Homeಕರ್ನಾಟಕಅಗ್ನಿಪಥ್‌‌: ಬೆಳಗಾವಿಯಲ್ಲಿ ಆಂದೋಲನ ತಡೆಯಲು ಬಿಗಿ ಭದ್ರತೆ; ವಿದ್ಯಾರ್ಥಿ ನಾಯಕರು ವಶಕ್ಕೆ

ಅಗ್ನಿಪಥ್‌‌: ಬೆಳಗಾವಿಯಲ್ಲಿ ಆಂದೋಲನ ತಡೆಯಲು ಬಿಗಿ ಭದ್ರತೆ; ವಿದ್ಯಾರ್ಥಿ ನಾಯಕರು ವಶಕ್ಕೆ

- Advertisement -
- Advertisement -

ರಕ್ಷಣಾ ಪಡೆಗಳಲ್ಲಿ ಗುತ್ತಿಗೆ ಮಾದರಿಯ ನೇಮಕಾತಿ ಯೋಜನೆಯಾದ ಅಗ್ನಿಪಥ್ ಯೋಜನೆಯ ವಿರುದ್ಧ ಯಾವುದೇ ರೀತಿಯ ಆಂದೋಲನಗಳನ್ನು ತಡೆಯಲು ಬೆಳಗಾವಿ ಪೊಲೀಸರು ಭದ್ರತಾ ಕ್ರಮಗಳನ್ನು ಬಿಗಿಗೊಳಿಸಿದ್ದಾರೆ ಎಂದು ದಿ ಹಿಂದೂ ಪತ್ರಿಕೆ ವರದಿ ಮಾಡಿದೆ. ಈ ಮಧ್ಯೆ ‘ಅಗ್ನಿಪಥ್’ ವಿರುದ್ಧ ಪ್ರತಿಭಟನೆ ನಡೆಸುತ್ತಿದ್ದ ಯುವಕರನ್ನು ಮುಂಜಾಗ್ರತಾ ಕ್ರಮವಾಗಿ ವಶಕ್ಕೆ ತೆಗೆದುಕೊಳ್ಳಲಾಗಿದೆ ಎಂದು ಪತ್ರಿಕೆ ಹೇಳಿದೆ.

ಪೊಲೀಸರು ಕೆಲವು ಯುವ ಮುಖಂಡರನ್ನು ಮುಂಜಾಗ್ರತಾ ಕ್ರಮವಾಗಿ ವಶಕ್ಕೆ ತೆಗೆದುಕೊಂಡಿದ್ದಾರೆ. ಅಖಿಲ ಭಾರತ ಪ್ರಜಾಸತ್ತಾತ್ಮಕ ಯುವ ಸಂಘಟನೆ (AIDYO) ಮುಖಂಡ ಸಿದ್ದಲಿಂಗ ಬಾಗೇವಾಡಿ ಹಾಗೂ ರಾಜು ಗಾಣಗಿ ಅವರನ್ನು ಬಂಧಿಸಲಾಗಿದೆ.
ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ
₹100 ₹200 ₹500 ₹1000 Others

ಬೆಳಗಾವಿಯಲ್ಲಿ ಸೋಮವಾರದ ಪ್ರತಿಭಟನೆಗೆ ಅನುಮತಿ ಪಡೆಯಲು ಭಾನುವಾರ ಖಡೇ ಬಜಾರ್ ಪೊಲೀಸ್ ಠಾಣೆಗೆ ತೆರಳಿದ್ದ ಇಬ್ಬರು ಮುಖಂಡರನ್ನು ವಶಕ್ಕೆ ಪಡೆಯಲಾಗಿದೆ ಎಂದು  AIDYO ಕಾರ್ಯಕರ್ತರು ತಿಳಿಸಿದ್ದಾರೆ.

ಇದನ್ನೂ ಓದಿ: ಬಿಹಾರ, ಯುಪಿಯಲ್ಲಿ ‘ಅಗ್ನಿಪಥ್‌ ಯೋಜನೆ’ ವಿರೋಧಿಸಿ ಸೇನಾ ಆಕಾಂಕ್ಷಿಗಳ ಬೃಹತ್‌‌ ಪ್ರತಿಭಟನೆ

ರಾಣಿ ಚನ್ನಮ್ಮ ವೃತ್ತ ಮತ್ತು ಸುತ್ತಮುತ್ತಲಿನ ಪ್ರದೇಶಗಳಲ್ಲಿ ಜಮಾಯಿಸಿದ ವಿದ್ಯಾರ್ಥಿಗಳು ಹೋರಾಟಗಾರರನ್ನು ಪೊಲೀಸರು ವಶಕ್ಕೆ ಪಡೆದು ಬಸ್‌ಗಳಲ್ಲಿ ಕರೆದೊಯ್ದರು. ಕನಿಷ್ಠ ಎರಡು ಬಸ್‌ಗಳು ವಿದ್ಯಾರ್ಥಿಗಳನ್ನು ವಶಕ್ಕೆ ಪಡೆಯಲಾಗಿದೆ ಎಂದು ಹೋರಾಟಗಾರರು ಹೇಳಿದ್ದಾರೆ.

ಪ್ರಧಾನಿ ನರೇಂದ್ರ ಮೋದಿ ಅವರು ಕರ್ನಾಟಕಕ್ಕೆ ಭೇಟಿ ನೀಡುತ್ತಿರುವ ದಿನದಂದು ಎಐಡಿಎಸ್‌ಒ, ಎಐಡಿವೈಒ ಮುಂತಾದ ಸಂಘಟನೆಗಳು ಪ್ರತಿಭಟನೆ ನಡೆಸಲು ಮುಂದಾಗಿವೆ ಎಂಬ ಮಾಹಿತಿ ಲಭ್ಯವಾಗಿದೆ ಎಂದು ಹಿರಿಯ ಪೊಲೀಸ್ ಅಧಿಕಾರಿಯೊಬ್ಬರ ಹೇಳಿಕೆಯನ್ನು ದಿ ಹಿಂದೂ ಉಲ್ಲೇಖಿಸಿದೆ.

ಆದರೆ ಇದನ್ನು ಎಐಡಿಎಸ್‌ಒ ಮುಖಂಡರು ನಿರಾಕರಿಸಿದ್ದು, “ಇದು ಅಖಿಲ ಭಾರತ ಕರೆಯಾಗಿತ್ತು. ಪ್ರಧಾನಿ ಭೇಟಿಗೂ ಇದಕ್ಕೂ ಸಂಬಂಧವಿಲ್ಲ. ಇದು ಸಂಪೂರ್ಣವಾಗಿ ಕಾಕತಾಳೀಯ’’ ಎಂದು ಸಂಚಾಲಕ ಮಹಾಂತೇಶ ಬಿ. ಹೇಳಿದ್ದಾರೆ.

ಇದನ್ನೂ ಓದಿ: ಅಗ್ನಿಪಥ್‌‌‌‌‌ ಯೋಜನೆ ವಿರೋಧಿಸಿ ಹಲವು ರಾಜ್ಯಗಳಲ್ಲಿ ಪ್ರತಿಭಟನೆ: ಬಿಹಾರ ಬಿಜೆಪಿ ಕಚೇರಿಗೆ ಬೆಂಕಿ ಹಚ್ಚಿ ಧ್ವಂಸ

ಪೊಲೀಸರ ತಂಡವೂ ಸಾಮಾಜಿಕ ಜಾಲತಾಣಗಳಲ್ಲಿ ಸಕ್ರಿಯವಾಗಿತ್ತು. ಎಡಪಂಥೀಯ ಸಂಘಟನೆಗಳು ಸೋಮವಾರ ಪ್ರತಿಭಟನೆಗೆ ಕರೆ ನೀಡಿದ ವಿಚಾರವನ್ನು ಸಾಮಾಜಿಕ ಮಾಧ್ಯಮದಲ್ಲಿ ಯುವ ಇನ್ಸ್‌ಪೆಕ್ಟರ್  ಪತ್ತೆಹಚ್ಚಿದ್ದಾರೆ ಎಂದು ‘ದಿ ಹಿಂದೂ’ ಹೇಳಿದೆ.

ಹಲವು ವಿದ್ಯಾರ್ಥಿ ನಾಯಕರ ವಾಟ್ಸಾಪ್ ಮತ್ತು ಇತರ ಸಾಮಾಜಿಕ ಮಾಧ್ಯಮ ಖಾತೆಗಳನ್ನು ಪೊಲೀಸರು ನಿರ್ಬಂಧಿಸಿದ್ದಾರೆ ಎಂದು ಹೋರಾಟಗಾರರು ದೂರಿದ್ದಾರೆ. ಜನರು ಗುಂಪು ಸೇರಿರುವ ವೀಡಿಯೊಗಳನ್ನು ಸೆರೆಹಿಡಿಯಲು ಪೊಲೀಸರು ಡ್ರೋನ್‌ಗಳನ್ನು ಬಳಸಿದ್ದಾರೆ. ಯುವಕರನ್ನು ಬೀದಿಗಿಳಿಸಲು ಪ್ರೇರೇಪಿಸುತ್ತಿದ್ದಾರೆಯೇ ಎಂಬುವುದನ್ನು ಗಮನಿಸಲು ಸೈನಿಕರ ಪರೀಕ್ಷಾ ತರಬೇತಿ ಕೇಂದ್ರಗಳ ನಿಗಾ ವಹಿಸಿದ್ದಾರೆ.

ಕೆಲವು ತುರ್ತು ಸ್ಪಂದನಾ ಘಟಕದ ವ್ಯಾನ್‌ಗಳು ಮತ್ತು ಚನ್ನಮ್ಮ ಪಡೆ ವಾಹನಗಳು ಕಾಲೇಜುಗಳ ಬಳಿ ನಿಂತಿದ್ದವು ಎಂದು ವರದಿ ಉಲ್ಲೇಖಿಸಿದೆ. ಬೆಳಗಾವಿಯ ಹಲವು ಪಟ್ಟಣಗಳ ರೈಲ್ವೆ ನಿಲ್ದಾಣ, ಬಸ್ ನಿಲ್ದಾಣಗಳಲ್ಲಿ ಪೊಲೀಸರು ಬೀಡುಬಿಟ್ಟು, ವಿದ್ಯಾರ್ಥಿಗಳು ಪ್ರತಿಭಟನೆಗೆ ಸೇರುತ್ತಿದ್ದಾರೆಯೇ ಎಂದು ತಿಳಿಯಲು ಕಾನ್ಸ್‌ಟೇಬಲ್‌ಗಳು ವಿದ್ಯಾರ್ಥಿಗಳ ಗುರುತಿನ ಚೀಟಿಗಳನ್ನು ಪರಿಶೀಲಿಸಿದ್ದಾರೆ.

ಇದನ್ನೂ ಓದಿ: ಅಗ್ನಿಪಥ್‌ ಯೋಜನೆ: ಯುವಕರಿಗೆ 4 ವರ್ಷಗಳಲ್ಲ, ಪೂರ್ಣಾವಧಿಯ ಉದ್ಯೋಗ ನೀಡಿ- ಕೇಜ್ರಿವಾಲ್ ಒತ್ತಾಯ

ರಾಪಿಡ್ ಆಕ್ಷನ್ ಫೋರ್ಸ್ (RAF) ತುಕಡಿಯು ನಗರದ ಸೂಕ್ಷ್ಮ ಪ್ರದೇಶಗಳ ಮಾರ್ಗದಲ್ಲಿ ಪಥಸಂಚಲನ ನಡೆಸಿದೆ. ಆರ್‌ಎಎಫ್ ಸಿಬ್ಬಂದಿ ರಾಣಿ ಚನ್ನಮ್ಮ ವೃತ್ತದಲ್ಲಿ ತಮ್ಮ ಟ್ರಕ್‌ನಲ್ಲಿ ಅಳವಡಿಸಲಾದ ನೀರಿನ ಫಿರಂಗಿಗಳನ್ನು ಪರೀಕ್ಷಿಸಿ, ಸಂಜೆವರೆಗೂ ವೃತ್ತದಲ್ಲಿ ನಿಲ್ಲಿಸಲಾಗಿತ್ತು ಎಂದು ವರದಿಯು ಉಲ್ಲೇಖಿಸಿದೆ.

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ರಾಜ್ಯಸಭಾ ಚುನಾವಣೆ: ಕರ್ನಾಟದಿಂದ ಆಯ್ಕೆಯಾದ ಪ್ರತಿನಿಧಿಗಳಿಂದ ರಾಜ್ಯಕ್ಕೆ ಲಾಭವಾಗಿದೆಯೇ?

ರಾಜ್ಯಸಭೆಗೆ ಪ್ರತಿಬಾರಿ ಚುನಾವಣೆ ನಡೆಯುವಾಗಲೂ ಈ ಚರ್ಚೆಗಳು ಸಾಮಾನ್ಯ. ಕನ್ನಡೇತರರು ಇಲ್ಲಿಂದ ಆಯ್ಕೆಯಾಗಿ ಇಲ್ಲಿಯ ಸಮಸ್ಯೆಗಳ ಬಗ್ಗೆ ಮಾತನಾಡುವುದಿಲ್ಲ ಎಂಬ ವಾಸ್ತವದ ಜೊತೆಜೊತೆಗೆ, ರಾಜ್ಯಸಭೆಗೆ ಆಯ್ಕೆಯಾಗುವ ಕನ್ನಡವರಾದರೂ ಮಾತನಾಡುತ್ತಾರಾ? ಎಂದರೆ ಅದಕ್ಕೂ ನಮ್ಮಲ್ಲಿ...

ಬಂಗಾಳದಲ್ಲಿ ಬಿಜೆಪಿ ಬೆಂಬಲಿಗರ ಕ್ರೌರ್ಯ: ಅಭಿಷೇಕ್ ಬಳಿಕ ಕಲ್ಯಾಣ್‌ ಬ್ಯಾನರ್ಜಿ ಮೇಲೆ ಮಾರಣಾಂತಿಕ ದಾಳಿ

ಪಶ್ಚಿಮ ಬಂಗಾಳದ ತೃಣಮೂಲ ಕಾಂಗ್ರೆಸ್ (ಟಿಎಂಸಿ) ಸಂಸದ ಕಲ್ಯಾಣ್ ಬ್ಯಾನರ್ಜಿ ಅವರು ಭಾನುವಾರ (ಮೇ 31), ಹೂಗ್ಲಿ ಜಿಲ್ಲೆಯಲ್ಲಿ ನಡೆದಿದ್ದ ಚುನಾವಣೋತ್ತರ ಹಿಂಸಾಚಾರದಲ್ಲಿ ಕಾರ್ಯಕರ್ತರ ಬಂಧನದ ವಿರುದ್ಧ ಮನವಿ ಪತ್ರ ಸಲ್ಲಿಸಲು ಭೇಟಿ...

ಬಸ್ತಾರ್‌: ಬುಡಕಟ್ಟು ಕ್ರಿಶ್ಚಿಯನ್ ಕುಟುಂಬಗಳಿಗೆ ಬೆದರಿಕೆ, ಥಳಿತ, ಹಿಂದೂ ಧರ್ಮ ಸ್ವೀಕರಿಸಲು ಬಲವಂತ: ಘನತೆಯ ಬದುಕಿಗಾಗಿ ಆದಿವಾಸಿಗಳ ಹೋರಾಟ

ಛತ್ತೀಸ್‌ಗಢದ ದಟ್ಟ ಅರಣ್ಯಗಳು ಮತ್ತು ಕಡಿದಾದ ಬೆಟ್ಟಗಳಿಂದ ಆವೃತವಾಗಿರುವ ಬಸ್ತಾರ್ ಕಣಿವೆಯು ತನ್ನ ವಿಶಿಷ್ಟ ಬುಡಕಟ್ಟು ಸಂಸ್ಕೃತಿ ಮತ್ತು ಪ್ರಾಕೃತಿಕ ಸಂಪತ್ತಿಗೆ ಹೆಸರುವಾಸಿ. ಆದರೆ ಇತ್ತೀಚಿನ ವರ್ಷಗಳಲ್ಲಿ, ಈ ಪ್ರಶಾಂತ ಭೂಭಾಗವು ತೀವ್ರಗಾಮಿ...

ಗಾಝಾದಲ್ಲಿ ರಕ್ತಸಿಕ್ತ ಈದ್: ಇಸ್ರೇಲ್ ಭೀಕರ ದಾಳಿಗೆ 26 ಪ್ಯಾಲೆಸ್ಟೀನಿಯನ್ನರು ಬಲಿ, ವಿಶ್ವಸಂಸ್ಥೆ ತೀವ್ರ ಆತಂಕ

ಗಾಝಾ: ಇಸ್ಲಾಂ ಧರ್ಮದ ಅತ್ಯಂತ ಪವಿತ್ರ ದಿನಗಳಲ್ಲಿ ಒಂದಾದ ‘ಈದ್ ಅಲ್-ಅಧಾ’ ಹಬ್ಬದ ಸಂದರ್ಭದಲ್ಲೂ ಗಾಝಾ ಪಟ್ಟಿಯಲ್ಲಿ ರಕ್ತಪಾತ ಮುಂದುವರಿದಿದ್ದು, ಹಬ್ಬದ ಮುನ್ನಾದಿನದಿಂದ ಆರಂಭಿಸಿ ಇಸ್ರೇಲ್ ಪಡೆಗಳು ನಡೆಸಿದ ಸರಣಿ ದಾಳಿಗಳಲ್ಲಿ ಕನಿಷ್ಠ...

ಜನರಿಗೆ ಇಂಧನ ಉಳಿಸುವ ಪಾಠ, ಪ್ರಧಾನಿಗೆ ರೋಡ್‌ಶೋಗಳ ಆಟ

ಮೇ 10 ರಂದು ಪ್ರಧಾನಮಂತ್ರಿ ನರೇಂದ್ರ ಮೋದಿ ಅವರು ಸಾರ್ವಜನಿಕರಲ್ಲಿ ಮಿತವ್ಯಯದ ಅಪೀಲು ಮಾಡಿದ್ದು, ಇಂಧನ ಬಳಕೆಯನ್ನು ಕನಿಷ್ಠ ಮಟ್ಟಕ್ಕೆ ಇಳಿಸುವಂತೆ ಕೋರಿದ್ದರು. ಜನರು ಖಾಸಗಿ ವಾಹನಗಳ ಬಳಕೆಯನ್ನು ಬಿಟ್ಟು ಸಾರ್ವಜನಿಕ ಸಾರಿಗೆಯನ್ನು...

ಏಷ್ಯನ್ ಗೇಮ್ಸ್‌ ಟ್ರಯಲ್ಸ್‌ನಲ್ಲಿ ಸ್ಪರ್ಧಿಸಲು ವಿನೇಶ್ ಫೋಗಟ್‌ಗೆ ಅನುಮತಿಸಿದ ಭಾರತೀಯ ಕುಸ್ತಿ ಒಕ್ಕೂಟ

ಮಾಜಿ ವಿಶ್ವ ಚಾಂಪಿಯನ್‌ಶಿಪ್ ಪದಕ ವಿಜೇತೆ ವಿನೇಶ್ ಫೋಗಟ್ ಅವರು (ಮೇ 30) ಏಷ್ಯನ್ ಗೇಮ್ಸ್ ಆಯ್ಕೆ ಟ್ರಯಲ್ಸ್‌ನಲ್ಲಿ ಮಹಿಳೆಯರ 53 ಕೆಜಿ ವಿಭಾಗದಲ್ಲಿ ಸ್ಪರ್ಧಿಸಲು ಅವಕಾಶ ಪಡೆದಿದ್ದಾರೆ. ಭಾರತೀಯ ಕುಸ್ತಿ ಒಕ್ಕೂಟ...

Uttarakhand | ಬಜರಂಗದಳದ ಕಾರ್ಯಕರ್ತರು ಈಗ ದ್ವೇಷ ಬಿತ್ತುವ ವೃತ್ತಿಪರ ಇನ್‌ಫ್ಲ್ಯುಯೆನ್ಸರ್ಸ್!

ಈ ವರ್ಷದ ಆರಂಭದಲ್ಲಿ ಉತ್ತರಾಖಂಡದ ಕೋಟದ್ವಾರದಲ್ಲಿ ಹಿಂದುತ್ವ ಗುಂಪೊಂದು ವೃದ್ಧ ಮುಸ್ಲಿಂ ವ್ಯಕ್ತಿಯೊಬ್ಬರ ಅಂಗಡಿಗೆ ನುಗ್ಗಿ, ಅಂಗಡಿಯ ಹೆಸರಾದ ‘ಬಾಬಾ’ ಎಂಬುವುದನ್ನು ಬದಲಾಯಿಸುವಂತೆ ಒತ್ತಾಯಿಸಿತ್ತು. ‘ಬಾಬಾ’ ಎಂಬುವುದು ‘ಹಿಂದೂ’ ಹೆಸರಾಗಿದೆ ಎಂದು ಆ...

​ನಿಗಿ ನಿಗಿ ಕೆಂಡದಂತಾಗಿರುವ ಬಿಡದಿ, ಡಿಕೆಶಿಗೆ ಬಿಸಿ ತುಪ್ಪದಂತಾದ ರೈತರು

​ಬದಲಾದ ರಾಜಕೀಯ ಸಂದರ್ಭದಲ್ಲಿ ಕರ್ನಾಟಕದ ಮುಂದಿನ ಮುಖ್ಯಮಂತ್ರಿ ಎಂದೇ ಬಿಂಬಿತವಾಗಿರುವ ಡಿ.ಕೆ. ಶಿವಕುಮಾರ್ ಪ್ರತಿಷ್ಠೆಯಾಗಿ ತೆಗೆದುಕೊಂಡಿರುವ ಬಿಡದಿಯ ಟೌನ್‌ಶಿಪ್ ಯೋಜನೆಯ ವಿರುದ್ಧ ನಡೆಯುತ್ತಿರುವ ರೈತರ ಹೋರಾಟ ದಿನದಿಂದ ದಿನಕ್ಕೆ ಉಗ್ರ ರೂಪ ಪಡೆಯುತ್ತಿದೆ. ​ಭೂಸ್ವಾಧೀನದ...

ಪ್ರಜಾಪ್ರಭುತ್ವವನ್ನು ಹತ್ತಿಕ್ಕಲು ‘SIR’ ಅನ್ನೇ ಅಸ್ತ್ರವನ್ನಾಗಿಸಿಕೊಂಡ ನರೇಂದ್ರ ಮೋದಿ!

ಪಶ್ಚಿಮ ಬಂಗಾಳದ ವಿಧಾನಸಭಾ ಚುನಾವಣೆಯ ಫಲಿತಾಂಶ ಪ್ರಕಟವಾದ ತಕ್ಷಣ (ಮೇ 4 ರಂದು), ಕಾಳೀಘಾಟ್‌ನಲ್ಲಿರುವ ತಮ್ಮ ನಿವಾಸದಲ್ಲಿ ಸುದ್ದಿಗೋಷ್ಠಿ ನಡೆಸಿದ ಮಾಜಿ ಮುಖ್ಯಮಂತ್ರಿ ಮಮತಾ ಬ್ಯಾನರ್ಜಿ ಅತ್ಯಂತ ಆಕ್ರೋಶದಿಂದ ಮಾತನಾಡಿದ್ದರು. ಅಷ್ಟೇ ಅಲ್ಲದೆ,...

ಕೇರಳದಲ್ಲಿ ಶಾಲಾ ಬಾಲಕಿಯರಿಗೆ ಮೂರು ದಿನ ಮುಟ್ಟಿನ ರಜೆ, ಅಸಂಘಟಿತ ವಲಯದ ಮಹಿಳೆಯರಿಗೆ ಆರು ತಿಂಗಳ ಹೆರಿಗೆ ರಜೆ ಘೋಷಣೆ 

ತಿರುವನಂತಪುರಂ: ಕೇರಳದ ವಿ.ಡಿ. ಸತೀಶನ್ ನೇತೃತ್ವದ ಕಾಂಗ್ರೆಸ್ ಸರ್ಕಾರವು ಮಹಿಳೆಯರಿಗೆ ಹಲವಾರು ಕಲ್ಯಾಣ ಕ್ರಮಗಳನ್ನು ಘೋಷಿಸಿದೆ, ಇದರಲ್ಲಿ ಶಾಲಾ ವಿದ್ಯಾರ್ಥಿಗಳಿಗೆ ಮೂರು ದಿನಗಳ ಮಾಸಿಕ ಮುಟ್ಟಿನ ರಜೆ, ಕೆಲಸದ ಸ್ಥಳಗಳಲ್ಲಿ ಮಹಿಳೆಯರಿಗೆ ಸಮಾನ...