Homeಮುಖಪುಟಕೃಷಿ ಕಾನೂನುಗಳು ಅದಾನಿ ಪರವಾಗಿವೆಯೆಂದು ದಾಖಲೆ ಬಿಡುಗಡೆ ಮಾಡಿದ ಪತ್ರಕರ್ತನ ಮೇಲೆ ಮಾರಣಾಂತಿಕ ಹಲ್ಲೆ!

ಕೃಷಿ ಕಾನೂನುಗಳು ಅದಾನಿ ಪರವಾಗಿವೆಯೆಂದು ದಾಖಲೆ ಬಿಡುಗಡೆ ಮಾಡಿದ ಪತ್ರಕರ್ತನ ಮೇಲೆ ಮಾರಣಾಂತಿಕ ಹಲ್ಲೆ!

ಅದಾನಿ ಗ್ರೂಪ್ಸ್‌ನ ರಹಸ್ಯ ಕಾರ್ಯಾಚರಣೆಗಳ ಕುರಿತು ಅನ್ವೇಷಣೆ ಮಾಡಿದ ಇವರು ಈಗ ಐಸಿಯುನಲ್ಲಿದ್ದಾರೆ. ಇವರ ಮೇಲೆ ಕಬ್ಬಿಣದ ರಾಡ್ ಮತ್ತು ತೀಕ್ಷ್ಣವಾದ ಆಯುಧಗಳಿಂದ ಹಲ್ಲೆ ಮಾಡಲಾಗಿದೆ.

- Advertisement -
- Advertisement -

“ಅದಾನಿ ಕಂಪನಿಯು ನೂರಾರು ಎಕರೆ ಭೂಮಿಯನ್ನು ಖರೀದಿಸಿ, ಅಲ್ಲಿ ಕೃಷಿ ಉತ್ಪನ್ನಗಳನ್ನು ಸಂಗ್ರಹಿಸಲು ಕೋಲ್ಡ್‌ ಸ್ಟೋರೇಜ್ ಮತ್ತು ಮೂಲ ಸೌಕರ್ಯಗಳನ್ನು ನಿರ್ಮಿಸಿದೆ” ಎಂಬ ವಿಷಯವನ್ನು ಬಹಿರಂಗಪಡಿಸಿದ ‘IBN24’ನ ಪತ್ರಕರ್ತ ಆಕರ್ಷನ್ ಉಪ್ಪಲ್ ಮೇಲೆ ಹರಿಯಾಣದಲ್ಲಿ ಇತ್ತೀಚೆಗೆ ಮಾರಣಾಂತಿಕ ಹಲ್ಲೆ ನಡೆಸಲಾಗಿದೆ.

ಹೊಸ ಕೃಷಿ ಮಸೂದೆಗಳನ್ನು ಅಂಗೀಕರಿಸುವ ಮೊದಲು ನೂರಾರು ಎಕರೆ ಭೂಮಿಯನ್ನು ಖರೀದಿಸಿರುವ ಅದಾನಿ ಗುಂಪಿನ ರಹಸ್ಯ ಮಾರ್ಗಗಳನ್ನು ಪತ್ರಕರ್ತ ಆಕರ್ಷನ್ ಉಪ್ಪಲ್ ಬಹಿರಂಗಪಡಿಸಿದ್ದರು. ಕೇಂದ್ರ ಸರ್ಕಾರ ಈಗ ಜಾರಿಗೆ ತಂದಿರುವ ಕೃಷಿ ಕಾನೂನುಗಳು ನಿಜಕ್ಕೂ ಅಂಬಾನಿ-ಅದಾನಿಯ ಪರವಾಗಿವೆ ಎಂಬುದಕ್ಕೆ ಇದು ಬಲವಾದ ಸಾಕ್ಷ್ಯವಾಗಿತ್ತು. ಈ ಸಾಕ್ಷ್ಯವನ್ನು ಬಹಿರಂಗಪಡಿಸಿದ ಪತ್ರಕರ್ತನ ಮೇಲೆ ಹರಿಯಾಣದ ಕರ್ನಾಲ್‌ನಲ್ಲಿ ಅಪರಿಚಿತರು ಹಲ್ಲೆ ನಡೆಸಿದ್ದು, ಪ್ರಸ್ತುತ ಪತ್ರಕರ್ತರ ಸ್ಥಿತಿ ಗಂಭೀರವಾಗಿದೆ ಎಂದು ಇನ್‌ಫೀಡ್ ವರದಿ ಮಾಡಿದೆ.

ಇದನ್ನೂ ಓದಿ: ರೈತ ವಿರೋಧಿ ಶಾಸನಗಳು ಮತ್ತು ಬಿಜೆಪಿಯ ಹತ್ತು ಸುಳ್ಳುಗಳು: ಶಿವಸುಂದರ್

ಅದಾನಿ ಗ್ರೂಪ್ಸ್‌ನ ರಹಸ್ಯ ಕಾರ್ಯಾಚರಣೆಗಳ ಕುರಿತು ಅನ್ವೇಷಣೆ ಮಾಡಿದ ಇವರು ಈಗ ಐಸಿಯುನಲ್ಲಿದ್ದಾರೆ. ಇವರ ಮೇಲೆ ಕಬ್ಬಿಣದ ರಾಡ್ ಮತ್ತು ತೀಕ್ಷ್ಣವಾದ ಆಯುಧಗಳಿಂದ ಹಲ್ಲೆ ಮಾಡಲಾಗಿದೆ. ಇದರಿಂದ ತಲೆಗೆ ತೀವ್ರವಾದ ಪೆಟ್ಟಾಗಿದೆ. ಪ್ರತ್ಯಕ್ಷದರ್ಶಿಗಳ ಪ್ರಕಾರ, “ಪತ್ರಕರ್ತನನ್ನು ಕೊಲ್ಲುವ ಸಲುವಾಗಿ ಕಾಲುವೆಗೆ ಎಸೆಯಲು ಪ್ರಯತ್ನಿಸಿದರು. ಆದರೆ ಜನಸಮೂಹ ಸೇರುತ್ತಿದ್ದಂತೆ ಹಲ್ಲೆಕೋರರು ಓಡಿಹೋದರು” ಎಂದು ಹಲವರು ಹೇಳಿದ್ದಾರೆ.

ಇದನ್ನೂ ಓದಿ: ರೈತ ಹೋರಾಟ ಬೆಂಬಲಿಸಿದ್ದ ಟ್ರೂಡೊ: ಭಾರತ-ಕೆನಡಾ ರಾಜಕೀಯ ಸಂಬಂಧದಲ್ಲಿ ಬಿರುಕು!

ಸುರೇಖ ಗುಪ್ತ ಎಂಬುವವರು ಟ್ವೀಟ್ ಮಾಡಿ, “ಹರಿಯಾಣದ ಕರ್ನಾಲ್‌ನ ಪತ್ರಕರ್ತರಾದ ಆಕರ್ಷ್‌ ಉಪ್ಪಲ್ ಎಂಬುವವರು 2 ದಿನಗಳ ಹಿಂದೆ, ಅದಾನಿ ಗ್ರೂಪ್ 100 ಎಕರೆ ಭೂಮಿಯನ್ನು ಖರೀದಿಸಿದ್ದು, ಇಲ್ಲಿ 4 ಕೃಷಿ ಉತ್ಪನ್ನಗಳ ಗೋದಾಮುಗಳನ್ನು ನಿರ್ಮಿಸಲಾಗುತ್ತಿದೆ. ಅದಾನಿಯ ಸೈಟ್‌ವರೆಗೆ ರೈಲ್ವೆ ಮಾರ್ಗವನ್ನು ನಿರ್ಮಿಸಲಾಗುತ್ತಿದೆ ಎಂಬ ಮಾಹಿತಿಯನ್ನೂ ನೀಡಿದ್ದರು. ಈಗ ಅವರು ಕ್ರೂರವಾಗಿ ಹಲ್ಲೆಗೊಳಗಾಗಿ ಆಸ್ಪತ್ರೆಯಲ್ಲಿ ಗಂಭೀರ ಸ್ಥಿತಿಯಲ್ಲಿದ್ದಾರೆ” ಎಂದು ಬರೆದುಕೊಂಡಿದ್ದಾರೆ.

 

ಇದನ್ನೂ ಓದಿ: ರೈತ ಹೋರಾಟವನ್ನು ಹತ್ತಿಕ್ಕಲು ಹಿಂದೂ-ಸಿಖ್ಖರ ನಡುವೆ ಕೋಮುದ್ವೇಷ ಹರಡಲು ಪ್ರಯತ್ನ – ಸುಖ್‌ಬೀರ್ ಸಿಂಗ್

ಈ ಕೃಷಿ ಕಾನೂನುಗಳು ನೇರವಾಗಿ ಕಾರ್ಪೊರೇಟ್‌ಗಳಿಗೆ ಸಹಕಾರಿಯಾಗಿವೆ ಎಂಬುದನ್ನು ದೇಶದಾದ್ಯಂತ ಇರುವ ತಜ್ಞರು ಅಭಿಪ್ರಾಯಪಟ್ಟಿದ್ದರು. ಆದರೆ ಕೇಂದ್ರ ಸರ್ಕಾರ ಇದನ್ನು ತಿರಸ್ಕರಿಸುತ್ತಲೇ ಇತ್ತು. ಜೊತೆಗೆ ಇದನ್ನು ವಿರೋಧ ಪಕ್ಷಗಳ ರಾಜಕೀಯ ಕುತಂತ್ರ ಎಂದು ಬಿಂಬಿಸುತ್ತಿದೆ.


ಇದನ್ನೂ ಓದಿ: ನಮಗೆ ಜಿಯೋ ಬೇಡ, BSNLಗೆ ಪೋರ್ಟ್ ಆಗಲು 4G ಸೇವೆ ಕೊಡಿ: KVS ಒತ್ತಾಯ

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ತೆಲಂಗಾಣ : ಪೋಕ್ಸೋ ಪ್ರಕರಣದ ಆರೋಪಿಯಿಂದ ಸಂತ್ರಸ್ತೆ ಸೇರಿ 6 ಜನರ ಹತ್ಯೆ

ಪೋಕ್ಸೋ ಪ್ರಕರಣದ ಆರೋಪಿಯೊಬ್ಬ ಸಂತ್ರಸ್ತೆ ಸೇರಿದಂತೆ ಒಟ್ಟು ಆರು ಜನರನ್ನು ಭೀಕರವಾಗಿ ಹತ್ಯೆ ಮಾಡಿರುವ ಘಟನೆ ತೆಲಂಗಾಣದ ರಂಗಾರೆಡ್ಡಿ ಜಿಲ್ಲೆಯ ಶಾಬಾದ್ ಮಂಡಲದಲ್ಲಿ ಶುಕ್ರವಾರ (ಜು.10) ರಾತ್ರಿ ನಡೆದಿದೆ. 28 ವರ್ಷ ವಯಸ್ಸಿನ...

‘ನನ್ನನ್ನು ಮೌನಗೊಳಿಸಲು, ನೀವು ನನ್ನನ್ನು ಕೊಲ್ಲಬೇಕಾಗುತ್ತದೆ’: ಟಿಎಂಸಿ ಬಿಕ್ಕಟ್ಟಿನ ನಡುವೆ ಬಿಜೆಪಿ ವಿರುದ್ಧ ಮಮತಾ ಬ್ಯಾನರ್ಜಿ ಆಕ್ರೋಶ  

ಕೋಲ್ಕತ್ತಾ: ಪಶ್ಚಿಮ ಬಂಗಾಳದ ಆಡಳಿತಾರೂಢ ತೃಣಮೂಲ ಕಾಂಗ್ರೆಸ್ (TMC) ಪಕ್ಷದಲ್ಲಿ ಆಂತರಿಕ ಬಿಕ್ಕಟ್ಟು ತಾರಕಕ್ಕೇರಿರುವ ಬೆನ್ನಲ್ಲೇ, ಪಕ್ಷದ ಸುಪ್ರೀಮೋ ಹಾಗೂ ಮುಖ್ಯಮಂತ್ರಿ ಮಮತಾ ಬ್ಯಾನರ್ಜಿ ಅವರು ಇತ್ತೀಚಿನ ತಿಂಗಳುಗಳಲ್ಲೇ ಅತ್ಯಂತ ಪ್ರಬಲವಾದ ರಾಜಕೀಯ...

ಸುಪ್ರೀಂ ಕೋರ್ಟ್‌ನಲ್ಲಿ ಜಡ್ಜ್‌ಗಳನ್ನೇ ‘ನ್ಯಾಯಾಂಗ ಸೇವಕರು’ ಎಂದ ಅರ್ಜಿದರ

ಸುಪ್ರೀಂ ಕೋರ್ಟ್‌ನಲ್ಲಿ ಶುಕ್ರವಾರ ಅತ್ಯಂತ ನಾಟಕೀಯ ಹಾಗೂ ಆಘಾತಕಾರಿ ದೃಶ್ಯವೊಂದು ತೆರೆದುಕೊಂಡಿದೆ. ಪ್ರಕರಣವೊಂದರ ವಿಚಾರಣೆ ವೇಳೆ ಖುದ್ದಾಗಿ ಹಾಜರಾಗಿದ್ದ ಅರ್ಜಿದಾರನೊಬ್ಬ, ಲಕ್ನೋದ ಪೊಲೀಸ್ ಅಧಿಕಾರಿಯೊಬ್ಬರ ವಿರುದ್ಧ ಎಫ್‌ಐಆರ್ (FIR) ದಾಖಲಿಸಲು ನಾನು ನ್ಯಾಯಪೀಠಕ್ಕೆ...

ಮದ್ಯದ ಅಮಲಿನಲ್ಲಿ ಸಾರಿಗೆ ಬಸ್‌ ಅಪಹರಿಸಿದ ವ್ಯಕ್ತಿ; 21 ಕಿ.ಮೀ. ಪ್ರಯಾಣದ ನಂತರ ಅಪಘಾತ

ತೆಲಂಗಾಣದ ಜನಗಾಂವ್ ಬಸ್ ನಿಲ್ದಾಣದಲ್ಲಿ ನಿಂತಿದ್ದ ತೆಲಂಗಾಣ ರಾಜ್ಯ ರಸ್ತೆ ಸಾರಿಗೆ ನಿಗಮದ (ಟಿಜಿಎಸ್‌ಆರ್‌ಟಿಸಿ) ಬಸ್‌ ಅನ್ನು ವ್ಯಕ್ತಿಯೊಬ್ಬ ಕುಡಿದ ಮತ್ತಿನಲ್ಲಿ ಕದ್ದಿದ್ದಾನೆ. ನಂತರ ಅದನ್ನು ಸುಮಾರು 21 ಕಿ.ಮೀ. ದೂರ ಓಡಿಸಿ,...

ಬೆಂಗಳೂರಿನಲ್ಲಿ: ರಸ್ತೆ ಬದಿ ವಾರಗಟ್ಟಲೆ ವಾಹನ ನಿಲ್ಲಿಸಿದರೆ ಜಪ್ತಿ ಮಾಡಿ ‘ಹರಾಜು’ ಹಾಕಲಿದೆ ಸರ್ಕಾರ!

ಸಿಲಿಕಾನ್ ಸಿಟಿಯ ಟ್ರಾಫಿಕ್ ದಟ್ಟಣೆಗೆ ಮುಕ್ತಿ ಹಾಡಲು ಮತ್ತು ಪಾದಚಾರಿಗಳ ಹಕ್ಕನ್ನು ರಕ್ಷಿಸಲು ರಾಜ್ಯ ಸರ್ಕಾರ ಈಗ ಅತ್ಯಂತ ಕಠಿಣ ಹೆಜ್ಜೆಯನ್ನಿಟ್ಟಿದೆ. ನಗರದ ರಸ್ತೆ ಬದಿ ಹಾಗೂ ಫುಟ್‌ಪಾತ್‌ಗಳಲ್ಲಿ ತಿಂಗಳುಗಟ್ಟಲೆ ಧೂಳು ತಿನ್ನುತ್ತಾ...

ಸರ್ಕಾರಿ ಶಾಲೆಗಳಲ್ಲಿ 86 ಲಕ್ಷ ವಿದ್ಯಾರ್ಥಿಗಳ ಕುಸಿತ, ಖಾಸಗಿ ಶಾಲೆಗಳತ್ತ ಮುಖ ಮಾಡಿದ 88 ಲಕ್ಷ ಮಕ್ಕಳು: ಕಳವಳಕಾರಿ ವರದಿ

ನವದೆಹಲಿ: ದೇಶದ ಶಾಲಾ ಶಿಕ್ಷಣ ವ್ಯವಸ್ಥೆಯಲ್ಲಿ ಮಹತ್ತರ ಬದಲಾವಣೆಗಳು ಕಂಡುಬರುತ್ತಿದ್ದು, ಸರ್ಕಾರಿ ಶಾಲೆಗಳ ದಾಖಲಾತಿಯಲ್ಲಿ ಭಾರಿ ಕುಸಿತ ಉಂಟಾಗಿದೆ. 2023–24 ಮತ್ತು 2025–26ರ ಶೈಕ್ಷಣಿಕ ವರ್ಷಗಳ ನಡುವಿನ ಅವಧಿಯಲ್ಲಿ ದೇಶಾದ್ಯಂತ ಸರ್ಕಾರಿ ಶಾಲೆಗಳಲ್ಲಿ...

ಬಿಹಾರ: ನಕಲಿ ದಾಖಲೆ ನೀಡಿ ಕೆಲಸ ಗಿಟ್ಟಿಸಿದ್ದ 3,000ಕ್ಕೂ ಹೆಚ್ಚು ಶಿಕ್ಷಕರು ವಜಾ!

ನಕಲಿ ಪದವಿ ಹಾಗೂ ನಕಲಿ ಶೈಕ್ಷಣಿಕ ಪ್ರಮಾಣಪತ್ರಗಳನ್ನು ನೀಡಿ ಸರ್ಕಾರಿ ಶಾಲೆಗಳಲ್ಲಿ ಉದ್ಯೋಗ ಗಿಟ್ಟಿಸಿಕೊಂಡಿದ್ದ 3,000ಕ್ಕೂ ಹೆಚ್ಚು ಶಿಕ್ಷಕರನ್ನು ಸೇವೆಯಿಂದ ವಜಾಗೊಳಿಸಲು ಬಿಹಾರ ಸರ್ಕಾರ ನಿರ್ಧರಿಸಿದೆ. ಈ ಕುರಿತು ಶುಕ್ರವಾರ ಅಧಿಕೃತ ಪ್ರಕಟಣೆ...

TMC ತೊರೆದು BJP ಸೇರಿದ ಮಾಜಿ ಸಂಸದರಿಗೆ ಬಿಜೆಪಿಯಿಂದ ರಾಜ್ಯಸಭಾ ಟಿಕೆಟ್

ಮಮತಾ ಬ್ಯಾನರ್ಜಿ ನೇತೃತ್ವದ ತೃಣಮೂಲ ಕಾಂಗ್ರೆಸ್ (TMC) ಪಕ್ಷದ ರಾಜ್ಯಸಭಾ ಸ್ಥಾನಗಳಿಗೆ ರಾಜೀನಾಮೆ ನೀಡಿದ ಕೆಲವೇ ವಾರಗಳಲ್ಲಿ, ಆ ಮೂವರು ಮಾಜಿ ಸಂಸದರು ಈಗ ಬೇರೆ ಬಣ್ಣದ (BJP) ಶಾಲು ಧರಿಸಿ ಮತ್ತೆ...

ಪಶ್ಚಿಮ ಬಂಗಾಳ: ಟಿಎಂಸಿ ಖಾತೆ ಫ್ರೀಜ್ ಮಾಡಿದ್ದ ಪೊಲೀಸರಿಗೆ ಕಲ್ಕತ್ತಾ ಹೈಕೋರ್ಟ್ ತರಾಟೆ!

ಮಮತಾ ಬ್ಯಾನರ್ಜಿ ನೇತೃತ್ವದ ತೃಣಮೂಲ ಕಾಂಗ್ರೆಸ್ (ಟಿಎಂಸಿ) ಪಕ್ಷದ ಹಲವು ಬ್ಯಾಂಕ್ ಖಾತೆಗಳನ್ನು ಜಾರಿ ನಿರ್ದೇಶನಾಲಯ (ಇಡಿ) ಮುಟ್ಟುಗೋಲು ಹಾಕಿಕೊಂಡ ಮರುದಿನವೇ, ಪಶ್ಚಿಮ ಬಂಗಾಳ ಪೊಲೀಸರು ಮುಟ್ಟುಗೋಲು ಹಾಕಿಕೊಂಡಿದ್ದ ಪಕ್ಷದ ಮೂರು ಬ್ಯಾಂಕ್...

ಬಂಗಾಳದ ಬಿಸಿಯೂಟ ಇಸ್ಕಾನ್‌ಗೆ ಹಸ್ತಾಂತರವಿಲ್ಲ: ಸರ್ಕಾರದ ಸ್ಪಷ್ಟನೆ, ಕಲ್ಕತ್ತಾ ಹೈಕೋರ್ಟ್‌ನಿಂದ ಅಫಿಡವಿಟ್‌ಗೆ ನಿರ್ದೇಶನ 

ಕೋಲ್ಕತ್ತಾ: ರಾಜ್ಯದ ಶಾಲೆಗಳಲ್ಲಿ ಜಾರಿಯಲ್ಲಿರುವ ಪಿಎಂ-ಪೋಷಣ್ (ಮಧ್ಯಾಹ್ನದ ಬಿಸಿಯೂಟ) ಯೋಜನೆಯ ನಿರ್ವಹಣೆಯನ್ನು ಇಸ್ಕಾನ್ ಸಂಸ್ಥೆಗೆ ಹಸ್ತಾಂತರಿಸುವ ಯಾವುದೇ ಅನುಮೋದಿತ ಪ್ರಸ್ತಾಪ ಸರ್ಕಾರಕ್ಕಿಲ್ಲ ಎಂದು ಪಶ್ಚಿಮ ಬಂಗಾಳ ಸರ್ಕಾರ ಸ್ಪಷ್ಟಪಡಿಸಿದೆ. ಈ ಕುರಿತು ಅಫಿಡವಿಟ್...