Homeಮುಖಪುಟಕೃಷಿ ಕಾಯ್ದೆಗಳು & ರೈತ ಹೋರಾಟದ ಕುರಿತು ಇಂದು ಸುಪ್ರೀಂ ಕೋರ್ಟ್‌‌ನಲ್ಲಿನ ವಾದ-ವಿವಾದ ಹೀಗಿತ್ತು..

ಕೃಷಿ ಕಾಯ್ದೆಗಳು & ರೈತ ಹೋರಾಟದ ಕುರಿತು ಇಂದು ಸುಪ್ರೀಂ ಕೋರ್ಟ್‌‌ನಲ್ಲಿನ ವಾದ-ವಿವಾದ ಹೀಗಿತ್ತು..

ಇಂದು ಸುಪ್ರೀಂನಲ್ಲಿ ನಡೆದ ಚರ್ಚೆಗಳಿಗೆ ಪ್ರತಿಕ್ರಿಯಿಸಿದ ಹೋರಾಟ ನಿರತ ರೈತರು, ’ನಮ್ಮನ್ನು ದೆಹಲಿಯಿಂದ ಹೊರಹಾಕುವ ಪ್ರಯತ್ನವಿದು. ಕಾನೂನು ಜಾರಿಗೆ ತಾತ್ಕಲಿಕ ತಡೆ ತರುವುದಲ್ಲ, ಕಾನೂನು ಹಿಂಪಡೆಯಬೇಕೆಂಬುದೇ ನಮ್ಮ ಆಗ್ರಹ’ ಎಂದಿದ್ದಾರೆ

- Advertisement -
- Advertisement -

ವಿವಾದಾತ್ಮಕ ನೂತನ ಕೃಷಿ ಕಾಯ್ದೆಗಳ ವಿರುದ್ಧ ದೆಹಲಿಯ ಗಡಿಗಳಲ್ಲಿ ಪ್ರತಿಭಟನಾನಿರತರಾಗಿರುವ ರೈತರನ್ನು ತೆರವುಗೊಳಿಸುವಂತೆ ಕೋರಿ ಸಲ್ಲಿಕೆಯಾಗಿರುವ ಅರ್ಜಿಗಳ ವಿಚಾರಣೆಯನ್ನು ಸೋಮವಾರ ಕೈಗೆತ್ತಿಕೊಂಡ ಮುಖ್ಯ ನ್ಯಾಯಮೂರ್ತಿ ಎಸ್‌ ಎ ಬೊಬ್ಡೆ ನೇತೃತ್ವದ ಸುಪ್ರೀಂ ಕೋರ್ಟ್‌ ಪೀಠ ಕೇಂದ್ರವನ್ನು ತರಾಟೆಗೆ ತೆಗೆದುಕೊಂಡಿತು. ಸುಪ್ರೀಂನಲ್ಲಿ ನಡೆದ ವಾದ-ವಿವಾದ ಹೀಗಿತ್ತು.

ಕೇಂದ್ರ ಸರ್ಕಾರ ರೈತ ಪ್ರತಿಭಟನೆಯನ್ನು ನಿಭಾಯಿಸಿದ ರೀತಿ ನಿಜಕ್ಕೂ ಅತೀವ ನಿರಾಶೆ ಉಂಟು ಮಾಡಿದೆ. ಈ ಕಾನೂನು ಜಾರಿಗೆ ತರಲು ಕೇಂದ್ರ ಸರ್ಕಾರ ಯಾವ ರೀತಿಯ ಸಮಾಲೋಚನಾ ಪ್ರಕ್ರಿಯೆ ಅನುಸರಿಸಿದೆಯೋ ಗೊತ್ತಿಲ್ಲ. ಆದರೆ ಈ ಕಾನೂನಗಳ ವಿರುದ್ಧ ಹಲವು ರಾಜ್ಯಗಳ ರೈತರು ಬಂಡೆದಿದ್ದಾರೆ ಎಂದು ಕೋರ್ಟ್‌ ಹೇಳಿದೆ.

ಸರ್ಕಾರದ ಪರ ವಕೀಲ, ಅಟರ್ನಿ ಜನರಲ್‌ ಕೆ ಕೆ ವೇಣುಗೋಪಾಲ್‌, ಹಿಂದಿನ ಸರ್ಕಾರ ತಜ್ಞ ಸಮಿತಿಯ ಶಿಫಾರಸಿನ ಆಧಾರದ ಮೇಲೆ ಈ ಕಾನೂನುಗಳನ್ನು ರೂಪಿಸಲಾಗಿದೆ. ಎಪಿಎಂಪಿ ವ್ಯವಸ್ಥೆಯಲ್ಲಿ ನಿರ್ಬಂಧಗಳನ್ನು ತೆಗೆದು ಹಾಕಲು ಮತ್ತು ನೇರ ಮಾರುಕಟ್ಟೆಗೆ ಮುಕ್ತ ಅವಕಾಶ ಕಲ್ಪಿಸುವಂತೆ ಸಮಿತಿಗಳು ಸಲಹೆ ನೀಡಿದ್ದವು ಎಂದು ಸಮಜಾಯಿಷಿ ನೀಡಿದರು.

“ನಮ್ಮ ಉದ್ದೇಶ ಸ್ಪಷ್ಟ. ಸಮಸ್ಯೆಗೆ ಸೌಹಾರ್ದಯುತವಾದ ಪರಿಹಾರ ಕಂಡುಕೊಳ್ಳಬೇಕು. ಇದೇ ಕಾರಣಕ್ಕೆ ಕಳೆದ ಬಾರಿಯೇ ಈ ಕಾನೂನುಗಳಿಗೆ ತಾತ್ಕಲಿಕವಾಗಿ ತಡೆಯಬಾರದೇಕೆ ಎಂದು ಕೇಳಿದ್ದೆವು. ಆದರೆ ನೀವು ಮತ್ತೆ ಮತ್ತೆ ಸಮಯಾವಕಾಶ ಕೇಳುತ್ತಿದ್ದೀರಿ” ಎಂದು ನ್ಯಾಯಪೀಠ ಹೇಳಿತು.

ನಿಮಗೆ ಕೊಂಚವಾದರೂ ಹೊಣೆಗಾರಿಕೆ ಪ್ರಜ್ಞೆ ಎಂಬುದಿದ್ದರೆ ಮತ್ತು ನೀವು ಕಾನೂನುಗಳ ಜಾರಿಯನ್ನು ತಡೆಯುವುದಾಗಿ ನೀವು ಹೇಳುವಿರಾದರೆ, ನಾವು ಸಮಿತಿಯೊಂದನ್ನು ಈ ವಿಷಯ ನಿರ್ಧರಿಸುವುದಕ್ಕೆ ರಚಿಸುತ್ತೇವೆ. ಈ ಕಾನೂನುಗಳು ಜಾರಿಯಾಗಲೇ ಬೇಕು ಎಂದು ಪಟ್ಟುಹಿಡಿಯುವುದಕ್ಕೆ ಕಾರಣ ಕಾಣುತ್ತಿಲ್ಲ ಎಂದು ನ್ಯಾಯಪೀಠ ಹೇಳಿತು.

ಸಾಲಿಸಿಟರ್‌ ಜನರಲ್‌ ತುಷಾರ್‌ ಮೆಹ್ತಾ, ನ್ಯಾಯಪೀಠ ಕೇಳಿದ ಪ್ರಶ್ನೆಗೆ ಉತ್ತರಿಸುತ್ತಾ, ನಾವು ಪರಿಹಾರದ ಭಾಗವಾಗಿದ್ದೇವೆ. ಈ ಕಾನೂನುಗಳು ಪ್ರಗತಿಪರವಾಗಿ ಎಂದು ಹೇಳುವ ಹಲವು ರೈತ ಸಂಘಟನೆಗಳಿವೆ ಎಂದು ಸರ್ಕಾರದ ಪರ ವಕಾಲತ್ತು ನೀಡಿದರು.

‘ಆದರೆ ಇದುವರೆಗೂ ಈ ಕಾನೂನುಗಳು ಉತ್ತಮವಾಗಿವೆ ಎಂದು ಸಮರ್ಥಿಸುವ ಒಂದೇ ಒಂದು ಪಿಟಿಷನ್‌ ಬಂದಿಲ್ಲ’ ಎಂದು ಬೋಬ್ಡೆ ನೇತೃತ್ವದ ನ್ಯಾಯಪೀಠ ತಿರುಗೇಟು ನೀಡಿತು.

ವಾದ ಮುಂದುವರೆಸಿದ ಸಾಲಿಸಿಟರ್‌ ಜನರಲ್‌, ಕೆಲವು ಗುಂಪುಗಳು ಪ್ರತಿಭಟಿಸಿದವು ಎಂಬ ಕಾರಣಕ್ಕೆ ನಮಗೆ ಲಾಭದಾಯಕವಾಗಿದ್ದ ಕಾನೂನುಗಳನ್ನು ಯಾಕೆ ತಡೆದಿರಿ ಎಂದು ಕೇಳಿದರೆ ಏನು ಮಾಡುವುದು ಎಂಬ ತಕರಾರನ್ನು ನ್ಯಾಯಪೀಠದ ಮುಂದೆ ಇಟ್ಟರು.

ನ್ಯಾಯಪೀಠ, ನಾವು ಇದರಲ್ಲಿ ಭಾಗಿಯಾಗಬಯಸುವುದಿಲ್ಲ. ಇದನ್ನು ಸಮಿತಿ ಚರ್ಚಿಸಲಿ ಎಂದು ಉತ್ತರಿಸಿ, ಕೇಂದ್ರ ಸರ್ಕಾರಕ್ಕೆ ಸಮಿತಿ ನೇಮಿಸಲಾಗದಿದ್ದರೆ, ನಾವೇ ನೇಮಿಸುವುದಾಗಿ ಖಾರವಾಗಿ ಉತ್ತರಿಸಿತು.

ಜನ ಚಳಿಯಲ್ಲಿ ಕಷ್ಟ ಅನುಭವಿಸುತ್ತಿದ್ದಾರೆ. ಆತ್ಮಹತ್ಯೆ ಮಾಡಿಕೊಳ್ಳುತ್ತಿದ್ದಾರೆ. ಪರಿಸ್ಥಿತಿ ಬಿಗಡಾಯಿಸುತ್ತಿದೆ. ಈ ಕುರಿತು ನೀವು ಯಾವುದೇ ಪ್ರತಿಕ್ರಿಯೆ ನೀಡಿಲ್ಲ ಎಂದು ಕೋರ್ಟ್‌ ಅಸಮಾಧಾನ ವ್ಯಕ್ತಪಡಿಸಿತು.

ರೈತ ಮುಖಂಡರು ಮತ್ತು ಸರ್ಕಾರದ ನಡುವೆ ನಡೆಯುತ್ತಿರುವ ಮಾತುಕತೆಗಳು ಬಿದ್ದು ಹೋಗುತ್ತಿವೆ. ಸರ್ಕಾರ ಅನುಚ್ಛೇದಗಳ ಮೇಲೆ ಚರ್ಚೆ ನಡೆಸಲು ಬಯಸುತ್ತಿದೆ. ಆದರೆ ರೈತರು ಕಾಯ್ದೆ ಹಿಂಪಡೆಯುವುದಕ್ಕೆ ಪಟ್ಟು ಹಿಡಿದಿದ್ದಾರೆ. ಹಾಗಾಗಿ ಸಮಿತಿ ನಿರ್ಣಯದವರೆಗೆ ಕಾಯ್ದೆಗಳ ಜಾರಿಯನ್ನು ತಡೆಯಲು ಸೂಚಿಸುತ್ತೇವೆ ಎಂದು ಬೋಬ್ಡೆ ನೇತೃತ್ವದ ನ್ಯಾಯಪೀಠ ಹೇಳಿತು.

‘ಆದರೆ, ಒಂದು ವೇಳೆ ಕಾಯ್ದೆ ಜಾರಿಯಾಗುವುದನ್ನು ತಡೆ ಹಿಡಿದರೆ, ಪ್ರತಿಭಟನೆಯನ್ನು ಸ್ಥಳಾಂತರಿಸಬಹುದೆ? ಯಾರಾದರೂ ಈ ಶಾಂತಿ ಕದಡುವ ಪ್ರಯತ್ನ ಮಾಡಬಹುದು ಎಂಬ ಆತಂಕವಿದೆ. ಹಾಗೇನಾದರೂ ಆದರೆ ನಾವೆಲ್ಲರೂ ಅದಕ್ಕೆ ಹೊಣೆಗಾರರಾಗಿರುತ್ತೇವೆ. ನಮ್ಮ ಕೈಗಳಿಗೆ ರಕ್ತ, ಗಾಯಗಳು ಅಂಟಿಕೊಳ್ಳುವುದು ಬೇಡ” ಎಂದು ನ್ಯಾಯಪೀಠ ಹೇಳಿತು.

ಎರಡೂ ಗಂಟೆಗಳ ಕಾಲ ವಾದ ವಿವಾದ ಬಳಿಕ ಸಮಿತಿ ರಚನೆಗೆ ಸೂಚಿಸಿದ್ದು, ಸಮಿತಿ ನಿರ್ಧಾರಗಳ ಆಧಾರದ ಮೇಲೆ ತೀರ್ಪು ತೆಗೆದುಕೊಳ್ಳಲಾಗುವುದು ಎಂದು ಬೋಬ್ಡೆ, ಎ ಎಸ್‌ ಬೋಪಣ್ಣ ಮತ್ತು ವಿ ರಾಮಾಸುಬ್ರಮಣ್ಯನ್‌ ಒಳಗೊಂಡ ಪೀಠ ತಿಳಿಸಿತು.

ಇನ್ನೊಂದೆಡೆ ಸುಪ್ರೀಂ ಆದೇಶದ ಕುರಿತು ಪ್ರತಿಕ್ರಿಯಿಸಿರುವ ದೆಹಲಿಯಲ್ಲಿನ ಧರಣಿ ನಿರತ ರೈತರು ಕಾಯ್ದೆಗಳಿಗೆ ತಾತ್ಕಾಲಿಕ ತಡೆ ತಂದಿದ್ದಾರೆ. ಆದರೆ ಕರಾಳ ಕೃಷಿ ಕಾಯ್ದೆಗಳು ಸಂಪೂರ್ಣ ವಾಪಸ್ ಆಗಬೇಕು ಎನ್ನುವುದು ನಮ್ಮ ಹಕ್ಕೊತ್ತಾಯ. ತಾತ್ಕಾಲಿಕ ತಡೆಯ ಮುಖಾಂತರ ರೈತರನ್ನು ಇಲ್ಲಿಂದ ಒಕ್ಕಲೆಬ್ಬಿಸುವ ಹುನ್ನಾರವಿದೆಯೆಂಬ ಅನುಮಾನವಿದೆ. ಅದಕ್ಕೆ ನಾವು ಆಸ್ಪದ ಕೊಡುವುದಿಲ್ಲ, ಹೋರಾಟ ಮುಂದುವರೆಸುತ್ತೇವೆ ಎಂದು ನಾನುಗೌರಿ.ಕಾಂಗೆ ತಿಳಿಸಿದ್ದಾರೆ.


ಇದನ್ನೂ ಓದಿ: ಹೊಸ ಚರಿತ್ರೆ ಬರಿಯಲಿರುವ ಜನವರಿ 26ರ ರೈತ ಹೋರಾಟ: ಇದರಲ್ಲಿ ನಿಮ್ಮ ಪಾತ್ರವೇನು?

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

1 COMMENT

LEAVE A REPLY

Please enter your comment!
Please enter your name here

- Advertisment -

ಉತ್ತರ ಪ್ರದೇಶ| ರಸ್ತೆ ಗುಂಡಿಗೆ ಇಳಿದ ಆಂಬ್ಯುಲೆನ್ಸ್; ಮರುಜೀವ ಪಡೆದ ಮೆದುಳು ನಿಷ್ಕ್ರಿಯಗೊಂಡಿದ್ದ ಮಹಿಳೆ!

ಉತ್ತರ ಪ್ರದೇಶದ ಬರೇಲಿಯ ಖಾಸಗಿ ಆಸ್ಪತ್ರೆಯೊಂದರ ವೈದ್ಯರು ಮೆದುಳು ನಿಷ್ಕ್ರಿಯ ಎಂದು ಘೋಷಿಸಿದ್ದು, ಮಹಿಳೆಯೊಬ್ಬರ ಮೃತದೇಹವನ್ನು ಅಂತ್ಯಕ್ರಿಯೆಗಾಗಿ ಮನೆಗೆ ಸಾಗಿಸುತ್ತಿದ್ದಾಗ ಆಂಬ್ಯುಲೆನ್ಸ್ ರಸ್ತೆಯ ಗುಂಡಿಗೆ ಇಳಿದ ನಂತರ ಆಕೆ ಜೀವಂತವಾಗಿರುವ ಲಕ್ಷಣಗಳು ಕಂಡುಬಂದು...

ಪಶ್ಚಿಮ ಏಷ್ಯಾ ಸಂಘರ್ಷ: ದುಬೈ ವಿಮಾನ ನಿಲ್ದಾಣದ ಮೇಲೆ ಇರಾನ್​ ಡ್ರೋನ್​ ದಾಳಿ; ಭಾರತೀಯ ಪ್ರಜೆ ಸೇರಿ ನಾಲ್ವರಿಗೆ ಗಾಯ

ದುಬೈ ಅಂತಾರಾಷ್ಟ್ರೀಯ ವಿಮಾನ ನಿಲ್ದಾಣದ ಬಳಿ ಇರಾನಿನ ಎರಡು ಡ್ರೋಣಗಳಿಂದ ದಾಳಿ ನಡೆದಿದೆ. ಈ ದಾಳಿಯಲ್ಲಿ ಓರ್ವ ಭಾರತೀಯ ಸೇರಿದಂತೆ ನಾಲ್ವರು ಗಾಯಗೊಂಡಿದ್ದಾರೆ ಎಂದು ಅಧಿಕಾರಿಗಳು ತಿಳಿಸಿದ್ದಾರೆ. ಅಲ್ಲಿನ ಸರ್ಕಾರದ ಪರವಾಗಿ ಪ್ರಕಟಣೆ ಹೊರಡಿಸಿರುವ...

ಜಾರ್ಖಂಡ್| ಆಂಬ್ಯುಲೆನ್ಸ್ ನಿರಾಕರಿಸಿದ ಆಸ್ಪತ್ರೆ ಸಿಬ್ಬಂದಿ; ಕಾರ್ಡ್‌ಬೋರ್ಡ್‌ನಲ್ಲಿ ಮಗುವಿನ ಶವ ಸಾಗಿಸಿದ ತಂದೆ

ಆಸ್ಪತ್ರೆ ಸಿಬ್ಬಂದಿ ಆಂಬ್ಯುಲೆನ್ಸ್ ನಿರಾಕರಿಸಿದ್ದರಿಂದ ಕೂಲಿಕಾರ ತಂದೆಯೊಬ್ಬ ಕಾರ್ಡ್‌ಬೋರ್ಡ್‌ನಲ್ಲಿ ಮಗುವಿನ ಶವ ಸಾಗಿಸಿರುವ ಹೃದಯವಿದ್ರಾವಕ ಘಟನೆಯೊಂದು ಜಾರ್ಖಂಡ್‌ನ ಪಶ್ಚಿಮ ಸಿಂಗ್ಭೂಮ್ ಜಿಲ್ಲೆಯಲ್ಲಿ ಬೆಳಕಿಗೆ ಬಂದಿದೆ. ಕಳೆದ ಶನಿವಾರ ನಡೆದಿದೆ ಎನ್ನಲಾದ...

ಮಧುರಾಂತಕಂ ಬಳಿ 14 ವರ್ಷದ ಬಾಲಕಿಯ ಮೇಲೆ ಸಾಮೂಹಿಕ ಅತ್ಯಾಚಾರ: ಪೋಕ್ಸೋ ಪ್ರಕರಣದಡಿ ಓರ್ವ ರೌಡಿ ಶೀಟರ್ ಬಂಧನ

ಚೆನ್ನೈ (ಚೆಂಗಲ್ಪಟ್ಟು): ಸೋಮವಾರ ರಾತ್ರಿ ಮಧುರಾಂಟಕಂ ಬಳಿಯ ಜಲಮೂಲದ ದಡದಲ್ಲಿ 14 ವರ್ಷದ ಬಾಲಕಿಯ ಮೇಲೆ ರೌಡಿ ಶೀಟರ್ ಮತ್ತು ಆತನ ಸಹಚರರು ಸಾಮೂಹಿಕ ಅತ್ಯಾಚಾರ ಎಸಗಿದ್ದಾರೆ ಎಂದು ವರದಿಯಾಗಿದೆ. ಪ್ರಕರಣ ಸಂಬಂಧ ಪೋಕ್ಸೋ...

ಮುಸ್ಲಿಂ ಮಹಿಳೆಯರ ವಿರುದ್ಧದ ಷರಿಯಾ ಕಾನೂನಿಗೆ ಏಕರೂಪ ನಾಗರಿಕ ಸಂಹಿತೆ ಪರಿಹಾರ: ಸುಪ್ರೀಂ ಕೋರ್ಟ್

"ಮುಸ್ಲಿಂ ವೈಯಕ್ತಿಕ ಕಾನೂನಿನಡಿಯಲ್ಲಿ ತಾರತಮ್ಯದ ಆನುವಂಶಿಕ ನಿಬಂಧನೆಗಳನ್ನು ಪರಿಹರಿಸಲು ಏಕರೂಪ ನಾಗರಿಕ ಸಂಹಿತೆ (ಯುಸಿಸಿ) ಅತ್ಯಂತ ಪರಿಣಾಮಕಾರಿ ಪರಿಹಾರ ಎಂದು ಸುಪ್ರೀಂ ಕೋರ್ಟ್ ಮಂಗಳವಾರ (ಮಾ.20) ಹೇಳಿದೆ. ಮುಖ್ಯ ನ್ಯಾಯಮೂರ್ತಿ ಸೂರ್ಯ...

ಮುಂಬೈ: ಬಜೆಟ್ ಅಧಿವೇಶನದ ನಡುವೆ ವಿಧಾನ ಭವನದ ಬಳಿ ವ್ಯಕ್ತಿಯೊಬ್ಬನಿಂದ ಆತ್ಮಹತ್ಯೆಗೆ ಯತ್ನ: ವಶಕ್ಕೆ ಪಡೆದ ಪೊಲೀಸರು

ಮುಂಬೈ: ಮಾರ್ಚ್ 11, ಬುಧವಾರ ಮಹಾರಾಷ್ಟ್ರ ವಿಧಾನ ಭವನದ ಹೊರಗೆ ವ್ಯಕ್ತಿಯೊಬ್ಬರು ಆತ್ಮಾಹುತಿ ಮಾಡಿಕೊಳ್ಳಲು ಯತ್ನಿಸಿರುವುದಾಗಿ ವರದಿಯಾಗಿದೆ. ತಕ್ಷಣವೇ ಮುಂಬೈ ಪೊಲೀಸರು ಆತನನ್ನು ಬಂಧಿಸಿದ್ದಾರೆ.  2026 ರ ಮಹಾರಾಷ್ಟ್ರ ಬಜೆಟ್ ಅಧಿವೇಶನ ವಿಧಾನ ಭವನದಲ್ಲಿ...

ಕೋವಿಡ್ ಲಸಿಕೆ ಕೆಲ ಸಾವುಗಳಿಗೆ ಕಾರಣವಾಗಿದೆ ಎಂದು ಅಧಿಕೃತ ದತ್ತಾಂಶ ತೋರಿಸಿದೆ, ಸರ್ಕಾರ ಜವಾಬ್ದಾರಿಯಿಂದ ನುಣುಚಿಕೊಳ್ಳಲು ಸಾಧ್ಯವಿಲ್ಲ : ಸುಪ್ರೀಂ ಕೋರ್ಟ್

ಸರ್ಕಾರದ ಅಧೀನದ ಸಾರ್ವಜನಿಕ ಆರೋಗ್ಯ ವ್ಯವಸ್ಥೆಯ ಮೂಲಕ ಕೋವಿಡ್ ಲಸಿಕೆಯನ್ನು ವಿತರಿಸಲಾಗಿದೆ. ಕೋವಿಡ್ ಲಸಿಕೆ ಪಡೆದ ಬಳಿಕ ಕೆಲ ಸಾವುಗಳು ಸಂಭವಿಸಿರುವುದನ್ನು ಅಧಿಕೃತ ದತ್ತಾಂಶಗಳೇ ದೃಢಪಡಿಸಿವೆ. ಹೀಗಿರುವಾಗ, ಲಸಿಕೆ ಹಾಕಿಸಿಕೊಂಡ ನಂತರ ಸಾವು...

ತಮಿಳುನಾಡು| ಪೊಲೀಸ್ ದೌರ್ಜನ್ಯದಿಂದ ಎರಡು ತಿಂಗಳಲ್ಲಿ ನಾಲ್ವರು ದಲಿತರು ಸಾವು

ವಿಧಾನಸಭೆ ಚುನಾವಣೆ ಹೊಸ್ತಿಲಲ್ಲಿರುವ ತಮಿಳುನಾಡಿನಲ್ಲಿ ಕಾನೂನು ಸುವ್ಯವಸ್ಥೆ ಹದಗೆಡುತ್ತಿರುವುದನ್ನು ಪ್ರತಿಬಿಂಬಿಸುವ ಆತಂಕಕಾರಿ ವಿಚಾರವೊಂದು ಮುನ್ನಲೆಗೆ ಬಂದಿದ್ದು, ಪೊಲೀಸ್ ಹಿಂಸಾಚಾರದಿಂದಾಗಿ ಎರಡು ತಿಂಗಳ ಅವಧಿಯಲ್ಲಿ ನಾಲ್ವರು ದಲಿತರು ಸಾವನ್ನಪ್ಪಿದ್ದಾರೆ. ಈ ಸಾವುಗಳಲ್ಲಿ, ಎರಡು ಪ್ರಕರಣಗಳನ್ನು...

ಪಶ್ಚಿಮ ಏಷ್ಯಾ ಸಂಘರ್ಷ| ಹಾರ್ಮುಜ್ ಜಲಸಂಧಿಯಲ್ಲಿ ಇರಾನಿನ 16 ಹಡಗುಗಳನ್ನು ನಾಶಪಡಿಸಿದ್ದಾಗಿ ವಿಡಿಯೋ ಹಂಚಿಕೊಂಡ ಅಮೆರಿಕ ಸೇನೆ

ಪಶ್ಚಿಮ ಏಷ್ಯಾದಿಂದ ತೈಲ ರಫ್ತನ್ನು ತಡೆಯಲು ಇರಾನ್ ಪ್ರಯತ್ನಿಸುತ್ತಿರುವುದರಿಂದ ಹಾರ್ಮುಜ್ ಜಲಸಂಧಿಯಲ್ಲಿ ಇರಾನಿನ 16 ಹಡಗುಗಳನ್ನು ನಾಶಪಡಿಸಿರುವುದಾಗಿ ಅಮೆರಿಕ ಸೇನೆ ಹೇಳಿಕೊಂಡಿದೆ.  ಅಮೆರಿಕ ಅಧ್ಯಕ್ಷ ಡೊನಾಲ್ಡ್ ಟ್ರಂಪ್ ಈ ಹಿಂದೆ ಇರಾನ್ ಜಲಸಂಧಿಯಲ್ಲಿ ಗಣಿಗಳನ್ನು...

13 ವರ್ಷಗಳಿಂದ ಕೋಮಾದಲ್ಲಿರುವ ಯುವಕನ ದಯಾಮರಣಕ್ಕೆ ಸುಪ್ರೀಂ ಕೋರ್ಟ್ ಅನುಮತಿ

ಕಳೆದ 13 ವರ್ಷಗಳಿಂದ ಕೋಮಾದಲ್ಲಿರುವ 32 ವರ್ಷದ ಹರೀಶ್ ರಾಣಾ ಎಂಬ ಯುವಕನ ಪರೋಕ್ಷ (ನಿಷ್ಕ್ರಿಯ) ದಯಾಮರಣಕ್ಕೆ ಸುಪ್ರೀಂ ಕೋರ್ಟ್ ಬುಧವಾರ (ಮಾ.11) ಅನುಮತಿ ನೀಡಿದೆ ಎಂದು livelaw.in ವರದಿ ಮಾಡಿದೆ. ದೆಹಲಿ ಮೂಲದ ಹರೀಶ್...