Homeಅಂಕಣಗಳುಆಶಾನಿ ಸಂಕೇತ ಸಿನಿಮಾ ಮತ್ತು ಜಮೀನ್ದಾರಿ ಪದ್ದತಿ ನೆನಪಿಸುವ ಕೃಷಿ ಕಾಯ್ದೆಗಳು

ಆಶಾನಿ ಸಂಕೇತ ಸಿನಿಮಾ ಮತ್ತು ಜಮೀನ್ದಾರಿ ಪದ್ದತಿ ನೆನಪಿಸುವ ಕೃಷಿ ಕಾಯ್ದೆಗಳು

ಇವು ರೈತರ ಬೆನ್ನು ಮುರಿಯಬಲ್ಲ ಕಾಯಿದೆಗಳು, ಇದರಿಂದ ಬರೆ ರೈತರ ನಾಶ ಆಗೋದಿಲ್ಲ, ಕೃಷಿ ಆಧಾರಿತ ದೇಶವಾದ ಭಾರತ ದೇಶ ಸರ್ವ ನಾಶ ಆಗತತಿ' ಅಂತ ರೈತ ಸಂಘಟನೆ, ವಿರೋಧ ಪಕ್ಷಗಳು ಆಂದೋಲನ ಶುರು ಮಾಡಿದಾರ..

- Advertisement -
- Advertisement -

ಸತ್ಯಜಿತ್ ರೇ ಅವರ ‘ಆಶಾನಿ ಸಂಕೇತ’ ಸಿನಿಮಾದಾಗ ಒಂದು ದೃಶ್ಯ ಬರ್ತದ. ಊರಿಗೆ ಊರೇ ಉಪವಾಸ ಬಿದ್ದು, ಎಲ್ಲರೂ ತಿನಲಿಕ್ಕೆ ಎನರ ಸಿಗತೆತಿ ಅಂತ ಜಂಗಲ್ಲಿಗೆ ಹೋಗತಾರ. ಅಲ್ಲೇ ಗಡ್ಡಿ, ಗೆಣಸು, ಒಣಗಿದ ಬೀಜ, ಮಣ್ಣು, ಕಲ್ಲು, ಹಂಚು, ಹೀಂಗ ಕೈಗೆ ಸಿಕ್ಕಿದ್ದು ಎಲ್ಲಾ ತಿನ್ನತಾರ. ಒಂದು ಹುಡಿಗಿ ಒಂದು ಗಡ್ಡಿ ತೊಗೊಂಡು ತನ್ನ ತಮ್ಮ- ತಂಗಿಯರಿಗೆ ಕೊಡಬೇಕು ಅಂತ ಊರಿಗೆ ವಾಪಸ್ ಬರತಾಳ. ಬರೋ ದಾರಿಯೊಳಗ ಶಕ್ತಿ ಕಮ್ಮಿ ಆಗಿ, ತಲಿ ತಿರುಗಿ ಬಿದ್ದು ಸಾಯತಾಳ. ಅಕಿ ಸಾಯೋದನ್ನ ಇನ್ನೊಂದು ಹುಡುಗಿ ದೂರ ನಿಂತು ನೋಡ್ತಾ ಇರತಾಳ. ಅಕಿ ಸತ್ತು ಹೋದ ಮರು ಕ್ಷಣ, ಆ ಹುಡುಗಿ ಓಡಿ ಬಂದು ಈ ಹೆಣದ ಕೈ ಒಳಗಿನ ಗಡ್ಡಿ ಕಿತಕೊಂಡು ಓಡಿಹೋಗಿ, ಅದನ್ನ ತಿನ್ನತಾಳ.

ಈ ಸಿನಿಮಾದ ಸಂದೇಶ ಏನು ಅಂದ್ರ `ಕ್ಷಾಮ ಅನ್ನುವುದು ಮಾನವ ನಿರ್ಮಿತ, ನಿಸರ್ಗದತ್ತವಾದದ್ದು ಅಲ್ಲ’ ಅಂತ. ಅಲ್ಲಿನ ಕತಿ ಸುಮಾರು 1940ರ ಆಸು ಪಾಸಿನದು. ಎರಡನೇ ವಿಶ್ವಯುದ್ಧದಾಗ ಪಾಲುಗೊಂಡ ಬ್ರಿಟಿಷ್ ಸೈನಿಕರಿಗೆ ಬೇಕಾಗತದ ಅಂತ ಹೇಳಿ ಸರಕಾರಿ ಅಧಿಕಾರಿಗಳು ಮತ್ತು ವ್ಯಾಪಾರಿಗಳು ಆ ಊರಿನ ರೈತರು ಬೆಳೆದ ಆಹಾರ ಧಾನ್ಯವನ್ನ ಮುಚ್ಚಿ ಇಡತಾರ. ಅಕ್ಕಿ ಇಲ್ಲ, ಬೇಳೆ ಇಲ್ಲ ಅಂತ ಕೃತಕ ಅಭಾವ ಸೃಷ್ಟಿ ಮಾಡತಾರ.

ಆ ಊರಿನ ಜನ ತಿನ್ನಲಿಕ್ಕೆ ಏನೂ ಇಲ್ಲದೆ ಒದ್ದಾಡತಾರ. ಅರ್ಧದಷ್ಟು ಜನ ಸಾಯತಾರ, ಇನ್ನೂ ಅರ್ಧ ಜನಾ ಊರು ಬಿಡತಾರ. ತಮ್ಮ ಜಮೀನು, ಮನಿ ಬಿಟ್ಟು, ಉಟ್ಟ ಬಟ್ಟಿ ಮ್ಯಾಲೆ ಹೆಂಡರು, ಮಕ್ಕಳು ಕಟಿಗೊಂಡು ಅನಿಶ್ಚಿತ ಭವಿಷ್ಯದ ಕಡೆ ನಡಿಯಲಿಕ್ಕೆ ಶುರು ಮಾಡತಾರ. ಅವರಿಗೆ ಬಹಳ ಮಂದಿಗೆ `ನಮ್ಮ ಊರಾಗ ಬೇಕಾದಷ್ಟು ಅಕ್ಕಿ, ಹಿಟ್ಟು ಐತಿ, ಆದರ ಸರಕಾರ ಹಾಗೂ ವ್ಯಾಪಾರಿಗಳು ಸುಳ್ಳು ಹೇಳತಾರ’ ಅನ್ನೋದು ಗೊತ್ತು ಇರೋದಿಲ್ಲ. ಅದರ ಬಗ್ಗೆ ಸತ್ಯ ಗೊತ್ತಿದ್ದ ಕೆಲವರಿಗೆ ಸರಕಾರದ ವಿರುದ್ಧ ಹೋರಾಟ ಮಾಡೋ ಶಕ್ತಿ ಇರೋದಿಲ್ಲ. ಹೋರಾಟ ಮಾಡಿದ ಕೆಲವರನ್ನು ಬ್ರಿಟಿಷ್ ಸರಕಾರ ಜೈಲಿಗೆ ಕಳಿಸಿರತದ, ಗಲ್ಲಿಗೆ ಹಾಕಿರತದ – ಗಡಿಪಾರು ಮಾಡಿರತದ.

photo courtesy : Child Friendly News

ಭೀಕರ ಬರಗಾಲದ ಭಯಂಕರ ಪರಿಣಾಮಗಳನ್ನ ತೋರಿಸಿದ ಈ ಸಿನಿಮಾದಾಗ ನಾಯಕಿ ತನ್ನ ಗಂಡನಿಗೆ ನಾನು ಬಸುರಿ ಎನ್ನುವ ಸಿಹಿ ಸುದ್ದಿ ಹೇಳುವ ದೃಶ್ಯದಿಂದ ಮುಕ್ತಾಯ ಆಗತದ. ಆದರ ಆ ಪುಟ್ಟ ಹುಡುಗಿಯ ಸಾವಿನ ದೃಶ್ಯವೇ ನೋಡುವವರ ನೆನಪಿನಾಗ ಉಳಿತದ. ಸಿನಿಮಾ ನೋಡಿ ಎಷ್ಟೋ ವರ್ಷಗಳು ಆದರೂ ಕೂಡ ಇದು ನಮಗ ಕಾಡತದ.

ಬಂಗಾಳಿ ಭಾಷಾದಾಗ ಆಶಾನಿ ಸಂಕೇತ ಅಂತ ಅಂದ್ರ `ದೂರದಲ್ಲಿ ಎಲ್ಲೋ ಗುಡುಗಿನ ಸದ್ದು’ ಅಂತ ಅರ್ಥ. ಗುಡುಗಿನ ಸದ್ದು ಕೇಳುತ್ತಾ ಇದ್ದರೂ ಕೂಡ ಮಳೆ ಬರಂಗಿಲ್ಲ.

ಆವಾಗ ಹಂಗ ಯಾಕ ಆತು ಅಂದ್ರ ಆಗ ಜಮೀನುದಾರಿ ಪದ್ಧತಿ ಇತ್ತು. ಇಡೀ ಊರಿಗೆ ಒಬ್ಬರೋ – ಇಬ್ಬರೋ ಜಮೀನ್ ಮಾಲೀಕರು ಇದ್ದರು. ಉಳಿದವರು ಎಲ್ಲಾ ಅವರ ಕಡೆ ಕೆಲಸ ಮಾಡೋ ಕೂಲಿಗಳು.

ಭೂಮಿಯ ಮಾಲೀಕರ ಮ್ಯಾಲೆ ಯಾರದೂ ನಿಯಂತ್ರಣ ಇರಲಿಲ್ಲ. ಅವರು ತಮಗ ತಿಳದಿದ್ದು, ತಿಳದಷ್ಟು ಬೆಳದು, ತಿಳದವರಿಗೆ ಮಾರಾಟ ಮಾಡಬಹುದಾಗಿತ್ತು. ಇನ್ನ ಕೆಲವು ಸಣ್ಣ ರೈತರು ಇದ್ದರು ಕೂಡ ಅವರು ದೊಡ್ಡ ಸಾಹುಕಾರನ ಸಾಲಗಾರರಾಗಿ ಇದ್ದರು. ಅವರ ಕೈಸಾಲ ತೀರಿಸಲಿಕ್ಕೆ ತಾವು ಬೆಳೆದದ್ದು ಸಾಹುಕಾರಿಗೆ ಮಾರಾಟ ಮಾಡಬೇಕಾಗಿತ್ತು. ಅವರು ಹೇಳಿದ ಬೆಳೆಗೆ ಮಾರಾಟ ಮಾಡೋ ಅನಿವಾರ್ಯ ಪರಿಸ್ಥಿತಿ ಇತ್ತು.

ಆ ಸಾಹುಕಾರನ ಹತ್ತಿರ ಧಾನ್ಯ ಇಡಲಿಕ್ಕೆ ದೊಡ್ಡ ದೊಡ್ಡ ಗೋಡೌನ್, ಹಗೇವು ಇದ್ದವು. ಅವನ ಸಾಲಾ ತೀರಿಸಲಾರದವರನ್ನು ಕೂಡಿಹಾಕಲಿಕ್ಕೆ ಕತ್ತಲೆ ಕ್ವಾಣಿನೂ ಇದ್ದವು. ಸಾಲ ಕೊಡದೇ ಇದ್ದ ರೈತರ ಜಮೀನು ತಮ್ಮ ಹೆಸರಿಗೆ ಬರೆಸಿಕೊಂಡು ಮೋಸ ಮಾಡಿದ ಸಾಹುಕಾರರ ಕತೆ ಇಡೀ ದೇಶದ ತುಂಬಾ ಅದಾವು. ಬಡ್ಡಿ ಕೊಡಲಾರದ ರೈತರ ಹೆಂಡತಿಯರ ಮ್ಯಾಲೆ ಸಾಹುಕಾರರು ದಬ್ಬಾಳಿಕೆ ಮಾಡಿದ್ದಕ್ಕ ಹುಟ್ಟಿದ ಮಕ್ಕಳಿಗೆ `ಬಡ್ಡಿ ಮಕ್ಕಳು’ ಅಂತ ಅನ್ನೋದು ಬೈಗುಳ ಅಲ್ಲ ಅನ್ನುವಷ್ಟು ನಮ್ಮ ದೇಶದಾಗ ಸಾಮಾನ್ಯ ಆಗಿ ಹೊಗೇತಿ.

ಆವಾಗ ಎಲ್ಲಾ ಸಣ್ಣ ರೈತರು ಕೂಡಿಕೊಂಡು, ತಮ್ಮ ಕಾಳು-ಕಡಿಗೆ ತಾವು ಒಂದು ಬೆಲೆ ನಿಗದಿ ಮಾಡಿ ಮಾರಾಟ ಮಾಡಲಿಕ್ಕೆ ಸಾಧ್ಯ ಆಗುವ ಅವಕಾಶ ಇರಲಿಲ್ಲ. ಅಷ್ಟ ಅಲ್ಲದ, ಸಾಹುಕಾರರು ತಮ್ಮ ಕಾಳು-ಕಡಿಗೆ ಎಷ್ಟು ಬೆಲೆ ಕಟ್ಟಿ ಮಾರಾಟ ಮಾಡತಾರ ಅನ್ನೋದರ ಬಗ್ಗೆ ಒಂದು ಕಾನೂನು ಇರಲಿಲ್ಲ.

ಇಂತಹ ಎಲ್ಲ ಕಲ್ಯಾಣ ಕಾನೂನುಗಳು ಜಾರಿಯಾಗಿದ್ದು ಸ್ವಾತಂತ್ರ ಬಂದ ಮ್ಯಾಲೆ. ಅವಕ್ಕ ಜಮೀನ್‍ದಾರಿ ನಿರ್ಮೂಲನೆ ಕಾಯಿದೆ, ಭೂ ಕಂದಾಯ ಕಾಯಿದೆ, ಭೂ ಸುಧಾರಣೆ ಕಾಯಿದೆ, ಎಪಿಎಂಸಿ ಕಾಯಿದೆ, ಅಗತ್ಯ ವಸ್ತು ಕಾಯಿದೆ ಅಂತ ಹೆಸರು.

ಆದರ ಈಗ `ಸ್ವತಂತ್ರ ಬಂದು ಏಳು ದಶಕಗಳಲ್ಲಿ ಯಾವುದೇ ಒಳ್ಳೆ ಕೆಲಸ ಆಗಿಲ್ಲ’ ಅಂತ ನಂಬುವ ಸರಕಾರ ಬಂದದ. ತಾನು ಕ್ರಾಂತಿಕಾರಿ ಬದಲಾವಣೆ ಮಾಡತೆನಿ ಅನ್ನುವ ರಣ ಘೋಷಣೆ ಮಾಡೇಬಿಟ್ಟೆದ.

ಅದಕ್ಕ ಸಾಮಾನ್ಯ ಮತದಾರರಿಗೆ ಕೊಟ್ಟ ಮಾತು ಮಾತ್ರ ನೆನಪು ಹರಿಬಿಟ್ಟದ. ಆದರ ದೊಡ್ಡ ದೊಡ್ಡ ಕಂಪನಿಗಳಿಗೆ ಕೊಟ್ಟ ಮಾತನ್ನು ಪಾಲಿಸಲಿಕ್ಕೆ ಹತ್ತಿ ಬಿಟ್ಟದ.

`ನಾವು ಮೇಲೆ ಕಂಡ ಎಲ್ಲ ನಿರುಪಯೋಗಿ ಕಾನೂನುಗಳನ್ನು ಬದಲು ಮಾಡಿ ಬಿಟ್ಟೆವು’ ಅಂತ ಹೇಳಿದ ಪಂಥ ಪ್ರಧಾನ ಸೇವಕರು ಈ ತಿದ್ದುಪಡಿ ಕಾಯಿದೆಗಳನ್ನ `ಕೃಷಿ ಕ್ಷೇತ್ರದಲ್ಲಿ ಆಮೂಲಾಗ್ರ ಸುಧಾರಣೆ ತರಬಲ್ಲ ಕ್ರಾಂತಿಕಾರಿ ಬದಲಾವಣೆ’ಗಳು ಅಂತ ಬಣ್ಣಿಸಿದಾರ. ಹಂಗ ನೋಡಿದರ “ಸುಧಾರಣೆ ಹಾಗೂ ಕ್ರಾಂತಿ’’ ಅನ್ನುವ ಶಬ್ದ ಬಿಟ್ಟು, ಅವರು ಹೇಳಿದ್ದು ಎಲ್ಲಾ ಖರೆ ಐತಿ.

ರೈತರ ಪರ ಇರೋ ಕಲ್ಯಾಣ ಕಾಯಿದೆಗಳನ್ನ ಬದಲು ಮಾಡಿ, ಸಾಹುಕಾರರ – ಮಧ್ಯವರ್ತಿಗಳ ಕೈಯೊಳಗ ಅವರು ಸಿಗಲಾರದ ಹಂಗ ಅವರನ್ನ ಪಾರು ಮಾಡೋ ನೀತಿ – ನಿಯಮಗಳನ್ನ ಬೀಸಿ ಒಗದುಬಿಟ್ಟಾರ.

ಆಧುನಿಕ ಯುಗದ ಬಿಲಿಯನ್ ಡಾಲರ್ ಸಾಹುಕಾರರನ್ನು ಕರದು ಅವರಿಗೆ ಯಾವುದೇ ಮಿತಿ ಇಲ್ಲದೆ ಭೂಮಿ ಒಡೆತನ ಮಾಡುವ, ಬೆಳೆದ ಬೆಲೆಯನ್ನು ಅವೈಜ್ಞಾನಿಕ ಬೆಲೆಗೆ ಖರೀದಿ ಮಾಡುವ ಅವಕಾಶ ಮಾಡಿಕೊಟ್ಟಾರ.

photo courtesy : The People Post

ಹೊಸ ಜಮೀನ್‍ದಾರಿ ಪದ್ಧತಿಯನ್ನು ಒಪ್ಪಂದ ಕೃಷಿ ಅನ್ನೋ ಒಪ್ಪ-ಓರಣದ ಹೆಸರಿನಿಂದ ಜಾರಿಗೆ ತಂದು ಸಣ್ಣ ರೈತರು ಎಲ್ಲಾ ತಮ್ಮದೇ ಹೊಲದೊಳಗ ಕೂಲಿಗಳಾಗಿ ಹೋಗೋ ಅವಕಾಶ ಇದರಾಗ ಐತಿ.

ಅಗತ್ಯ ಸಾಮಗ್ರಿ ಕಾಯಿದೆ ಬದಲಾವಣೆ ಮಾಡಿ ವ್ಯಾಪಾರಿಗಳು ಯಾವುದೇ ಸಾಮಾನು ಎಷ್ಟು ಬೇಕಾದರೂ ಸಂಗ್ರಹ ಮಾಡಿ ಇಟ್ಟುಕೋಬಹುದು ಅಂತ ಮಾಡಿಬಿಟ್ಟಾರ. ನಾಳೆ ಅತ್ಯಂತ ರಾಕ್ಷಸಿ ರೂಪ ಪಡೆಯಬಹುದಾದ ಕಲಂ ಇದು.

ನಮ್ಮಿಂದ ವೋಟು ತೊಗೊಂಡು ಹೋದವರು ಮಾಡಿದ ಕೆಲಸ ಹೆಂಗ ಐತಿ ಅಂದ್ರ ಅದರ ಪರಿಣಾಮ ಇನ್ನೂ ಒಂದು ನೂರು ವರ್ಷ ಆದಮೇಲೆ ಬಹಳ ಮಂದಿಗೆ ಗೊತ್ತಾಗತದ.

ಕೆಲವರ ಪ್ರಕಾರ ಇವು ನಮ್ಮ ರಾಷ್ಟ್ರವನ್ನ ಮುಂದಕ್ಕ ತೊಗೊಂಡು ಹೋಗೋ ಕಾಯಿದೆ ಅಲ್ಲ. 1858ಕ್ಕಿಂತ ಹಿಂದಕ್ಕ ತೊಗೊಂಡು ಹೋಗೋ ಕಾಯಿದೆ. ಇವೆಲ್ಲಾ ಬಡ ರೈತರ ಜುಟ್ಟು ಈಸ್ಟ್ ಇಂಡಿಯಾ ಕಂಪನಿ ಬದಲಿಗೆ ವೆಸ್ಟ್ ಇಂಡಿಯಾ ಕಂಪನಿ ಕೈಯೊಳಗ ಕೊಡೋ ಪಿತೂರಿಯ ಮೊದಲ ಹೆಜ್ಜೆ.

ಆಶಾನಿ ಸಂಕೇತ, ಆಕಾಲೆರ್ ಸಂಧಾನೆ, ಹಾಗೂ ಇತರ ಚಿತ್ರಗಳು ಎಪ್ಪತ್ತರ ದಶಕದಾಗ ಜಗಮನ್ನಣೆ ಗಳಿಸಿದವು. ಬ್ರಿಟಿಷ್ ಸರ್ಕಾರದ ಮಾನವ ವಿರೋಧಿ ನೀತಿಗಳಿಂದಾಗಿ ಕ್ಷಾಮ ಉಂಟಾಗಿ, ಲಕ್ಷಾಂತರ ಜನ ಉಪವಾಸ ಬಿದ್ದ ಕತಿ ಹೇಳಿದವು.

ಹಂಗ ನೋಡಿದರ ನಮ್ಮನ್ನು ಬ್ರಿಟಿಷ್ ಸರಕಾರಕ್ಕಿಂತ ಈಸ್ಟ್ ಇಂಡಿಯಾ ಕಂಪನಿ ಆಳಿದ್ದೇ ಜಾಸ್ತಿ.

1608ರಲ್ಲಿ ವ್ಯಾಪಾರ ಮಾಡುವ ಉದ್ದೇಶದಿಂದ ಬ್ರಿಟಿಷರು ಭಾರತದೊಳಗ ಕಾಲು ಇಟ್ಟರು. ಅಲ್ಲಿಂದ 1858ರ ತನಕಾ ನಮ್ಮಲ್ಲೇ ಕಂಪನಿ ಸರಕಾರ ಇತ್ತು. ನಮ್ಮ ರಾಷ್ಟ್ರಭಕ್ತರು 1857ರ ಸಂಗ್ರಾಮದಾಗ ಒಟ್ಟಾಗಿ ಹೋರಾಟ ಮಾಡಿದಾಗ ಈಸ್ಟ್ ಇಂಡಿಯಾ ಕಂಪನಿಗೆ ರಾಜಕೀಯ ಮಾಡಲಿಕ್ಕೆ ಬರೋದಿಲ್ಲ ಅಂತ ಬ್ರಿಟನ್ ಸಂಸತ್ತಿಗೆ ಮನದಟ್ಟಾಗಿ ಇಲ್ಲಿಯ ಆಡಳಿತವನ್ನ ಅಲ್ಲಿನ ಪ್ರಧಾನಿ ತಮ್ಮ ಕೈಯೊಳಗ ತೊಗೊಂಡರು.

ಈಗ ಈಸ್ಟ್ ಇಂಡಿಯ ಕಂಪನಿ ಹೋಗಿ ವೆಸ್ಟ್ ಇಂಡಿಯನ್ ಕಂಪನಿ ಬಂದದ. ಅವರ ಸಾಮಾನು ನಾವು ಖರೀದಿ ಮಾಡಿ, ನಮ್ಮ ಕಪ್ಪ ಅವರಿಗೆ ಕೊಟ್ಟಿದ್ದಕ್ಕ ಅವರು ದೊಡ್ಡವರಾಗಿಬಿಟ್ಟಾರ. ಎಲ್ಲ ಕ್ಷೇತ್ರದಾಗ ತಮ್ಮ ಏಕಸ್ವಾಮ್ಯ ಬೆಳೆಸಿಕೊಂಡುಬಿಟ್ಟಾರ. ಕಿತ್ತೂರು ರಾಣಿ ಚನ್ನಮ್ಮ ಅವರು ಕಂಪನಿ ಸರಕಾರಕ್ಕ ಕಪ್ಪ ಕೊಡುವ ಸಂಬಂಧ ಯುದ್ಧ ಮಾಡಿದರು. ಅವರ ಬಗ್ಗೆ ಮಾಡಿದ ಸಿನಿಮಾ-ನಾಟಕದೊಳಗೆ ವೀರ ರಾಣಿಯ `ನಿಮಗೇಕೆ ಕೊಡಬೇಕು ಕಪ್ಪ’ ಅನ್ನುವ ಮಾತು ಜನಪ್ರಿಯ ಆಗೇದ.

ಆ ಮಾತನ್ನು ನಾವು ಮರೆಯದಂತೆ ಆಗಲಿ.

`ಇವು ರೈತರ ಬೆನ್ನು ಮುರಿಯಬಲ್ಲ ಕಾಯಿದೆಗಳು, ಇದರಿಂದ ಬರೆ ರೈತರ ನಾಶ ಆಗೋದಿಲ್ಲ, ಕೃಷಿ ಆಧಾರಿತ ದೇಶವಾದ ಭಾರತ ದೇಶ ಸರ್ವ ನಾಶ ಆಗತತಿ’ ಅಂತ ರೈತ ಸಂಘಟನೆ, ವಿರೋಧ ಪಕ್ಷಗಳು ಆಂದೋಲನ ಶುರು ಮಾಡಿದಾರ. ನಿರೀಕ್ಷೆಯಂತೆ ಕಂಗನಾ ರನ್‍ಔಟ್ ಅವರು `ಪ್ರತಿಭಟನಾಕಾರರು ಭಯೋತ್ಪಾದಕರು’ ಅಂತ ಫರಮಾನು ಹೊರಡಿಸಿಬಿಟ್ಟಾರ.

`ಎಲ್ಲಾ ರೈತರಿಗೆ ಒಳ್ಳೇದಾಗಲಿ ಅಂತ ನಮ್ಮ ನಾಯಕರು ಇಂತಹ ಕ್ರಮ ಕೈಗೊಂಡಾರ. ಬರೆ ಹುಳುಕ ಹುಡುಕಬ್ಯಾಡ್ರಿ. ಬರೆ ನೆಗೆಟಿವ್ ಮಾತು ಬ್ಯಾಡ’ ಅಂತ ಕೆಲವರು ಕಿವಿಮಾತು ಹೇಳಲಿಕ್ಕೆ ಹತ್ಯಾರ.

ಇದರಾಗ 99 ಶೇಕಡಾ ಚಲೋ ಆಗಬಹುದು. ಶೇಖಡಾ ಒಂದು ದುರುಪಯೋಗ ಆಗೋ ಸಾಧ್ಯತೆ ಐತಿ ಅಲ್ಲಾ, ಅದಕ್ಕ ಇಷ್ಟು ಮಾತು. ಜನಸಂಖ್ಯೆಯ ಶೇಕಡಾ 99ರಷ್ಟು ಇದ್ದವರು ಶೇಕಡಾ ಒಂದರ ದುರುಪಯೋಗದ ಸಾಧ್ಯತೆ ಹೇಳದೆ ಹೋದರ ಹೆಂಗ?


ಇದನ್ನೂ ಓದಿ: ದಿಲ್ಲಿ ಪೊಲೀಸರಿಗೆ ಪರಮಾಧಿಕಾರ: ಏನಿದು ರಾಸು ಕಾಯಿದೆ?
ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ಮುಂಗಾರು ಮಳೆ ಕೊರತೆ: ಇಡೀ ದೇಶದಲ್ಲಿ ಆತಂಕದ ಕಾರ್ಮೋಡ

ಭಾರತದ ಆಕಾಶದಲ್ಲಿ ಸದ್ಯ ಮೂಡುತ್ತಿರುವ ಉಪಗ್ರಹ ಚಿತ್ರಗಳು ಮತ್ತು ಹವಾಮಾನ ಇಲಾಖೆಯ ದತ್ತಾಂಶಗಳು ದೇಶಕ್ಕೆ ದೊಡ್ಡ ಗಂಡಾಂತರದ ಮುನ್ಸೂಚನೆ ನೀಡುತ್ತಿವೆ. ಕೃಷಿ ಚಟುವಟಿಕೆಗಳ ಅತ್ಯಂತ ನಿರ್ಣಾಯಕ ಅವಧಿಯಾದ ಜೂನ್ ತಿಂಗಳಲ್ಲೇ ಮುಂಗಾರು ಮಳೆ...

ನೀಟ್ ಪರೀಕ್ಷೆ ಪದೇ ಪದೇ ಬರೆಯುವಂತೆ ಮಾಡಿದ್ದು ಯಾರು? : ಬಿ.ಕೆ ಹರಿಪ್ರಸಾದ್

ನೀಟ್ ಪರೀಕ್ಷೆ ಪದೇ ಪದೇ ಬರೆಯುವಂತೆ ಮಾಡಿದ್ದು ಯಾರು? ಬಿಜೆಪಿ ನಾಯಕರ ಆರೋಪಗಳನ್ನು ನೋಡಿದರೆ, ತಪ್ಪು ಮಾಡಿದವರೇ ಉಪದೇಶ ಮಾಡುವ ಸ್ಥಿತಿಗೆ ಬಂದಂತಿದೆ ಎಂದು ಕೆಪಿಸಿಸಿ ನೂತನ ಅಧ್ಯಕ್ಷ ಬಿ.ಕೆ ಹರಿಪ್ರಸಾದ್ ಹೇಳಿದರು....

ಎಸ್‌ಐಆರ್‌ನಲ್ಲಿ ಕೈಬಿಟ್ಟ ವ್ಯಕ್ತಿ ಕುರಿತು ಮಹತ್ವದ ಹೇಳಿಕೆ ನೀಡಿದ ಸುಪ್ರೀಂ ಕೋರ್ಟ್

ವಿಶೇಷ ತೀವ್ರ ಪರಿಷ್ಕರಣೆಯ (Special Intensive Revision) ಸಂದರ್ಭದಲ್ಲಿ ಮತದಾರರ ಪಟ್ಟಿಯಿಂದ ಹೆಸರು ಕೈಬಿಟ್ಟಿರುವ ಅಥವಾ ಹೊರಗಿಟ್ಟಿರುವ ಬಂಗಾಳದ ಮುರ್ಷಿದಾಬಾದ್‌ನ 75 ವರ್ಷದ ವಕೀಲರೊಬ್ಬರು "ಪಶ್ಚಿಮ ಬಂಗಾಳದ ನಿಜವಾದ ಮತ್ತು ವಿಶ್ವಾಸಾರ್ಹ ನಾಗರಿಕ" ನಂತೆ...

ನೀಟ್ ಅಕ್ರಮ, ವ್ಯವಸ್ಥೆಯ ವೈಫಲ್ಯಕ್ಕೆ ಮತ್ತೊಂದು ಬಲಿ: ಮರು ಪರೀಕ್ಷೆ ಹಿಂದಿನ ದಿನವೇ ಆತ್ಮಹತ್ಯೆಗೆ ಶರಣಾದ ಪ್ರತಿಭಾವಂತ ವಿದ್ಯಾರ್ಥಿನಿ 

ಹೈದರಾಬಾದ್: ದೇಶದಲ್ಲಿ ವೈದ್ಯಕೀಯ ಶಿಕ್ಷಣದ ಪ್ರವೇಶಾತಿಗಾಗಿ ನಡೆಯುವ ರಾಷ್ಟ್ರೀಯ ಅರ್ಹತಾ ಮತ್ತು ಪ್ರವೇಶ ಪರೀಕ್ಷೆಯ (NEET) ಸುತ್ತ ಹಬ್ಬಿರುವ ಅಕ್ರಮಗಳ ಜಾಲ ಮತ್ತು ವ್ಯವಸ್ಥೆಯ ನಿರಂತರ ಗೊಂದಲಗಳು ಮತ್ತೊಂದು ಯುವ ಜೀವವನ್ನು ಬಲಿಪಡೆದಿವೆ.  ಜೂನ್...

ಸತತ ಮೂರನೇ ದಿನವೂ ಜಂತರ್ ಮಂತರ್‌ನಲ್ಲಿ ಮುಂದುವರೆದ ಸಿಜೆಪಿ ಪ್ರತಿಭಟನೆ; ಪ್ರಧಾನ್ ರಾಜೀನಾಮೆಗೆ ಪಟ್ಟು

ಪರೀಕ್ಷಾ ಅಕ್ರಮಗಳು ಮತ್ತು ಮೇ 3 ರ ನೀಟ್ ಪತ್ರಿಕೆ ಸೋರಿಕೆಯ ವಿರುದ್ಧ ತಮ್ಮ ಪ್ರತಿಭಟನೆಯನ್ನು ಮುಂದುವರಿಸಿರುವ ಜಿರಳೆ ಜನತಾ ಪಕ್ಷ (ಸಿಜೆಪಿ) ಸೋಮವಾರ ಸತತ ಮೂರನೇ ದಿನವೂ ಜಂತರ್ ಮಂತರ್‌ನಲ್ಲಿಯೇ ಕುಳಿತಿದ್ದಾರೆ. ಶನಿವಾರ...

ಸಂವಿಧಾನದ ಬುಡಕ್ಕೆ ಕೊಡಲಿ ಏಟು: ಆರ್‌ಎಸ್‌ಎಸ್-ಬಿಜೆಪಿಯ ಷಡ್ಯಂತ್ರ ಸೋಲಿಸಲು ಎರಡನೇ ಸ್ವಾತಂತ್ರ್ಯ ಸಂಗ್ರಾಮ ಅನಿವಾರ್ಯ – ಬಿ.ಕೆ. ಹರಿಪ್ರಸಾದ್

ಎಸ್‌ಐಆರ್ (SIR) ವಿರೋಧಿ ಹೋರಾಟದಲ್ಲಿ ನಮ್ಮ ಪಕ್ಷ ನಿಮ್ಮ ಜೊತೆಗಿದೆ ಎಂದು ಹೇಳಲು ಸರ್ಕಾರದ ಪ್ರತಿನಿಧಿಯಾಗಿ ನಾನು ಇಲ್ಲಿ ಬಂದಿದ್ದೇನೆ. ನೀವು ಮಂಡಿಸಿರುವ ಹಕ್ಕೊತ್ತಾಯಗಳ ಕುರಿತು ನೂತನ ಮುಖ್ಯಮಂತ್ರಿಗಳು, ಸಿದ್ದರಾಮಯ್ಯ ಸೇರಿದಂತೆ ಪಕ್ಷದ...

ಮತದಾರರ ಪಟ್ಟಿಯಿಂದ 65 ಲಕ್ಷ ಜನರನ್ನು ಹೊರಹಾಕಿದ್ದು ಯಾರು? ಈ ಅಕ್ರಮಕ್ಕೆ ಚುನಾವಣಾ ಆಯೋಗವೇ ಉತ್ತರಿಸಬೇಕು: ಮೊಹಮ್ಮದ್ ಯೂಸುಫ್ ಕನ್ನಿ

"ಬ್ರಿಟಿಷರ ವಿರುದ್ಧ ಹೋರಾಡಿ ದೇಶಕ್ಕೆ ಸ್ವಾತಂತ್ರ್ಯ ತಂದುಕೊಟ್ಟಿದ್ದೇವೆ. 1952ರ ಮೊದಲ ಚುನಾವಣೆಯ ಸಂದರ್ಭದಲ್ಲಿ ಸುಮಾರು 17.32 ಕೋಟಿ ಮತದಾರರಿದ್ದರು. 1955ರಲ್ಲಿ ಸಿಟಿಜನ್‌ಶಿಪ್ ಆಕ್ಟ್ ಜಾರಿಯಾದ ಬಳಿಕ ನಡೆದ 1957ರ ಚುನಾವಣೆಯಲ್ಲಿ ಈ ಸಂಖ್ಯೆ...

ಸರ್ಕಾರ-ನ್ಯಾಯಾಂಗ ವ್ಯವಸ್ಥೆ ಕೈಬಿಟ್ಟರೆ ರಾಜ್ಯದ ಜನ ಅನಾಥರಾಗುತ್ತಾರೆ : ಹಿರಿಯ ಸಾಹಿತಿ ಬಿ.ಟಿ. ಲಲಿತಾ ನಾಯ್ಕ್

ಎಸ್‌ಐಆರ್‌ ವಿಚಾರದಲ್ಲಿ ಇಂದು ನಾಡಿನ ಜನತೆ ಭೀಕರ ಸಂಕಷ್ಟದಲ್ಲಿದ್ದಾರೆ. ಈ ಗೊಂದಲವನ್ನು ಉಂಟು ಮಾಡಿದವರು ಯಾರು? ಕೇಂದ್ರ ಸರ್ಕಾರವೋ ಅಥವಾ ಕರ್ನಾಟಕ ಸರ್ಕಾರದ ಅಲಕ್ಷ್ಯ ಇದಕ್ಕೆ ಕಾರಣವೇ? ಅಥವಾ ನಮಗೆ ಸಂಬಂಧವೇ ಇಲ್ಲ...

ಎಸ್ಐಆರ್ ಹೆಸರಿನಲ್ಲಿ ನಡೆಯುತ್ತಿರುವ ಜನವಿರೋಧಿ ಹುನ್ನಾರಗಳನ್ನು ಸೋಲಿಸಬೇಕಿದೆ: ಎಸ್. ವರಲಕ್ಷ್ಮಿ

ಬೆಂಗಳೂರು: ರಾಜ್ಯಾದ್ಯಂತ ಎಸ್ಐಆರ್ (SIR) ವಿರುದ್ಧ ನಡೆಯುತ್ತಿರುವ ಸಮಾವೇಶವು ಆಕ್ರಮಣಕಾರಿ ಧೋರಣೆಯ ವಿರುದ್ಧದ ಬೃಹತ್ ಪ್ರತಿರೋಧವಾಗಿದೆ ಎಂದು ಸಿಐಟಿಯು ರಾಜ್ಯ ಪ್ರಧಾನ ಕಾರ್ಯದರ್ಶಿ ಎಸ್. ವರಲಕ್ಷ್ಮಿ ತಿಳಿಸಿದರು. ಎಸ್ಐಆರ್ ಸಮಸ್ಯೆಯಲ್ಲ ಎಂದು ಬಿಂಬಿಸುವ ಸಂಘಪರಿವಾರದವರ...

ಮತದಾನ ನಮ್ಮ ಜನ್ಮಸಿದ್ದ ಹಕ್ಕು, ಎಸ್‌ಐಆರ್ ಕುರಿತು ಜನ ಜಾಗೃತಿ ಅಗತ್ಯ: ಪೀಟರ್ ಮಚಾಡೋ

'ಮತದಾನ ನಮ್ಮ ಜನ್ಮಸಿದ್ದ ಹಕ್ಕು ಅದನ್ನು ನಾವು ಬಿಟ್ಟು ಕೊಡುವುದಿಲ್ಲ' ಎಂದು ಕರ್ನಾಟಕ ಕ್ರೈಸ್ತ ಸಮುದಾಯದ ಮಹಾ ಧರ್ಮಾಧ್ಯಕ್ಷ ರೆವೆಂಡರ್ ಫಾದರ್ ಪೀಟರ್ ಮಚಾಡೋ ಹೇಳಿದರು. ಬೆಂಗಳೂರಿನ ಫ್ರೀಡಂ ಪಾರ್ಕ್‌ನಲ್ಲಿ...