Homeಅಂಕಣಗಳುಸಂಪಾದಕೀಯ | ಕಂಡದ್ದು ಕಂಡಹಾಗೆಸ್ವಾಮಿ ಅಗ್ನಿವೇಶ್ ಮೇಲಿನ ದಾಳಿಯಿಂದ ಭಾರತೀಯರು ಎಚ್ಚೆತ್ತುಕೊಳ್ಳಲಿ...

ಸ್ವಾಮಿ ಅಗ್ನಿವೇಶ್ ಮೇಲಿನ ದಾಳಿಯಿಂದ ಭಾರತೀಯರು ಎಚ್ಚೆತ್ತುಕೊಳ್ಳಲಿ…

- Advertisement -
- Advertisement -

ಯಾವುದೋ ನೆಪದಲ್ಲಿ ಅಸಹಾಯಕ ಒಬ್ಬಂಟಿಗಳ ಮೇಲೆ ಗುಂಪುಗೂಡಿ ಹಲ್ಲೆ ಮಾಡುವ ಘಟನೆಗಳು ನಿತ್ಯದ ಸುದ್ದಿಯಾಗಿಬಿಟ್ಟಿವೆ. ದನದ ಹೆಸರಿನಲ್ಲಿ ಮುಸ್ಲಿಮರು ಮತ್ತು ದಲಿತರನ್ನು, ಮಕ್ಕಳ ಕಳ್ಳರ ಹೆಸರಿನಲ್ಲಿ ಯಾವುದೋ ದಾರಿಹೋಕರನ್ನು ಬಡಿದು ಕೊಲ್ಲುವ ಸುದ್ದಿಗಳು ಮಾಮೂಲಿಯಾಗಿಬಿಟ್ಟಿದೆ. ಬಿಜೆಪಿ ಮಂತ್ರಿಗಳು ಶಾಸಕರೇ ಇಂಥ ಗುಂಪು ಹತ್ಯಾಕೋರರಿಗೆ ಬಹಿರಂಗವಾಗಿ ಹಾರಹಾಕಿ ಸನ್ಮಾನ ಮಾಡುತ್ತಿದ್ದು, ಈ ಗುಂಪುಹತ್ಯೆಗಳಿಗೂ ಬಿಜೆಪಿ ಸರ್ಕಾರಗಳಿಗೂ ಇರುವ ಸಂಬಂಧವನ್ನು ಬಿಚ್ಚಿಡುತ್ತಿವೆ.
ಆದರೆ ಹಿಂದೂ ಧರ್ಮದ ಹೆಸರಿನಲ್ಲಿ ರಾಜಕಾರಣ ಮಾಡುವ ಇದೇ ಬಿಜೆಪಿಗೆ ಸೇರಿದ ಪುಂಡರ ಗುಂಪುಗಳು ಕಾವಿಧಾರಿ ಧಾರ್ಮಿಕ ಸಂತ ಸ್ವಾಮಿ ಅಗ್ನಿವೇಶ್ ಅವರ ಮೇಲೆ ಹಲ್ಲೆ ಮಾಡಿದ್ದರ ಹಿನ್ನೆಲೆಯಾದರೂ ಏನು? ಅವರ ಮೇಲೆ ಕಳೆದ ಒಂದು ತಿಂಗಳಲ್ಲಿ ಎರಡು ಬಾರಿ ಹಲ್ಲೆ ಮಾಡಲಾಗಿದೆ, ಜುಲೈ 17ರಂದು ಜಾರ್ಖಂಡ್‍ನಲ್ಲಿ ಹಾಗೂ ಆಗಸ್ಟ್ 17ರಂದು ನವದೆಹಲಿಯಲ್ಲಿ, ಅದೂ ವಾಜಪೇಯಿಯವರ ಅಂತಿಮ ದರ್ಶನಕ್ಕೆಂದು ತೆರಳಿದ್ದ ವೇಳೆಯಲ್ಲಿ. ಅಂತ್ಯಸಂಸ್ಕಾರಕ್ಕೆ ತಮ್ಮ ವಿರೋಧಿಗಳೇ ಬಂದರೂ ಅವರನ್ನು ಗೌರವದಿಂದ ಕಾಣುವುದು ನಮ್ಮ ಸಂಸ್ಕøತಿ. ಹೀಗಿರುವಾಗ ಅಂಥಾ ಸಂದರ್ಭದಲ್ಲಿ ಧಾರ್ಮಿಕ ಗುರುವೊಬ್ಬರ ಮೇಲೆ ದಾಳಿ ಮಾಡಿಸಬೇಕೆಂದರೆ ಬಲವಾದ ಕಾರಣಗಳಿರಲೇ ಬೇಕಲ್ಲವೆ?
ಸ್ವಾಮಿ ಅಗ್ನಿವೇಶ್ ಅವರೇ ಮಾಧ್ಯಮಗಳಿಗೆ ಪತ್ರ ಬರೆದು ಈ ವಿದ್ಯಮಾನವನ್ನು ವಿವರಿಸಿದ್ದಾರೆ.
“ಪಾಕೂರಿನಲ್ಲಿ ನನ್ನ ಮೇಲೆ ಹಲ್ಲೆಯಾದ ಒಂದು ತಿಂಗಳ ನಂತರ, ಕಳೆದ ಶುಕ್ರವಾರ ನಾನು ಮಾಜಿ ಪ್ರಧಾನಿ ವಾಜಪೇಯಿ ಅವರಿಗೆ ಶ್ರದ್ಧಾಂಜಲಿ ಅರ್ಪಿಸಲು ಹೋಗಿದ್ದಾಗ, ದೆಹಲಿಯ ಬಿಜೆಪಿ ಮುಖ್ಯ ಕಛೇರಿಯ ಮುಂದೆ ಪಕ್ಷದ ಕಾರ್ಯಕರ್ತರ ಒಂದು ಗುಂಪನ್ನು ನನ್ನ ಮೇಲೆ ಛೂ ಬಿಡಲಾಯಿತು. ನಾನು ಕಛೇರಿಯ ಭವನದತ್ತ ನಡೆದು ಹೋಗುತ್ತಿದ್ದಾಗ ನನ್ನನ್ನು ಸುತ್ತುವರೆದು ನನ್ನ ಶಾಲು ಮತ್ತು ಪೇಟವನ್ನು ಎಳೆದು ಹಾಕಿದರು. ನನ್ನನ್ನು ಒಬ್ಬ ದೇಶದ್ರೋಹಿ ಎಂದು ನಿಂದಿಸುತ್ತಾ ಹಲ್ಲೆ ಮಾಡಿದರು. ಅವರು ವಾಸ್ತವದಲ್ಲಿ ವಾಜಪೇಯಿಯವರ ನೆನಪು ಮತ್ತು ಪರಂಪರೆಗೆ ಅವಮಾನ ಮಾಡಿದ್ದರು.
ಜುಲೈ 17ರಂದು ಪಾಕೂರಿನಲ್ಲಿ ನನ್ನ ಮೇಲೆ ಹಲ್ಲೆಯಾದ ತಕ್ಷಣ, ಜಾರ್ಖಂಡ್‍ನ ಬಿಜೆಪಿ ಸರ್ಕಾರದಲ್ಲಿ ಮಂತ್ರಿಯಾಗಿರುವ ಸಿ.ಪಿ.ಸಿಂಗ್ ಅದನ್ನು ಸಮರ್ಥಿಸಿಕೊಳ್ಳುತ್ತಾ ನನ್ನನ್ನು ವಿದೇಶಿ ದುಡ್ಡಿನಿಂದ ಬದುಕುತ್ತಿರುವ ಒಬ್ಬ ‘ಕಪಟ ಸನ್ಯಾಸಿ’ ಎಂದು ಜರೆದಿದ್ದರು. ನನ್ನ ಮೇಲೆ ಹಲ್ಲೆಮಾಡಿದವರ ಜತೆ ತಾವೂ ಶಾಮೀಲಾಗಿದ್ದೇವೆ ಎಂಬುದನ್ನು ತೀರಾ ಎಡವಟ್ಟಾಗಿ ಸಾರ್ವಜನಿಕವಾಗಿ ಒಪ್ಪಿಕೊಂಡ ರೀತಿ ಇದು. ಅವರು ಹೀಗೆ ಒಪ್ಪಿಕೊಳ್ಳದಿದ್ದರೂ, ರಾಜಕಾರಣಿಗಳ ಬೆಂಬಲವಿಲ್ಲದೆ ನಾಗರಿಕನೊಬ್ಬನ ಮೇಲೆ ಹೀಗೆ ಹಾಡಹಗಲೇ ಪೂರ್ವನಿಯೋಜಿತ ಹಿಂಸೆ ನಡೆಯಲು ಸಾಧ್ಯವಿಲ್ಲ ಎನ್ನುವುದು ಸ್ವಯಂವೇದ್ಯ. ಈ ಹಿಂಸೆ ಸ್ವಯಂಪ್ರೇರಿತವಾಗಿ ನಡೆಯಿತು ಎಂಬುದು ಅಪ್ಪಟ ಸುಳ್ಳು. ಪ್ರೀತಿ ಮಾತ್ರ ತನ್ನಿಂದತಾನೆ ಮೂಡಬಲ್ಲದು. ಅದಕ್ಕೆ ನೋಡಿ, ‘ಮೊದಲ ನೋಟದ ಪ್ರೇಮ’ ಎಂಬ ಸೊಗಸಾದ ಪರಿಕಲ್ಪನೆ ಇದೆ. ಮೊದಲ ನೋಟದಲ್ಲಿ ಎಂದಿಗೂ ದ್ವೇಷ ಮೂಡಿಬರಲು ಸಾಧ್ಯವಿಲ್ಲ. ಹಿಂಸೆಯು ನಿಸರ್ಗಕ್ಕೆ ವಿರುದ್ಧವಾದುದು. ವೈಚಾರಿಕತೆ, ಕರುಣೆ ಮತ್ತು ಇನ್ನೊಬ್ಬರನ್ನು ಗೌರವಿಸುವ ಮಾನವೀಯತೆಯನ್ನು ತುಳಿದು ಹತ್ತಿಕ್ಕಿದ ನಂತರವೇ ಹಿಂಸೆ ಶುರುವಾಗುತ್ತದೆ. ನಿಶಸ್ತ್ರರಾದ ಮನುಷ್ಯರ ಮೇಲೆ ನಡೆಯುವ ಹಿಂಸೆಯನ್ನು ಮಾನವೀಯತೆಯ ವಿರುದ್ಧದ ಹಿಂಸಾಚಾರ ಎಂದೇ ನಾವು ಭಾವಿಸಬೇಕಾಗುತ್ತದೆ….
ಪಾಕೂರ್ ದಾಳಿ ನಡೆದು ಒಂದು ತಿಂಗಳಾದರೂ ಎಫ್‍ಐಆರ್‍ನಲ್ಲಿ ಉಲ್ಲೇಖಿಸಿರುವ ಎಂಟು ಮಂದಿಯ ಪೈಕಿ ಯಾರೊಬ್ಬರನ್ನೂ ಈವರೆಗೆ ಬಂಧಿಸಿಲ್ಲ.”
ನೆನಪಿಡಿ, ಈ ದಾಳಿ ನಡೆದದ್ದು ಹಾಡಹಗಲಿನಲ್ಲಿ. ಹಲ್ಲೆಯ ಘಟನಾವಳಿಯ ವಿಡಿಯೋಗಳು ಸಾಮಾಜಿಕ ಜಾಲತಾಣದ ತುಂಬಾ ಹರಿದಾಡುತ್ತಿವೆ. ಮೇಲಾಗಿ ಹಲ್ಲೆ ಮಾಡಿದವರನ್ನು ಗುರುತಿಸಿ, ಅವರ ಹೆಸರುಗಳನ್ನೂ ಪೊಲೀಸ್ ದೂರಿನಲ್ಲಿ ನಮೂದಿಸಲಾಗಿದೆ. ಸರ್ಕಾರವೇ ಮುಂದೆ ನಿಂತು ಈ ದಾಳಿ ನಡೆಸಿದೆ ಎಂದು ನಂಬಲು ಇಷ್ಟು ಸಾಕು.
ಸ್ವಾಮಿ ಅಗ್ನಿವೇಶ್‍ರನ್ನು ‘ಹಿಂದೂ ವಿರೋಧಿ’ ಎಂದು ಬ್ರಾಂಡ್ ಮಾಡುವ ಕೆಲಸ ಎಗ್ಗಿಲ್ಲದೆ ಸಾಗಿದೆ. ಹಾಗಿದ್ದರೆ ಅಗ್ನಿವೇಶ್ ಅವರು ಬಯಸುವ ಹಿಂದೂ ಧರ್ಮಕ್ಕೂ ಆರೆಸ್ಸೆಸ್-ಬಿಜೆಪಿಗಳು ಬಯಸುತ್ತಿರುವ ಹಿಂದೂ ಧರ್ಮಕ್ಕೂ ಏನು ವ್ಯತ್ಯಾಸ?
ಅಗ್ನಿವೇಶ್ ಬರೆಯುತ್ತಾರೆ: “ಸಾಮಾಜಿಕ ನ್ಯಾಯಕ್ಕಾಗಿ ಬದುಕು ಮುಡಿಪಿಟ್ಟಿರುವ ನಾನು ಆರ್‍ಎಸ್‍ಎಸ್ ಪಾಲಿಗೆ ಬಹುಕಾಲದಿಂದ ಕಣ್ಣುಬೇನೆಯಾಗಿದ್ದೇನೆ. ನ್ಯಾಯಕ್ಕಾಗಿ ದನಿಯೆತ್ತುವ ಆದರ್ಶವು ಆರ್‍ಎಸ್‍ಎಸ್‍ಗೆ ಸದಾ ಇರಿಸುಮುರಿಸು ಉಂಟುಮಾಡುತ್ತದೆ. ಕೆಳಜಾತಿಗಳು ಮತ್ತು ಬುಡಕಟ್ಟು ಜನಾಂಗಗಳನ್ನು ಎರಡನೇ ದರ್ಜೆ ನಾಗರಿಕರು ಎಂದು ಭಾವಿಸುವ ಆರ್‍ಎಸ್‍ಎಸ್‍ನ ಜಾತಿವಾದೀ ಸಿದ್ಧಾಂತವು ಸಾಮಾಜಿಕ ನ್ಯಾಯದ ವಿರುದ್ಧ ಇದೆ. ನ್ಯಾಯದ ಪರಿಕಲ್ಪನೆಯ ಹಿಂದೆ ಸಮಾನತೆಯ ತತ್ವವು ಯಾವಾಗಲೂ ಅಡಕವಾಗಿರುತ್ತದೆ. ತನ್ನ ಹುಟ್ಟಿನಿಂದಲೂ ಜರ್ಮನಿಯ ಹಿಟ್ಲರ್‍ನಿಂದ ಎರವಲು ಪಡೆದ ಸಾಂಸ್ಕೃತಿಕ ರಾಷ್ಟ್ರೀಯತೆಯ ಸಿದ್ಧಾಂತವನ್ನು ಪ್ರತಿಪಾದಿಸುವ ಆರ್‍ಎಸ್‍ಎಸ್ ಸಿದ್ಧಾಂತವು ಅಸಮಾನತೆಯನ್ನೇ ಎತ್ತಿ ಹಿಡಿಯುತ್ತದೆ. ಈ ತತ್ವ ಭಾರತದ ನೆಲಕ್ಕೆ ಒಗ್ಗುವುದಿಲ್ಲ. ಭಾರತದಲ್ಲಿ ಈ ಹಿಂದೆ ಚಾಲ್ತಿಯಲ್ಲಿದ್ದ ಊಳಿಗಮಾನ್ಯ ಪದ್ಧತಿಗೆ ಭಾರತ ಜೋತು ಬೀಳಬೇಕು ಎಂದು ಆರ್‍ಎಸ್‍ಎಸ್ ಬಯಸುತ್ತದೆ. ಮೇಲ್ಜಾತಿಗಳಿಗೆ ಅರ್ಹವೂ ಮತ್ತು ನ್ಯಾಯಸಮ್ಮತವೂ ಅಲ್ಲದ ಅನುಕೂಲ ಮಾಡಿಕೊಡಲು ಸಮಾಜದ ಇತರೆಲ್ಲ ಸಮುದಾಯಗಳನ್ನು ಹೀಗಳೆಯುತ್ತದೆ. ವೈದಿಕ ಪರಂಪರೆ ಮತ್ತು ಭಾರತದ ಮೂಲ ಅಧ್ಯಾತ್ಮಕ್ಕೆ ಆರ್‍ಎಸ್‍ಎಸ್ ಒಂದು ದುಷ್ಟ ವಿಪತ್ತು ಎಂಬ ವಿಚಾರದಲ್ಲಿ ನನಗೆ ಎಂದಿಗೂ ಗೊಂದಲ ಇರಲಿಲ್ಲ. ಆರ್‍ಎಸ್‍ಎಸ್ ಕುರಿತಂತೆ ಇರುವ ನನ್ನ ತಕರಾರು ಅಧ್ಯಾತ್ಮಿಕವಾದುದು.
ನಾನು ಪ್ರತಿಪಾದಿಸುವ ಅಧ್ಯಾತ್ಮ ಚಿಂತನೆಯು ಭಾರತೀಯ ಸಮಾಜದಲ್ಲಿನ ಮೂಢನಂಬಿಕೆ, ಜಾತಿಪದ್ಧತಿ, ಜೀತಗಾರಿಕೆ, ಬಡವರು ಮತ್ತು ನಿರ್ಗತಿಕರ ಶೋಷಣೆಗಳನ್ನು ತೊಲಗಿಸಬೇಕು ಎಂದು ಕರೆ ನೀಡುತ್ತದೆ. ದಲಿತರು ಮತ್ತು ಆದಿವಾಸಿಗಳ ಹಕ್ಕುಗಳಿಗಾಗಿ ಹೋರಾಡಬೇಕು ಎಂದು ಹೇಳುತ್ತದೆ. ಜೀತ ಪದ್ದತಿಯಲ್ಲಿ ಬಂಧಿತರಾದವರ ವಿಮೋಚನೆಗಾಗಿ ಮತ್ತು ಪುನರ್‍ವಸತಿಗಾಗಿ ಅದು ಧ್ವನಿ ಎತ್ತುತ್ತದೆ. ಸಾರ್ವಜನಿಕ ಜೀವನದಲ್ಲಿ ವೈದಿಕ ಅಧ್ಯಾತ್ಮದ ಬೆಳಕು ಮೂಡಬೇಕು ಎಂದು ಆಶಿಸುತ್ತದೆ. ನಮ್ಮ ಇಂಥ ಕೆಲಸಗಳಿಗಾಗಿಯೇ ನಾನು ಮತ್ತು ನನ್ನ ಸಹಚರ ಸ್ವಾಮಿ ಇಂದ್ರವೇಶ್ ಅವರು ಮಾಕ್ರ್ಸ್‍ವಾದಿಗಳು, ಮಾವೋವಾದಿಗಳು, ಅಲ್ಪಸಂಖ್ಯಾತರ ನಿಷ್ಠರು, ಡೊಂಗಿಸ್ವಾಮಿಗಳು, ಯಾವುದೋ ವಿದೇಶಿ ಶಕ್ತಿಗಳ ಏಜೆಂಟರು ಎಂಬ ಹಣೆಪಟ್ಟಿ ಹೊತ್ತುಕೊಂಡೆವು.
ಪ್ರಸ್ತುತ ಸಮಾಜದಲ್ಲಿ ಅಧ್ಯಾತ್ಮದ ಜ್ಞಾನ ಮತ್ತು ಸಾಮಾಜಿಕ ಕ್ರಿಯೆಗಳ ನಡುವೆ ದೊಡ್ಡ ಕಂದಕ ಏರ್ಪಟ್ಟಿದೆ. ಹೀಗಾಗಿ ಅಧ್ಮಾತ್ಮದ ಜ್ಞಾನ ಇರುವವರು ಸಾಮಾಜಿಕ ಹೊಣೆಗಾರಿಕೆಗಳಿಗೆ ವಿಮುಖರಾಗಿ ಪರ್ವತ ಶಿಖರಗಳ ಮೇಲೆ ಅಥವಾ ಕಾಡಿನಲ್ಲಿ ಏಕಾಂಗಿಯಾಗಿ ನೆಲೆಸಬೇಕು ಎಂಬ ತಪ್ಪುಕಲ್ಪನೆ ಜನಜನಿತವಾಗಿದೆ.
ಇದರ ಜೊತೆಜೊತೆಗೆ ಅವತಾರಗಳ ಪರಿಕಲ್ಪನೆಯೂ ನಮ್ಮ ಧರ್ಮದಲ್ಲಿ ಇದೆ. ಕಾಲಕಾಲಕ್ಕೆ ಅಧರ್ಮದಿಂದ ನಮ್ಮನ್ನು ಧರ್ಮದ ಮಾರ್ಗಕ್ಕೆ ನಡೆಸಲು ದೇವರು ಭೂಮಿಗೆ ಬರುತ್ತಾನೆ ಎನ್ನುವ ನಂಬಿಕೆ ಅವತಾರದ ಪರಿಕಲ್ಪನೆಯ ಮುಖ್ಯ ಅಂಶ. ಹೀಗಾಗಿಯೇ ಅಧ್ಯಾತ್ಮ ಮತ್ತು ಸಾಮಾಜಿಕ ವಾಸ್ತವಗಳು ಪರಸ್ಪರ ಬೆಸೆದುಕೊಂಡಿವೆ ಮತ್ತು ಇವೆರೆಡೂ ಒಂದಕ್ಕೊಂದು ವಿರುದ್ಧವಾದ ಪರಿಕಲ್ಪನೆಗಳೇನಲ್ಲ ಎಂಬುದು ನಮಗೆಲ್ಲ ತಿಳಿದಿರುವ ಸಂಗತಿಯೇ. ಆದರೆ ಧಾರ್ಮಿಕ ಲೋಕದÀಲ್ಲಿ ಮೇಲ್ಚಾತಿ ಮತ್ತು ಮೇಲ್‍ವರ್ಗಗಳ ಪ್ರಾಬಲ್ಯ ಇರುವುದರಿಂದ ತಮಗೆ ಅನುಕೂಲಕರವಾಗಿರುವ ಯಥಾಸ್ಥಿತಿವಾದಿ ಧಾರ್ಮಿಕತೆಯನ್ನು ಜನತೆಯ ಮೇಲೆ ಹೇರುತ್ತಿದ್ದಾರೆ. ಇದರಿಂದಾಗಿಯೇ ನಮ್ಮ ಅಧ್ಯಾತ್ಮ ದೃಷ್ಟಿಕೋನದಲ್ಲಿ ಭಿನ್ನಮತಗಳು ತಲೆದೋರಿವೆ.
ಉದಾಹರಣೆಗೆ ವೈದಿಕ ಪರಿಕಲ್ಪನೆಯಾದ ‘ವಸುಧೈವ ಕುಟುಂಬಕಂ’ ತೆಗೆದುಕೊಳ್ಳಿ. ಇದು ಭಾರತದ ಅಧ್ಯಾತ್ಮ ದೃಷ್ಟಿಕೋನವನ್ನು ಸಮಗ್ರವಾಗಿ ಹಿಡಿದಿಡುತ್ತದೆ. ಇದನ್ನು ನಮ್ಮ ಆಧ್ಯಾತ್ಮದ ತಿರುಳು ಎಂದರೂ ಸರಿ. ಬ್ರಹ್ಮ ಒಬ್ಬನೇ ಸತ್ಯ ಮತ್ತು ಜಗತ್ತಿನಲ್ಲಿರುವ ಎಲ್ಲ ಜೀವಗಳು ಆ ಸತ್ಯದ ವಿವಿಧ ಅಭಿವ್ಯಕ್ತಿಗಳು ಎನ್ನುವುದನ್ನು ಈ ಪರಿಕಲ್ಪನೆ ಸಾರಿ ಹೇಳುತ್ತದೆ. ಹೀಗಿರುವಾಗ ಸಾಮಾಜಿಕ, ಆರ್ಥಿಕ, ಧಾರ್ಮಿಕ ಮತ್ತು ಸಾಂಸ್ಕೃತಿಕ ಕ್ಷೇತ್ರಗಳಲ್ಲಿರುವ ತಾರತಮ್ಯ ಮತ್ತು ದಮನವನ್ನು ಸಮರ್ಥಿಸಿಕೊಳ್ಳುವುದಾದರೂ ಹೇಗೆ ಸಾಧ್ಯ?
ಆದ್ದರಿಂದ ಕಟ್ಟಳೆಗಳಿಂದ ಕೂಡಿದ ಧಾರ್ಮಿಕತೆಗೂ ಮತ್ತು ಅಧ್ಯಾತ್ಮ ಚಿಂತನೆಗೂ ನಡುವೆ ಒಂದು ಧಾರ್ಮಿಕ ನಿಯಂತ್ರಣ ರೇಖೆ ಎಳೆಯುವ ಅನಿವಾರ್ಯತೆ ಉಂಟಾಗುತ್ತದೆ. ವೇದದ ಪಠ್ಯಗಳನ್ನು ಸರಿಯಾಗಿ ಗ್ರಹಿಸಿ, ಅದರ ಆಶಯಗಳನ್ನು ಅರಿತುಕೊಂಡವರು ಪ್ರೀತಿ, ನ್ಯಾಯ, ಸತ್ಯ ಮತ್ತು ಕರುಣೆಯೇ ನಮ್ಮ ಆಧ್ಯಾತ್ಮದ ಸಾರ ಎಂದು ವೇದಗಳು ಸಾರಿ ಹೇಳುತ್ತವೆ ಎಂಬುದನ್ನೂ, ಇದೇ ಅಧ್ಮಾತ್ಮದ ಮೂಲ ಎಂಬುದನ್ನೂ ಒಪ್ಪಿಕೊಳ್ಳುತ್ತಾರೆ. ದುರಂತವೆಂದರೆ ಜಾತಿವಾದ, ಮೂಢನಂಬಿಕೆಗಳಿಂದ ತುಂಬಿ ತುಳುಕುತ್ತಿರುವ, ಮಾನವೀಯ ಮೌಲ್ಯಗಳ ಬಗೆಗೆ ಕಿವುಡು ಮತ್ತು ಕುರುಡಾಗಿರುವ ಡಾಂಭಿಕ ಧಾರ್ಮಿಕತೆ ಈ ಸತ್ಯವನ್ನು ಮುಚ್ಚಿಹಾಕಿಬಿಟ್ಟಿದೆ.
ಈ ನೆಲದ ಆದಿವಾಸಿಗಳು ನಡೆಸುತ್ತಿರುವ ಸಂಘರ್ಷಗಳನ್ನು ಬೆಂಬಲಿಸುವ ನನ್ನ ನಿರ್ಧಾರಕ್ಕೆ ಅಧ್ಯಾತ್ಮದ ಹಿನ್ನೆಲೆ ಇದೆ. ಅದು ರಾಜಕಾರಣ ಅಲ್ಲ. ರಾಜಕಾರಣ ಅಧ್ಯಾತ್ಮವಲ್ಲ ಎಂಬ ನನ್ನ ನಿಲುವಿನ ಕಾರಣಕ್ಕಾಗಿ ನಾನು ಈ ಮಾತನ್ನು ಹೇಳುತ್ತಿಲ್ಲ. ರಾಜಕಾರಣಕ್ಕೆ ಅಧ್ಯಾತ್ಮದ ತಳಹದಿ ಇರಬೇಕು ಎಂದು ನಾನು ಪ್ರತಿಪಾದಿಸುತ್ತೇನೆ. ಭಾರತೀಯ ಸಮಾಜದಲ್ಲಿ ಅಧ್ಯಾತ್ಮವನ್ನು ಮತ್ತೆ ಪುನಶ್ಚೇತಗೊಳಿಸಬೇಕೆಂಬುದೇ ನನ್ನ ಉದ್ದೇಶ. ಧರ್ಮಗಳ ಆಧಾರದ ಮೇಲೆ ಕಿತ್ತಾಡುತ್ತಾ ನಾವು ಭಾರತದ ಅಧ್ಯಾತ್ಮಕ್ಕೆ ಅವಮಾನ ಮಾಡುತ್ತಿದ್ದೇವೆ. ಒಂದು ಉನ್ನತ ಸಮಾಜ ಮತ್ತು ಪ್ರಬಲ ರಾಷ್ಟ್ರವನ್ನು ರೂಪಿಸಲು ಧರ್ಮಗಳು ಪ್ರೇರಣೆ ನೀಡಬೇಕು. ಮಹಾತ್ಮಗಾಂಧಿ ಅವರು ಪ್ರತಿಪಾದಿಸಿದ ರಾಮರಾಜ್ಯ ಪರಿಕಲ್ಪನೆಯ ಸಮಾಜದಲ್ಲಿ ಮಾತ್ರ ಹೀಗೆ ನಾಗರಿಕರು ಅಧ್ಯಾತ್ಮದ ಅತ್ಯುನ್ನತ ಸ್ಥಿತಿಯಲ್ಲಿ ಯೋಚಿಸಲು ಸಾಧ್ಯ. ಭಾರತದಲ್ಲಿ ಅನ್ಯಾಯ, ಹಿಂಸೆ, ಅಮಾನವೀಯತೆ, ಜಾತಿ ಆಧರಿತ ತಾರತಮ್ಯ ಇರುವವರೆಗೂ ನಮ್ಮ ನಿಜವಾದ ಸಾಮಥ್ರ್ಯವನ್ನು ನಾವು ಸದ್ಬಳಕೆ ಮಾಡಿಕೊಳ್ಳುವುದು ಸಾಧ್ಯವಿಲ್ಲ.
ಒಂದಾಗಿ ಸಾಗಿದಾಗ ಮಾತ್ರ ನಾವು ಪ್ರಗತಿಹೊಂದಲು ಸಾಧ್ಯ. ಇದಕ್ಕೆ ವ್ಯತಿರಿಕ್ತವೆಂದರೆ, ಒಟ್ಟಾಗಿಯೇ ನಾಶವಾಗುವುದು ಮಾತ್ರ. ಆಯ್ಕೆ ಯಾವುದಾದರೂ ನಮಗೆ ಸಮಾನ ಭವಿಷ್ಯ ಮಾತ್ರ ಇದೆ ಎನ್ನುವುದು ವಾಸ್ತವ ಸಂಗತಿ. ಹೀಗಾಗಿ ನನ್ನ ದೃಷ್ಟಿಕೋನ ಆರ್‍ಎಸ್‍ಎಸ್‍ಗೆ ಕೆಟ್ಟದಾಗಿ ಕಾಣುತ್ತÀ್ತದೆ. ಹಿಟ್ಲರ್ ಕಾಲದಲ್ಲಿ ಕ್ರೂರ ಜರ್ಮನ್ ಅಧಿಕಾರಿಗಳು ಜನರ ಮೇಲೆ ಹೇರಲು ಯತ್ನಿಸಿದ ಸಿದ್ಧಾಂತವನ್ನು ಆರ್‍ಎಸ್‍ಎಸ್ ನಮ್ಮ ದೇಶದಲ್ಲಿ ಇದೀಗ ಸಾಕಾರಗೊಳಿಸಲು ಯತ್ನಿಸುತ್ತಿರುವುದು ವಿಪರ್ಯಾಸ. ಆರ್‍ಎಸ್‍ಎಸ್‍ನ ಈ ಸಿದ್ಧಾಂತಕ್ಕೆ ಹಿಂದೂಧರ್ಮದ ಜೊತೆಗೆ ಏನಾದರೂ ಸಂಬಂಧವಿದೆಯೇ ಎಂಬ ಬಗ್ಗೆಯೇ ನನಗೆ ಅನುಮಾನವಿದೆ. ಹಾಗೆಯೇ ನಾನು ಪ್ರತಿಪಾದಿಸುತ್ತಿರುವ ವಿಚಾರಗಳ ಕಾರಣಕ್ಕಾಗಿಯೇ ನನ್ನ ಮೇಲೆ ಹಲ್ಲೆ ನಡೆಯಿತು ಎಂದು ಆರ್‍ಎಸ್‍ಎಸ್ ಕೂಡ ನಂಬುವುದಿಲ್ಲ ಎಂಬ ಬಗ್ಗೆ ನನಗೆ ಖಾತ್ರಿಯಿದೆ.
ನನ್ನ ಮೇಲೆ ಎರಡನೇ ಬಾರಿ ಹಲ್ಲೆ ನಡೆದಿದೆ. ಈ ಹಲ್ಲೆಗಳು ನನಗೆ ತೀವ್ರ ನೋವನ್ನುಂಟುಮಾಡಿವೆ. ನಾನು ಅನುಭವಿಸಿದ ನೋವು ಮತ್ತು ಹಿಂಸೆಗಳು, ನಮ್ಮ ಸಮಾಜ ಎದುರಿಸುತ್ತಿರುವ ಇಂದಿನ ದುರಂತದ ಬಗ್ಗೆ ಸಹ-ಭಾರತೀಯರನ್ನು ಎಚ್ಚರಿಸುವಂತಾದರೆ ಮಾತ್ರ ನನ್ನ ನೋವು ಶಮನವಾಗುತ್ತದೆ.”
ಆರೆಸ್ಸೆಸ್-ಬಿಜೆಪಿಗಳು ಸತ್ಯ, ನ್ಯಾಯಗಳಿಗೆ ವಿರುದ್ಧವಾಗಿ ಪ್ರತಿಪಾದಿಸುತ್ತಿರುವ ಡೋಂಗಿ ಧರ್ಮದ ಒಳಮರ್ಮವನ್ನು ಅರಿಯದೇ ಹೋದರೆ ಈ ದೇಶಕ್ಕೆ ಭವಿಷ್ಯವಿಲ್ಲ.

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ಶೂಟ್ ಮಾಡಿಕೊಂಡು ಪ್ರಾಣ ಬಿಟ್ಟ ಕಾನ್ಫಿಡೆಂಟ್ ಗ್ರೂಪ್ ಸಂಸ್ಥಾಪಕ ಸಿ.ಜೆ. ರಾಯ್: ಐಟಿ ದಾಳಿ ಒತ್ತಡದಿಂದ ಆತ್ಮಹತ್ಯೆ ಶಂಕೆ

ಬೆಂಗಳೂರು: ಖ್ಯಾತ ರಿಯಲ್ ಎಸ್ಟೇಟ್ ಉದ್ಯಮಿ, ಕಾನ್ಫಿಡೆಂಟ್ ಗ್ರೂಪ್ (Confident Group) ಅಧ್ಯಕ್ಷ ಡಾ. ಸಿ.ಜೆ. ರಾಯ್ ಅವರು ಶುಕ್ರವಾರ ಬೆಂಗಳೂರಿನ ತಮ್ಮ ಕಚೇರಿಯಲ್ಲಿ ಗನ್ ನಿಂದ ಶೂಟ್ ಮಾಡಿಕೊಂಡು ಆತ್ಮಹತ್ಯೆಗೆ ಶರಣಾಗಿದ್ದಾರೆ.  ಕೇರಳ...

ಕಾಂಗ್ರೆಸ್ ಆಳ್ವಿಕೆಯಲ್ಲಿ ನುಸುಳಲುಕೋರರು ಬಹುಸಂಖ್ಯಾತರಾದರು; ನುಸುಳುಕೋರರಿಂದ ಅಸ್ಸಾಂ ರಕ್ಷಿಸಲು ಬಿಜೆಪಿಗೆ ಮತ ಹಾಕಿ: ಅಮಿತ್ ಶಾ

ಧೇಮಾಜಿ (ಅಸ್ಸಾಂ): ಕಾಂಗ್ರೆಸ್ ಆಳ್ವಿಕೆಯಲ್ಲಿ ಅಸ್ಸಾಂನ ಜನಸಂಖ್ಯಾಶಾಸ್ತ್ರ ಬದಲಾಗಿದೆ ಎಂದು ಹೇಳಿರುವ ಕೇಂದ್ರ ಗೃಹ ಸಚಿವ ಅಮಿತ್ ಶಾ , ಪ್ರಧಾನಿ ನರೇಂದ್ರ ಮೋದಿ ನೇತೃತ್ವದ ಬಿಜೆಪಿ ನೇತೃತ್ವದ ಸರ್ಕಾರ ಈ ಪ್ರವೃತ್ತಿಯನ್ನು...

ಕೊಲ್ಕತ್ತಾ ಅಗ್ನಿ ಅವಘಡ| ಈವರೆಗೆ ವಾವ್ ಮೊಮೋ ಕಂಪನಿ ಗೋದಾಮು ಸೇರಿದಂತೆ ಇತರೆಡೆ 21 ಜನರು ಸಾವನ್ನಪ್ಪಿರುವ ಮಾಹಿತಿ ಲಭ್ಯ  

ಜನವರಿ 26 ರ ಮುಂಜಾನೆ ಕೋಲ್ಕತ್ತಾದ ಆನಂದಪುರ ಪ್ರದೇಶದಲ್ಲಿ ಸಂಭವಿಸಿದ ಭೀಕರ ಬೆಂಕಿ ಅಪಘಾತದಲ್ಲಿ ಸಾವನ್ನಪ್ಪಿದವರ ಸಂಖ್ಯೆ ಗುರುವಾರ 21 ಕ್ಕೆ ಏರಿದ್ದು, 28 ಜನರು ಇನ್ನೂ ನಾಪತ್ತೆಯಾಗಿದ್ದಾರೆ.  ಬೆಂಕಿಯ ಅವಘಡದಲ್ಲಿ ಎರಡು ಗೋದಾಮುಗಳು...

ಮುಟ್ಟಿನ ಆರೋಗ್ಯ ಮೂಲಭೂತ ಹಕ್ಕು, ಬದುಕುವ ಹಕ್ಕಿನ ಭಾಗ : ಸುಪ್ರೀಂ ಕೋರ್ಟ್

ಮುಟ್ಟಿನ ಆರೋಗ್ಯ ಸಂವಿಧಾನದ 21ನೇ ವಿಧಿಯಡಿ ಖಾತ್ರಿಪಡಿಸಿದ ಮೂಲಭೂತ ಹಕ್ಕು, ಬದುಕುವ ಹಕ್ಕಿನ ಭಾಗ ಎಂದು ಸುಪ್ರೀಂ ಕೋರ್ಟ್ ಶುಕ್ರವಾರ (ಜ.30) ಮಹತ್ವದ ತೀರ್ಪು ನೀಡಿದೆ. ಎಲ್ಲಾ ರಾಜ್ಯಗಳು ಮತ್ತು ಕೇಂದ್ರಾಡಳಿತ ಪ್ರದೇಶಗಳ ಸರ್ಕಾರಿ,...

ಅತ್ಯಾಚಾರ ಪ್ರಕರಣದಲ್ಲಿ ಎಸ್‌ಪಿ ನಾಯಕ ಮೊಯಿದ್ ಖಾನ್ ಖುಲಾಸೆ: ಬಂಧನದ ಎರಡು ವರ್ಷಗಳ ನಂತರ ಬುಲ್ಡೋಜರ್ ನಿಂದ ಮನೆ ಕೆಡವಿದ್ದ ಯೋಗಿ ಸರ್ಕಾರ

2024 ರಲ್ಲಿ ಅಪ್ರಾಪ್ತ ಬಾಲಕಿಯ ಮೇಲೆ ನಡೆದ ಸಾಮೂಹಿಕ ಅತ್ಯಾಚಾರ ಪ್ರಕರಣದಲ್ಲಿ ಸಮಾಜವಾದಿ ಪಕ್ಷದ ನಾಯಕ ಮೊಯಿದ್ ಖಾನ್ ಅವರನ್ನು ಉತ್ತರ ಪ್ರದೇಶದ ಅಯೋಧ್ಯೆಯ ಪೋಕ್ಸೋ ನ್ಯಾಯಾಲಯವು ಖುಲಾಸೆಗೊಳಿಸಿದೆ.  ಅಪ್ರಾಪ್ತ ಬಾಲಕಿಯ ಮೇಲೆ ನಡೆದ...

ಸಿಎಂ ಸಿದ್ದರಾಮಯ್ಯ, ಡಿಕೆಶಿ ವಿರುದ್ಧ ‘ಸ್ಕ್ಯಾಮ್ ಲಾರ್ಡ್’ ಪೋಸ್ಟ್: ಕರ್ನಾಟಕ ಬಿಜೆಪಿ ಎಕ್ಸ್ ಹ್ಯಾಂಡಲ್ ವಿರುದ್ಧ ಪ್ರಕರಣ ದಾಖಲು

ಕರ್ನಾಟಕ ಮುಖ್ಯಮಂತ್ರಿ ಸಿದ್ದರಾಮಯ್ಯ, ಉಪಮುಖ್ಯಮಂತ್ರಿ ಡಿಕೆ ಶಿವಕುಮಾರ್ ಮತ್ತು ಇತರ ಸಚಿವರನ್ನು ಗುರಿಯಾಗಿಸಿಕೊಂಡು "ಮಾನಹಾನಿಕರ" ಪೋಸ್ಟ್ ಪೋಸ್ಟ್ ಮಾಡಿದ್ದಕ್ಕಾಗಿ ಮತ್ತು ರಾಜ್ಯವನ್ನು "ಲೂಟಿ" ಮಾಡುವಲ್ಲಿ ಅವರು ಭಾಗಿಯಾಗಿದ್ದಾರೆ ಎಂದು ಆರೋಪಿಸಿ ಬಿಜೆಪಿಯ 'ಎಕ್ಸ್'...

‘ನೀವು ಮುಂದೆ ಬರಲು ಸಿದ್ಧರಿದ್ದೀರಾ, ಅಥವಾ ಟ್ವೀಟ್ ಮಾಡುತ್ತಲೇ ಇರುತ್ತೀರಾ?’; ಮೋಹನ್ ದಾಸ್ ಪೈಗೆ ರಾಮಲಿಂಗಾರೆಡ್ಡಿ ಓಪನ್ ಚಾಲೆಂಜ್..!

ಬೆಂಗಳೂರಿನಲ್ಲಿ ಬಿಎಂಟಿಸಿ (BMTC) ಬಸ್‌ಗಳ ಕೊರತೆಯನ್ನು ಎತ್ತಿ, ಖಾಸಗಿ ಕಂಪನಿಗಳಿಗೆ ನಗರ ಬಸ್ ಸೇವೆಗೆ ಅವಕಾಶ ನೀಡಬೇಕು ಎಂದು ಸಲಹೆ ನೀಡಿದ್ದ, ಮೋಹನ್ ದಾಸ್ ಪೈ ಹೇಳಿಕೆಗೆ ಸಾರಿಗೆ ಸಚಿವ ರಾಮಲಿಂಗಾ ರೆಡ್ಡಿ...

ಪ್ಯಾಲೆಸ್ತೀನ್ ಸಿನಿಮಾಗಳ ಪ್ರದರ್ಶನಕ್ಕೆ ಅನುಮತಿ ನಿರಾಕರಣೆ; ರಾಜ್ಯ ಸರ್ಕಾರ ಗಟ್ಟಿ ದನಿಯಲ್ಲಿ ಪ್ರತಿಭಟಿಸಬೇಕು : ನಟ ಪ್ರಕಾಶ್ ರಾಜ್

ಬೆಂಗಳೂರು ಅಂತಾರಾಷ್ಟ್ರೀಯ ಚಲನಚಿತ್ರೋತ್ಸವದಲ್ಲಿ ಪ್ಯಾಲೆಸ್ತೀನಿಯನ್ ಸಿನಿಮಾಗಳ ಪ್ರದರ್ಶನಕ್ಕೆ ಅನುಮತಿ ನಿರಾಕರಿಸಿರುವ ಕೇಂದ್ರ ಸರ್ಕಾರದ ಕ್ರಮವನ್ನು ರಾಜ್ಯ ಸರ್ಕಾರ ಗಟ್ಟಿ ದನಿಯಲ್ಲಿ ಪ್ರತಿರೋಧಿಸಬೇಕು, ಪ್ರತಿಭಟಿಸಬೇಕು ಎಂದು ನಟ ಪ್ರಕಾಶ್ ರಾಜ್ ಒತ್ತಾಯಿಸಿದರು. ಗುರುವಾರ (ಜ.29) ಸಂಜೆ...

ಗೌರಿ ಲಂಕೇಶರ ನೆರಳು ನನ್ನ ಮೇಲೆ ಬಿದ್ದಿರುವ ಕಾರಣಕ್ಕೆ ‘ಲ್ಯಾಂಡ್‍ ಲಾರ್ಡ್‌’ನಂತಹ ಸಿನಿಮಾ ಮಾಡಲು ಕೈ ಹಾಕಿದ್ದೇನೆ: ನಟ ದುನಿಯಾ ವಿಜಯ್

ಗೌರಿ ಲಂಕೇಶ್ ಹಾಗೂ ಇತರ ಹೋರಾಟಗಾರರ ನೆರಳು ನನ್ನ ಮೇಲೆ ಬಿದ್ದಿರುವ ಕಾರಣಕ್ಕೆ ನಾನು 'ಲ್ಯಾಂಡ್‍ಲಾರ್ಡ್' ನಂತಹ ಸಿನೆಮಾ ಮಾಡುವುದಕ್ಕೆ ಕೈ ಹಾಕಿದ್ದೇನೆ ಎಂದು ನಟ ದುನಿಯಾ ವಿಜಯ್ ಹೇಳಿದರು. ಗುರುವಾರ (ಜ.29) ಬೆಂಗಳೂರಿನ...

ಜಾತಿ ತಾರತಮ್ಯ ತಡೆಗಟ್ಟುವ ಯುಜಿಸಿಯ ಹೊಸ ನಿಯಮಕ್ಕೆ ಸುಪ್ರೀಂ ಕೋರ್ಟ್ ತಡೆ

ಉನ್ನತ ಶಿಕ್ಷಣ ಸಂಸ್ಥೆಗಳಲ್ಲಿ ಜಾತಿ ಆಧಾರಿತ ತಾರತಮ್ಯವನ್ನು ತಡೆಗಟ್ಟಲು ಕೇಂದ್ರ ಸರ್ಕಾರ ಜಾರಿಗೆ ತಂದಿರುವ ವಿಶ್ವವಿದ್ಯಾಲಯ ಅನುದಾನ ಆಯೋಗದ (ಉನ್ನತ ಶಿಕ್ಷಣ ಸಂಸ್ಥೆಗಳಲ್ಲಿ ಸಮಾನತೆಯ ಪ್ರಚಾರ) ನಿಯಮಗಳು, 2026ಕ್ಕೆ ಸುಪ್ರೀಂ ಕೋರ್ಟ್ ಗುರುವಾರ...