Homeಚಳವಳಿಕೃಷಿ ಕಾನೂನುಗಳು: ಇಂದು ರೈತ ಹೋರಾಟದಲ್ಲಿ ಭಾಗಿಯಾಗಲಿರುವ ಅರವಿಂದ್ ಕೇಜ್ರಿವಾಲ್

ಕೃಷಿ ಕಾನೂನುಗಳು: ಇಂದು ರೈತ ಹೋರಾಟದಲ್ಲಿ ಭಾಗಿಯಾಗಲಿರುವ ಅರವಿಂದ್ ಕೇಜ್ರಿವಾಲ್

ಕೇಜ್ರಿವಾಲ್ ಮೊದಲ ಬಾರಿಗೆ ಭೇಟಿ ನೀಡಿದ್ದಾಗ, "ನಾನು ಇಲ್ಲಿಗೆ ಮುಖ್ಯಮಂತ್ರಿಯಾಗಿ ಬಂದಿಲ್ಲ. ಬದಲಿಗೆ ಸೇವಕನಾಗಿ ಬಂದಿದ್ದೇನೆ. ರೈತರು ಇಂದು ತೊಂದರೆಯಲ್ಲಿದ್ದಾರೆ, ನಾವು ಅವರೊಂದಿಗೆ ನಿಲ್ಲಬೇಕು" ಎಂದು ಹೇಳಿದ್ದರು.

- Advertisement -
- Advertisement -

ಕೇಂದ್ರದ ಕೃಷಿ ಕಾನೂನುಗಳನ್ನು ವಿರೋಧಿಸಿ ದೆಹಲಿ-ಪಂಜಾಬ್‌ನ ಸಿಂಘು ಗಡಿಯಲ್ಲಿ ರೈತರು ಪ್ರತಿಭಟನೆ ಮಾಡುತ್ತಿದ್ದು, ಇಲ್ಲಿಗೆ ಇಂದು ಸಂಜೆ ದೆಹಲಿ ಮುಖ್ಯಮಂತ್ರಿ ಅರವಿಂದ್ ಕೇಜ್ರಿವಾಲ್‌ ಭೇಟಿ ನೀಡಲಿದ್ದಾರೆ. ಈ ತಿಂಗಳಲ್ಲಿ ರೈತರ ಪ್ರತಿಭಟನಾ ಸ್ಥಳಕ್ಕೆ ಭೇಟಿ ನೀಡುತ್ತಿರುವುದು ಇದು ಎರಡನೇ ಬಾರಿ.

ತಮ್ಮ ಭೇಟಿಯ ಸಂದರ್ಭದಲ್ಲಿ, ದೆಹಲಿ ಸರ್ಕಾರದ ಪಂಜಾಬಿ ಅಕಾಡೆಮಿ ವತಿಯಿಂದ ಸಿಂಘುನಲ್ಲಿ ನಿರ್ಮಿಸಲಾಗಿರುವ ತೇಜ್ ಬಹದ್ದೂರ್ ಸ್ಮಾರಕದಲ್ಲಿ ಆಯೋಜಿಸಿರುವ ಎರಡು ದಿನಗಳ ‘ಶಹೀದಿ ದಿವಸ್’ ಕಾರ್ಯಕ್ರಮದಲ್ಲಿ ಪಾಲ್ಗೊಳ್ಳಲಿದ್ದಾರೆ. ಒಂಬತ್ತನೇ ಸಿಖ್ ಗುರುಗಳ ಹುತಾತ್ಮತೆ ಮತ್ತು ತ್ಯಾಗದ ಸಂಕೇತವಾಗಿ ಈ ಶಹೀದ್ ದಿವಸ್‌ ಅನ್ನು ಆಚರಿಸಲಾಗುತ್ತದೆ.

ಕೇಜ್ರಿವಾಲ್ ಈ ಹಿಂದೆಯೂ ಸ್ಮಾರಕಕ್ಕೆ ಭೇಟಿ ನೀಡಿದ್ದರು. ಅಲ್ಲಿ ತಮ್ಮ ಸರ್ಕಾರವು ಪ್ರತಿಭಟನಾ ನಿರತ ರೈತರಿಗೆ ಆಹಾರ ಮತ್ತು ನೈರ್ಮಲ್ಯದ ವ್ಯವಸ್ಥೆಗಳನ್ನು ಮಾಡಿತ್ತು.

ಇದನ್ನೂ ಓದಿ: ಮಾಧ್ಯಮಗಳ ಪ್ರಕಾರ ಹೇಳುವುದಾದರೆ ಅಲ್ಲಿ ಹೋರಾಡುತ್ತಿರುವವರು ರೈತರೇ ಅಲ್ಲ: ಪೇಜಾವರ ಮಠದ ಸ್ವಾಮೀಜಿ

ಕೇಜ್ರಿವಾಲ್ ಇಲ್ಲಿಗೆ ಮೊದಲ ಬಾರಿಗೆ ಭೇಟಿ ನೀಡಿದ್ದಾಗ, “ನಾನು ಇಲ್ಲಿಗೆ ಮುಖ್ಯಮಂತ್ರಿಯಾಗಿ ಬಂದಿಲ್ಲ. ಬದಲಿಗೆ ಸೇವಕನಾಗಿ ಬಂದಿದ್ದೇನೆ. ರೈತರು ಇಂದು ತೊಂದರೆಯಲ್ಲಿದ್ದಾರೆ, ನಾವು ಅವರೊಂದಿಗೆ ನಿಲ್ಲಬೇಕು” ಎಂದು ಹೇಳಿದ್ದರು.

ಕೇಂದ್ರ ಸರ್ಕಾರ ಜಾರಿಗೆ ತಂದಿರುವ ಈ ಕರಾಳ ಕೃಷಿ ಕಾನೂನಗಳ ವಿರುದ್ಧ ನಡೆಯುತ್ತಿರುವ ರೈತರ ಪ್ರತಿಭಟನೆಗೆ ಬೆಂಬಲ ಸೂಚಿಸಿರುವ ವಿರೋಧ ಪಕ್ಷಗಳ ನಾಯಕರ ಪೈಕಿ ಅರವಿಂದ್ ಕೇಜ್ರಿವಾಲ್ ಕೂಡ ಒಬ್ಬರು.

ಸೆಪ್ಟೆಂಬರ್‌ನಲ್ಲಿ ಕೇಂದ್ರ ಸರ್ಕಾರ ಜಾರಿಗೆ ತಂದ ಮೂರು ಕೃಷಿ ಕಾನೂನುಗಳನ್ನು ರದ್ದುಗೊಳಿಸುವಂತೆ ಒತ್ತಾಯಿಸಿ ಪಂಜಾಬ್, ಹರಿಯಾಣ ಮತ್ತು ಇತರೆ ಹಲವು ರಾಜ್ಯಗಳ ಲಕ್ಷಾಂತರ ರೈತರು ನವೆಂಬರ್ 26 ರಿಂದ ದೆಹಲಿಯ ವಿವಿಧ ಭಾಗಗಳಲ್ಲಿ ಶಾಂತಿಯುತ ಪ್ರತಿಭಟನೆ ನಡೆಸುತ್ತಿದ್ದಾರೆ. ಪ್ರತಿಭಟನೆ ಇಂದಿಗೆ ಒಂದು ತಿಂಗಳು ಕಳೆದಿದೆ.

ಇದನ್ನೂ ಓದಿ: ಪ್ರತಿಭಟನಾ ಸ್ಥಳದಲ್ಲಿಯೇ ಈರುಳ್ಳಿ ಬಿತ್ತನೆ: ಹೋರಾಟದಲ್ಲಿಯೂ ಕೃಷಿ ಬಿಡಲೊಪ್ಪದ ರೈತರು!

ಕೃಷಿ ಕಾನೂನುಗಳಿಗೆ ಸಂಬಂಧಿಸಿದಂತೆ ರೈತರು ಮತ್ತು ಕೇಂದ್ರ ಸರ್ಕಾರದ ನಡುವೆ ಹಲವು ಸುತ್ತಿನ ಮಾತುಕತೆಗಳು ನಡೆದಿದ್ದರೂ ಅವುಗಳೆಲ್ಲಾ ವಿಫಲವಾಗಿವೆ. ಇತ್ತೀಚೆಗೆ ಈ ವಿಷಯವನ್ನು ಕೈಗೆತ್ತಿಕೊಂಡು ಸುಪ್ರೀಂಕೋರ್ಟ್, ಈ ಕುರಿತು ಶೋಧನೆ ಮಾಡಲು ಒಂದು ಸ್ವತಂತ್ರ ಸಮಿತಿಯನ್ನು ರಚಿಸುವಂತೆ ಕೇಂದ್ರಕ್ಕೆ ಸಲಹೆ ನೀಡಿತ್ತು.

ಜೊತೆಗೆ ರೈತರು ತಮ್ಮ ಹೋರಾಟವನ್ನು ಹಿಂತೆಗೆದುಕೊಳ್ಳಬೇಕಾಗಿಲ್ಲ. ಹೋರಾಟ ಮಾಡುವುದು ಅವರ ಹಕ್ಕು ಎಂದು ಸುಪ್ರೀಂ ಹೇಳಿತ್ತು. ಆದರೆ ಸಾರ್ವಜನಿಕ ಜೀವನಕ್ಕೆ ತೊಂದರೆಯಾಗದಂತೆ, ಶಾಂತಿಯುತವಾಗಿ ಪ್ರತಿಭಟಿಸುವಂತೆ ಹೇಳಿತ್ತು.

ಇದನ್ನೂ ಓದಿ: ರೈತಸಂಘದ ನೂರಾರು ಕಾರ್ಯಕರ್ತರೊಂದಿಗೆ ಸಾಮೂಹಿಕವಾಗಿ Jio ಸಿಮ್‌ನಿಂದ ಪೋರ್ಟ್ ಆಗಲು ಮುಂದಾದ ಎಚ್‌.ಆರ್ ಬಸವರಾಜಪ್ಪ

ಪ್ರತಿಭಟನಾ ನಿರತ ರೈತರು ಈಗ ಕೇಂದ್ರದೊಟ್ಟಿಗೆ ಮಾತುಕತೆಗೆ ಮುಂದಾಗಿದ್ದಾರೆ. ಜೊತೆಗೆ ಈ ಮಾತುಕತೆಯಲ್ಲಿ ರೈತರು ಚರ್ಚಿಸ ಬಯಸುವ ವಿಷಯಗಳನ್ನು ವ್ಯಕ್ತಪಡಿಸಿದ್ದಾರೆ.

ಈ ಕುರಿತು ಸ್ವರಾಜ್ ಇಂಡಿಯಾ ಪಕ್ಷದ ಮುಖ್ಯಸ್ಥ ಯೋಗೇಂದ್ರ ಯಾದವ್, “ಡಿಸಂಬರ್ 29 ರಂದು ಬೆಳಿಗ್ಗೆ 11 ಗಂಟೆಗೆ ಕೇಂದ್ರದೊಟ್ಟಿಗೆ ಮತ್ತೊಂದು ಸುತ್ತಿನ ಮಾತುಕತೆಗೆ ಮುಂದಾಗಿದ್ದೇವೆ. ಈ ಮಾತುಕತೆಯಲ್ಲಿ ನಮ್ಮ ಎರಡು ಉದ್ದೇಶಗಳ ಬಗ್ಗೆ ಚರ್ಚಿಸಲಿದ್ದೇವೆ. ಒಂದು, ಈ ಕೃಷಿ ಕಾನೂನುಗಳನ್ನು ಹಿಂಪಡೆಯುವ ವಿಧಾನಗಳ ಕುರಿತು, ಮತ್ತೊಂದು, ಕನಿಷ್ಟ ಬೆಂಬಲ ಬೆಲೆ (ಎಂಎಸ್‌ಪಿ)ಯನ್ನು ಜಾರಿಗೊಳಿಸುವ ಪ್ರಕ್ರಿಯೆಗಳ ಕುರಿತು ಚರ್ಚಿಸುತ್ತೇವೆ” ಎಂದು ಹೇಳಿದ್ದಾರೆ.

ಇಂದು ಪ್ರಧಾನಮಂತ್ರಿ ನರೇಂದ್ರ ಮೋದಿ ತಮ್ಮ 72ನೇ ಹಾಗೂ 2020ನೇ ಸಾಲಿನ ಕೊನೆಯ ಆವೃತ್ತಿಯ ರೇಡಿಯೊ ಕಾರ್ಯಕ್ರಮ ಮನ್ ಕೀ ಬಾತ್‌ನಲ್ಲಿ ಮಾತನಾಡಿದರು. ಪ್ರಧಾನಿಯ ಮನ್ ಕೀ ಬಾತ್ ಭಾಷಣದ ವೇಳೆ ತಟ್ಟೆಗಳನ್ನು ಬಾರಿಸಬೇಕು ಎಂದು ರೈತ ನಾಯಕರು ಇಡೀ ದೇಶದ ಜನತೆಗೆ ಕರೆ ನೀಡಿದ್ದರು.

ಈ ಕರೆಯ ಮೇರೆಗೆ ದೇಶದಾದ್ಯಂತ ಹಲವು ಕಡೆಗಳಲ್ಲಿ ರೈತರು ತಟ್ಟೆ ಬಡಿದು ತಮ್ಮ ವಿರೋಧ ವ್ಯಕ್ತಪಡಿಸಿದರು. ಜೊತೆಗೆ ದೆಹಲಿಯ ಗಡಿಯಲ್ಲಿಯೂ ಪ್ರತಿಭಟನಾ ನಿರತ ರೈತರು ತಟ್ಟೆ ಬಡಿದು ಆಕ್ರೋಶ ಹೊರಹಾಕಿದ್ದಾರೆ.


 

ಇದನ್ನೂ ಓದಿ: ಕೃಷಿ ಕಾಯ್ದೆಗಳ ವಿರುದ್ಧ ಪ್ರತಿಭಟಿಸಲು ‘7–8 ಲಕ್ಷ ರೈತರನ್ನು’ ಸೇರಿಸಲಾಗಿದೆ – ಅಣ್ಣಾಮಲೈ

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ಮುಂಗಾರು ಮಳೆ ಕೊರತೆ: ಇಡೀ ದೇಶದಲ್ಲಿ ಆತಂಕದ ಕಾರ್ಮೋಡ

ಭಾರತದ ಆಕಾಶದಲ್ಲಿ ಸದ್ಯ ಮೂಡುತ್ತಿರುವ ಉಪಗ್ರಹ ಚಿತ್ರಗಳು ಮತ್ತು ಹವಾಮಾನ ಇಲಾಖೆಯ ದತ್ತಾಂಶಗಳು ದೇಶಕ್ಕೆ ದೊಡ್ಡ ಗಂಡಾಂತರದ ಮುನ್ಸೂಚನೆ ನೀಡುತ್ತಿವೆ. ಕೃಷಿ ಚಟುವಟಿಕೆಗಳ ಅತ್ಯಂತ ನಿರ್ಣಾಯಕ ಅವಧಿಯಾದ ಜೂನ್ ತಿಂಗಳಲ್ಲೇ ಮುಂಗಾರು ಮಳೆ...

ನೀಟ್ ಪರೀಕ್ಷೆ ಪದೇ ಪದೇ ಬರೆಯುವಂತೆ ಮಾಡಿದ್ದು ಯಾರು? : ಬಿ.ಕೆ ಹರಿಪ್ರಸಾದ್

ನೀಟ್ ಪರೀಕ್ಷೆ ಪದೇ ಪದೇ ಬರೆಯುವಂತೆ ಮಾಡಿದ್ದು ಯಾರು? ಬಿಜೆಪಿ ನಾಯಕರ ಆರೋಪಗಳನ್ನು ನೋಡಿದರೆ, ತಪ್ಪು ಮಾಡಿದವರೇ ಉಪದೇಶ ಮಾಡುವ ಸ್ಥಿತಿಗೆ ಬಂದಂತಿದೆ ಎಂದು ಕೆಪಿಸಿಸಿ ನೂತನ ಅಧ್ಯಕ್ಷ ಬಿ.ಕೆ ಹರಿಪ್ರಸಾದ್ ಹೇಳಿದರು....

ಎಸ್‌ಐಆರ್‌ನಲ್ಲಿ ಕೈಬಿಟ್ಟ ವ್ಯಕ್ತಿ ಕುರಿತು ಮಹತ್ವದ ಹೇಳಿಕೆ ನೀಡಿದ ಸುಪ್ರೀಂ ಕೋರ್ಟ್

ವಿಶೇಷ ತೀವ್ರ ಪರಿಷ್ಕರಣೆಯ (Special Intensive Revision) ಸಂದರ್ಭದಲ್ಲಿ ಮತದಾರರ ಪಟ್ಟಿಯಿಂದ ಹೆಸರು ಕೈಬಿಟ್ಟಿರುವ ಅಥವಾ ಹೊರಗಿಟ್ಟಿರುವ ಬಂಗಾಳದ ಮುರ್ಷಿದಾಬಾದ್‌ನ 75 ವರ್ಷದ ವಕೀಲರೊಬ್ಬರು "ಪಶ್ಚಿಮ ಬಂಗಾಳದ ನಿಜವಾದ ಮತ್ತು ವಿಶ್ವಾಸಾರ್ಹ ನಾಗರಿಕ" ನಂತೆ...

ನೀಟ್ ಅಕ್ರಮ, ವ್ಯವಸ್ಥೆಯ ವೈಫಲ್ಯಕ್ಕೆ ಮತ್ತೊಂದು ಬಲಿ: ಮರು ಪರೀಕ್ಷೆ ಹಿಂದಿನ ದಿನವೇ ಆತ್ಮಹತ್ಯೆಗೆ ಶರಣಾದ ಪ್ರತಿಭಾವಂತ ವಿದ್ಯಾರ್ಥಿನಿ 

ಹೈದರಾಬಾದ್: ದೇಶದಲ್ಲಿ ವೈದ್ಯಕೀಯ ಶಿಕ್ಷಣದ ಪ್ರವೇಶಾತಿಗಾಗಿ ನಡೆಯುವ ರಾಷ್ಟ್ರೀಯ ಅರ್ಹತಾ ಮತ್ತು ಪ್ರವೇಶ ಪರೀಕ್ಷೆಯ (NEET) ಸುತ್ತ ಹಬ್ಬಿರುವ ಅಕ್ರಮಗಳ ಜಾಲ ಮತ್ತು ವ್ಯವಸ್ಥೆಯ ನಿರಂತರ ಗೊಂದಲಗಳು ಮತ್ತೊಂದು ಯುವ ಜೀವವನ್ನು ಬಲಿಪಡೆದಿವೆ.  ಜೂನ್...

ಸತತ ಮೂರನೇ ದಿನವೂ ಜಂತರ್ ಮಂತರ್‌ನಲ್ಲಿ ಮುಂದುವರೆದ ಸಿಜೆಪಿ ಪ್ರತಿಭಟನೆ; ಪ್ರಧಾನ್ ರಾಜೀನಾಮೆಗೆ ಪಟ್ಟು

ಪರೀಕ್ಷಾ ಅಕ್ರಮಗಳು ಮತ್ತು ಮೇ 3 ರ ನೀಟ್ ಪತ್ರಿಕೆ ಸೋರಿಕೆಯ ವಿರುದ್ಧ ತಮ್ಮ ಪ್ರತಿಭಟನೆಯನ್ನು ಮುಂದುವರಿಸಿರುವ ಜಿರಳೆ ಜನತಾ ಪಕ್ಷ (ಸಿಜೆಪಿ) ಸೋಮವಾರ ಸತತ ಮೂರನೇ ದಿನವೂ ಜಂತರ್ ಮಂತರ್‌ನಲ್ಲಿಯೇ ಕುಳಿತಿದ್ದಾರೆ. ಶನಿವಾರ...

ಸಂವಿಧಾನದ ಬುಡಕ್ಕೆ ಕೊಡಲಿ ಏಟು: ಆರ್‌ಎಸ್‌ಎಸ್-ಬಿಜೆಪಿಯ ಷಡ್ಯಂತ್ರ ಸೋಲಿಸಲು ಎರಡನೇ ಸ್ವಾತಂತ್ರ್ಯ ಸಂಗ್ರಾಮ ಅನಿವಾರ್ಯ – ಬಿ.ಕೆ. ಹರಿಪ್ರಸಾದ್

ಎಸ್‌ಐಆರ್ (SIR) ವಿರೋಧಿ ಹೋರಾಟದಲ್ಲಿ ನಮ್ಮ ಪಕ್ಷ ನಿಮ್ಮ ಜೊತೆಗಿದೆ ಎಂದು ಹೇಳಲು ಸರ್ಕಾರದ ಪ್ರತಿನಿಧಿಯಾಗಿ ನಾನು ಇಲ್ಲಿ ಬಂದಿದ್ದೇನೆ. ನೀವು ಮಂಡಿಸಿರುವ ಹಕ್ಕೊತ್ತಾಯಗಳ ಕುರಿತು ನೂತನ ಮುಖ್ಯಮಂತ್ರಿಗಳು, ಸಿದ್ದರಾಮಯ್ಯ ಸೇರಿದಂತೆ ಪಕ್ಷದ...

ಮತದಾರರ ಪಟ್ಟಿಯಿಂದ 65 ಲಕ್ಷ ಜನರನ್ನು ಹೊರಹಾಕಿದ್ದು ಯಾರು? ಈ ಅಕ್ರಮಕ್ಕೆ ಚುನಾವಣಾ ಆಯೋಗವೇ ಉತ್ತರಿಸಬೇಕು: ಮೊಹಮ್ಮದ್ ಯೂಸುಫ್ ಕನ್ನಿ

"ಬ್ರಿಟಿಷರ ವಿರುದ್ಧ ಹೋರಾಡಿ ದೇಶಕ್ಕೆ ಸ್ವಾತಂತ್ರ್ಯ ತಂದುಕೊಟ್ಟಿದ್ದೇವೆ. 1952ರ ಮೊದಲ ಚುನಾವಣೆಯ ಸಂದರ್ಭದಲ್ಲಿ ಸುಮಾರು 17.32 ಕೋಟಿ ಮತದಾರರಿದ್ದರು. 1955ರಲ್ಲಿ ಸಿಟಿಜನ್‌ಶಿಪ್ ಆಕ್ಟ್ ಜಾರಿಯಾದ ಬಳಿಕ ನಡೆದ 1957ರ ಚುನಾವಣೆಯಲ್ಲಿ ಈ ಸಂಖ್ಯೆ...

ಸರ್ಕಾರ-ನ್ಯಾಯಾಂಗ ವ್ಯವಸ್ಥೆ ಕೈಬಿಟ್ಟರೆ ರಾಜ್ಯದ ಜನ ಅನಾಥರಾಗುತ್ತಾರೆ : ಹಿರಿಯ ಸಾಹಿತಿ ಬಿ.ಟಿ. ಲಲಿತಾ ನಾಯ್ಕ್

ಎಸ್‌ಐಆರ್‌ ವಿಚಾರದಲ್ಲಿ ಇಂದು ನಾಡಿನ ಜನತೆ ಭೀಕರ ಸಂಕಷ್ಟದಲ್ಲಿದ್ದಾರೆ. ಈ ಗೊಂದಲವನ್ನು ಉಂಟು ಮಾಡಿದವರು ಯಾರು? ಕೇಂದ್ರ ಸರ್ಕಾರವೋ ಅಥವಾ ಕರ್ನಾಟಕ ಸರ್ಕಾರದ ಅಲಕ್ಷ್ಯ ಇದಕ್ಕೆ ಕಾರಣವೇ? ಅಥವಾ ನಮಗೆ ಸಂಬಂಧವೇ ಇಲ್ಲ...

ಎಸ್ಐಆರ್ ಹೆಸರಿನಲ್ಲಿ ನಡೆಯುತ್ತಿರುವ ಜನವಿರೋಧಿ ಹುನ್ನಾರಗಳನ್ನು ಸೋಲಿಸಬೇಕಿದೆ: ಎಸ್. ವರಲಕ್ಷ್ಮಿ

ಬೆಂಗಳೂರು: ರಾಜ್ಯಾದ್ಯಂತ ಎಸ್ಐಆರ್ (SIR) ವಿರುದ್ಧ ನಡೆಯುತ್ತಿರುವ ಸಮಾವೇಶವು ಆಕ್ರಮಣಕಾರಿ ಧೋರಣೆಯ ವಿರುದ್ಧದ ಬೃಹತ್ ಪ್ರತಿರೋಧವಾಗಿದೆ ಎಂದು ಸಿಐಟಿಯು ರಾಜ್ಯ ಪ್ರಧಾನ ಕಾರ್ಯದರ್ಶಿ ಎಸ್. ವರಲಕ್ಷ್ಮಿ ತಿಳಿಸಿದರು. ಎಸ್ಐಆರ್ ಸಮಸ್ಯೆಯಲ್ಲ ಎಂದು ಬಿಂಬಿಸುವ ಸಂಘಪರಿವಾರದವರ...

ಮತದಾನ ನಮ್ಮ ಜನ್ಮಸಿದ್ದ ಹಕ್ಕು, ಎಸ್‌ಐಆರ್ ಕುರಿತು ಜನ ಜಾಗೃತಿ ಅಗತ್ಯ: ಪೀಟರ್ ಮಚಾಡೋ

'ಮತದಾನ ನಮ್ಮ ಜನ್ಮಸಿದ್ದ ಹಕ್ಕು ಅದನ್ನು ನಾವು ಬಿಟ್ಟು ಕೊಡುವುದಿಲ್ಲ' ಎಂದು ಕರ್ನಾಟಕ ಕ್ರೈಸ್ತ ಸಮುದಾಯದ ಮಹಾ ಧರ್ಮಾಧ್ಯಕ್ಷ ರೆವೆಂಡರ್ ಫಾದರ್ ಪೀಟರ್ ಮಚಾಡೋ ಹೇಳಿದರು. ಬೆಂಗಳೂರಿನ ಫ್ರೀಡಂ ಪಾರ್ಕ್‌ನಲ್ಲಿ...