Homeಮುಖಪುಟಕೃಷಿ ಕಾಯ್ದೆಗಳು & ರೈತ ಹೋರಾಟದ ಕುರಿತು ಇಂದು ಸುಪ್ರೀಂ ಕೋರ್ಟ್‌‌ನಲ್ಲಿನ ವಾದ-ವಿವಾದ ಹೀಗಿತ್ತು..

ಕೃಷಿ ಕಾಯ್ದೆಗಳು & ರೈತ ಹೋರಾಟದ ಕುರಿತು ಇಂದು ಸುಪ್ರೀಂ ಕೋರ್ಟ್‌‌ನಲ್ಲಿನ ವಾದ-ವಿವಾದ ಹೀಗಿತ್ತು..

ಇಂದು ಸುಪ್ರೀಂನಲ್ಲಿ ನಡೆದ ಚರ್ಚೆಗಳಿಗೆ ಪ್ರತಿಕ್ರಿಯಿಸಿದ ಹೋರಾಟ ನಿರತ ರೈತರು, ’ನಮ್ಮನ್ನು ದೆಹಲಿಯಿಂದ ಹೊರಹಾಕುವ ಪ್ರಯತ್ನವಿದು. ಕಾನೂನು ಜಾರಿಗೆ ತಾತ್ಕಲಿಕ ತಡೆ ತರುವುದಲ್ಲ, ಕಾನೂನು ಹಿಂಪಡೆಯಬೇಕೆಂಬುದೇ ನಮ್ಮ ಆಗ್ರಹ’ ಎಂದಿದ್ದಾರೆ

- Advertisement -
- Advertisement -

ವಿವಾದಾತ್ಮಕ ನೂತನ ಕೃಷಿ ಕಾಯ್ದೆಗಳ ವಿರುದ್ಧ ದೆಹಲಿಯ ಗಡಿಗಳಲ್ಲಿ ಪ್ರತಿಭಟನಾನಿರತರಾಗಿರುವ ರೈತರನ್ನು ತೆರವುಗೊಳಿಸುವಂತೆ ಕೋರಿ ಸಲ್ಲಿಕೆಯಾಗಿರುವ ಅರ್ಜಿಗಳ ವಿಚಾರಣೆಯನ್ನು ಸೋಮವಾರ ಕೈಗೆತ್ತಿಕೊಂಡ ಮುಖ್ಯ ನ್ಯಾಯಮೂರ್ತಿ ಎಸ್‌ ಎ ಬೊಬ್ಡೆ ನೇತೃತ್ವದ ಸುಪ್ರೀಂ ಕೋರ್ಟ್‌ ಪೀಠ ಕೇಂದ್ರವನ್ನು ತರಾಟೆಗೆ ತೆಗೆದುಕೊಂಡಿತು. ಸುಪ್ರೀಂನಲ್ಲಿ ನಡೆದ ವಾದ-ವಿವಾದ ಹೀಗಿತ್ತು.

ಕೇಂದ್ರ ಸರ್ಕಾರ ರೈತ ಪ್ರತಿಭಟನೆಯನ್ನು ನಿಭಾಯಿಸಿದ ರೀತಿ ನಿಜಕ್ಕೂ ಅತೀವ ನಿರಾಶೆ ಉಂಟು ಮಾಡಿದೆ. ಈ ಕಾನೂನು ಜಾರಿಗೆ ತರಲು ಕೇಂದ್ರ ಸರ್ಕಾರ ಯಾವ ರೀತಿಯ ಸಮಾಲೋಚನಾ ಪ್ರಕ್ರಿಯೆ ಅನುಸರಿಸಿದೆಯೋ ಗೊತ್ತಿಲ್ಲ. ಆದರೆ ಈ ಕಾನೂನಗಳ ವಿರುದ್ಧ ಹಲವು ರಾಜ್ಯಗಳ ರೈತರು ಬಂಡೆದಿದ್ದಾರೆ ಎಂದು ಕೋರ್ಟ್‌ ಹೇಳಿದೆ.

ಸರ್ಕಾರದ ಪರ ವಕೀಲ, ಅಟರ್ನಿ ಜನರಲ್‌ ಕೆ ಕೆ ವೇಣುಗೋಪಾಲ್‌, ಹಿಂದಿನ ಸರ್ಕಾರ ತಜ್ಞ ಸಮಿತಿಯ ಶಿಫಾರಸಿನ ಆಧಾರದ ಮೇಲೆ ಈ ಕಾನೂನುಗಳನ್ನು ರೂಪಿಸಲಾಗಿದೆ. ಎಪಿಎಂಪಿ ವ್ಯವಸ್ಥೆಯಲ್ಲಿ ನಿರ್ಬಂಧಗಳನ್ನು ತೆಗೆದು ಹಾಕಲು ಮತ್ತು ನೇರ ಮಾರುಕಟ್ಟೆಗೆ ಮುಕ್ತ ಅವಕಾಶ ಕಲ್ಪಿಸುವಂತೆ ಸಮಿತಿಗಳು ಸಲಹೆ ನೀಡಿದ್ದವು ಎಂದು ಸಮಜಾಯಿಷಿ ನೀಡಿದರು.

“ನಮ್ಮ ಉದ್ದೇಶ ಸ್ಪಷ್ಟ. ಸಮಸ್ಯೆಗೆ ಸೌಹಾರ್ದಯುತವಾದ ಪರಿಹಾರ ಕಂಡುಕೊಳ್ಳಬೇಕು. ಇದೇ ಕಾರಣಕ್ಕೆ ಕಳೆದ ಬಾರಿಯೇ ಈ ಕಾನೂನುಗಳಿಗೆ ತಾತ್ಕಲಿಕವಾಗಿ ತಡೆಯಬಾರದೇಕೆ ಎಂದು ಕೇಳಿದ್ದೆವು. ಆದರೆ ನೀವು ಮತ್ತೆ ಮತ್ತೆ ಸಮಯಾವಕಾಶ ಕೇಳುತ್ತಿದ್ದೀರಿ” ಎಂದು ನ್ಯಾಯಪೀಠ ಹೇಳಿತು.

ನಿಮಗೆ ಕೊಂಚವಾದರೂ ಹೊಣೆಗಾರಿಕೆ ಪ್ರಜ್ಞೆ ಎಂಬುದಿದ್ದರೆ ಮತ್ತು ನೀವು ಕಾನೂನುಗಳ ಜಾರಿಯನ್ನು ತಡೆಯುವುದಾಗಿ ನೀವು ಹೇಳುವಿರಾದರೆ, ನಾವು ಸಮಿತಿಯೊಂದನ್ನು ಈ ವಿಷಯ ನಿರ್ಧರಿಸುವುದಕ್ಕೆ ರಚಿಸುತ್ತೇವೆ. ಈ ಕಾನೂನುಗಳು ಜಾರಿಯಾಗಲೇ ಬೇಕು ಎಂದು ಪಟ್ಟುಹಿಡಿಯುವುದಕ್ಕೆ ಕಾರಣ ಕಾಣುತ್ತಿಲ್ಲ ಎಂದು ನ್ಯಾಯಪೀಠ ಹೇಳಿತು.

ಸಾಲಿಸಿಟರ್‌ ಜನರಲ್‌ ತುಷಾರ್‌ ಮೆಹ್ತಾ, ನ್ಯಾಯಪೀಠ ಕೇಳಿದ ಪ್ರಶ್ನೆಗೆ ಉತ್ತರಿಸುತ್ತಾ, ನಾವು ಪರಿಹಾರದ ಭಾಗವಾಗಿದ್ದೇವೆ. ಈ ಕಾನೂನುಗಳು ಪ್ರಗತಿಪರವಾಗಿ ಎಂದು ಹೇಳುವ ಹಲವು ರೈತ ಸಂಘಟನೆಗಳಿವೆ ಎಂದು ಸರ್ಕಾರದ ಪರ ವಕಾಲತ್ತು ನೀಡಿದರು.

‘ಆದರೆ ಇದುವರೆಗೂ ಈ ಕಾನೂನುಗಳು ಉತ್ತಮವಾಗಿವೆ ಎಂದು ಸಮರ್ಥಿಸುವ ಒಂದೇ ಒಂದು ಪಿಟಿಷನ್‌ ಬಂದಿಲ್ಲ’ ಎಂದು ಬೋಬ್ಡೆ ನೇತೃತ್ವದ ನ್ಯಾಯಪೀಠ ತಿರುಗೇಟು ನೀಡಿತು.

ವಾದ ಮುಂದುವರೆಸಿದ ಸಾಲಿಸಿಟರ್‌ ಜನರಲ್‌, ಕೆಲವು ಗುಂಪುಗಳು ಪ್ರತಿಭಟಿಸಿದವು ಎಂಬ ಕಾರಣಕ್ಕೆ ನಮಗೆ ಲಾಭದಾಯಕವಾಗಿದ್ದ ಕಾನೂನುಗಳನ್ನು ಯಾಕೆ ತಡೆದಿರಿ ಎಂದು ಕೇಳಿದರೆ ಏನು ಮಾಡುವುದು ಎಂಬ ತಕರಾರನ್ನು ನ್ಯಾಯಪೀಠದ ಮುಂದೆ ಇಟ್ಟರು.

ನ್ಯಾಯಪೀಠ, ನಾವು ಇದರಲ್ಲಿ ಭಾಗಿಯಾಗಬಯಸುವುದಿಲ್ಲ. ಇದನ್ನು ಸಮಿತಿ ಚರ್ಚಿಸಲಿ ಎಂದು ಉತ್ತರಿಸಿ, ಕೇಂದ್ರ ಸರ್ಕಾರಕ್ಕೆ ಸಮಿತಿ ನೇಮಿಸಲಾಗದಿದ್ದರೆ, ನಾವೇ ನೇಮಿಸುವುದಾಗಿ ಖಾರವಾಗಿ ಉತ್ತರಿಸಿತು.

ಜನ ಚಳಿಯಲ್ಲಿ ಕಷ್ಟ ಅನುಭವಿಸುತ್ತಿದ್ದಾರೆ. ಆತ್ಮಹತ್ಯೆ ಮಾಡಿಕೊಳ್ಳುತ್ತಿದ್ದಾರೆ. ಪರಿಸ್ಥಿತಿ ಬಿಗಡಾಯಿಸುತ್ತಿದೆ. ಈ ಕುರಿತು ನೀವು ಯಾವುದೇ ಪ್ರತಿಕ್ರಿಯೆ ನೀಡಿಲ್ಲ ಎಂದು ಕೋರ್ಟ್‌ ಅಸಮಾಧಾನ ವ್ಯಕ್ತಪಡಿಸಿತು.

ರೈತ ಮುಖಂಡರು ಮತ್ತು ಸರ್ಕಾರದ ನಡುವೆ ನಡೆಯುತ್ತಿರುವ ಮಾತುಕತೆಗಳು ಬಿದ್ದು ಹೋಗುತ್ತಿವೆ. ಸರ್ಕಾರ ಅನುಚ್ಛೇದಗಳ ಮೇಲೆ ಚರ್ಚೆ ನಡೆಸಲು ಬಯಸುತ್ತಿದೆ. ಆದರೆ ರೈತರು ಕಾಯ್ದೆ ಹಿಂಪಡೆಯುವುದಕ್ಕೆ ಪಟ್ಟು ಹಿಡಿದಿದ್ದಾರೆ. ಹಾಗಾಗಿ ಸಮಿತಿ ನಿರ್ಣಯದವರೆಗೆ ಕಾಯ್ದೆಗಳ ಜಾರಿಯನ್ನು ತಡೆಯಲು ಸೂಚಿಸುತ್ತೇವೆ ಎಂದು ಬೋಬ್ಡೆ ನೇತೃತ್ವದ ನ್ಯಾಯಪೀಠ ಹೇಳಿತು.

‘ಆದರೆ, ಒಂದು ವೇಳೆ ಕಾಯ್ದೆ ಜಾರಿಯಾಗುವುದನ್ನು ತಡೆ ಹಿಡಿದರೆ, ಪ್ರತಿಭಟನೆಯನ್ನು ಸ್ಥಳಾಂತರಿಸಬಹುದೆ? ಯಾರಾದರೂ ಈ ಶಾಂತಿ ಕದಡುವ ಪ್ರಯತ್ನ ಮಾಡಬಹುದು ಎಂಬ ಆತಂಕವಿದೆ. ಹಾಗೇನಾದರೂ ಆದರೆ ನಾವೆಲ್ಲರೂ ಅದಕ್ಕೆ ಹೊಣೆಗಾರರಾಗಿರುತ್ತೇವೆ. ನಮ್ಮ ಕೈಗಳಿಗೆ ರಕ್ತ, ಗಾಯಗಳು ಅಂಟಿಕೊಳ್ಳುವುದು ಬೇಡ” ಎಂದು ನ್ಯಾಯಪೀಠ ಹೇಳಿತು.

ಎರಡೂ ಗಂಟೆಗಳ ಕಾಲ ವಾದ ವಿವಾದ ಬಳಿಕ ಸಮಿತಿ ರಚನೆಗೆ ಸೂಚಿಸಿದ್ದು, ಸಮಿತಿ ನಿರ್ಧಾರಗಳ ಆಧಾರದ ಮೇಲೆ ತೀರ್ಪು ತೆಗೆದುಕೊಳ್ಳಲಾಗುವುದು ಎಂದು ಬೋಬ್ಡೆ, ಎ ಎಸ್‌ ಬೋಪಣ್ಣ ಮತ್ತು ವಿ ರಾಮಾಸುಬ್ರಮಣ್ಯನ್‌ ಒಳಗೊಂಡ ಪೀಠ ತಿಳಿಸಿತು.

ಇನ್ನೊಂದೆಡೆ ಸುಪ್ರೀಂ ಆದೇಶದ ಕುರಿತು ಪ್ರತಿಕ್ರಿಯಿಸಿರುವ ದೆಹಲಿಯಲ್ಲಿನ ಧರಣಿ ನಿರತ ರೈತರು ಕಾಯ್ದೆಗಳಿಗೆ ತಾತ್ಕಾಲಿಕ ತಡೆ ತಂದಿದ್ದಾರೆ. ಆದರೆ ಕರಾಳ ಕೃಷಿ ಕಾಯ್ದೆಗಳು ಸಂಪೂರ್ಣ ವಾಪಸ್ ಆಗಬೇಕು ಎನ್ನುವುದು ನಮ್ಮ ಹಕ್ಕೊತ್ತಾಯ. ತಾತ್ಕಾಲಿಕ ತಡೆಯ ಮುಖಾಂತರ ರೈತರನ್ನು ಇಲ್ಲಿಂದ ಒಕ್ಕಲೆಬ್ಬಿಸುವ ಹುನ್ನಾರವಿದೆಯೆಂಬ ಅನುಮಾನವಿದೆ. ಅದಕ್ಕೆ ನಾವು ಆಸ್ಪದ ಕೊಡುವುದಿಲ್ಲ, ಹೋರಾಟ ಮುಂದುವರೆಸುತ್ತೇವೆ ಎಂದು ನಾನುಗೌರಿ.ಕಾಂಗೆ ತಿಳಿಸಿದ್ದಾರೆ.


ಇದನ್ನೂ ಓದಿ: ಹೊಸ ಚರಿತ್ರೆ ಬರಿಯಲಿರುವ ಜನವರಿ 26ರ ರೈತ ಹೋರಾಟ: ಇದರಲ್ಲಿ ನಿಮ್ಮ ಪಾತ್ರವೇನು?

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

1 COMMENT

LEAVE A REPLY

Please enter your comment!
Please enter your name here

- Advertisment -

ಗುಜರಾತ್‌| ಜಾತಿ ಆಧಾರಿತ ಜಗಳದಲ್ಲಿ ದಲಿತ ಯುವಕನ ಮೇಲೆ ಚಾಕುವಿನಿಂದ ದಾಳಿ

ಶನಿವಾರ ತಡರಾತ್ರಿ ರಾಣಿಪ್‌ನಲ್ಲಿ ನಡೆದ ಸಣ್ಣ ಭಿನ್ನಾಭಿಪ್ರಾಯವೊಂದು ಹಿಂಸಾಚಾರಕ್ಕೆ ತಿರುಗಿದ್ದು, 25 ವರ್ಷದ ದಲಿತ ಯುವಕ ಸಾಹಿಲ್ ವಘೇಲಾ ಮೇಲೆ ಚಾಕುವಿನಿಂದ ಹಲ್ಲೆ ನಡೆಸಲಾಗಿದೆ. ಯುವಕ ಗಂಭೀರವಾಗಿ ಗಾಯಗೊಂಡಿದ್ದು, ಘಟನೆಯು ಈ ಪ್ರದೇಶದಲ್ಲಿ...

ಮುಂಬೈ| ಬುರ್ಖಾ ಧರಿಸಿ ಲೋಕಲ್‌ ಟ್ರೈನ್‌ನ ಮಹಿಳಾ ಬೋಗಿಯಲ್ಲಿ ಪ್ರಯಾಣಿಸಿದ ವ್ಯಕ್ತಿ ಬಂಧನ

ಮುಂಬೈನ ಉಪನಗರ ರೈಲಿನ ಮಹಿಳಾ ಬೋಗಿಯಲ್ಲಿ ಬುರ್ಖಾ ಧರಿಸಿ ಪ್ರಯಾಣಿಸುತ್ತಿದ್ದ ಆರೋಪದ ಮೇಲೆ ನಾಸಿಕ್‌ನ 57 ವರ್ಷದ ವ್ಯಕ್ತಿಯನ್ನು ಬಂಧಿಸಲಾಗಿದೆ ಎಂದು ಅಧಿಕಾರಿಗಳು ಬುಧವಾರ ತಿಳಿಸಿದ್ದಾರೆ. ಈ ಘಟನೆ ಫೆಬ್ರವರಿ 6 ರಂದು ಘಾಟ್ಕೋಪರ್...

ಎಪ್‌ಸ್ಟೀನ್‌ ಫೈಲ್ಸ್ ಜನಾಕ್ರೋಶ : ಎಐ ಶೃಂಗಸಭೆಯಿಂದ ದೂರ ಉಳಿದ ಬಿಲ್‌ ಗೇಟ್ಸ್‌

ಎಪ್‌ಸ್ಟೀನ್‌ ಫೈಲ್ಸ್‌ ಮುಂದಿಟ್ಟುಕೊಂಡು ಜನರು ತೀವ್ರ ವಿರೋಧ ವ್ಯಕ್ತಪಡಿಸಿದ ಬೆನ್ನಲ್ಲೇ, 'ಇಂಡಿಯಾ ಎಐ ಇಂಪ್ಯಾಕ್ಟ್ ಶೃಂಗಸಭೆ'ಯಿಂದ ಮೈಕ್ರೋಸಾಫ್ಟ್‌ ಸಹ-ಸಂಸ್ಥಾಪಕ ಬಿಲ್ ಗೇಟ್ಸ್ ದೂರ ಉಳಿದಿದ್ದಾರೆ. ಈ ಕುರಿತು ಗೇಟ್ಸ್ ಫೌಂಡೇಶನ್ ಇಂಡಿಯಾ ಗುರುವಾರ...

ಬೆಂಗಳೂರಿನಲ್ಲಿ ರಂಜಾನ್ ಆಹಾರ ಮೇಳ ನಡೆಸದಂತೆ ಹೋಟೆಲ್‌ಗಳಿಗೆ ಎಚ್ಚರಿಕೆ

ಬೆಂಗಳೂರು: ಫ್ರೇಸರ್ ಟೌನ್ ಮತ್ತು ಸುತ್ತಮುತ್ತಲಿನ ಪ್ರದೇಶಗಳಲ್ಲಿನ ಎಂಎಂ ರಸ್ತೆಯಲ್ಲಿ ರಂಜಾನ್ ಆಹಾರ ಮೇಳ ನಡೆಸದಂತೆ ಹೋಟೆಲ್ ಮಾಲೀಕರಿಗೆ ಸ್ಥಳೀಯ ನಿವಾಸಿಗಳು ಎಚ್ಚರಿಕೆ ನೀಡಿದ್ದಾರೆ. ರಂಜಾನ್ ಆಹಾರ ಮೇಳದಿಂದ ಸಂಚಾರ ದಟ್ಟಣೆ. ಅವ್ಯವಸ್ಥೆಯ ಜೊತೆಗೆ...

‘ದಿ ಕೇರಳ ಸ್ಟೋರಿ-2’ ಚಲನಚಿತ್ರ ಜಾತ್ಯತೀತತೆಗೆ ಬೆದರಿಕೆ: ಮುಖ್ಯಮಂತ್ರಿ ಪಿಣರಾಯಿ ವಿಜಯನ್

'ದಿ ಕೇರಳ ಸ್ಟೋರಿ' ಚಿತ್ರದ ಎರಡನೇ ಭಾಗ ಬಿಡುಗಡೆಯಾಗುತ್ತಿರುವ ಬಗ್ಗೆ ಕೇರಳ ಮುಖ್ಯಮಂತ್ರಿ ಪಿಣರಾಯಿ ವಿಜಯನ್ ಕಳವಳ ವ್ಯಕ್ತಪಡಿಸಿದ್ದು, ಇದರ ಮೊದಲ ಭಾಗವು "ರಾಜ್ಯದ ವಿರುದ್ಧ ದ್ವೇಷವನ್ನು ಹರಡುವ ಮತ್ತು ನಮ್ಮ ಜಾತ್ಯತೀತ...

ಬಿಜೆಪಿ ಸೇರಲು ಸಿದ್ದರಾದ ಭೂಪೇನ್ ಬೋರಾ : ಪ್ರಿಯಾಂಕಾ, ಡಿಕೆಶಿ ಸೇರಿದಂತೆ ‘ಕೈ ಟ್ರಬಲ್ ಶೂಟರ್‌ಗಳು’ ಅಸ್ಸಾಂಗೆ ದೌಡು

ರಾಜ್ಯ ಕಾಂಗ್ರೆಸ್‌ ಘಟಕದ ಮಾಜಿ ಅಧ್ಯಕ್ಷ ಭೂಪೇನ್ ಬೋರಾ ಬಿಜೆಪಿಗೆ ಹಾರಲು ಸಿದ್ದರಾಗಿರುವ ನಡುವೆ ಪ್ರಿಯಾಂಕಾ ಗಾಂಧಿ, ಡಿ.ಕೆ ಶಿವಕುಮಾರ್ ಸೇರಿದಂತೆ ಕಾಂಗ್ರೆಸ್‌ನ ಟ್ರಬಲ್ ಶೂಟರ್‌ಗಳ ತಂಡ ಅಸ್ಸಾಂಗೆ ದೌಡಾಯಿಸಿದೆ. ಅಸ್ಸಾಂ ಕಾಂಗ್ರೆಸ್ ಅಭ್ಯರ್ಥಿಗಳ...

ಸರ್ಕಾರದ ಭರವಸೆಗೆ ಮಣಿಯದ ಸಾರಿಗೆ ಸಿಬ್ಬಂದಿ : ಮುಷ್ಕರ ಮುಂದುವರಿಸಲು ನಿರ್ಧಾರ

ಹಿಂಬಾಕಿ ಪಾವತಿ, ವೇತನ ಪರಿಷ್ಕರಣೆ ಸೇರಿದಂತೆ ವಿವಿಧ ಬೇಡಿಕೆಗಳನ್ನು ಮುಂದಿಟ್ಟುಕೊಂಡು ರಾಜ್ಯದ ನಾಲ್ಕು ಸಾರಿಗೆ ನಿಗಮಗಳಾದ ಕೆಎಸ್‌ಆರ್‌ಟಿಸಿ, ಕೆಕೆಆರ್‌ಟಿಸಿ, ಎನ್‌ಡಬ್ಲ್ಯುಕೆಆರ್‌ಟಿಸಿ ಹಾಗೂ ಬಿಎಂಟಿಸಿಯ ನೌಕರರು ಇಂದು (ಫೆ.19) ಮುಷ್ಕರಕ್ಕೆ ಕರೆ ಕೊಟ್ಟಿದ್ದಾರೆ. ನೌಕರರ ಪ್ರತಿಭಟನೆ...

ಬೆಂಗಳೂರಿನ ಅಪಾರ್ಟ್‌ಮೆಂಟ್‌ನಲ್ಲಿ ಪತ್ನಿಯ ಕತ್ತು ಹಿಸುಕಿ ಕೊಂದ ನಿವೃತ್ತ ಇಸ್ರೋ ಉದ್ಯೋಗಿ ಬಂಧನ

ಬೆಂಗಳೂರು: ಆಘಾತಕಾರಿ ಘಟನೆಯೊಂದರಲ್ಲಿ, 72 ವರ್ಷದ ನಿವೃತ್ತ ಇಸ್ರೋ ಉದ್ಯೋಗಿಯೊಬ್ಬರು ವೈಟ್‌ಫೀಲ್ಡ್ ವಿಭಾಗದ ಆವಲಹಳ್ಳಿ ಪೊಲೀಸ್ ಠಾಣೆ ವ್ಯಾಪ್ತಿಯ ತಮ್ಮ ಅಪಾರ್ಟ್‌ಮೆಂಟ್‌ನಲ್ಲಿ ಬುಧವಾರ ಪತ್ನಿಯನ್ನು ಕತ್ತು ಹಿಸುಕಿ ಕೊಂದಿರುವುದಾಗಿ ವರದಿಯಾಗಿದೆ.  ಬೊಮ್ಮನಹಳ್ಳಿಯ ಅಪಾರ್ಟ್‌ಮೆಂಟ್‌ನಲ್ಲಿ ಬೆಳಿಗ್ಗೆ...

ಮಧ್ಯಪ್ರದೇಶದಲ್ಲಿ ಶಾಸಕ ರಾಜಾ ಸಿಂಗ್‌ನಿಂದ ದ್ವೇಷ ಭಾಷಣ; ಪ್ರಚೋದನಕಾರಿ ‘ಶಿರಚ್ಛೇದನ’ ಹೇಳಿಕೆಗೆ ವಿರೋಧ

ತಮ್ಮ ಪ್ರಚೋದನಕಾರಿ ಹೇಳಿಕೆಗಳಿಂದಲೇ ಕುಖ್ಯಾತರಾಗಿರುವ ಹೈದರಾಬಾದ್‌ನ ಗೋಶಮಹಲ್ ಶಾಸಕ ಟಿ ರಾಜಾ ಸಿಂಗ್ ಸಾರ್ವಜನಿಕ ರ‍್ಯಾಲಿಯಲ್ಲಿ ಮತ್ತೊಮ್ಮೆ ಪ್ರಚೋದನಕಾರಿ ಹೇಳಿಕೆಗಳನ್ನು ನೀಡಿದ್ದಾರೆ. ಮಧ್ಯಪ್ರದೇಶದಲ್ಲಿ ಅವರು ಆಡಿದ ಮಾತುಗಳು ವಿವಾದಕ್ಕೆ ಕಾರಣವಾಗಿದೆ. "ಪ್ರತಿಯೊಬ್ಬ ಬಜರಂಗಿಗಳು...

ಪಂಜಾಬ್ ವಿಶ್ವವಿದ್ಯಾಲಯದಲ್ಲಿ ಜಾತಿ ಆಧಾರಿತ ತಾರತಮ್ಯ ಆರೋಪ; ‘ಬಡ್ತಿ ವಿಳಂಬವಾಗಿದೆ..’; ಎಂದ ದಲಿತ ಪ್ರಾಧ್ಯಾಪಕ

ಪಂಜಾಬ್ ವಿಶ್ವವಿದ್ಯಾಲಯದ ದಲಿತ ಸಹಾಯಕ ಪ್ರಾಧ್ಯಾಪಕ ಹರ್‌ಪ್ರೀತ್ ಸಿಂಗ್ ಅವರು ವಿಶ್ವವಿದ್ಯಾಲಯದಲ್ಲಿ ಜಾತಿ ಆಧಾರಿತ ತಾರತಮ್ಯ ಇದೆ ಎಂದು ಸಾರ್ವಜನಿಕವಾಗಿ ಆರೋಪಿಸಿದ್ದಾರೆ. ತನ್ನ ಜಾತಿಯ ಕಾರಣದಿಂದಾಗಿ ಉದ್ದೇಶಪೂರ್ವಕವಾಗಿ ಬಡ್ತಿ ವಿಳಂಬ ಮಾಡಲಾಗಿದೆ...