Homeಮುಖಪುಟಕೃಷಿ ಕಾಯ್ದೆಗಳು & ರೈತ ಹೋರಾಟದ ಕುರಿತು ಇಂದು ಸುಪ್ರೀಂ ಕೋರ್ಟ್‌‌ನಲ್ಲಿನ ವಾದ-ವಿವಾದ ಹೀಗಿತ್ತು..

ಕೃಷಿ ಕಾಯ್ದೆಗಳು & ರೈತ ಹೋರಾಟದ ಕುರಿತು ಇಂದು ಸುಪ್ರೀಂ ಕೋರ್ಟ್‌‌ನಲ್ಲಿನ ವಾದ-ವಿವಾದ ಹೀಗಿತ್ತು..

ಇಂದು ಸುಪ್ರೀಂನಲ್ಲಿ ನಡೆದ ಚರ್ಚೆಗಳಿಗೆ ಪ್ರತಿಕ್ರಿಯಿಸಿದ ಹೋರಾಟ ನಿರತ ರೈತರು, ’ನಮ್ಮನ್ನು ದೆಹಲಿಯಿಂದ ಹೊರಹಾಕುವ ಪ್ರಯತ್ನವಿದು. ಕಾನೂನು ಜಾರಿಗೆ ತಾತ್ಕಲಿಕ ತಡೆ ತರುವುದಲ್ಲ, ಕಾನೂನು ಹಿಂಪಡೆಯಬೇಕೆಂಬುದೇ ನಮ್ಮ ಆಗ್ರಹ’ ಎಂದಿದ್ದಾರೆ

- Advertisement -
- Advertisement -

ವಿವಾದಾತ್ಮಕ ನೂತನ ಕೃಷಿ ಕಾಯ್ದೆಗಳ ವಿರುದ್ಧ ದೆಹಲಿಯ ಗಡಿಗಳಲ್ಲಿ ಪ್ರತಿಭಟನಾನಿರತರಾಗಿರುವ ರೈತರನ್ನು ತೆರವುಗೊಳಿಸುವಂತೆ ಕೋರಿ ಸಲ್ಲಿಕೆಯಾಗಿರುವ ಅರ್ಜಿಗಳ ವಿಚಾರಣೆಯನ್ನು ಸೋಮವಾರ ಕೈಗೆತ್ತಿಕೊಂಡ ಮುಖ್ಯ ನ್ಯಾಯಮೂರ್ತಿ ಎಸ್‌ ಎ ಬೊಬ್ಡೆ ನೇತೃತ್ವದ ಸುಪ್ರೀಂ ಕೋರ್ಟ್‌ ಪೀಠ ಕೇಂದ್ರವನ್ನು ತರಾಟೆಗೆ ತೆಗೆದುಕೊಂಡಿತು. ಸುಪ್ರೀಂನಲ್ಲಿ ನಡೆದ ವಾದ-ವಿವಾದ ಹೀಗಿತ್ತು.

ಕೇಂದ್ರ ಸರ್ಕಾರ ರೈತ ಪ್ರತಿಭಟನೆಯನ್ನು ನಿಭಾಯಿಸಿದ ರೀತಿ ನಿಜಕ್ಕೂ ಅತೀವ ನಿರಾಶೆ ಉಂಟು ಮಾಡಿದೆ. ಈ ಕಾನೂನು ಜಾರಿಗೆ ತರಲು ಕೇಂದ್ರ ಸರ್ಕಾರ ಯಾವ ರೀತಿಯ ಸಮಾಲೋಚನಾ ಪ್ರಕ್ರಿಯೆ ಅನುಸರಿಸಿದೆಯೋ ಗೊತ್ತಿಲ್ಲ. ಆದರೆ ಈ ಕಾನೂನಗಳ ವಿರುದ್ಧ ಹಲವು ರಾಜ್ಯಗಳ ರೈತರು ಬಂಡೆದಿದ್ದಾರೆ ಎಂದು ಕೋರ್ಟ್‌ ಹೇಳಿದೆ.

ಸರ್ಕಾರದ ಪರ ವಕೀಲ, ಅಟರ್ನಿ ಜನರಲ್‌ ಕೆ ಕೆ ವೇಣುಗೋಪಾಲ್‌, ಹಿಂದಿನ ಸರ್ಕಾರ ತಜ್ಞ ಸಮಿತಿಯ ಶಿಫಾರಸಿನ ಆಧಾರದ ಮೇಲೆ ಈ ಕಾನೂನುಗಳನ್ನು ರೂಪಿಸಲಾಗಿದೆ. ಎಪಿಎಂಪಿ ವ್ಯವಸ್ಥೆಯಲ್ಲಿ ನಿರ್ಬಂಧಗಳನ್ನು ತೆಗೆದು ಹಾಕಲು ಮತ್ತು ನೇರ ಮಾರುಕಟ್ಟೆಗೆ ಮುಕ್ತ ಅವಕಾಶ ಕಲ್ಪಿಸುವಂತೆ ಸಮಿತಿಗಳು ಸಲಹೆ ನೀಡಿದ್ದವು ಎಂದು ಸಮಜಾಯಿಷಿ ನೀಡಿದರು.

“ನಮ್ಮ ಉದ್ದೇಶ ಸ್ಪಷ್ಟ. ಸಮಸ್ಯೆಗೆ ಸೌಹಾರ್ದಯುತವಾದ ಪರಿಹಾರ ಕಂಡುಕೊಳ್ಳಬೇಕು. ಇದೇ ಕಾರಣಕ್ಕೆ ಕಳೆದ ಬಾರಿಯೇ ಈ ಕಾನೂನುಗಳಿಗೆ ತಾತ್ಕಲಿಕವಾಗಿ ತಡೆಯಬಾರದೇಕೆ ಎಂದು ಕೇಳಿದ್ದೆವು. ಆದರೆ ನೀವು ಮತ್ತೆ ಮತ್ತೆ ಸಮಯಾವಕಾಶ ಕೇಳುತ್ತಿದ್ದೀರಿ” ಎಂದು ನ್ಯಾಯಪೀಠ ಹೇಳಿತು.

ನಿಮಗೆ ಕೊಂಚವಾದರೂ ಹೊಣೆಗಾರಿಕೆ ಪ್ರಜ್ಞೆ ಎಂಬುದಿದ್ದರೆ ಮತ್ತು ನೀವು ಕಾನೂನುಗಳ ಜಾರಿಯನ್ನು ತಡೆಯುವುದಾಗಿ ನೀವು ಹೇಳುವಿರಾದರೆ, ನಾವು ಸಮಿತಿಯೊಂದನ್ನು ಈ ವಿಷಯ ನಿರ್ಧರಿಸುವುದಕ್ಕೆ ರಚಿಸುತ್ತೇವೆ. ಈ ಕಾನೂನುಗಳು ಜಾರಿಯಾಗಲೇ ಬೇಕು ಎಂದು ಪಟ್ಟುಹಿಡಿಯುವುದಕ್ಕೆ ಕಾರಣ ಕಾಣುತ್ತಿಲ್ಲ ಎಂದು ನ್ಯಾಯಪೀಠ ಹೇಳಿತು.

ಸಾಲಿಸಿಟರ್‌ ಜನರಲ್‌ ತುಷಾರ್‌ ಮೆಹ್ತಾ, ನ್ಯಾಯಪೀಠ ಕೇಳಿದ ಪ್ರಶ್ನೆಗೆ ಉತ್ತರಿಸುತ್ತಾ, ನಾವು ಪರಿಹಾರದ ಭಾಗವಾಗಿದ್ದೇವೆ. ಈ ಕಾನೂನುಗಳು ಪ್ರಗತಿಪರವಾಗಿ ಎಂದು ಹೇಳುವ ಹಲವು ರೈತ ಸಂಘಟನೆಗಳಿವೆ ಎಂದು ಸರ್ಕಾರದ ಪರ ವಕಾಲತ್ತು ನೀಡಿದರು.

‘ಆದರೆ ಇದುವರೆಗೂ ಈ ಕಾನೂನುಗಳು ಉತ್ತಮವಾಗಿವೆ ಎಂದು ಸಮರ್ಥಿಸುವ ಒಂದೇ ಒಂದು ಪಿಟಿಷನ್‌ ಬಂದಿಲ್ಲ’ ಎಂದು ಬೋಬ್ಡೆ ನೇತೃತ್ವದ ನ್ಯಾಯಪೀಠ ತಿರುಗೇಟು ನೀಡಿತು.

ವಾದ ಮುಂದುವರೆಸಿದ ಸಾಲಿಸಿಟರ್‌ ಜನರಲ್‌, ಕೆಲವು ಗುಂಪುಗಳು ಪ್ರತಿಭಟಿಸಿದವು ಎಂಬ ಕಾರಣಕ್ಕೆ ನಮಗೆ ಲಾಭದಾಯಕವಾಗಿದ್ದ ಕಾನೂನುಗಳನ್ನು ಯಾಕೆ ತಡೆದಿರಿ ಎಂದು ಕೇಳಿದರೆ ಏನು ಮಾಡುವುದು ಎಂಬ ತಕರಾರನ್ನು ನ್ಯಾಯಪೀಠದ ಮುಂದೆ ಇಟ್ಟರು.

ನ್ಯಾಯಪೀಠ, ನಾವು ಇದರಲ್ಲಿ ಭಾಗಿಯಾಗಬಯಸುವುದಿಲ್ಲ. ಇದನ್ನು ಸಮಿತಿ ಚರ್ಚಿಸಲಿ ಎಂದು ಉತ್ತರಿಸಿ, ಕೇಂದ್ರ ಸರ್ಕಾರಕ್ಕೆ ಸಮಿತಿ ನೇಮಿಸಲಾಗದಿದ್ದರೆ, ನಾವೇ ನೇಮಿಸುವುದಾಗಿ ಖಾರವಾಗಿ ಉತ್ತರಿಸಿತು.

ಜನ ಚಳಿಯಲ್ಲಿ ಕಷ್ಟ ಅನುಭವಿಸುತ್ತಿದ್ದಾರೆ. ಆತ್ಮಹತ್ಯೆ ಮಾಡಿಕೊಳ್ಳುತ್ತಿದ್ದಾರೆ. ಪರಿಸ್ಥಿತಿ ಬಿಗಡಾಯಿಸುತ್ತಿದೆ. ಈ ಕುರಿತು ನೀವು ಯಾವುದೇ ಪ್ರತಿಕ್ರಿಯೆ ನೀಡಿಲ್ಲ ಎಂದು ಕೋರ್ಟ್‌ ಅಸಮಾಧಾನ ವ್ಯಕ್ತಪಡಿಸಿತು.

ರೈತ ಮುಖಂಡರು ಮತ್ತು ಸರ್ಕಾರದ ನಡುವೆ ನಡೆಯುತ್ತಿರುವ ಮಾತುಕತೆಗಳು ಬಿದ್ದು ಹೋಗುತ್ತಿವೆ. ಸರ್ಕಾರ ಅನುಚ್ಛೇದಗಳ ಮೇಲೆ ಚರ್ಚೆ ನಡೆಸಲು ಬಯಸುತ್ತಿದೆ. ಆದರೆ ರೈತರು ಕಾಯ್ದೆ ಹಿಂಪಡೆಯುವುದಕ್ಕೆ ಪಟ್ಟು ಹಿಡಿದಿದ್ದಾರೆ. ಹಾಗಾಗಿ ಸಮಿತಿ ನಿರ್ಣಯದವರೆಗೆ ಕಾಯ್ದೆಗಳ ಜಾರಿಯನ್ನು ತಡೆಯಲು ಸೂಚಿಸುತ್ತೇವೆ ಎಂದು ಬೋಬ್ಡೆ ನೇತೃತ್ವದ ನ್ಯಾಯಪೀಠ ಹೇಳಿತು.

‘ಆದರೆ, ಒಂದು ವೇಳೆ ಕಾಯ್ದೆ ಜಾರಿಯಾಗುವುದನ್ನು ತಡೆ ಹಿಡಿದರೆ, ಪ್ರತಿಭಟನೆಯನ್ನು ಸ್ಥಳಾಂತರಿಸಬಹುದೆ? ಯಾರಾದರೂ ಈ ಶಾಂತಿ ಕದಡುವ ಪ್ರಯತ್ನ ಮಾಡಬಹುದು ಎಂಬ ಆತಂಕವಿದೆ. ಹಾಗೇನಾದರೂ ಆದರೆ ನಾವೆಲ್ಲರೂ ಅದಕ್ಕೆ ಹೊಣೆಗಾರರಾಗಿರುತ್ತೇವೆ. ನಮ್ಮ ಕೈಗಳಿಗೆ ರಕ್ತ, ಗಾಯಗಳು ಅಂಟಿಕೊಳ್ಳುವುದು ಬೇಡ” ಎಂದು ನ್ಯಾಯಪೀಠ ಹೇಳಿತು.

ಎರಡೂ ಗಂಟೆಗಳ ಕಾಲ ವಾದ ವಿವಾದ ಬಳಿಕ ಸಮಿತಿ ರಚನೆಗೆ ಸೂಚಿಸಿದ್ದು, ಸಮಿತಿ ನಿರ್ಧಾರಗಳ ಆಧಾರದ ಮೇಲೆ ತೀರ್ಪು ತೆಗೆದುಕೊಳ್ಳಲಾಗುವುದು ಎಂದು ಬೋಬ್ಡೆ, ಎ ಎಸ್‌ ಬೋಪಣ್ಣ ಮತ್ತು ವಿ ರಾಮಾಸುಬ್ರಮಣ್ಯನ್‌ ಒಳಗೊಂಡ ಪೀಠ ತಿಳಿಸಿತು.

ಇನ್ನೊಂದೆಡೆ ಸುಪ್ರೀಂ ಆದೇಶದ ಕುರಿತು ಪ್ರತಿಕ್ರಿಯಿಸಿರುವ ದೆಹಲಿಯಲ್ಲಿನ ಧರಣಿ ನಿರತ ರೈತರು ಕಾಯ್ದೆಗಳಿಗೆ ತಾತ್ಕಾಲಿಕ ತಡೆ ತಂದಿದ್ದಾರೆ. ಆದರೆ ಕರಾಳ ಕೃಷಿ ಕಾಯ್ದೆಗಳು ಸಂಪೂರ್ಣ ವಾಪಸ್ ಆಗಬೇಕು ಎನ್ನುವುದು ನಮ್ಮ ಹಕ್ಕೊತ್ತಾಯ. ತಾತ್ಕಾಲಿಕ ತಡೆಯ ಮುಖಾಂತರ ರೈತರನ್ನು ಇಲ್ಲಿಂದ ಒಕ್ಕಲೆಬ್ಬಿಸುವ ಹುನ್ನಾರವಿದೆಯೆಂಬ ಅನುಮಾನವಿದೆ. ಅದಕ್ಕೆ ನಾವು ಆಸ್ಪದ ಕೊಡುವುದಿಲ್ಲ, ಹೋರಾಟ ಮುಂದುವರೆಸುತ್ತೇವೆ ಎಂದು ನಾನುಗೌರಿ.ಕಾಂಗೆ ತಿಳಿಸಿದ್ದಾರೆ.


ಇದನ್ನೂ ಓದಿ: ಹೊಸ ಚರಿತ್ರೆ ಬರಿಯಲಿರುವ ಜನವರಿ 26ರ ರೈತ ಹೋರಾಟ: ಇದರಲ್ಲಿ ನಿಮ್ಮ ಪಾತ್ರವೇನು?

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

1 COMMENT

LEAVE A REPLY

Please enter your comment!
Please enter your name here

- Advertisment -

‘ಸಾವರ್ಕರ್ ದೇವರನ್ನು, ಧಾರ್ಮಿಕ ನಂಬಿಕೆಗಳನ್ನು ಪ್ರಶ್ನಿಸಿದ್ದರು’: ಪುಣೆ ನ್ಯಾಯಾಲಯದಲ್ಲಿ ಮೊಮ್ಮಗ ಸತ್ಯಕಿ ಸಾವರ್ಕರ್ ಒಪ್ಪಿಗೆ

ಪುಣೆ: ಕಾಂಗ್ರೆಸ್ ನಾಯಕ ಹಾಗೂ ಸಂಸತ್ತಿನ ವಿರೋಧ ಪಕ್ಷದ ನಾಯಕ ರಾಹುಲ್ ಗಾಂಧಿ ವಿರುದ್ಧ ದಾಖಲಾಗಿರುವ ಕ್ರಿಮಿನಲ್ ಮಾನನಷ್ಟ ಮೊಕದ್ದಮೆಯ ವಿಚಾರಣೆಯು ಅತ್ಯಂತ ಕುತೂಹಲಕಾರಿ ಮತ್ತು ರಾಜಕೀಯ-ಸೈದ್ಧಾಂತಿಕ ತಿರುವನ್ನು ಪಡೆದುಕೊಂಡಿದೆ. ವಿನಾಯಕ ದಾಮೋದರ್...

ಮಾಜಿ ಸಚಿವ ಧರ್ಮೇಂದ್ರ ಪ್ರಧಾನ್ ಮಗಳ ಫೋನ್ ಬಿಲ್ ವಿವಾದ: ₹68 ಸಾವಿರ ಬಿಲ್-ಪೇ ಆಗಿದ್ದು ಸರ್ಕಾರಿ ಹಣದಲ್ಲಾ?

ಮಾಜಿ ಕೇಂದ್ರ ಶಿಕ್ಷಣ ಸಚಿವ ಧರ್ಮೇಂದ್ರ ಪ್ರಧಾನ್ ಅವರ ಪುತ್ರಿ ನೈಮಿಷಾ ಪ್ರಧಾನ್ ಅವರು ಮತ್ತೊಮ್ಮೆ ವಿವಾದದ ಕೇಂದ್ರಬಿಂದುವಾಗಿದ್ದಾರೆ. ವಾರಗಳ ಹಿಂದೆ ನೀಟ್ ಪರೀಕ್ಷೆಯ ಪತ್ರಿಕೆ ಸೋರಿಕೆ ಖಂಡಿಸಿ ಕಾಕ್ರೋಚ್ ಜನತಾ ಪಾರ್ಟಿ...

ಇರಾನ್ ವಸತಿ ಕಟ್ಟಡದ ಮೇಲೆ ಅಮೆರಿಕಾ ದಾಳಿ: ಎರಡು ವರ್ಷದ ಮಗು ಸೇರಿ ಒಂದೇ ಕುಟುಂಬದ ಮೂವರ ಸಾವು

ಮಧ್ಯಪ್ರಾಚ್ಯದಲ್ಲಿ ಅಮೆರಿಕ ತನ್ನ ಸಾಮ್ರಾಜ್ಯಶಾಹಿ ಆಧಿಪತ್ಯ ಸ್ಥಾಪನೆಗಾಗಿ ನಡೆಸುತ್ತಿರುವ ಯುದ್ಧಕೋರ ನೀತಿ ಮತ್ತೊಮ್ಮೆ ನಿರಪರಾಧಿ ಸಾರ್ವಜನಿಕರ ರಕ್ತ ಹರಿಸಿದೆ. ಇರಾನ್ ಮೇಲಿನ ಅಮೆರಿಕ ಪಡೆಗಳ ಸರಣಿ ಮತ್ತು ಭೀಕರ ಬಾಂಬ್ ದಾಳಿಗಳು ಕೇವಲ...

SIR: ASDDO ಪಟ್ಟಿಯಲ್ಲಿ ಬೆಂಗಳೂರಿಗೆ ಪ್ರಥಮ ಸ್ಥಾನ, ರಾಜ್ಯದಲ್ಲಿ 2 ಕೋಟಿ ಮತದಾರರ ಹೆಸರು ರದ್ದಾಗುವ ಬೀತಿ

ಕರ್ನಾಟಕದಲ್ಲಿ ನಡೆಯುತ್ತಿರುವ ಮತದಾರರ ಪಟ್ಟಿಯ ವಿಶೇಷ ಸಮಗ್ರ ಪರಿಷ್ಕರಣೆ (SIR) ಪ್ರಕ್ರಿಯೆಯಲ್ಲಿ ರಾಜಧಾನಿ ಬೆಂಗಳೂರು ಅತ್ಯಂತ ಪ್ರಮುಖ ಹಾಗೂ ಕಳವಳಕಾರಿ ಕೇಂದ್ರವಾಗಿ ಹೊರಹೊಮ್ಮಿದೆ. ರಾಜ್ಯದಲ್ಲಿರುವ ಒಟ್ಟು 5.54 ಕೋಟಿ ನೋಂದಾಯಿತ ಮತದಾರರ ಪೈಕಿ...

ಉಮರ್ ಖಾಲಿದ್ ಜಾಮೀನು ಅರ್ಜಿ; ಪೊಲೀಸರ ನಿಲುವು ಕೇಳಿದ ದೆಹಲಿ ಹೈಕೋರ್ಟ್

ಫೆಬ್ರವರಿ 2020 ರಲ್ಲಿ ಈಶಾನ್ಯ ದೆಹಲಿಯಲ್ಲಿ ನಡೆದ ಗಲಭೆಯ ಹಿಂದಿನ "ದೊಡ್ಡ ಪಿತೂರಿ"ಗೆ ಸಂಬಂಧಿಸಿದಂತೆ ಭಯೋತ್ಪಾದನಾ ವಿರೋಧಿ ಕಾನೂನು ಯುಎಪಿಎ ಅಡಿಯಲ್ಲಿ ಪ್ರಕರಣದಲ್ಲಿ ಜಾಮೀನು ಕೋರಿ ಉಮರ್ ಖಾಲಿದ್ ಸಲ್ಲಿಸಿದ ಅರ್ಜಿಯ ಕುರಿತು...

ಮುಂಬೈ: ‘ಶಾಲಾ ಜಿಹಾದ್’ ಎಂಬ ಬಿಜೆಪಿ ನಾಯಕನ ಕೋಮುದ್ವೇಷಕ್ಕೆ ಶಾಲೆಗೆ ನುಗ್ಗಿದ ಬುಲ್ಡೋಜರ್: ಬಿಎಂಸಿಗೆ ಚಾಟಿ ಬೀಸಿದ ಬಾಂಬೆ ಹೈಕೋರ್ಟ್

ಬಿಜೆಪಿ ನಾಯಕ ಕಿರೀಟ್ ಸೋಮಯ್ಯ ಅವರ “ಶಾಲಾ ಜಿಹಾದ್” ಎಂಬ ವಿಷಕಾರಿ ಹೇಳಿಕೆಯ ನಂತರ ಮುಂಬೈನ ಗೋವಂಡಿಯಲ್ಲಿ ಬಡ ಮುಸ್ಲಿಂ ಮಕ್ಕಳ ಶಿಕ್ಷಣದ ಆಶಾಕಿರಣವಾಗಿದ್ದ ತೆಹ್ಜೀಬ್ ಇಸ್ಲಾಮಿಕ್ ಇಂಗ್ಲಿಷ್ ಶಾಲೆಯನ್ನು ಬೃಹನ್ಮುಂಬೈ ಮುನ್ಸಿಪಲ್...

ಹಾಕಿ ತಂಡಕ್ಕೆ ಕೇಸರಿ ಜರ್ಸಿ: ‘ನಮ್ಮ ಗುರುತೇ ನೀಲಿ, ಕೇಸರಿ ಬಣ್ಣದ ತರ್ಕವೇನು?’: ಮಾಜಿ ಹಾಕಿ ಪಟು ಆಕ್ರೋಶ: ಬಿಜೆಪಿ ನಡೆಗೆ ವಿಪಕ್ಷಗಳ ಟೀಕೆ

ಭಾರತೀಯ ಕ್ರೀಡಾರಂಗದ ಹೆಮ್ಮೆಯ ಸಾಂಪ್ರದಾಯಿಕ 'ನೀಲಿ' (ಬ್ಲೂ) ಬಣ್ಣವನ್ನು ಕಳಚಿ, ಹಾಕಿ ತಂಡಕ್ಕೆ ಬಲವಂತವಾಗಿ ಕೇಸರಿ ಬಣ್ಣದ ಜೆರ್ಸಿ ತೊಡಿಸಲು ಹೊರಟಿರುವುದು ಇದೀಗ ತೀವ್ರ ಆಕ್ರೋಶಕ್ಕೆ ಕಾರಣವಾಗಿದೆ. ಮುಂಬರುವ ಎಫ್‌ಐಎಚ್ (FIH) ವಿಶ್ವಕಪ್‌ಗಾಗಿ...

ತಮಿಳುನಾಡು: ಶಾಲಾ ಮಕ್ಕಳಿಗೆ ವಾರಕ್ಕೊಮ್ಮೆ ಚಿಕನ್ ಬಿರಿಯಾನಿ ನೀಡಲು ಚಿಂತನೆ

ತಮಿಳುನಾಡಿನ ಸರ್ಕಾರಿ ಶಾಲೆಗಳ ಮಧ್ಯಾಹ್ನದ ಬಿಸಿಊಟದ ಯೋಜನೆಯಡಿಯಲ್ಲಿ ವಿದ್ಯಾರ್ಥಿಗಳಿಗೆ ವಾರಕ್ಕೊಮ್ಮೆ ಚಿಕನ್ ಬಿರಿಯಾನಿ ನೀಡುವ ಪ್ರಸ್ತಾವನೆಯನ್ನು ತಮಿಳುನಾಡು ಸರ್ಕಾರ ಪರಿಶೀಲಿಸುತ್ತಿದ್ದು, ಶಾಲಾ ಶಿಕ್ಷಣ ಸಚಿವ ರಾಜ್‌ಮೋಹನ್ ಅವರು ಈ ಕುರಿತು ಮುಖ್ಯಮಂತ್ರಿ ಸಿ....

ಪ್ರಶ್ನೆಪತ್ರಿಕೆ ಸೋರಿಕೆ ವಿರೋಧಿ ಮಸೂದೆಯಲ್ಲಿ ಸುಧಾರಣೆಗಳಿಲ್ಲ, ರಾಜಕೀಯ ಮಾತ್ರ: ಕೇಂದ್ರದ ವಿರುದ್ಧ ಖರ್ಗೆ ವಾಗ್ದಾಳಿ

ಪಬ್ಲಿಕ್ ಪರೀಕ್ಷೆಗಳ (ಅನ್ಯಾಯಯುತ ವಿಧಾನಗಳ ತಡೆಗಟ್ಟುವಿಕೆ) ತಿದ್ದುಪಡಿ ಮಸೂದೆ 2026 ರ ಚರ್ಚೆಯ ಸಂದರ್ಭದಲ್ಲಿ ಮಾತನಾಡಿದ ರಾಜ್ಯಸಭೆ ವಿರೋಧ ಪಕ್ಷದ ನಾಯಕ ಮಲ್ಲಿಕಾರ್ಜುನ ಖರ್ಗೆ ಕೇಂದ್ರ ಸರ್ಕಾರದ ಮೇಲೆ ತೀವ್ರ ವಾಗ್ದಾಳಿ ನಡೆಸಿದರು....

ವಿದ್ಯಾರ್ಥಿಗಳ ಮೇಲೆ ಪೆಲೆಟ್ ಗನ್ ಬಳಕೆ ಆರೋಪ; ಗೃಹ ಸಚಿವ ಅಮಿತ್‌ ಶಾ ಮೌನ ಪ್ರಶ್ನಿಸಿದ ಕಪಿಲ್ ಸಿಬಲ್

ಜುಲೈ 20 ರಂದು ದೆಹಲಿಯಲ್ಲಿ ನಡೆದ ಸಂಶತ್ ಚಲೋ ಪ್ರತಿಭಟನಾ ಮೆರವಣಿಗೆಯಲ್ಲಿ ವಿದ್ಯಾರ್ಥಿಗಳ ಮೇಲೆ ಪೆಲೆಟ್ ಗನ್ ಬಳಸಲಾಗಿದೆ ಎಂಬ ಆರೋಪದ ಬಗ್ಗೆ ಕೇಂದ್ರ ಗೃಹ ಸಚಿವ ಅಮಿತ್ ಶಾ ಅವರ ಮೌನವನ್ನು...