಿ ಗುತ್ತಿಗೆ ಮಾದರಿಯ ನೇಮಕಾತಿ ಯೋಜನೆಯಾದ ಅಗ್ನಿಪಥ್ ಯೋಜನೆಯ ವಿರುದ್ಧ ಯಾವುದೇ ರೀತಿಯ ಆಂದೋಲನಗಳನ್ನು ತಡೆಯಲು ಬೆಳಗಾವಿ ಪೊಲೀಸರು ಭದ್ರತಾ ಕ್ರಮಗಳನ್ನು ಬಿಗಿಗೊಳಿಸಿದ್ದಾರೆ ಎಂದು ದಿ ಹಿಂದೂ ಪತ್ರಿಕೆ ವರದಿ ಮಾಡಿದೆ. ಈ ಮಧ್ಯೆ ‘ಅಗ್ನಿಪಥ್’ ವಿರುದ್ಧ ಪ್ರತಿಭಟನೆ ನಡೆಸುತ್ತಿದ್ದ ಯುವಕರನ್ನು ಮುಂಜಾಗ್ರತಾ ಕ್ರಮವಾಗಿ ವಶಕ್ಕೆ ತೆಗೆದುಕೊಳ್ಳಲಾಗಿದೆ ಎಂದು ಪತ್ರಿಕೆ ಹೇಳಿದೆ.

ಪೊಲೀಸರು ಕೆಲವು ಯುವ ಮುಖಂಡರನ್ನು ಮುಂಜಾಗ್ರತಾ ಕ್ರಮವಾಗಿ ವಶಕ್ಕೆ ತೆಗೆದುಕೊಂಡಿದ್ದಾರೆ. ಅಖಿಲ ಭಾರತ ಪ್ರಜಾಸತ್ತಾತ್ಮಕ ಯುವ ಸಂಘಟನೆ (AIDYO) ಮುಖಂಡ ಸಿದ್ದಲಿಂಗ ಬಾಗೇವಾಡಿ ಹಾಗೂ ರಾಜು ಗಾಣಗಿ ಅವರನ್ನು ಬಂಧಿಸಲಾಗಿದೆ.
ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ
₹100 ₹200 ₹500 ₹1000 Others

ಬೆಳಗಾವಿಯಲ್ಲಿ ಸೋಮವಾರದ ಪ್ರತಿಭಟನೆಗೆ ಅನುಮತಿ ಪಡೆಯಲು ಭಾನುವಾರ ಖಡೇ ಬಜಾರ್ ಪೊಲೀಸ್ ಠಾಣೆಗೆ ತೆರಳಿದ್ದ ಇಬ್ಬರು ಮುಖಂಡರನ್ನು ವಶಕ್ಕೆ ಪಡೆಯಲಾಗಿದೆ ಎಂದು  AIDYO ಕಾರ್ಯಕರ್ತರು ತಿಳಿಸಿದ್ದಾರೆ.

ಇದನ್ನೂ ಓದಿ: ಬಿಹಾರ, ಯುಪಿಯಲ್ಲಿ ‘ಅಗ್ನಿಪಥ್‌ ಯೋಜನೆ’ ವಿರೋಧಿಸಿ ಸೇನಾ ಆಕಾಂಕ್ಷಿಗಳ ಬೃಹತ್‌‌ ಪ್ರತಿಭಟನೆ

ರಾಣಿ ಚನ್ನಮ್ಮ ವೃತ್ತ ಮತ್ತು ಸುತ್ತಮುತ್ತಲಿನ ಪ್ರದೇಶಗಳಲ್ಲಿ ಜಮಾಯಿಸಿದ ವಿದ್ಯಾರ್ಥಿಗಳು ಹೋರಾಟಗಾರರನ್ನು ಪೊಲೀಸರು ವಶಕ್ಕೆ ಪಡೆದು ಬಸ್‌ಗಳಲ್ಲಿ ಕರೆದೊಯ್ದರು. ಕನಿಷ್ಠ ಎರಡು ಬಸ್‌ಗಳು ವಿದ್ಯಾರ್ಥಿಗಳನ್ನು ವಶಕ್ಕೆ ಪಡೆಯಲಾಗಿದೆ ಎಂದು ಹೋರಾಟಗಾರರು ಹೇಳಿದ್ದಾರೆ.

ಪ್ರಧಾನಿ ನರೇಂದ್ರ ಮೋದಿ ಅವರು ಕರ್ನಾಟಕಕ್ಕೆ ಭೇಟಿ ನೀಡುತ್ತಿರುವ ದಿನದಂದು ಎಐಡಿಎಸ್‌ಒ, ಎಐಡಿವೈಒ ಮುಂತಾದ ಸಂಘಟನೆಗಳು ಪ್ರತಿಭಟನೆ ನಡೆಸಲು ಮುಂದಾಗಿವೆ ಎಂಬ ಮಾಹಿತಿ ಲಭ್ಯವಾಗಿದೆ ಎಂದು ಹಿರಿಯ ಪೊಲೀಸ್ ಅಧಿಕಾರಿಯೊಬ್ಬರ ಹೇಳಿಕೆಯನ್ನು ದಿ ಹಿಂದೂ ಉಲ್ಲೇಖಿಸಿದೆ.

ಆದರೆ ಇದನ್ನು ಎಐಡಿಎಸ್‌ಒ ಮುಖಂಡರು ನಿರಾಕರಿಸಿದ್ದು, “ಇದು ಅಖಿಲ ಭಾರತ ಕರೆಯಾಗಿತ್ತು. ಪ್ರಧಾನಿ ಭೇಟಿಗೂ ಇದಕ್ಕೂ ಸಂಬಂಧವಿಲ್ಲ. ಇದು ಸಂಪೂರ್ಣವಾಗಿ ಕಾಕತಾಳೀಯ’’ ಎಂದು ಸಂಚಾಲಕ ಮಹಾಂತೇಶ ಬಿ. ಹೇಳಿದ್ದಾರೆ.

ಇದನ್ನೂ ಓದಿ: ಅಗ್ನಿಪಥ್‌‌‌‌‌ ಯೋಜನೆ ವಿರೋಧಿಸಿ ಹಲವು ರಾಜ್ಯಗಳಲ್ಲಿ ಪ್ರತಿಭಟನೆ: ಬಿಹಾರ ಬಿಜೆಪಿ ಕಚೇರಿಗೆ ಬೆಂಕಿ ಹಚ್ಚಿ ಧ್ವಂಸ

ಪೊಲೀಸರ ತಂಡವೂ ಸಾಮಾಜಿಕ ಜಾಲತಾಣಗಳಲ್ಲಿ ಸಕ್ರಿಯವಾಗಿತ್ತು. ಎಡಪಂಥೀಯ ಸಂಘಟನೆಗಳು ಸೋಮವಾರ ಪ್ರತಿಭಟನೆಗೆ ಕರೆ ನೀಡಿದ ವಿಚಾರವನ್ನು ಸಾಮಾಜಿಕ ಮಾಧ್ಯಮದಲ್ಲಿ ಯುವ ಇನ್ಸ್‌ಪೆಕ್ಟರ್  ಪತ್ತೆಹಚ್ಚಿದ್ದಾರೆ ಎಂದು ‘ದಿ ಹಿಂದೂ’ ಹೇಳಿದೆ.

ಹಲವು ವಿದ್ಯಾರ್ಥಿ ನಾಯಕರ ವಾಟ್ಸಾಪ್ ಮತ್ತು ಇತರ ಸಾಮಾಜಿಕ ಮಾಧ್ಯಮ ಖಾತೆಗಳನ್ನು ಪೊಲೀಸರು ನಿರ್ಬಂಧಿಸಿದ್ದಾರೆ ಎಂದು ಹೋರಾಟಗಾರರು ದೂರಿದ್ದಾರೆ. ಜನರು ಗುಂಪು ಸೇರಿರುವ ವೀಡಿಯೊಗಳನ್ನು ಸೆರೆಹಿಡಿಯಲು ಪೊಲೀಸರು ಡ್ರೋನ್‌ಗಳನ್ನು ಬಳಸಿದ್ದಾರೆ. ಯುವಕರನ್ನು ಬೀದಿಗಿಳಿಸಲು ಪ್ರೇರೇಪಿಸುತ್ತಿದ್ದಾರೆಯೇ ಎಂಬುವುದನ್ನು ಗಮನಿಸಲು ಸೈನಿಕರ ಪರೀಕ್ಷಾ ತರಬೇತಿ ಕೇಂದ್ರಗಳ ನಿಗಾ ವಹಿಸಿದ್ದಾರೆ.

ಕೆಲವು ತುರ್ತು ಸ್ಪಂದನಾ ಘಟಕದ ವ್ಯಾನ್‌ಗಳು ಮತ್ತು ಚನ್ನಮ್ಮ ಪಡೆ ವಾಹನಗಳು ಕಾಲೇಜುಗಳ ಬಳಿ ನಿಂತಿದ್ದವು ಎಂದು ವರದಿ ಉಲ್ಲೇಖಿಸಿದೆ. ಬೆಳಗಾವಿಯ ಹಲವು ಪಟ್ಟಣಗಳ ರೈಲ್ವೆ ನಿಲ್ದಾಣ, ಬಸ್ ನಿಲ್ದಾಣಗಳಲ್ಲಿ ಪೊಲೀಸರು ಬೀಡುಬಿಟ್ಟು, ವಿದ್ಯಾರ್ಥಿಗಳು ಪ್ರತಿಭಟನೆಗೆ ಸೇರುತ್ತಿದ್ದಾರೆಯೇ ಎಂದು ತಿಳಿಯಲು ಕಾನ್ಸ್‌ಟೇಬಲ್‌ಗಳು ವಿದ್ಯಾರ್ಥಿಗಳ ಗುರುತಿನ ಚೀಟಿಗಳನ್ನು ಪರಿಶೀಲಿಸಿದ್ದಾರೆ.

ಇದನ್ನೂ ಓದಿ: ಅಗ್ನಿಪಥ್‌ ಯೋಜನೆ: ಯುವಕರಿಗೆ 4 ವರ್ಷಗಳಲ್ಲ, ಪೂರ್ಣಾವಧಿಯ ಉದ್ಯೋಗ ನೀಡಿ- ಕೇಜ್ರಿವಾಲ್ ಒತ್ತಾಯ

ರಾಪಿಡ್ ಆಕ್ಷನ್ ಫೋರ್ಸ್ (RAF) ತುಕಡಿಯು ನಗರದ ಸೂಕ್ಷ್ಮ ಪ್ರದೇಶಗಳ ಮಾರ್ಗದಲ್ಲಿ ಪಥಸಂಚಲನ ನಡೆಸಿದೆ. ಆರ್‌ಎಎಫ್ ಸಿಬ್ಬಂದಿ ರಾಣಿ ಚನ್ನಮ್ಮ ವೃತ್ತದಲ್ಲಿ ತಮ್ಮ ಟ್ರಕ್‌ನಲ್ಲಿ ಅಳವಡಿಸಲಾದ ನೀರಿನ ಫಿರಂಗಿಗಳನ್ನು ಪರೀಕ್ಷಿಸಿ, ಸಂಜೆವರೆಗೂ ವೃತ್ತದಲ್ಲಿ ನಿಲ್ಲಿಸಲಾಗಿತ್ತು ಎಂದು ವರದಿಯು ಉಲ್ಲೇಖಿಸಿದೆ.

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ಸ್ಪೇನ್‌ಗೆ ನುಗ್ಗಿದ ಸಾವಿರಾರು ಮೊರಾಕನ್ನರು : ಬೃಹತ್ ವಲಸೆಯ ಹಿಂದೆ ಇಸ್ರೇಲ್ ಕುತಂತ್ರ?

ಮೊರಾಕೊದಿಂದ ಸ್ಪೇನ್‌ನ ಸಿಯುಟಾ ನಗರಕ್ಕೆ ಸಾವಿರಾರು ವಲಸಿಗರು ನುಗ್ಗಿದ ಬಿಕ್ಕಟ್ಟಿನ ಹಿಂದೆ ಇಸ್ರೇಲ್ ಕೈವಾಡವಿದೆ ಎಂಬ ಆರೋಪಗಳು ಕೇಳಿ ಬಂದಿದ್ದು, ಸಾಮಾಜಿಕ ಜಾಲತಾಣಗಳಲ್ಲಿ ಇಸ್ರೇಲ್‌ನ ಕುತಂತ್ರ ಬುದ್ದಿಯ ಬಗ್ಗೆ ಭಾರೀ ಚರ್ಚೆಗಳು ನಡೆಯುತ್ತಿವೆ. ಇದೇ...

‘ಸಾವರ್ಕರ್ ದೇವರನ್ನು, ಧಾರ್ಮಿಕ ನಂಬಿಕೆಗಳನ್ನು ಪ್ರಶ್ನಿಸಿದ್ದರು’: ಪುಣೆ ನ್ಯಾಯಾಲಯದಲ್ಲಿ ಮೊಮ್ಮಗ ಸತ್ಯಕಿ ಸಾವರ್ಕರ್ ಒಪ್ಪಿಗೆ

ಪುಣೆ: ಕಾಂಗ್ರೆಸ್ ನಾಯಕ ಹಾಗೂ ಸಂಸತ್ತಿನ ವಿರೋಧ ಪಕ್ಷದ ನಾಯಕ ರಾಹುಲ್ ಗಾಂಧಿ ವಿರುದ್ಧ ದಾಖಲಾಗಿರುವ ಕ್ರಿಮಿನಲ್ ಮಾನನಷ್ಟ ಮೊಕದ್ದಮೆಯ ವಿಚಾರಣೆಯು ಅತ್ಯಂತ ಕುತೂಹಲಕಾರಿ ಮತ್ತು ರಾಜಕೀಯ-ಸೈದ್ಧಾಂತಿಕ ತಿರುವನ್ನು ಪಡೆದುಕೊಂಡಿದೆ. ವಿನಾಯಕ ದಾಮೋದರ್...

ಮಾಜಿ ಸಚಿವ ಧರ್ಮೇಂದ್ರ ಪ್ರಧಾನ್ ಮಗಳ ಫೋನ್ ಬಿಲ್ ವಿವಾದ: ₹68 ಸಾವಿರ ಬಿಲ್-ಪೇ ಆಗಿದ್ದು ಸರ್ಕಾರಿ ಹಣದಲ್ಲಾ?

ಮಾಜಿ ಕೇಂದ್ರ ಶಿಕ್ಷಣ ಸಚಿವ ಧರ್ಮೇಂದ್ರ ಪ್ರಧಾನ್ ಅವರ ಪುತ್ರಿ ನೈಮಿಷಾ ಪ್ರಧಾನ್ ಅವರು ಮತ್ತೊಮ್ಮೆ ವಿವಾದದ ಕೇಂದ್ರಬಿಂದುವಾಗಿದ್ದಾರೆ. ವಾರಗಳ ಹಿಂದೆ ನೀಟ್ ಪರೀಕ್ಷೆಯ ಪತ್ರಿಕೆ ಸೋರಿಕೆ ಖಂಡಿಸಿ ಕಾಕ್ರೋಚ್ ಜನತಾ ಪಾರ್ಟಿ...

ಇರಾನ್ ವಸತಿ ಕಟ್ಟಡದ ಮೇಲೆ ಅಮೆರಿಕಾ ದಾಳಿ: ಎರಡು ವರ್ಷದ ಮಗು ಸೇರಿ ಒಂದೇ ಕುಟುಂಬದ ಮೂವರ ಸಾವು

ಮಧ್ಯಪ್ರಾಚ್ಯದಲ್ಲಿ ಅಮೆರಿಕ ತನ್ನ ಸಾಮ್ರಾಜ್ಯಶಾಹಿ ಆಧಿಪತ್ಯ ಸ್ಥಾಪನೆಗಾಗಿ ನಡೆಸುತ್ತಿರುವ ಯುದ್ಧಕೋರ ನೀತಿ ಮತ್ತೊಮ್ಮೆ ನಿರಪರಾಧಿ ಸಾರ್ವಜನಿಕರ ರಕ್ತ ಹರಿಸಿದೆ. ಇರಾನ್ ಮೇಲಿನ ಅಮೆರಿಕ ಪಡೆಗಳ ಸರಣಿ ಮತ್ತು ಭೀಕರ ಬಾಂಬ್ ದಾಳಿಗಳು ಕೇವಲ...

SIR: ASDDO ಪಟ್ಟಿಯಲ್ಲಿ ಬೆಂಗಳೂರಿಗೆ ಪ್ರಥಮ ಸ್ಥಾನ, ರಾಜ್ಯದಲ್ಲಿ 2 ಕೋಟಿ ಮತದಾರರ ಹೆಸರು ರದ್ದಾಗುವ ಬೀತಿ

ಕರ್ನಾಟಕದಲ್ಲಿ ನಡೆಯುತ್ತಿರುವ ಮತದಾರರ ಪಟ್ಟಿಯ ವಿಶೇಷ ಸಮಗ್ರ ಪರಿಷ್ಕರಣೆ (SIR) ಪ್ರಕ್ರಿಯೆಯಲ್ಲಿ ರಾಜಧಾನಿ ಬೆಂಗಳೂರು ಅತ್ಯಂತ ಪ್ರಮುಖ ಹಾಗೂ ಕಳವಳಕಾರಿ ಕೇಂದ್ರವಾಗಿ ಹೊರಹೊಮ್ಮಿದೆ. ರಾಜ್ಯದಲ್ಲಿರುವ ಒಟ್ಟು 5.54 ಕೋಟಿ ನೋಂದಾಯಿತ ಮತದಾರರ ಪೈಕಿ...

ಉಮರ್ ಖಾಲಿದ್ ಜಾಮೀನು ಅರ್ಜಿ; ಪೊಲೀಸರ ನಿಲುವು ಕೇಳಿದ ದೆಹಲಿ ಹೈಕೋರ್ಟ್

ಫೆಬ್ರವರಿ 2020 ರಲ್ಲಿ ಈಶಾನ್ಯ ದೆಹಲಿಯಲ್ಲಿ ನಡೆದ ಗಲಭೆಯ ಹಿಂದಿನ "ದೊಡ್ಡ ಪಿತೂರಿ"ಗೆ ಸಂಬಂಧಿಸಿದಂತೆ ಭಯೋತ್ಪಾದನಾ ವಿರೋಧಿ ಕಾನೂನು ಯುಎಪಿಎ ಅಡಿಯಲ್ಲಿ ಪ್ರಕರಣದಲ್ಲಿ ಜಾಮೀನು ಕೋರಿ ಉಮರ್ ಖಾಲಿದ್ ಸಲ್ಲಿಸಿದ ಅರ್ಜಿಯ ಕುರಿತು...

ಮುಂಬೈ: ‘ಶಾಲಾ ಜಿಹಾದ್’ ಎಂಬ ಬಿಜೆಪಿ ನಾಯಕನ ಕೋಮುದ್ವೇಷಕ್ಕೆ ಶಾಲೆಗೆ ನುಗ್ಗಿದ ಬುಲ್ಡೋಜರ್: ಬಿಎಂಸಿಗೆ ಚಾಟಿ ಬೀಸಿದ ಬಾಂಬೆ ಹೈಕೋರ್ಟ್

ಬಿಜೆಪಿ ನಾಯಕ ಕಿರೀಟ್ ಸೋಮಯ್ಯ ಅವರ “ಶಾಲಾ ಜಿಹಾದ್” ಎಂಬ ವಿಷಕಾರಿ ಹೇಳಿಕೆಯ ನಂತರ ಮುಂಬೈನ ಗೋವಂಡಿಯಲ್ಲಿ ಬಡ ಮುಸ್ಲಿಂ ಮಕ್ಕಳ ಶಿಕ್ಷಣದ ಆಶಾಕಿರಣವಾಗಿದ್ದ ತೆಹ್ಜೀಬ್ ಇಸ್ಲಾಮಿಕ್ ಇಂಗ್ಲಿಷ್ ಶಾಲೆಯನ್ನು ಬೃಹನ್ಮುಂಬೈ ಮುನ್ಸಿಪಲ್...

ಹಾಕಿ ತಂಡಕ್ಕೆ ಕೇಸರಿ ಜರ್ಸಿ: ‘ನಮ್ಮ ಗುರುತೇ ನೀಲಿ, ಕೇಸರಿ ಬಣ್ಣದ ತರ್ಕವೇನು?’: ಮಾಜಿ ಹಾಕಿ ಪಟು ಆಕ್ರೋಶ: ಬಿಜೆಪಿ ನಡೆಗೆ ವಿಪಕ್ಷಗಳ ಟೀಕೆ

ಭಾರತೀಯ ಕ್ರೀಡಾರಂಗದ ಹೆಮ್ಮೆಯ ಸಾಂಪ್ರದಾಯಿಕ 'ನೀಲಿ' (ಬ್ಲೂ) ಬಣ್ಣವನ್ನು ಕಳಚಿ, ಹಾಕಿ ತಂಡಕ್ಕೆ ಬಲವಂತವಾಗಿ ಕೇಸರಿ ಬಣ್ಣದ ಜೆರ್ಸಿ ತೊಡಿಸಲು ಹೊರಟಿರುವುದು ಇದೀಗ ತೀವ್ರ ಆಕ್ರೋಶಕ್ಕೆ ಕಾರಣವಾಗಿದೆ. ಮುಂಬರುವ ಎಫ್‌ಐಎಚ್ (FIH) ವಿಶ್ವಕಪ್‌ಗಾಗಿ...

ತಮಿಳುನಾಡು: ಶಾಲಾ ಮಕ್ಕಳಿಗೆ ವಾರಕ್ಕೊಮ್ಮೆ ಚಿಕನ್ ಬಿರಿಯಾನಿ ನೀಡಲು ಚಿಂತನೆ

ತಮಿಳುನಾಡಿನ ಸರ್ಕಾರಿ ಶಾಲೆಗಳ ಮಧ್ಯಾಹ್ನದ ಬಿಸಿಊಟದ ಯೋಜನೆಯಡಿಯಲ್ಲಿ ವಿದ್ಯಾರ್ಥಿಗಳಿಗೆ ವಾರಕ್ಕೊಮ್ಮೆ ಚಿಕನ್ ಬಿರಿಯಾನಿ ನೀಡುವ ಪ್ರಸ್ತಾವನೆಯನ್ನು ತಮಿಳುನಾಡು ಸರ್ಕಾರ ಪರಿಶೀಲಿಸುತ್ತಿದ್ದು, ಶಾಲಾ ಶಿಕ್ಷಣ ಸಚಿವ ರಾಜ್‌ಮೋಹನ್ ಅವರು ಈ ಕುರಿತು ಮುಖ್ಯಮಂತ್ರಿ ಸಿ....

ಪ್ರಶ್ನೆಪತ್ರಿಕೆ ಸೋರಿಕೆ ವಿರೋಧಿ ಮಸೂದೆಯಲ್ಲಿ ಸುಧಾರಣೆಗಳಿಲ್ಲ, ರಾಜಕೀಯ ಮಾತ್ರ: ಕೇಂದ್ರದ ವಿರುದ್ಧ ಖರ್ಗೆ ವಾಗ್ದಾಳಿ

ಪಬ್ಲಿಕ್ ಪರೀಕ್ಷೆಗಳ (ಅನ್ಯಾಯಯುತ ವಿಧಾನಗಳ ತಡೆಗಟ್ಟುವಿಕೆ) ತಿದ್ದುಪಡಿ ಮಸೂದೆ 2026 ರ ಚರ್ಚೆಯ ಸಂದರ್ಭದಲ್ಲಿ ಮಾತನಾಡಿದ ರಾಜ್ಯಸಭೆ ವಿರೋಧ ಪಕ್ಷದ ನಾಯಕ ಮಲ್ಲಿಕಾರ್ಜುನ ಖರ್ಗೆ ಕೇಂದ್ರ ಸರ್ಕಾರದ ಮೇಲೆ ತೀವ್ರ ವಾಗ್ದಾಳಿ ನಡೆಸಿದರು....