Homeಅಂತರಾಷ್ಟ್ರೀಯGaza ceasefire | ಕದನ ವಿರಾಮ ಒಪ್ಪಂದ ವಿಳಂಬ, ಇಸ್ರೇಲ್ ದಾಳಿ 8 ಮಂದಿ ಸಾವು

Gaza ceasefire | ಕದನ ವಿರಾಮ ಒಪ್ಪಂದ ವಿಳಂಬ, ಇಸ್ರೇಲ್ ದಾಳಿ 8 ಮಂದಿ ಸಾವು

- Advertisement -
- Advertisement -

ಫ್ಯಾಲೆಸ್ತೀನಿನ ಗಾಜಾದಲ್ಲಿ ಕಳೆದ 15 ತಿಂಗಳಿನಿಂದ ಯುದ್ಧದಲ್ಲಿರುವ ಇಸ್ರೇಲ್ ಮತ್ತು ಹಮಾಸ್ ನಡುವೆ ಭಾನುವಾರ (ಜನವರಿ 19, 2025) ಬೆಳಿಗ್ಗೆ ಕದನ ವಿರಾಮ ಜಾರಿಗೆ ಬರಲಿದ್ದು, ಕೆಲವು ಗಂಟೆಗಳ ನಂತರ ಒತ್ತೆಯಾಳು ಬಿಡುಗಡೆ ಮಾಡಲಾಗುವುದು ಎಂದು ವರದಿಯಾಗಿದೆ. ಈಜಿಪ್ಟ್, ಕತಾರ್ ಮತ್ತು ಅಮೆರಿಕ ಮಧ್ಯಸ್ಥಿಕೆಯಲ್ಲಿ ತಿಂಗಳುಗಳ ಕಾಲ ನಡೆದ ಮಾತುಕತೆಗಳ ನಂತರ ಕದನ ವಿರಾಮ ಒಪ್ಪಂದವು ತೀರ್ಮಾನವಾಗಿತ್ತು. Gaza ceasefire

ಕದನ ವಿರಾಮ ಒಪ್ಪಂದದ ಹಿನ್ನಲೆ ಇಸ್ರೇಲಿ ಪಡೆಗಳು ಗಾಜಾದ ರಫಾ ಪ್ರದೇಶಗಳಿಂದ ಈಜಿಪ್ಟ್ ಮತ್ತು ಗಾಜಾ ನಡುವಿನ ಗಡಿಯುದ್ದಕ್ಕೂ ಫಿಲಡೆಲ್ಫಿ ಕಾರಿಡಾರ್‌ಗೆ ಹಿಂತೆಗೆದುಕೊಳ್ಳಲು ಪ್ರಾರಂಭಿಸಿದವು ಎಂದು ಹಮಾಸ್ ಪರ ಮಾಧ್ಯಮಗಳು ಭಾನುವಾರ ಮುಂಜಾನೆ ವರದಿ ಮಾಡಿವೆ. ಹಾಗಾಗಿ, ಯುದ್ಧ ಪೀಡಿತ ಗಾಜಾ ಜನರು ಸಂಭ್ರಮಾಚರಣೆಯಲ್ಲಿ ತೊಡಗಿದ್ದಾರೆ. Gaza ceasefire

ಜನವರಿ 20 ರಂದು ಅಮೆರಿಕದ ಚುನಾಯಿತ ಅಧ್ಯಕ್ಷ ಡೊನಾಲ್ಡ್ ಟ್ರಂಪ್ ಅವರು ಪ್ರಮಾಣ ವಚನಕ್ಕೆ ಮೊದಲು ಕದನ ವಿರಾಮ ಘೋಷಣೆಯಾಗಿದೆ. ಶನಿವಾರ ರಾಷ್ಟ್ರವನ್ನುದ್ದೇಶಿಸಿ ಇಸ್ರೇಲ್ ಪ್ರಧಾನಿ ಬೆಂಜಮಿನ್ ನೆತನ್ಯಾಹು ಮಾಡಿದ ಭಾಷಣದಲ್ಲಿ, ಮತ್ತೆ ಯುದ್ಧ ಅಗತ್ಯವಿದ್ದರೆ ಇಸ್ರೇಲ್‌ಗೆ ಅಮೆರಿಕದ ಬೆಂಬಲ ನೀಡಲಿದೆ ಎಂದು ಹೇಳಿದ್ದಾರೆ.

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ
ಇಲ್ಲಿಕ್ಲಿಕ್ ಮಾಡಿ

42 ದಿನಗಳ ಮೊದಲ ಹಂತವನ್ನು “ತಾತ್ಕಾಲಿಕ ಕದನ ವಿರಾಮ” ಎಂದು ಕರೆದ ಅವರು, “ಒಂದು ವೇಳೆ ಯುದ್ಧವನ್ನು ಪುನರಾರಂಭಿಸುವಂತೆ ಏನಾದರೂ ನಡೆದರೆ, ನಾವು ಮತ್ತೆ ರಣರಂಗಕ್ಕೆ ಇಳಿಯಲಿದ್ದೇವೆ” ಎಂದು ಹೇಳಿದ್ದರು.

ಅದಾಗ್ಯೂ, ಸ್ಥಳೀಯ ಸಮಯ ಬೆಳಿಗ್ಗೆ 8:30 ಕ್ಕೆ ಕದನ ವಿರಾಮ ಪ್ರಾರಂಭವಾಗಲಿದ್ದು, ಒಪ್ಪಂದ ಪ್ರಾರಂಭವಾಗುವ ಗಡುವು ಮುಗಿದರೂ, ಹಮಾಸ್ ಬಿಡುಗಡೆ ಮಾಡುವ ಒತ್ತೆಯಾಳುಗಳ ಪಟ್ಟಿಯನ್ನು ಹಸ್ತಾಂತರಿಸಲಾಗಿಲ್ಲ ಎಂದು ಇಸ್ರೇಲ್‌ನ ಉನ್ನತ ಮಿಲಿಟರಿ ವಕ್ತಾರ ರಿಯರ್ ಅಡ್ಮಿರಲ್ ಡೇನಿಯಲ್ ಹಗರಿ ಹೇಳಿದ್ದಾರೆ. “ಸೈನ್ಯವು ಗಾಜಾದಲ್ಲಿ ಈಗಲೂ ದಾಳಿ ಮಾಡುವುದನ್ನು ಮುಂದುವರೆಸಿದೆ. ಹಮಾಸ್ ಒಪ್ಪಂದವನ್ನು ಪಾಲಿಸುವವರೆಗೆ ದಾಳಿ ನಡೆಸಲಿದೆ” ಎಂದು ಅವರು ಹೇಳಿದ್ದಾರೆ.

ಪಟ್ಟಿಯನ್ನು ತಲುಪಿಸಲಾಗುವುದು ಮತ್ತು ಒಪ್ಪಂದವು ಇನ್ನೂ ಮುಂದುವರಿಯುವ ನಿರೀಕ್ಷೆಯಿದೆ ಎಂದು ಮಧ್ಯವರ್ತಿಗಳು ಭರವಸೆ ನೀಡಿದ್ದಾರೆ ಎಂದು ಇಸ್ರೇಲಿ ಅಧಿಕಾರಿಯೊಬ್ಬರು ಹೇಳಿದ್ದಾರೆ. ಈ ನಡುವೆಯು ಇಸ್ರೇಲ್ ದಾಳಿಯಿಂದ ಗಾಜಾದಾದ್ಯಂತ ಕನಿಷ್ಠ ಎಂಟು ಪ್ಯಾಲೆಸ್ತೀನಿಯರು ಸಾವನ್ನಪ್ಪಿದ್ದಾರೆ ಎಂದು ಅಲ್‌ಜಝೀರಾ ವರದಿ ಮಾಡಿದೆ.

ಈ ನಡುವೆ, ಬಂಧಿತರು ಮತ್ತು ಕೈದಿಗಳ ವಿನಿಮಯ ಒಪ್ಪಂದದ ಮೊದಲ ಹಂತದಲ್ಲಿ ಬಿಡುಗಡೆಗೊಳ್ಳುವ ಬಂಧಿತರ ಹೆಸರನ್ನು ಹಮಾಸ್ ಬಿಡುಗಡೆ ಮಾಡುವವರೆಗೆ ಗಾಜಾದಲ್ಲಿ ಕದನ ವಿರಾಮ ಪ್ರಾರಂಭವಾಗುವುದಿಲ್ಲ ಎಂದು ಇಸ್ರೇಲ್ ಪ್ರಧಾನಿ ಬೆಂಜಮಿನ್ ನೆತನ್ಯಾಹು ಹೇಳಿದ್ದಾರೆ. ತಾಂತ್ರಿಕ ಕಾರಣದಿಂದ ಕದನ ವಿರಾಮ ವಿಳಂಬವಾಗುತ್ತಿದೆ ಎಂದು ಪ್ಯಾಲೇಸ್ತೀನಿ ಹೋರಾಟಗಾರರು ಹೇಳಿದ್ದಾರೆ.

ಕದನ ವಿರಾಮದ ಮೊದಲ ದಿನದಂದು, ಇಸ್ರೇಲ್-ಹಮಾಸ್ ಒಪ್ಪಂದದ ಪ್ರಕಾರ ಗಾಜಾದಲ್ಲಿ ಕದನ ವಿರಾಮಕ್ಕೆ, ಮೂವರು ಇಸ್ರೇಲಿ ಬಂಧಿತರನ್ನು ಮತ್ತು ಸುಮಾರು 95 ಪ್ಯಾಲೆಸ್ತೀನಿ ಕೈದಿಗಳನ್ನು ಬಿಡುಗಡೆ ಮಾಡಬೇಕಿದೆ.

ಅಕ್ಟೋಬರ್ 7, 2023 ರಿಂದ ಗಾಜಾದ ಮೇಲೆ ಇಸ್ರೇಲ್ ನಡೆಸುತ್ತಿರುವ ನರಮೇಧದಿಂದ ಕನಿಷ್ಠ 46,899 ಪ್ಯಾಲೆಸ್ತೀನಿಯರು ಹತ್ಯೆಯಾಗಿದ್ದು, ಸುಮಾರು 1,10,725 ಜನರು ಗಾಯಗೊಂಡಿದ್ದಾರೆ. ಅದೇ ದಿನ ಪ್ಯಾಲೆಸ್ತೀನ್ ಹೋರಾಟಗಾರ ಗುಂಪು ಹಮಾಸ್ ನೇತೃತ್ವದ ದಾಳಿಯಲ್ಲಿ ಇಸ್ರೇಲ್‌ನಲ್ಲಿ ಕನಿಷ್ಠ 1,139 ಜನರು ಸಾವನ್ನಪ್ಪಿದ್ದರು ಮತ್ತು 200 ಕ್ಕೂ ಹೆಚ್ಚು ಜನರನ್ನು ಅವರು ಸೆರೆಯಾಳುಗಳನ್ನಾಗಿ ಕರೆದೊಯ್ದಿದ್ದರು.

ಇದನ್ನೂಓದಿ:  ಗಾಝಾ ಕದನ ವಿರಾಮ ಒಪ್ಪಂದ ಅನುಮೋದಿಸಿದ ಇಸ್ರೇಲ್ ಸಂಪುಟ

ಗಾಝಾ ಕದನ ವಿರಾಮ ಒಪ್ಪಂದ ಅನುಮೋದಿಸಿದ ಇಸ್ರೇಲ್ ಸಂಪುಟ

ಇದನ್ನೂಓದಿ:  ರಾಷ್ಟ್ರೀಯ ವೈದ್ಯಕೀಯ ನೋಂದಣಿ | ದಾಖಲಾಗಿದ್ದು ದೇಶದಾದ್ಯಂತ ಕೇವಲ 278 ವೈದ್ಯರು; ಭಾರಿ ಅಬ್ಬರದಿಂದ ಪ್ರಾರಂಭಿಸಿದ್ದ ಕೇಂದ್ರ ಸರ್ಕಾರ!

ರಾಷ್ಟ್ರೀಯ ವೈದ್ಯಕೀಯ ನೋಂದಣಿ | ದಾಖಲಾಗಿದ್ದು ದೇಶದಾದ್ಯಂತ ಕೇವಲ 278 ವೈದ್ಯರು; ಭಾರಿ ಅಬ್ಬರದಿಂದ ಪ್ರಾರಂಭಿಸಿದ್ದ ಕೇಂದ್ರ ಸರ್ಕಾರ!

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ಕೇಂದ್ರದ ವಿಬಿ-ಜಿ ರಾಮ್ ಜಿಗೆ ಟಕ್ಕರ್ : ಪ. ಬಂಗಾಳದ ‘ಕರ್ಮಶ್ರೀ’ ಯೋಜನೆಗೆ ಮಹಾತ್ಮ ಗಾಂಧಿ ಹೆಸರಿಡುವುದಾಗಿ ಘೋಷಿಸಿದ ಮಮತಾ ಬ್ಯಾನರ್ಜಿ

ಪಶ್ಚಿಮ ಬಂಗಾಳ ಸರ್ಕಾರದ ಉದ್ಯೋಗ ಖಾತರಿ ಯೋಜನೆ 'ಕರ್ಮಶ್ರೀ'ಯನ್ನು ಮಹಾತ್ಮ ಗಾಂಧಿ ಹೆಸರಿನಲ್ಲಿ ಮರುನಾಮಕರಣ ಮಾಡುವುದಾಗಿ ಮುಖ್ಯಮಂತ್ರಿ ಮಮತಾ ಬ್ಯಾನರ್ಜಿ ಗುರುವಾರ (ಡಿಸೆಂಬರ್ 18) ಘೋಷಿಸಿದ್ದಾರೆ. ನರೇಗಾ ಯೋಜನೆಯಿಂದ ಮಹಾತ್ಮಾ ಗಾಂಧಿಯವರ ಹೆಸರನ್ನು ಕೈಬಿಟ್ಟಿರುವುದಕ್ಕೆ...

ಕೃಷಿ ಸಹಕಾರ ಸಂಘಗಳಿಗೆ ಹಣ ಬಿಡುಗಡೆ: ಶಾಸಕ ಕುಣಿಗಲ್ ರಂಗನಾಥ್ ವಿರುದ್ಧ ಕೆ.ಎನ್. ರಾಜಣ್ಣ ವಾಗ್ದಾಳಿ

ಕೃಷಿ ಸಹಕಾರ ಸಂಘಗಳಿಗೆ ಹಣ ಬಿಡುಗಡೆ ಮಾಡುವುದನ್ನು ಮಾಜಿ ಸಹಕಾರಿ ಸಚಿವ ಕೆ.ಎನ್. ರಾಜಣ್ಣ ಗುರುವಾರ ಬಲವಾಗಿ ಸಮರ್ಥಿಸಿಕೊಂಡಿದ್ದಾರೆ. ಆಡಳಿತ ಪಕ್ಷದೊಳಗಿನ ಸಾರ್ವಜನಿಕ ಭಿನ್ನಾಭಿಪ್ರಾಯದ ನಡುವೆಯೂ, "ಸಂಘಗಳಿಗೆ ವಿತರಿಸಲಾದ ನಿಧಿ ಠೇವಣಿದಾರರ ಹಣ,...

ತನ್ನದೇ ಶಾಸಕರ ಅನರ್ಹತೆ ಕೋರಿ ಬಿಆರ್‌ಎಸ್‌ ಅರ್ಜಿ : ತಿರಸ್ಕರಿಸಿದ ತೆಲಂಗಾಣ ಸ್ಪೀಕರ್

ಆಡಳಿತಾರೂಢ ಕಾಂಗ್ರೆಸ್‌ಗೆ ನಿಷ್ಠೆ ಬದಲಾಯಿಸಿದ್ದಾರೆಂದು ಹೇಳಲಾದ ಹತ್ತು ಬಿಆರ್‌ಎಸ್ ಶಾಸಕರನ್ನು ಅನರ್ಹಗೊಳಿಸುವಂತೆ ಕೋರಿದ್ದ ಅರ್ಜಿಗಳ ಪೈಕಿ ಐದು ಅರ್ಜಿಗಳನ್ನು ತೆಲಂಗಾಣ ವಿಧಾನಸಭೆಯ ಸ್ಪೀಕರ್ ಗದ್ದಂ ಪ್ರಸಾದ್ ಕುಮಾರ್ ಬುಧವಾರ (ಡಿಸೆಂಬರ್ 18) ತಿರಸ್ಕರಿಸಿದ್ದಾರೆ....

ಸಾಮಾಜಿಕ ಬಹಿಷ್ಕಾರ, ದ್ವೇಷ ಭಾಷಣ ತಡೆ ವಿಧೇಯಕಗಳು ವಿಧಾನಸಭೆಯಲ್ಲಿ ಅಂಗೀಕಾರ

ಕರ್ನಾಟಕ ಸಾಮಾಜಿಕ ಬಹಿಷ್ಕಾರ (ಪ್ರತಿಬಂಧ, ನಿಷೇಧ ಮತ್ತು ಪರಿಹಾರ) ವಿಧೇಯಕ-2025 ಗುರುವಾರ (ಡಿ.18) ವಿಧಾನಸಭೆಯಲ್ಲಿ ಸರ್ವಾನುಮತದ ಅಂಗೀಕಾರಗೊಂಡಿತು. ಬೆಳಗಾವಿ ಸುವರ್ಣ ಸೌಧದಲ್ಲಿ ನಡೆಯುತ್ತಿರುವ ಚಳಿಗಾಲದ ವಿಧಾನಮಂಡಲ ಅಧಿವೇಶನದ ವಿಧಾನಸಭೆ ಕಲಾಪದಲ್ಲಿ ಸಮಾಜ ಕಲ್ಯಾಣ ಇಲಾಖೆ...

ಆಕ್ರಮಿತ ಪೂರ್ವ ಜೆರುಸಲೆಮ್ ವಸಾಹತು ಪ್ರದೇಶದಲ್ಲಿ 9000 ವಸತಿ ಘಟಕಗಳ ಯೋಜನೆ ಮುಂದಿಟ್ಟ ಇಸ್ರೇಲ್ 

ಆಕ್ರಮಿತ ಪೂರ್ವ ಜೆರುಸಲೆಮ್‌ನಲ್ಲಿರುವ ಕೈಬಿಟ್ಟ ಖಲಾಂಡಿಯಾ ವಿಮಾನ ನಿಲ್ದಾಣದ ಸ್ಥಳ ಬಳಿ ಅಕ್ರಮ ವಸಾಹತು ಪ್ರದೇಶದಲ್ಲಿ ಸುಮಾರು 9,000 ಹೊಸ ವಸತಿ ಘಟಕಗಳನ್ನು ನಿರ್ಮಿಸಲು ಇಸ್ರೇಲಿ ಆಕ್ರಮಿತ ಅಧಿಕಾರಿಗಳು ಯೋಜನೆಗಳನ್ನು ರೂಪಿಸಲು ಸಜ್ಜಾಗಿದ್ದಾರೆ....

ವಿಪಕ್ಷಗಳ ತೀವ್ರ ವಿರೋಧದ ನಡುವೆಯೇ ಲೋಕಸಭೆಯಲ್ಲಿ ‘ವಿಬಿ-ಜಿ ರಾಮ್ ಜಿ ಮಸೂದೆ’ ಅಂಗೀಕಾರ

ಪ್ರತಿಪಕ್ಷಗಳ ತೀವ್ರ ವಿರೋಧದ ನಡುವೆಯೇ ಗುರುವಾರ (ಡಿ.18) ಲೋಕಸಭೆಯಲ್ಲಿ 'ವಿಕ್ಷಿತ್ ಭಾರತ್ ಗ್ಯಾರಂಟಿ ಫಾರ್ ರೋಜ್‌ಗಾರ್ ಅಂಡ್ ಅಜೀವಿಕ ಮಿಷನ್ (ಗ್ರಾಮೀಣ್ ) (ವಿಬಿ-ಜಿ ರಾಮ್ ಜಿ) ಮಸೂದೆ ಅಂಗೀಕಾರಗೊಂಡಿತು. ಈ ಮಸೂದೆ 2005ರಲ್ಲಿ...

ರಾಹುಲ್ ಗಾಂಧಿ ಆಪ್ತ ಸಹಾಯಕನ ಪತ್ನಿ ಪ್ರಜ್ಞಾ ಸತವ್ ಕಾಂಗ್ರೆಸ್ ಎಂಎಲ್‌ಸಿ ಸ್ಥಾನಕ್ಕೆ ರಾಜೀನಾಮೆ; ಬಿಜೆಪಿ ಸೇರುವ ನಿರೀಕ್ಷೆ

ಕಾಂಗ್ರೆಸ್ಸಿಗ ಮತ್ತು ಲೋಕಸಭಾ ವಿರೋಧ ಪಕ್ಷದ ನಾಯಕ ರಾಹುಲ್ ಗಾಂಧಿಯವರ ಆಪ್ತರಾಗಿದ್ದ ದಿವಂಗತ ರಾಜೀವ್ ಸತವ್ ಅವರ ಪತ್ನಿ ಸತವ್ ಬಿಜೆಪಿಗೆ ಸೇರುವ ನಿರೀಕ್ಷೆಯಿದೆ. ಮಹಾರಾಷ್ಟ್ರದ ಕಾಂಗ್ರೆಸ್ ನಾಯಕಿ ಪ್ರಜ್ಞಾ ಸತವ್ ಅವರು ಗುರುವಾರ...

ಭೂ ಕಬಳಿಕೆ ಆರೋಪ : ಸದನದಲ್ಲಿ ಚರ್ಚೆಗೆ ಸಿದ್ದ ಎಂದ ಸಚಿವ ಕೃಷ್ಣ ಬೈರೇಗೌಡ

"ಸದನದ ಸದಸ್ಯನಾಗಿ ನನ್ನ ಹಕ್ಕನ್ನು ಬಿಟ್ಟುಕೊಡಲು ಸಿದ್ದನಿದ್ದೇನೆ. ನನ್ನ ಬಗ್ಗೆ ಎತ್ತಿರುವ ವೈಯಕ್ತಿಕ ಆರೋಪದ ಬಗ್ಗೆ ಚರ್ಚೆಗೆ ಸಿದ್ದ" ಎಂದು ಸಚಿವ ಕೃಷ್ಣ ಬೈರೇಗೌಡ ಹೇಳಿದರು. ಗುರುವಾರ (ಡಿ.18) ವಿಧಾನಸಭೆಯ ಶೂನ್ಯ ವೇಳೆಯಲ್ಲಿ, ವಿಧಾನಪರಿಷತ್...

ಡಿಸೆಂಬರ್ 15 ರ ಪ್ರತಿಭಟನೆಯಲ್ಲಿ ಭಾಗವಹಿಸಿದ್ದಕ್ಕಾಗಿ ಜಾಮಿಯಾ ಮಿಲಿಯಾ ವಿದ್ಯಾರ್ಥಿಗಳಿಗೆ ವಿಶ್ವವಿದ್ಯಾಲಯದಿಂದ ಶೋಕಾಸ್ ನೋಟಿಸ್‌

2019 ರಲ್ಲಿ ವಿದ್ಯಾರ್ಥಿಗಳ ಮೇಲಿನ ಹಿಂಸಾಚಾರ ನಡೆದು ಆರು ವರ್ಷಗಳು ತುಂಬಿದ್ದು, ಅದರ ವಾರ್ಷಿಕ ನೆನಪಿನಲ್ಲಿ ಜಾಮಿಯಾ ಮಿಲಿಯಾ ಇಸ್ಲಾಮಿಯಾ ವಿದ್ಯಾರ್ಥಿಗಳು ಡಿಸೆಂಬರ್ 15 ರಂದು ಕ್ಯಾಂಪಸ್ ಒಳಗೆ ದೊಡ್ಡ ಪ್ರತಿಭಟನೆ ನಡೆಸಿದ್ದರು....

ಅಮೆರಿಕದ ಸುಂಕಗಳು ತಮಿಳುನಾಡಿನ ರಫ್ತು ಕೈಗಾರಿಕೆಗಳನ್ನು ಅಂಚಿಗೆ ತಳ್ಳುತ್ತವೆ: ಪ್ರಧಾನಿ ಮೋದಿಗೆ ಸಿಎಂ ಸ್ಟಾಲಿನ್ ಎಚ್ಚರಿಕೆ

ತಮಿಳುನಾಡು ಮುಖ್ಯಮಂತ್ರಿ ಎಂ.ಕೆ. ಸ್ಟಾಲಿನ್ ಅವರು ಪ್ರಧಾನಿ ನರೇಂದ್ರ ಮೋದಿ ಅವರಿಗೆ ಪತ್ರ ಬರೆದಿದ್ದು, ಭಾರತದ ರಫ್ತಿನ ಮೇಲೆ ಅಮೆರಿಕ ವಿಧಿಸಿರುವ ಭಾರೀ ಸುಂಕಗಳು ರಾಜ್ಯದ ಕೆಲವು ಉದ್ಯೋಗ- ಕೈಗಾರಿಕೆಗಳನ್ನು ತೀವ್ರ ಬಿಕ್ಕಟ್ಟಿನತ್ತ...