Homeಅಂತರಾಷ್ಟ್ರೀಯGaza ceasefire | ಕದನ ವಿರಾಮ ಒಪ್ಪಂದ ವಿಳಂಬ, ಇಸ್ರೇಲ್ ದಾಳಿ 8 ಮಂದಿ ಸಾವು

Gaza ceasefire | ಕದನ ವಿರಾಮ ಒಪ್ಪಂದ ವಿಳಂಬ, ಇಸ್ರೇಲ್ ದಾಳಿ 8 ಮಂದಿ ಸಾವು

- Advertisement -
- Advertisement -

ಫ್ಯಾಲೆಸ್ತೀನಿನ ಗಾಜಾದಲ್ಲಿ ಕಳೆದ 15 ತಿಂಗಳಿನಿಂದ ಯುದ್ಧದಲ್ಲಿರುವ ಇಸ್ರೇಲ್ ಮತ್ತು ಹಮಾಸ್ ನಡುವೆ ಭಾನುವಾರ (ಜನವರಿ 19, 2025) ಬೆಳಿಗ್ಗೆ ಕದನ ವಿರಾಮ ಜಾರಿಗೆ ಬರಲಿದ್ದು, ಕೆಲವು ಗಂಟೆಗಳ ನಂತರ ಒತ್ತೆಯಾಳು ಬಿಡುಗಡೆ ಮಾಡಲಾಗುವುದು ಎಂದು ವರದಿಯಾಗಿದೆ. ಈಜಿಪ್ಟ್, ಕತಾರ್ ಮತ್ತು ಅಮೆರಿಕ ಮಧ್ಯಸ್ಥಿಕೆಯಲ್ಲಿ ತಿಂಗಳುಗಳ ಕಾಲ ನಡೆದ ಮಾತುಕತೆಗಳ ನಂತರ ಕದನ ವಿರಾಮ ಒಪ್ಪಂದವು ತೀರ್ಮಾನವಾಗಿತ್ತು. Gaza ceasefire

ಕದನ ವಿರಾಮ ಒಪ್ಪಂದದ ಹಿನ್ನಲೆ ಇಸ್ರೇಲಿ ಪಡೆಗಳು ಗಾಜಾದ ರಫಾ ಪ್ರದೇಶಗಳಿಂದ ಈಜಿಪ್ಟ್ ಮತ್ತು ಗಾಜಾ ನಡುವಿನ ಗಡಿಯುದ್ದಕ್ಕೂ ಫಿಲಡೆಲ್ಫಿ ಕಾರಿಡಾರ್‌ಗೆ ಹಿಂತೆಗೆದುಕೊಳ್ಳಲು ಪ್ರಾರಂಭಿಸಿದವು ಎಂದು ಹಮಾಸ್ ಪರ ಮಾಧ್ಯಮಗಳು ಭಾನುವಾರ ಮುಂಜಾನೆ ವರದಿ ಮಾಡಿವೆ. ಹಾಗಾಗಿ, ಯುದ್ಧ ಪೀಡಿತ ಗಾಜಾ ಜನರು ಸಂಭ್ರಮಾಚರಣೆಯಲ್ಲಿ ತೊಡಗಿದ್ದಾರೆ. Gaza ceasefire

ಜನವರಿ 20 ರಂದು ಅಮೆರಿಕದ ಚುನಾಯಿತ ಅಧ್ಯಕ್ಷ ಡೊನಾಲ್ಡ್ ಟ್ರಂಪ್ ಅವರು ಪ್ರಮಾಣ ವಚನಕ್ಕೆ ಮೊದಲು ಕದನ ವಿರಾಮ ಘೋಷಣೆಯಾಗಿದೆ. ಶನಿವಾರ ರಾಷ್ಟ್ರವನ್ನುದ್ದೇಶಿಸಿ ಇಸ್ರೇಲ್ ಪ್ರಧಾನಿ ಬೆಂಜಮಿನ್ ನೆತನ್ಯಾಹು ಮಾಡಿದ ಭಾಷಣದಲ್ಲಿ, ಮತ್ತೆ ಯುದ್ಧ ಅಗತ್ಯವಿದ್ದರೆ ಇಸ್ರೇಲ್‌ಗೆ ಅಮೆರಿಕದ ಬೆಂಬಲ ನೀಡಲಿದೆ ಎಂದು ಹೇಳಿದ್ದಾರೆ.

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ
ಇಲ್ಲಿಕ್ಲಿಕ್ ಮಾಡಿ

42 ದಿನಗಳ ಮೊದಲ ಹಂತವನ್ನು “ತಾತ್ಕಾಲಿಕ ಕದನ ವಿರಾಮ” ಎಂದು ಕರೆದ ಅವರು, “ಒಂದು ವೇಳೆ ಯುದ್ಧವನ್ನು ಪುನರಾರಂಭಿಸುವಂತೆ ಏನಾದರೂ ನಡೆದರೆ, ನಾವು ಮತ್ತೆ ರಣರಂಗಕ್ಕೆ ಇಳಿಯಲಿದ್ದೇವೆ” ಎಂದು ಹೇಳಿದ್ದರು.

ಅದಾಗ್ಯೂ, ಸ್ಥಳೀಯ ಸಮಯ ಬೆಳಿಗ್ಗೆ 8:30 ಕ್ಕೆ ಕದನ ವಿರಾಮ ಪ್ರಾರಂಭವಾಗಲಿದ್ದು, ಒಪ್ಪಂದ ಪ್ರಾರಂಭವಾಗುವ ಗಡುವು ಮುಗಿದರೂ, ಹಮಾಸ್ ಬಿಡುಗಡೆ ಮಾಡುವ ಒತ್ತೆಯಾಳುಗಳ ಪಟ್ಟಿಯನ್ನು ಹಸ್ತಾಂತರಿಸಲಾಗಿಲ್ಲ ಎಂದು ಇಸ್ರೇಲ್‌ನ ಉನ್ನತ ಮಿಲಿಟರಿ ವಕ್ತಾರ ರಿಯರ್ ಅಡ್ಮಿರಲ್ ಡೇನಿಯಲ್ ಹಗರಿ ಹೇಳಿದ್ದಾರೆ. “ಸೈನ್ಯವು ಗಾಜಾದಲ್ಲಿ ಈಗಲೂ ದಾಳಿ ಮಾಡುವುದನ್ನು ಮುಂದುವರೆಸಿದೆ. ಹಮಾಸ್ ಒಪ್ಪಂದವನ್ನು ಪಾಲಿಸುವವರೆಗೆ ದಾಳಿ ನಡೆಸಲಿದೆ” ಎಂದು ಅವರು ಹೇಳಿದ್ದಾರೆ.

ಪಟ್ಟಿಯನ್ನು ತಲುಪಿಸಲಾಗುವುದು ಮತ್ತು ಒಪ್ಪಂದವು ಇನ್ನೂ ಮುಂದುವರಿಯುವ ನಿರೀಕ್ಷೆಯಿದೆ ಎಂದು ಮಧ್ಯವರ್ತಿಗಳು ಭರವಸೆ ನೀಡಿದ್ದಾರೆ ಎಂದು ಇಸ್ರೇಲಿ ಅಧಿಕಾರಿಯೊಬ್ಬರು ಹೇಳಿದ್ದಾರೆ. ಈ ನಡುವೆಯು ಇಸ್ರೇಲ್ ದಾಳಿಯಿಂದ ಗಾಜಾದಾದ್ಯಂತ ಕನಿಷ್ಠ ಎಂಟು ಪ್ಯಾಲೆಸ್ತೀನಿಯರು ಸಾವನ್ನಪ್ಪಿದ್ದಾರೆ ಎಂದು ಅಲ್‌ಜಝೀರಾ ವರದಿ ಮಾಡಿದೆ.

ಈ ನಡುವೆ, ಬಂಧಿತರು ಮತ್ತು ಕೈದಿಗಳ ವಿನಿಮಯ ಒಪ್ಪಂದದ ಮೊದಲ ಹಂತದಲ್ಲಿ ಬಿಡುಗಡೆಗೊಳ್ಳುವ ಬಂಧಿತರ ಹೆಸರನ್ನು ಹಮಾಸ್ ಬಿಡುಗಡೆ ಮಾಡುವವರೆಗೆ ಗಾಜಾದಲ್ಲಿ ಕದನ ವಿರಾಮ ಪ್ರಾರಂಭವಾಗುವುದಿಲ್ಲ ಎಂದು ಇಸ್ರೇಲ್ ಪ್ರಧಾನಿ ಬೆಂಜಮಿನ್ ನೆತನ್ಯಾಹು ಹೇಳಿದ್ದಾರೆ. ತಾಂತ್ರಿಕ ಕಾರಣದಿಂದ ಕದನ ವಿರಾಮ ವಿಳಂಬವಾಗುತ್ತಿದೆ ಎಂದು ಪ್ಯಾಲೇಸ್ತೀನಿ ಹೋರಾಟಗಾರರು ಹೇಳಿದ್ದಾರೆ.

ಕದನ ವಿರಾಮದ ಮೊದಲ ದಿನದಂದು, ಇಸ್ರೇಲ್-ಹಮಾಸ್ ಒಪ್ಪಂದದ ಪ್ರಕಾರ ಗಾಜಾದಲ್ಲಿ ಕದನ ವಿರಾಮಕ್ಕೆ, ಮೂವರು ಇಸ್ರೇಲಿ ಬಂಧಿತರನ್ನು ಮತ್ತು ಸುಮಾರು 95 ಪ್ಯಾಲೆಸ್ತೀನಿ ಕೈದಿಗಳನ್ನು ಬಿಡುಗಡೆ ಮಾಡಬೇಕಿದೆ.

ಅಕ್ಟೋಬರ್ 7, 2023 ರಿಂದ ಗಾಜಾದ ಮೇಲೆ ಇಸ್ರೇಲ್ ನಡೆಸುತ್ತಿರುವ ನರಮೇಧದಿಂದ ಕನಿಷ್ಠ 46,899 ಪ್ಯಾಲೆಸ್ತೀನಿಯರು ಹತ್ಯೆಯಾಗಿದ್ದು, ಸುಮಾರು 1,10,725 ಜನರು ಗಾಯಗೊಂಡಿದ್ದಾರೆ. ಅದೇ ದಿನ ಪ್ಯಾಲೆಸ್ತೀನ್ ಹೋರಾಟಗಾರ ಗುಂಪು ಹಮಾಸ್ ನೇತೃತ್ವದ ದಾಳಿಯಲ್ಲಿ ಇಸ್ರೇಲ್‌ನಲ್ಲಿ ಕನಿಷ್ಠ 1,139 ಜನರು ಸಾವನ್ನಪ್ಪಿದ್ದರು ಮತ್ತು 200 ಕ್ಕೂ ಹೆಚ್ಚು ಜನರನ್ನು ಅವರು ಸೆರೆಯಾಳುಗಳನ್ನಾಗಿ ಕರೆದೊಯ್ದಿದ್ದರು.

ಇದನ್ನೂಓದಿ:  ಗಾಝಾ ಕದನ ವಿರಾಮ ಒಪ್ಪಂದ ಅನುಮೋದಿಸಿದ ಇಸ್ರೇಲ್ ಸಂಪುಟ

ಗಾಝಾ ಕದನ ವಿರಾಮ ಒಪ್ಪಂದ ಅನುಮೋದಿಸಿದ ಇಸ್ರೇಲ್ ಸಂಪುಟ

ಇದನ್ನೂಓದಿ:  ರಾಷ್ಟ್ರೀಯ ವೈದ್ಯಕೀಯ ನೋಂದಣಿ | ದಾಖಲಾಗಿದ್ದು ದೇಶದಾದ್ಯಂತ ಕೇವಲ 278 ವೈದ್ಯರು; ಭಾರಿ ಅಬ್ಬರದಿಂದ ಪ್ರಾರಂಭಿಸಿದ್ದ ಕೇಂದ್ರ ಸರ್ಕಾರ!

ರಾಷ್ಟ್ರೀಯ ವೈದ್ಯಕೀಯ ನೋಂದಣಿ | ದಾಖಲಾಗಿದ್ದು ದೇಶದಾದ್ಯಂತ ಕೇವಲ 278 ವೈದ್ಯರು; ಭಾರಿ ಅಬ್ಬರದಿಂದ ಪ್ರಾರಂಭಿಸಿದ್ದ ಕೇಂದ್ರ ಸರ್ಕಾರ!

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ಗಣಪತಿ ಹಬ್ಬದ ನೆಪದಲ್ಲಿ ಮೈಸೂರಿನಲ್ಲಿ ಸೌಹಾರ್ದತೆ ಕೆಡಿಸಲು ಯತ್ನ? ಭದ್ರತಾ ನಿಯಮಗಳನ್ನೇ ಧಿಕ್ಕರಿಸಿದ BJP ನಾಯಕರು

ಗಣೇಶೋತ್ಸವದ ಮೆರವಣಿಗೆಗಳನ್ನು ನೆಪವಾಗಿಸಿಕೊಂಡು ಕೋಮು ಸೌಹಾರ್ದತೆಗೆ ಧಕ್ಕೆ ತರುವ, ಸೂಕ್ಷ್ಮ ಪ್ರದೇಶಗಳಲ್ಲಿ ಪ್ರಚೋದನಾಕಾರಿ ಘೋಷಣೆಗಳನ್ನು ಕೂಗಿ ಗಲಭೆಗೆ ಪ್ರೇರೇಪಿಸುವ ರಕ್ತದಾಹಿ ಕೃತ್ಯಗಳಿಗೆ ಬ್ರೇಕ್ ಹಾಕಲು ಪೊಲೀಸ್ ಇಲಾಖೆ ಕಟ್ಟುನಿಟ್ಟಿನ ಮುನ್ನೆಚ್ಚರಿಕಾ ಕ್ರಮಗಳನ್ನು ಕೈಗೊಂಡಿದೆ....

SIR: ವಿಶೇಷ ತೀವ್ರ ಪರಿಷ್ಕರಣೆ’ ಎಂಬ ಪ್ರಹಸನ, ಆಯೋಗದ ತಪ್ಪುಗಳಿಗೆ ಮತದಾರರು ಪ್ರಾಯಶ್ಚಿತ್ತ ಪಡಬೇಕೇ?

ಮತದಾರರ ಪಟ್ಟಿಯ ವಿಶೇಷ ತೀವ್ರ ಪರಿಷ್ಕರಣೆ (SIR) ಹೆಸರಿನಲ್ಲಿ ರಾಜ್ಯಾದ್ಯಂತ ಮತದಾರರನ್ನು 2002ರ ಮತದಾರರ ಪಟ್ಟಿಯೊಂದಿಗೆ ‘ಮ್ಯಾಪಿಂಗ್’ ಮಾಡುವ ಬೃಹತ್ ಪ್ರಕ್ರಿಯೆಯನ್ನು ಚುನಾವಣಾ ಆಯೋಗವು ಕೈಗೆತ್ತಿಕೊಂಡಿದೆ. 2002ರಲ್ಲಿದ್ದ ದತ್ತಾಂಶವನ್ನು ಇಂದಿನ ಪಟ್ಟಿಯೊಂದಿಗೆ ಹೋಲಿಸಿ,...

ಯೋಗಿ ಆದಿತ್ಯನಾಥ್ ಅವರನ್ನು ಪ್ರಶ್ನಿಸಿದ್ದ ಪತ್ರಕರ್ತೆ ದಿವ್ಯಾ ಶ್ರೀವಾಸ್ತವ್‌ಗೆ ಬೆದರಿಕೆ

ಶನಿವಾರ (ಸೆ. 12) ನಡೆದಿದ್ದ ಸುದ್ದಿಗೋಷ್ಠಿಯೊಂದರಲ್ಲಿ ಉತ್ತರ ಪ್ರದೇಶ ಮುಖ್ಯಮಂತ್ರಿ ಯೋಗಿ ಆದಿತ್ಯನಾಥ್ ಅವರನ್ನು ಪ್ರಶ್ನಿಸಿದ ಪತ್ರಕರ್ತೆ ದಿವ್ಯಾ ಶ್ರೀವಾಸ್ತವ ಅವರ ವೀಡಿಯೊ ವೈರಲ್ ಆದ ಬಳಿಕ, ಅವರು ಆನ್‌ಲೈನ್ ಬೆದರಿಕೆಗಳು ಮತ್ತು...

ಅಲಿಗಢ ಮುಸ್ಲಿಂ ವಿವಿ ಪ್ರತಿಭಟನೆಯ ‘ಪಕ್ಷಪಾತಿ’ ನಿರೂಪಣೆ : ಝೀ ನ್ಯೂಸ್‌ಗೆ ₹2 ಲಕ್ಷ ದಂಡ ವಿಧಿಸಿದ ಎನ್‌ಬಿಡಿಎಸ್‌ಎ

ಅಲಿಗಢ ಮುಸ್ಲಿಂ ವಿಶ್ವವಿದ್ಯಾಲಯದಲ್ಲಿ (AMU) ನಡೆದ ವಿದ್ಯಾರ್ಥಿ ಪ್ರತಿಭಟನೆಯ ವೇಳೆ ಪ್ಯಾಲೆಸ್ತೀನ್ ಪರ ಘೋಷಣೆಗಳನ್ನು ಕೂಗಿದ ಘಟನೆಯನ್ನು ವರದಿ ಮಾಡುವಾಗ ಪ್ರಸಾರ ನೀತಿ ಸಂಹಿತೆಯನ್ನು ಉಲ್ಲಂಘಿಸಿದೆ ಎಂದು ಪರಿಗಣಿಸಿ, 'ಝೀ ನ್ಯೂಸ್' (Zee...

‘ಕೆಲವರು ಮುಸ್ಲಿಮರನ್ನು ಬೈದ್ರೆ ಮಾತ್ರ ಲೀಡರ್‌ ಆಗೋದು ಅನ್ಕೊಂಡಿದಾರೆ!’: ಆರ್‌. ಅಶೋಕ್‌ ಹಳೆಯ ಹೇಳಿಕೆ ಮುಂದಿಟ್ಟು ಪ್ರಿಯಾಂಕ್ ಖರ್ಗೆ ಟೀಕೆ!

ಮೈಸೂರಿನ ಟಿ. ನರಸೀಪುರದಲ್ಲಿ ಗಣಪತಿ ಮೆರವಣಿಗೆ ಸಾಗುವ ಮಾರ್ಗದ ವಿಚಾರವಾಗಿ ಬಿಜೆಪಿ ಪ್ರತಿಭಟನೆಗೆ ಮುಂದಾಗಿರುವ ಬೆನ್ನಲ್ಲೇ, ವಿಧಾನಸಭೆ ವಿರೋಧ ಪಕ್ಷದ ನಾಯಕ ಆರ್‌. ಅಶೋಕ್‌ ವಿರುದ್ಧ ಗೃಹ ಸಚಿವ ಪ್ರಿಯಾಂಕ್ ಖರ್ಗೆ ವಾಗ್ದಾಳಿ...

ಠಾಣೆಗೆ ನುಸುಳುತ್ತೇನೆ ಎಂದ ಪ್ರತಾಪ್ ಸಿಂಹನಿಗೆ ಪರಪ್ಪನ ಜೈಲಿಗೂ ರೆಡಿಯಾಗಿ ಎಂದ ಸಚಿವ ಪ್ರಿಯಾಂಕ್ ಖರ್ಗೆ

ಮಾಜಿ ಸಂಸದ ಪ್ರತಾಪ್ ಸಿಂಹ ಅವರನ್ನು ನೇರವಾಗಿ ಗುರಿಯಾಗಿಸಿಕೊಂಡು ಸಚಿವ ಪ್ರಿಯಾಂಕ್ ಖರ್ಗೆ ತೀವ್ರ ವಾಗ್ದಾಳಿ ನಡೆಸಿದ್ದು, ಪೊಲೀಸರ ಕರ್ತವ್ಯಕ್ಕೆ ಅಡ್ಡಿಪಡಿಸುವ ಅಥವಾ ಅವರಿಗೆ ಬೆದರಿಕೆ ಹಾಕುವ ರೀತಿಯಲ್ಲಿ ಮಾತನಾಡುವವರ ವಿರುದ್ಧ ಸರ್ಕಾರ...

ಆಹಾರ ಪದ್ಧತಿ- ಧಾರ್ಮಿಕ ಆಚರಣೆಗಳನ್ನು ಆರಿಸಿಕೊಳ್ಳಲು ಜನರಿಗೆ ಸ್ವಾತಂತ್ರ್ಯವಿದೆ: ಬಂಗಾಳ ಮುಖ್ಯಮಂತ್ರಿ ಸುವೇಂದು ಅಧಿಕಾರಿ

ದುರ್ಗಾ ಪೂಜೆಯ ಸಂದರ್ಭದಲ್ಲಿ ಬಂಗಾಳಿಗಳು ಮಾಂಸಾಹಾರ ಸೇವಿಸುವುದರ ಕುರಿತು ಬಾಗೇಶ್ವರ ಬಾಬಾ ಎಂದೇ ಜನಪ್ರಿಯರಾಗಿರುವ ಧೀರೇಂದ್ರ ಶಾಸ್ತ್ರಿ ಅವರ ಹೇಳಿಕೆಗೆ ಪರೋಕ್ಷವಾಗಿ ಪ್ರತಿಕ್ರಿಯಿಸಿರುವ ಪಶ್ಚಿಮ ಬಂಗಾಳ ಮುಖ್ಯಮಂತ್ರಿ ಸುವೇಂದು ಅಧಿಕಾರಿ, "ತಮ್ಮ ಆಹಾರ...

ಕರ್ನಾಟಕದಲ್ಲಿ 2 ಗಂಟೆಗಳ ಬೃಹತ್ ಕಾರ್ಯಾಚರಣೆ: 800 ಬಾಲಕಾರ್ಮಿಕರ ರಕ್ಷಣೆ; ಬೆಂಗಳೂರಿನಲ್ಲೇ 503 ಮಕ್ಕಳು

ಬಾಲಕಾರ್ಮಿಕ ಪದ್ಧತಿಯ ವಿರುದ್ಧ ಕರ್ನಾಟಕ ಪೊಲೀಸರು ಹಾಗೂ ಕಾರ್ಮಿಕ ಇಲಾಖೆ ಶನಿವಾರ ರಾಜ್ಯಾದ್ಯಂತ ನಡೆಸಿದ ವಿಶೇಷ ಕಾರ್ಯಾಚರಣೆಯಲ್ಲಿ 800 ಮಕ್ಕಳನ್ನು ರಕ್ಷಿಸಲಾಗಿದೆ. ರಾಜ್ಯದ 962 ಪೊಲೀಸ್ ಠಾಣೆಗಳು ಹಾಗೂ ಘಟಕಗಳ ವ್ಯಾಪ್ತಿಯಲ್ಲಿ 16,951...

‘ದಿ ಹಿಂದೂ’, ‘ದೈನಿಕ್ ಭಾಸ್ಕರ್’ ಗಳಲ್ಲಿ ಅತ್ಯಾಚಾರ ಅಪರಾಧಿ ಗುರ್ಮೀತ್ ರಾಮ್ ರಹೀಮ್ ಸಮರ್ಥಿಸುವ ಜಾಹೀರಾತು: ಓದುಗರಲ್ಲಿ ಕ್ಷಮೆಯಾಚಿಸಿದ ‘ದಿ ಹಿಂದೂ’

ನವದೆಹಲಿ: ಇಬ್ಬರು ಮಹಿಳಾ ಶಿಷ್ಯೆಯರ ಮೇಲೆ ಅತ್ಯಾಚಾರ ಎಸಗಿದ ಪ್ರಕರಣದಲ್ಲಿ ಶಿಕ್ಷೆಗೊಳಗಾಗಿರುವ ಡೇರಾ ಸಚ್ಚಾ ಸೌದಾ ಮುಖ್ಯಸ್ಥ ಗುರ್ಮೀತ್ ರಾಮ್ ರಹೀಮ್ ಸಿಂಗ್ ಅವರನ್ನು ಸಮರ್ಥಿಸುವ ರೀತಿಯಲ್ಲಿ ಪೂರ್ಣ ಪುಟದ ಮುಖಪುಟ ಜಾಹೀರಾತು...

ದ್ವಿ-ರಾಷ್ಟ್ರ ಪರಿಹಾರ : ಬ್ರಿಕ್ಸ್ ನಿಲುವು ಸ್ವಾಗತಿಸಿದ ಪ್ಯಾಲೆಸ್ತೀನ್

ಪ್ಯಾಲೆಸ್ತೀನ್-ಇಸ್ರೇಲ್ ವಿವಾದಕ್ಕೆ ದ್ವಿ-ರಾಷ್ಟ್ರ ಪರಿಹಾರವನ್ನು ಕಂಡುಕೊಳ್ಳುವಂತೆ ಕರೆ ನೀಡಿರುವ ಬ್ರಿಕ್ಸ್ (BRICS) ಜಂಟಿ ಘೋಷಣೆಯನ್ನು ಪ್ಯಾಲೆಸ್ತೀನ್ ವಿದೇಶಾಂಗ ಮತ್ತು ವಲಸಿಗರ ಸಚಿವಾಲಯವು ಮುಕ್ತಕಂಠದಿಂದ ಸ್ವಾಗತಿಸಿದೆ. ಬ್ರಿಕ್ಸ್‌ ಶೃಂಗಸಭೆ, ಜೆರುಸಲೆಮ್ ಸೇರಿದಂತೆ ಪ್ಯಾಲೆಸ್ತೀನಿಯರನ್ನು ಅವರದೇ ಭೂಮಿಯಿಂದ...