Homeಮುಖಪುಟಕೃಷಿ ಕಾಯ್ದೆಗಳು & ರೈತ ಹೋರಾಟದ ಕುರಿತು ಇಂದು ಸುಪ್ರೀಂ ಕೋರ್ಟ್‌‌ನಲ್ಲಿನ ವಾದ-ವಿವಾದ ಹೀಗಿತ್ತು..

ಕೃಷಿ ಕಾಯ್ದೆಗಳು & ರೈತ ಹೋರಾಟದ ಕುರಿತು ಇಂದು ಸುಪ್ರೀಂ ಕೋರ್ಟ್‌‌ನಲ್ಲಿನ ವಾದ-ವಿವಾದ ಹೀಗಿತ್ತು..

ಇಂದು ಸುಪ್ರೀಂನಲ್ಲಿ ನಡೆದ ಚರ್ಚೆಗಳಿಗೆ ಪ್ರತಿಕ್ರಿಯಿಸಿದ ಹೋರಾಟ ನಿರತ ರೈತರು, ’ನಮ್ಮನ್ನು ದೆಹಲಿಯಿಂದ ಹೊರಹಾಕುವ ಪ್ರಯತ್ನವಿದು. ಕಾನೂನು ಜಾರಿಗೆ ತಾತ್ಕಲಿಕ ತಡೆ ತರುವುದಲ್ಲ, ಕಾನೂನು ಹಿಂಪಡೆಯಬೇಕೆಂಬುದೇ ನಮ್ಮ ಆಗ್ರಹ’ ಎಂದಿದ್ದಾರೆ

- Advertisement -
- Advertisement -

ವಿವಾದಾತ್ಮಕ ನೂತನ ಕೃಷಿ ಕಾಯ್ದೆಗಳ ವಿರುದ್ಧ ದೆಹಲಿಯ ಗಡಿಗಳಲ್ಲಿ ಪ್ರತಿಭಟನಾನಿರತರಾಗಿರುವ ರೈತರನ್ನು ತೆರವುಗೊಳಿಸುವಂತೆ ಕೋರಿ ಸಲ್ಲಿಕೆಯಾಗಿರುವ ಅರ್ಜಿಗಳ ವಿಚಾರಣೆಯನ್ನು ಸೋಮವಾರ ಕೈಗೆತ್ತಿಕೊಂಡ ಮುಖ್ಯ ನ್ಯಾಯಮೂರ್ತಿ ಎಸ್‌ ಎ ಬೊಬ್ಡೆ ನೇತೃತ್ವದ ಸುಪ್ರೀಂ ಕೋರ್ಟ್‌ ಪೀಠ ಕೇಂದ್ರವನ್ನು ತರಾಟೆಗೆ ತೆಗೆದುಕೊಂಡಿತು. ಸುಪ್ರೀಂನಲ್ಲಿ ನಡೆದ ವಾದ-ವಿವಾದ ಹೀಗಿತ್ತು.

ಕೇಂದ್ರ ಸರ್ಕಾರ ರೈತ ಪ್ರತಿಭಟನೆಯನ್ನು ನಿಭಾಯಿಸಿದ ರೀತಿ ನಿಜಕ್ಕೂ ಅತೀವ ನಿರಾಶೆ ಉಂಟು ಮಾಡಿದೆ. ಈ ಕಾನೂನು ಜಾರಿಗೆ ತರಲು ಕೇಂದ್ರ ಸರ್ಕಾರ ಯಾವ ರೀತಿಯ ಸಮಾಲೋಚನಾ ಪ್ರಕ್ರಿಯೆ ಅನುಸರಿಸಿದೆಯೋ ಗೊತ್ತಿಲ್ಲ. ಆದರೆ ಈ ಕಾನೂನಗಳ ವಿರುದ್ಧ ಹಲವು ರಾಜ್ಯಗಳ ರೈತರು ಬಂಡೆದಿದ್ದಾರೆ ಎಂದು ಕೋರ್ಟ್‌ ಹೇಳಿದೆ.

ಸರ್ಕಾರದ ಪರ ವಕೀಲ, ಅಟರ್ನಿ ಜನರಲ್‌ ಕೆ ಕೆ ವೇಣುಗೋಪಾಲ್‌, ಹಿಂದಿನ ಸರ್ಕಾರ ತಜ್ಞ ಸಮಿತಿಯ ಶಿಫಾರಸಿನ ಆಧಾರದ ಮೇಲೆ ಈ ಕಾನೂನುಗಳನ್ನು ರೂಪಿಸಲಾಗಿದೆ. ಎಪಿಎಂಪಿ ವ್ಯವಸ್ಥೆಯಲ್ಲಿ ನಿರ್ಬಂಧಗಳನ್ನು ತೆಗೆದು ಹಾಕಲು ಮತ್ತು ನೇರ ಮಾರುಕಟ್ಟೆಗೆ ಮುಕ್ತ ಅವಕಾಶ ಕಲ್ಪಿಸುವಂತೆ ಸಮಿತಿಗಳು ಸಲಹೆ ನೀಡಿದ್ದವು ಎಂದು ಸಮಜಾಯಿಷಿ ನೀಡಿದರು.

“ನಮ್ಮ ಉದ್ದೇಶ ಸ್ಪಷ್ಟ. ಸಮಸ್ಯೆಗೆ ಸೌಹಾರ್ದಯುತವಾದ ಪರಿಹಾರ ಕಂಡುಕೊಳ್ಳಬೇಕು. ಇದೇ ಕಾರಣಕ್ಕೆ ಕಳೆದ ಬಾರಿಯೇ ಈ ಕಾನೂನುಗಳಿಗೆ ತಾತ್ಕಲಿಕವಾಗಿ ತಡೆಯಬಾರದೇಕೆ ಎಂದು ಕೇಳಿದ್ದೆವು. ಆದರೆ ನೀವು ಮತ್ತೆ ಮತ್ತೆ ಸಮಯಾವಕಾಶ ಕೇಳುತ್ತಿದ್ದೀರಿ” ಎಂದು ನ್ಯಾಯಪೀಠ ಹೇಳಿತು.

ನಿಮಗೆ ಕೊಂಚವಾದರೂ ಹೊಣೆಗಾರಿಕೆ ಪ್ರಜ್ಞೆ ಎಂಬುದಿದ್ದರೆ ಮತ್ತು ನೀವು ಕಾನೂನುಗಳ ಜಾರಿಯನ್ನು ತಡೆಯುವುದಾಗಿ ನೀವು ಹೇಳುವಿರಾದರೆ, ನಾವು ಸಮಿತಿಯೊಂದನ್ನು ಈ ವಿಷಯ ನಿರ್ಧರಿಸುವುದಕ್ಕೆ ರಚಿಸುತ್ತೇವೆ. ಈ ಕಾನೂನುಗಳು ಜಾರಿಯಾಗಲೇ ಬೇಕು ಎಂದು ಪಟ್ಟುಹಿಡಿಯುವುದಕ್ಕೆ ಕಾರಣ ಕಾಣುತ್ತಿಲ್ಲ ಎಂದು ನ್ಯಾಯಪೀಠ ಹೇಳಿತು.

ಸಾಲಿಸಿಟರ್‌ ಜನರಲ್‌ ತುಷಾರ್‌ ಮೆಹ್ತಾ, ನ್ಯಾಯಪೀಠ ಕೇಳಿದ ಪ್ರಶ್ನೆಗೆ ಉತ್ತರಿಸುತ್ತಾ, ನಾವು ಪರಿಹಾರದ ಭಾಗವಾಗಿದ್ದೇವೆ. ಈ ಕಾನೂನುಗಳು ಪ್ರಗತಿಪರವಾಗಿ ಎಂದು ಹೇಳುವ ಹಲವು ರೈತ ಸಂಘಟನೆಗಳಿವೆ ಎಂದು ಸರ್ಕಾರದ ಪರ ವಕಾಲತ್ತು ನೀಡಿದರು.

‘ಆದರೆ ಇದುವರೆಗೂ ಈ ಕಾನೂನುಗಳು ಉತ್ತಮವಾಗಿವೆ ಎಂದು ಸಮರ್ಥಿಸುವ ಒಂದೇ ಒಂದು ಪಿಟಿಷನ್‌ ಬಂದಿಲ್ಲ’ ಎಂದು ಬೋಬ್ಡೆ ನೇತೃತ್ವದ ನ್ಯಾಯಪೀಠ ತಿರುಗೇಟು ನೀಡಿತು.

ವಾದ ಮುಂದುವರೆಸಿದ ಸಾಲಿಸಿಟರ್‌ ಜನರಲ್‌, ಕೆಲವು ಗುಂಪುಗಳು ಪ್ರತಿಭಟಿಸಿದವು ಎಂಬ ಕಾರಣಕ್ಕೆ ನಮಗೆ ಲಾಭದಾಯಕವಾಗಿದ್ದ ಕಾನೂನುಗಳನ್ನು ಯಾಕೆ ತಡೆದಿರಿ ಎಂದು ಕೇಳಿದರೆ ಏನು ಮಾಡುವುದು ಎಂಬ ತಕರಾರನ್ನು ನ್ಯಾಯಪೀಠದ ಮುಂದೆ ಇಟ್ಟರು.

ನ್ಯಾಯಪೀಠ, ನಾವು ಇದರಲ್ಲಿ ಭಾಗಿಯಾಗಬಯಸುವುದಿಲ್ಲ. ಇದನ್ನು ಸಮಿತಿ ಚರ್ಚಿಸಲಿ ಎಂದು ಉತ್ತರಿಸಿ, ಕೇಂದ್ರ ಸರ್ಕಾರಕ್ಕೆ ಸಮಿತಿ ನೇಮಿಸಲಾಗದಿದ್ದರೆ, ನಾವೇ ನೇಮಿಸುವುದಾಗಿ ಖಾರವಾಗಿ ಉತ್ತರಿಸಿತು.

ಜನ ಚಳಿಯಲ್ಲಿ ಕಷ್ಟ ಅನುಭವಿಸುತ್ತಿದ್ದಾರೆ. ಆತ್ಮಹತ್ಯೆ ಮಾಡಿಕೊಳ್ಳುತ್ತಿದ್ದಾರೆ. ಪರಿಸ್ಥಿತಿ ಬಿಗಡಾಯಿಸುತ್ತಿದೆ. ಈ ಕುರಿತು ನೀವು ಯಾವುದೇ ಪ್ರತಿಕ್ರಿಯೆ ನೀಡಿಲ್ಲ ಎಂದು ಕೋರ್ಟ್‌ ಅಸಮಾಧಾನ ವ್ಯಕ್ತಪಡಿಸಿತು.

ರೈತ ಮುಖಂಡರು ಮತ್ತು ಸರ್ಕಾರದ ನಡುವೆ ನಡೆಯುತ್ತಿರುವ ಮಾತುಕತೆಗಳು ಬಿದ್ದು ಹೋಗುತ್ತಿವೆ. ಸರ್ಕಾರ ಅನುಚ್ಛೇದಗಳ ಮೇಲೆ ಚರ್ಚೆ ನಡೆಸಲು ಬಯಸುತ್ತಿದೆ. ಆದರೆ ರೈತರು ಕಾಯ್ದೆ ಹಿಂಪಡೆಯುವುದಕ್ಕೆ ಪಟ್ಟು ಹಿಡಿದಿದ್ದಾರೆ. ಹಾಗಾಗಿ ಸಮಿತಿ ನಿರ್ಣಯದವರೆಗೆ ಕಾಯ್ದೆಗಳ ಜಾರಿಯನ್ನು ತಡೆಯಲು ಸೂಚಿಸುತ್ತೇವೆ ಎಂದು ಬೋಬ್ಡೆ ನೇತೃತ್ವದ ನ್ಯಾಯಪೀಠ ಹೇಳಿತು.

‘ಆದರೆ, ಒಂದು ವೇಳೆ ಕಾಯ್ದೆ ಜಾರಿಯಾಗುವುದನ್ನು ತಡೆ ಹಿಡಿದರೆ, ಪ್ರತಿಭಟನೆಯನ್ನು ಸ್ಥಳಾಂತರಿಸಬಹುದೆ? ಯಾರಾದರೂ ಈ ಶಾಂತಿ ಕದಡುವ ಪ್ರಯತ್ನ ಮಾಡಬಹುದು ಎಂಬ ಆತಂಕವಿದೆ. ಹಾಗೇನಾದರೂ ಆದರೆ ನಾವೆಲ್ಲರೂ ಅದಕ್ಕೆ ಹೊಣೆಗಾರರಾಗಿರುತ್ತೇವೆ. ನಮ್ಮ ಕೈಗಳಿಗೆ ರಕ್ತ, ಗಾಯಗಳು ಅಂಟಿಕೊಳ್ಳುವುದು ಬೇಡ” ಎಂದು ನ್ಯಾಯಪೀಠ ಹೇಳಿತು.

ಎರಡೂ ಗಂಟೆಗಳ ಕಾಲ ವಾದ ವಿವಾದ ಬಳಿಕ ಸಮಿತಿ ರಚನೆಗೆ ಸೂಚಿಸಿದ್ದು, ಸಮಿತಿ ನಿರ್ಧಾರಗಳ ಆಧಾರದ ಮೇಲೆ ತೀರ್ಪು ತೆಗೆದುಕೊಳ್ಳಲಾಗುವುದು ಎಂದು ಬೋಬ್ಡೆ, ಎ ಎಸ್‌ ಬೋಪಣ್ಣ ಮತ್ತು ವಿ ರಾಮಾಸುಬ್ರಮಣ್ಯನ್‌ ಒಳಗೊಂಡ ಪೀಠ ತಿಳಿಸಿತು.

ಇನ್ನೊಂದೆಡೆ ಸುಪ್ರೀಂ ಆದೇಶದ ಕುರಿತು ಪ್ರತಿಕ್ರಿಯಿಸಿರುವ ದೆಹಲಿಯಲ್ಲಿನ ಧರಣಿ ನಿರತ ರೈತರು ಕಾಯ್ದೆಗಳಿಗೆ ತಾತ್ಕಾಲಿಕ ತಡೆ ತಂದಿದ್ದಾರೆ. ಆದರೆ ಕರಾಳ ಕೃಷಿ ಕಾಯ್ದೆಗಳು ಸಂಪೂರ್ಣ ವಾಪಸ್ ಆಗಬೇಕು ಎನ್ನುವುದು ನಮ್ಮ ಹಕ್ಕೊತ್ತಾಯ. ತಾತ್ಕಾಲಿಕ ತಡೆಯ ಮುಖಾಂತರ ರೈತರನ್ನು ಇಲ್ಲಿಂದ ಒಕ್ಕಲೆಬ್ಬಿಸುವ ಹುನ್ನಾರವಿದೆಯೆಂಬ ಅನುಮಾನವಿದೆ. ಅದಕ್ಕೆ ನಾವು ಆಸ್ಪದ ಕೊಡುವುದಿಲ್ಲ, ಹೋರಾಟ ಮುಂದುವರೆಸುತ್ತೇವೆ ಎಂದು ನಾನುಗೌರಿ.ಕಾಂಗೆ ತಿಳಿಸಿದ್ದಾರೆ.


ಇದನ್ನೂ ಓದಿ: ಹೊಸ ಚರಿತ್ರೆ ಬರಿಯಲಿರುವ ಜನವರಿ 26ರ ರೈತ ಹೋರಾಟ: ಇದರಲ್ಲಿ ನಿಮ್ಮ ಪಾತ್ರವೇನು?

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

1 COMMENT

LEAVE A REPLY

Please enter your comment!
Please enter your name here

- Advertisment -

ಜಾತಿ ತಾರತಮ್ಯ ತಡೆಗಟ್ಟುವ ಯುಜಿಸಿಯ ಹೊಸ ನಿಯಮಕ್ಕೆ ಸುಪ್ರೀಂ ಕೋರ್ಟ್ ತಡೆ

ಉನ್ನತ ಶಿಕ್ಷಣ ಸಂಸ್ಥೆಗಳಲ್ಲಿ ಜಾತಿ ಆಧಾರಿತ ತಾರತಮ್ಯವನ್ನು ತಡೆಗಟ್ಟಲು ಕೇಂದ್ರ ಸರ್ಕಾರ ಜಾರಿಗೆ ತಂದಿರುವ ವಿಶ್ವವಿದ್ಯಾಲಯ ಅನುದಾನ ಆಯೋಗದ (ಉನ್ನತ ಶಿಕ್ಷಣ ಸಂಸ್ಥೆಗಳಲ್ಲಿ ಸಮಾನತೆಯ ಪ್ರಚಾರ) ನಿಯಮಗಳು, 2026ಕ್ಕೆ ಸುಪ್ರೀಂ ಕೋರ್ಟ್ ಗುರುವಾರ...

ರಾಜಸ್ಥಾನ| ಸಾರ್ವಜನಿಕ ಕಾರ್ಯಕ್ರಮದಲ್ಲಿ ವೃದ್ಧ ಮಹಿಳೆಯನ್ನು ಕಾಲಿನಿಂದ ಒದ್ದ ವ್ಯಕ್ತಿ

ರಾಜಸ್ಥಾನದ ಬಾರ್ಮರ್ ಜಿಲ್ಲೆಯಲ್ಲಿ ನಡೆಯುತ್ತಿದ್ದ ಸಾರ್ವಜನಿಕ ಕಾರ್ಯಕ್ರಮವೊಂದರಲ್ಲಿ ವೃದ್ಧ ಮಹಿಳೆಯನ್ನು ಒದೆಯುವ ವೀಡಿಯೊ ಸಾಮಾಜಿಕ ಮಾಧ್ಯಮದಲ್ಲಿ ವೈರಲ್ ಆದ ನಂತರ ವ್ಯಕ್ತಿಯನ್ನು ಬಂಧಿಸಲಾಗಿದೆ. ಆತನ ಕೃತ್ಯದ ವಿರುದ್ಧ ವ್ಯಾಪಕ ಆಕ್ರೋಶಕ್ಕೆ ವ್ಯಕ್ತವಾಗಿದೆ. ಜತೋನ್ ಕಾ...

ಅಜಿತ್ ಪವಾರ್ ವಿಮಾನ ದುರಂತ: ಅಪಘಾತ ಸ್ಥಳದಲ್ಲಿ ಬ್ಲಾಕ್ ಬಾಕ್ಸ್ ಪತ್ತೆ..!

ನವದೆಹಲಿ: ಮಹಾರಾಷ್ಟ್ರ ಉಪಮುಖ್ಯಮಂತ್ರಿ ಅಜಿತ್ ಪವಾರ್ ಮತ್ತು ಇತರ ನಾಲ್ವರು ಸಾವನ್ನಪ್ಪಿದ ಬಾರಾಮತಿ ವಿಮಾನ ನಿಲ್ದಾಣದಲ್ಲಿ ಬುಧವಾರ ಸಂಭವಿಸಿದ ವಿಮಾನ ಅಪಘಾತದ ತನಿಖೆಯ ಕುರಿತು ನಾಗರಿಕ ವಿಮಾನಯಾನ ಸಚಿವಾಲಯ (MoCA) ಗುರುವಾರ ಹೇಳಿಕೆ...

ಮೀಸಲಾತಿಗಾಗಿ ಪ್ರಬಲ ಜಾತಿಯ ವ್ಯಕ್ತಿ ಬೌದ್ಧ ಧರ್ಮಕ್ಕೆ ಮತಾಂತರ : ಹೊಸ ಬಗೆಯ ವಂಚನೆ ಎಂದ ಸುಪ್ರೀಂ ಕೋರ್ಟ್

ಇಬ್ಬರು ಪ್ರಬಲ ಜಾತಿ ಅಭ್ಯರ್ಥಿಗಳು ಬೌದ್ಧ ಧರ್ಮಕ್ಕೆ ಮತಾಂತರಗೊಂಡಿರುವ ಬಗ್ಗೆ ಮಂಗಳವಾರ (ಜ.27) ಸುಪ್ರೀಂ ಕೋರ್ಟ್ ಗಂಭೀರ ಅನುಮಾನ ವ್ಯಕ್ತಪಡಿಸಿದ್ದು, ಈ ನಡೆಯು ಸ್ನಾತಕೋತ್ತರ ವೈದ್ಯಕೀಯ ಕೋರ್ಸ್‌ಗಳಿಗೆ ಅಲ್ಪಸಂಖ್ಯಾತ ಕೋಟಾದ ಅಡಿಯಲ್ಲಿ ಪ್ರವೇಶ...

ವಿಮಾನ ಪತನ : ಸಂಸದ ಸೇರಿ 15 ಜನರು ಸಾವು

ಬುಧವಾರ (ಜ.28) ಸರ್ಕಾರಿ ಸ್ವಾಮ್ಯದ ವಿಮಾನಯಾನ ಸಂಸ್ಥೆ ಸಟೇನಾ ನಿರ್ವಹಿಸುತ್ತಿದ್ದ ಸಣ್ಣ ಪ್ರಯಾಣಿಕ ವಿಮಾನವು ಈಶಾನ್ಯ ಕೊಲಂಬಿಯಾದ ಪರ್ವತ ಪ್ರದೇಶದಲ್ಲಿ ಪತನಗೊಂಡು ಎಲ್ಲಾ 15 ಪ್ರಯಾಣಿಕರು ಜನರು ಸಾವಿಗೀಡಾಗಿದ್ದಾರೆ. ದುರಂತದ ಕಾರಣ ಇನ್ನೂ ಸ್ಪಷ್ಟವಾಗಿಲ್ಲ....

‘ವಿಳಂಬವಾದರೂ ಸ್ವಾಗತಾರ್ಹ ಹೆಜ್ಜೆ..’; ಕೇಂದ್ರದ ಯುಜಿಸಿ ನಿಯಮಗಳನ್ನು ಪ್ರಶಂಸಿದ ಸಿಎಂ ಸ್ಟಾಲಿನ್

ಯುಜಿಸಿ (ಉನ್ನತ ಶಿಕ್ಷಣ ಸಂಸ್ಥೆಗಳಲ್ಲಿ ಈಕ್ವಿಟಿ ಪ್ರಚಾರ) ನಿಯಮಗಳು, 2026 "ಆಳವಾಗಿ ಬೇರೂರಿರುವ ತಾರತಮ್ಯ ಮತ್ತು ಸಾಂಸ್ಥಿಕ ನಿರಾಸಕ್ತಿಯಿಂದ ಬಳಲುತ್ತಿರುವ ಉನ್ನತ ಶಿಕ್ಷಣ ವ್ಯವಸ್ಥೆಯನ್ನು ಸುಧಾರಿಸುವಲ್ಲಿ ವಿಳಂಬವಾದರೂ ಸ್ವಾಗತಾರ್ಹ ಹೆಜ್ಜೆಯಾಗಿದೆ" ಎಂದು ತಮಿಳುನಾಡು...

ಹಿರಿಯ ಕಾರ್ಮಿಕ ಮುಖಂಡ ಅನಂತ ಸುಬ್ಬರಾವ್ ನಿಧನ

ಕಳೆದ ನಾಲ್ಕು ದಶಕಗಳಿಂದ ಸಾರಿಗೆ ಕ್ಷೇತ್ರದ ಕಾರ್ಮಿಕರ ಪರವಾಗಿ ಧ್ವನಿ ಎತ್ತುತ್ತಿದ್ದ, ಕಾರ್ಮಿಕರ ಹಿತರಕ್ಷಣೆಗಾಗಿ ನಿರಂತರ ಹೋರಾಟ ನಡೆಸುತ್ತಿದ್ದ ಹಿರಿಯ ಕಾರ್ಮಿಕ ಮುಖಂಡ ಎಚ್‌.ವಿ ಅನಂತ ಸುಬ್ಬರಾವ್ ಅವರು ಜನವರಿ 28ರಂದು, ನಿಧನರಾಗಿದ್ದಾರೆ....

ಮುಡಾ ಪ್ರಕರಣ: ಸಿದ್ದರಾಮಯ್ಯಗೆ ಬಿಗ್ ರಿಲೀಫ್, ಲೋಕಾಯುಕ್ತ ಬಿ ರಿಪೋರ್ಟ್ ಪುರಸ್ಕರಿಸಿದ ಕೋರ್ಟ್

ಮೈಸೂರು ನಗರಾಭಿವೃದ್ಧಿ ಪ್ರಾಧಿಕಾರ (ಮುಡಾ) ಪ್ರಕರಣಕ್ಕೆ ಸಂಬಂಧಿಸಿದಂತೆ ಲೋಕಾಯುಕ್ತ ಪೊಲೀಸರು ಮುಖ್ಯಮಂತ್ರಿ ಸಿದ್ದರಾಮಯ್ಯ ಮತ್ತು ಅವರ ಕುಟುಂಬದ ವಿರುದ್ಧ ಪುರಾವೆಗಳಿಲ್ಲ ಎಂದು ಹೇಳಿ ‘ಕ್ಲೀನ್ ಚೀಟ್’ ನೀಡಿ ‘ಬಿ’ ರಿಪೋರ್ಟ್ ಅನ್ನು ಸಲ್ಲಿಸಿತ್ತು....

ಪಿಟಿಸಿಎಲ್‌ ಕಾಯ್ದೆ ತಿದ್ದುಪಡಿ- ಕೋರ್ಟ್‌ಗಳಲ್ಲಿ ದಲಿತರಿಗೆ ಆಗುತ್ತಿರುವ ಅನ್ಯಾಯ ಖಂಡಿಸಿ ರಾಜ್ಯದಾದ್ಯಂತ ಪ್ರತಿಭಟನೆ

ಪಿಟಿಸಿಎಲ್‌ ಕಾಯ್ದೆ, 1978ರ 2023ರ ತಿದ್ದುಪಡಿ ಕಾಯ್ದೆಯ ವಿರೋಧಿಸಿ ಹಾಗೂ ಕಂದಾಯ ಇಲಾಖೆಯ ಎಸಿ, ಡಿಸಿ ನ್ಯಾಯಾಲಯಗಳು ಹಾಗೂ ಹೈಕೋರ್ಟ್, ಸುಪ್ರೀಂ ಕೋರ್ಟ್‌ಗಳಲ್ಲಿ ಆಗುತ್ತಿರುವ ಅನ್ಯಾಯವನ್ನು ಖಂಡಿಸಿ ರಾಜ್ಯದ ಎಲ್ಲ ಜಿಲ್ಲಾ ಕೇಂದ್ರಗಳಲ್ಲಿ...

ಲೈಂಗಿಕ ದೌರ್ಜನ್ಯ ಪ್ರಕರಣದಲ್ಲಿ ಉಚ್ಚಾಟಿತ ಕಾಂಗ್ರೆಸ್ ಶಾಸಕ ರಾಹುಲ್ ಮಮ್‌ಕೂಟತಿಲ್‌ಗೆ ಜಾಮೀನು

ಪತ್ತನಂತಿಟ್ಟ: ಈ ತಿಂಗಳ ಆರಂಭದಲ್ಲಿ ಬಂಧಿಸಲ್ಪಟ್ಟ ಮೂರನೇ ಲೈಂಗಿಕ ದೌರ್ಜನ್ಯ ಪ್ರಕರಣದಲ್ಲಿ ಉಚ್ಚಾಟಿತ ಕಾಂಗ್ರೆಸ್ ಶಾಸಕ ರಾಹುಲ್ ಮಮ್‌ಕೂಟತಿಲ್ ಅವರಿಗೆ ಕೇರಳ ನ್ಯಾಯಾಲಯ ಬುಧವಾರ ಜಾಮೀನು ನೀಡಿದೆ. ಶಾಸಕರು ಸಲ್ಲಿಸಿದ್ದ ಮೇಲ್ಮನವಿಯನ್ನು ಪರಿಗಣಿಸಿದ್ದ ಪತ್ತನಂತಿಟ್ಟ...