Homeಮುಖಪುಟಆಗ್ರಾದಲ್ಲಿ ನಿರಂತರ ಮಳೆ | ತಾಜ್ ಮಹಲ್ ಮುಖ್ಯ ಗುಮ್ಮಟದಲ್ಲಿ ನೀರು ಸೋರಿಕೆ!

ಆಗ್ರಾದಲ್ಲಿ ನಿರಂತರ ಮಳೆ | ತಾಜ್ ಮಹಲ್ ಮುಖ್ಯ ಗುಮ್ಮಟದಲ್ಲಿ ನೀರು ಸೋರಿಕೆ!

- Advertisement -
- Advertisement -

ಕಳೆದ ಮೂರು ದಿನಗಳಿಂದ ಎಡೆಬಿಡದೆ ಸುರಿಯುತ್ತಿರುವ ಮಳೆಯಿಂದಾಗಿ ಆಗ್ರಾದ ತಾಜ್ ಮಹಲ್ ಮುಖ್ಯ ಗುಮ್ಮಟ ನೀರು ಸೋರಿಕೆಯಾಗಿದ್ದು, ಆವರಣದಲ್ಲಿರುವ ಉದ್ಯಾನಕ್ಕೆ ನೀರು ನುಗ್ಗಿದೆ. ಗುರುವಾರ ತಾಜ್‌ಮಹಲ್ ಆವರಣದಲ್ಲಿರುವ ಉದ್ಯಾನ ಮುಳುಗಡೆ ಆಗಿರುವ ವಿಡಿಯೋ ವೈರಲ್ ಆಗಿತ್ತು. ಮುಖ್ಯ ಗುಮ್ಮಟದಲ್ಲಿ ಸೋರಿಕೆಯಾಗಿದೆಯಾದರೂ, ಅದಕ್ಕೆ ಯಾವುದೇ ಹಾನಿಯಾಗಿಲ್ಲ ಎಂದು ಆಗ್ರಾ ವೃತ್ತದ ಭಾರತೀಯ ಪುರಾತತ್ವ ಸರ್ವೇಕ್ಷಣೆಯ (ಎಎಸ್‌ಐ) ಹಿರಿಯ ಅಧಿಕಾರಿಯೊಬ್ಬರು ಹೇಳಿದ್ದಾರೆ.

ಗುರುವಾರ ಸಂಜೆ ಹೊರಹೊಮ್ಮಿದ 20 ಸೆಕೆಂಡ್‌ಗಳ ವೀಡಿಯೊವು ಇಂಟರ್‌ನೆಟ್‌ನಲ್ಲಿ ವೈರಲ್ ಆಗಿದ್ದು, ಇದರಲ್ಲಿ ಸ್ಮಾರಕದ ಉದ್ಯಾನವೊಂದು ಮಳೆ ನೀರಿನಿಂದ ಮುಳುಗಿದ್ದು ದಾಖಲಾಗಿದೆ.

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ
ಇಲ್ಲಿಕ್ಲಿಕ್ ಮಾಡಿ

ತಾಜ್ ಮಹಲ್ ಮುಖ್ಯ ಗುಮ್ಮಟದಲ್ಲಿನ ಸೋರಿಕೆ ಕುರಿತು ಮಾತನಾಡಿದ ಆಗ್ರಾ ವೃತ್ತದ ಭಾರತೀಯ ಪುರಾತತ್ವ ಸರ್ವೇಕ್ಷಣೆಯ (ಎಎಸ್‌ಐ) ಅಧೀಕ್ಷಕ ಮುಖ್ಯಸ್ಥ ರಾಜ್‌ಕುಮಾರ್ ಪಟೇಲ್, “ಹೌದು, ತಾಜ್ ಮಹಲ್‌ನ ಮುಖ್ಯ ಗುಮ್ಮಟದಲ್ಲಿ ಸೋರಿಕೆಯಾಗಿರುವುದನ್ನು ನಾವು ನೋಡಿದ್ದೇವೆ. ಅದರ ನಂತರ ನಾವು ಪರಿಶೀಲಿಸಿದಾಗ ಸೋರಿಕೆಯಿಂದಾಗಿ ಮುಖ್ಯ ಗುಮ್ಮಟಕ್ಕೆ ಯಾವುದೇ ಹಾನಿಯಾಗಿಲ್ಲ. ನಾವು ಡ್ರೋನ್ ಕ್ಯಾಮೆರಾ ಮೂಲಕ ಮುಖ್ಯ ಗುಮ್ಮಟವನ್ನು ಪರಿಶೀಲಿಸಿದ್ದೇವೆ” ಎಂದು ಹೇಳಿದ್ದಾರೆ.

ಇದನ್ನೂಓದಿ: ಬಿರಿಯಾನಿ ತಂದ ವಿದ್ಯಾರ್ಥಿಯ ಅಮಾನತು ಪ್ರಕರಣ | ಮಕ್ಕಳ ಹಕ್ಕುಗಳ ಆಯೋಗದಿಂದ ತನಿಖೆಗೆ ಆದೇಶ

ವಿಡಿಯೊ ಪ್ರವಾಸಿಗರ ಗಮನ ಸೆಳೆದಿದ್ದು, ಹಾಗಾಗಿ ಹಲವಾರು ಜನರು ತಾಜ್ ಮಹಲ್‌ಗೆ ಭೇಟಿ ನೀಡಿ, ಅದರ ವೀಡಿಯೊವನ್ನು ಚಿತ್ರೀಕರಿಸಿದ್ದಾರೆ. ಸರ್ಕಾರಿ ಅನುಮೋದಿತ ಪ್ರವಾಸಿ ಮಾರ್ಗದರ್ಶಿಯಾಗಿ ಕೆಲಸ ಮಾಡುತ್ತಿರುವ ಸ್ಥಳೀಯ ನಿವಾಸಿಯೊಬ್ಬರು, “ಸ್ಮಾರಕವನ್ನು ಸರಿಯಾದ ಕಾಳಜಿ ವಹಿಸಿ ನಿರ್ವಹಿಸಬೇಕು. ಏಕೆಂದರೆ ಪ್ರವಾಸೋದ್ಯಮ ಉದ್ಯಮದ ಜನರಿಗೆ ಇದು ಏಕೈಕ ಭರವಸೆಯಾಗಿದೆ” ಎಂದು ಹೇಳಿದರು.

ತಾಜ್ ಮಹಲ್ ಆಗ್ರಾ ಮತ್ತು ಇಡೀ ರಾಷ್ಟ್ರದ ಹೆಮ್ಮೆಯಾಗಿದೆ, ಇದು ನೂರಾರು ಸ್ಥಳೀಯರಿಗೆ ಮತ್ತು ಪ್ರವಾಸೋದ್ಯಮ ಉದ್ಯಮದಲ್ಲಿ ಕೆಲಸ ಮಾಡುವವರಿಗೆ ಉದ್ಯೋಗವನ್ನು ನೀಡುತ್ತದೆ ಎಂದು ಸರ್ಕಾರದ ಅನುಮೋದಿತ ಪ್ರವಾಸಿ ಮಾರ್ಗದರ್ಶಿ ಮೋನಿಕಾ ಶರ್ಮಾ ಹೇಳಿದ್ದಾರೆ.

ಆಗ್ರಾದಲ್ಲಿ ಕಳೆದ ಮೂರು ದಿನಗಳಿಂದ ಎಡೆಬಿಡದೆ ಸುರಿಯುತ್ತಿರುವ ಮಳೆಯಿಂದಾಗಿ ನಗರದ ಬಹುತೇಕ ಭಾಗಗಳಲ್ಲಿ ನೀರಿನ ಸಮಸ್ಯೆ ಕಾಣಿಸಿಕೊಂಡಿದೆ. ರಾಷ್ಟ್ರೀಯ ಹೆದ್ದಾರಿಯೊಂದು ಮಳೆ ನೀರಿನಿಂದ ಕೊಚ್ಚಿ ಹೋಗಿದ್ದು, ಮಳೆ ನೀರಿನಿಂದ ಬೆಳೆಗಳು ಮುಳುಗಡೆಯಾಗಿದ್ದು, ನಿರಂತರ ಮಳೆಯಿಂದಾಗಿ ನಗರದ ಐಷಾರಾಮಿ ಪ್ರದೇಶಗಳು ನೀರು ನುಗ್ಗಿವೆ ಎಂದು ವರದಿಯಾಗಿದೆ. ಮಳೆಯಿಂದಾಗಿ ಎಲ್ಲಾ ಶಾಲೆಗಳನ್ನು ಮುಚ್ಚುವಂತೆ ಆಗ್ರಾ ಆಡಳಿತ ಆದೇಶಿಸಿದೆ.

ವಿಡಿಯೊನೋಡಿ: ರಾಜ್ಯಗಳ ಅಸ್ಮಿತೆ ಹಕ್ಕು ಮತ್ತು ಪಾಲಿನ ರಕ್ಷಣೆಗಾಗಿ ರಾಷ್ಟ್ರೀಯ ಅಭಿಯಾನ ಚಾಲನಾ ಸಭೆ

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ಡಿಜಿಟಲೀಕರಣಗೊಂಡ 2002ರ ಮತದಾರರ ಪಟ್ಟಿಯಿಂದ ಬೆಂಗಳೂರಿನ ಮತಗಟ್ಟೆಗಳೇ ಮಾಯ: ಮಾಹಿತಿ ಸಿಗದೆ ಆತಂಕದಲ್ಲಿ ನೂರಾರು ಮತದಾರರು

ಬೆಂಗಳೂರು: ಸಿಲಿಕಾನ್ ಸಿಟಿ ಬೆಂಗಳೂರಿನ ಹಲವು ಭಾಗಗಳಲ್ಲಿ 2002ರ ಡಿಜಿಟಲೀಕರಣಗೊಂಡ ಮತದಾರರ ಪಟ್ಟಿಯಿಂದ ಇಡೀ ಮತಗಟ್ಟೆಗಳೇ ಕಾಣೆಯಾಗಿರುವ ಗಂಭೀರ ಪ್ರಕರಣವೊಂದು ಬೆಳಕಿಗೆ ಬಂದಿದೆ. ಇದರಿಂದಾಗಿ ನೂರಾರು ಮತದಾರರು ಆತಂಕ ಮತ್ತು ಗೊಂದಲಕ್ಕೊಳಗಾಗಿದ್ದಾರೆ ಎಂದು...

‘ರಾಮನಿಗೆ ಅವಮಾನಿಸಿದ್ದಕ್ಕೆ ಶಾಯಿ ಎರಚಿದೆ’: ಜಂತರ್ ಮಂತರ್‌ನಲ್ಲಿ ಅಭಿಜೀತ್ ದೀಪ್ಕೆ ಮೇಲಿನ ದಾಳಿಯನ್ನು ಸಮರ್ಥಿಸಿಕೊಂಡ ಬರ್ಖಾ ಟ್ರೆಹಾನ್

ನವದೆಹಲಿ: ದೇಶದ ರಾಜಧಾನಿಯ ಜಂತರ್ ಮಂತರ್‌ನಲ್ಲಿ ಜುಲೈ 18 ರ ಶನಿವಾರದಂದು ನಡೆದ ಪ್ರತಿಭಟನಾ ಸಭೆಯಲ್ಲಿ ಭಾಷಣ ಮಾಡುತ್ತಿದ್ದ ‘ಜಿರಳೆ ಜನತಾ ಪಕ್ಷ’ದ ಸಂಸ್ಥಾಪಕ ಅಭಿಜೀತ್ ದೀಪ್ಕೆ ಅವರ ಮೇಲೆ ಶಾಯಿ ಎರಚಿದ...

ಸರ್ವಪಕ್ಷ ಸಭೆ: TMC ಬಂಡಾಯ ಸಂಸದರಿಗೆ ಸ್ಪೆಷಲ್ ಸೀಟು, INDIA ಮೈತ್ರಿಕೂಟದ ಸಂಸದರು ವಾಕೌಟ್

ಸಂಸತ್ತಿನ ಮುಂಗಾರು ಅಧಿವೇಶನ ಆರಂಭಕ್ಕೆ ಕೆಲವೇ ದಿನಗಳು ಬಾಕಿ ಇರುವಾಗ, ರವಿವಾರ ನಡೆದ ಸರ್ವಪಕ್ಷಗಳ ಸಭೆಯು ತೀವ್ರ ರಾಜಕೀಯ ಸಂಘರ್ಷಕ್ಕೆ ಸಾಕ್ಷಿಯಾಗಿದೆ. ತೃಣಮೂಲ ಕಾಂಗ್ರೆಸ್ (TMC) ಪಕ್ಷದಿಂದ ಬಂಡಾಯವೆದ್ದ ಸಂಸದರಿಗೆ ಕೇಂದ್ರ ಸರ್ಕಾರವು...

ಜಂತರ್ ಮಂತರ್‌ನಲ್ಲಿ ಪ್ರತಿಭಟನೆ ಹಾದಿ ತಪ್ಪಿಸಲು BJP ಪಿತೂರಿ: ಸಿಜೆಪಿ ಗಂಭೀರ ಆರೋಪ

ದೇಶಾದ್ಯಂತ ಭಾರಿ ಸಂಚಲನ ಸೃಷ್ಟಿಸಿರುವ ನೀಟ್ (NEET) ಪರೀಕ್ಷಾ ಹಗರಣದ ವಿರುದ್ಧ ಜಂತರ್ ಮಂತರ್‌ನಲ್ಲಿ ಸೋನಮ್ ವಾಂಗ್ಚುಕ್ ಹಾಗೂ ಕಾಕ್ರೋಚ್ ಜನತಾ ಪಾರ್ಟಿ (CJP) ಯುವಜನರು ನಡೆಸುತ್ತಿರುವ ಹೋರಾಟದ ಮೈದಾನದಿಂದ ಆತಂಕಕಾರಿ ವರದಿಗಳು...

‘ನಿಮ್ಮ ಮೌನ ಸ್ವೀಕಾರಾರ್ಹವಲ್ಲ’: ರಾಮ ಮಂದಿರ ದೇಣಿಗೆ ‘ಕಳ್ಳತನ’ದ ತನಿಖೆಗೆ ಮೋದಿಗೆ ಖರ್ಗೆ-ರಾಹುಲ್ ಗಾಂಧಿ ಪತ್ರ

ನವದೆಹಲಿ: ಸಂಸತ್ತಿನ ಮಳೆಗಾಲದ ಅಧಿವೇಶನ ಆರಂಭಕ್ಕೆ ಕೆಲವೇ ದಿನಗಳು ಬಾಕಿ ಇರುವಾಗ, ಅಯೋಧ್ಯೆ ರಾಮ ಮಂದಿರ ನಿರ್ಮಾಣದ ದೇಣಿಗೆಯಲ್ಲಿ ನಡೆದಿದೆ ಎನ್ನಲಾದ ಬೃಹತ್ ಆರ್ಥಿಕ ಅಕ್ರಮ ಹಾಗೂ ‘ಕಳ್ಳತನ’ದ ವಿಷಯ ರಾಷ್ಟ್ರ ರಾಜಕಾರಣದಲ್ಲಿ...

ಶಾಂತಿಯುತ ಪ್ರತಿಭಟನೆಗಳನ್ನು ಮೋದಿ ಸರ್ಕಾರ ಹತ್ತಿಕ್ಕುತ್ತಿದೆ: ರಾಹುಲ್ ಗಾಂಧಿ

ದೆಹಲಿಯ ಜಂತರ್ ಮಂತರ್‌ನಲ್ಲಿ ಉಪವಾಸ ಸತ್ಯಾಗ್ರಹ ನಡೆಸುತ್ತಿದ್ದ ಪರಿಸರ ಕಾರ್ಯಕರ್ತ ಸೋನಮ್ ವಾಂಗ್‌ಚುಕ್ ಅವರನ್ನು ಬಲವಂತವಾಗಿ ಆಸ್ಪತ್ರೆಗೆ ಸಾಗಿಸಿದ ಬಗ್ಗೆ ಕಾಂಗ್ರೆಸ್ ನಾಯಕ ರಾಹುಲ್ ಗಾಂಧಿ ಶನಿವಾರ ಮೌನ ಮುರಿದಿದ್ದಾರೆ. "ಶಾಂತಿಯುತ ಪ್ರತಿಭಟನೆಗಳನ್ನು...

ಸೋನಮ್ ವಾಂಗ್‌ಚುಕ್ ಬಲವಂತದ ಬಂಧನ; ಕಣ್ಣೀರಿಟ್ಟು ಉಪವಾಸ ಸತ್ಯಾಗ್ರಹ ಆರಂಭಿಸಿದ ಅಭಿಜೀತ್ ದಿಪ್ಕೆ

ಧರ್ಮೇಂದ್ರ ಪ್ರಧಾನ್ ರಾಜೀನಾಮೆಗೆ ಆಗ್ರಹಿಸಿ ಉಪವಾಸ ಸತ್ಯಾಗ್ರಹ ಕೈಗೊಂಡಿರುವ ಸೋನಮ್ ವಾಂಗ್‌ಚುಕ್ ಅವರನ್ನು ದೆಹಲಿ ಪೊಲೀಸ್ ಸಿಬ್ಬಂದಿ ಬಲವಂತವಾಗಿ, ಬಲಪ್ರಯೋಗದ ಮೂಲಕ ಆಸ್ಪತ್ರೆಗೆ ಕರೆದೊಯ್ಯುವಾಗ ಜಂತರ್ ಮಂತರ್‌ನ ಪ್ರತಿಭಟನಾ ಸ್ಥಳದಲ್ಲಿ ಗದ್ದಲ ಉಂಟಾಯಿತು....

ಜಮ್ಮು-ಕಾಶ್ಮೀರ| ಭದ್ರತಾ ಸಿಬ್ಬಂದಿ ಗುಂಡಿಗೆ ವ್ಯಕ್ತಿ ಸಾವು; ಭುಗಿಲೆದ್ದ ಪ್ರತಿಭಟನೆ

ಜಮ್ಮು ಮತ್ತು ಕಾಶ್ಮೀರದ ದೋಡಾ ಜಿಲ್ಲೆಯ ಭದೇರ್ವಾದ ಜೈ ಕಣಿವೆ ಪ್ರದೇಶದಲ್ಲಿ ಗುರುವಾರ ತಡರಾತ್ರಿ ನಡೆದ ಗುಂಡಿನ ದಾಳಿಯಲ್ಲಿ 30 ವರ್ಷದ ನಾಗರಿಕನೊಬ್ಬ ಸಾವನ್ನಪ್ಪಿ ಇಬ್ಬರು ಗಾಯಗೊಂಡಿದ್ದು ವ್ಯಾಪಕ ಪ್ರತಿಭಟನೆಗಳಿಗೆ ಕಾರಣವಾಗಿದೆ. ಮೃತರನ್ನು...

ಸಿಜೆಪಿ ಪ್ರತಿಭಟನೆ ಮೇಲೆ ಕೇಂದ್ರದ ಬಲಪ್ರಯೋಗ: ಸೋನಮ್ ವಾಂಗ್‌ಚುಕ್ ಅವರನ್ನು ಬಂಧಿಸಿ ಆಸ್ಪತ್ರೆಗೆ ಕರೆದೊಯ್ದ ಪೊಲೀಸರು

ದೆಹಲಿಯ ಜಂತರ್ ಮಂತರ್‌ನಲ್ಲಿ 21 ದಿನಗಳಿಂದ ಉಪವಾಸ ಸತ್ಯಾಗ್ರಹ ನಡೆಸುತ್ತಿರುವ ಪರಿಸರ ಕಾರ್ಯಕರ್ತ ಸೋನಮ್ ವಾಂಗ್‌ಚುಕ್ ಅವರನ್ನು ಪ್ರತಿಭಟನಾ ಸ್ಥಳದಿಂದ ಪೊಲೀಸರು ಬಲವಂತವಾಗಿ ಆಸ್ಪತ್ರೆಗೆ ಕರೆದೊಯ್ದಿದ್ದಾರೆ. ಶನಿವಾರ ಬೆಳಿಗ್ಗೆ ಪೊಲೀಸರು ಪ್ರತಿಭಟನಾ ಸ್ಥಳಕ್ಕೆ ಆಗಮಿಸಿ...

ಪ್ರಶ್ನೆಪತ್ರಿಕೆ ಸೋರಿಕೆಗೆ ಇಡೀ ವ್ಯವಸ್ಥೆಯನ್ನೇ ದೂಷಿಸಿದ ವಿಪಕ್ಷ ನಾಯಕ ರಾಹುಲ್ ಗಾಂಧಿ

ರಾಜಕೀಯ ಪಕ್ಷ ಅಥವಾ ಸಂಘಟನೆಯು ಯಾವುದೇ ಶಿಕ್ಷಣ ಸಂಸ್ಥೆಗಳ ಮೇಲೆ ಹಿಡಿತ ಸಾಧಿಸಬಾರದು ಎಂದು ಕಾಂಗ್ರೆಸ್ ನಾಯಕ ರಾಹುಲ್ ಗಾಂಧಿ (ಜು.17) ರಂದು ಹೇಳಿದ್ದಾರೆ. ಪ್ರಶ್ನೆಪತ್ರಿಕೆ ಸೋರಿಕೆಯ ವಿಷಯದ ಬಗ್ಗೆ ರಾಜಕೀಯ ಒಮ್ಮತಕ್ಕೆ ಕರೆ...