Homeಅಂಕಣಗಳುಸಂಪಾದಕೀಯ | ಕಂಡದ್ದು ಕಂಡಹಾಗೆಸ್ವಾಮಿ ಅಗ್ನಿವೇಶ್ ಮೇಲಿನ ದಾಳಿಯಿಂದ ಭಾರತೀಯರು ಎಚ್ಚೆತ್ತುಕೊಳ್ಳಲಿ...

ಸ್ವಾಮಿ ಅಗ್ನಿವೇಶ್ ಮೇಲಿನ ದಾಳಿಯಿಂದ ಭಾರತೀಯರು ಎಚ್ಚೆತ್ತುಕೊಳ್ಳಲಿ…

- Advertisement -
- Advertisement -

ಯಾವುದೋ ನೆಪದಲ್ಲಿ ಅಸಹಾಯಕ ಒಬ್ಬಂಟಿಗಳ ಮೇಲೆ ಗುಂಪುಗೂಡಿ ಹಲ್ಲೆ ಮಾಡುವ ಘಟನೆಗಳು ನಿತ್ಯದ ಸುದ್ದಿಯಾಗಿಬಿಟ್ಟಿವೆ. ದನದ ಹೆಸರಿನಲ್ಲಿ ಮುಸ್ಲಿಮರು ಮತ್ತು ದಲಿತರನ್ನು, ಮಕ್ಕಳ ಕಳ್ಳರ ಹೆಸರಿನಲ್ಲಿ ಯಾವುದೋ ದಾರಿಹೋಕರನ್ನು ಬಡಿದು ಕೊಲ್ಲುವ ಸುದ್ದಿಗಳು ಮಾಮೂಲಿಯಾಗಿಬಿಟ್ಟಿದೆ. ಬಿಜೆಪಿ ಮಂತ್ರಿಗಳು ಶಾಸಕರೇ ಇಂಥ ಗುಂಪು ಹತ್ಯಾಕೋರರಿಗೆ ಬಹಿರಂಗವಾಗಿ ಹಾರಹಾಕಿ ಸನ್ಮಾನ ಮಾಡುತ್ತಿದ್ದು, ಈ ಗುಂಪುಹತ್ಯೆಗಳಿಗೂ ಬಿಜೆಪಿ ಸರ್ಕಾರಗಳಿಗೂ ಇರುವ ಸಂಬಂಧವನ್ನು ಬಿಚ್ಚಿಡುತ್ತಿವೆ.
ಆದರೆ ಹಿಂದೂ ಧರ್ಮದ ಹೆಸರಿನಲ್ಲಿ ರಾಜಕಾರಣ ಮಾಡುವ ಇದೇ ಬಿಜೆಪಿಗೆ ಸೇರಿದ ಪುಂಡರ ಗುಂಪುಗಳು ಕಾವಿಧಾರಿ ಧಾರ್ಮಿಕ ಸಂತ ಸ್ವಾಮಿ ಅಗ್ನಿವೇಶ್ ಅವರ ಮೇಲೆ ಹಲ್ಲೆ ಮಾಡಿದ್ದರ ಹಿನ್ನೆಲೆಯಾದರೂ ಏನು? ಅವರ ಮೇಲೆ ಕಳೆದ ಒಂದು ತಿಂಗಳಲ್ಲಿ ಎರಡು ಬಾರಿ ಹಲ್ಲೆ ಮಾಡಲಾಗಿದೆ, ಜುಲೈ 17ರಂದು ಜಾರ್ಖಂಡ್‍ನಲ್ಲಿ ಹಾಗೂ ಆಗಸ್ಟ್ 17ರಂದು ನವದೆಹಲಿಯಲ್ಲಿ, ಅದೂ ವಾಜಪೇಯಿಯವರ ಅಂತಿಮ ದರ್ಶನಕ್ಕೆಂದು ತೆರಳಿದ್ದ ವೇಳೆಯಲ್ಲಿ. ಅಂತ್ಯಸಂಸ್ಕಾರಕ್ಕೆ ತಮ್ಮ ವಿರೋಧಿಗಳೇ ಬಂದರೂ ಅವರನ್ನು ಗೌರವದಿಂದ ಕಾಣುವುದು ನಮ್ಮ ಸಂಸ್ಕøತಿ. ಹೀಗಿರುವಾಗ ಅಂಥಾ ಸಂದರ್ಭದಲ್ಲಿ ಧಾರ್ಮಿಕ ಗುರುವೊಬ್ಬರ ಮೇಲೆ ದಾಳಿ ಮಾಡಿಸಬೇಕೆಂದರೆ ಬಲವಾದ ಕಾರಣಗಳಿರಲೇ ಬೇಕಲ್ಲವೆ?
ಸ್ವಾಮಿ ಅಗ್ನಿವೇಶ್ ಅವರೇ ಮಾಧ್ಯಮಗಳಿಗೆ ಪತ್ರ ಬರೆದು ಈ ವಿದ್ಯಮಾನವನ್ನು ವಿವರಿಸಿದ್ದಾರೆ.
“ಪಾಕೂರಿನಲ್ಲಿ ನನ್ನ ಮೇಲೆ ಹಲ್ಲೆಯಾದ ಒಂದು ತಿಂಗಳ ನಂತರ, ಕಳೆದ ಶುಕ್ರವಾರ ನಾನು ಮಾಜಿ ಪ್ರಧಾನಿ ವಾಜಪೇಯಿ ಅವರಿಗೆ ಶ್ರದ್ಧಾಂಜಲಿ ಅರ್ಪಿಸಲು ಹೋಗಿದ್ದಾಗ, ದೆಹಲಿಯ ಬಿಜೆಪಿ ಮುಖ್ಯ ಕಛೇರಿಯ ಮುಂದೆ ಪಕ್ಷದ ಕಾರ್ಯಕರ್ತರ ಒಂದು ಗುಂಪನ್ನು ನನ್ನ ಮೇಲೆ ಛೂ ಬಿಡಲಾಯಿತು. ನಾನು ಕಛೇರಿಯ ಭವನದತ್ತ ನಡೆದು ಹೋಗುತ್ತಿದ್ದಾಗ ನನ್ನನ್ನು ಸುತ್ತುವರೆದು ನನ್ನ ಶಾಲು ಮತ್ತು ಪೇಟವನ್ನು ಎಳೆದು ಹಾಕಿದರು. ನನ್ನನ್ನು ಒಬ್ಬ ದೇಶದ್ರೋಹಿ ಎಂದು ನಿಂದಿಸುತ್ತಾ ಹಲ್ಲೆ ಮಾಡಿದರು. ಅವರು ವಾಸ್ತವದಲ್ಲಿ ವಾಜಪೇಯಿಯವರ ನೆನಪು ಮತ್ತು ಪರಂಪರೆಗೆ ಅವಮಾನ ಮಾಡಿದ್ದರು.
ಜುಲೈ 17ರಂದು ಪಾಕೂರಿನಲ್ಲಿ ನನ್ನ ಮೇಲೆ ಹಲ್ಲೆಯಾದ ತಕ್ಷಣ, ಜಾರ್ಖಂಡ್‍ನ ಬಿಜೆಪಿ ಸರ್ಕಾರದಲ್ಲಿ ಮಂತ್ರಿಯಾಗಿರುವ ಸಿ.ಪಿ.ಸಿಂಗ್ ಅದನ್ನು ಸಮರ್ಥಿಸಿಕೊಳ್ಳುತ್ತಾ ನನ್ನನ್ನು ವಿದೇಶಿ ದುಡ್ಡಿನಿಂದ ಬದುಕುತ್ತಿರುವ ಒಬ್ಬ ‘ಕಪಟ ಸನ್ಯಾಸಿ’ ಎಂದು ಜರೆದಿದ್ದರು. ನನ್ನ ಮೇಲೆ ಹಲ್ಲೆಮಾಡಿದವರ ಜತೆ ತಾವೂ ಶಾಮೀಲಾಗಿದ್ದೇವೆ ಎಂಬುದನ್ನು ತೀರಾ ಎಡವಟ್ಟಾಗಿ ಸಾರ್ವಜನಿಕವಾಗಿ ಒಪ್ಪಿಕೊಂಡ ರೀತಿ ಇದು. ಅವರು ಹೀಗೆ ಒಪ್ಪಿಕೊಳ್ಳದಿದ್ದರೂ, ರಾಜಕಾರಣಿಗಳ ಬೆಂಬಲವಿಲ್ಲದೆ ನಾಗರಿಕನೊಬ್ಬನ ಮೇಲೆ ಹೀಗೆ ಹಾಡಹಗಲೇ ಪೂರ್ವನಿಯೋಜಿತ ಹಿಂಸೆ ನಡೆಯಲು ಸಾಧ್ಯವಿಲ್ಲ ಎನ್ನುವುದು ಸ್ವಯಂವೇದ್ಯ. ಈ ಹಿಂಸೆ ಸ್ವಯಂಪ್ರೇರಿತವಾಗಿ ನಡೆಯಿತು ಎಂಬುದು ಅಪ್ಪಟ ಸುಳ್ಳು. ಪ್ರೀತಿ ಮಾತ್ರ ತನ್ನಿಂದತಾನೆ ಮೂಡಬಲ್ಲದು. ಅದಕ್ಕೆ ನೋಡಿ, ‘ಮೊದಲ ನೋಟದ ಪ್ರೇಮ’ ಎಂಬ ಸೊಗಸಾದ ಪರಿಕಲ್ಪನೆ ಇದೆ. ಮೊದಲ ನೋಟದಲ್ಲಿ ಎಂದಿಗೂ ದ್ವೇಷ ಮೂಡಿಬರಲು ಸಾಧ್ಯವಿಲ್ಲ. ಹಿಂಸೆಯು ನಿಸರ್ಗಕ್ಕೆ ವಿರುದ್ಧವಾದುದು. ವೈಚಾರಿಕತೆ, ಕರುಣೆ ಮತ್ತು ಇನ್ನೊಬ್ಬರನ್ನು ಗೌರವಿಸುವ ಮಾನವೀಯತೆಯನ್ನು ತುಳಿದು ಹತ್ತಿಕ್ಕಿದ ನಂತರವೇ ಹಿಂಸೆ ಶುರುವಾಗುತ್ತದೆ. ನಿಶಸ್ತ್ರರಾದ ಮನುಷ್ಯರ ಮೇಲೆ ನಡೆಯುವ ಹಿಂಸೆಯನ್ನು ಮಾನವೀಯತೆಯ ವಿರುದ್ಧದ ಹಿಂಸಾಚಾರ ಎಂದೇ ನಾವು ಭಾವಿಸಬೇಕಾಗುತ್ತದೆ….
ಪಾಕೂರ್ ದಾಳಿ ನಡೆದು ಒಂದು ತಿಂಗಳಾದರೂ ಎಫ್‍ಐಆರ್‍ನಲ್ಲಿ ಉಲ್ಲೇಖಿಸಿರುವ ಎಂಟು ಮಂದಿಯ ಪೈಕಿ ಯಾರೊಬ್ಬರನ್ನೂ ಈವರೆಗೆ ಬಂಧಿಸಿಲ್ಲ.”
ನೆನಪಿಡಿ, ಈ ದಾಳಿ ನಡೆದದ್ದು ಹಾಡಹಗಲಿನಲ್ಲಿ. ಹಲ್ಲೆಯ ಘಟನಾವಳಿಯ ವಿಡಿಯೋಗಳು ಸಾಮಾಜಿಕ ಜಾಲತಾಣದ ತುಂಬಾ ಹರಿದಾಡುತ್ತಿವೆ. ಮೇಲಾಗಿ ಹಲ್ಲೆ ಮಾಡಿದವರನ್ನು ಗುರುತಿಸಿ, ಅವರ ಹೆಸರುಗಳನ್ನೂ ಪೊಲೀಸ್ ದೂರಿನಲ್ಲಿ ನಮೂದಿಸಲಾಗಿದೆ. ಸರ್ಕಾರವೇ ಮುಂದೆ ನಿಂತು ಈ ದಾಳಿ ನಡೆಸಿದೆ ಎಂದು ನಂಬಲು ಇಷ್ಟು ಸಾಕು.
ಸ್ವಾಮಿ ಅಗ್ನಿವೇಶ್‍ರನ್ನು ‘ಹಿಂದೂ ವಿರೋಧಿ’ ಎಂದು ಬ್ರಾಂಡ್ ಮಾಡುವ ಕೆಲಸ ಎಗ್ಗಿಲ್ಲದೆ ಸಾಗಿದೆ. ಹಾಗಿದ್ದರೆ ಅಗ್ನಿವೇಶ್ ಅವರು ಬಯಸುವ ಹಿಂದೂ ಧರ್ಮಕ್ಕೂ ಆರೆಸ್ಸೆಸ್-ಬಿಜೆಪಿಗಳು ಬಯಸುತ್ತಿರುವ ಹಿಂದೂ ಧರ್ಮಕ್ಕೂ ಏನು ವ್ಯತ್ಯಾಸ?
ಅಗ್ನಿವೇಶ್ ಬರೆಯುತ್ತಾರೆ: “ಸಾಮಾಜಿಕ ನ್ಯಾಯಕ್ಕಾಗಿ ಬದುಕು ಮುಡಿಪಿಟ್ಟಿರುವ ನಾನು ಆರ್‍ಎಸ್‍ಎಸ್ ಪಾಲಿಗೆ ಬಹುಕಾಲದಿಂದ ಕಣ್ಣುಬೇನೆಯಾಗಿದ್ದೇನೆ. ನ್ಯಾಯಕ್ಕಾಗಿ ದನಿಯೆತ್ತುವ ಆದರ್ಶವು ಆರ್‍ಎಸ್‍ಎಸ್‍ಗೆ ಸದಾ ಇರಿಸುಮುರಿಸು ಉಂಟುಮಾಡುತ್ತದೆ. ಕೆಳಜಾತಿಗಳು ಮತ್ತು ಬುಡಕಟ್ಟು ಜನಾಂಗಗಳನ್ನು ಎರಡನೇ ದರ್ಜೆ ನಾಗರಿಕರು ಎಂದು ಭಾವಿಸುವ ಆರ್‍ಎಸ್‍ಎಸ್‍ನ ಜಾತಿವಾದೀ ಸಿದ್ಧಾಂತವು ಸಾಮಾಜಿಕ ನ್ಯಾಯದ ವಿರುದ್ಧ ಇದೆ. ನ್ಯಾಯದ ಪರಿಕಲ್ಪನೆಯ ಹಿಂದೆ ಸಮಾನತೆಯ ತತ್ವವು ಯಾವಾಗಲೂ ಅಡಕವಾಗಿರುತ್ತದೆ. ತನ್ನ ಹುಟ್ಟಿನಿಂದಲೂ ಜರ್ಮನಿಯ ಹಿಟ್ಲರ್‍ನಿಂದ ಎರವಲು ಪಡೆದ ಸಾಂಸ್ಕೃತಿಕ ರಾಷ್ಟ್ರೀಯತೆಯ ಸಿದ್ಧಾಂತವನ್ನು ಪ್ರತಿಪಾದಿಸುವ ಆರ್‍ಎಸ್‍ಎಸ್ ಸಿದ್ಧಾಂತವು ಅಸಮಾನತೆಯನ್ನೇ ಎತ್ತಿ ಹಿಡಿಯುತ್ತದೆ. ಈ ತತ್ವ ಭಾರತದ ನೆಲಕ್ಕೆ ಒಗ್ಗುವುದಿಲ್ಲ. ಭಾರತದಲ್ಲಿ ಈ ಹಿಂದೆ ಚಾಲ್ತಿಯಲ್ಲಿದ್ದ ಊಳಿಗಮಾನ್ಯ ಪದ್ಧತಿಗೆ ಭಾರತ ಜೋತು ಬೀಳಬೇಕು ಎಂದು ಆರ್‍ಎಸ್‍ಎಸ್ ಬಯಸುತ್ತದೆ. ಮೇಲ್ಜಾತಿಗಳಿಗೆ ಅರ್ಹವೂ ಮತ್ತು ನ್ಯಾಯಸಮ್ಮತವೂ ಅಲ್ಲದ ಅನುಕೂಲ ಮಾಡಿಕೊಡಲು ಸಮಾಜದ ಇತರೆಲ್ಲ ಸಮುದಾಯಗಳನ್ನು ಹೀಗಳೆಯುತ್ತದೆ. ವೈದಿಕ ಪರಂಪರೆ ಮತ್ತು ಭಾರತದ ಮೂಲ ಅಧ್ಯಾತ್ಮಕ್ಕೆ ಆರ್‍ಎಸ್‍ಎಸ್ ಒಂದು ದುಷ್ಟ ವಿಪತ್ತು ಎಂಬ ವಿಚಾರದಲ್ಲಿ ನನಗೆ ಎಂದಿಗೂ ಗೊಂದಲ ಇರಲಿಲ್ಲ. ಆರ್‍ಎಸ್‍ಎಸ್ ಕುರಿತಂತೆ ಇರುವ ನನ್ನ ತಕರಾರು ಅಧ್ಯಾತ್ಮಿಕವಾದುದು.
ನಾನು ಪ್ರತಿಪಾದಿಸುವ ಅಧ್ಯಾತ್ಮ ಚಿಂತನೆಯು ಭಾರತೀಯ ಸಮಾಜದಲ್ಲಿನ ಮೂಢನಂಬಿಕೆ, ಜಾತಿಪದ್ಧತಿ, ಜೀತಗಾರಿಕೆ, ಬಡವರು ಮತ್ತು ನಿರ್ಗತಿಕರ ಶೋಷಣೆಗಳನ್ನು ತೊಲಗಿಸಬೇಕು ಎಂದು ಕರೆ ನೀಡುತ್ತದೆ. ದಲಿತರು ಮತ್ತು ಆದಿವಾಸಿಗಳ ಹಕ್ಕುಗಳಿಗಾಗಿ ಹೋರಾಡಬೇಕು ಎಂದು ಹೇಳುತ್ತದೆ. ಜೀತ ಪದ್ದತಿಯಲ್ಲಿ ಬಂಧಿತರಾದವರ ವಿಮೋಚನೆಗಾಗಿ ಮತ್ತು ಪುನರ್‍ವಸತಿಗಾಗಿ ಅದು ಧ್ವನಿ ಎತ್ತುತ್ತದೆ. ಸಾರ್ವಜನಿಕ ಜೀವನದಲ್ಲಿ ವೈದಿಕ ಅಧ್ಯಾತ್ಮದ ಬೆಳಕು ಮೂಡಬೇಕು ಎಂದು ಆಶಿಸುತ್ತದೆ. ನಮ್ಮ ಇಂಥ ಕೆಲಸಗಳಿಗಾಗಿಯೇ ನಾನು ಮತ್ತು ನನ್ನ ಸಹಚರ ಸ್ವಾಮಿ ಇಂದ್ರವೇಶ್ ಅವರು ಮಾಕ್ರ್ಸ್‍ವಾದಿಗಳು, ಮಾವೋವಾದಿಗಳು, ಅಲ್ಪಸಂಖ್ಯಾತರ ನಿಷ್ಠರು, ಡೊಂಗಿಸ್ವಾಮಿಗಳು, ಯಾವುದೋ ವಿದೇಶಿ ಶಕ್ತಿಗಳ ಏಜೆಂಟರು ಎಂಬ ಹಣೆಪಟ್ಟಿ ಹೊತ್ತುಕೊಂಡೆವು.
ಪ್ರಸ್ತುತ ಸಮಾಜದಲ್ಲಿ ಅಧ್ಯಾತ್ಮದ ಜ್ಞಾನ ಮತ್ತು ಸಾಮಾಜಿಕ ಕ್ರಿಯೆಗಳ ನಡುವೆ ದೊಡ್ಡ ಕಂದಕ ಏರ್ಪಟ್ಟಿದೆ. ಹೀಗಾಗಿ ಅಧ್ಮಾತ್ಮದ ಜ್ಞಾನ ಇರುವವರು ಸಾಮಾಜಿಕ ಹೊಣೆಗಾರಿಕೆಗಳಿಗೆ ವಿಮುಖರಾಗಿ ಪರ್ವತ ಶಿಖರಗಳ ಮೇಲೆ ಅಥವಾ ಕಾಡಿನಲ್ಲಿ ಏಕಾಂಗಿಯಾಗಿ ನೆಲೆಸಬೇಕು ಎಂಬ ತಪ್ಪುಕಲ್ಪನೆ ಜನಜನಿತವಾಗಿದೆ.
ಇದರ ಜೊತೆಜೊತೆಗೆ ಅವತಾರಗಳ ಪರಿಕಲ್ಪನೆಯೂ ನಮ್ಮ ಧರ್ಮದಲ್ಲಿ ಇದೆ. ಕಾಲಕಾಲಕ್ಕೆ ಅಧರ್ಮದಿಂದ ನಮ್ಮನ್ನು ಧರ್ಮದ ಮಾರ್ಗಕ್ಕೆ ನಡೆಸಲು ದೇವರು ಭೂಮಿಗೆ ಬರುತ್ತಾನೆ ಎನ್ನುವ ನಂಬಿಕೆ ಅವತಾರದ ಪರಿಕಲ್ಪನೆಯ ಮುಖ್ಯ ಅಂಶ. ಹೀಗಾಗಿಯೇ ಅಧ್ಯಾತ್ಮ ಮತ್ತು ಸಾಮಾಜಿಕ ವಾಸ್ತವಗಳು ಪರಸ್ಪರ ಬೆಸೆದುಕೊಂಡಿವೆ ಮತ್ತು ಇವೆರೆಡೂ ಒಂದಕ್ಕೊಂದು ವಿರುದ್ಧವಾದ ಪರಿಕಲ್ಪನೆಗಳೇನಲ್ಲ ಎಂಬುದು ನಮಗೆಲ್ಲ ತಿಳಿದಿರುವ ಸಂಗತಿಯೇ. ಆದರೆ ಧಾರ್ಮಿಕ ಲೋಕದÀಲ್ಲಿ ಮೇಲ್ಚಾತಿ ಮತ್ತು ಮೇಲ್‍ವರ್ಗಗಳ ಪ್ರಾಬಲ್ಯ ಇರುವುದರಿಂದ ತಮಗೆ ಅನುಕೂಲಕರವಾಗಿರುವ ಯಥಾಸ್ಥಿತಿವಾದಿ ಧಾರ್ಮಿಕತೆಯನ್ನು ಜನತೆಯ ಮೇಲೆ ಹೇರುತ್ತಿದ್ದಾರೆ. ಇದರಿಂದಾಗಿಯೇ ನಮ್ಮ ಅಧ್ಯಾತ್ಮ ದೃಷ್ಟಿಕೋನದಲ್ಲಿ ಭಿನ್ನಮತಗಳು ತಲೆದೋರಿವೆ.
ಉದಾಹರಣೆಗೆ ವೈದಿಕ ಪರಿಕಲ್ಪನೆಯಾದ ‘ವಸುಧೈವ ಕುಟುಂಬಕಂ’ ತೆಗೆದುಕೊಳ್ಳಿ. ಇದು ಭಾರತದ ಅಧ್ಯಾತ್ಮ ದೃಷ್ಟಿಕೋನವನ್ನು ಸಮಗ್ರವಾಗಿ ಹಿಡಿದಿಡುತ್ತದೆ. ಇದನ್ನು ನಮ್ಮ ಆಧ್ಯಾತ್ಮದ ತಿರುಳು ಎಂದರೂ ಸರಿ. ಬ್ರಹ್ಮ ಒಬ್ಬನೇ ಸತ್ಯ ಮತ್ತು ಜಗತ್ತಿನಲ್ಲಿರುವ ಎಲ್ಲ ಜೀವಗಳು ಆ ಸತ್ಯದ ವಿವಿಧ ಅಭಿವ್ಯಕ್ತಿಗಳು ಎನ್ನುವುದನ್ನು ಈ ಪರಿಕಲ್ಪನೆ ಸಾರಿ ಹೇಳುತ್ತದೆ. ಹೀಗಿರುವಾಗ ಸಾಮಾಜಿಕ, ಆರ್ಥಿಕ, ಧಾರ್ಮಿಕ ಮತ್ತು ಸಾಂಸ್ಕೃತಿಕ ಕ್ಷೇತ್ರಗಳಲ್ಲಿರುವ ತಾರತಮ್ಯ ಮತ್ತು ದಮನವನ್ನು ಸಮರ್ಥಿಸಿಕೊಳ್ಳುವುದಾದರೂ ಹೇಗೆ ಸಾಧ್ಯ?
ಆದ್ದರಿಂದ ಕಟ್ಟಳೆಗಳಿಂದ ಕೂಡಿದ ಧಾರ್ಮಿಕತೆಗೂ ಮತ್ತು ಅಧ್ಯಾತ್ಮ ಚಿಂತನೆಗೂ ನಡುವೆ ಒಂದು ಧಾರ್ಮಿಕ ನಿಯಂತ್ರಣ ರೇಖೆ ಎಳೆಯುವ ಅನಿವಾರ್ಯತೆ ಉಂಟಾಗುತ್ತದೆ. ವೇದದ ಪಠ್ಯಗಳನ್ನು ಸರಿಯಾಗಿ ಗ್ರಹಿಸಿ, ಅದರ ಆಶಯಗಳನ್ನು ಅರಿತುಕೊಂಡವರು ಪ್ರೀತಿ, ನ್ಯಾಯ, ಸತ್ಯ ಮತ್ತು ಕರುಣೆಯೇ ನಮ್ಮ ಆಧ್ಯಾತ್ಮದ ಸಾರ ಎಂದು ವೇದಗಳು ಸಾರಿ ಹೇಳುತ್ತವೆ ಎಂಬುದನ್ನೂ, ಇದೇ ಅಧ್ಮಾತ್ಮದ ಮೂಲ ಎಂಬುದನ್ನೂ ಒಪ್ಪಿಕೊಳ್ಳುತ್ತಾರೆ. ದುರಂತವೆಂದರೆ ಜಾತಿವಾದ, ಮೂಢನಂಬಿಕೆಗಳಿಂದ ತುಂಬಿ ತುಳುಕುತ್ತಿರುವ, ಮಾನವೀಯ ಮೌಲ್ಯಗಳ ಬಗೆಗೆ ಕಿವುಡು ಮತ್ತು ಕುರುಡಾಗಿರುವ ಡಾಂಭಿಕ ಧಾರ್ಮಿಕತೆ ಈ ಸತ್ಯವನ್ನು ಮುಚ್ಚಿಹಾಕಿಬಿಟ್ಟಿದೆ.
ಈ ನೆಲದ ಆದಿವಾಸಿಗಳು ನಡೆಸುತ್ತಿರುವ ಸಂಘರ್ಷಗಳನ್ನು ಬೆಂಬಲಿಸುವ ನನ್ನ ನಿರ್ಧಾರಕ್ಕೆ ಅಧ್ಯಾತ್ಮದ ಹಿನ್ನೆಲೆ ಇದೆ. ಅದು ರಾಜಕಾರಣ ಅಲ್ಲ. ರಾಜಕಾರಣ ಅಧ್ಯಾತ್ಮವಲ್ಲ ಎಂಬ ನನ್ನ ನಿಲುವಿನ ಕಾರಣಕ್ಕಾಗಿ ನಾನು ಈ ಮಾತನ್ನು ಹೇಳುತ್ತಿಲ್ಲ. ರಾಜಕಾರಣಕ್ಕೆ ಅಧ್ಯಾತ್ಮದ ತಳಹದಿ ಇರಬೇಕು ಎಂದು ನಾನು ಪ್ರತಿಪಾದಿಸುತ್ತೇನೆ. ಭಾರತೀಯ ಸಮಾಜದಲ್ಲಿ ಅಧ್ಯಾತ್ಮವನ್ನು ಮತ್ತೆ ಪುನಶ್ಚೇತಗೊಳಿಸಬೇಕೆಂಬುದೇ ನನ್ನ ಉದ್ದೇಶ. ಧರ್ಮಗಳ ಆಧಾರದ ಮೇಲೆ ಕಿತ್ತಾಡುತ್ತಾ ನಾವು ಭಾರತದ ಅಧ್ಯಾತ್ಮಕ್ಕೆ ಅವಮಾನ ಮಾಡುತ್ತಿದ್ದೇವೆ. ಒಂದು ಉನ್ನತ ಸಮಾಜ ಮತ್ತು ಪ್ರಬಲ ರಾಷ್ಟ್ರವನ್ನು ರೂಪಿಸಲು ಧರ್ಮಗಳು ಪ್ರೇರಣೆ ನೀಡಬೇಕು. ಮಹಾತ್ಮಗಾಂಧಿ ಅವರು ಪ್ರತಿಪಾದಿಸಿದ ರಾಮರಾಜ್ಯ ಪರಿಕಲ್ಪನೆಯ ಸಮಾಜದಲ್ಲಿ ಮಾತ್ರ ಹೀಗೆ ನಾಗರಿಕರು ಅಧ್ಯಾತ್ಮದ ಅತ್ಯುನ್ನತ ಸ್ಥಿತಿಯಲ್ಲಿ ಯೋಚಿಸಲು ಸಾಧ್ಯ. ಭಾರತದಲ್ಲಿ ಅನ್ಯಾಯ, ಹಿಂಸೆ, ಅಮಾನವೀಯತೆ, ಜಾತಿ ಆಧರಿತ ತಾರತಮ್ಯ ಇರುವವರೆಗೂ ನಮ್ಮ ನಿಜವಾದ ಸಾಮಥ್ರ್ಯವನ್ನು ನಾವು ಸದ್ಬಳಕೆ ಮಾಡಿಕೊಳ್ಳುವುದು ಸಾಧ್ಯವಿಲ್ಲ.
ಒಂದಾಗಿ ಸಾಗಿದಾಗ ಮಾತ್ರ ನಾವು ಪ್ರಗತಿಹೊಂದಲು ಸಾಧ್ಯ. ಇದಕ್ಕೆ ವ್ಯತಿರಿಕ್ತವೆಂದರೆ, ಒಟ್ಟಾಗಿಯೇ ನಾಶವಾಗುವುದು ಮಾತ್ರ. ಆಯ್ಕೆ ಯಾವುದಾದರೂ ನಮಗೆ ಸಮಾನ ಭವಿಷ್ಯ ಮಾತ್ರ ಇದೆ ಎನ್ನುವುದು ವಾಸ್ತವ ಸಂಗತಿ. ಹೀಗಾಗಿ ನನ್ನ ದೃಷ್ಟಿಕೋನ ಆರ್‍ಎಸ್‍ಎಸ್‍ಗೆ ಕೆಟ್ಟದಾಗಿ ಕಾಣುತ್ತÀ್ತದೆ. ಹಿಟ್ಲರ್ ಕಾಲದಲ್ಲಿ ಕ್ರೂರ ಜರ್ಮನ್ ಅಧಿಕಾರಿಗಳು ಜನರ ಮೇಲೆ ಹೇರಲು ಯತ್ನಿಸಿದ ಸಿದ್ಧಾಂತವನ್ನು ಆರ್‍ಎಸ್‍ಎಸ್ ನಮ್ಮ ದೇಶದಲ್ಲಿ ಇದೀಗ ಸಾಕಾರಗೊಳಿಸಲು ಯತ್ನಿಸುತ್ತಿರುವುದು ವಿಪರ್ಯಾಸ. ಆರ್‍ಎಸ್‍ಎಸ್‍ನ ಈ ಸಿದ್ಧಾಂತಕ್ಕೆ ಹಿಂದೂಧರ್ಮದ ಜೊತೆಗೆ ಏನಾದರೂ ಸಂಬಂಧವಿದೆಯೇ ಎಂಬ ಬಗ್ಗೆಯೇ ನನಗೆ ಅನುಮಾನವಿದೆ. ಹಾಗೆಯೇ ನಾನು ಪ್ರತಿಪಾದಿಸುತ್ತಿರುವ ವಿಚಾರಗಳ ಕಾರಣಕ್ಕಾಗಿಯೇ ನನ್ನ ಮೇಲೆ ಹಲ್ಲೆ ನಡೆಯಿತು ಎಂದು ಆರ್‍ಎಸ್‍ಎಸ್ ಕೂಡ ನಂಬುವುದಿಲ್ಲ ಎಂಬ ಬಗ್ಗೆ ನನಗೆ ಖಾತ್ರಿಯಿದೆ.
ನನ್ನ ಮೇಲೆ ಎರಡನೇ ಬಾರಿ ಹಲ್ಲೆ ನಡೆದಿದೆ. ಈ ಹಲ್ಲೆಗಳು ನನಗೆ ತೀವ್ರ ನೋವನ್ನುಂಟುಮಾಡಿವೆ. ನಾನು ಅನುಭವಿಸಿದ ನೋವು ಮತ್ತು ಹಿಂಸೆಗಳು, ನಮ್ಮ ಸಮಾಜ ಎದುರಿಸುತ್ತಿರುವ ಇಂದಿನ ದುರಂತದ ಬಗ್ಗೆ ಸಹ-ಭಾರತೀಯರನ್ನು ಎಚ್ಚರಿಸುವಂತಾದರೆ ಮಾತ್ರ ನನ್ನ ನೋವು ಶಮನವಾಗುತ್ತದೆ.”
ಆರೆಸ್ಸೆಸ್-ಬಿಜೆಪಿಗಳು ಸತ್ಯ, ನ್ಯಾಯಗಳಿಗೆ ವಿರುದ್ಧವಾಗಿ ಪ್ರತಿಪಾದಿಸುತ್ತಿರುವ ಡೋಂಗಿ ಧರ್ಮದ ಒಳಮರ್ಮವನ್ನು ಅರಿಯದೇ ಹೋದರೆ ಈ ದೇಶಕ್ಕೆ ಭವಿಷ್ಯವಿಲ್ಲ.

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ಐ-ಪ್ಯಾಕ್ ಮೇಲೆ ದಾಳಿ ಪ್ರಕರಣ: ಮಮತಾ ಬ್ಯಾನರ್ಜಿ ದೂರಿನ ಬೆನ್ನಲ್ಲೇ ಜಾರಿ ನಿರ್ದೇಶನಾಲಯದ ವಿರುದ್ಧ ಎಫ್‌ಐಆರ್

ಕೋಲ್ಕತ್ತಾ: ರಾಜಕೀಯ ಸಲಹಾ ಸಂಸ್ಥೆ ಐ-ಪಿಎಸಿ (ಐ-ಪ್ಯಾಕ್) ಕಚೇರಿ ಮತ್ತು ಅದರ ಮುಖ್ಯಸ್ಥ ಪ್ರತೀಕ್ ಜೈನ್ ಅವರ ನಿವಾಸದ ಮೇಲೆ ಜಾರಿ ನಿರ್ದೇಶನಾಲಯ ನಡೆಸಿದ ದಾಳಿಗೆ ಸಂಬಂಧಿಸಿದಂತೆ ಟಿಎಂಸಿ ಅಧ್ಯಕ್ಷೆ ಮಮತಾ ಬ್ಯಾನರ್ಜಿ...

‘ಭ್ರಷ್ಟ ಜನತಾ ಪಾರ್ಟಿ’: ಬಿಜೆಪಿ ಡಬಲ್ ಎಂಜಿನ್ ಆಡಳಿತದ ವಿರುದ್ಧ ರಾಹುಲ್ ಗಾಂಧಿ ವಾಗ್ದಾಳಿ

ನವದೆಹಲಿ: ವಿವಿಧ ರಾಜ್ಯಗಳಲ್ಲಿ ಬಿಜೆಪಿಯ ಡಬಲ್ ಎಂಜಿನ್ ಸರ್ಕಾರಗಳ ವಿರುದ್ಧ ಲೋಕಸಭೆ ವಿರೋಧ ಪಕ್ಷದ ನಾಯಕ ರಾಹುಲ್ ಗಾಂಧಿ ವಾಗ್ದಾಳಿ ನಡೆಸಿದ್ದಾರೆ.  ತಮ್ಮ ಸಾಮಾಜಿಕ ಮಾಧ್ಯಮ ಎಕ್ಸ್‌ನಲ್ಲಿ ಪೋಸ್ಟ್ ಮಾಡಿರುವ ರಾಹುಲ್, ಉತ್ತರಾಖಂಡದಲ್ಲಿ ಅಂಕಿತ...

ಇಂದೋರ್‌ನಲ್ಲಿ ಕಲುಷಿತ ನೀರಿಗೆ 8 ಮಂದಿ ಬಲಿ: ಆರ್‌ಎಸ್‌ಎಸ್ ಕಚೇರಿಯಲ್ಲಿ ಜಿಲ್ಲಾಧಿಕಾರಿ ಮತ್ತು ಮೇಯರ್: ಭುಗಿಲೆದ್ದ ವಿವಾದ

ಇಂದೋರ್: ಆರ್‌ಎಸ್‌ಎಸ್ ಕಚೇರಿಯಲ್ಲಿ ಬುಧವಾರ ತಡರಾತ್ರಿ ನಡೆದ ಸಭೆಯಲ್ಲಿ ಜಿಲ್ಲಾಧಿಕಾರಿ ಮತ್ತು ಮೇಯರ್ ಭಾಗವಹಿಸಿದ್ದು ಕಂಡುಬಂದ ನಂತರ ಗುರುವಾರ ಇಂದೋರ್‌ನಲ್ಲಿ ರಾಜಕೀಯ ವಿವಾದ ಭುಗಿಲೆದ್ದಿದೆ.  ಕನಿಷ್ಠ ಎಂಟು ಮಂದಿ ಜೀವಗಳನ್ನು ಬಲಿ ಪಡೆದಿರುವ ಕಲುಷಿತ...

ಐ-ಪ್ಯಾಕ್ ಮೇಲೆ ಇಡಿ ದಾಳಿ: ಕೋಲ್ಕತ್ತಾದಲ್ಲಿ ಮಮತಾ ಪ್ರತಿಭಟನೆ: ಅಮಿತ್ ಶಾ ಕಚೇರಿಯ ಹೊರಗೆ ಪ್ರತಿಭಟಿಸುತ್ತಿದ್ದ ಟಿಎಂಸಿ ಶಾಸಕರ ಬಂಧನ

ಗುರುವಾರ (ಜ.8) ಬೆಳಿಗ್ಗೆ ಕೋಲ್ಕತ್ತಾದ ಸಾಲ್ಟ್ ಲೇಕ್‌ನಲ್ಲಿರುವ ರಾಜಕೀಯ ಸಲಹಾ ಸಂಸ್ಥೆ ಐ-ಪಿಎಸಿ (ಐ-ಪ್ಯಾಕ್) ಕಚೇರಿ ಮತ್ತು ಅದರ ಮುಖ್ಯಸ್ಥ ಪ್ರತೀಕ್ ಜೈನ್ ಅವರ ಮನೆ ಮೇಲೆ ಜಾರಿ ನಿರ್ದೇಶನಾಲಯ (ಇಡಿ) ನಡೆಸಿದ...

ಮಹಾರಾಷ್ಟ್ರ ಜಲ್ನಾ ಮಹಾನಗರ ಪಾಲಿಕೆ ಚುನಾವಣೆಯಲ್ಲಿ ಪತ್ರಕರ್ತೆ ಗೌರಿ ಲಂಕೇಶ್ ಹತ್ಯೆ ಪ್ರಕರಣದ ಪ್ರಮುಖ ಆರೋಪಿ ಸ್ಪರ್ಧೆ!

ಪತ್ರಕರ್ತೆ ಗೌರಿ ಲಂಕೇಶ್ ಹತ್ಯೆಯ ಆರೋಪಿ ಶ್ರೀಕಾಂತ್ ಪಂಗಾರ್ಕರ್ ಮುಂಬರುವ ಜಲ್ನಾ ಮುನ್ಸಿಪಲ್ ಕಾರ್ಪೊರೇಷನ್ ಚುನಾವಣೆಯಲ್ಲಿ ಸ್ವತಂತ್ರ ಅಭ್ಯರ್ಥಿಯಾಗಿ ಸ್ಪರ್ಧಿಸುತ್ತಿದ್ದಾರೆ ಎಂಬ ಸುದ್ದಿ  ಹಲವು ರಾಷ್ಟ್ರೀಯ ಮಾಧ್ಯಮಗಳಲ್ಲಿ ವರದಿಯಾಗಿದೆ.  ಗೌರಿ ಲಂಕೇಶ್ ಹತ್ಯೆ ಸೇರಿದಂತೆ...

‘ಮೋದಿ ಟ್ರಂಪ್‌ಗೆ ಕರೆ ಮಾಡದ ಕಾರಣ ಭಾರತ-ಯುಎಸ್ ವ್ಯಾಪಾರ ಒಪ್ಪಂದ ನಡೆಯಲಿಲ್ಲ’: ಹೊವಾರ್ಡ್ ಲುಟ್ನಿಕ್ 

ಪ್ರಧಾನಿ ನರೇಂದ್ರ ಮೋದಿ ಅವರು ಅಮೆರಿಕ ಅಧ್ಯಕ್ಷ ಡೊನಾಲ್ಡ್ ಟ್ರಂಪ್ ಅವರಿಗೆ ಸರಿಯಾದ ಸಮಯಕ್ಕೆ ಕರೆ ಮಾಡದ ಕಾರಣ ಭಾರತದೊಂದಿಗಿನ ವ್ಯಾಪಾರ ಒಪ್ಪಂದ ನಡೆಯಲಿಲ್ಲ ಎಂದು ಅಮೆರಿಕದ ವಾಣಿಜ್ಯ ಕಾರ್ಯದರ್ಶಿ ಹೊವಾರ್ಡ್ ಲುಟ್ನಿಕ್...

‘ರೈಲ್ವೆ ಸಚಿವಾಲಯವನ್ನು ವೈಯಕ್ತಿಕ ಆಸ್ತಿಯಾಗಿ ಬಳಸಿಕೊಳ್ಳಲಾಗಿದೆ’: ಲಾಲು ಮತ್ತು ಕುಟುಂಬದ ವಿರುದ್ಧ ದೆಹಲಿ ನ್ಯಾಯಾಲಯ ಆರೋಪ

ನವದೆಹಲಿ: ಉದ್ಯೋಗಕ್ಕಾಗಿ ಭೂಮಿ ಹಗರಣದಲ್ಲಿ ಆರ್‌ಜೆಡಿ ಮುಖ್ಯಸ್ಥ ಮತ್ತು ಮಾಜಿ ರೈಲ್ವೆ ಸಚಿವ ಲಾಲು ಪ್ರಸಾದ್ ಯಾದವ್, ಅವರ ಕುಟುಂಬದ ಸದಸ್ಯರು ಮತ್ತು ಇತರರ ವಿರುದ್ಧ ದೆಹಲಿ ನ್ಯಾಯಾಲಯ ಗಂಭೀರ ಆರೋಪಗಳನ್ನು ಮಾಡಿದೆ.  ಯಾದವ್...

‘ಕೇರಳದ ಮಲಯಾಳಂ ಮಸೂದೆಯನ್ನು ವಿರೋಧಿಸಲು ಸಾಧ್ಯವಿರುವ ಎಲ್ಲವನ್ನೂ ಮಾಡುತ್ತೇವೆ’: ಸಿಎಂ ಸಿದ್ದರಾಮಯ್ಯ

ಬೆಂಗಳೂರು: ಕನ್ನಡ ಮಾಧ್ಯಮ ಶಾಲೆಗಳಲ್ಲಿಯೂ ಮಲಯಾಳಂ ಅನ್ನು ಪ್ರಥಮ ಭಾಷೆಯನ್ನಾಗಿ ಮಾಡುವ ಕೇರಳದ ಪ್ರಸ್ತಾವಿತ ಕಾನೂನನ್ನು ವಿರೋಧಿಸಲು ಕರ್ನಾಟಕ "ಸಾಧ್ಯವಾದಷ್ಟು ಪ್ರಯತ್ನಿಸುತ್ತದೆ" ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ಹೇಳಿದ್ದಾರೆ.   ಪ್ರಸ್ತಾವಿತ ಮಲಯಾಳಂ ಭಾಷಾ ಮಸೂದೆಯು "ಕೇರಳದ...

ಜಾರ್ಖಂಡ್‌ನಲ್ಲಿ ಮತ್ತೊಂದು ಗುಂಪುಹತ್ಯೆ: ದನ ಕಳ್ಳತನದ ಶಂಕೆಯಲ್ಲಿ ಮುಸ್ಲಿಂ ವ್ಯಕ್ತಿಯನ್ನು ಥಳಿಸಿ ಕೊಂದ ಗುಂಪು

ಜಾರ್ಖಂಡ್‌ನ ಗೊಡ್ಡಾ ಜಿಲ್ಲೆಯಲ್ಲಿ ಬುಧವಾರ ದನಗಳನ್ನು ಕದ್ದಿದ್ದಾನೆ ಎಂಬ ಶಂಕೆಯಲ್ಲಿ 45 ವರ್ಷದ ಮುಸ್ಲಿಂ ವ್ಯಕ್ತಿಯನ್ನು ಅಪರಿಚಿತ ಜನರ ಗುಂಪೊಂದು ಹೊಡೆದು ಕೊಂದಿದೆ ಎಂದು ಪಿಟಿಐ ವರದಿ ಮಾಡಿದೆ. ಪೊಲೀಸ್ ಅಧಿಕಾರಿಗಳನ್ನು ಉಲ್ಲೇಖಿಸಿ ವರದಿ...

ನ್ಯಾಷನಲ್ ಹೆರಾಲ್ಡ್ ಜಾಹೀರಾತು ವಿವಾದ: ಹಣಕಾಸಿನ ದಾಖಲೆ ಕೇಳಿ ಡಿಕೆ ಸಹೋದರರಿಗೆ ನೋಟಿಸ್  

ಕಾಂಗ್ರೆಸ್ ನೇತೃತ್ವದ ಕರ್ನಾಟಕ ಸರ್ಕಾರದಿಂದ ನ್ಯಾಷನಲ್ ಹೆರಾಲ್ಡ್ ಪತ್ರಿಕೆಗೆ ಬೇರೆ ಯಾವುದೇ ರಾಷ್ಟ್ರೀಯ ದಿನಪತ್ರಿಕೆಗಿಂತ ಹೆಚ್ಚಿನ ಜಾಹೀರಾತು ನಿಧಿ ದೊರೆತಿದೆ ಎಂದು ವರದಿಯಾಗಿದೆ, ಇದು ಸಾರ್ವಜನಿಕ ಹಣದ ಬಳಕೆಯ ಬಗ್ಗೆ ಪ್ರಶ್ನೆಗಳನ್ನು ಹುಟ್ಟುಹಾಕಿದೆ....