Homeಮುಖಪುಟರಾಜ್ಯದಲ್ಲಿಯೂ ಕೃಷಿ, ಎಪಿಎಂಸಿ ತಿದ್ದುಪಡಿ ಕಾಯ್ದೆಗಳು ವಾಪಸ್ ಆಗಲಿ: ಪ್ರಕಾಶ್ ಕಮ್ಮರಡಿ

ರಾಜ್ಯದಲ್ಲಿಯೂ ಕೃಷಿ, ಎಪಿಎಂಸಿ ತಿದ್ದುಪಡಿ ಕಾಯ್ದೆಗಳು ವಾಪಸ್ ಆಗಲಿ: ಪ್ರಕಾಶ್ ಕಮ್ಮರಡಿ

- Advertisement -
- Advertisement -

ಒಂದು ವರ್ಷಗಳ ಕಾಲ ವಿವಾದಿತ ಕೃಷಿ ಕಾಯ್ದೆಗಳ ವಿರುದ್ಧ ಹೋರಾಡಿದ ರೈತರಿಗೆ ಕೊನೆಗೂ ಜಯ ಸಿಕ್ಕಿದೆ. ಒಕ್ಕೂಟ ಸರ್ಕಾರವು ರೈತರ ಹೋರಾಟಕ್ಕೆ ಮಣಿದಿದೆ. ದೇಶವನ್ನು ಉದ್ದೇಶಿಸಿ ಮಾತನಾಡಿರುವ ಪ್ರಧಾನಿ ನರೇಂದ್ರ ಮೋದಿ, “ವಿವಾದಿತ ಕೃಷಿ ಕಾಯ್ದೆಗಳನ್ನು ರದ್ದು ಮಾಡಲಾಗುವುದು. ದೆಹಲಿ ಗಡಿಯಲ್ಲಿ ಹೋರಾಟ ಮಾಡುತ್ತಿರುವ ರೈತರು ಮನೆಗೆ ಹಿಂತಿರುಗಬೇಕು” ಎಂದು ಮನವಿ ಮಾಡಿದ್ದಾರೆ.

ಈ ಕುರಿತು ಪ್ರತಿಕ್ರಿಯಿಸಿರುವ ಕೃಷಿ ಬೆಲೆ ನಿಗಧಿ ಆಯೋಗದ ಮಾಜಿ ಅಧ್ಯಕ್ಷರಾದ ಪ್ರಕಾಶ್ ಕಮ್ಮರಡಿಯವರು,  “ರೈತರ ಒಂದು ವರ್ಷದ ಹೋರಾಟದ ಫಲವಾಗಿ ಕೊನೆಗೂ ಕೃಷಿ ಕಾಯ್ದೆಗಳನ್ನು ಹಿಂಪಡೆಯಲು ಕೇಂದ್ರ ಸರ್ಕಾರ ಒಪ್ಪಿಕೊಂಡಿದೆ. ಆದರೆ, ಅದೇ ಕೇಂದ್ರದ ಹಾದಿಯನ್ನೇ ಅನುಸರಿಸಿ‌ ತರಾತುರಿಯಲ್ಲಿ ರಾಜ್ಯದಲ್ಲೂ ಜಾರಿಗೆ ತಂದಿರುವ ಭೂ ಸುಧಾರಣೆ ಕಾಯ್ದೆ ಮತ್ತು ಎಪಿಎಂಸಿ ಕಾಯ್ದೆಗಳನ್ನು ಹಿಂಪಡೆದಾಗ ಮಾತ್ರ ರಾಜ್ಯದ ರೈತರ ಹೋರಾಟಕ್ಕೆ ನಿಜವಾದ ಯಶಸ್ಸು ಸಿಗಲಿದೆ ಎಂದು ಅಭಿಪ್ರಾಯ ಪಟ್ಟಿದ್ದಾರೆ.

ಕರ್ನಾಟಕದಲ್ಲಿ ಈಗಾಗಲೇ ತಿದ್ದುಪಡಿ ಮಾಡಿರುವ ಭೂ ಸುಧಾರಣೆ ಕಾಯ್ದೆ ಮತ್ತು ಎಪಿಎಂಸಿ ಕಾಯ್ದೆಗಳು ತರಾತುರಿಯಲ್ಲಿ ಅನುಷ್ಠಾನಗೊಂಡಿದೆ. ಶೇಕಡಾ 70 ರಿಂದ 80 ರಷ್ಟು ವಿವಿಧ ಬೆಳೆಗಳಲ್ಲಿ ಎಪಿಎಂಸಿ ಒಳಗಿನ ವ್ಯವಹಾರ ಈಗಾಗಲೇ ಕಡಿಮೆಯಾಗಿದೆ ಎಂದು ಅವರು ಆತಂಕ ವ್ಯಕ್ತಪಡಿಸಿದ್ದಾರೆ.

ಹಾಗೆಯೇ ಶೇಕಡಾ 60 ಭೂಮಿಯ ವ್ಯವಹಾರ ಈ ಸಾರಿ ಅಧಿಕಗೊಂಡಿದೇ. ಕರ್ನಾಟಕದಲ್ಲಿ ಈ ಕಾಯ್ದೆಗಳು ವಾಪಾಸು ಬಂದಾಗ ಮಾತ್ರ ನಾವೆಲ್ಲ ಯಶಸ್ಸು ಅಂತ ಭಾವಿಸಬಹುದು ಎಂದು ಕೃಷಿ ತಜ್ಞ ಪ್ರಕಾಶ್ ಕಮ್ಮರಡಿ ತಿಳಿಸಿದ್ದಾರೆ.

ಅಷ್ಟರೊಳಗೆ ಬಿಜೆಪಿ ರೈತಪರ ಅಂತ ತನ್ನ ಮುಖವಾಡ ಬದಲಾಯಿಸಿ ಚುನಾವಣಾ ರಾಜಕೀಯದ ಲಾಭ ಪಡೆಯಲು ಎಲ್ಲ ಪ್ರಯತ್ನ ಮಾಡಲಿದೆ, ಅನುಮಾನವೇ ಇಲ್ಲ. ಹಾಗೆ ಶೀಘ್ರ ತೋರುಗಾಣಿಕೆಗೆ ಬೆಂಬಲ ಬೆಲೆಗೆ ಕಾನೂನನ್ನು ತರಬಹುದು, ಜೊತೆಗೆ ಪ್ರಭಾವಿ ಕೆಲ ಮುಖಂಡರುಗಳನ್ನು ಸೆಳೆದುಕೊಳ್ಳುವುದುಬಹುದು. ಎಲ್ಲವುದರಲ್ಲೂ ರೈತ ಸಂಘಟನೆಗಳು ಎಚ್ಚರವಹಿಸಬೇಕು ಎಂದು ಅವರು ಅಭಿಪ್ರಾಯ ಪಟ್ಟಿದ್ದಾರೆ.

“ಒಂದು ವರ್ಷದ ಬಳಿಕ ಗೆದ್ದಿದ್ದೇವೆ. ಮೂರು ವಿವಾದಿತ ಕಾಯ್ದೆಗಳನ್ನು ವಾಪಸ್‌ ಪಡೆಯಲು ಮೋದಿ ಸರ್ಕಾರ ನಿರ್ಧರಿಸಿದೆ. ಇದು ರೈತರಿಗೆ ಸಂದ ಗೆಲುವು” ಎಂದು ಕಿಸಾನ್‌ ಏಕ್ತಾ ಮೋರ್ಚಾ ಟ್ವೀಟ್‌ ಮಾಡಿದೆ.


ಇದನ್ನೂ ಓದಿ; ವಿವಾದಿತ ಕೃಷಿ ಕಾಯ್ದೆಗಳು ರದ್ದು: ಕ್ಷಮೆಯಾಚಿಸಿದ ಮೋದಿ, ರೈತರ ಹೋರಾಟಕ್ಕೆ ಗೆಲುವು

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

1 COMMENT

  1. ಹೊಸ ಕೃಷಿ ಕಾಯ್ದೆ ಯಿಂದ ಪಾಪ ಈ ಮುಟ್ಟಾಳರಿಗೆ ಬರ್ತಿದ್ದ ಕಮಿಷನ್ ನಿಂತುಹೋಗಿರಬೇಕು ಅನಿಸುತ್ತೆ ,ಮೊದಲು ಇವನಿಗೆ ಬರುತ್ತಿರುವ ಆದಾಯ ಮೂಲಗಳ ಬಗ್ಗೆ ತನಿಖೆ ಮಾಡಬೇಕು ,ಆಗ ತಿಳಿಯುತ್ತದೆ ಇವನು ಇವನ ಪರಿವಾರ ತಮ್ಮ ಬೇಳೆ ಬೇಯಿಸಿಕೊಳ್ಳೋಕೆ ವಿದೇಶಗಳಿಂದ ಹಣ ಪಡೆಯುವ ದಂದೆಗಳ ಬಗ್ಗೆ ….ಇವರಿಗೆ ರೈತ ನೆಮ್ಮದಿ ಬೇಕಿಲ್ಲಾ ,ದೇಶ ಅಭಿವೃದ್ಧಿಯ ಬಗ್ಗೆ ಬೇಕಿಲ್ಲಾ ,ಚೈನಿಗಳ ಭಟ್ ನೆಕ್ಕಿ ಕಮೀಷನ್ ಪಡೆದು ಜನರ ದಾರಿ ತಪ್ಪಿಸಿ ದೇಶನ ಅತಂತ್ರ ಮಾಡೋದು ಇವರ ಗುರಿ ,ಅವರಿಂದ ಪ್ರೋತ್ಸಾಹ ನೀಡಲು ನಿಮ್ಮಂತ ಕೆಲ ಪತ್ರಿಕೆಗಳು ,ನಾಚಿಕೆ ಆಗಬೇಕು

LEAVE A REPLY

Please enter your comment!
Please enter your name here

- Advertisment -

ಶೂಟ್ ಮಾಡಿಕೊಂಡು ಪ್ರಾಣ ಬಿಟ್ಟ ಕಾನ್ಫಿಡೆಂಟ್ ಗ್ರೂಪ್ ಸಂಸ್ಥಾಪಕ ಸಿ.ಜೆ. ರಾಯ್: ಐಟಿ ದಾಳಿ ಒತ್ತಡದಿಂದ ಆತ್ಮಹತ್ಯೆ ಶಂಕೆ

ಬೆಂಗಳೂರು: ಖ್ಯಾತ ರಿಯಲ್ ಎಸ್ಟೇಟ್ ಉದ್ಯಮಿ, ಕಾನ್ಫಿಡೆಂಟ್ ಗ್ರೂಪ್ (Confident Group) ಅಧ್ಯಕ್ಷ ಡಾ. ಸಿ.ಜೆ. ರಾಯ್ ಅವರು ಶುಕ್ರವಾರ ಬೆಂಗಳೂರಿನ ತಮ್ಮ ಕಚೇರಿಯಲ್ಲಿ ಗನ್ ನಿಂದ ಶೂಟ್ ಮಾಡಿಕೊಂಡು ಆತ್ಮಹತ್ಯೆಗೆ ಶರಣಾಗಿದ್ದಾರೆ.  ಕೇರಳ...

ಕಾಂಗ್ರೆಸ್ ಆಳ್ವಿಕೆಯಲ್ಲಿ ನುಸುಳಲುಕೋರರು ಬಹುಸಂಖ್ಯಾತರಾದರು; ನುಸುಳುಕೋರರಿಂದ ಅಸ್ಸಾಂ ರಕ್ಷಿಸಲು ಬಿಜೆಪಿಗೆ ಮತ ಹಾಕಿ: ಅಮಿತ್ ಶಾ

ಧೇಮಾಜಿ (ಅಸ್ಸಾಂ): ಕಾಂಗ್ರೆಸ್ ಆಳ್ವಿಕೆಯಲ್ಲಿ ಅಸ್ಸಾಂನ ಜನಸಂಖ್ಯಾಶಾಸ್ತ್ರ ಬದಲಾಗಿದೆ ಎಂದು ಹೇಳಿರುವ ಕೇಂದ್ರ ಗೃಹ ಸಚಿವ ಅಮಿತ್ ಶಾ , ಪ್ರಧಾನಿ ನರೇಂದ್ರ ಮೋದಿ ನೇತೃತ್ವದ ಬಿಜೆಪಿ ನೇತೃತ್ವದ ಸರ್ಕಾರ ಈ ಪ್ರವೃತ್ತಿಯನ್ನು...

ಕೊಲ್ಕತ್ತಾ ಅಗ್ನಿ ಅವಘಡ| ಈವರೆಗೆ ವಾವ್ ಮೊಮೋ ಕಂಪನಿ ಗೋದಾಮು ಸೇರಿದಂತೆ ಇತರೆಡೆ 21 ಜನರು ಸಾವನ್ನಪ್ಪಿರುವ ಮಾಹಿತಿ ಲಭ್ಯ  

ಜನವರಿ 26 ರ ಮುಂಜಾನೆ ಕೋಲ್ಕತ್ತಾದ ಆನಂದಪುರ ಪ್ರದೇಶದಲ್ಲಿ ಸಂಭವಿಸಿದ ಭೀಕರ ಬೆಂಕಿ ಅಪಘಾತದಲ್ಲಿ ಸಾವನ್ನಪ್ಪಿದವರ ಸಂಖ್ಯೆ ಗುರುವಾರ 21 ಕ್ಕೆ ಏರಿದ್ದು, 28 ಜನರು ಇನ್ನೂ ನಾಪತ್ತೆಯಾಗಿದ್ದಾರೆ.  ಬೆಂಕಿಯ ಅವಘಡದಲ್ಲಿ ಎರಡು ಗೋದಾಮುಗಳು...

ಮುಟ್ಟಿನ ಆರೋಗ್ಯ ಮೂಲಭೂತ ಹಕ್ಕು, ಬದುಕುವ ಹಕ್ಕಿನ ಭಾಗ : ಸುಪ್ರೀಂ ಕೋರ್ಟ್

ಮುಟ್ಟಿನ ಆರೋಗ್ಯ ಸಂವಿಧಾನದ 21ನೇ ವಿಧಿಯಡಿ ಖಾತ್ರಿಪಡಿಸಿದ ಮೂಲಭೂತ ಹಕ್ಕು, ಬದುಕುವ ಹಕ್ಕಿನ ಭಾಗ ಎಂದು ಸುಪ್ರೀಂ ಕೋರ್ಟ್ ಶುಕ್ರವಾರ (ಜ.30) ಮಹತ್ವದ ತೀರ್ಪು ನೀಡಿದೆ. ಎಲ್ಲಾ ರಾಜ್ಯಗಳು ಮತ್ತು ಕೇಂದ್ರಾಡಳಿತ ಪ್ರದೇಶಗಳ ಸರ್ಕಾರಿ,...

ಅತ್ಯಾಚಾರ ಪ್ರಕರಣದಲ್ಲಿ ಎಸ್‌ಪಿ ನಾಯಕ ಮೊಯಿದ್ ಖಾನ್ ಖುಲಾಸೆ: ಬಂಧನದ ಎರಡು ವರ್ಷಗಳ ನಂತರ ಬುಲ್ಡೋಜರ್ ನಿಂದ ಮನೆ ಕೆಡವಿದ್ದ ಯೋಗಿ ಸರ್ಕಾರ

2024 ರಲ್ಲಿ ಅಪ್ರಾಪ್ತ ಬಾಲಕಿಯ ಮೇಲೆ ನಡೆದ ಸಾಮೂಹಿಕ ಅತ್ಯಾಚಾರ ಪ್ರಕರಣದಲ್ಲಿ ಸಮಾಜವಾದಿ ಪಕ್ಷದ ನಾಯಕ ಮೊಯಿದ್ ಖಾನ್ ಅವರನ್ನು ಉತ್ತರ ಪ್ರದೇಶದ ಅಯೋಧ್ಯೆಯ ಪೋಕ್ಸೋ ನ್ಯಾಯಾಲಯವು ಖುಲಾಸೆಗೊಳಿಸಿದೆ.  ಅಪ್ರಾಪ್ತ ಬಾಲಕಿಯ ಮೇಲೆ ನಡೆದ...

ಸಿಎಂ ಸಿದ್ದರಾಮಯ್ಯ, ಡಿಕೆಶಿ ವಿರುದ್ಧ ‘ಸ್ಕ್ಯಾಮ್ ಲಾರ್ಡ್’ ಪೋಸ್ಟ್: ಕರ್ನಾಟಕ ಬಿಜೆಪಿ ಎಕ್ಸ್ ಹ್ಯಾಂಡಲ್ ವಿರುದ್ಧ ಪ್ರಕರಣ ದಾಖಲು

ಕರ್ನಾಟಕ ಮುಖ್ಯಮಂತ್ರಿ ಸಿದ್ದರಾಮಯ್ಯ, ಉಪಮುಖ್ಯಮಂತ್ರಿ ಡಿಕೆ ಶಿವಕುಮಾರ್ ಮತ್ತು ಇತರ ಸಚಿವರನ್ನು ಗುರಿಯಾಗಿಸಿಕೊಂಡು "ಮಾನಹಾನಿಕರ" ಪೋಸ್ಟ್ ಪೋಸ್ಟ್ ಮಾಡಿದ್ದಕ್ಕಾಗಿ ಮತ್ತು ರಾಜ್ಯವನ್ನು "ಲೂಟಿ" ಮಾಡುವಲ್ಲಿ ಅವರು ಭಾಗಿಯಾಗಿದ್ದಾರೆ ಎಂದು ಆರೋಪಿಸಿ ಬಿಜೆಪಿಯ 'ಎಕ್ಸ್'...

‘ನೀವು ಮುಂದೆ ಬರಲು ಸಿದ್ಧರಿದ್ದೀರಾ, ಅಥವಾ ಟ್ವೀಟ್ ಮಾಡುತ್ತಲೇ ಇರುತ್ತೀರಾ?’; ಮೋಹನ್ ದಾಸ್ ಪೈಗೆ ರಾಮಲಿಂಗಾರೆಡ್ಡಿ ಓಪನ್ ಚಾಲೆಂಜ್..!

ಬೆಂಗಳೂರಿನಲ್ಲಿ ಬಿಎಂಟಿಸಿ (BMTC) ಬಸ್‌ಗಳ ಕೊರತೆಯನ್ನು ಎತ್ತಿ, ಖಾಸಗಿ ಕಂಪನಿಗಳಿಗೆ ನಗರ ಬಸ್ ಸೇವೆಗೆ ಅವಕಾಶ ನೀಡಬೇಕು ಎಂದು ಸಲಹೆ ನೀಡಿದ್ದ, ಮೋಹನ್ ದಾಸ್ ಪೈ ಹೇಳಿಕೆಗೆ ಸಾರಿಗೆ ಸಚಿವ ರಾಮಲಿಂಗಾ ರೆಡ್ಡಿ...

ಪ್ಯಾಲೆಸ್ತೀನ್ ಸಿನಿಮಾಗಳ ಪ್ರದರ್ಶನಕ್ಕೆ ಅನುಮತಿ ನಿರಾಕರಣೆ; ರಾಜ್ಯ ಸರ್ಕಾರ ಗಟ್ಟಿ ದನಿಯಲ್ಲಿ ಪ್ರತಿಭಟಿಸಬೇಕು : ನಟ ಪ್ರಕಾಶ್ ರಾಜ್

ಬೆಂಗಳೂರು ಅಂತಾರಾಷ್ಟ್ರೀಯ ಚಲನಚಿತ್ರೋತ್ಸವದಲ್ಲಿ ಪ್ಯಾಲೆಸ್ತೀನಿಯನ್ ಸಿನಿಮಾಗಳ ಪ್ರದರ್ಶನಕ್ಕೆ ಅನುಮತಿ ನಿರಾಕರಿಸಿರುವ ಕೇಂದ್ರ ಸರ್ಕಾರದ ಕ್ರಮವನ್ನು ರಾಜ್ಯ ಸರ್ಕಾರ ಗಟ್ಟಿ ದನಿಯಲ್ಲಿ ಪ್ರತಿರೋಧಿಸಬೇಕು, ಪ್ರತಿಭಟಿಸಬೇಕು ಎಂದು ನಟ ಪ್ರಕಾಶ್ ರಾಜ್ ಒತ್ತಾಯಿಸಿದರು. ಗುರುವಾರ (ಜ.29) ಸಂಜೆ...

ಗೌರಿ ಲಂಕೇಶರ ನೆರಳು ನನ್ನ ಮೇಲೆ ಬಿದ್ದಿರುವ ಕಾರಣಕ್ಕೆ ‘ಲ್ಯಾಂಡ್‍ ಲಾರ್ಡ್‌’ನಂತಹ ಸಿನಿಮಾ ಮಾಡಲು ಕೈ ಹಾಕಿದ್ದೇನೆ: ನಟ ದುನಿಯಾ ವಿಜಯ್

ಗೌರಿ ಲಂಕೇಶ್ ಹಾಗೂ ಇತರ ಹೋರಾಟಗಾರರ ನೆರಳು ನನ್ನ ಮೇಲೆ ಬಿದ್ದಿರುವ ಕಾರಣಕ್ಕೆ ನಾನು 'ಲ್ಯಾಂಡ್‍ಲಾರ್ಡ್' ನಂತಹ ಸಿನೆಮಾ ಮಾಡುವುದಕ್ಕೆ ಕೈ ಹಾಕಿದ್ದೇನೆ ಎಂದು ನಟ ದುನಿಯಾ ವಿಜಯ್ ಹೇಳಿದರು. ಗುರುವಾರ (ಜ.29) ಬೆಂಗಳೂರಿನ...

ಜಾತಿ ತಾರತಮ್ಯ ತಡೆಗಟ್ಟುವ ಯುಜಿಸಿಯ ಹೊಸ ನಿಯಮಕ್ಕೆ ಸುಪ್ರೀಂ ಕೋರ್ಟ್ ತಡೆ

ಉನ್ನತ ಶಿಕ್ಷಣ ಸಂಸ್ಥೆಗಳಲ್ಲಿ ಜಾತಿ ಆಧಾರಿತ ತಾರತಮ್ಯವನ್ನು ತಡೆಗಟ್ಟಲು ಕೇಂದ್ರ ಸರ್ಕಾರ ಜಾರಿಗೆ ತಂದಿರುವ ವಿಶ್ವವಿದ್ಯಾಲಯ ಅನುದಾನ ಆಯೋಗದ (ಉನ್ನತ ಶಿಕ್ಷಣ ಸಂಸ್ಥೆಗಳಲ್ಲಿ ಸಮಾನತೆಯ ಪ್ರಚಾರ) ನಿಯಮಗಳು, 2026ಕ್ಕೆ ಸುಪ್ರೀಂ ಕೋರ್ಟ್ ಗುರುವಾರ...