Homeಕರ್ನಾಟಕಮಹಾಧರಣಿ| ಕೇಂದ್ರದ ಒತ್ತಡದಿಂದ ರಾಜ್ಯದಲ್ಲಿ ಕೃಷಿ ನೀತಿಗಳು ಜಾರಿಗೆ ಬಂದಿವೆ: ಯಶವಂತ್

ಮಹಾಧರಣಿ| ಕೇಂದ್ರದ ಒತ್ತಡದಿಂದ ರಾಜ್ಯದಲ್ಲಿ ಕೃಷಿ ನೀತಿಗಳು ಜಾರಿಗೆ ಬಂದಿವೆ: ಯಶವಂತ್

- Advertisement -
- Advertisement -

ರಾಜ್ಯದಲ್ಲಿರುವ ರೈತ ವಿರೋಧಿ ಕೃಷಿ ನೀತಿಗಳು ಕೇಂದ್ರ ಸರ್ಕಾರದ ಒತ್ತಡದಿಂದ ಜಾರಿಗೆ ಬಂದಿವೆ. ಅವುಗಳನ್ನು ಸರ್ಕಾರ ರದ್ದು ಮಾಡಬೇಕು. ರೈತ ಪರವಾದ ನೀತಿಗಳನ್ನು ಜಾರಿಗೆ ತರಬೇಕು ಎಂದು ಕರ್ನಾಟಕ ರಾಜ್ಯ ಪ್ರಾಂತ ರೈತ ಸಂಘದ ಮುಖಂಡ ಯಶವಂತ್ ಆಗ್ರಹಿಸಿದ್ದಾರೆ.

ಬೆಂಗಳೂರಿನ ಫ್ರೀಡಂ ಪಾರ್ಕ್‌ನಲ್ಲಿ ನಡೆಯುತ್ತಿರುವ ‘ದುಡಿಯುವ ಜನರ ಮಹಾ ಧರಣಿ’ಯಲ್ಲಿ ಮಾತನಾಡಿದ ಅವರು, “ಕೇಂದ್ರ ಜಾರಿಗೆ ತಂದಿದ್ದ ಕೃಷಿ ನೀತಿಗಳನ್ನು ಜಾರಿಗೆ ತರಲು ಸಾಧ್ಯವಿಲ್ಲ ಎಂದು ಕೇರಳದ ಪಿಣರಾಯಿ ವಿಜಯನ್ ಸರ್ಕಾರ ಹೇಳಿತ್ತು. ತಮಿಳುನಾಡಿನ ಸ್ಟಾಲಿನ್ ಸರ್ಕಾರ ಕೂಡ ಆ ನೀತಿಗಳಿಗೆ ವಿರೋಧ ವ್ಯಕ್ತಪಡಿಸಿತ್ತು. ಅದರೆ, ಕರ್ನಾಟಕದ ಮುಖ್ಯಮಂತ್ರಿ ಸಿದ್ದರಾಮಯ್ಯ ಮೌನವಾಗಿದ್ದಾರೆ. ಅವರು ರೈತರ ವಿರೋಧಿ ನೀತಿಗಳನ್ನು ಚಳಿಗಾಲದ ಅಧಿವೇಶನದಲ್ಲಿ ಹಿಂಪಡೆಯಬೇಕು” ಎಂದು ಒತ್ತಾಯಿಸಿದ್ದಾರೆ.

“ಕೇಂದ್ರ ಸರ್ಕಾರ ರೈತರ ಕೃಷಿ ಉತ್ಪನ್ನಗಳನ್ನು ಖರೀದಿಸಲು ನಿರಾಕರಿಸಿದೆ. ಬಂಡವಾಳಿಗರಿಗೆ ರೈತರು ತಮ್ಮ ಬೆಳೆಗಳನ್ನು ಮಾರಾಟ ಮಾಡಬೇಕೆಂಬ ಹುನ್ನಾರವನ್ನ ಬಿಜೆಪಿ ಸರ್ಕಾರ ಹೊಂದಿದೆ. ಭಾರತದ ಪ್ರಜಾಪ್ರಭುತ್ವ, ಸಾಮಾಜಿಕ ನ್ಯಾಯ, ಸಂವಿಧಾನಕ್ಕೆ ಭಾರಿ ದೊಡ್ಡ ಗಂಡಾತರ ಬಂದಿದೆ. ಅದನ್ನು ಕಾರ್ಪೋರೇಟ್ ಪರವಾದ ಹಿಂದುತ್ವವಾದಿ ಮೋದಿ ಸರ್ಕಾರ ಮಾಡುತ್ತಿದೆ” ಎಂದು ಆರೋಪಿಸಿದ್ದಾರೆ.

“ಇಂದಿರಾಗಾಂಧಿ ಹೇಳಿದ್ದ ತುರ್ತುಪರಿಸ್ಥಿತಿಯ ಸಮಯದಲ್ಲಿ ಅವರಿಗೆ ಸರಿಯಾದ ಪಾಠ ಕಲಿಸಿ, ದೇಶವನ್ನು ಜನರು ರಕ್ಷಿಸಿದ್ದಾರೆ. ವಾಜಪೇಯಿ ಕಾಲದಲ್ಲಿ ಕೋಮುವಾದಿ, ಉದಾರವಾದಿ ನೀತಿಗಳು ಹಾಗೂ ಖಾಸಗೀಕರಣವನ್ನು ಹೇರುವ ಮೂಲಕ ಭಾರತ ಹೊಳೆಯುತ್ತಿದೆ ಎಂದಿದ್ದರು. ಅವರಿಗೂ ಈ ದೇಶದ ಬಡ ಜನರು ಪಾಠ ಕಲಿಸಿದ್ದಾರೆ. ಇಂದು ಮೋದಿ ಸರ್ಕಾರವೂ ಅಂತದ್ದೇ ಕೆಲಸವನ್ನು ಮಾಡುತ್ತಿದೆ. ಅವರಿಗೂ ಸರಿಯಾದ ಪಾಠ ಕಲಿಸಿ, ಪ್ರಜಾಪ್ರಭುತ್ವವನ್ನು ಉಳಿಸಬೇಕಾಗಿದೆ” ಎಂದು ಯಶವಂತ್ ಹೇಳಿದ್ದಾರೆ.

ಇದನ್ನೂ ಓದಿ : ರಾಜ್ಯ ಸರ್ಕಾರ ಗ್ಯಾರಂಟಿ ಯೋಜನೆಗಳಲ್ಲೇ ತೇಲಾಡುತ್ತಿದೆ: ರೈತ ಹೋರಾಟಗಾರ ಬಸವರಾಜಪ್ಪ

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ತಿರುಚ್ಚಿ ಪೂರ್ವದ ಪೆರಂಬೂರಿನಲ್ಲಿ ಟಿವಿಕೆ ಸಂಸ್ಥಾಪಕ ವಿಜಯ್ ಸಲ್ಲಿಸಿದ ಅಫಿಡವಿಟ್‌ಗಳಲ್ಲಿ ಹಲವು ವ್ಯತ್ಯಾಸಗಳಿರುವುದಾಗಿ ವರದಿ  

ಚೆನ್ನೈ: ನಟ ಮತ್ತು ಟಿವಿಕೆ ಸಂಸ್ಥಾಪಕ ವಿಜಯ್ ಸಲ್ಲಿಸಿದ ಎರಡು ಪ್ರತ್ಯೇಕ ಚುನಾವಣಾ ಅಫಿಡವಿಟ್‌ಗಳಲ್ಲಿ ವ್ಯತ್ಯಾಸಗಳು ಕಾಣಿಸಿಕೊಂಡಿದ್ದು, ವಿಧಾನಸಭಾ ಚುನಾವಣೆಗೆ ಮುನ್ನ ಕಾನೂನು ಮತ್ತು ರಾಜಕೀಯ ಪರಿಶೀಲನೆಗೆ ಅವಕಾಶ ನೀಡುವ ಸಾಧ್ಯತೆಯಿದೆ. ಪೆರಂಬೂರು ಮತ್ತು...

ಉತ್ತಮ್ ನಗರದಲ್ಲಿ ಶಾಂತಿ ಕಾಪಾಡುವಲ್ಲಿ ದೆಹಲಿ ಪೊಲೀಸರ ಪ್ರಯತ್ನಗಳನ್ನು ಶ್ಲಾಘಿಸಿದ ಎಪಿಸಿಆರ್

ಈದ್ ಅಲ್-ಫಿತರ್, ರಾಮ ನವಮಿ ಮತ್ತು ಹನುಮಾನ್ ಜಯಂತಿ ಸೇರಿದಂತೆ ಧಾರ್ಮಿಕ ಹಬ್ಬಗಳ ಆಚರಣೆಯ ಸಂದರ್ಭದಲ್ಲಿ ರಾಷ್ಟ್ರ ರಾಜಧಾನಿಯ ಉತ್ತಮ್ ನಗರ ಪ್ರದೇಶದಲ್ಲಿ ಶಾಂತಿ ಮತ್ತು ಭದ್ರತೆಯನ್ನು ಕಾಪಾಡಿದ್ದಕ್ಕಾಗಿ ನಾಗರಿಕ ಹಕ್ಕುಗಳ ರಕ್ಷಣಾ...

ದಲಿತ ಸಮುದಾಯಕ್ಕೆ ಕ್ಷಮೆಯಾಚಿಸಿದ ನೇಪಾಳದ ಹೊಸ ಸರ್ಕಾರ

ಪ್ರಧಾನಿ ಬಾಲೇಂದ್ರ ಶಾ ಅವರ ನೇಪಾಳದ ಹೊಸ ಸರ್ಕಾರದ 100 ಅಂಶಗಳ ಸುಧಾರಣಾ ಕಾರ್ಯಸೂಚಿಯಡಿಯಲ್ಲಿ, ಮುಂದಿನ 15 ದಿನಗಳ ಒಳಗೆ ದಲಿತರು ಮತ್ತು ಐತಿಹಾಸಿಕವಾಗಿ ಹೊರಗಿಡಲ್ಪಟ್ಟ ಇತರೆ ಸಮುದಾಯಗಳಿಗೆ 'ಔಪಚಾರಿಕ ಕ್ಷಮೆಯಾಚನೆ' ಕೇಳುವುದಾಗಿ...

‘ಯಾರು ಹೆದರುತ್ತಾನೋ ಅವನು ಸತ್ತಂತೆ’: ರಾಘವ್ ಛಡ್ಡಾಗೆ ತೀವ್ರವಾಗಿ ಪ್ರತಿಕ್ರಿಯೆ ನೀಡಿದ ಎಎಪಿ ನಾಯಕ ಸೌರಭ್ ಭಾರದ್ವಾಜ್ 

ಆಮ್ ಆದ್ಮಿ ಪಕ್ಷದ (ಎಎಪಿ) ನಾಯಕ ಮತ್ತು ದೆಹಲಿ ಘಟಕದ ಮುಖ್ಯಸ್ಥ ಸೌರಭ್ ಭಾರದ್ವಾಜ್ ಅವರು ವೀಡಿಯೊ ಸಂದೇಶದಲ್ಲಿ ಆಪ್ ಸಂಸದ ರಾಘವ್ ಛಡ್ಡಾ ಅವರು ಸಂಸತ್ತಿನಲ್ಲಿ "ಸಾಫ್ಟ್ ಪಿಆರ್" ನಲ್ಲಿ ತೊಡಗಿದ್ದಾರೆ...

ಚಂಡೀಗಢ ಬಿಜೆಪಿ ಕಚೇರಿ ಸ್ಫೋಟ: ಪಂಜಾಬ್ ಕೌಂಟರ್ ಇಂಟೆಲಿಜೆನ್ಸ್ ಪಡೆಯಿಂದ ಇಬ್ಬರು ಶಂಕಿತರ ಮನೆಗಳ ಮೇಲೆ ದಾಳಿ

ಚಂಡೀಗಢದಲ್ಲಿರುವ ಪಂಜಾಬ್ ಬಿಜೆಪಿ ಕಚೇರಿಯ ಹೊರಗೆ ಸ್ಫೋಟ ನಡೆಸಿದ ಆರೋಪದ ಮೇಲೆ ಇಬ್ಬರು ಶಂಕಿತರ ಮನೆಗಳ ಮೇಲೆ  ಪಂಜಾಬ್ ಪೊಲೀಸರ ಗುಪ್ತಚರ ನಿಗ್ರಹ ದಳವು ಇಂದು ಮುಂಜಾನೆ ದಾಳಿ ನಡೆಸಿದೆ.  ರೋಪರ್ ಜಿಲ್ಲೆಯ ಮೊರಿಂಡಾ ಪ್ರದೇಶದ...

‘ನನ್ನ ಮೌನವನ್ನು ಸೋಲು ಎಂದು ತಿಳಿಯಬೇಡಿ’’: ರಾಜ್ಯಸಭೆಯಲ್ಲಿ ಪದಚ್ಯುತಿಯ ನಂತರ ಎಎಪಿಗೆ ತಿರಗೇಟು ನೀಡಿದ ಸಂಸದ ರಾಘವ್ ಛಡ್ಡಾ

ರಾಜ್ಯಸಭೆಯಲ್ಲಿ ಪಕ್ಷದ ಉಪ ನಾಯಕನ ಸ್ಥಾನದಿಂದ ತೆಗೆದುಹಾಕಲ್ಪಟ್ಟ ಒಂದು ದಿನದ ನಂತರ ಆಮ್ ಆದ್ಮಿ ಪಕ್ಷದ ಸಂಸದ ರಾಘವ್ ಛಡ್ಡಾ ಅವರು ಶುಕ್ರವಾರ "ನನ್ನ ಬಾಯಿ ಮುಚ್ಚಿಸಬಹುದು, ಸೋಲಿಸಲು ಸಾಧ್ಯವಿಲ್ಲ" ಎಂದು ಹೇಳಿದ್ದಾರೆ. ಪಕ್ಷದ...

ಮಾಲ್ಡಾ ನ್ಯಾಯಾಂಗ ಅಧಿಕಾರಿಗಳ ಘೇರಾವ್ ಪ್ರಕರಣದಲ್ಲಿ 17 ಜನರ ಬಂಧನ: ತನಿಖೆಯನ್ನು ಎನ್‌ಐಎಗೆ ಹಸ್ತಾಂತರಿಸಿದ ಇಸಿ

ಕೋಲ್ಕತ್ತಾ: ಪಶ್ಚಿಮ ಬಂಗಾಳದ ಮಾಲ್ಡಾ ಜಿಲ್ಲೆಯಲ್ಲಿ ಮತದಾರರ ಪಟ್ಟಿಯಿಂದ ಹೆಸರುಗಳನ್ನು ಅಳಿಸಿಹಾಕಿದ್ದಕ್ಕಾಗಿ ಏಳು ನ್ಯಾಯಾಂಗ ಅಧಿಕಾರಿಗಳ ಘೇರಾವ್‌ನಲ್ಲಿ ಭಾಗಿಯಾಗಿದ್ದಕ್ಕಾಗಿ ಚುನಾವಣಾ ಅಭ್ಯರ್ಥಿ ಸೇರಿದಂತೆ ಕನಿಷ್ಠ 17 ಜನರನ್ನು ಪೊಲೀಸರು ಗುರುವಾರ ಬಂಧಿಸಿದ್ದಾರೆ ಎಂದು...

ದೆಹಲಿ ಗಲಭೆ ಪ್ರಕರಣದಿಂದ ಒಂಬತ್ತು ಜನರನ್ನು ಖುಲಾಸೆಗೊಳಿಸಿದ ನ್ಯಾಯಾಲಯ

2020 ರ ದೆಹಲಿ ಗಲಭೆಗೆ ಸಂಬಂಧಿಸಿದ ಪ್ರಕರಣದಲ್ಲಿ ಒಂಬತ್ತು ಜನರನ್ನು ನ್ಯಾಯಾಲಯವು ಖುಲಾಸೆಗೊಳಿಸಿದೆ. ಸಾಕ್ಷ್ಯಗಳು ನಿರ್ದಿಷ್ಟತೆಯ ಕೊರತೆ ಮತ್ತು ಸಾಮಾನ್ಯ ಸ್ವರೂಪದ್ದಾಗಿರುವುದರಿಂದ ಪ್ರಕರಣದಲ್ಲಿ ಅವುಗಳನ್ನು ನಂಬಲಾಗುವುದಿಲ್ಲ ಎಂ ನ್ಯಾಯಾಲಯ ಹೇಳಿದೆ. ಹೆಚ್ಚುವರಿ ಸೆಷನ್ಸ್ ನ್ಯಾಯಾಧೀಶ...

ಚುನಾವಣಾ ಕಾರ್ಯಕ್ಕೆ ಅರಣ್ಯ ಸಿಬ್ಬಂದಿ : ಅಸ್ಸಾಂ ಸರ್ಕಾರದ ಆದೇಶಕ್ಕೆ ಎನ್‌ಜಿಟಿ ತಡೆ

ವಿಧಾನಸಭೆ ಚುನಾವಣೆಗೆ ಅಸ್ಸಾಂ ಅರಣ್ಯ ಸಂರಕ್ಷಣಾ ಪಡೆಯ 1,600 ಸಿಬ್ಬಂದಿಯನ್ನು ನಿಯೋಜಿಸಲು ಕೋರಿದ್ದ ಅಸ್ಸಾಂ ಸರ್ಕಾರದ ಆದೇಶವನ್ನು ರಾಷ್ಟ್ರೀಯ ಹಸಿರು ನ್ಯಾಯಮಂಡಳಿಯ (ಎನ್‌ಜಿಟಿ) ಪೂರ್ವ ವಲಯ ಪೀಠ ಗುರುವಾರ (ಮಾ.2) ತಡೆಹಿಡಿದಿದೆ. ಈ ಆದೇಶವನ್ನು...

‘ಕರೂರು ದುರಂತದಲ್ಲಿ ಪಿತೂರಿ ಇದೆ’ ಈ ಘಟನೆಯಲ್ಲಿ ನನಗೂ ನ್ಯಾಯ ಬೇಕು: ಟಿವಿಕೆ ಮುಖ್ಯಸ್ಥ ನಟ, ರಾಜಕಾರಣಿ ವಿಜಯ್ ಆರೋಪ  

ಕರೂರಿನಲ್ಲಿ ನಡೆದ ದುರಂತ ಕಾಲ್ತುಳಿತ ಮತ್ತು ಅವರ ಕೊನೆಯ ಚಿತ್ರ ಜನನಾಯಗನ್ ಬಿ ಡುಗಡೆಯ ಹಿಂದೆ ಜಂಟಿ ಕುತಂತ್ರ ಮತ್ತು ಪಿತೂರಿ ಇದೆ ಎಂದು ಟಿವಿಕೆ ಮುಖ್ಯಸ್ಥ ವಿಜಯ್ ಗುರುವಾರ ಆರೋಪಿಸಿದ್ದಾರೆ ಮತ್ತು...