Homeಅಂತರಾಷ್ಟ್ರೀಯGaza ceasefire | ಕದನ ವಿರಾಮ ಒಪ್ಪಂದ ವಿಳಂಬ, ಇಸ್ರೇಲ್ ದಾಳಿ 8 ಮಂದಿ ಸಾವು

Gaza ceasefire | ಕದನ ವಿರಾಮ ಒಪ್ಪಂದ ವಿಳಂಬ, ಇಸ್ರೇಲ್ ದಾಳಿ 8 ಮಂದಿ ಸಾವು

- Advertisement -
- Advertisement -

ಫ್ಯಾಲೆಸ್ತೀನಿನ ಗಾಜಾದಲ್ಲಿ ಕಳೆದ 15 ತಿಂಗಳಿನಿಂದ ಯುದ್ಧದಲ್ಲಿರುವ ಇಸ್ರೇಲ್ ಮತ್ತು ಹಮಾಸ್ ನಡುವೆ ಭಾನುವಾರ (ಜನವರಿ 19, 2025) ಬೆಳಿಗ್ಗೆ ಕದನ ವಿರಾಮ ಜಾರಿಗೆ ಬರಲಿದ್ದು, ಕೆಲವು ಗಂಟೆಗಳ ನಂತರ ಒತ್ತೆಯಾಳು ಬಿಡುಗಡೆ ಮಾಡಲಾಗುವುದು ಎಂದು ವರದಿಯಾಗಿದೆ. ಈಜಿಪ್ಟ್, ಕತಾರ್ ಮತ್ತು ಅಮೆರಿಕ ಮಧ್ಯಸ್ಥಿಕೆಯಲ್ಲಿ ತಿಂಗಳುಗಳ ಕಾಲ ನಡೆದ ಮಾತುಕತೆಗಳ ನಂತರ ಕದನ ವಿರಾಮ ಒಪ್ಪಂದವು ತೀರ್ಮಾನವಾಗಿತ್ತು. Gaza ceasefire

ಕದನ ವಿರಾಮ ಒಪ್ಪಂದದ ಹಿನ್ನಲೆ ಇಸ್ರೇಲಿ ಪಡೆಗಳು ಗಾಜಾದ ರಫಾ ಪ್ರದೇಶಗಳಿಂದ ಈಜಿಪ್ಟ್ ಮತ್ತು ಗಾಜಾ ನಡುವಿನ ಗಡಿಯುದ್ದಕ್ಕೂ ಫಿಲಡೆಲ್ಫಿ ಕಾರಿಡಾರ್‌ಗೆ ಹಿಂತೆಗೆದುಕೊಳ್ಳಲು ಪ್ರಾರಂಭಿಸಿದವು ಎಂದು ಹಮಾಸ್ ಪರ ಮಾಧ್ಯಮಗಳು ಭಾನುವಾರ ಮುಂಜಾನೆ ವರದಿ ಮಾಡಿವೆ. ಹಾಗಾಗಿ, ಯುದ್ಧ ಪೀಡಿತ ಗಾಜಾ ಜನರು ಸಂಭ್ರಮಾಚರಣೆಯಲ್ಲಿ ತೊಡಗಿದ್ದಾರೆ. Gaza ceasefire

ಜನವರಿ 20 ರಂದು ಅಮೆರಿಕದ ಚುನಾಯಿತ ಅಧ್ಯಕ್ಷ ಡೊನಾಲ್ಡ್ ಟ್ರಂಪ್ ಅವರು ಪ್ರಮಾಣ ವಚನಕ್ಕೆ ಮೊದಲು ಕದನ ವಿರಾಮ ಘೋಷಣೆಯಾಗಿದೆ. ಶನಿವಾರ ರಾಷ್ಟ್ರವನ್ನುದ್ದೇಶಿಸಿ ಇಸ್ರೇಲ್ ಪ್ರಧಾನಿ ಬೆಂಜಮಿನ್ ನೆತನ್ಯಾಹು ಮಾಡಿದ ಭಾಷಣದಲ್ಲಿ, ಮತ್ತೆ ಯುದ್ಧ ಅಗತ್ಯವಿದ್ದರೆ ಇಸ್ರೇಲ್‌ಗೆ ಅಮೆರಿಕದ ಬೆಂಬಲ ನೀಡಲಿದೆ ಎಂದು ಹೇಳಿದ್ದಾರೆ.

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ
ಇಲ್ಲಿಕ್ಲಿಕ್ ಮಾಡಿ

42 ದಿನಗಳ ಮೊದಲ ಹಂತವನ್ನು “ತಾತ್ಕಾಲಿಕ ಕದನ ವಿರಾಮ” ಎಂದು ಕರೆದ ಅವರು, “ಒಂದು ವೇಳೆ ಯುದ್ಧವನ್ನು ಪುನರಾರಂಭಿಸುವಂತೆ ಏನಾದರೂ ನಡೆದರೆ, ನಾವು ಮತ್ತೆ ರಣರಂಗಕ್ಕೆ ಇಳಿಯಲಿದ್ದೇವೆ” ಎಂದು ಹೇಳಿದ್ದರು.

ಅದಾಗ್ಯೂ, ಸ್ಥಳೀಯ ಸಮಯ ಬೆಳಿಗ್ಗೆ 8:30 ಕ್ಕೆ ಕದನ ವಿರಾಮ ಪ್ರಾರಂಭವಾಗಲಿದ್ದು, ಒಪ್ಪಂದ ಪ್ರಾರಂಭವಾಗುವ ಗಡುವು ಮುಗಿದರೂ, ಹಮಾಸ್ ಬಿಡುಗಡೆ ಮಾಡುವ ಒತ್ತೆಯಾಳುಗಳ ಪಟ್ಟಿಯನ್ನು ಹಸ್ತಾಂತರಿಸಲಾಗಿಲ್ಲ ಎಂದು ಇಸ್ರೇಲ್‌ನ ಉನ್ನತ ಮಿಲಿಟರಿ ವಕ್ತಾರ ರಿಯರ್ ಅಡ್ಮಿರಲ್ ಡೇನಿಯಲ್ ಹಗರಿ ಹೇಳಿದ್ದಾರೆ. “ಸೈನ್ಯವು ಗಾಜಾದಲ್ಲಿ ಈಗಲೂ ದಾಳಿ ಮಾಡುವುದನ್ನು ಮುಂದುವರೆಸಿದೆ. ಹಮಾಸ್ ಒಪ್ಪಂದವನ್ನು ಪಾಲಿಸುವವರೆಗೆ ದಾಳಿ ನಡೆಸಲಿದೆ” ಎಂದು ಅವರು ಹೇಳಿದ್ದಾರೆ.

ಪಟ್ಟಿಯನ್ನು ತಲುಪಿಸಲಾಗುವುದು ಮತ್ತು ಒಪ್ಪಂದವು ಇನ್ನೂ ಮುಂದುವರಿಯುವ ನಿರೀಕ್ಷೆಯಿದೆ ಎಂದು ಮಧ್ಯವರ್ತಿಗಳು ಭರವಸೆ ನೀಡಿದ್ದಾರೆ ಎಂದು ಇಸ್ರೇಲಿ ಅಧಿಕಾರಿಯೊಬ್ಬರು ಹೇಳಿದ್ದಾರೆ. ಈ ನಡುವೆಯು ಇಸ್ರೇಲ್ ದಾಳಿಯಿಂದ ಗಾಜಾದಾದ್ಯಂತ ಕನಿಷ್ಠ ಎಂಟು ಪ್ಯಾಲೆಸ್ತೀನಿಯರು ಸಾವನ್ನಪ್ಪಿದ್ದಾರೆ ಎಂದು ಅಲ್‌ಜಝೀರಾ ವರದಿ ಮಾಡಿದೆ.

ಈ ನಡುವೆ, ಬಂಧಿತರು ಮತ್ತು ಕೈದಿಗಳ ವಿನಿಮಯ ಒಪ್ಪಂದದ ಮೊದಲ ಹಂತದಲ್ಲಿ ಬಿಡುಗಡೆಗೊಳ್ಳುವ ಬಂಧಿತರ ಹೆಸರನ್ನು ಹಮಾಸ್ ಬಿಡುಗಡೆ ಮಾಡುವವರೆಗೆ ಗಾಜಾದಲ್ಲಿ ಕದನ ವಿರಾಮ ಪ್ರಾರಂಭವಾಗುವುದಿಲ್ಲ ಎಂದು ಇಸ್ರೇಲ್ ಪ್ರಧಾನಿ ಬೆಂಜಮಿನ್ ನೆತನ್ಯಾಹು ಹೇಳಿದ್ದಾರೆ. ತಾಂತ್ರಿಕ ಕಾರಣದಿಂದ ಕದನ ವಿರಾಮ ವಿಳಂಬವಾಗುತ್ತಿದೆ ಎಂದು ಪ್ಯಾಲೇಸ್ತೀನಿ ಹೋರಾಟಗಾರರು ಹೇಳಿದ್ದಾರೆ.

ಕದನ ವಿರಾಮದ ಮೊದಲ ದಿನದಂದು, ಇಸ್ರೇಲ್-ಹಮಾಸ್ ಒಪ್ಪಂದದ ಪ್ರಕಾರ ಗಾಜಾದಲ್ಲಿ ಕದನ ವಿರಾಮಕ್ಕೆ, ಮೂವರು ಇಸ್ರೇಲಿ ಬಂಧಿತರನ್ನು ಮತ್ತು ಸುಮಾರು 95 ಪ್ಯಾಲೆಸ್ತೀನಿ ಕೈದಿಗಳನ್ನು ಬಿಡುಗಡೆ ಮಾಡಬೇಕಿದೆ.

ಅಕ್ಟೋಬರ್ 7, 2023 ರಿಂದ ಗಾಜಾದ ಮೇಲೆ ಇಸ್ರೇಲ್ ನಡೆಸುತ್ತಿರುವ ನರಮೇಧದಿಂದ ಕನಿಷ್ಠ 46,899 ಪ್ಯಾಲೆಸ್ತೀನಿಯರು ಹತ್ಯೆಯಾಗಿದ್ದು, ಸುಮಾರು 1,10,725 ಜನರು ಗಾಯಗೊಂಡಿದ್ದಾರೆ. ಅದೇ ದಿನ ಪ್ಯಾಲೆಸ್ತೀನ್ ಹೋರಾಟಗಾರ ಗುಂಪು ಹಮಾಸ್ ನೇತೃತ್ವದ ದಾಳಿಯಲ್ಲಿ ಇಸ್ರೇಲ್‌ನಲ್ಲಿ ಕನಿಷ್ಠ 1,139 ಜನರು ಸಾವನ್ನಪ್ಪಿದ್ದರು ಮತ್ತು 200 ಕ್ಕೂ ಹೆಚ್ಚು ಜನರನ್ನು ಅವರು ಸೆರೆಯಾಳುಗಳನ್ನಾಗಿ ಕರೆದೊಯ್ದಿದ್ದರು.

ಇದನ್ನೂಓದಿ:  ಗಾಝಾ ಕದನ ವಿರಾಮ ಒಪ್ಪಂದ ಅನುಮೋದಿಸಿದ ಇಸ್ರೇಲ್ ಸಂಪುಟ

ಗಾಝಾ ಕದನ ವಿರಾಮ ಒಪ್ಪಂದ ಅನುಮೋದಿಸಿದ ಇಸ್ರೇಲ್ ಸಂಪುಟ

ಇದನ್ನೂಓದಿ:  ರಾಷ್ಟ್ರೀಯ ವೈದ್ಯಕೀಯ ನೋಂದಣಿ | ದಾಖಲಾಗಿದ್ದು ದೇಶದಾದ್ಯಂತ ಕೇವಲ 278 ವೈದ್ಯರು; ಭಾರಿ ಅಬ್ಬರದಿಂದ ಪ್ರಾರಂಭಿಸಿದ್ದ ಕೇಂದ್ರ ಸರ್ಕಾರ!

ರಾಷ್ಟ್ರೀಯ ವೈದ್ಯಕೀಯ ನೋಂದಣಿ | ದಾಖಲಾಗಿದ್ದು ದೇಶದಾದ್ಯಂತ ಕೇವಲ 278 ವೈದ್ಯರು; ಭಾರಿ ಅಬ್ಬರದಿಂದ ಪ್ರಾರಂಭಿಸಿದ್ದ ಕೇಂದ್ರ ಸರ್ಕಾರ!

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

‘ಮನೆ ಕೊಡಿ ಇಲ್ಲಾ ಜೈಲಿಗಾದರೂ ಬಿಡಿ’ : ಬೀದಿಗೆ ಬಿದ್ದ ಕೋಗಿಲು ನಿರಾಶ್ರಿತರ ಅಳಲು

"ನಮಗೊಂದು ಸೂರು ಕೊಟ್ಟರೆ ಅದಕ್ಕೆ ಕಾರಣರಾದ ಎಲ್ಲರನ್ನೂ ಹರಸಿ ನೆಮ್ಮದಿಯಾಗಿ ಬದುಕುತ್ತೇವೆ. ಇಲ್ಲವಾದರೆ ನಮ್ಮನ್ನು ಜೈಲಿಗಾದರೂ ಹಾಕಿಬಿಡಿ. ಒಂದು ನೆಲೆ ಮತ್ತು ಮೂರು ಹೊತ್ತಿನ ಊಟವಾದರೂ ಸಿಗುತ್ತದೆ". ಇದು ಸರ್ಕಾರ ಮನೆ ಧ್ವಂಸ...

ಒಳಮೀಸಲಾತಿ ಜಾರಿ ಸರ್ಕಾರದ ಹೊಸ ಸೂತ್ರ

ಕರ್ನಾಟಕದಲ್ಲಿ ಒಳಮೀಸಲಾತಿಯ ’ಸದ್ದು-ಗುದ್ದು’ ಅವಿಭಜಿತ ಆಂಧ್ರಪ್ರದೇಶಕ್ಕಿಂತಲೂ ಹೆಚ್ಚಾಗಿದೆ. ಇದಕ್ಕೆ ಕಾರಣ ಪರಿಶಿಷ್ಟ ಜಾತಿಗಳೊಳಗಿನ ಮೇಲಾಟವೂ ಹೌದು, ಸರ್ಕಾರದ ಬೇಜವಾಬ್ದಾರಿ ನಡೆಗಳೂ ಹೌದು. ಆದರೆ ದಿನಾಂಕ: 24.04.2026ರಂದು ನಡೆದ ಸಚಿವ ಸಂಪುಟ ಸಭೆಯು ಒಳಮೀಸಲಾತಿ...

ಕೊರೋನಾ ಲಸಿಕೆ ಒಳಹೊರಗುಗಳ ಪರಾಮರ್ಶೆಯ ನೋಟ

ಮನುಷ್ಯನ ನೆನಪಿನ ಶಕ್ತಿ ಕಡಿಮೆ ಎಂದು ರಾಜಕಾರಣಿಗಳು, ಅಧಿಕಾರಿಗಳು ಸದಾ ಗುನುಗುತ್ತಿರುತ್ತಾರೆ. ಅದು ಜೀವ ಮತ್ತು ಜೀವನ ಕಳೆದುಕೊಂಡ ವಿಚಾರವನ್ನು ಕೂಡ ಬಹಳ ಬೇಗ ಮರೆವಿನ ತೊಟ್ಟಿಗೆ ತಳ್ಳಿ ಬಿಡುತ್ತದೆ.ಆದರೂ, ಮನುಷ್ಯ ಭೂಮಿಯ...

‘ಮಾವಿನ ಮರ’ ಕಂಡ ಕನಸು

ಪುಸ್ತಕ ಪರಿಚಯ ಸವಾಲಿನ ವಿಷಯ. ಅದರಲ್ಲೂ ಕವಿತೆಗಳ ಕುರಿತು ಮಾತನಾಡುವುದು ಇನ್ನೂ ಸವಾಲು. ಪ್ರತಿಯೊಂದು ಕವಿತೆಯೂ ತನ್ನ ಓದುಗರೊಂದಿಗೆ ಸಂವಾದಿಸುವ ಬಗೆ ವಿಭಿನ್ನವಾಗಿರುತ್ತದೆ. ಅದನ್ನು ಏಕರೂಪೀ ಪರಿಭಾಷೆಯಲ್ಲಿ ಮಂಡಿಸುವುದು ಸರಿಯಲ್ಲ. ’ಮಿಥಿಲೆಯ ಮಾವಿನ...

NEET ರದ್ದು : ಖಿನ್ನತೆ, ಆತಂಕಕ್ಕೆ ಒಳಗಾದ ವಿದ್ಯಾರ್ಥಿಗಳು; ನಾಲ್ಕು ದಿನದಲ್ಲಿ ನಾಲ್ವರು ಸಾವಿಗೆ ಶರಣು

ಈ ವರ್ಷದ (2026) ನೀಟ್-ಯುಜಿ (NEET-UG) ಪರೀಕ್ಷೆ ರದ್ದಾದ ಬಳಿಕ ದೇಶದಾದ್ಯಂತ ಕನಿಷ್ಠ ನಾಲ್ವರು ವಿದ್ಯಾರ್ಥಿಗಳು ತೀವ್ರ ಮಾನಸಿಕ ಒತ್ತಡ ಹಾಗೂ ಹತಾಶೆಯಿಂದ ಸಾವಿಗೆ ಶರಣಾಗಿದ್ದಾರೆ. ರಾಜಸ್ಥಾನದ ಝುಂಜುನು ಜಿಲ್ಲೆಯ 23 ವರ್ಷದ ಪ್ರದೀಪ್...

ಪ್ಯಾಲೆಸ್ಟೀನಿಯನ್ ಕೈದಿಗಳ ಮೇಲೆ ಲೈಂಗಿಕ ದೌರ್ಜನ್ಯ ವರದಿ: ನ್ಯೂಯಾರ್ಕ್ ಟೈಮ್ ವಿರುದ್ಧ ಮೊಕದ್ದಮೆ ದಾಖಲಿಸಿದ ಇಸ್ರೇಲ್ ಕ್ರಮಕ್ಕೆ ಆರ್‌ಎಸ್‌ಎಫ್ ಖಂಡನೆ

ಪ್ಯಾಲೆಸ್ಟೀನಿಯನ್ ಕೈದಿಗಳನ್ನು ಗುರಿಯಾಗಿಸಿಕೊಂಡು ವ್ಯಾಪಕವಾದ ಲೈಂಗಿಕ ದೌರ್ಜನ್ಯವನ್ನು ಬಹಿರಂಗಪಡಿಸಿದ ನಿಕೋಲಸ್ ಕ್ರಿಸ್ಟೋಫ್ ಅವರ  ಅಭಿಪ್ರಾಯ ಅಂಕಣವನ್ನು ಪ್ರಕಟಿಸಿದ ನ್ಯೂಯಾರ್ಕ್ ಟೈಮ್ಸ್ ವಿರುದ್ಧ ಮಾನನಷ್ಟ ಮೊಕದ್ದಮೆ ಹೂಡಿರುವ ಇಸ್ರೇಲಿ ಸರ್ಕಾರದ ನಿರ್ಧಾರವನ್ನು ರಿಪೋರ್ಟರ್ಸ್ ವಿದೌಟ್...

“ಮುಸ್ಲಿಮರಿಗೆ ಯಾವುದೇ ಕೆಲಸ ಮಾಡಲ್ಲ” ಎಂದು ವಿವಾದಾತ್ಮಕ ಶಪಥ ಮಾಡಿದ ಪಶ್ಚಿಮ ಬಂಗಾಳದ ಬಿಜೆಪಿ ಶಾಸಕ ರಿತೇಶ್ ತಿವಾರಿ

ಪಶ್ಚಿಮ ಬಂಗಾಳದಲ್ಲಿ ಸುವೇಂದು ಅಧಿಕಾರಿ ನೇತೃತ್ವದಲ್ಲಿ ಬಿಜೆಪಿ ತನ್ನ ಮೊದಲ ಸರ್ಕಾರವನ್ನು ರಚಿಸಿದ ಕೆಲವೇ ದಿನಗಳಲ್ಲಿ, ಪಕ್ಷದ ಶಾಸಕ ರಿತೇಶ್ ತಿವಾರಿ ಅವರು ಮಾಡಿರುವ ಭಾಷಣವೊಂದು ಸಾಮಾಜಿಕ ಮಾಧ್ಯಮಗಳಲ್ಲಿ ತೀವ್ರ ಆಕ್ರೋಶಕ್ಕೆ ಕಾರಣವಾಗಿದೆ. "ಪಶ್ಚಿಮ...

’ಎಸ್‌ಐಆರ್’ ವಿರುದ್ಧ ಜನಪರ ಸಂಘಟನೆಗಳಿಂದ ಜನಾಂದೋಲನ ಬಂಗಾಳದ ಜನರ ಜೊತೆಗೆ ನಿಂತ ಕರ್ನಾಟಕ

ಮತದಾರರ ಪಟ್ಟಿ ತೀವ್ರ ಪರಿಷ್ಕರಣೆ (ಎಸ್‌ಐಆರ್) ಮೂಲಕ ವಿರೋಧ ಪಕ್ಷಗಳ ಮತದಾರರು ಮತ್ತು ಅಲ್ಪಸಂಖ್ಯಾತ ಸಮುದಾಯದ ಲಕ್ಷಾಂತರ ಮತದಾರರನ್ನು ಪಟ್ಟಿಯಿಂದ ಕೈಬಿಡುವ ಬಿಜೆಪಿ ನೇತೃತ್ವದ ಕೇಂದ್ರ ಸರ್ಕಾರದ ಕುತಂತ್ರ ಈಗಾಗಲೇ ಬಿಹಾರದಲ್ಲಿ ಜಗಜ್ಜಾಹೀರಾಗಿದೆ....

ನಿರುದ್ಯೋಗಿ ಯುವಕರನ್ನು ಜಿರಳೆಗಳು ಎಂದ ಸಿಜೆಐ: ಇದೆಂತಾ ಮಾತು ನ್ಯಾಯಮೂರ್ತಿಗಳೇ!

‘ಕೆಲವು ನಿರುದ್ಯೋಗಿ ಯುವಕರು ಜಿರಳೆಗಳಂತೆ ಸಮಾಜವನ್ನು ಕಾಡುತ್ತಾರೆ. ಉದ್ಯೋಗ, ಸ್ಥಾನಮಾನ ಸಿಗದೆ ಇದ್ದಾಗ ಅವರು ಎಲ್ಲರ ಮೇಲೆ ದಾಳಿ ಆರಂಭಿಸುತ್ತಾರೆ’ ಇದು ಯಾವುದೋ ರಾಜಕೀಯ ರ‍್ಯಾಲಿಯ ಭಾಷಣವಲ್ಲ ಅಥವಾ ಟಿವಿ ಚಾನೆಲ್‌ಗಳ ಜಗಳವಲ್ಲ,...

ಮುಸ್ಲಿಮರು ಕೇವಲ ವೋಟು ಹಾಕಿಕೊಂಡೇ ಇರಬೇಕಾ..ಹಕ್ಕುಗಳನ್ನು ಕೇಳಬಾರದಾ?: ಕಾಂಗ್ರೆಸ್‌ಗೆ ಮುಸ್ಲಿಂ ಸಮಾವೇಶ ಪ್ರಶ್ನೆ

"ಮುಸ್ಲಿಮರು ಕೇವಲ ವೋಟು ಹಾಕಿಕೊಂಡೇ ಇರಬೇಕಾ? ಯಾವ ಹಕ್ಕನ್ನೂ ಕೇಳಬಾರದು ಎಂದು ನೀವು (ಕಾಂಗ್ರೆಸ್‌ನವರು) ಬಯಸುತ್ತಿದ್ದೀರಾ?" ಎಂದು ಕರ್ನಾಟಕ ಮುಸ್ಲಿಂ ಸಮಾವೇಶ ಖಾರವಾಗಿ ಪ್ರಶ್ನಿಸಿತು. ಬೆಂಗಳೂರಿನ ಪುರಭವನದಲ್ಲಿ ಇಂದು (ಮೇ 16, ಶನಿವಾರ) ನಡೆದ...