Homeಕರ್ನಾಟಕಒಳಮೀಸಲಾತಿ ಜಾರಿಗೆ ಒಪ್ಪಿಗೆ; ಮುಸ್ಲಿಮರಿಗೆ ನೀಡಲಾಗಿದ್ದ ಶೇ.4ರಷ್ಟು ಮೀಸಲಾತಿ ರದ್ದು: ಸಂಪುಟ ನಿರ್ಧಾರ

ಒಳಮೀಸಲಾತಿ ಜಾರಿಗೆ ಒಪ್ಪಿಗೆ; ಮುಸ್ಲಿಮರಿಗೆ ನೀಡಲಾಗಿದ್ದ ಶೇ.4ರಷ್ಟು ಮೀಸಲಾತಿ ರದ್ದು: ಸಂಪುಟ ನಿರ್ಧಾರ

- Advertisement -
- Advertisement -

ಮುಸ್ಲಿಮರಿಗೆ ಒಬಿಸಿ ಪಟ್ಟಿಯಲ್ಲಿ ನೀಡಲಾಗಿದ್ದ ಶೇ.4ರಷ್ಟು ಮೀಸಲಾತಿಯನ್ನು ರದ್ದು ಮಾಡಲು ಕರ್ನಾಟಕ ಕ್ಯಾಬಿನೇಟ್ ನಿರ್ಧರಿಸಿದೆ. ಮುಸ್ಲಿಮರನ್ನು ಶೇಕಡಾ 10 ಇಡಬ್ಲ್ಯೂಎಸ್ ಕೋಟಾಕ್ಕೆ ಸ್ಥಳಾಂತರಿಸಲಾಗುತ್ತಿದೆ.

ಇದರ ನಡುವೆ ಮುಸ್ಲಿಮರಿಗೆ ನೀಡಲಾಗಿದ್ದ ಶೇಕಡಾ 4 ಮೀಸಲಾತಿಯನ್ನು ಒಕ್ಕಲಿಗರಿಗೆ (ಶೇಕಡಾ 2) ಮತ್ತು ಲಿಂಗಾಯತರಿಗೆ (ಶೇಕಡಾ 2) ಹಂಚಲು ನಿರ್ಧರಿಸಲಾಗಿದೆ.

ಒಳಮೀಸಲಾತಿ ಜಾರಿಗೆ ಒಪ್ಪಿಗೆ

ಅವಕಾಶ ವಂಚಿತ ಪರಿಶಿಷ್ಟ ಜಾತಿ ಮತ್ತು ಪರಿಶಿಷ್ಟ ಪಂಗಡಗಳ ಸಮುದಾಯಗಳಿಗೆ ಒಳ ಮೀಸಲಾತಿಯನ್ನು ಸರ್ಕಾರ ಪ್ರಕಟಿಸಿದೆ.

ವಿಧಾನಸೌಧದಲ್ಲಿ ನಡೆದ ಮಹತ್ವದ ಸಚಿವ ಸಂಪುಟ ಸಭೆಯ ನಂತರ ಸುದ್ದಿಗೋಷ್ಠಿಯನ್ನು ಉದ್ದೇಶಿಸಿ ಮಾತನಾಡಿದ ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ, “ಪರಿಶಿಷ್ಟ ಸಮುದಾಯಗೊಳಗೆ ಒಳ ಮೀಸಲಾತಿ ನೀಡಲು ಸಂಪುಟ ನಿರ್ಧಾರ ಕೈಗೊಂಡಿದೆ. ಎಸ್‌ಸಿ ಮೀಸಲಾತಿಯನ್ನು ನಾಲ್ಕು ಗುಂಪುಗಳಾಗಿ ವರ್ಗೀಕರಿಸಿ ಜನಸಂಖ್ಯೆಗೆ ಅನುಗುಣವಾಗಿ ನೀಡಲಾಗಿದೆ” ಎಂದು ಮಾಹಿತಿ ನೀಡಿದ್ದಾರೆ.

ಗುಂಪು ಒಂದರಲ್ಲಿ ಮಾದಿಗ ಸಂಬಂಧಿತ ಜಾತಿಗಳಿಗೆ ಶೇ 6ರಷ್ಟು ಮೀಸಲಾತಿ, ಗುಂಪು 2 ರಲ್ಲಿ ಹೊಲೆಯ ಸಂಬಂಧಿತ ಸಮುದಾಯಕ್ಕೆ ಶೇ 5.5ರಷ್ಟು ಮೀಸಲಾತಿ, ಗುಂಪು 3ರಲ್ಲಿ ಬಂಜಾರ, ಭೋವಿ, ಕೊರಚ, ಕೊರಮ ಸಮುದಾಯಕ್ಕೆ ಶೇ 4.5ರಷ್ಟು ಮೀಸಲಾತಿ, ಗುಂಪು 4ರಲ್ಲಿರುವ ಮತ್ತಿತರರಿಗೆ ಶೇ.1ರಷ್ಟು ಮೀಸಲಾತಿ ನೀಡಲು ನಿರ್ಧಾರ ಕೈಗೊಳ್ಳಲಾಗಿದೆ ಎಂದು ಬೊಮ್ಮಾಯಿ ಮಾಹಿತಿ ನೀಡಿದ್ದಾರೆ.

2ಬಿ ಅಡಿ ಮುಸ್ಲಿಮರಿಗೆ ನೀಡಲಾಗುತ್ತಿದ್ದ ಮೀಸಲಾತಿಯನ್ನು ರದ್ದುಗೊಳಿಸಲಾಗಿದ್ದು, ಅವರಿಗೆ ಆರ್ಥಿಕವಾಗಿ ಹಿಂದುಳಿದ ವರ್ಗದ(EWS) ಅಡಿಯಲ್ಲಿ ಮೀಸಲಾತಿ ನೀಡಲಾಗುವುದು. ಧಾರ್ಮಿಕ ಅಲ್ಪಸಂಖ್ಯಾತರಿಗೆ 7 ರಾಜ್ಯಗಳಲ್ಲಿ ಒಬಿಸಿ ಮೀಸಲಾತಿ ಇಲ್ಲ ಎಂದು ಸಿಎಂ ಬೊಮ್ಮಾಯಿ ತಿಳಿಸಿದ್ದಾರೆ.

ಇನ್ನು 2ಸಿ ಅಡಿ ಒಕ್ಕಲಿಗರಿಗೆ ಶೇಕಡಾ 6 ರಷ್ಟು ಮೀಸಲಾತಿ ಹಾಗೂ 2 ಡಿ ಅಡಿ ಲಿಂಗಾಯತರಿಗೆ ಶೇಕಡಾ 7ರಷ್ಟು ಮೀಸಲಾತಿ ನೀಡಲಾಗುವುದು ಎಂದು ಸಿಎಂ ಹೇಳಿದ್ದಾರೆ. ಈ ಮೂಲಕ ಚುನಾವಣೆ ಸಂದರ್ಭದಲ್ಲಿ ಎರಡು ಬೃಹತ್ ಸಮುದಾಯಗಳನ್ನು ಸೆಳೆಯುವ ತಂತ್ರಗಾರಿಕೆಯನ್ನು ಸರ್ಕಾರ ಮಾಡಿದೆ.

ಹೆಚ್ಚಳ ಕಾಣದ ಮಾದಿಗ ಸಮುದಾಯದ ಪಾಲು

ಒಳಮೀಸಲಾತಿ ಜಾರಿ ವಿಚಾರ ಈಗ ಕೇಂದ್ರಕ್ಕೆ ಶಿಫಾರಸ್ಸು ಮಾಡಲಾಗುತ್ತಿದೆ. ಜಸ್ಟೀಸ್‌ ನಾಗಮೋಹನದಾಸ್ ವರದಿಯ ಅನ್ವಯ ಶೇ. 15ರಿಂದ 17ಕ್ಕೆ ಪರಿಶಿಷ್ಟ ಮೀಸಲಾತಿಯನ್ನು ಏರಿಕೆ ಮಾಡಲು ಸರ್ಕಾರ ನಿರ್ಧಾರ ಪ್ರಕಟಿಸಿತು. ಏರಿಕೆ ಮಾಡಲಾದ ಮೀಸಲಾತಿ ಅನ್ವಯ ಮೀಸಲಾತಿಯನ್ನು ಹಂಚಿಕೆ ಮಾಡಲಾಗುತ್ತಿದೆ.

ಜಸ್ಟೀಸ್ ಎ.ಜೆ.ಸದಾಶಿವ ಆಯೋಗದ ವರದಿಯಲ್ಲಿ ಮಾದಿಗ ಸಮುದಾಯಕ್ಕೆ ಶೇ.6ರಷ್ಟು ಮೀಸಲಾತಿಯನ್ನು ನೀಡಬೇಕೆಂದು ಶಿಫಾರಸ್ಸು ಮಾಡಲಾಗಿದೆ ಎಂದು ಸೋರಿಕೆಯಾದ ಮಾಹಿತಿಗಳು ಹೇಳುತ್ತಿವೆ. ಆದರೆ ಈಗ ಸರ್ಕಾರ ಕೈಗೊಂಡಿರುವ ನಿರ್ಧಾರದಲ್ಲಿ ಮೀಸಲಾತಿ ಹೆಚ್ಚಳದ ಪಾಲನ್ನು ಮಾದಿಗ ಸಮುದಾಯಕ್ಕೆ ಪ್ರಕಟಿಸಿದಂತೆ ಕಾಣುತ್ತಿಲ್ಲ. ಸದಾಶಿವ ಆಯೋಗದ ವರದಿಯಲ್ಲಿ ನೀಡಲಾಗಿದ್ದ ಪ್ರಮಾಣವನ್ನಷ್ಟೇ ಮಾದಿಗ ಸಮುದಾಯಕ್ಕೆ ಹಂಚಿಕೆ ಮಾಡಲಾಗುತ್ತಿದೆ.

ಸಾರ್ವಜನಿಕವಾಗಿ ಸೋರಿಕೆಯಾಗಿರುವ ಮಾಹಿತಿಯ ಪ್ರಕಾರ- ಜಸ್ಟಿಸ್ ಎ.ಜೆ.ಸದಾಶಿವ ಆಯೋಗವು ಪರಿಶಿಷ್ಟ ಜಾತಿಯಲ್ಲಿನ 101 ಸಮುದಾಯಗಳನ್ನು 4 ಗುಂಪುಗಳಾಗಿ ವರ್ಗೀಕರಿಸಿ, ಶೇ.15ರ ಮೀಸಲಾತಿಯನ್ನು ಜನಸಂಖ್ಯೆ ಆಧಾರದ ಮೇಲೆ ಹಂಚಿಕೆ ಮಾಡಿದೆ. ಅದರಂತೆ ಶೇ.33.4ರಷ್ಟಿರುವ ಎಡಗೈ (ಮಾದಿಗ) ಸಮುದಾಯಕ್ಕೆ ಶೇ.6ರಷ್ಟು, ಶೇ.32ರಷ್ಟಿರುವ ಬಲಗೈ (ಹೊಲೆಯ) ಸಮುದಾಯಕ್ಕೆ ಶೇ.5ರಷ್ಟು, ಶೇ.23.64ರಷ್ಟಿರುವ ಸ್ಪೃಶ್ಯ ಪರಿಶಿಷ್ಟರಿಗೆ ಶೇ.3ರಷ್ಟು ಹಾಗೂ ಇತರೆ ಪರಿಶಿಷ್ಟರಿಗೆ ಶೇ.1ರಷ್ಟು ಮೀಸಲಾತಿ ನೀಡಬೇಕೆಂದು ಶಿಫಾರಸ್ಸು ಮಾಡಲಾಗಿದೆ.

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

BJP ವಿರುದ್ಧದ ಆಕ್ರೋಶವೇ Gen-Z ಹೋರಾಟದ ಮೂಲ: ವಿಪಕ್ಷಗಳಿಗೆ ಇದು ದೊಡ್ಡ ಪಾಠ

ಜಂತರ್ ಮಂತರ್‌ನಲ್ಲಿ ನಡೆದ ವಿದ್ಯಾರ್ಥಿಗಳ ಹೋರಾಟವನ್ನು ನಿಮ್ಮ ರಾಜಕೀಯ ದೃಷ್ಟಿಕೋನಕ್ಕೆ ತಕ್ಕಂತೆ ನೀವು ಕ್ರಾಂತಿ ಎಂದಾದರೂ ನೋಡಬಹುದು, ಅಥವಾ ಕ್ಷಣಿಕವಾಗಿ ಎದ್ದ ಬಿರುಗಾಳಿ ಎಂದಾದರೂ ಭಾವಿಸಬಹುದು. ಆದರೆ ಇಲ್ಲಿ ನಿಜವಾಗಿಯೂ ಆಗಿದ್ದೇನು ಮತ್ತು...

ಇನ್‌ಸ್ಟಾಗ್ರಾಮ್‌ನಲ್ಲಿ ಕ್ಷಮಿಸಿದರೆ ಸಾಲದು, ವಿದ್ಯಾರ್ಥಿಗಳ ಮೇಲಿನ ಕೇಸ್ ವಾಪಸ್ ಪಡೆಯಿರಿ: ಪ್ರಧಾನಿಗೆ ದೀಪ್ಕೆ ನೇರ ಪ್ರಶ್ನೆ

ಪ್ರಧಾನಿ ನರೇಂದ್ರ ಮೋದಿ ಅವರು ಇನ್‌ಸ್ಟಾಗ್ರಾಮ್ ವಿಡಿಯೋವೊಂದರಲ್ಲಿ ತಮ್ಮ ವಿರುದ್ಧ ನಿಂದನಾತ್ಮಕ ಪದ ಬಳಸಿದ್ದ ‘ಕಾಕ್ರೋಚ್ ಜನತಾ ಪಾರ್ಟಿ’ (CJP) ಪ್ರತಿಭಟನಾ ನಿರತ ವಿದ್ಯಾರ್ಥಿಗಳನ್ನು ಕ್ಷಮಿಸಿದ್ದೇನೆ ಎಂದು ಹೇಳಿರುವುದಕ್ಕೆ ಸಿಜೆಪಿ ಸಂಸ್ಥಾಪಕ ಅಭಿಜೀತ್...

ಪ್ರತಿಭಟನೆ ಭೀತಿ : ಸಿಜೆಐ ಸೂರ್ಯಕಾಂತ್ ಭಾಗವಹಿಸಬೇಕಿದ್ದ ಘಟಿಕೋತ್ಸವ ದಿಢೀರ್ ಮುಂದೂಡಿದ TISS

ಮುಂಬೈನ ಟಾಟಾ ಇನ್‌ಸ್ಟಿಟ್ಯೂಟ್ ಆಫ್ ಸೋಷಿಯಲ್ ಸೈನ್ಸಸ್ (ಟಿಐಎಸ್‌ಎಸ್‌) ಸಂಸ್ಥೆಯು ಆಗಸ್ಟ್ 2ರಂದು ನಡೆಸಲು ನಿಗದಿಪಡಿಸಿದ್ದ ತನ್ನ 86ನೇ ವಾರ್ಷಿಕ ಘಟಿಕೋತ್ಸವವನ್ನು ದಿಢೀರ್ ಮುಂದೂಡಿದೆ. ಕ್ಯಾಂಪಸ್ ಭದ್ರತೆಯ ಬಗೆಗಿನ ಕಳವಳಗಳು ಮತ್ತು ವಿದ್ಯಾರ್ಥಿಗಳ...

ಪ್ರಧಾನಿಗಳೇ ನಿಮ್ಮ ರೀಲ್‌ಗಳನ್ನು ಅಂಧಭಕ್ತರು ಮೆಚ್ಚಬಹುದು, ಆದರೆ ಇತಿಹಾಸ ನಿಮ್ಮನ್ನು ಕ್ಷಮಿಸುವುದಿಲ್ಲ: ಬಿ.ಕೆ. ಹರಿಪ್ರಸಾದ್

ಪ್ರಧಾನಿ ನರೇಂದ್ರ ಮೋದಿ ಬಿಡುಗಡೆ ಮಾಡಿರುವ ಇತ್ತೀಚಿನ ವಿಡಿಯೋ (ರೀಲ್) ಕುರಿತು ಕಾಂಗ್ರೆಸ್ ಹಿರಿಯ ನಾಯಕ ಮತ್ತು ಕೆಪಿಸಿಸಿ ಅಧ್ಯಕ್ಷರಾದ ಬಿ.ಕೆ. ಹರಿಪ್ರಸಾದ್ ತೀವ್ರ ವಾಗ್ದಾಳಿ ನಡೆಸಿದ್ದಾರೆ. ತಾನು ಮಾಡಿದರೆ ರಾಜತಂತ್ರ, ಬೇರೆಯವರು...

ಪ್ರಧಾನಿ ಮೋದಿ ವಿರುದ್ಧ ನಿಂದನೆ: ನನಗೆ ಕೇವಲ 15 ವರ್ಷ ‘ಅನ್ಯರ ಪ್ರಭಾವಕ್ಕೆ ಒಳಗಾಗಿದ್ದೆ’ ಎಂದು ಕ್ಷಮೆ ಕೇಳಿದ ವಿದ್ಯಾರ್ಥಿನಿ ವಿಡಿಯೋ ವೈರಲ್

ಪ್ರಧಾನಮಂತ್ರಿ ನರೇಂದ್ರ ಮೋದಿ ಅವರ ವಿರುದ್ಧ ಆಕ್ಷೇಪಾರ್ಹ ಹೇಳಿಕೆ ನೀಡಿ ಭಾರಿ ಆಕ್ರೋಶಕ್ಕೆ ಗುರಿಯಾಗಿದ್ದ ಸಿಜೆಪಿ (CJP) ಪ್ರತಿಭಟನಾಕಾರ ಯುವತಿಯೊಬ್ಬಳು ಸೋಶಿಯಲ್ ಮೀಡಿಯಾದಲ್ಲಿ ಕ್ಷಮೆಯಾಚಿಸಿದ್ದಾಳೆ ಎನ್ನಲಾದ ವೀಡಿಯೊವೊಂದು ಹರಿದಾಡುತ್ತಿದೆ. ಸಾಮಾಜಿಕ ಮಾಧ್ಯಮಗಳಲ್ಲಿ ವೈರಲ್...

ಸ್ಪೇನ್‌ಗೆ ನುಗ್ಗಿದ ಸಾವಿರಾರು ಮೊರಾಕನ್ನರು : ಬೃಹತ್ ವಲಸೆಯ ಹಿಂದೆ ಇಸ್ರೇಲ್ ಕುತಂತ್ರ?

ಮೊರಾಕೊದಿಂದ ಸ್ಪೇನ್‌ನ ಸಿಯುಟಾ ನಗರಕ್ಕೆ ಸಾವಿರಾರು ವಲಸಿಗರು ನುಗ್ಗಿದ ಬಿಕ್ಕಟ್ಟಿನ ಹಿಂದೆ ಇಸ್ರೇಲ್ ಕೈವಾಡವಿದೆ ಎಂಬ ಆರೋಪಗಳು ಕೇಳಿ ಬಂದಿದ್ದು, ಸಾಮಾಜಿಕ ಜಾಲತಾಣಗಳಲ್ಲಿ ಇಸ್ರೇಲ್‌ನ ಕುತಂತ್ರ ಬುದ್ದಿಯ ಬಗ್ಗೆ ಭಾರೀ ಚರ್ಚೆಗಳು ನಡೆಯುತ್ತಿವೆ. ಇದೇ...

‘ಸಾವರ್ಕರ್ ದೇವರನ್ನು, ಧಾರ್ಮಿಕ ನಂಬಿಕೆಗಳನ್ನು ಪ್ರಶ್ನಿಸಿದ್ದರು’: ಪುಣೆ ನ್ಯಾಯಾಲಯದಲ್ಲಿ ಮೊಮ್ಮಗ ಸತ್ಯಕಿ ಸಾವರ್ಕರ್ ಒಪ್ಪಿಗೆ

ಪುಣೆ: ಕಾಂಗ್ರೆಸ್ ನಾಯಕ ಹಾಗೂ ಸಂಸತ್ತಿನ ವಿರೋಧ ಪಕ್ಷದ ನಾಯಕ ರಾಹುಲ್ ಗಾಂಧಿ ವಿರುದ್ಧ ದಾಖಲಾಗಿರುವ ಕ್ರಿಮಿನಲ್ ಮಾನನಷ್ಟ ಮೊಕದ್ದಮೆಯ ವಿಚಾರಣೆಯು ಅತ್ಯಂತ ಕುತೂಹಲಕಾರಿ ಮತ್ತು ರಾಜಕೀಯ-ಸೈದ್ಧಾಂತಿಕ ತಿರುವನ್ನು ಪಡೆದುಕೊಂಡಿದೆ. ವಿನಾಯಕ ದಾಮೋದರ್...

ಮಾಜಿ ಸಚಿವ ಧರ್ಮೇಂದ್ರ ಪ್ರಧಾನ್ ಮಗಳ ಫೋನ್ ಬಿಲ್ ವಿವಾದ: ₹68 ಸಾವಿರ ಬಿಲ್-ಪೇ ಆಗಿದ್ದು ಸರ್ಕಾರಿ ಹಣದಲ್ಲಾ?

ಮಾಜಿ ಕೇಂದ್ರ ಶಿಕ್ಷಣ ಸಚಿವ ಧರ್ಮೇಂದ್ರ ಪ್ರಧಾನ್ ಅವರ ಪುತ್ರಿ ನೈಮಿಷಾ ಪ್ರಧಾನ್ ಅವರು ಮತ್ತೊಮ್ಮೆ ವಿವಾದದ ಕೇಂದ್ರಬಿಂದುವಾಗಿದ್ದಾರೆ. ವಾರಗಳ ಹಿಂದೆ ನೀಟ್ ಪರೀಕ್ಷೆಯ ಪತ್ರಿಕೆ ಸೋರಿಕೆ ಖಂಡಿಸಿ ಕಾಕ್ರೋಚ್ ಜನತಾ ಪಾರ್ಟಿ...

ಇರಾನ್ ವಸತಿ ಕಟ್ಟಡದ ಮೇಲೆ ಅಮೆರಿಕಾ ದಾಳಿ: ಎರಡು ವರ್ಷದ ಮಗು ಸೇರಿ ಒಂದೇ ಕುಟುಂಬದ ಮೂವರ ಸಾವು

ಮಧ್ಯಪ್ರಾಚ್ಯದಲ್ಲಿ ಅಮೆರಿಕ ತನ್ನ ಸಾಮ್ರಾಜ್ಯಶಾಹಿ ಆಧಿಪತ್ಯ ಸ್ಥಾಪನೆಗಾಗಿ ನಡೆಸುತ್ತಿರುವ ಯುದ್ಧಕೋರ ನೀತಿ ಮತ್ತೊಮ್ಮೆ ನಿರಪರಾಧಿ ಸಾರ್ವಜನಿಕರ ರಕ್ತ ಹರಿಸಿದೆ. ಇರಾನ್ ಮೇಲಿನ ಅಮೆರಿಕ ಪಡೆಗಳ ಸರಣಿ ಮತ್ತು ಭೀಕರ ಬಾಂಬ್ ದಾಳಿಗಳು ಕೇವಲ...

SIR: ASDDO ಪಟ್ಟಿಯಲ್ಲಿ ಬೆಂಗಳೂರಿಗೆ ಪ್ರಥಮ ಸ್ಥಾನ, ರಾಜ್ಯದಲ್ಲಿ 2 ಕೋಟಿ ಮತದಾರರ ಹೆಸರು ರದ್ದಾಗುವ ಬೀತಿ

ಕರ್ನಾಟಕದಲ್ಲಿ ನಡೆಯುತ್ತಿರುವ ಮತದಾರರ ಪಟ್ಟಿಯ ವಿಶೇಷ ಸಮಗ್ರ ಪರಿಷ್ಕರಣೆ (SIR) ಪ್ರಕ್ರಿಯೆಯಲ್ಲಿ ರಾಜಧಾನಿ ಬೆಂಗಳೂರು ಅತ್ಯಂತ ಪ್ರಮುಖ ಹಾಗೂ ಕಳವಳಕಾರಿ ಕೇಂದ್ರವಾಗಿ ಹೊರಹೊಮ್ಮಿದೆ. ರಾಜ್ಯದಲ್ಲಿರುವ ಒಟ್ಟು 5.54 ಕೋಟಿ ನೋಂದಾಯಿತ ಮತದಾರರ ಪೈಕಿ...