Homeಕರ್ನಾಟಕಅಗ್ನಿಪಥ್‌‌: ಬೆಳಗಾವಿಯಲ್ಲಿ ಆಂದೋಲನ ತಡೆಯಲು ಬಿಗಿ ಭದ್ರತೆ; ವಿದ್ಯಾರ್ಥಿ ನಾಯಕರು ವಶಕ್ಕೆ

ಅಗ್ನಿಪಥ್‌‌: ಬೆಳಗಾವಿಯಲ್ಲಿ ಆಂದೋಲನ ತಡೆಯಲು ಬಿಗಿ ಭದ್ರತೆ; ವಿದ್ಯಾರ್ಥಿ ನಾಯಕರು ವಶಕ್ಕೆ

- Advertisement -
- Advertisement -

ರಕ್ಷಣಾ ಪಡೆಗಳಲ್ಲಿ ಗುತ್ತಿಗೆ ಮಾದರಿಯ ನೇಮಕಾತಿ ಯೋಜನೆಯಾದ ಅಗ್ನಿಪಥ್ ಯೋಜನೆಯ ವಿರುದ್ಧ ಯಾವುದೇ ರೀತಿಯ ಆಂದೋಲನಗಳನ್ನು ತಡೆಯಲು ಬೆಳಗಾವಿ ಪೊಲೀಸರು ಭದ್ರತಾ ಕ್ರಮಗಳನ್ನು ಬಿಗಿಗೊಳಿಸಿದ್ದಾರೆ ಎಂದು ದಿ ಹಿಂದೂ ಪತ್ರಿಕೆ ವರದಿ ಮಾಡಿದೆ. ಈ ಮಧ್ಯೆ ‘ಅಗ್ನಿಪಥ್’ ವಿರುದ್ಧ ಪ್ರತಿಭಟನೆ ನಡೆಸುತ್ತಿದ್ದ ಯುವಕರನ್ನು ಮುಂಜಾಗ್ರತಾ ಕ್ರಮವಾಗಿ ವಶಕ್ಕೆ ತೆಗೆದುಕೊಳ್ಳಲಾಗಿದೆ ಎಂದು ಪತ್ರಿಕೆ ಹೇಳಿದೆ.

ಪೊಲೀಸರು ಕೆಲವು ಯುವ ಮುಖಂಡರನ್ನು ಮುಂಜಾಗ್ರತಾ ಕ್ರಮವಾಗಿ ವಶಕ್ಕೆ ತೆಗೆದುಕೊಂಡಿದ್ದಾರೆ. ಅಖಿಲ ಭಾರತ ಪ್ರಜಾಸತ್ತಾತ್ಮಕ ಯುವ ಸಂಘಟನೆ (AIDYO) ಮುಖಂಡ ಸಿದ್ದಲಿಂಗ ಬಾಗೇವಾಡಿ ಹಾಗೂ ರಾಜು ಗಾಣಗಿ ಅವರನ್ನು ಬಂಧಿಸಲಾಗಿದೆ.
ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ
₹100 ₹200 ₹500 ₹1000 Others

ಬೆಳಗಾವಿಯಲ್ಲಿ ಸೋಮವಾರದ ಪ್ರತಿಭಟನೆಗೆ ಅನುಮತಿ ಪಡೆಯಲು ಭಾನುವಾರ ಖಡೇ ಬಜಾರ್ ಪೊಲೀಸ್ ಠಾಣೆಗೆ ತೆರಳಿದ್ದ ಇಬ್ಬರು ಮುಖಂಡರನ್ನು ವಶಕ್ಕೆ ಪಡೆಯಲಾಗಿದೆ ಎಂದು  AIDYO ಕಾರ್ಯಕರ್ತರು ತಿಳಿಸಿದ್ದಾರೆ.

ಇದನ್ನೂ ಓದಿ: ಬಿಹಾರ, ಯುಪಿಯಲ್ಲಿ ‘ಅಗ್ನಿಪಥ್‌ ಯೋಜನೆ’ ವಿರೋಧಿಸಿ ಸೇನಾ ಆಕಾಂಕ್ಷಿಗಳ ಬೃಹತ್‌‌ ಪ್ರತಿಭಟನೆ

ರಾಣಿ ಚನ್ನಮ್ಮ ವೃತ್ತ ಮತ್ತು ಸುತ್ತಮುತ್ತಲಿನ ಪ್ರದೇಶಗಳಲ್ಲಿ ಜಮಾಯಿಸಿದ ವಿದ್ಯಾರ್ಥಿಗಳು ಹೋರಾಟಗಾರರನ್ನು ಪೊಲೀಸರು ವಶಕ್ಕೆ ಪಡೆದು ಬಸ್‌ಗಳಲ್ಲಿ ಕರೆದೊಯ್ದರು. ಕನಿಷ್ಠ ಎರಡು ಬಸ್‌ಗಳು ವಿದ್ಯಾರ್ಥಿಗಳನ್ನು ವಶಕ್ಕೆ ಪಡೆಯಲಾಗಿದೆ ಎಂದು ಹೋರಾಟಗಾರರು ಹೇಳಿದ್ದಾರೆ.

ಪ್ರಧಾನಿ ನರೇಂದ್ರ ಮೋದಿ ಅವರು ಕರ್ನಾಟಕಕ್ಕೆ ಭೇಟಿ ನೀಡುತ್ತಿರುವ ದಿನದಂದು ಎಐಡಿಎಸ್‌ಒ, ಎಐಡಿವೈಒ ಮುಂತಾದ ಸಂಘಟನೆಗಳು ಪ್ರತಿಭಟನೆ ನಡೆಸಲು ಮುಂದಾಗಿವೆ ಎಂಬ ಮಾಹಿತಿ ಲಭ್ಯವಾಗಿದೆ ಎಂದು ಹಿರಿಯ ಪೊಲೀಸ್ ಅಧಿಕಾರಿಯೊಬ್ಬರ ಹೇಳಿಕೆಯನ್ನು ದಿ ಹಿಂದೂ ಉಲ್ಲೇಖಿಸಿದೆ.

ಆದರೆ ಇದನ್ನು ಎಐಡಿಎಸ್‌ಒ ಮುಖಂಡರು ನಿರಾಕರಿಸಿದ್ದು, “ಇದು ಅಖಿಲ ಭಾರತ ಕರೆಯಾಗಿತ್ತು. ಪ್ರಧಾನಿ ಭೇಟಿಗೂ ಇದಕ್ಕೂ ಸಂಬಂಧವಿಲ್ಲ. ಇದು ಸಂಪೂರ್ಣವಾಗಿ ಕಾಕತಾಳೀಯ’’ ಎಂದು ಸಂಚಾಲಕ ಮಹಾಂತೇಶ ಬಿ. ಹೇಳಿದ್ದಾರೆ.

ಇದನ್ನೂ ಓದಿ: ಅಗ್ನಿಪಥ್‌‌‌‌‌ ಯೋಜನೆ ವಿರೋಧಿಸಿ ಹಲವು ರಾಜ್ಯಗಳಲ್ಲಿ ಪ್ರತಿಭಟನೆ: ಬಿಹಾರ ಬಿಜೆಪಿ ಕಚೇರಿಗೆ ಬೆಂಕಿ ಹಚ್ಚಿ ಧ್ವಂಸ

ಪೊಲೀಸರ ತಂಡವೂ ಸಾಮಾಜಿಕ ಜಾಲತಾಣಗಳಲ್ಲಿ ಸಕ್ರಿಯವಾಗಿತ್ತು. ಎಡಪಂಥೀಯ ಸಂಘಟನೆಗಳು ಸೋಮವಾರ ಪ್ರತಿಭಟನೆಗೆ ಕರೆ ನೀಡಿದ ವಿಚಾರವನ್ನು ಸಾಮಾಜಿಕ ಮಾಧ್ಯಮದಲ್ಲಿ ಯುವ ಇನ್ಸ್‌ಪೆಕ್ಟರ್  ಪತ್ತೆಹಚ್ಚಿದ್ದಾರೆ ಎಂದು ‘ದಿ ಹಿಂದೂ’ ಹೇಳಿದೆ.

ಹಲವು ವಿದ್ಯಾರ್ಥಿ ನಾಯಕರ ವಾಟ್ಸಾಪ್ ಮತ್ತು ಇತರ ಸಾಮಾಜಿಕ ಮಾಧ್ಯಮ ಖಾತೆಗಳನ್ನು ಪೊಲೀಸರು ನಿರ್ಬಂಧಿಸಿದ್ದಾರೆ ಎಂದು ಹೋರಾಟಗಾರರು ದೂರಿದ್ದಾರೆ. ಜನರು ಗುಂಪು ಸೇರಿರುವ ವೀಡಿಯೊಗಳನ್ನು ಸೆರೆಹಿಡಿಯಲು ಪೊಲೀಸರು ಡ್ರೋನ್‌ಗಳನ್ನು ಬಳಸಿದ್ದಾರೆ. ಯುವಕರನ್ನು ಬೀದಿಗಿಳಿಸಲು ಪ್ರೇರೇಪಿಸುತ್ತಿದ್ದಾರೆಯೇ ಎಂಬುವುದನ್ನು ಗಮನಿಸಲು ಸೈನಿಕರ ಪರೀಕ್ಷಾ ತರಬೇತಿ ಕೇಂದ್ರಗಳ ನಿಗಾ ವಹಿಸಿದ್ದಾರೆ.

ಕೆಲವು ತುರ್ತು ಸ್ಪಂದನಾ ಘಟಕದ ವ್ಯಾನ್‌ಗಳು ಮತ್ತು ಚನ್ನಮ್ಮ ಪಡೆ ವಾಹನಗಳು ಕಾಲೇಜುಗಳ ಬಳಿ ನಿಂತಿದ್ದವು ಎಂದು ವರದಿ ಉಲ್ಲೇಖಿಸಿದೆ. ಬೆಳಗಾವಿಯ ಹಲವು ಪಟ್ಟಣಗಳ ರೈಲ್ವೆ ನಿಲ್ದಾಣ, ಬಸ್ ನಿಲ್ದಾಣಗಳಲ್ಲಿ ಪೊಲೀಸರು ಬೀಡುಬಿಟ್ಟು, ವಿದ್ಯಾರ್ಥಿಗಳು ಪ್ರತಿಭಟನೆಗೆ ಸೇರುತ್ತಿದ್ದಾರೆಯೇ ಎಂದು ತಿಳಿಯಲು ಕಾನ್ಸ್‌ಟೇಬಲ್‌ಗಳು ವಿದ್ಯಾರ್ಥಿಗಳ ಗುರುತಿನ ಚೀಟಿಗಳನ್ನು ಪರಿಶೀಲಿಸಿದ್ದಾರೆ.

ಇದನ್ನೂ ಓದಿ: ಅಗ್ನಿಪಥ್‌ ಯೋಜನೆ: ಯುವಕರಿಗೆ 4 ವರ್ಷಗಳಲ್ಲ, ಪೂರ್ಣಾವಧಿಯ ಉದ್ಯೋಗ ನೀಡಿ- ಕೇಜ್ರಿವಾಲ್ ಒತ್ತಾಯ

ರಾಪಿಡ್ ಆಕ್ಷನ್ ಫೋರ್ಸ್ (RAF) ತುಕಡಿಯು ನಗರದ ಸೂಕ್ಷ್ಮ ಪ್ರದೇಶಗಳ ಮಾರ್ಗದಲ್ಲಿ ಪಥಸಂಚಲನ ನಡೆಸಿದೆ. ಆರ್‌ಎಎಫ್ ಸಿಬ್ಬಂದಿ ರಾಣಿ ಚನ್ನಮ್ಮ ವೃತ್ತದಲ್ಲಿ ತಮ್ಮ ಟ್ರಕ್‌ನಲ್ಲಿ ಅಳವಡಿಸಲಾದ ನೀರಿನ ಫಿರಂಗಿಗಳನ್ನು ಪರೀಕ್ಷಿಸಿ, ಸಂಜೆವರೆಗೂ ವೃತ್ತದಲ್ಲಿ ನಿಲ್ಲಿಸಲಾಗಿತ್ತು ಎಂದು ವರದಿಯು ಉಲ್ಲೇಖಿಸಿದೆ.

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

‘ಉಮರ್ ಖಾಲಿದ್ ಒಬ್ಬ ದೇಶಭಕ್ತ..’; ಸಾಕ್ಷ್ಯಚಿತ್ರ ಪ್ರದರ್ಶನ ವಿರೋಧಿಸಿದ ಎಬಿವಿಪಿ ವಿರುದ್ಧ ಹರಿಪ್ರಸಾದ್ ವಾಗ್ದಾಳಿ

ಬೆಂಗಳೂರಿನ ನ್ಯಾಷನಲ್ ಲಾ ಸ್ಕೂಲ್ ಆಫ್ ಇಂಡಿಯಾ ಯುನಿವರ್ಸಿಟಿಯಲ್ಲಿ (ಎನ್‌ಎಲ್‌ಎಸ್‌ಐಯು) ಹೋರಾಟಗಾರ ಉಮರ್ ಖಾಲಿದ್ ಕುರಿತ ಸಾಕ್ಷ್ಯಚಿತ್ರ ಪ್ರದರ್ಶನವನ್ನು ವಿರೋಧಿಸಿದ್ದಕ್ಕಾಗಿ ಕರ್ನಾಟಕ ಪ್ರದೇಶ ಕಾಂಗ್ರೆಸ್ ಸಮಿತಿ ಅಧ್ಯಕ್ಷ ಬಿಕೆ ಹರಿಪ್ರಸಾದ್ ಅವರು ಮಂಗಳವಾರ...

ಜಂತರ್ ಮಂತರ್ ಹಲ್ಲೆ ಪ್ರಕರಣ: ಎಸ್‌ಸಿ/ಎಸ್‌ಟಿ, ಪೋಕ್ಸೊ ಕಾಯ್ದೆಯಡಿ ಬಂಧಿಸಲಾಗಿದ್ದ ಆರೋಪಿ ಸ್ವತಂತ್ರ ಭಾರದ್ವಾಜ್‌ಗೆ ಮಧ್ಯಂತರ ಜಾಮೀನು

ನವದೆಹಲಿ: ಜಂತರ್ ಮಂತರ್‌ನಲ್ಲಿ ನಡೆದ ಪ್ರತಿಭಟನೆಯ ಸಂದರ್ಭದಲ್ಲಿ ವ್ಯಕ್ತಿಯೊಬ್ಬರ ಮೇಲೆ ಹಲ್ಲೆ ನಡೆಸಿದ ಆರೋಪ ಎದುರಿಸುತ್ತಿರುವ ಸ್ವತಂತ್ರ ಭಾರದ್ವಾಜ್‌ಗೆ ದೆಹಲಿಯ ಪಟಿಯಾಲ ಹೌಸ್ ನ್ಯಾಯಾಲಯ ಮೂರು ವಾರಗಳ ಮಧ್ಯಂತರ ಜಾಮೀನು ಮಂಜೂರು ಮಾಡಿದೆ....

ವಿಡಿಯೋದಲ್ಲಿ ‘ಅಸ್ಸಲಾಮು ಅಲೈಕುಮ್’ – ‘ಇನ್ಶಾ ಅಲ್ಲಾ’ ಎಂದಿದ್ದಕ್ಕೆ ಐಪಿಎಸ್ ಅಧಿಕಾರಿ ವರ್ಗಾವಣೆ

'ಅಸ್ಸಲಾಮು ಅಲೈಕುಮ್' ಮತ್ತು 'ಇನ್ಶಾ ಅಲ್ಲಾ' ಎಂದಿದ್ದಕ್ಕೆ ಬಲಪಂಥೀಯ ಸಂಘಟನೆಯೊಂದು ಪಶ್ಚಿಮ ಬಂಗಾಳದ ಗೃಹ ಕಾರ್ಯದರ್ಶಿಗೆ ದೂರು ನೀಡಿದ ಬೆನ್ನಲ್ಲೇ, ಭಾರತೀಯ ಪೊಲೀಸ್ ಸೇವೆ (ಐಪಿಎಸ್) ಅಧಿಕಾರಿ ಬುಷ್ರಾ ಬಾನೋ ಅವರನ್ನು ವರ್ಗಾವಣೆ...

ಪಾನ್ ಮಸಾಲಾ ಜಾಹೀರಾತು ವಿವಾದ: ಶಾರುಖ್, ಅಜಯ್ , ಶ್ರಾಫ್‌ ಅರ್ಜಿ ವಜಾಗೊಳಿಸಿದ ದೆಹಲಿ ಹೈಕೋರ್ಟ್‌

ವಿಮಲ್ ಇಲಾಯಚಿ ಹೆಸರಿನಲ್ಲಿ ನಿಷೇಧಿತ ಪಾನ್ ಮಸಾಲಾ ಉತ್ಪನ್ನದ ಪರೋಕ್ಷ ಪ್ರಚಾರ ನಡೆಸಿದ ಆರೋಪಕ್ಕೆ ಸಂಬಂಧಿಸಿದಂತೆ ಬಾಲಿವುಡ್ ನಟರಾದ ಶಾರುಖ್ ಖಾನ್, ಅಜಯ್ ದೇವಗನ್ ಹಾಗೂ ಟೈಗರ್ ಶ್ರಾಫ್ ಅವರಿಗೆ ಮಹಾರಾಷ್ಟ್ರ ಆಹಾರ...

“ಏಕರೂಪತೆಯು ಸಮಾನತೆಯಲ್ಲ”: 21 ಎನ್‌ಡಿಎ ಆಡಳಿತದ ರಾಜ್ಯಗಳಲ್ಲಿ ಯುಸಿಸಿ ಜಾರಿ ಕುರಿತ ಅಮಿತ್ ಶಾ ಘೋಷಣೆಗೆ ವಿಪಕ್ಷಗಳ ಕಿಡಿ

2029ರ ಲೋಕಸಭಾ ಚುನಾವಣೆಗೂ ಮುನ್ನ ಬಿಜೆಪಿ ನೇತೃತ್ವದ ಎನ್‌ಡಿಎ ಆಡಳಿತವಿರುವ ಎಲ್ಲಾ 21 ರಾಜ್ಯಗಳಲ್ಲಿ ಏಕರೂಪ ನಾಗರಿಕ ಸಂಹಿತೆಯನ್ನು (ಯುಸಿಸಿ) ಜಾರಿಗೊಳಿಸಲಾಗುವುದು ಎಂದು ಅಮಿತ್ ಶಾ ಘೋಷಿಸಿದ ಬೆನ್ನಲ್ಲೇ, ವಿಪಕ್ಷಗಳು ಬಿಜೆಪಿ ತನ್ನ...

ಉತ್ತರ ಪ್ರದೇಶ| ಫಿರೋಜಾಬಾದ್ ಖಾಕಿ ದೌರ್ಜನ್ಯ; ಪೊಲೀಸರ ಭೂಟು ಕಾಲಿನ ಒದೆತಕ್ಕೆ ಗರ್ಭಿಣಿ ಸಾವು

ಉತ್ತರ ಪ್ರದೇಶದ ಫಿರೋಜಾಬಾದ್‌ನ ಶಿಕೋಹಾಬಾದ್ ಪ್ರದೇಶದಲ್ಲಿ ಕಳ್ಳತನ ಪ್ರಕರಣದ ಶಂಕಿತ ಆರೋಪಿಯೊಬ್ಬನನ್ನು ಬಂಧಿಸಲು ಬಂದಿದ್ದ ಪೊಲೀಸರು ಆತನ ಗರ್ಭಿಣಿ ಹೆಂಡತಿಗೆ ಒದ್ದಿದ್ದರಿಂದ ಆಕೆ ಮೃತಪಟ್ಟಿದ್ದು, ಈ ಘಟನೆಗೆ ಸಂಬಂಧಿಸಿದಂತೆ ಇಬ್ಬರು ಸಬ್‌ಇನ್ಸ್‌ಪೆಕ್ಟರ್‌ಗಳು ಸೇರಿದಂತೆ...

ಕೋಲ್ಕತ್ತಾ | 48 ದಿನಗಳಿಂದ ಮುಸ್ಲಿಂ ಕಾಲೋನಿಗೆ ನೀರು ಬಂದ್ : ಬಿಜೆಪಿ ಸರ್ಕಾರದಿಂದ ದ್ವೇಷ ಸಾಧನೆ ಆರೋಪ

ಉತ್ತರ ಕೋಲ್ಕತ್ತಾದ ಕಾಶಿಪುರದ ಜ್ಯೋತಿನಗರ ಕಾಲೋನಿ ನಿವಾಸಿಗಳು ಕಳೆದ 48 ದಿನಗಳಿಂದ ಕುಡಿಯುವ ನೀರಿಗಾಗಿ ಹಾಹಾಕಾರಪಡುತ್ತಿದ್ದಾರೆ. ಇಲ್ಲಿನ ನೂರಾರು ಕುಟುಂಬಗಳಿಗೆ ನೀರಿನ ಮೂಲವಾಗಿರುವ ಐದು ಸಾರ್ವಜನಿಕ ನಲ್ಲಿಗಳು ಸಂಪೂರ್ಣವಾಗಿ ಒಣಗಿ ಹೋಗಿವೆ. ಇದರಿಂದಾಗಿ...

ಗುರುಗ್ರಾಮ| ಮಹಿಳಾ ಬೈಕರ್‌ಗೆ ಡಿಕ್ಕಿ ಹೊಡೆದು ಪರಾರಿಯಾಗಿದ್ದ ಕಾರು ಚಾಲಕನ ಬಂಧನ

ಗುರುಗ್ರಾಮದಲ್ಲಿ ಮಹಿಳಾ ಸ್ಪೋರ್ಟ್ಸ್ ಬೈಕ್ ಸವಾರೆಗೆ ಕಾರಿನಿಂದ ಡಿಕ್ಕಿ ಹೊಡೆದು ಪರಾರಿಯಾಗಿದ್ದ ಪ್ರಕರಣಕ್ಕೆ ಸಂಬಂಧಿಸಿದಂತೆ, ಚಾಲಕ ಕಲ್ಯಾಣ್ ಬೈನ್ಸ್ಲಾನನ್ನು ರಾಜಸ್ಥಾನದ ರಾಜ್‌ಗಢದಲ್ಲಿ ಮಂಗಳವಾರ ಬಂಧಿಸಲಾಗಿದೆ ಎಂದು ಗುರುಗ್ರಾಮ ಕಮಿಷನರ್ ಸಿಬಾಶ್ ಕಬೀರಾಜ್ ತಿಳಿಸಿದ್ದಾರೆ. ಈ...

ಸರ್ಕಾರ ಆಧಾರ್ ವ್ಯವಸ್ಥೆಯನ್ನು ನಂಬುವುದಾದರೆ, SIR‌ ತಪಾಸಣೆಗೂ ಇದನ್ನೇ ಬಳಸಲಿ: ಆರ್‌ ಎಸ್‌ ಶರ್ಮಾ ಸಲಹೆ

ಪ್ರಸ್ತುತ ಚರ್ಚೆಯಲ್ಲಿರುವ ಮತದಾರರ ಪಟ್ಟಿ ಪರಿಷ್ಕರಣೆ (SIR) ಮತ್ತು ದಾಖಲೆಗಳ ತಪಾಸಣೆ ಪ್ರಕ್ರಿಯೆಗೆ ಸಂಬಂಧಿಸಿದಂತೆ ಆಧಾರ್‌ ವ್ಯವಸ್ಥೆಯ ಮಾಜಿ ಮುಖ್ಯಸ್ಥ (UIDAI) ಶರ್ಮಾ ಅವರು ಮಹತ್ವದ ಸಲಹೆಯೊಂದನ್ನು ನೀಡಿದ್ದಾರೆ. ಪ್ರತಿ ಬಾರಿ ಸಾವಿರಾರು...

ಸೋಶಿಯಲ್ ಮೀಡಿಯಾಗಳಲ್ಲಿ ಅಪ್ರಾಪ್ತರಿಗೆ ಹೆಚ್ಚುತ್ತಿರುವ ಅಪಾಯ; ಲೈಂಗಿಕ ಶೋಷಣೆ ತಡೆಗೆ ಮೆಟಾದಿಂದ ಮಹತ್ವದ ನಿರ್ಧಾರ!

ಸಾಮಾಜಿಕ ಜಾಲತಾಣಗಳ ಬಳಕೆ ಯುವಜನರು ಮತ್ತು ಮಕ್ಕಳ ದೈನಂದಿನ ಬದುಕಿನ ಅವಿಭಾಜ್ಯ ಭಾಗವಾಗಿರುವ ಬೆನ್ನಲ್ಲೇ, ಆನ್‌ಲೈನ್‌ನಲ್ಲಿ ಮಕ್ಕಳ ಲೈಂಗಿಕ ಶೋಷಣೆ ಮತ್ತು ದೌರ್ಜನ್ಯಕ್ಕೆ ಸಂಬಂಧಿಸಿದ ಪ್ರಕರಣಗಳನ್ನು ಎದುರಿಸಲು ಮೆಟಾ ಮಹತ್ವದ ನಿರ್ಧಾರ ಕೈಗೊಂಡಿದೆ....