Homeಅಂತರಾಷ್ಟ್ರೀಯGaza ceasefire | ಕದನ ವಿರಾಮ ಒಪ್ಪಂದ ವಿಳಂಬ, ಇಸ್ರೇಲ್ ದಾಳಿ 8 ಮಂದಿ ಸಾವು

Gaza ceasefire | ಕದನ ವಿರಾಮ ಒಪ್ಪಂದ ವಿಳಂಬ, ಇಸ್ರೇಲ್ ದಾಳಿ 8 ಮಂದಿ ಸಾವು

- Advertisement -
- Advertisement -

ಫ್ಯಾಲೆಸ್ತೀನಿನ ಗಾಜಾದಲ್ಲಿ ಕಳೆದ 15 ತಿಂಗಳಿನಿಂದ ಯುದ್ಧದಲ್ಲಿರುವ ಇಸ್ರೇಲ್ ಮತ್ತು ಹಮಾಸ್ ನಡುವೆ ಭಾನುವಾರ (ಜನವರಿ 19, 2025) ಬೆಳಿಗ್ಗೆ ಕದನ ವಿರಾಮ ಜಾರಿಗೆ ಬರಲಿದ್ದು, ಕೆಲವು ಗಂಟೆಗಳ ನಂತರ ಒತ್ತೆಯಾಳು ಬಿಡುಗಡೆ ಮಾಡಲಾಗುವುದು ಎಂದು ವರದಿಯಾಗಿದೆ. ಈಜಿಪ್ಟ್, ಕತಾರ್ ಮತ್ತು ಅಮೆರಿಕ ಮಧ್ಯಸ್ಥಿಕೆಯಲ್ಲಿ ತಿಂಗಳುಗಳ ಕಾಲ ನಡೆದ ಮಾತುಕತೆಗಳ ನಂತರ ಕದನ ವಿರಾಮ ಒಪ್ಪಂದವು ತೀರ್ಮಾನವಾಗಿತ್ತು. Gaza ceasefire

ಕದನ ವಿರಾಮ ಒಪ್ಪಂದದ ಹಿನ್ನಲೆ ಇಸ್ರೇಲಿ ಪಡೆಗಳು ಗಾಜಾದ ರಫಾ ಪ್ರದೇಶಗಳಿಂದ ಈಜಿಪ್ಟ್ ಮತ್ತು ಗಾಜಾ ನಡುವಿನ ಗಡಿಯುದ್ದಕ್ಕೂ ಫಿಲಡೆಲ್ಫಿ ಕಾರಿಡಾರ್‌ಗೆ ಹಿಂತೆಗೆದುಕೊಳ್ಳಲು ಪ್ರಾರಂಭಿಸಿದವು ಎಂದು ಹಮಾಸ್ ಪರ ಮಾಧ್ಯಮಗಳು ಭಾನುವಾರ ಮುಂಜಾನೆ ವರದಿ ಮಾಡಿವೆ. ಹಾಗಾಗಿ, ಯುದ್ಧ ಪೀಡಿತ ಗಾಜಾ ಜನರು ಸಂಭ್ರಮಾಚರಣೆಯಲ್ಲಿ ತೊಡಗಿದ್ದಾರೆ. Gaza ceasefire

ಜನವರಿ 20 ರಂದು ಅಮೆರಿಕದ ಚುನಾಯಿತ ಅಧ್ಯಕ್ಷ ಡೊನಾಲ್ಡ್ ಟ್ರಂಪ್ ಅವರು ಪ್ರಮಾಣ ವಚನಕ್ಕೆ ಮೊದಲು ಕದನ ವಿರಾಮ ಘೋಷಣೆಯಾಗಿದೆ. ಶನಿವಾರ ರಾಷ್ಟ್ರವನ್ನುದ್ದೇಶಿಸಿ ಇಸ್ರೇಲ್ ಪ್ರಧಾನಿ ಬೆಂಜಮಿನ್ ನೆತನ್ಯಾಹು ಮಾಡಿದ ಭಾಷಣದಲ್ಲಿ, ಮತ್ತೆ ಯುದ್ಧ ಅಗತ್ಯವಿದ್ದರೆ ಇಸ್ರೇಲ್‌ಗೆ ಅಮೆರಿಕದ ಬೆಂಬಲ ನೀಡಲಿದೆ ಎಂದು ಹೇಳಿದ್ದಾರೆ.

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ
ಇಲ್ಲಿಕ್ಲಿಕ್ ಮಾಡಿ

42 ದಿನಗಳ ಮೊದಲ ಹಂತವನ್ನು “ತಾತ್ಕಾಲಿಕ ಕದನ ವಿರಾಮ” ಎಂದು ಕರೆದ ಅವರು, “ಒಂದು ವೇಳೆ ಯುದ್ಧವನ್ನು ಪುನರಾರಂಭಿಸುವಂತೆ ಏನಾದರೂ ನಡೆದರೆ, ನಾವು ಮತ್ತೆ ರಣರಂಗಕ್ಕೆ ಇಳಿಯಲಿದ್ದೇವೆ” ಎಂದು ಹೇಳಿದ್ದರು.

ಅದಾಗ್ಯೂ, ಸ್ಥಳೀಯ ಸಮಯ ಬೆಳಿಗ್ಗೆ 8:30 ಕ್ಕೆ ಕದನ ವಿರಾಮ ಪ್ರಾರಂಭವಾಗಲಿದ್ದು, ಒಪ್ಪಂದ ಪ್ರಾರಂಭವಾಗುವ ಗಡುವು ಮುಗಿದರೂ, ಹಮಾಸ್ ಬಿಡುಗಡೆ ಮಾಡುವ ಒತ್ತೆಯಾಳುಗಳ ಪಟ್ಟಿಯನ್ನು ಹಸ್ತಾಂತರಿಸಲಾಗಿಲ್ಲ ಎಂದು ಇಸ್ರೇಲ್‌ನ ಉನ್ನತ ಮಿಲಿಟರಿ ವಕ್ತಾರ ರಿಯರ್ ಅಡ್ಮಿರಲ್ ಡೇನಿಯಲ್ ಹಗರಿ ಹೇಳಿದ್ದಾರೆ. “ಸೈನ್ಯವು ಗಾಜಾದಲ್ಲಿ ಈಗಲೂ ದಾಳಿ ಮಾಡುವುದನ್ನು ಮುಂದುವರೆಸಿದೆ. ಹಮಾಸ್ ಒಪ್ಪಂದವನ್ನು ಪಾಲಿಸುವವರೆಗೆ ದಾಳಿ ನಡೆಸಲಿದೆ” ಎಂದು ಅವರು ಹೇಳಿದ್ದಾರೆ.

ಪಟ್ಟಿಯನ್ನು ತಲುಪಿಸಲಾಗುವುದು ಮತ್ತು ಒಪ್ಪಂದವು ಇನ್ನೂ ಮುಂದುವರಿಯುವ ನಿರೀಕ್ಷೆಯಿದೆ ಎಂದು ಮಧ್ಯವರ್ತಿಗಳು ಭರವಸೆ ನೀಡಿದ್ದಾರೆ ಎಂದು ಇಸ್ರೇಲಿ ಅಧಿಕಾರಿಯೊಬ್ಬರು ಹೇಳಿದ್ದಾರೆ. ಈ ನಡುವೆಯು ಇಸ್ರೇಲ್ ದಾಳಿಯಿಂದ ಗಾಜಾದಾದ್ಯಂತ ಕನಿಷ್ಠ ಎಂಟು ಪ್ಯಾಲೆಸ್ತೀನಿಯರು ಸಾವನ್ನಪ್ಪಿದ್ದಾರೆ ಎಂದು ಅಲ್‌ಜಝೀರಾ ವರದಿ ಮಾಡಿದೆ.

ಈ ನಡುವೆ, ಬಂಧಿತರು ಮತ್ತು ಕೈದಿಗಳ ವಿನಿಮಯ ಒಪ್ಪಂದದ ಮೊದಲ ಹಂತದಲ್ಲಿ ಬಿಡುಗಡೆಗೊಳ್ಳುವ ಬಂಧಿತರ ಹೆಸರನ್ನು ಹಮಾಸ್ ಬಿಡುಗಡೆ ಮಾಡುವವರೆಗೆ ಗಾಜಾದಲ್ಲಿ ಕದನ ವಿರಾಮ ಪ್ರಾರಂಭವಾಗುವುದಿಲ್ಲ ಎಂದು ಇಸ್ರೇಲ್ ಪ್ರಧಾನಿ ಬೆಂಜಮಿನ್ ನೆತನ್ಯಾಹು ಹೇಳಿದ್ದಾರೆ. ತಾಂತ್ರಿಕ ಕಾರಣದಿಂದ ಕದನ ವಿರಾಮ ವಿಳಂಬವಾಗುತ್ತಿದೆ ಎಂದು ಪ್ಯಾಲೇಸ್ತೀನಿ ಹೋರಾಟಗಾರರು ಹೇಳಿದ್ದಾರೆ.

ಕದನ ವಿರಾಮದ ಮೊದಲ ದಿನದಂದು, ಇಸ್ರೇಲ್-ಹಮಾಸ್ ಒಪ್ಪಂದದ ಪ್ರಕಾರ ಗಾಜಾದಲ್ಲಿ ಕದನ ವಿರಾಮಕ್ಕೆ, ಮೂವರು ಇಸ್ರೇಲಿ ಬಂಧಿತರನ್ನು ಮತ್ತು ಸುಮಾರು 95 ಪ್ಯಾಲೆಸ್ತೀನಿ ಕೈದಿಗಳನ್ನು ಬಿಡುಗಡೆ ಮಾಡಬೇಕಿದೆ.

ಅಕ್ಟೋಬರ್ 7, 2023 ರಿಂದ ಗಾಜಾದ ಮೇಲೆ ಇಸ್ರೇಲ್ ನಡೆಸುತ್ತಿರುವ ನರಮೇಧದಿಂದ ಕನಿಷ್ಠ 46,899 ಪ್ಯಾಲೆಸ್ತೀನಿಯರು ಹತ್ಯೆಯಾಗಿದ್ದು, ಸುಮಾರು 1,10,725 ಜನರು ಗಾಯಗೊಂಡಿದ್ದಾರೆ. ಅದೇ ದಿನ ಪ್ಯಾಲೆಸ್ತೀನ್ ಹೋರಾಟಗಾರ ಗುಂಪು ಹಮಾಸ್ ನೇತೃತ್ವದ ದಾಳಿಯಲ್ಲಿ ಇಸ್ರೇಲ್‌ನಲ್ಲಿ ಕನಿಷ್ಠ 1,139 ಜನರು ಸಾವನ್ನಪ್ಪಿದ್ದರು ಮತ್ತು 200 ಕ್ಕೂ ಹೆಚ್ಚು ಜನರನ್ನು ಅವರು ಸೆರೆಯಾಳುಗಳನ್ನಾಗಿ ಕರೆದೊಯ್ದಿದ್ದರು.

ಇದನ್ನೂಓದಿ:  ಗಾಝಾ ಕದನ ವಿರಾಮ ಒಪ್ಪಂದ ಅನುಮೋದಿಸಿದ ಇಸ್ರೇಲ್ ಸಂಪುಟ

ಗಾಝಾ ಕದನ ವಿರಾಮ ಒಪ್ಪಂದ ಅನುಮೋದಿಸಿದ ಇಸ್ರೇಲ್ ಸಂಪುಟ

ಇದನ್ನೂಓದಿ:  ರಾಷ್ಟ್ರೀಯ ವೈದ್ಯಕೀಯ ನೋಂದಣಿ | ದಾಖಲಾಗಿದ್ದು ದೇಶದಾದ್ಯಂತ ಕೇವಲ 278 ವೈದ್ಯರು; ಭಾರಿ ಅಬ್ಬರದಿಂದ ಪ್ರಾರಂಭಿಸಿದ್ದ ಕೇಂದ್ರ ಸರ್ಕಾರ!

ರಾಷ್ಟ್ರೀಯ ವೈದ್ಯಕೀಯ ನೋಂದಣಿ | ದಾಖಲಾಗಿದ್ದು ದೇಶದಾದ್ಯಂತ ಕೇವಲ 278 ವೈದ್ಯರು; ಭಾರಿ ಅಬ್ಬರದಿಂದ ಪ್ರಾರಂಭಿಸಿದ್ದ ಕೇಂದ್ರ ಸರ್ಕಾರ!

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ಬಿಡದಿ ಟೌನ್‌ಶಿಪ್: 80% ರೈತರ ಒಪ್ಪಿಗೆ ಇದೆ ಎಂಬ ವಾದ ಸಾಬೀತುಪಡಿಸಿ – ಸರ್ಕಾರಕ್ಕೆ ಸಂಯುಕ್ತ ಹೋರಾಟ ಸವಾಲು

ಬಿಡದಿ ಟೌನ್‌ಶಿಪ್ ಯೋಜನೆಗೆ ಭೂಮಿ ನೀಡಲು ಉದ್ದೇಶಿತ ಪ್ರದೇಶದ ಶೇಕಡಾ 80 ರಷ್ಟು ರೈತರು ಒಪ್ಪಿದ್ದಾರೆ ಎಂಬ ಸರ್ಕಾರದ ವಾದಕ್ಕೆ ಯಾವುದೇ ವಾಸ್ತವಿಕ ಆಧಾರವಿಲ್ಲ. ಸರ್ಕಾರಕ್ಕೆ ಧೈರ್ಯವಿದ್ದರೆ ತನ್ನ ಈ ಹೇಳಿಕೆಯನ್ನು ಜನರ...

ವಿದ್ಯಾರ್ಥಿಗಳ ಮೇಲಿನ ಪೊಲೀಸ್ ದೌರ್ಜನ್ಯ: ವಿಚಾರಣೆ ತಿರಸ್ಕರಿಸಿದ ಸುಪ್ರೀಂ; “ವಿಡಿಯೋ ನೋಡಲು ನಮಗೆ ಆಸಕ್ತಿಯೂ ಇಲ್ಲ, ಸಮಯವೂ ಇಲ್ಲ” ಎಂದ ನ್ಯಾಯಮೂರ್ತಿ ಸೂರ್ಯಕಾಂತ್

ನವದೆಹಲಿ: ಪ್ರಶ್ನೆಪತ್ರಿಕೆ ಸೋರಿಕೆ ಮತ್ತು ಪರೀಕ್ಷಾ ಅಕ್ರಮಗಳನ್ನು ಖಂಡಿಸಿ ಶಾಂತಿಯುತವಾಗಿ ಹೋರಾಡುತ್ತಿದ್ದ ಯುವ ಸಮೂಹದ ಮೇಲೆ ದೆಹಲಿ ಪೊಲೀಸರು ನಡೆಸಿದ ಭೀಕರ ದೌರ್ಜನ್ಯದ ವಿರುದ್ಧ ನ್ಯಾಯದ ನಿರೀಕ್ಷೆಯಲ್ಲಿದ್ದ ವಿದ್ಯಾರ್ಥಿಗಳಿಗೆ ದೇಶದ ಅತ್ಯುನ್ನತ ನ್ಯಾಯಾಲಯದಿಂದ...

ರಾಹುಲ್ ಗಾಂಧಿ ವಿದ್ಯಾರ್ಥಿಗಳನ್ನು ‘ರಾಜಕೀಯ ದಾಳ’ವಾಗಿ ಬಳಸುತ್ತಿದ್ದಾರೆ ಎಂದ ಧರ್ಮೇಂದ್ರ ಪ್ರಧಾನ್ ವಿರುದ್ಧ ವ್ಯಾಪಕ ಆಕ್ರೋಶ

ನವದೆಹಲಿ: ದೇಶಾದ್ಯಂತ ನೀಟ್ (NEET) ಪರೀಕ್ಷೆಯ ಅಕ್ರಮಗಳು, ಪ್ರಶ್ನೆಪತ್ರಿಕೆ ಸೋರಿಕೆ ಹಾಗೂ ಶಿಕ್ಷಣ ಇಲಾಖೆಯ ಸರಣಿ ವೈಫಲ್ಯಗಳನ್ನು ಖಂಡಿಸಿ ವಿದ್ಯಾರ್ಥಿಗಳು ಮತ್ತು ವಿರೋಧ ಪಕ್ಷಗಳು ತೀವ್ರ ಪ್ರತಿಭಟನೆ ನಡೆಸುತ್ತಿದ್ದು, ಶಿಕ್ಷಣ ಸಚಿವ ಧರ್ಮೇಂದ್ರ...

ಸಿಜೆಪಿ ಪ್ರತಿಭಟನಾಕಾರರ ಮೇಲೆ ಪೆಲೆಟ್ ಗನ್ ಬಳಕೆ, ವಿದ್ಯುತ್ ಲಾಠಿ ಪ್ರಹಾರ: ಆರೋಪ ನಿರಾಕರಿಸಿದ ಪೊಲೀಸರು

ಸೋಮವಾರ (ಜುಲೈ 20) ಕಾಕ್ರೋಚ್ ಜನತಾ ಪಕ್ಷ (ಸಿಜೆಪಿ) ಕರೆ ನೀಡಿದ್ದ ಸಂಸತ್ ಚಲೋ ಮೆರವಣಿ ಸಂದರ್ಭದಲ್ಲಿ ನಡೆದ ಪೊಲೀಸರ ದೌರ್ಜನ್ಯದಲ್ಲಿ ಗಾಯಗೊಂಡ 80 ಪ್ರತಿಭಟನಾಕಾರರಲ್ಲಿ ಕನಿಷ್ಠ ಒಬ್ಬರಿಗೆ ಪೆಲೆಟ್ ಗನ್ ಗಾಯಗಳಾಗಿವೆ...

ಪ್ರತಿಭಟನಾನಿರತ ಮಹಿಳೆಯ ಕೆನ್ನೆಗೆ ಹೊಡೆದ ದೆಹಲಿ ಪೊಲೀಸ್ ಅಧಿಕಾರಿ ಸಂದೀಪ್ ಲಂಬಾ: ವಿಡಿಯೋ ವೈರಲ್ ನಂತರ ವ್ಯಾಪಕ ಟೀಕೆ

ದೆಹಲಿ: ಶಾಂತಿಯುತವಾಗಿ ತಮ್ಮ ಹಕ್ಕುಗಳಿಗಾಗಿ ಹೋರಾಡುತ್ತಿದ್ದ ಪ್ರತಿಭಟನಾಕಾರರ ಮೇಲೆ ದೆಹಲಿ ಪೊಲೀಸರು ನಡೆಸಿದ ಕ್ರೂರ ದಮನ ಕಾರ್ಯಾಚರಣೆಯ ಭೀಕರ ಮುಖವಾಡವೊಂದು ಮತ್ತೆ ಜಗಜ್ಜಾಹೀರಾಗಿದೆ. ಸೋಮವಾರ ಸಂಸತ್ತಿನ ಮೆರವಣಿಗೆಯಲ್ಲಿ ಭಾಗವಹಿಸಿದ್ದ ಪ್ರತಿಭಟನಾಕಾರರನ್ನು ಹತ್ತಿಕ್ಕುವ ನೆಪದಲ್ಲಿ,...

‘ಪೊಲೀಸರನ್ನು ನಿಯಂತ್ರಿಸದಿದ್ದರೆ ಜರ್ಮನಿಯ ನಾಜಿಗಳಂತೆ ಆಗಬಹುದು’: ದಲಿತ ವ್ಯಕ್ತಿಯ ಮೇಲಿನ ದೌರ್ಜನ್ಯ ಪ್ರಕರಣದಲ್ಲಿ ಪಾಟ್ನಾ ಹೈಕೋರ್ಟ್ ಕಳವಳ

ದಲಿತ ವ್ಯಕ್ತಿಯೊಬ್ಬರ ಜಾತಿ ತಿಳಿದ ನಂತರ ಅವರ ಮೇಲೆ ಕ್ರೂರವಾಗಿ ಹಲ್ಲೆ ನಡೆಸಿದ ಆರೋಪ ಎದುರಿಸುತ್ತಿರುವ ಬಿಹಾರದ ಮಾಜಿ ಪೊಲೀಸ್ ಅಧಿಕಾರಿಯ ವಿರುದ್ಧ ತಕ್ಷಣವೇ ಎಫ್‌ಐಆರ್ (FIR) ದಾಖಲಿಸುವಂತೆ ಪಾಟ್ನಾ ಹೈಕೋರ್ಟ್ ನಿರ್ದೇಶಿಸಿದೆ....

“ಎಷ್ಟೊಂದು ದುರಹಂಕಾರ!”: ಜೆ.ಪಿ.ನಡ್ಡಾ ಹೇಳಿಕೆಗೆ ಕಪಿಲ್ ಸಿಬಲ್ ತೀವ್ರ ಆಕ್ಷೇಪ; ಪ್ರತಿಭಟನಾನಿರತ ಸಿಜೆಪಿ ಬೆಂಬಲಿಸಿ ವೀಡಿಯೋ ಸಂದೇಶ

ಪರೀಕ್ಷಾ ಅಕ್ರಮಗಳನ್ನು ಖಂಡಿಸಿ ಕ್ರಾಂತಿಕಾರಿ ಜಿರಳೆ ಜನತಾ ಪಕ್ಷ (ಸಿಜೆಪಿ) ನಡೆಸುತ್ತಿರುವ ವಿದ್ಯಾರ್ಥಿ ಪ್ರತಿಭಟನೆಯ ವಿಚಾರದಲ್ಲಿ ಕೇಂದ್ರ ಸರ್ಕಾರದ ನಡೆಗೆ ದೇಶಾದ್ಯಂತ ತೀವ್ರ ಆಕ್ರೋಶ ವ್ಯಕ್ತವಾಗುತ್ತಿದೆ. ಈ ನಡುವೆ ಕೇಂದ್ರ ಸಚಿವ ಜೆ.ಪಿ....

ವಿದ್ಯಾರ್ಥಿಗಳ ಮೇಲೆ ಪೊಲೀಸ್ ದೌರ್ಜನ್ಯ: ಮೋದಿ-ಅಮಿತ್ ಶಾ ರಾಜೀನಾಮೆಗೆ ರಾಹುಲ್ ಗಾಂಧಿ ಆಗ್ರಹ

ನೀಟ್‌ ಪ್ರಶ್ನೆ ಪತ್ರಿಕೆ ಸೋರಿಕೆ ಹೊಣೆ ಹೊತ್ತು ಕೇಂದ್ರ ಶಿಕ್ಷಣ ಸಚಿವ ರಾಜೀನಾಮೆ ನೀಡಬೇಕು ಎಂದು ಆಗ್ರಹಿಸಿ 'ಸಂಸತ್ ಚಲೋ' ಹಮ್ಮಿಕೊಂಡಿದ್ದ ವಿದ್ಯಾರ್ಥಿಗಳ ಮೇಲೆ ನಡೆದ ಪೊಲೀಸ್ ದೌರ್ಜನ್ಯವನ್ನು ಕಾಂಗ್ರೆಸ್ ನಾಯಕ ರಾಹುಲ್...

ಕೇಂದ್ರ ಸಚಿವ ಜೆ.ಪಿ.ನಡ್ಡಾ ಅವರನ್ನು ಭೇಟಿಯಾದ ಸಿಜೆಪಿ ನಿಯೋಗ; ಮನವಿ ಪತ್ರ ಸಲ್ಲಿಕೆ

ಕೇಂದ್ರ ಶಿಕ್ಷಣ ಸಚಿವ ಧರ್ಮೇಂದ್ರ ಪ್ರಧಾನ್‌ ರಾಜೀನಾಮೆಗೆ ಆಗ್ರಹಿಸಿ ನವದೆಹಲಿಯಲ್ಲಿ ಪ್ರತಿಭಟನೆ ತೀವ್ರಗೊಂಡಿರುವ ಬೆನ್ನಲ್ಲೇ ಇಂದು ಕೇಂದ್ರ ಸಚಿವ ಜೆಪಿ ನಡ್ಡಾ ಅವರನ್ನು ಸಿಜೆಪಿ ಸದಸ್ಯರಾದ ಸೌರವ್ ದಾಸ್ ಮತ್ತು ಅಶುತೋಷ್ ರಂಕಾ...

‘ಸಂಸತ್ ಚಲೋ’: ‘ಸೋನಮ್ ವಾಂಗ್ಚುಕ್ ಪತ್ನಿ ಮೇಲೆ ದೆಹಲಿ ಪೊಲೀಸರಿಂದ ಹಲ್ಲೆ’: ವಿದ್ಯಾರ್ಥಿಗಳ ಮೇಲೂ ಲಾಠಿ ಚಾರ್ಜ್  

ನವದೆಹಲಿ: ರಾಷ್ಟ್ರ ರಾಜಧಾನಿಯಲ್ಲಿ ಆಯೋಜಿಸಲಾಗಿದ್ದ ‘ಸಂಸದ್ ಚಲೋ’ ಮೆರವಣಿಗೆಯ ವೇಳೆ ಶಿಕ್ಷಣ ತಜ್ಞ ಹಾಗೂ ಲಡಾಖ್ ಹೋರಾಟಗಾರ ಸೋನಮ್ ವಾಂಗ್ಚುಕ್ ಅವರ ಪತ್ನಿ ಗೀತಾಂಜಲಿ ಜೆ. ಆಂಗ್ಮೋ ಸೇರಿದಂತೆ ಹಲವಾರು ಪ್ರತಿಭಟನಾಕಾರರ ಮೇಲೆ...