Homeಮುಖಪುಟರಾಜ್ಯದಲ್ಲಿಯೂ ಕೃಷಿ, ಎಪಿಎಂಸಿ ತಿದ್ದುಪಡಿ ಕಾಯ್ದೆಗಳು ವಾಪಸ್ ಆಗಲಿ: ಪ್ರಕಾಶ್ ಕಮ್ಮರಡಿ

ರಾಜ್ಯದಲ್ಲಿಯೂ ಕೃಷಿ, ಎಪಿಎಂಸಿ ತಿದ್ದುಪಡಿ ಕಾಯ್ದೆಗಳು ವಾಪಸ್ ಆಗಲಿ: ಪ್ರಕಾಶ್ ಕಮ್ಮರಡಿ

- Advertisement -
- Advertisement -

ಒಂದು ವರ್ಷಗಳ ಕಾಲ ವಿವಾದಿತ ಕೃಷಿ ಕಾಯ್ದೆಗಳ ವಿರುದ್ಧ ಹೋರಾಡಿದ ರೈತರಿಗೆ ಕೊನೆಗೂ ಜಯ ಸಿಕ್ಕಿದೆ. ಒಕ್ಕೂಟ ಸರ್ಕಾರವು ರೈತರ ಹೋರಾಟಕ್ಕೆ ಮಣಿದಿದೆ. ದೇಶವನ್ನು ಉದ್ದೇಶಿಸಿ ಮಾತನಾಡಿರುವ ಪ್ರಧಾನಿ ನರೇಂದ್ರ ಮೋದಿ, “ವಿವಾದಿತ ಕೃಷಿ ಕಾಯ್ದೆಗಳನ್ನು ರದ್ದು ಮಾಡಲಾಗುವುದು. ದೆಹಲಿ ಗಡಿಯಲ್ಲಿ ಹೋರಾಟ ಮಾಡುತ್ತಿರುವ ರೈತರು ಮನೆಗೆ ಹಿಂತಿರುಗಬೇಕು” ಎಂದು ಮನವಿ ಮಾಡಿದ್ದಾರೆ.

ಈ ಕುರಿತು ಪ್ರತಿಕ್ರಿಯಿಸಿರುವ ಕೃಷಿ ಬೆಲೆ ನಿಗಧಿ ಆಯೋಗದ ಮಾಜಿ ಅಧ್ಯಕ್ಷರಾದ ಪ್ರಕಾಶ್ ಕಮ್ಮರಡಿಯವರು,  “ರೈತರ ಒಂದು ವರ್ಷದ ಹೋರಾಟದ ಫಲವಾಗಿ ಕೊನೆಗೂ ಕೃಷಿ ಕಾಯ್ದೆಗಳನ್ನು ಹಿಂಪಡೆಯಲು ಕೇಂದ್ರ ಸರ್ಕಾರ ಒಪ್ಪಿಕೊಂಡಿದೆ. ಆದರೆ, ಅದೇ ಕೇಂದ್ರದ ಹಾದಿಯನ್ನೇ ಅನುಸರಿಸಿ‌ ತರಾತುರಿಯಲ್ಲಿ ರಾಜ್ಯದಲ್ಲೂ ಜಾರಿಗೆ ತಂದಿರುವ ಭೂ ಸುಧಾರಣೆ ಕಾಯ್ದೆ ಮತ್ತು ಎಪಿಎಂಸಿ ಕಾಯ್ದೆಗಳನ್ನು ಹಿಂಪಡೆದಾಗ ಮಾತ್ರ ರಾಜ್ಯದ ರೈತರ ಹೋರಾಟಕ್ಕೆ ನಿಜವಾದ ಯಶಸ್ಸು ಸಿಗಲಿದೆ ಎಂದು ಅಭಿಪ್ರಾಯ ಪಟ್ಟಿದ್ದಾರೆ.

ಕರ್ನಾಟಕದಲ್ಲಿ ಈಗಾಗಲೇ ತಿದ್ದುಪಡಿ ಮಾಡಿರುವ ಭೂ ಸುಧಾರಣೆ ಕಾಯ್ದೆ ಮತ್ತು ಎಪಿಎಂಸಿ ಕಾಯ್ದೆಗಳು ತರಾತುರಿಯಲ್ಲಿ ಅನುಷ್ಠಾನಗೊಂಡಿದೆ. ಶೇಕಡಾ 70 ರಿಂದ 80 ರಷ್ಟು ವಿವಿಧ ಬೆಳೆಗಳಲ್ಲಿ ಎಪಿಎಂಸಿ ಒಳಗಿನ ವ್ಯವಹಾರ ಈಗಾಗಲೇ ಕಡಿಮೆಯಾಗಿದೆ ಎಂದು ಅವರು ಆತಂಕ ವ್ಯಕ್ತಪಡಿಸಿದ್ದಾರೆ.

ಹಾಗೆಯೇ ಶೇಕಡಾ 60 ಭೂಮಿಯ ವ್ಯವಹಾರ ಈ ಸಾರಿ ಅಧಿಕಗೊಂಡಿದೇ. ಕರ್ನಾಟಕದಲ್ಲಿ ಈ ಕಾಯ್ದೆಗಳು ವಾಪಾಸು ಬಂದಾಗ ಮಾತ್ರ ನಾವೆಲ್ಲ ಯಶಸ್ಸು ಅಂತ ಭಾವಿಸಬಹುದು ಎಂದು ಕೃಷಿ ತಜ್ಞ ಪ್ರಕಾಶ್ ಕಮ್ಮರಡಿ ತಿಳಿಸಿದ್ದಾರೆ.

ಅಷ್ಟರೊಳಗೆ ಬಿಜೆಪಿ ರೈತಪರ ಅಂತ ತನ್ನ ಮುಖವಾಡ ಬದಲಾಯಿಸಿ ಚುನಾವಣಾ ರಾಜಕೀಯದ ಲಾಭ ಪಡೆಯಲು ಎಲ್ಲ ಪ್ರಯತ್ನ ಮಾಡಲಿದೆ, ಅನುಮಾನವೇ ಇಲ್ಲ. ಹಾಗೆ ಶೀಘ್ರ ತೋರುಗಾಣಿಕೆಗೆ ಬೆಂಬಲ ಬೆಲೆಗೆ ಕಾನೂನನ್ನು ತರಬಹುದು, ಜೊತೆಗೆ ಪ್ರಭಾವಿ ಕೆಲ ಮುಖಂಡರುಗಳನ್ನು ಸೆಳೆದುಕೊಳ್ಳುವುದುಬಹುದು. ಎಲ್ಲವುದರಲ್ಲೂ ರೈತ ಸಂಘಟನೆಗಳು ಎಚ್ಚರವಹಿಸಬೇಕು ಎಂದು ಅವರು ಅಭಿಪ್ರಾಯ ಪಟ್ಟಿದ್ದಾರೆ.

“ಒಂದು ವರ್ಷದ ಬಳಿಕ ಗೆದ್ದಿದ್ದೇವೆ. ಮೂರು ವಿವಾದಿತ ಕಾಯ್ದೆಗಳನ್ನು ವಾಪಸ್‌ ಪಡೆಯಲು ಮೋದಿ ಸರ್ಕಾರ ನಿರ್ಧರಿಸಿದೆ. ಇದು ರೈತರಿಗೆ ಸಂದ ಗೆಲುವು” ಎಂದು ಕಿಸಾನ್‌ ಏಕ್ತಾ ಮೋರ್ಚಾ ಟ್ವೀಟ್‌ ಮಾಡಿದೆ.


ಇದನ್ನೂ ಓದಿ; ವಿವಾದಿತ ಕೃಷಿ ಕಾಯ್ದೆಗಳು ರದ್ದು: ಕ್ಷಮೆಯಾಚಿಸಿದ ಮೋದಿ, ರೈತರ ಹೋರಾಟಕ್ಕೆ ಗೆಲುವು

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

1 COMMENT

  1. ಹೊಸ ಕೃಷಿ ಕಾಯ್ದೆ ಯಿಂದ ಪಾಪ ಈ ಮುಟ್ಟಾಳರಿಗೆ ಬರ್ತಿದ್ದ ಕಮಿಷನ್ ನಿಂತುಹೋಗಿರಬೇಕು ಅನಿಸುತ್ತೆ ,ಮೊದಲು ಇವನಿಗೆ ಬರುತ್ತಿರುವ ಆದಾಯ ಮೂಲಗಳ ಬಗ್ಗೆ ತನಿಖೆ ಮಾಡಬೇಕು ,ಆಗ ತಿಳಿಯುತ್ತದೆ ಇವನು ಇವನ ಪರಿವಾರ ತಮ್ಮ ಬೇಳೆ ಬೇಯಿಸಿಕೊಳ್ಳೋಕೆ ವಿದೇಶಗಳಿಂದ ಹಣ ಪಡೆಯುವ ದಂದೆಗಳ ಬಗ್ಗೆ ….ಇವರಿಗೆ ರೈತ ನೆಮ್ಮದಿ ಬೇಕಿಲ್ಲಾ ,ದೇಶ ಅಭಿವೃದ್ಧಿಯ ಬಗ್ಗೆ ಬೇಕಿಲ್ಲಾ ,ಚೈನಿಗಳ ಭಟ್ ನೆಕ್ಕಿ ಕಮೀಷನ್ ಪಡೆದು ಜನರ ದಾರಿ ತಪ್ಪಿಸಿ ದೇಶನ ಅತಂತ್ರ ಮಾಡೋದು ಇವರ ಗುರಿ ,ಅವರಿಂದ ಪ್ರೋತ್ಸಾಹ ನೀಡಲು ನಿಮ್ಮಂತ ಕೆಲ ಪತ್ರಿಕೆಗಳು ,ನಾಚಿಕೆ ಆಗಬೇಕು

LEAVE A REPLY

Please enter your comment!
Please enter your name here

- Advertisment -

2020ರ ದೆಹಲಿ ಗಲಭೆ ಪ್ರಕರಣ: ಐವರು ಆರೋಪಿಗಳನ್ನು ಖುಲಾಸೆಗೊಳಿಸಿದ ನ್ಯಾಯಾಲಯ

2020 ರ ದೆಹಲಿ ಗಲಭೆಗೆ ಸಂಬಂಧಿಸಿದಂತೆ ಬೆಂಕಿ ಹಚ್ಚುವಿಕೆ, ಗಲಭೆ ಮತ್ತು ವಿಧ್ವಂಸಕ ಕೃತ್ಯದ ಆರೋಪ ಹೊತ್ತಿರುವ ಐವರನ್ನು ನ್ಯಾಯಾಲಯ ಖುಲಾಸೆಗೊಳಿಸಿದೆ. ಅಬ್ದುಲ್ ಸತ್ತಾರ್, ಮುಹಮ್ಮದ್ ಖಾಲಿದ್, ಹುನೈನ್, ತನ್ವೀರ್ ಮತ್ತು ಆರಿಫ್ ವಿರುದ್ಧದ...

ಕಾರ್‌ ಚಲಾಯಿಸುವಾಗ ಫೋನ್‌ನಲ್ಲಿ ಮಾತನಾಡದಂತೆ ಹೇಳಿದ್ದಕ್ಕೆ ಪತ್ರಕರ್ತನ ಮೇಲೆ ರಾಡ್‌ನಿಂದ ಹಲ್ಲೆ

ಆ್ಯಪ್ ಆಧಾರಿತ ಟ್ಯಾಕ್ಸಿ ಬುಕಿಂಗ್‌ ಮಾಡುವ ಪ್ರಯಾಣಿಕರ ಸುರಕ್ಷತೆ ಮತ್ತು ಚಾಲಕರ ನಡವಳಿಕೆಯ ಕುರಿತ ಕಳವಳವಳಕಾರಿ ಘಟನೆಯೊಂದು ಹರಿಯಾಣದ ಫರಿದಾಬಾದ್‌ನಲ್ಲಿ ಬೆಳಕಿಗೆ ಬಂದಿದೆ. ರ್ಯಾಪಿಡೋ ಟ್ಯಾಕ್ಸಿ ಚಾಲಕನೊಬ್ಬ ಪ್ರಯಾಣಿಕನ ಮೇಲೆ ಕಬ್ಬಿಣದ ರಾಡ್‌ನಿಂದ...

ರಾಜಸ್ಥಾನ| ಎಥೆನಾಲ್ ಸ್ಥಾವರದ ವಿರುದ್ಧ ಪ್ರತಿಭಟನೆ: 40 ಜನರ ಬಂಧನ

ರಾಜಸ್ಥಾನದ ಹನುಮಾನ್‌ಗಢ ಜಿಲ್ಲೆಯ ರೈತರು, ಪ್ರಸ್ತಾವಿತ ಎಥೆನಾಲ್ ಕಾರ್ಖಾನೆಯ ವಿರುದ್ಧ ಎರಡನೇ ದಿನವೂ ಪ್ರತಿಭಟನೆ ಮುಂದುವರೆಸಿದ್ದಾರೆ, ಈ ಪ್ರದೇಶದಲ್ಲಿ ಹೆಚ್ಚಿನ ಭದ್ರತೆ ಮತ್ತು ಇಂಟರ್ನೆಟ್ ಸೇವೆಗಳನ್ನು ಸ್ಥಗಿತಗೊಳಿಸಲಾಗಿದೆ. ಗುರುವಾರ ಮುಂಜಾನೆ ಟಿಬ್ಬಿ ಬಳಿಯ ಗುರುದ್ವಾರದಲ್ಲಿ...

ವಿಧಾನಸಭೆಯಲ್ಲಿ ‘ಗೃಹಲಕ್ಷ್ಮಿ’ ಗದ್ದಲ : ಬಿಜೆಪಿ ಸದಸ್ಯರಿಂದ ಸಭಾತ್ಯಾಗ, ಕ್ಷಮೆ ಕೋರಿದ ಸಚಿವೆ ಲಕ್ಷ್ಮಿ ಹೆಬ್ಬಾಳ್ಕರ್

ಗೃಹಲಕ್ಷಿ ಯೋಜನೆಯ ಹಣ ಬಿಡುಗಡೆ ಸಂಬಂಧ ಸಚಿವರು ಸದನಕ್ಕೆ ತಪ್ಪು ಮಾಹಿತಿ ನೀಡಿದ್ದಾರೆ ಎಂಬ ವಿಚಾರ ಇಂದು (ಡಿ.17 ಬುಧವಾರ) ವಿಧಾನಸಭೆಯಲ್ಲಿ ದೊಡ್ಡ ಮಟ್ಟದ ವಾಗ್ವಾದ, ಆರೋಪ-ಪ್ರತ್ಯಾರೋಪ, ಗದ್ದಲ, ಪ್ರತಿಭಟನೆ, ಸಭಾತ್ಯಾಗ ಮತ್ತು...

ತಂಪು ಪಾನೀಯದಲ್ಲಿ ಮತ್ತು ಬರುವ ಔಷಧ ಬೆರೆಸಿ ಅಪ್ರಾಪ್ತ ಬಾಲಕಿಯರ ಮೇಲೆ ಅತ್ಯಾಚಾರ: ಆರೋಪಿ ಬಂಧನ

ಮುಂಬೈ ನಗರವನ್ನೇ ಬೆಚ್ಚಿಬೀಳಿಸಿದ ಆಘಾತಕಾರಿ ಘಟನೆಯಲ್ಲಿ, ವಕ್ತಿಯೋರ್ವ ಮತ್ತು ಬರುವ ತಂಪು ಪಾನೀಯ ನೀಡಿ ಅಪ್ರಾಪ್ತ ಬಾಲಕಿಯರ ಮೇಲೆ ಲೈಂಗಿಕ ದೌರ್ಜನ್ಯ ಎಸಗಿದ್ದಾನೆ. ಅಪರಾಧದ ಅಶ್ಲೀಲ ವೀಡಿಯೊಗಳನ್ನು ರೆಕಾರ್ಡ್ ಮಾಡಿ, ನಂತರ ವೀಡಿಯೊಗಳನ್ನು...

ಮನರೇಗಾ ಬದಲು ವಿಬಿ-ಜಿ ರಾಮ್ ಜಿ : ಲೋಕಸಭೆಯಲ್ಲಿ ಮಸೂದೆ ಅಂಗೀಕಾರದ ವೇಳೆ ಸಭಾತ್ಯಾಗಕ್ಕೆ ನಿರ್ಧರಿಸಿದ ವಿಪಕ್ಷಗಳು

ನರೇಗಾ ಬದಲು ತಂದಿರುವ ವಿಕಸಿತ್ ಭಾರತ್-ಗ್ಯಾರಂಟಿ ಫಾರ್ ರೋಜ್‌ಗಾರ್ ಅಂಡ್ ಅಜೀವಿಕಾ ಮಿಷನ್ (ಗ್ರಾಮೀಣ್) ಮಸೂದೆ, 2025 (ವಿಬಿ–ಜಿ ರಾಮ್ ಜಿ ಮಸೂದೆ) ಲೋಕಸಭೆಯಲ್ಲಿ ಅಂಗೀಕಾರದ ವೇಳೆ ಸಹಕರಿಸದಿರಲು ವಿರೋಧ ಪಕ್ಷಗಳ ಸಂಸದರು...

ಅಪ್ರಾಪ್ತ ಬಾಲಕಿ ಮೇಲೆ ಅತ್ಯಾಚಾರ ಆರೋಪ: ಮ್ಯೂಸಿಕ್ ಮೈಲಾರಿ ಮೇಲೆ ಪೋಕ್ಸೋ ಪ್ರಕರಣ ದಾಖಲು 

ಬೆಂಗಳೂರು: ಉತ್ತರ ಕರ್ನಾಟಕದ ಜನಪದ ಗಾಯಕ ಹಾಗೂ ಯೂಟ್ಯೂಬ್ ಸ್ಟಾರ್ ಎಂದೇ ಖ್ಯಾತಿ ಪಡೆದಿದ್ದ ‘ಮ್ಯೂಸಿಕ್ ಮೈಲಾರಿ’ಎಂಬಾತನನ್ನು ಅಪ್ರಾಪ್ತೆ ಮೇಲೆ ಲೈಂಗಿಕ ದೌರ್ಜನ್ಯ ಎಸಗಿದ ಆರೋಪದಡಿ ಮಹಾಲಿಂಗಪುರ ಪೊಲೀಸರು ಬಂಧಿಸಿದ್ದಾರೆ. ಈ ಪ್ರಕರಣಕ್ಕೆ ಸಂಬಂಧಿಸಿದಂತೆ ಮೈಲಾರಿ...

ಇಂಧನ ಖರೀದಿಗೆ ‘ಮಾಲಿನ್ಯ ನಿಯಂತ್ರಣ ಪ್ರಮಾಣಪತ್ರ’ ಕಡ್ಡಾಯಗೊಳಿಸಿದ ದೆಹಲಿ ಸರ್ಕಾರ

ರಾಷ್ಟ್ರ ರಾಜಧಾನಿ ದೆಹಲಿಯ ವಾಹನ ಮಾಲೀಕರು ಕಟ್ಟುನಿಟ್ಟಾದ ಆದೇಶ ಎದುರಿಸುತ್ತಾರೆ. ಡಿಸೆಂಬರ್ 18 ರಿಂದ ನಗರದಾದ್ಯಂತದ ಪೆಟ್ರೋಲ್ ಬಂಕ್‌ಗಳಲ್ಲಿ ಇಂಧನ ಖರೀದಿಗೆ ಮಾಲಿನ್ಯ ನಿಯಂತ್ರಣ ಪ್ರಮಾಣಪತ್ರ (ಪಿಯುಸಿ) ಕಡ್ಡಾಯಗೊಳಿಸಲಾಗಿದೆ. ದೆಹಲಿ ಪರಿಸರ ಸಚಿವ ಮಂಜಿಂದರ್...

ವೈದ್ಯೆಯ ಹಿಜಾಬ್ ಎಳೆದ ಬಿಹಾರ ಸಿಎಂ, ಅವಹೇಳನ ಮಾಡಿದ ಯುಪಿ ಸಚಿವನ ವಿರುದ್ದ ದೂರು ದಾಖಲು

ವೈದ್ಯೆಯ ಹಿಜಾಬ್ ಎಳೆದ ಬಿಹಾರದ ಮುಖ್ಯಮಂತ್ರಿ ನಿತೀಶ್ ಕುಮಾರ್ ಮತ್ತು ಈ ಘಟನೆಯ ಕುರಿತು ಮಾತನಾಡುವಾಗ ಮಹಿಳೆಯನ್ನು ಅವಮಾನಿಸಿದ ಉತ್ತರ ಪ್ರದೇಶದ ಸಂಪುಟ ಸಚಿವ ಸಂಜಯ್ ನಿಶಾದ್ ವಿರುದ್ದ ಲಕ್ನೋದ ಕೈಸರ್‌ಬಾಗ್ ಪೊಲೀಸ್...

1 ಲಕ್ಷ ರೂಪಾಯಿ ಸಾಲ 74 ಲಕ್ಷ ರೂಪಾಯಿಗೆ ಏರಿಕೆ, ಸಾಲ ತೀರಿಸಲು ಕಿಡ್ನಿ ಮಾರಿದ ರೈತ 

ಅಕ್ರಮವಾಗಿ ಸಾಲ ನೀಡುವವರಿಂದ 1 ಲಕ್ಷ ಸಾಲ ಪಡೆದಿದ್ದು, ಅದಕ್ಕೆ ಹೆಚ್ಚಿನ ದಿನದ ಬಡ್ಡಿ ಸೇರಿ 75 ಲಕ್ಷ ಸಾಲ ಏರಿಕೆಯಾದ ಕಾರಣ ವ್ಯಕ್ತಿಯೊಬ್ಬ ತನ್ನ ಕಿಡ್ನಿಯನ್ನೇ ಮಾರಾಟ ಮಾಡಿರುವ ಘಟನೆ ಮಹಾರಾಷ್ಟ್ರದಲ್ಲಿ...