Homeಮುಖಪುಟಕೃಷಿ ಕಾಯ್ದೆಗಳು & ರೈತ ಹೋರಾಟದ ಕುರಿತು ಇಂದು ಸುಪ್ರೀಂ ಕೋರ್ಟ್‌‌ನಲ್ಲಿನ ವಾದ-ವಿವಾದ ಹೀಗಿತ್ತು..

ಕೃಷಿ ಕಾಯ್ದೆಗಳು & ರೈತ ಹೋರಾಟದ ಕುರಿತು ಇಂದು ಸುಪ್ರೀಂ ಕೋರ್ಟ್‌‌ನಲ್ಲಿನ ವಾದ-ವಿವಾದ ಹೀಗಿತ್ತು..

ಇಂದು ಸುಪ್ರೀಂನಲ್ಲಿ ನಡೆದ ಚರ್ಚೆಗಳಿಗೆ ಪ್ರತಿಕ್ರಿಯಿಸಿದ ಹೋರಾಟ ನಿರತ ರೈತರು, ’ನಮ್ಮನ್ನು ದೆಹಲಿಯಿಂದ ಹೊರಹಾಕುವ ಪ್ರಯತ್ನವಿದು. ಕಾನೂನು ಜಾರಿಗೆ ತಾತ್ಕಲಿಕ ತಡೆ ತರುವುದಲ್ಲ, ಕಾನೂನು ಹಿಂಪಡೆಯಬೇಕೆಂಬುದೇ ನಮ್ಮ ಆಗ್ರಹ’ ಎಂದಿದ್ದಾರೆ

- Advertisement -
- Advertisement -

ವಿವಾದಾತ್ಮಕ ನೂತನ ಕೃಷಿ ಕಾಯ್ದೆಗಳ ವಿರುದ್ಧ ದೆಹಲಿಯ ಗಡಿಗಳಲ್ಲಿ ಪ್ರತಿಭಟನಾನಿರತರಾಗಿರುವ ರೈತರನ್ನು ತೆರವುಗೊಳಿಸುವಂತೆ ಕೋರಿ ಸಲ್ಲಿಕೆಯಾಗಿರುವ ಅರ್ಜಿಗಳ ವಿಚಾರಣೆಯನ್ನು ಸೋಮವಾರ ಕೈಗೆತ್ತಿಕೊಂಡ ಮುಖ್ಯ ನ್ಯಾಯಮೂರ್ತಿ ಎಸ್‌ ಎ ಬೊಬ್ಡೆ ನೇತೃತ್ವದ ಸುಪ್ರೀಂ ಕೋರ್ಟ್‌ ಪೀಠ ಕೇಂದ್ರವನ್ನು ತರಾಟೆಗೆ ತೆಗೆದುಕೊಂಡಿತು. ಸುಪ್ರೀಂನಲ್ಲಿ ನಡೆದ ವಾದ-ವಿವಾದ ಹೀಗಿತ್ತು.

ಕೇಂದ್ರ ಸರ್ಕಾರ ರೈತ ಪ್ರತಿಭಟನೆಯನ್ನು ನಿಭಾಯಿಸಿದ ರೀತಿ ನಿಜಕ್ಕೂ ಅತೀವ ನಿರಾಶೆ ಉಂಟು ಮಾಡಿದೆ. ಈ ಕಾನೂನು ಜಾರಿಗೆ ತರಲು ಕೇಂದ್ರ ಸರ್ಕಾರ ಯಾವ ರೀತಿಯ ಸಮಾಲೋಚನಾ ಪ್ರಕ್ರಿಯೆ ಅನುಸರಿಸಿದೆಯೋ ಗೊತ್ತಿಲ್ಲ. ಆದರೆ ಈ ಕಾನೂನಗಳ ವಿರುದ್ಧ ಹಲವು ರಾಜ್ಯಗಳ ರೈತರು ಬಂಡೆದಿದ್ದಾರೆ ಎಂದು ಕೋರ್ಟ್‌ ಹೇಳಿದೆ.

ಸರ್ಕಾರದ ಪರ ವಕೀಲ, ಅಟರ್ನಿ ಜನರಲ್‌ ಕೆ ಕೆ ವೇಣುಗೋಪಾಲ್‌, ಹಿಂದಿನ ಸರ್ಕಾರ ತಜ್ಞ ಸಮಿತಿಯ ಶಿಫಾರಸಿನ ಆಧಾರದ ಮೇಲೆ ಈ ಕಾನೂನುಗಳನ್ನು ರೂಪಿಸಲಾಗಿದೆ. ಎಪಿಎಂಪಿ ವ್ಯವಸ್ಥೆಯಲ್ಲಿ ನಿರ್ಬಂಧಗಳನ್ನು ತೆಗೆದು ಹಾಕಲು ಮತ್ತು ನೇರ ಮಾರುಕಟ್ಟೆಗೆ ಮುಕ್ತ ಅವಕಾಶ ಕಲ್ಪಿಸುವಂತೆ ಸಮಿತಿಗಳು ಸಲಹೆ ನೀಡಿದ್ದವು ಎಂದು ಸಮಜಾಯಿಷಿ ನೀಡಿದರು.

“ನಮ್ಮ ಉದ್ದೇಶ ಸ್ಪಷ್ಟ. ಸಮಸ್ಯೆಗೆ ಸೌಹಾರ್ದಯುತವಾದ ಪರಿಹಾರ ಕಂಡುಕೊಳ್ಳಬೇಕು. ಇದೇ ಕಾರಣಕ್ಕೆ ಕಳೆದ ಬಾರಿಯೇ ಈ ಕಾನೂನುಗಳಿಗೆ ತಾತ್ಕಲಿಕವಾಗಿ ತಡೆಯಬಾರದೇಕೆ ಎಂದು ಕೇಳಿದ್ದೆವು. ಆದರೆ ನೀವು ಮತ್ತೆ ಮತ್ತೆ ಸಮಯಾವಕಾಶ ಕೇಳುತ್ತಿದ್ದೀರಿ” ಎಂದು ನ್ಯಾಯಪೀಠ ಹೇಳಿತು.

ನಿಮಗೆ ಕೊಂಚವಾದರೂ ಹೊಣೆಗಾರಿಕೆ ಪ್ರಜ್ಞೆ ಎಂಬುದಿದ್ದರೆ ಮತ್ತು ನೀವು ಕಾನೂನುಗಳ ಜಾರಿಯನ್ನು ತಡೆಯುವುದಾಗಿ ನೀವು ಹೇಳುವಿರಾದರೆ, ನಾವು ಸಮಿತಿಯೊಂದನ್ನು ಈ ವಿಷಯ ನಿರ್ಧರಿಸುವುದಕ್ಕೆ ರಚಿಸುತ್ತೇವೆ. ಈ ಕಾನೂನುಗಳು ಜಾರಿಯಾಗಲೇ ಬೇಕು ಎಂದು ಪಟ್ಟುಹಿಡಿಯುವುದಕ್ಕೆ ಕಾರಣ ಕಾಣುತ್ತಿಲ್ಲ ಎಂದು ನ್ಯಾಯಪೀಠ ಹೇಳಿತು.

ಸಾಲಿಸಿಟರ್‌ ಜನರಲ್‌ ತುಷಾರ್‌ ಮೆಹ್ತಾ, ನ್ಯಾಯಪೀಠ ಕೇಳಿದ ಪ್ರಶ್ನೆಗೆ ಉತ್ತರಿಸುತ್ತಾ, ನಾವು ಪರಿಹಾರದ ಭಾಗವಾಗಿದ್ದೇವೆ. ಈ ಕಾನೂನುಗಳು ಪ್ರಗತಿಪರವಾಗಿ ಎಂದು ಹೇಳುವ ಹಲವು ರೈತ ಸಂಘಟನೆಗಳಿವೆ ಎಂದು ಸರ್ಕಾರದ ಪರ ವಕಾಲತ್ತು ನೀಡಿದರು.

‘ಆದರೆ ಇದುವರೆಗೂ ಈ ಕಾನೂನುಗಳು ಉತ್ತಮವಾಗಿವೆ ಎಂದು ಸಮರ್ಥಿಸುವ ಒಂದೇ ಒಂದು ಪಿಟಿಷನ್‌ ಬಂದಿಲ್ಲ’ ಎಂದು ಬೋಬ್ಡೆ ನೇತೃತ್ವದ ನ್ಯಾಯಪೀಠ ತಿರುಗೇಟು ನೀಡಿತು.

ವಾದ ಮುಂದುವರೆಸಿದ ಸಾಲಿಸಿಟರ್‌ ಜನರಲ್‌, ಕೆಲವು ಗುಂಪುಗಳು ಪ್ರತಿಭಟಿಸಿದವು ಎಂಬ ಕಾರಣಕ್ಕೆ ನಮಗೆ ಲಾಭದಾಯಕವಾಗಿದ್ದ ಕಾನೂನುಗಳನ್ನು ಯಾಕೆ ತಡೆದಿರಿ ಎಂದು ಕೇಳಿದರೆ ಏನು ಮಾಡುವುದು ಎಂಬ ತಕರಾರನ್ನು ನ್ಯಾಯಪೀಠದ ಮುಂದೆ ಇಟ್ಟರು.

ನ್ಯಾಯಪೀಠ, ನಾವು ಇದರಲ್ಲಿ ಭಾಗಿಯಾಗಬಯಸುವುದಿಲ್ಲ. ಇದನ್ನು ಸಮಿತಿ ಚರ್ಚಿಸಲಿ ಎಂದು ಉತ್ತರಿಸಿ, ಕೇಂದ್ರ ಸರ್ಕಾರಕ್ಕೆ ಸಮಿತಿ ನೇಮಿಸಲಾಗದಿದ್ದರೆ, ನಾವೇ ನೇಮಿಸುವುದಾಗಿ ಖಾರವಾಗಿ ಉತ್ತರಿಸಿತು.

ಜನ ಚಳಿಯಲ್ಲಿ ಕಷ್ಟ ಅನುಭವಿಸುತ್ತಿದ್ದಾರೆ. ಆತ್ಮಹತ್ಯೆ ಮಾಡಿಕೊಳ್ಳುತ್ತಿದ್ದಾರೆ. ಪರಿಸ್ಥಿತಿ ಬಿಗಡಾಯಿಸುತ್ತಿದೆ. ಈ ಕುರಿತು ನೀವು ಯಾವುದೇ ಪ್ರತಿಕ್ರಿಯೆ ನೀಡಿಲ್ಲ ಎಂದು ಕೋರ್ಟ್‌ ಅಸಮಾಧಾನ ವ್ಯಕ್ತಪಡಿಸಿತು.

ರೈತ ಮುಖಂಡರು ಮತ್ತು ಸರ್ಕಾರದ ನಡುವೆ ನಡೆಯುತ್ತಿರುವ ಮಾತುಕತೆಗಳು ಬಿದ್ದು ಹೋಗುತ್ತಿವೆ. ಸರ್ಕಾರ ಅನುಚ್ಛೇದಗಳ ಮೇಲೆ ಚರ್ಚೆ ನಡೆಸಲು ಬಯಸುತ್ತಿದೆ. ಆದರೆ ರೈತರು ಕಾಯ್ದೆ ಹಿಂಪಡೆಯುವುದಕ್ಕೆ ಪಟ್ಟು ಹಿಡಿದಿದ್ದಾರೆ. ಹಾಗಾಗಿ ಸಮಿತಿ ನಿರ್ಣಯದವರೆಗೆ ಕಾಯ್ದೆಗಳ ಜಾರಿಯನ್ನು ತಡೆಯಲು ಸೂಚಿಸುತ್ತೇವೆ ಎಂದು ಬೋಬ್ಡೆ ನೇತೃತ್ವದ ನ್ಯಾಯಪೀಠ ಹೇಳಿತು.

‘ಆದರೆ, ಒಂದು ವೇಳೆ ಕಾಯ್ದೆ ಜಾರಿಯಾಗುವುದನ್ನು ತಡೆ ಹಿಡಿದರೆ, ಪ್ರತಿಭಟನೆಯನ್ನು ಸ್ಥಳಾಂತರಿಸಬಹುದೆ? ಯಾರಾದರೂ ಈ ಶಾಂತಿ ಕದಡುವ ಪ್ರಯತ್ನ ಮಾಡಬಹುದು ಎಂಬ ಆತಂಕವಿದೆ. ಹಾಗೇನಾದರೂ ಆದರೆ ನಾವೆಲ್ಲರೂ ಅದಕ್ಕೆ ಹೊಣೆಗಾರರಾಗಿರುತ್ತೇವೆ. ನಮ್ಮ ಕೈಗಳಿಗೆ ರಕ್ತ, ಗಾಯಗಳು ಅಂಟಿಕೊಳ್ಳುವುದು ಬೇಡ” ಎಂದು ನ್ಯಾಯಪೀಠ ಹೇಳಿತು.

ಎರಡೂ ಗಂಟೆಗಳ ಕಾಲ ವಾದ ವಿವಾದ ಬಳಿಕ ಸಮಿತಿ ರಚನೆಗೆ ಸೂಚಿಸಿದ್ದು, ಸಮಿತಿ ನಿರ್ಧಾರಗಳ ಆಧಾರದ ಮೇಲೆ ತೀರ್ಪು ತೆಗೆದುಕೊಳ್ಳಲಾಗುವುದು ಎಂದು ಬೋಬ್ಡೆ, ಎ ಎಸ್‌ ಬೋಪಣ್ಣ ಮತ್ತು ವಿ ರಾಮಾಸುಬ್ರಮಣ್ಯನ್‌ ಒಳಗೊಂಡ ಪೀಠ ತಿಳಿಸಿತು.

ಇನ್ನೊಂದೆಡೆ ಸುಪ್ರೀಂ ಆದೇಶದ ಕುರಿತು ಪ್ರತಿಕ್ರಿಯಿಸಿರುವ ದೆಹಲಿಯಲ್ಲಿನ ಧರಣಿ ನಿರತ ರೈತರು ಕಾಯ್ದೆಗಳಿಗೆ ತಾತ್ಕಾಲಿಕ ತಡೆ ತಂದಿದ್ದಾರೆ. ಆದರೆ ಕರಾಳ ಕೃಷಿ ಕಾಯ್ದೆಗಳು ಸಂಪೂರ್ಣ ವಾಪಸ್ ಆಗಬೇಕು ಎನ್ನುವುದು ನಮ್ಮ ಹಕ್ಕೊತ್ತಾಯ. ತಾತ್ಕಾಲಿಕ ತಡೆಯ ಮುಖಾಂತರ ರೈತರನ್ನು ಇಲ್ಲಿಂದ ಒಕ್ಕಲೆಬ್ಬಿಸುವ ಹುನ್ನಾರವಿದೆಯೆಂಬ ಅನುಮಾನವಿದೆ. ಅದಕ್ಕೆ ನಾವು ಆಸ್ಪದ ಕೊಡುವುದಿಲ್ಲ, ಹೋರಾಟ ಮುಂದುವರೆಸುತ್ತೇವೆ ಎಂದು ನಾನುಗೌರಿ.ಕಾಂಗೆ ತಿಳಿಸಿದ್ದಾರೆ.


ಇದನ್ನೂ ಓದಿ: ಹೊಸ ಚರಿತ್ರೆ ಬರಿಯಲಿರುವ ಜನವರಿ 26ರ ರೈತ ಹೋರಾಟ: ಇದರಲ್ಲಿ ನಿಮ್ಮ ಪಾತ್ರವೇನು?

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

1 COMMENT

LEAVE A REPLY

Please enter your comment!
Please enter your name here

- Advertisment -

TCS ನಾಸಿಕ್ ಪ್ರಕರಣ : ಮಾಧ್ಯಮಗಳ ಸುಳ್ಳು ಮತ್ತು ಕಂಪನಿ ಹೇಳಿದ ಸತ್ಯ

ಮಹಾರಾಷ್ಟ್ರದ ನಾಸಿಕ್‌ನಲ್ಲಿರುವ ಟಾಟಾ ಕನ್ಸಲ್ಟೆನ್ಸಿ ಸರ್ವಿಸಸ್ (ಟಿಸಿಎಸ್‌) ಕಂಪನಿಯ ಬಿಪಿಒ ಘಟಕದಲ್ಲಿ ನಡೆದಿದೆ ಎನ್ನಲಾದ ಪ್ರಕರಣವೊಂದು ಪ್ರಸ್ತುತ ಇಡೀ ದೇಶದಾದ್ಯಂತ ಭಾರೀ ಚರ್ಚೆಯ ವಿಷಯವಾಗಿದೆ. ಈ ಪ್ರಕರಣದಲ್ಲಿ ಮುಖ್ಯವಾಗಿ ಲೈಂಗಿಕ ಕಿರುಕುಳ ಮತ್ತು...

‘ಅಮೆರಿಕದೊಂದಿಗೆ ಮಾತುಕತೆ ಇಲ್ಲ..’; ಇಸ್ಲಾಮಾಬಾದ್‌ ಸಭೆಯಲ್ಲಿ ಇರಾನ್ ಭಾಗವಹಿಸುವುದು ಅನುಮಾನ

ಯುನೈಟೆಡ್ ಸ್ಟೇಟ್ಸ್ (ಅಮೆರಿಕ) ಜೊತೆ ಹೊಸ ಸುತ್ತಿನ ಮಾತುಕತೆಗಾಗಿ ಇಸ್ಲಾಮಾಬಾದ್‌ಗೆ ಸಂಧಾನಕಾರರನ್ನು ಕಳುಹಿಸುವ ಯಾವುದೇ ಯೋಜನೆ ಇಲ್ಲ ಎಂದು ಇರಾನ್ ಸೂಚಿಸಿದೆ. ಕದನ ವಿರಾಮ ಮುಕ್ತಾಯಗೊಳ್ಳಲು 48 ಗಂಟೆಗಳ ಮೊದಲು ಯುದ್ಧ ನಿರತ...

ಇರಾನ್, ಇಸ್ರೇಲ್-ಅಮೆರಿಕ ಯುದ್ಧ : ವಿನಾಶದ ನಡುವೆಯೂ ಲಾಭ ಪಡೆದವರು ಯಾರು?

ಅಂತಾರಾಷ್ಟ್ರೀಯ ಹಣಕಾಸು ನಿಧಿ (ಐಎಂಎಫ್‌) 2026ರ ಜಾಗತಿಕ ಬೆಳವಣಿಗೆಯ ಅಂದಾಜನ್ನು ಶೇಕಡ 3.3 ರಿಂದ 3.1ಕ್ಕೆ ಇಳಿಸಿದೆ. ಇರಾನ್ ವಿರುದ್ಧದ ಅಮೆರಿಕ-ಇಸ್ರೇಲ್ ಯುದ್ಧದ ಪರಿಣಾಮ ಮತ್ತು ಹಾರ್ಮುಝ್ ಜಲಸಂಧಿಯನ್ನು ಮುಚ್ಚಿರುವುದು ವಿಶ್ವ ಆರ್ಥಿಕತೆಯ...

ಕ್ಷೇತ್ರ ಮರುವಿಂಗಡಣೆ ವಿರುದ್ಧ ದಕ್ಷಿಣದ ರಾಜ್ಯಗಳ ಪಟ್ಟು: ಭವಿಷ್ಯದ ಮರುಚಿಂತನೆಗೆ ಇದುವೇ ಸೂಕ್ತ ಕಾಲ

ಲೋಕಸಭೆಯಲ್ಲಿ 131 ನೇ ಸಾಂವಿಧಾನಿಕ ತಿದ್ದುಪಡಿ ಮಸೂದೆಯನ್ನು ತಿರಸ್ಕರಿಸಿರುವುದು ಭಾರತದ ಪ್ರಜಾಪ್ರಭುತ್ವ ಪಥದಲ್ಲಿ ಮಹತ್ವದ ಕ್ಷಣವಾಗಿದೆ. ಇದು ಕೇವಲ ಶಾಸಕಾಂಗದ ಹಿನ್ನಡೆಯನ್ನು ಮಾತ್ರವಲ್ಲ, ಒಕ್ಕೂಟ ವ್ಯವಸ್ಥೆಯ ಸೂಕ್ಷ್ಮ ಸಮತೋಲನವನ್ನು ಹಾಳುಮಾಡುವ ಅಪಾಯವನ್ನುಂಟುಮಾಡುವ ಪ್ರಸ್ತಾಪಗಳ...

ಮೋದಿ ಸರ್ಕಾರದ ಯೂಟರ್ನ್ : ಜನಸಂಖ್ಯಾ ಸ್ಫೋಟದ ಕಳವಳದಿಂದ ಹೆಚ್ಚು ಜನಸಂಖ್ಯೆಯ ರಾಜ್ಯಗಳಿಗೆ ಗಿಫ್ಟ್ ಕೊಡುವವರೆಗೆ

ಭಾರತದ ಜನಸಂಖ್ಯೆಯ ಬಗ್ಗೆ ಪ್ರಧಾನಮಂತ್ರಿ ನರೇಂದ್ರ ಮೋದಿ ಮತ್ತು ಅವರ ಸರ್ಕಾರ ನಿಜವಾಗಿಯೂ ಬಹಳ ಕಳವಳ ವ್ಯಕ್ತಪಡಿಸುತ್ತಿದೆ– ಅಥವಾ ಅವರು ನಮಗೆ ಆ ರೀತಿ ನಂಬುವಂತೆ ಮಾಡಿದ್ದಾರೆ. ಏಕೆಂದರೆ... 2019ರ ಸ್ವಾತಂತ್ರ್ಯ ದಿನಾಚರಣೆಯಂದು ಮೋದಿಯವರು,...

ದೇಶವನ್ನುದ್ದೇಶಿಸಿ ಮೋದಿ ಭಾಷಣ : ಚುನಾವಣಾ ನೀತಿ ಸಂಹಿತೆಯ ಉಲ್ಲಂಘನೆ

ಕ್ಷೇತ್ರ ಮರುವಿಂಗಡನೆಗೆ ಉದ್ದೇಶಿಸಿದ್ದ ಸಂವಿಧಾನದ 131ನೇ ತಿದ್ದುಪಡಿ ಮಸೂದೆಗೆ ಲೋಕಸಭೆಯಲ್ಲಿ ಸೋಲಾದ ಬೆನ್ನಲ್ಲೇ ಶನಿವಾರ (ಏ.18) ದೇಶವನ್ನುದ್ದೇಶಿಸಿ ಮಾತನಾಡಿದ ಪ್ರಧಾನಿ ನರೇಂದ್ರ ಮೋದಿ, ಪ್ರತಿಪಕ್ಷಗಳ ವಿರುದ್ಧ ತೀವ್ರ ವಾಗ್ದಾಳಿ ನಡೆಸಿದ್ದು, ಸಂಸತ್ತಿನಲ್ಲಿ ವಿರೋಧ...

ಫ್ಯಾಕ್ಟ್‌ಚೆಕ್ : ಅತ್ಯಾಚಾರ ಅಪರಾಧಿ ಪರ ವಕೀಲೆಗೆ ಟಿಎಂಸಿಯಿಂದ ರಾಜ್ಯಸಭೆ ಸೀಟ್; ಬಿಜೆಪಿ ಆರೋಪದ ಸತ್ಯಾಸತ್ಯತೆ ಏನು?

ಪಶ್ಚಿಮ ಬಂಗಾಳ ವಿಧಾನಸಭೆ ಚುನಾವಣೆಗೆ ಪಾಣಿಹತಿ ಕ್ಷೇತ್ರದಿಂದ ಬಿಜೆಪಿ ಅಭ್ಯರ್ಥಿಯಾಗಿರುವ ಆರ್‌ಜಿ ಕರ್‌ ಸಂತ್ರಸ್ತೆಯ ತಾಯಿ ಮತ್ತು ವಕೀಲೆ ಹಾಗೂ ತೃಣಮೂಲ ಕಾಂಗ್ರೆಸ್ (ಟಿಎಂಸಿ) ರಾಜ್ಯಸಭಾ ಸದಸ್ಯೆ ಮೇನಕಾ ಗುರುಸ್ವಾಮಿ ಅವರ ಎಐ-ರಚಿತ...

ತಾರತಮ್ಯ ಮುಕ್ತ ಕ್ಯಾಂಪಸ್ ನಿರ್ಮಾಣದತ್ತ ಮಹತ್ವದ ಹೆಜ್ಜೆ; ‘ರೋಹಿತ್ ವೇಮುಲ ಮಸೂದೆ’ಗೆ ಸಚಿವ ಸಂಪುಟ ಅನುಮೋದನೆ

ಕರ್ನಾಟಕ ಸರ್ಕಾರದ ಸಚಿವ ಸಂಪುಟ ಗುರುವಾರ (ಏ.16) ದಂದು ಕರ್ನಾಟಕ ರೋಹಿತ್ ವೇಮುಲ (ಹೊರಗಿಡುವಿಕೆ ಅಥವಾ ಅನ್ಯಾಯ ತಡೆಗಟ್ಟುವಿಕೆ) (ಶಿಕ್ಷಣ ಮತ್ತು ಘನತೆಯ ಹಕ್ಕು) ಮಸೂದೆ’ಗೆ ಅನುಮೋದನೆ ನೀಡಿದೆ. ಹೈದರಾಬಾದ್‌ನ ಕೆಂದ್ರೀಯ ವಿಶ್ವವಿದ್ಯಾಲಯದಲ್ಲಿ...

ಕ್ಷೇತ್ರ ಮರುವಿಂಗಡನೆ : ಗೃಹ ಸಚಿವ ಅಮಿತ್ ಶಾ ಹೇಳಿದ್ದೆಲ್ಲವು ನಿಜವೇ?..ಇಲ್ಲಿದೆ ವಾಸ್ತವಾಂಶ

ದೇಶದ ಗೃಹ ಸಚಿವರು ಸಂಸತ್ತಿನಲ್ಲಿ ಪ್ರಮುಖ ಕಾನೂನಿನ ಬಗ್ಗೆ ವಿವರಿಸುವಾಗ ವಿಷಯ ಸ್ಪಷ್ಟವಾಗಿರಬೇಕು. ಆದರೆ, ಕ್ಷೇತ್ರ ಮರುವಿಂಗಡನೆ ಕುರಿತು ಗೃಹ ಸಚಿವ ಅಮಿತ್ ಶಾ ಮಾತನಾಡಿರುವುದು ಹಾಗಿರಲಿಲ್ಲ. ದಕ್ಷಿಣ ಭಾರತದ ರಾಜ್ಯಗಳು ತಮ್ಮ...

ಮಹಿಳಾ ಮೀಸಲು ಮಸೂದೆ 2023ರಲ್ಲೇ ಗೆದ್ದಿದೆ, ಈಗ ಸೋತಿರುವುದು ಮೋದಿ ಸರ್ಕಾರ

ಮೋದಿ ಸರ್ಕಾರ ಮಂಡಿಸಿದ್ದ ಮಹಿಳಾ ಮೀಸಲಾತಿ ಮಸೂದೆಗೆ ಲೋಕಸಭೆಯಲ್ಲಿ ಸೋಲಾಗಿದೆ ಎಂಬುವುದು ದೇಶದಲ್ಲಿ ಪ್ರಸ್ತುತ ದೊಡ್ಡ ಚರ್ಚೆಯ ವಿಷಯವಾಗಿದೆ. ಕಾಂಗ್ರೆಸ್‌ ನೇತೃತ್ವದಲ್ಲಿ ವಿಪಕ್ಷಗಳು ಮಸೂದೆಯನ್ನು ಸೋಲಿಸುವ ಮೂಲಕ ದೇಶದ ಮಹಿಳೆಯರ ಸಬಲೀಕರಣಕ್ಕೆ...