Homeಮುಖಪುಟಕೃಷಿ ಕಾಯ್ದೆಗಳು & ರೈತ ಹೋರಾಟದ ಕುರಿತು ಇಂದು ಸುಪ್ರೀಂ ಕೋರ್ಟ್‌‌ನಲ್ಲಿನ ವಾದ-ವಿವಾದ ಹೀಗಿತ್ತು..

ಕೃಷಿ ಕಾಯ್ದೆಗಳು & ರೈತ ಹೋರಾಟದ ಕುರಿತು ಇಂದು ಸುಪ್ರೀಂ ಕೋರ್ಟ್‌‌ನಲ್ಲಿನ ವಾದ-ವಿವಾದ ಹೀಗಿತ್ತು..

ಇಂದು ಸುಪ್ರೀಂನಲ್ಲಿ ನಡೆದ ಚರ್ಚೆಗಳಿಗೆ ಪ್ರತಿಕ್ರಿಯಿಸಿದ ಹೋರಾಟ ನಿರತ ರೈತರು, ’ನಮ್ಮನ್ನು ದೆಹಲಿಯಿಂದ ಹೊರಹಾಕುವ ಪ್ರಯತ್ನವಿದು. ಕಾನೂನು ಜಾರಿಗೆ ತಾತ್ಕಲಿಕ ತಡೆ ತರುವುದಲ್ಲ, ಕಾನೂನು ಹಿಂಪಡೆಯಬೇಕೆಂಬುದೇ ನಮ್ಮ ಆಗ್ರಹ’ ಎಂದಿದ್ದಾರೆ

- Advertisement -
- Advertisement -

ವಿವಾದಾತ್ಮಕ ನೂತನ ಕೃಷಿ ಕಾಯ್ದೆಗಳ ವಿರುದ್ಧ ದೆಹಲಿಯ ಗಡಿಗಳಲ್ಲಿ ಪ್ರತಿಭಟನಾನಿರತರಾಗಿರುವ ರೈತರನ್ನು ತೆರವುಗೊಳಿಸುವಂತೆ ಕೋರಿ ಸಲ್ಲಿಕೆಯಾಗಿರುವ ಅರ್ಜಿಗಳ ವಿಚಾರಣೆಯನ್ನು ಸೋಮವಾರ ಕೈಗೆತ್ತಿಕೊಂಡ ಮುಖ್ಯ ನ್ಯಾಯಮೂರ್ತಿ ಎಸ್‌ ಎ ಬೊಬ್ಡೆ ನೇತೃತ್ವದ ಸುಪ್ರೀಂ ಕೋರ್ಟ್‌ ಪೀಠ ಕೇಂದ್ರವನ್ನು ತರಾಟೆಗೆ ತೆಗೆದುಕೊಂಡಿತು. ಸುಪ್ರೀಂನಲ್ಲಿ ನಡೆದ ವಾದ-ವಿವಾದ ಹೀಗಿತ್ತು.

ಕೇಂದ್ರ ಸರ್ಕಾರ ರೈತ ಪ್ರತಿಭಟನೆಯನ್ನು ನಿಭಾಯಿಸಿದ ರೀತಿ ನಿಜಕ್ಕೂ ಅತೀವ ನಿರಾಶೆ ಉಂಟು ಮಾಡಿದೆ. ಈ ಕಾನೂನು ಜಾರಿಗೆ ತರಲು ಕೇಂದ್ರ ಸರ್ಕಾರ ಯಾವ ರೀತಿಯ ಸಮಾಲೋಚನಾ ಪ್ರಕ್ರಿಯೆ ಅನುಸರಿಸಿದೆಯೋ ಗೊತ್ತಿಲ್ಲ. ಆದರೆ ಈ ಕಾನೂನಗಳ ವಿರುದ್ಧ ಹಲವು ರಾಜ್ಯಗಳ ರೈತರು ಬಂಡೆದಿದ್ದಾರೆ ಎಂದು ಕೋರ್ಟ್‌ ಹೇಳಿದೆ.

ಸರ್ಕಾರದ ಪರ ವಕೀಲ, ಅಟರ್ನಿ ಜನರಲ್‌ ಕೆ ಕೆ ವೇಣುಗೋಪಾಲ್‌, ಹಿಂದಿನ ಸರ್ಕಾರ ತಜ್ಞ ಸಮಿತಿಯ ಶಿಫಾರಸಿನ ಆಧಾರದ ಮೇಲೆ ಈ ಕಾನೂನುಗಳನ್ನು ರೂಪಿಸಲಾಗಿದೆ. ಎಪಿಎಂಪಿ ವ್ಯವಸ್ಥೆಯಲ್ಲಿ ನಿರ್ಬಂಧಗಳನ್ನು ತೆಗೆದು ಹಾಕಲು ಮತ್ತು ನೇರ ಮಾರುಕಟ್ಟೆಗೆ ಮುಕ್ತ ಅವಕಾಶ ಕಲ್ಪಿಸುವಂತೆ ಸಮಿತಿಗಳು ಸಲಹೆ ನೀಡಿದ್ದವು ಎಂದು ಸಮಜಾಯಿಷಿ ನೀಡಿದರು.

“ನಮ್ಮ ಉದ್ದೇಶ ಸ್ಪಷ್ಟ. ಸಮಸ್ಯೆಗೆ ಸೌಹಾರ್ದಯುತವಾದ ಪರಿಹಾರ ಕಂಡುಕೊಳ್ಳಬೇಕು. ಇದೇ ಕಾರಣಕ್ಕೆ ಕಳೆದ ಬಾರಿಯೇ ಈ ಕಾನೂನುಗಳಿಗೆ ತಾತ್ಕಲಿಕವಾಗಿ ತಡೆಯಬಾರದೇಕೆ ಎಂದು ಕೇಳಿದ್ದೆವು. ಆದರೆ ನೀವು ಮತ್ತೆ ಮತ್ತೆ ಸಮಯಾವಕಾಶ ಕೇಳುತ್ತಿದ್ದೀರಿ” ಎಂದು ನ್ಯಾಯಪೀಠ ಹೇಳಿತು.

ನಿಮಗೆ ಕೊಂಚವಾದರೂ ಹೊಣೆಗಾರಿಕೆ ಪ್ರಜ್ಞೆ ಎಂಬುದಿದ್ದರೆ ಮತ್ತು ನೀವು ಕಾನೂನುಗಳ ಜಾರಿಯನ್ನು ತಡೆಯುವುದಾಗಿ ನೀವು ಹೇಳುವಿರಾದರೆ, ನಾವು ಸಮಿತಿಯೊಂದನ್ನು ಈ ವಿಷಯ ನಿರ್ಧರಿಸುವುದಕ್ಕೆ ರಚಿಸುತ್ತೇವೆ. ಈ ಕಾನೂನುಗಳು ಜಾರಿಯಾಗಲೇ ಬೇಕು ಎಂದು ಪಟ್ಟುಹಿಡಿಯುವುದಕ್ಕೆ ಕಾರಣ ಕಾಣುತ್ತಿಲ್ಲ ಎಂದು ನ್ಯಾಯಪೀಠ ಹೇಳಿತು.

ಸಾಲಿಸಿಟರ್‌ ಜನರಲ್‌ ತುಷಾರ್‌ ಮೆಹ್ತಾ, ನ್ಯಾಯಪೀಠ ಕೇಳಿದ ಪ್ರಶ್ನೆಗೆ ಉತ್ತರಿಸುತ್ತಾ, ನಾವು ಪರಿಹಾರದ ಭಾಗವಾಗಿದ್ದೇವೆ. ಈ ಕಾನೂನುಗಳು ಪ್ರಗತಿಪರವಾಗಿ ಎಂದು ಹೇಳುವ ಹಲವು ರೈತ ಸಂಘಟನೆಗಳಿವೆ ಎಂದು ಸರ್ಕಾರದ ಪರ ವಕಾಲತ್ತು ನೀಡಿದರು.

‘ಆದರೆ ಇದುವರೆಗೂ ಈ ಕಾನೂನುಗಳು ಉತ್ತಮವಾಗಿವೆ ಎಂದು ಸಮರ್ಥಿಸುವ ಒಂದೇ ಒಂದು ಪಿಟಿಷನ್‌ ಬಂದಿಲ್ಲ’ ಎಂದು ಬೋಬ್ಡೆ ನೇತೃತ್ವದ ನ್ಯಾಯಪೀಠ ತಿರುಗೇಟು ನೀಡಿತು.

ವಾದ ಮುಂದುವರೆಸಿದ ಸಾಲಿಸಿಟರ್‌ ಜನರಲ್‌, ಕೆಲವು ಗುಂಪುಗಳು ಪ್ರತಿಭಟಿಸಿದವು ಎಂಬ ಕಾರಣಕ್ಕೆ ನಮಗೆ ಲಾಭದಾಯಕವಾಗಿದ್ದ ಕಾನೂನುಗಳನ್ನು ಯಾಕೆ ತಡೆದಿರಿ ಎಂದು ಕೇಳಿದರೆ ಏನು ಮಾಡುವುದು ಎಂಬ ತಕರಾರನ್ನು ನ್ಯಾಯಪೀಠದ ಮುಂದೆ ಇಟ್ಟರು.

ನ್ಯಾಯಪೀಠ, ನಾವು ಇದರಲ್ಲಿ ಭಾಗಿಯಾಗಬಯಸುವುದಿಲ್ಲ. ಇದನ್ನು ಸಮಿತಿ ಚರ್ಚಿಸಲಿ ಎಂದು ಉತ್ತರಿಸಿ, ಕೇಂದ್ರ ಸರ್ಕಾರಕ್ಕೆ ಸಮಿತಿ ನೇಮಿಸಲಾಗದಿದ್ದರೆ, ನಾವೇ ನೇಮಿಸುವುದಾಗಿ ಖಾರವಾಗಿ ಉತ್ತರಿಸಿತು.

ಜನ ಚಳಿಯಲ್ಲಿ ಕಷ್ಟ ಅನುಭವಿಸುತ್ತಿದ್ದಾರೆ. ಆತ್ಮಹತ್ಯೆ ಮಾಡಿಕೊಳ್ಳುತ್ತಿದ್ದಾರೆ. ಪರಿಸ್ಥಿತಿ ಬಿಗಡಾಯಿಸುತ್ತಿದೆ. ಈ ಕುರಿತು ನೀವು ಯಾವುದೇ ಪ್ರತಿಕ್ರಿಯೆ ನೀಡಿಲ್ಲ ಎಂದು ಕೋರ್ಟ್‌ ಅಸಮಾಧಾನ ವ್ಯಕ್ತಪಡಿಸಿತು.

ರೈತ ಮುಖಂಡರು ಮತ್ತು ಸರ್ಕಾರದ ನಡುವೆ ನಡೆಯುತ್ತಿರುವ ಮಾತುಕತೆಗಳು ಬಿದ್ದು ಹೋಗುತ್ತಿವೆ. ಸರ್ಕಾರ ಅನುಚ್ಛೇದಗಳ ಮೇಲೆ ಚರ್ಚೆ ನಡೆಸಲು ಬಯಸುತ್ತಿದೆ. ಆದರೆ ರೈತರು ಕಾಯ್ದೆ ಹಿಂಪಡೆಯುವುದಕ್ಕೆ ಪಟ್ಟು ಹಿಡಿದಿದ್ದಾರೆ. ಹಾಗಾಗಿ ಸಮಿತಿ ನಿರ್ಣಯದವರೆಗೆ ಕಾಯ್ದೆಗಳ ಜಾರಿಯನ್ನು ತಡೆಯಲು ಸೂಚಿಸುತ್ತೇವೆ ಎಂದು ಬೋಬ್ಡೆ ನೇತೃತ್ವದ ನ್ಯಾಯಪೀಠ ಹೇಳಿತು.

‘ಆದರೆ, ಒಂದು ವೇಳೆ ಕಾಯ್ದೆ ಜಾರಿಯಾಗುವುದನ್ನು ತಡೆ ಹಿಡಿದರೆ, ಪ್ರತಿಭಟನೆಯನ್ನು ಸ್ಥಳಾಂತರಿಸಬಹುದೆ? ಯಾರಾದರೂ ಈ ಶಾಂತಿ ಕದಡುವ ಪ್ರಯತ್ನ ಮಾಡಬಹುದು ಎಂಬ ಆತಂಕವಿದೆ. ಹಾಗೇನಾದರೂ ಆದರೆ ನಾವೆಲ್ಲರೂ ಅದಕ್ಕೆ ಹೊಣೆಗಾರರಾಗಿರುತ್ತೇವೆ. ನಮ್ಮ ಕೈಗಳಿಗೆ ರಕ್ತ, ಗಾಯಗಳು ಅಂಟಿಕೊಳ್ಳುವುದು ಬೇಡ” ಎಂದು ನ್ಯಾಯಪೀಠ ಹೇಳಿತು.

ಎರಡೂ ಗಂಟೆಗಳ ಕಾಲ ವಾದ ವಿವಾದ ಬಳಿಕ ಸಮಿತಿ ರಚನೆಗೆ ಸೂಚಿಸಿದ್ದು, ಸಮಿತಿ ನಿರ್ಧಾರಗಳ ಆಧಾರದ ಮೇಲೆ ತೀರ್ಪು ತೆಗೆದುಕೊಳ್ಳಲಾಗುವುದು ಎಂದು ಬೋಬ್ಡೆ, ಎ ಎಸ್‌ ಬೋಪಣ್ಣ ಮತ್ತು ವಿ ರಾಮಾಸುಬ್ರಮಣ್ಯನ್‌ ಒಳಗೊಂಡ ಪೀಠ ತಿಳಿಸಿತು.

ಇನ್ನೊಂದೆಡೆ ಸುಪ್ರೀಂ ಆದೇಶದ ಕುರಿತು ಪ್ರತಿಕ್ರಿಯಿಸಿರುವ ದೆಹಲಿಯಲ್ಲಿನ ಧರಣಿ ನಿರತ ರೈತರು ಕಾಯ್ದೆಗಳಿಗೆ ತಾತ್ಕಾಲಿಕ ತಡೆ ತಂದಿದ್ದಾರೆ. ಆದರೆ ಕರಾಳ ಕೃಷಿ ಕಾಯ್ದೆಗಳು ಸಂಪೂರ್ಣ ವಾಪಸ್ ಆಗಬೇಕು ಎನ್ನುವುದು ನಮ್ಮ ಹಕ್ಕೊತ್ತಾಯ. ತಾತ್ಕಾಲಿಕ ತಡೆಯ ಮುಖಾಂತರ ರೈತರನ್ನು ಇಲ್ಲಿಂದ ಒಕ್ಕಲೆಬ್ಬಿಸುವ ಹುನ್ನಾರವಿದೆಯೆಂಬ ಅನುಮಾನವಿದೆ. ಅದಕ್ಕೆ ನಾವು ಆಸ್ಪದ ಕೊಡುವುದಿಲ್ಲ, ಹೋರಾಟ ಮುಂದುವರೆಸುತ್ತೇವೆ ಎಂದು ನಾನುಗೌರಿ.ಕಾಂಗೆ ತಿಳಿಸಿದ್ದಾರೆ.


ಇದನ್ನೂ ಓದಿ: ಹೊಸ ಚರಿತ್ರೆ ಬರಿಯಲಿರುವ ಜನವರಿ 26ರ ರೈತ ಹೋರಾಟ: ಇದರಲ್ಲಿ ನಿಮ್ಮ ಪಾತ್ರವೇನು?

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

1 COMMENT

LEAVE A REPLY

Please enter your comment!
Please enter your name here

- Advertisment -

ರಾಜಸ್ಥಾನ ಸ್ಥಳೀಯ ಸಂಸ್ಥೆ ಚುನಾವಣೆ: ಬಿಕಾನೇರ್‌ನ ನೋಖಾದಲ್ಲಿ ಸಿಪಿಐ(ಎಂ) ಐತಿಹಾಸಿಕ ಜಯಭೇರಿ

ರಾಜಸ್ಥಾನ ಸ್ಥಳೀಯ ಸಂಸ್ಥೆಗಳ ಚುನಾವಣೆಯಲ್ಲಿ ಎಡಪಕ್ಷವಾದ ಸಿಪಿಐ(ಎಂ) (CPI-M) ಐತಿಹಾಸಿಕ ಸಾಧನೆ ಮಾಡಿದ್ದು, ಬಿಕಾನೇರ್ ಜಿಲ್ಲೆಯ ನೋಖಾ ನಗರ ಪಾಲಿಕೆಯ ಆಡಳಿತದ ಚುಕ್ಕಾಣಿಯನ್ನು ತನ್ನದಾಗಿಸಿಕೊಂಡಿದೆ. ಹಲವು ವರ್ಷಗಳಿಂದ ಬಿಜೆಪಿ ಹಾಗೂ ಎನ್‌ಸಿಪಿ (NCP)...

ಏಕರೂಪ ನಾಗರಿಕ ಸಂಹಿತೆಯನ್ನು ಸಂಸತ್ತಿನ ಬದಲು ರಾಜ್ಯಗಳ ಮೂಲಕವೇ ಜಾರಿಗೆ ಅಮಿತ್ ಶಾ ಮುಂದಾಗಿದ್ದೇಕೆ?

ಕೇಂದ್ರ ಗೃಹ ಸಚಿವ ಅಮಿತ್ ಶಾ ಅವರು ಸೆಪ್ಟೆಂಬರ್ 13ರಂದು ಮುಂಬೈನಲ್ಲಿ ನಡೆದ ಸುದ್ದಿಗೋಷ್ಠಿಯಲ್ಲಿ, 2029ರ ಲೋಕಸಭಾ ಚುನಾವಣೆಗೂ ಮುನ್ನ ಬಿಜೆಪಿ ಮತ್ತು ಎನ್‌ಡಿಎ ಆಡಳಿತವಿರುವ ಎಲ್ಲಾ 21 ರಾಜ್ಯಗಳಲ್ಲಿ ಏಕರೂಪ ನಾಗರಿಕ...

ದಿಶಾ ಸಾಲಿಯಾನ್ ಸಾವಿನ ಪ್ರಕರಣ : ಸಿಬಿಐ ಎಫ್ಐಆರ್‌ನಲ್ಲಿ ಆದಿತ್ಯ ಠಾಕ್ರೆ, ರಿಯಾ ಚಕ್ರವರ್ತಿ ಸೇರಿದಂತೆ ಹಲವರ ಹೆಸರು

ಬಾಂಬೆ ಹೈಕೋರ್ಟ್ ಆದೇಶದ ಮೇರೆಗೆ, ಕೇಂದ್ರೀಯ ತನಿಖಾ ದಳವು (ಸಿಬಿಐ) ನಟ ಸುಶಾಂತ್ ಸಿಂಗ್ ರಜಪೂತ್ ಅವರ ಮಾಜಿ ಮ್ಯಾನೇಜರ್ ದಿಶಾ ಸಾಲಿಯಾನ್ ಅವರ ನಿಗೂಢ ಸಾವಿಗೆ ಸಂಬಂಧಿಸಿದಂತೆ ಸೋಮವಾರ(ಸೆ.14) ಎಫ್‌ಐಆರ್ ದಾಖಲಿಸಿದೆ. ಶಿವಸೇನೆ...

ಟಿ. ನರಸೀಪುರ ಇನ್ಸ್‌ಪೆಕ್ಟರ್‌ ಧನಂಜಯ್‌ ಹೇಳಿದ್ದರಲ್ಲಿ ತಪ್ಪೇನಿದೆ? ಸಾರ್ವಜನಿಕರಿಂದ ಬೆಂಬಲ

ಮಸೀದಿಗಳ ಮುಂಭಾಗ ಯಾವುದೇ ಪ್ರಚೋದನಕಾರಿ ಕೃತ್ಯಗಳಿಗೆ ಆಸ್ಪದ ನೀಡದೆ, ರಾತ್ರಿ 10:30ರ ಒಳಗಾಗಿ ಡಿಜೆ ಸದ್ದಿಲ್ಲದೆ ನಿಯಮಾನುಸಾರ ಮೆರವಣಿಗೆ ಮುಗಿಸಲು ಕಟ್ಟುನಿಟ್ಟಿನ ಕ್ರಮ ಕೈಗೊಂಡ ಇನ್ಸ್‌ಪೆಕ್ಟರ್ ಧನಂಜಯ್ ಅವರ ಪರವಾಗಿ ಈಗ ಸಾಮಾಜಿಕ...

ಅತ್ಯಾಚಾರ ಪ್ರಕರಣದಲ್ಲಿ 10 ವರ್ಷ ಜೈಲು ಶಿಕ್ಷೆ: ‘ತೆಹಲ್ಕಾ’ ಸಂಸ್ಥಾಪಕ ತರುಣ್ ತೇಜ್‌ಪಾಲ್ ನ್ಯಾಯಾಲಯಕ್ಕೆ ಶರಣು, ಜೈಲಿಗೆ ರವಾನೆ 

ಪಣಜಿ: 2013ರ ಲೈಂಗಿಕ ದೌರ್ಜನ್ಯ ಪ್ರಕರಣದಲ್ಲಿ ಬಾಂಬೆ ಹೈಕೋರ್ಟ್‌ನ ಗೋವಾ ಪೀಠದಿಂದ ದೋಷಿ ಎಂದು ತೀರ್ಪುಗೊಂಡು 10 ವರ್ಷಗಳ ಕಠಿಣ ಕಾರಾಗೃಹ ಶಿಕ್ಷೆಗೆ ಗುರಿಯಾಗಿರುವ ‘ತೆಹಲ್ಕಾ’ ಸಂಸ್ಥಾಪಕ ಹಾಗೂ ಮಾಜಿ ಪ್ರಧಾನ ಸಂಪಾದಕ...

ಹೈದರಾಬಾದ್‌ನಲ್ಲಿ ಗಣೇಶ ವಿಗ್ರಹ ಖರೀದಿ ವಿಚಾರಕ್ಕೆ ಘರ್ಷಣೆ: 34 ವರ್ಷದ ವ್ಯಕ್ತಿ ಸಾವು: ತಪ್ಪಿತಸ್ಥರ ವಿರುದ್ಧ ಕ್ರಮಕ್ಕೆ ಆಗ್ರಹ

ಹೈದರಾಬಾದ್: ಗಣೇಶ ಚತುರ್ಥಿ ಆಚರಣೆಗೆ ಮುನ್ನ ಗಣೇಶ ವಿಗ್ರಹ ಖರೀದಿಸುವ ವಿಚಾರಕ್ಕೆ ಸಂಬಂಧಿಸಿದಂತೆ ನಡೆದ ವಾಗ್ವಾದವು ಹಿಂಸಾತ್ಮಕ ಘರ್ಷಣೆಗೆ ತಿರುಗಿ 34 ವರ್ಷದ ವ್ಯಕ್ತಿಯೊಬ್ಬರು ಮೃತಪಟ್ಟಿರುವ ಘಟನೆ ಹೈದರಾಬಾದ್‌ನ ಜೋಡಿಮೆಟ್ಲಾ ಪ್ರದೇಶದಲ್ಲಿ ನಡೆದಿದೆ....

ಮಹಿಳಾ ಬೈಕರ್‌ಗೆ ಬೇಕಂತಲೇ ಢಿಕ್ಕಿ ಹೊಡೆದು ಪರಾರಿಯಾದ ಕಾರು ಸವಾರ! ಬೆಚ್ಚಿಬೀಳಿಸುವ ವಿಡಿಯೋ ವೈರಲ್

ಹರ್ಯಾಣದ ಗುರುಗ್ರಾಮದ ಗಾಲ್ಫ್ ಕೋರ್ಸ್ ರಸ್ತೆಯಲ್ಲಿ ಅತಿವೇಗವಾಗಿ ಬಂದ ಕಾರೊಂದು ಮಹಿಳಾ ಬೈಕ್ ಸವಾರಿಗೆ ಉದ್ದೇಶಪೂರ್ವಕವಾಗಿ ಢಿಕ್ಕಿ ಹೊಡೆದು ಪರಾರಿಯಾಗಿರುವ ಭೀಕರ ಘಟನೆ ನಡೆದಿದೆ. ಹಿಟ್ ಆ್ಯಂಡ್ ರನ್ ಶಂಕೆ ವ್ಯಕ್ತವಾಗಿರುವ ಈ...

ಪ. ಬಂಗಾಳ | 252 ಮದ್ರಸಾಗಳನ್ನು ಮುಚ್ಚಲು ಆದೇಶಿಸಿದ ಬಿಜೆಪಿ ಸರ್ಕಾರ; 100 ಸಂಸ್ಥೆಗಳಿಗೆ ಕಾರಣ ಕೇಳಿ ನೋಟಿಸ್

ರಾಜ್ಯದಾದ್ಯಂತ ಮದ್ರಸಾಗಳ ಸಮೀಕ್ಷೆಯನ್ನು ಪ್ರಾರಂಭಿಸಿದ ಮೂರು ತಿಂಗಳ ನಂತರ, ಬಿಜೆಪಿ ನೇತೃತ್ವದ ಪಶ್ಚಿಮ ಬಂಗಾಳ ಸರ್ಕಾರವು ಅನುಮೋದನೆಯ ಕೊರತೆ ಅಥವಾ ಇತರ ಅಕ್ರಮಗಳನ್ನು ಉಲ್ಲೇಖಿಸಿ 252 ಸಂಸ್ಥೆಗಳನ್ನು ಮುಚ್ಚಲು ಆದೇಶಿಸಿದೆ ಮತ್ತು ಇತರ...

ಟಿ. ನರಸೀಪುರ ಪ್ರತಿಭಟನೆ ವೇಳೆ ವಾಕ್ಸಮರ: ಪ್ರತಾಪ್ ಸಿಂಹ ಹಾಗೂ ಎಲ್. ನಾಗೇಂದ್ರ ನಡುವೆ ಬಹಿರಂಗ ನೂಕಾಟ-ತಳ್ಳಾಟ!

ಟಿ. ನರಸೀಪುರದಲ್ಲಿ ಗಣೇಶೋತ್ಸವ ಮೆರವಣಿಗೆಗೆ ಸಂಬಂಧಿಸಿದ ವಿವಾದದ ಹಿನ್ನೆಲೆಯಲ್ಲಿ ಬಿಜೆಪಿ ಹಮ್ಮಿಕೊಂಡಿದ್ದ ಪ್ರತಿಭಟನೆ ವೇಳೆ ಮೈಸೂರು ಬಿಜೆಪಿಯಲ್ಲಿನ ಆಂತರಿಕ ಭಿನ್ನಮತ ಬಹಿರಂಗಗೊಂಡಿದೆ. ಪೊಲೀಸ್ ಇನ್ಸ್‌ಪೆಕ್ಟರ್ ಧನಂಜಯ್ ವಿರುದ್ಧ ನಡೆದ ಪ್ರತಿಭಟನೆಯ ಸಂದರ್ಭದಲ್ಲಿ ಮಾಜಿ...

ಉಮರ್ ಖಾಲಿದ್ ಕುರಿತ ಸಾಕ್ಷ್ಯಚಿತ್ರ ಪ್ರದರ್ಶನ ಮುಂದೂಡಿದ NLSIU ವಿದ್ಯಾರ್ಥಿ ಸಂಘ; ಯಾವುದೇ ಒತ್ತಡಕ್ಕೆ ಮಣಿದಿಲ್ಲವೆಂದು ಸ್ಪಷ್ಟನೆ

ಬೆಂಗಳೂರಿನ ನ್ಯಾಷನಲ್ ಲಾ ಸ್ಕೂಲ್ ಆಫ್ ಇಂಡಿಯಾ ಯೂನಿವರ್ಸಿಟಿಯ (NLSIU) ಲಾ ಅಂಡ್ ಸೊಸೈಟಿ ಕಮಿಟಿಯು (LawSoc) ಉಮರ್ ಖಾಲಿದ್ ಅವರ ಜೈಲುವಾಸದ ಕುರಿತು ಲಲಿತ್ ವಾಚಾನಿ ನಿರ್ಮಿಸಿರುವ 'ಪ್ರಿಸನರ್ ನಂ. 626710...