Homeಅಂತರಾಷ್ಟ್ರೀಯGaza ceasefire | ಕದನ ವಿರಾಮ ಒಪ್ಪಂದ ವಿಳಂಬ, ಇಸ್ರೇಲ್ ದಾಳಿ 8 ಮಂದಿ ಸಾವು

Gaza ceasefire | ಕದನ ವಿರಾಮ ಒಪ್ಪಂದ ವಿಳಂಬ, ಇಸ್ರೇಲ್ ದಾಳಿ 8 ಮಂದಿ ಸಾವು

- Advertisement -
- Advertisement -

ಫ್ಯಾಲೆಸ್ತೀನಿನ ಗಾಜಾದಲ್ಲಿ ಕಳೆದ 15 ತಿಂಗಳಿನಿಂದ ಯುದ್ಧದಲ್ಲಿರುವ ಇಸ್ರೇಲ್ ಮತ್ತು ಹಮಾಸ್ ನಡುವೆ ಭಾನುವಾರ (ಜನವರಿ 19, 2025) ಬೆಳಿಗ್ಗೆ ಕದನ ವಿರಾಮ ಜಾರಿಗೆ ಬರಲಿದ್ದು, ಕೆಲವು ಗಂಟೆಗಳ ನಂತರ ಒತ್ತೆಯಾಳು ಬಿಡುಗಡೆ ಮಾಡಲಾಗುವುದು ಎಂದು ವರದಿಯಾಗಿದೆ. ಈಜಿಪ್ಟ್, ಕತಾರ್ ಮತ್ತು ಅಮೆರಿಕ ಮಧ್ಯಸ್ಥಿಕೆಯಲ್ಲಿ ತಿಂಗಳುಗಳ ಕಾಲ ನಡೆದ ಮಾತುಕತೆಗಳ ನಂತರ ಕದನ ವಿರಾಮ ಒಪ್ಪಂದವು ತೀರ್ಮಾನವಾಗಿತ್ತು. Gaza ceasefire

ಕದನ ವಿರಾಮ ಒಪ್ಪಂದದ ಹಿನ್ನಲೆ ಇಸ್ರೇಲಿ ಪಡೆಗಳು ಗಾಜಾದ ರಫಾ ಪ್ರದೇಶಗಳಿಂದ ಈಜಿಪ್ಟ್ ಮತ್ತು ಗಾಜಾ ನಡುವಿನ ಗಡಿಯುದ್ದಕ್ಕೂ ಫಿಲಡೆಲ್ಫಿ ಕಾರಿಡಾರ್‌ಗೆ ಹಿಂತೆಗೆದುಕೊಳ್ಳಲು ಪ್ರಾರಂಭಿಸಿದವು ಎಂದು ಹಮಾಸ್ ಪರ ಮಾಧ್ಯಮಗಳು ಭಾನುವಾರ ಮುಂಜಾನೆ ವರದಿ ಮಾಡಿವೆ. ಹಾಗಾಗಿ, ಯುದ್ಧ ಪೀಡಿತ ಗಾಜಾ ಜನರು ಸಂಭ್ರಮಾಚರಣೆಯಲ್ಲಿ ತೊಡಗಿದ್ದಾರೆ. Gaza ceasefire

ಜನವರಿ 20 ರಂದು ಅಮೆರಿಕದ ಚುನಾಯಿತ ಅಧ್ಯಕ್ಷ ಡೊನಾಲ್ಡ್ ಟ್ರಂಪ್ ಅವರು ಪ್ರಮಾಣ ವಚನಕ್ಕೆ ಮೊದಲು ಕದನ ವಿರಾಮ ಘೋಷಣೆಯಾಗಿದೆ. ಶನಿವಾರ ರಾಷ್ಟ್ರವನ್ನುದ್ದೇಶಿಸಿ ಇಸ್ರೇಲ್ ಪ್ರಧಾನಿ ಬೆಂಜಮಿನ್ ನೆತನ್ಯಾಹು ಮಾಡಿದ ಭಾಷಣದಲ್ಲಿ, ಮತ್ತೆ ಯುದ್ಧ ಅಗತ್ಯವಿದ್ದರೆ ಇಸ್ರೇಲ್‌ಗೆ ಅಮೆರಿಕದ ಬೆಂಬಲ ನೀಡಲಿದೆ ಎಂದು ಹೇಳಿದ್ದಾರೆ.

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ
ಇಲ್ಲಿಕ್ಲಿಕ್ ಮಾಡಿ

42 ದಿನಗಳ ಮೊದಲ ಹಂತವನ್ನು “ತಾತ್ಕಾಲಿಕ ಕದನ ವಿರಾಮ” ಎಂದು ಕರೆದ ಅವರು, “ಒಂದು ವೇಳೆ ಯುದ್ಧವನ್ನು ಪುನರಾರಂಭಿಸುವಂತೆ ಏನಾದರೂ ನಡೆದರೆ, ನಾವು ಮತ್ತೆ ರಣರಂಗಕ್ಕೆ ಇಳಿಯಲಿದ್ದೇವೆ” ಎಂದು ಹೇಳಿದ್ದರು.

ಅದಾಗ್ಯೂ, ಸ್ಥಳೀಯ ಸಮಯ ಬೆಳಿಗ್ಗೆ 8:30 ಕ್ಕೆ ಕದನ ವಿರಾಮ ಪ್ರಾರಂಭವಾಗಲಿದ್ದು, ಒಪ್ಪಂದ ಪ್ರಾರಂಭವಾಗುವ ಗಡುವು ಮುಗಿದರೂ, ಹಮಾಸ್ ಬಿಡುಗಡೆ ಮಾಡುವ ಒತ್ತೆಯಾಳುಗಳ ಪಟ್ಟಿಯನ್ನು ಹಸ್ತಾಂತರಿಸಲಾಗಿಲ್ಲ ಎಂದು ಇಸ್ರೇಲ್‌ನ ಉನ್ನತ ಮಿಲಿಟರಿ ವಕ್ತಾರ ರಿಯರ್ ಅಡ್ಮಿರಲ್ ಡೇನಿಯಲ್ ಹಗರಿ ಹೇಳಿದ್ದಾರೆ. “ಸೈನ್ಯವು ಗಾಜಾದಲ್ಲಿ ಈಗಲೂ ದಾಳಿ ಮಾಡುವುದನ್ನು ಮುಂದುವರೆಸಿದೆ. ಹಮಾಸ್ ಒಪ್ಪಂದವನ್ನು ಪಾಲಿಸುವವರೆಗೆ ದಾಳಿ ನಡೆಸಲಿದೆ” ಎಂದು ಅವರು ಹೇಳಿದ್ದಾರೆ.

ಪಟ್ಟಿಯನ್ನು ತಲುಪಿಸಲಾಗುವುದು ಮತ್ತು ಒಪ್ಪಂದವು ಇನ್ನೂ ಮುಂದುವರಿಯುವ ನಿರೀಕ್ಷೆಯಿದೆ ಎಂದು ಮಧ್ಯವರ್ತಿಗಳು ಭರವಸೆ ನೀಡಿದ್ದಾರೆ ಎಂದು ಇಸ್ರೇಲಿ ಅಧಿಕಾರಿಯೊಬ್ಬರು ಹೇಳಿದ್ದಾರೆ. ಈ ನಡುವೆಯು ಇಸ್ರೇಲ್ ದಾಳಿಯಿಂದ ಗಾಜಾದಾದ್ಯಂತ ಕನಿಷ್ಠ ಎಂಟು ಪ್ಯಾಲೆಸ್ತೀನಿಯರು ಸಾವನ್ನಪ್ಪಿದ್ದಾರೆ ಎಂದು ಅಲ್‌ಜಝೀರಾ ವರದಿ ಮಾಡಿದೆ.

ಈ ನಡುವೆ, ಬಂಧಿತರು ಮತ್ತು ಕೈದಿಗಳ ವಿನಿಮಯ ಒಪ್ಪಂದದ ಮೊದಲ ಹಂತದಲ್ಲಿ ಬಿಡುಗಡೆಗೊಳ್ಳುವ ಬಂಧಿತರ ಹೆಸರನ್ನು ಹಮಾಸ್ ಬಿಡುಗಡೆ ಮಾಡುವವರೆಗೆ ಗಾಜಾದಲ್ಲಿ ಕದನ ವಿರಾಮ ಪ್ರಾರಂಭವಾಗುವುದಿಲ್ಲ ಎಂದು ಇಸ್ರೇಲ್ ಪ್ರಧಾನಿ ಬೆಂಜಮಿನ್ ನೆತನ್ಯಾಹು ಹೇಳಿದ್ದಾರೆ. ತಾಂತ್ರಿಕ ಕಾರಣದಿಂದ ಕದನ ವಿರಾಮ ವಿಳಂಬವಾಗುತ್ತಿದೆ ಎಂದು ಪ್ಯಾಲೇಸ್ತೀನಿ ಹೋರಾಟಗಾರರು ಹೇಳಿದ್ದಾರೆ.

ಕದನ ವಿರಾಮದ ಮೊದಲ ದಿನದಂದು, ಇಸ್ರೇಲ್-ಹಮಾಸ್ ಒಪ್ಪಂದದ ಪ್ರಕಾರ ಗಾಜಾದಲ್ಲಿ ಕದನ ವಿರಾಮಕ್ಕೆ, ಮೂವರು ಇಸ್ರೇಲಿ ಬಂಧಿತರನ್ನು ಮತ್ತು ಸುಮಾರು 95 ಪ್ಯಾಲೆಸ್ತೀನಿ ಕೈದಿಗಳನ್ನು ಬಿಡುಗಡೆ ಮಾಡಬೇಕಿದೆ.

ಅಕ್ಟೋಬರ್ 7, 2023 ರಿಂದ ಗಾಜಾದ ಮೇಲೆ ಇಸ್ರೇಲ್ ನಡೆಸುತ್ತಿರುವ ನರಮೇಧದಿಂದ ಕನಿಷ್ಠ 46,899 ಪ್ಯಾಲೆಸ್ತೀನಿಯರು ಹತ್ಯೆಯಾಗಿದ್ದು, ಸುಮಾರು 1,10,725 ಜನರು ಗಾಯಗೊಂಡಿದ್ದಾರೆ. ಅದೇ ದಿನ ಪ್ಯಾಲೆಸ್ತೀನ್ ಹೋರಾಟಗಾರ ಗುಂಪು ಹಮಾಸ್ ನೇತೃತ್ವದ ದಾಳಿಯಲ್ಲಿ ಇಸ್ರೇಲ್‌ನಲ್ಲಿ ಕನಿಷ್ಠ 1,139 ಜನರು ಸಾವನ್ನಪ್ಪಿದ್ದರು ಮತ್ತು 200 ಕ್ಕೂ ಹೆಚ್ಚು ಜನರನ್ನು ಅವರು ಸೆರೆಯಾಳುಗಳನ್ನಾಗಿ ಕರೆದೊಯ್ದಿದ್ದರು.

ಇದನ್ನೂಓದಿ:  ಗಾಝಾ ಕದನ ವಿರಾಮ ಒಪ್ಪಂದ ಅನುಮೋದಿಸಿದ ಇಸ್ರೇಲ್ ಸಂಪುಟ

ಗಾಝಾ ಕದನ ವಿರಾಮ ಒಪ್ಪಂದ ಅನುಮೋದಿಸಿದ ಇಸ್ರೇಲ್ ಸಂಪುಟ

ಇದನ್ನೂಓದಿ:  ರಾಷ್ಟ್ರೀಯ ವೈದ್ಯಕೀಯ ನೋಂದಣಿ | ದಾಖಲಾಗಿದ್ದು ದೇಶದಾದ್ಯಂತ ಕೇವಲ 278 ವೈದ್ಯರು; ಭಾರಿ ಅಬ್ಬರದಿಂದ ಪ್ರಾರಂಭಿಸಿದ್ದ ಕೇಂದ್ರ ಸರ್ಕಾರ!

ರಾಷ್ಟ್ರೀಯ ವೈದ್ಯಕೀಯ ನೋಂದಣಿ | ದಾಖಲಾಗಿದ್ದು ದೇಶದಾದ್ಯಂತ ಕೇವಲ 278 ವೈದ್ಯರು; ಭಾರಿ ಅಬ್ಬರದಿಂದ ಪ್ರಾರಂಭಿಸಿದ್ದ ಕೇಂದ್ರ ಸರ್ಕಾರ!

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ಬಲೂಚಿಸ್ತಾನ: ಭದ್ರತಾ ಕಾರ್ಯಾಚರಣೆಯಲ್ಲಿ 15 ಪಾಕ್ ಸೈನಿಕರು, 92 ಭಯೋತ್ಪಾದಕರು ಸಾವು

ಬಲೂಚಿಸ್ತಾನ ಪ್ರಾಂತ್ಯದ ಸುಮಾರು 12 ಸ್ಥಳಗಳಲ್ಲಿ ನಡೆದ ಭಯೋತ್ಪಾದನಾ ನಿಗ್ರಹ ಕಾರ್ಯಾಚರಣೆಗಳಲ್ಲಿ ಕನಿಷ್ಠ 15 ಪಾಕಿಸ್ತಾನಿ ಸೈನಿಕರು ಮತ್ತು 92 ಭಯೋತ್ಪಾದಕರನ್ನು ಹತ್ಯೆ ಮಾಡಲಾಗಿದೆ ಎಂದು ಪಾಕಿಸ್ತಾನಿ ಸೇನೆ ತಿಳಿಸಿರುವುದಾಗಿ ಪಿಟಿಐ ವರದಿ...

ಕೇಂದ್ರ ಬಜೆಟ್ 2026 | ಯಾವುದು ಅಗ್ಗ ಮತ್ತು ಯಾವುದು ದುಬಾರಿ..? 

ಕೇಂದ್ರ ಹಣಕಾಸು ಸಚಿವೆ ನಿರ್ಮಲಾ ಸೀತಾರಾಮನ್ ಭಾನುವಾರ (ಫೆಬ್ರವರಿ 1, 2026) ತಮ್ಮ ಒಂಬತ್ತನೇ ಬಜೆಟ್ ಮಂಡಿಸಿದ್ದಾರೆ. ಈ ವರ್ಷದ (2026-27 ಹಣಕಾಸು) ಬಜೆಟ್ ತೀವ್ರಗೊಳ್ಳುತ್ತಿರುವ ಜಾಗತಿಕ ವ್ಯಾಪಾರ ಉದ್ವಿಗ್ನತೆ, ರೂಪಾಯಿ ಮೌಲ್ಯದಲ್ಲಿ...

ಕೇಂದ್ರ ಬಜೆಟ್ 2026| ರಕ್ಷಣಾ ಇಲಾಖೆಗೆ 7.85 ಲಕ್ಷ ಕೋಟಿ ರೂ. ಮೀಸಲು

ಕೇಂದ್ರ ಸರ್ಕಾರದ ಬಜೆಟ್ 2026 ರಲ್ಲಿ ರಕ್ಷಣಾ ವೆಚ್ಚವನ್ನು ಗಣನೀಯವಾಗಿ ಹೆಚ್ಚಿಸಲಾಗಿದೆ. ಈ ವಲಯಕ್ಕೆ 7.85 ಲಕ್ಷ ಕೋಟಿ ರೂ.ಗಳನ್ನು ಮೀಸಲಿಟ್ಟಿದೆ. ಇದು ಕಳೆದ ವರ್ಷದ 6.81 ಲಕ್ಷ ಕೋಟಿ ರೂ.ಗಳಿಗಿಂತ ಗಮನಾರ್ಹ...

‘ಭಾರತ ವೆನೆಜುವೆಲಾದ ತೈಲ ಖರೀದಿಸಲಿದೆ’ ಎಂದ ಟ್ರಂಪ್: ಮೋದಿ ಸರ್ಕಾರವನ್ನು ತರಾಟೆಗೆ ತೆಗೆದುಕೊಂಡ ಕಾಂಗ್ರೆಸ್

ನವದೆಹಲಿ: ಭಾರತ ಇರಾನ್ ಬದಲು ವೆನೆಜುವೆಲಾದಿಂದ ತೈಲ ಖರೀದಿಸಲಿದೆ ಎಂಬ ಅಮೆರಿಕ ಅಧ್ಯಕ್ಷ ಡೊನಾಲ್ಡ್ ಟ್ರಂಪ್ ಅವರ ಹೇಳಿಕೆಗೆ ಸಂಬಂಧಿಸಿದಂತೆ ಕಾಂಗ್ರೆಸ್ ಭಾನುವಾರ ಮೋದಿ ಸರ್ಕಾರವನ್ನು ತರಾಟೆಗೆ ತೆಗೆದುಕೊಂಡಿದೆ. ಅಮೆರಿಕದ ನಾಯಕ "ನಮ್ಮ...

ಕೇಂದ್ರ ಬಜೆಟ್ 2026: ಕ್ಯಾನ್ಸರ್ ಸೇರಿದಂತೆ ಇತರ 7 ಕಾಯಿಲೆಗಳ ಔಷಧಿ ಬೆಲೆಯಲ್ಲಿ ಇಳಿಕೆ

ಗಂಭೀರ ಖಾಯಿಲೆಗಳಿಂದ ಬಳುತ್ತಿರುವ ರೋಗಿಗಳಿಗೆ ಗಮನಾರ್ಹ ಪರಿಹಾರವಾಗಿ, ಹಣಕಾಸು ಸಚಿವೆ ನಿರ್ಮಲಾ ಸೀತಾರಾಮನ್ 2026 ರ ಬಜೆಟ್‌ನಲ್ಲಿ 17 ವಿಧದ ಕ್ಯಾನ್ಸರ್ ಮತ್ತು ಇತರ ಏಳು ಗಂಭೀರ ಕಾಯಿಲೆಗಳ ಚಿಕಿತ್ಸೆಗೆ ಬಳಸುವ ಔಷಧಿಗಳನ್ನು...

ಕೇಂದ್ರ ಬಜೆಟ್ 2026: ಹೊಸ ಆದಾಯ ತೆರಿಗೆ ಕಾಯ್ದೆ ಜಾರಿಗೆ; ವಿದೇಶಿ ಪ್ರವಾಸದ ಟಿಸಿಎಸ್ ದರ ಶೇ.2ಕ್ಕೆ ಇಳಿಕೆ

ಹಣಕಾಸು ಸಚಿವೆ ನಿರ್ಮಲಾ ಸೀತಾರಾಮನ್ ಭಾನುವಾರ ಕೇಂದ್ರ ಬಜೆಟ್ 2026 ಅನ್ನು ಮಂಡಿಸಿದರು. "2025ರ ಏಪ್ರಿಲ್ 1 ರಿಂದ ಹೊಸ ಆದಾಯ ತೆರಿಗೆ ಕಾಯ್ದೆ ಜಾರಿಗೆ ಬರಲಿದೆ, ಪ್ರಸ್ತುತ ಶೇ.5 ಮತ್ತು ಶೇ.20...

ಗಾಜಾದಲ್ಲಿ ಇಸ್ರೇಲ್ ನಡೆಸಿದ ಹೊಸ ಕದನ ವಿರಾಮ ಉಲ್ಲಂಘನೆಯಲ್ಲಿ ಮಕ್ಕಳು ಸೇರಿದಂತೆ 31 ಮಂದಿ ಸಾವು

ಮೇ 2024ರ ನಂತರ ಇಸ್ರೇಲ್ ಮೊದಲ ಬಾರಿಗೆ ಈಜಿಪ್ಟ್‌ನೊಂದಿಗೆ ರಫಾ ಕ್ರಾಸಿಂಗ್ ಅನ್ನು ಮತ್ತೆ ತೆರೆಯಲು ಸಜ್ಜಾಗುತ್ತಿರುವ ಒಂದು ದಿನ ಮೊದಲು, ಅಲ್ ಜಜೀರಾ ಜೊತೆ ಮಾತನಾಡಿದ ವೈದ್ಯಕೀಯ ಮೂಲಗಳು, ಬೆಳಗಿನ ಜಾವದಿಂದ...

ಶಬರಿಮಲೆ ಚಿನ್ನ ಕಳವು ಪ್ರಕರಣ: ಎರಡನೇ ಪ್ರಕರಣದಲ್ಲೂ ಜಾಮೀನು ಕೋರಿ ಅರ್ಜಿ ಸಲ್ಲಿಸಿದ ಪ್ರಮುಖ ಆರೋಪಿ ಉನ್ನಿಕೃಷ್ಣನ್ ಪೊಟ್ಟಿ

ಕೊಲ್ಲಂ (ಕೇರಳ): ಶಬರಿಮಲೆ ಚಿನ್ನ ಕಳವು ಪ್ರಕರಣದ ಪ್ರಮುಖ ಆರೋಪಿ ಉನ್ನಿಕೃಷ್ಣನ್ ಪೊಟ್ಟಿ, ತಮ್ಮ ವಿರುದ್ಧ ದಾಖಲಾಗಿರುವ ಎರಡನೇ ಪ್ರಕರಣದಲ್ಲಿ ಶಾಸನಬದ್ಧ ಜಾಮೀನು ಕೋರಿ ನ್ಯಾಯಾಲಯಕ್ಕೆ ಅರ್ಜಿ ಸಲ್ಲಿಸಿದ್ದಾರೆ. ದ್ವಾರಪಾಲಕ (ರಕ್ಷಕ ದೇವತೆ) ವಿಗ್ರಹ...

ಆಕಸ್ಮಿಕವಾಗಿ ಗಡಿ ದಾಟಿದ್ದ 7 ಭಾರತೀಯರನ್ನು ಹಸ್ತಾಂತರಿಸಿದ ಪಾಕಿಸ್ತಾನ

2023 ರ ಪ್ರವಾಹದ ಸಮಯದಲ್ಲಿ ಅಜಾಗರೂಕತೆಯಿಂದ ಗಡಿ ದಾಟಿದ ನಂತರ ಬಂಧಿಸಲ್ಪಟ್ಟ ಏಳು ಭಾರತೀಯ ನಾಗರಿಕರನ್ನು ಪಾಕಿಸ್ತಾನ ಶನಿವಾರ ಸ್ವದೇಶಕ್ಕೆ ವಾಪಸ್ ಕಳುಹಿಸಿದೆ ಎಂದು ಅಧಿಕಾರಿಗಳು ತಿಳಿಸಿದ್ದಾರೆ. ಪಂಜಾಬ್‌ನ ಅಟ್ಟಾರಿ ಇಂಟಿಗ್ರೇಟೆಡ್ ಚೆಕ್ ಪೋಸ್ಟ್‌ನಲ್ಲಿ...

ಮೀರತ್| ಅಪಹರಣ ಪ್ರಕರಣ ಹಿಂಪಡೆಯುವಂತೆ ಪೊಲೀಸರ ಒತ್ತಡ; ‘ಗೃಹಬಂಧನ’ದಲ್ಲಿ ದಲಿತ ಕುಟುಂಬ

ಜನವರಿ ತಿಂಗಳ ಆರಂಭದಲ್ಲಿ ಉತ್ತರ ಪ್ರದೇಶದ ಮೀರತ್ ಜಿಲ್ಲೆಯ ಕಪ್ಸಾದ್ ಗ್ರಾಮದಲ್ಲಿ ತಾಯಿಯ ಕೊಲೆಯ ನಂತರ ಅಪಹರಿಸಲ್ಪಟ್ಟ ದಲಿತ ಹುಡುಗಿಯ ಕುಟುಂಬ ಸದಸ್ಯರು ತಾವು ಗೃಹಬಂಧನದಲ್ಲಿದ್ದು, ಆರೋಪಿಗಳ ವಿರುದ್ಧ ಪ್ರಕರಣವನ್ನು ಮುಂದುವರಿಸದಂತೆ ಪೊಲೀಸರು...