Homeಮುಖಪುಟರಾಜ್ಯದಲ್ಲಿಯೂ ಕೃಷಿ, ಎಪಿಎಂಸಿ ತಿದ್ದುಪಡಿ ಕಾಯ್ದೆಗಳು ವಾಪಸ್ ಆಗಲಿ: ಪ್ರಕಾಶ್ ಕಮ್ಮರಡಿ

ರಾಜ್ಯದಲ್ಲಿಯೂ ಕೃಷಿ, ಎಪಿಎಂಸಿ ತಿದ್ದುಪಡಿ ಕಾಯ್ದೆಗಳು ವಾಪಸ್ ಆಗಲಿ: ಪ್ರಕಾಶ್ ಕಮ್ಮರಡಿ

- Advertisement -
- Advertisement -

ಒಂದು ವರ್ಷಗಳ ಕಾಲ ವಿವಾದಿತ ಕೃಷಿ ಕಾಯ್ದೆಗಳ ವಿರುದ್ಧ ಹೋರಾಡಿದ ರೈತರಿಗೆ ಕೊನೆಗೂ ಜಯ ಸಿಕ್ಕಿದೆ. ಒಕ್ಕೂಟ ಸರ್ಕಾರವು ರೈತರ ಹೋರಾಟಕ್ಕೆ ಮಣಿದಿದೆ. ದೇಶವನ್ನು ಉದ್ದೇಶಿಸಿ ಮಾತನಾಡಿರುವ ಪ್ರಧಾನಿ ನರೇಂದ್ರ ಮೋದಿ, “ವಿವಾದಿತ ಕೃಷಿ ಕಾಯ್ದೆಗಳನ್ನು ರದ್ದು ಮಾಡಲಾಗುವುದು. ದೆಹಲಿ ಗಡಿಯಲ್ಲಿ ಹೋರಾಟ ಮಾಡುತ್ತಿರುವ ರೈತರು ಮನೆಗೆ ಹಿಂತಿರುಗಬೇಕು” ಎಂದು ಮನವಿ ಮಾಡಿದ್ದಾರೆ.

ಈ ಕುರಿತು ಪ್ರತಿಕ್ರಿಯಿಸಿರುವ ಕೃಷಿ ಬೆಲೆ ನಿಗಧಿ ಆಯೋಗದ ಮಾಜಿ ಅಧ್ಯಕ್ಷರಾದ ಪ್ರಕಾಶ್ ಕಮ್ಮರಡಿಯವರು,  “ರೈತರ ಒಂದು ವರ್ಷದ ಹೋರಾಟದ ಫಲವಾಗಿ ಕೊನೆಗೂ ಕೃಷಿ ಕಾಯ್ದೆಗಳನ್ನು ಹಿಂಪಡೆಯಲು ಕೇಂದ್ರ ಸರ್ಕಾರ ಒಪ್ಪಿಕೊಂಡಿದೆ. ಆದರೆ, ಅದೇ ಕೇಂದ್ರದ ಹಾದಿಯನ್ನೇ ಅನುಸರಿಸಿ‌ ತರಾತುರಿಯಲ್ಲಿ ರಾಜ್ಯದಲ್ಲೂ ಜಾರಿಗೆ ತಂದಿರುವ ಭೂ ಸುಧಾರಣೆ ಕಾಯ್ದೆ ಮತ್ತು ಎಪಿಎಂಸಿ ಕಾಯ್ದೆಗಳನ್ನು ಹಿಂಪಡೆದಾಗ ಮಾತ್ರ ರಾಜ್ಯದ ರೈತರ ಹೋರಾಟಕ್ಕೆ ನಿಜವಾದ ಯಶಸ್ಸು ಸಿಗಲಿದೆ ಎಂದು ಅಭಿಪ್ರಾಯ ಪಟ್ಟಿದ್ದಾರೆ.

ಕರ್ನಾಟಕದಲ್ಲಿ ಈಗಾಗಲೇ ತಿದ್ದುಪಡಿ ಮಾಡಿರುವ ಭೂ ಸುಧಾರಣೆ ಕಾಯ್ದೆ ಮತ್ತು ಎಪಿಎಂಸಿ ಕಾಯ್ದೆಗಳು ತರಾತುರಿಯಲ್ಲಿ ಅನುಷ್ಠಾನಗೊಂಡಿದೆ. ಶೇಕಡಾ 70 ರಿಂದ 80 ರಷ್ಟು ವಿವಿಧ ಬೆಳೆಗಳಲ್ಲಿ ಎಪಿಎಂಸಿ ಒಳಗಿನ ವ್ಯವಹಾರ ಈಗಾಗಲೇ ಕಡಿಮೆಯಾಗಿದೆ ಎಂದು ಅವರು ಆತಂಕ ವ್ಯಕ್ತಪಡಿಸಿದ್ದಾರೆ.

ಹಾಗೆಯೇ ಶೇಕಡಾ 60 ಭೂಮಿಯ ವ್ಯವಹಾರ ಈ ಸಾರಿ ಅಧಿಕಗೊಂಡಿದೇ. ಕರ್ನಾಟಕದಲ್ಲಿ ಈ ಕಾಯ್ದೆಗಳು ವಾಪಾಸು ಬಂದಾಗ ಮಾತ್ರ ನಾವೆಲ್ಲ ಯಶಸ್ಸು ಅಂತ ಭಾವಿಸಬಹುದು ಎಂದು ಕೃಷಿ ತಜ್ಞ ಪ್ರಕಾಶ್ ಕಮ್ಮರಡಿ ತಿಳಿಸಿದ್ದಾರೆ.

ಅಷ್ಟರೊಳಗೆ ಬಿಜೆಪಿ ರೈತಪರ ಅಂತ ತನ್ನ ಮುಖವಾಡ ಬದಲಾಯಿಸಿ ಚುನಾವಣಾ ರಾಜಕೀಯದ ಲಾಭ ಪಡೆಯಲು ಎಲ್ಲ ಪ್ರಯತ್ನ ಮಾಡಲಿದೆ, ಅನುಮಾನವೇ ಇಲ್ಲ. ಹಾಗೆ ಶೀಘ್ರ ತೋರುಗಾಣಿಕೆಗೆ ಬೆಂಬಲ ಬೆಲೆಗೆ ಕಾನೂನನ್ನು ತರಬಹುದು, ಜೊತೆಗೆ ಪ್ರಭಾವಿ ಕೆಲ ಮುಖಂಡರುಗಳನ್ನು ಸೆಳೆದುಕೊಳ್ಳುವುದುಬಹುದು. ಎಲ್ಲವುದರಲ್ಲೂ ರೈತ ಸಂಘಟನೆಗಳು ಎಚ್ಚರವಹಿಸಬೇಕು ಎಂದು ಅವರು ಅಭಿಪ್ರಾಯ ಪಟ್ಟಿದ್ದಾರೆ.

“ಒಂದು ವರ್ಷದ ಬಳಿಕ ಗೆದ್ದಿದ್ದೇವೆ. ಮೂರು ವಿವಾದಿತ ಕಾಯ್ದೆಗಳನ್ನು ವಾಪಸ್‌ ಪಡೆಯಲು ಮೋದಿ ಸರ್ಕಾರ ನಿರ್ಧರಿಸಿದೆ. ಇದು ರೈತರಿಗೆ ಸಂದ ಗೆಲುವು” ಎಂದು ಕಿಸಾನ್‌ ಏಕ್ತಾ ಮೋರ್ಚಾ ಟ್ವೀಟ್‌ ಮಾಡಿದೆ.


ಇದನ್ನೂ ಓದಿ; ವಿವಾದಿತ ಕೃಷಿ ಕಾಯ್ದೆಗಳು ರದ್ದು: ಕ್ಷಮೆಯಾಚಿಸಿದ ಮೋದಿ, ರೈತರ ಹೋರಾಟಕ್ಕೆ ಗೆಲುವು

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

1 COMMENT

  1. ಹೊಸ ಕೃಷಿ ಕಾಯ್ದೆ ಯಿಂದ ಪಾಪ ಈ ಮುಟ್ಟಾಳರಿಗೆ ಬರ್ತಿದ್ದ ಕಮಿಷನ್ ನಿಂತುಹೋಗಿರಬೇಕು ಅನಿಸುತ್ತೆ ,ಮೊದಲು ಇವನಿಗೆ ಬರುತ್ತಿರುವ ಆದಾಯ ಮೂಲಗಳ ಬಗ್ಗೆ ತನಿಖೆ ಮಾಡಬೇಕು ,ಆಗ ತಿಳಿಯುತ್ತದೆ ಇವನು ಇವನ ಪರಿವಾರ ತಮ್ಮ ಬೇಳೆ ಬೇಯಿಸಿಕೊಳ್ಳೋಕೆ ವಿದೇಶಗಳಿಂದ ಹಣ ಪಡೆಯುವ ದಂದೆಗಳ ಬಗ್ಗೆ ….ಇವರಿಗೆ ರೈತ ನೆಮ್ಮದಿ ಬೇಕಿಲ್ಲಾ ,ದೇಶ ಅಭಿವೃದ್ಧಿಯ ಬಗ್ಗೆ ಬೇಕಿಲ್ಲಾ ,ಚೈನಿಗಳ ಭಟ್ ನೆಕ್ಕಿ ಕಮೀಷನ್ ಪಡೆದು ಜನರ ದಾರಿ ತಪ್ಪಿಸಿ ದೇಶನ ಅತಂತ್ರ ಮಾಡೋದು ಇವರ ಗುರಿ ,ಅವರಿಂದ ಪ್ರೋತ್ಸಾಹ ನೀಡಲು ನಿಮ್ಮಂತ ಕೆಲ ಪತ್ರಿಕೆಗಳು ,ನಾಚಿಕೆ ಆಗಬೇಕು

LEAVE A REPLY

Please enter your comment!
Please enter your name here

- Advertisment -

SIR: ಕೇಂದ್ರ ಸರ್ಕಾರದ SIRಗೆ ಕೌಂಟರ್‌, ಮಹತ್ವದ ಆದೇಶಗಳನ್ನು ಹೊರಡಿಸಿದ ಕರ್ನಾಟಕ ಸರ್ಕಾರ

ಕೇಂದ್ರ ಸರ್ಕಾರ ಚುನಾವಣಾ ಆಯೋಗದ ಮೂಲಕ ನಡೆಸುತ್ತಿರುವ ವಿಶೇಷ ಮತದಾರ ಪಟ್ಟಿ ಪರಿಷ್ಕರಣೆ ಕುರಿತಂತೆ ದೇಶದಾದ್ಯಂತ ಭಾರೀ ವಿರೋಧ ವ್ಯಕ್ತವಾಗಿದ್ದವು. ಸುಪ್ರೀಂ ಕೋರ್ಟ್‌ ಆ ಪ್ರಕ್ರಿಯೆಯನ್ನು ಮಾನ್ಯ ಮಾಡಿತ್ತು. ಕರ್ನಾಟಕದಲ್ಲಿ ನಾಳೆಯಿಂದ (ಜೂನ್.30)‌...

ರಾಮಮಂದಿರದ ದೇಣಿಗೆ ಕಳ್ಳತನ: ಆರೋಪಿಗಳ ಪರ ಯಾವುದೇ ವಕೀಲರು ವಾದಿಸುವಂತಿಲ್ಲ , ವಾದಿಸಿದರೆ ರೂ. 5ಲಕ್ಷ ದಂಡ

ರಾಮಮಂದಿರದ ದೇಣಿಗೆ ಕಳ್ಳತನ ಪ್ರಕರಣದಲ್ಲಿ ಬಂಧಿತರಾಗಿರುವ ಆರೋಪಿಗಳ ಪರವಾಗಿ ಯಾವುದೇ ವಕೀಲರು ನ್ಯಾಯಾಲಯದಲ್ಲಿ ವಕಾಲತ್ತು ವಹಿಸಬಾರದು ಎಂದು ಅಯೋಧ್ಯೆ ಬಾರ್ ಅಸೋಸಿಯೇಷನ್ ಮಹತ್ವದ ನಿರ್ಧಾರ ಕೈಗೊಂಡಿದೆ. ಒಂದು ವೇಳೆ ಸಂಘದ ಈ ತೀರ್ಮಾನವನ್ನು...

ವೋಟರ್ ಲಿಸ್ಟ್‌ನಿಂದ ಹೆಸರು ಡಿಲೀಟ್: ದಿ ಟೆಲಿಗ್ರಾಫ್’ ಪತ್ರಿಕೆಯ ಮಾಜಿ ಸಂಪಾದಕ ರಾಜಗೋಪಾಲ್ ಪಾಸ್‌ಪೋರ್ಟ್ ನವೀಕರಣಕ್ಕೆ ಬ್ರೇಕ್! ಬಂಗಾಳ ಸಿಎಂ ಗೆ ಪತ್ರ ಬರೆದ ಕೇರಳ ಸಿಎಂ

ಹಿರಿಯ ಪತ್ರಕರ್ತ ಮತ್ತು ‘ದಿ ಟೆಲಿಗ್ರಾಫ್’ ಪತ್ರಿಕೆಯ ಮಾಜಿ ಸಂಪಾದಕ ರಾಜಗೋಪಾಲ್ ರಾಮದಾಸ್ ಅವರ ಪಾಸ್‌ಪೋರ್ಟ್ ನವೀಕರಣ ವಿವಾದವು ಸೋಮವಾರ ಮತ್ತಷ್ಟು ತೀವ್ರಗೊಂಡಿದೆ. ಈ ಸಮಸ್ಯೆಯನ್ನು ತಕ್ಷಣವೇ ಬಗೆಹರಿಸಲು ಮಧ್ಯಪ್ರವೇಶಿಸಬೇಕು ಎಂದು ಕೋರಿ...

ರಾಮ ಮಂದಿರ ದೇಣಿಗೆ ಹಗರಣ: ಅರ್ಜಿ ವಿಚಾರಣೆ ಕೆಲ ದಿನ ತಡವಾದರೆ ‘ಆಕಾಶವೇನೂ ಉರುಳಿ ಬೀಳುವುದಿಲ್ಲ’ ಎಂದ ಸುಪ್ರೀಂ ಕೋರ್ಟ್

ಅಯೋಧ್ಯೆಯ ರಾಮ ಮಂದಿರಕ್ಕೆ ಭಕ್ತರಿಂದ ಬಂದ ದೇಣಿಗೆ ಹಣ ದುರುಪಯೋಗ ಆಗಿರುವ ಕುರಿತು ಸಿಬಿಐ ನೇತೃತ್ವದ ಬಹು-ಸಂಸ್ಥೆಗಳ ಜಂಟಿ ತನಿಖೆಗೆ ಆದೇಶಿಸಬೇಕೆಂದು ಕೋರಿ ಸಲ್ಲಿಕೆಯಾಗಿದ್ದ ಅರ್ಜಿಗಳ ತುರ್ತು ವಿಚಾರಣೆಯನ್ನು ಸುಪ್ರೀಂ ಕೋರ್ಟ್ ಸೋಮವಾರ...

ಕಾಕ್ರೋಚ್ ಪಾರ್ಟಿ ಧರಣಿ : ಅನಿರ್ದಿಷ್ಟಾವಧಿ ಉಪವಾಸ ಸತ್ಯಾಗ್ರಹ ಆರಂಭಿಸಿದ ಸೋನಮ್ ವಾಂಗ್‌ಚುಕ್

ನೀಟ್ ಸೇರಿದಂತೆ ವಿವಿಧ ಪರೀಕ್ಷೆಗಳ ಪ್ರಶ್ನೆ ಪತ್ರಿಕೆ ಸೋರಿಕೆ, ಹಲವು ಅಕ್ರಮ, ಶೈಕ್ಷಣಿಕ ಅವ್ಯವಸ್ಥೆಗಳ ಹೊಣೆ ಹೊತ್ತು ಕೇಂದ್ರ ಶಿಕ್ಷಣ ಸಚಿವ ಧರ್ಮೇಂದ್ರ ಪ್ರಧಾನ್ ರಾಜೀನಾಮೆ ನೀಡಬೇಕು ಎಂದು ಒತ್ತಾಯಿಸಿ ಕಾಕ್ರೋಚ್ ಜನತಾ...

SIR ವೇಳೆ ಮತಪಟ್ಟಿಯಿಂದ ಹೆಸರು ಡಿಲೀಟ್: ‘ದಿ ಟೆಲಿಗ್ರಾಫ್’ ಮಾಜಿ ಸಂಪಾದಕ ರಾಜಗೋಪಾಲ್ ಪಾಸ್‌ಪೋರ್ಟ್ ನವೀಕರಣಕ್ಕೆ ತಡೆ

ವಿಶೇಷ ತೀವ್ರ ಪರಿಷ್ಕರಣೆ (ಎಸ್‌ಐಆರ್‌) ವೇಳೆ ಮತದಾರರ ಪಟ್ಟಿಯಿಂದ ಹೆಸರು ತೆಗೆದುಹಾಕಿದ ಕಾರಣ ಪಾಸ್‌ಪೋರ್ಟ್ ನವೀಕರಿಸಲು ಆಗುತ್ತಿಲ್ಲ ಎಂದು ದೇಶದ ಖ್ಯಾತ ಇಂಗ್ಲಿಷ್ ದಿನಪತ್ರಿಕೆ ‘ದಿ ಟೆಲಿಗ್ರಾಫ್’ನ ಮಾಜಿ ಸಂಪಾದಕ ಆರ್. ರಾಜಗೋಪಾಲ್...

‘ಈಗಲೂ ಮಮತಾ ಬ್ಯಾನರ್ಜಿಯೇ ನಮ್ಮ ನಾಯಕಿ’ : ಟಿಎಂಸಿ ಬಂಡಾಯ ಬಣದ ಅಧ್ಯಕ್ಷ ಅರೂಪ್ ರಾಯ್ ಹೇಳಿಕೆ

"ಮಮತಾ ಬ್ಯಾನರ್ಜಿ ಅವರೇ ಇಂದಿಗೂ ನಮ್ಮ ನಾಯಕಿ. ಅವರೇ ಈ ಪಕ್ಷವನ್ನು ಸ್ಥಾಪಿಸಿದವರು. ಅವರೇ ನಮ್ಮ ಪಕ್ಷದ ಕಾಂದಾರಿ (ಮಾರ್ಗದರ್ಶಕರು ಅಥವಾ ಪಕ್ಷವನ್ನು ಮುನ್ನಡೆಸುವವರು). ಮಮತಾ ಬ್ಯಾನರ್ಜಿ ಅವರಿಂದಾಗಿಯೇ ನಾವು ಈ ಪಕ್ಷವನ್ನು...

ಪಶ್ಚಿಮ ಬಂಗಾಳದ ಆಹಾರ ಸಂಸ್ಕೃತಿಯನ್ನು ಗೌರವಿಸುತ್ತೇವೆ ಎಂಬ ಬಿಜೆಪಿಯ ಚುನಾವಣಾ ಭರವಸೆಗೆ ಈಗ ‘ಮೊಟ್ಟೆ’ ಮೊದಲ ಬಲಿ

ಚುನಾವಣಾ ಸಮಯದಲ್ಲಿ, ಬಿಜೆಪಿ ಪರಿಸ್ಥಿತಿಯನ್ನು ಮತ್ತು ಮೀನಿನ ಮಾರುಕಟ್ಟೆಯ ನಾಡಿಮಿಡಿತವನ್ನು ಸರಿಯಾಗಿಯೇ ಅರ್ಥಮಾಡಿಕೊಂಡಿತ್ತು. ಅವರ ನಾಯಕರು ಟಿವಿ ಕ್ಯಾಮೆರಾಗಳ ಮುಂದೆ ಮೀನುಗಳನ್ನು ಪ್ರದರ್ಶಿಸಿದರು ಮತ್ತು ಕುರಿ ಮಾಂಸದೂಟವನ್ನು ಸವಿದಿದ್ದರು. ಬಂಗಾಳಿಗಳ ತಟ್ಟೆಗೆ (ಆಹಾರಕ್ಕೆ)...

24 ಗಂಟೆಗೂ ಮೊದಲೇ ಮಹಾರಾಷ್ಟ್ರದಲ್ಲಿ TET ಪ್ರಶ್ನೆ ಪತ್ರಿಕೆ ಸೋರಿಕೆ: ರದ್ದಾದ ಪರೀಕ್ಷೆ

ಮಹಾರಾಷ್ಟ್ರದಲ್ಲಿ ಮತ್ತೊಂದು ಪರೀಕ್ಷಾ ಅಕ್ರಮದ ಆಘಾತಕಾರಿ ಘಟನೆ ಬೆಳಕಿಗೆ ಬಂದಿದೆ. ಜೂನ್ 28ರ ಭಾನುವಾರ ನಡೆಯಬೇಕಿದ್ದ ‘ಶಿಕ್ಷಕರ ಅರ್ಹತಾ ಪರೀಕ್ಷೆ’ (TET) ಆರಂಭಕ್ಕೆ ಕೇವಲ 24 ಗಂಟೆಗಳ ಮುನ್ನವೇ ಪ್ರಶ್ನೆ ಪತ್ರಿಕೆ ಸೋರಿಕೆಯಾದ...

ಸೌತೆಕಾಯಿ ಕೃಷಿಗೆ ತನ್ನ ಸಚಿವಾಲಯದಿಂದಲೇ ₹99 ಲಕ್ಷ ಸಬ್ಸಿಡಿ ಪಡೆದ ಕೇಂದ್ರ BJP ಸಚಿವ ಭಾಗೀರಥ್ ಚೌಧರಿ

ಕೇಂದ್ರ ಕೃಷಿ ಖಾತೆ ರಾಜ್ಯ ಸಚಿವ ಭಾಗೀರಥ್ ಚೌಧರಿ ಅವರು ತಮ್ಮದೇ ಸಚಿವಾಲಯದ ವ್ಯಾಪ್ತಿಗೆ ಒರುವ ಯೋಜನೆಯಡಿ, ವಾಣಿಜ್ಯ ಸೌತೆಕಾಯಿ ಕೃಷಿ ಯೋಜನೆಗಾಗಿ 99.03 ಲಕ್ಷ ರೂ. ಸಬ್ಸಿಡಿ (ಸಹಾಯಧನ) ಪಡೆದಿರುವುದು ತನಿಖಾ...