Homeಮುಖಪುಟರಾಜ್ಯದಲ್ಲಿಯೂ ಕೃಷಿ, ಎಪಿಎಂಸಿ ತಿದ್ದುಪಡಿ ಕಾಯ್ದೆಗಳು ವಾಪಸ್ ಆಗಲಿ: ಪ್ರಕಾಶ್ ಕಮ್ಮರಡಿ

ರಾಜ್ಯದಲ್ಲಿಯೂ ಕೃಷಿ, ಎಪಿಎಂಸಿ ತಿದ್ದುಪಡಿ ಕಾಯ್ದೆಗಳು ವಾಪಸ್ ಆಗಲಿ: ಪ್ರಕಾಶ್ ಕಮ್ಮರಡಿ

- Advertisement -
- Advertisement -

ಒಂದು ವರ್ಷಗಳ ಕಾಲ ವಿವಾದಿತ ಕೃಷಿ ಕಾಯ್ದೆಗಳ ವಿರುದ್ಧ ಹೋರಾಡಿದ ರೈತರಿಗೆ ಕೊನೆಗೂ ಜಯ ಸಿಕ್ಕಿದೆ. ಒಕ್ಕೂಟ ಸರ್ಕಾರವು ರೈತರ ಹೋರಾಟಕ್ಕೆ ಮಣಿದಿದೆ. ದೇಶವನ್ನು ಉದ್ದೇಶಿಸಿ ಮಾತನಾಡಿರುವ ಪ್ರಧಾನಿ ನರೇಂದ್ರ ಮೋದಿ, “ವಿವಾದಿತ ಕೃಷಿ ಕಾಯ್ದೆಗಳನ್ನು ರದ್ದು ಮಾಡಲಾಗುವುದು. ದೆಹಲಿ ಗಡಿಯಲ್ಲಿ ಹೋರಾಟ ಮಾಡುತ್ತಿರುವ ರೈತರು ಮನೆಗೆ ಹಿಂತಿರುಗಬೇಕು” ಎಂದು ಮನವಿ ಮಾಡಿದ್ದಾರೆ.

ಈ ಕುರಿತು ಪ್ರತಿಕ್ರಿಯಿಸಿರುವ ಕೃಷಿ ಬೆಲೆ ನಿಗಧಿ ಆಯೋಗದ ಮಾಜಿ ಅಧ್ಯಕ್ಷರಾದ ಪ್ರಕಾಶ್ ಕಮ್ಮರಡಿಯವರು,  “ರೈತರ ಒಂದು ವರ್ಷದ ಹೋರಾಟದ ಫಲವಾಗಿ ಕೊನೆಗೂ ಕೃಷಿ ಕಾಯ್ದೆಗಳನ್ನು ಹಿಂಪಡೆಯಲು ಕೇಂದ್ರ ಸರ್ಕಾರ ಒಪ್ಪಿಕೊಂಡಿದೆ. ಆದರೆ, ಅದೇ ಕೇಂದ್ರದ ಹಾದಿಯನ್ನೇ ಅನುಸರಿಸಿ‌ ತರಾತುರಿಯಲ್ಲಿ ರಾಜ್ಯದಲ್ಲೂ ಜಾರಿಗೆ ತಂದಿರುವ ಭೂ ಸುಧಾರಣೆ ಕಾಯ್ದೆ ಮತ್ತು ಎಪಿಎಂಸಿ ಕಾಯ್ದೆಗಳನ್ನು ಹಿಂಪಡೆದಾಗ ಮಾತ್ರ ರಾಜ್ಯದ ರೈತರ ಹೋರಾಟಕ್ಕೆ ನಿಜವಾದ ಯಶಸ್ಸು ಸಿಗಲಿದೆ ಎಂದು ಅಭಿಪ್ರಾಯ ಪಟ್ಟಿದ್ದಾರೆ.

ಕರ್ನಾಟಕದಲ್ಲಿ ಈಗಾಗಲೇ ತಿದ್ದುಪಡಿ ಮಾಡಿರುವ ಭೂ ಸುಧಾರಣೆ ಕಾಯ್ದೆ ಮತ್ತು ಎಪಿಎಂಸಿ ಕಾಯ್ದೆಗಳು ತರಾತುರಿಯಲ್ಲಿ ಅನುಷ್ಠಾನಗೊಂಡಿದೆ. ಶೇಕಡಾ 70 ರಿಂದ 80 ರಷ್ಟು ವಿವಿಧ ಬೆಳೆಗಳಲ್ಲಿ ಎಪಿಎಂಸಿ ಒಳಗಿನ ವ್ಯವಹಾರ ಈಗಾಗಲೇ ಕಡಿಮೆಯಾಗಿದೆ ಎಂದು ಅವರು ಆತಂಕ ವ್ಯಕ್ತಪಡಿಸಿದ್ದಾರೆ.

ಹಾಗೆಯೇ ಶೇಕಡಾ 60 ಭೂಮಿಯ ವ್ಯವಹಾರ ಈ ಸಾರಿ ಅಧಿಕಗೊಂಡಿದೇ. ಕರ್ನಾಟಕದಲ್ಲಿ ಈ ಕಾಯ್ದೆಗಳು ವಾಪಾಸು ಬಂದಾಗ ಮಾತ್ರ ನಾವೆಲ್ಲ ಯಶಸ್ಸು ಅಂತ ಭಾವಿಸಬಹುದು ಎಂದು ಕೃಷಿ ತಜ್ಞ ಪ್ರಕಾಶ್ ಕಮ್ಮರಡಿ ತಿಳಿಸಿದ್ದಾರೆ.

ಅಷ್ಟರೊಳಗೆ ಬಿಜೆಪಿ ರೈತಪರ ಅಂತ ತನ್ನ ಮುಖವಾಡ ಬದಲಾಯಿಸಿ ಚುನಾವಣಾ ರಾಜಕೀಯದ ಲಾಭ ಪಡೆಯಲು ಎಲ್ಲ ಪ್ರಯತ್ನ ಮಾಡಲಿದೆ, ಅನುಮಾನವೇ ಇಲ್ಲ. ಹಾಗೆ ಶೀಘ್ರ ತೋರುಗಾಣಿಕೆಗೆ ಬೆಂಬಲ ಬೆಲೆಗೆ ಕಾನೂನನ್ನು ತರಬಹುದು, ಜೊತೆಗೆ ಪ್ರಭಾವಿ ಕೆಲ ಮುಖಂಡರುಗಳನ್ನು ಸೆಳೆದುಕೊಳ್ಳುವುದುಬಹುದು. ಎಲ್ಲವುದರಲ್ಲೂ ರೈತ ಸಂಘಟನೆಗಳು ಎಚ್ಚರವಹಿಸಬೇಕು ಎಂದು ಅವರು ಅಭಿಪ್ರಾಯ ಪಟ್ಟಿದ್ದಾರೆ.

“ಒಂದು ವರ್ಷದ ಬಳಿಕ ಗೆದ್ದಿದ್ದೇವೆ. ಮೂರು ವಿವಾದಿತ ಕಾಯ್ದೆಗಳನ್ನು ವಾಪಸ್‌ ಪಡೆಯಲು ಮೋದಿ ಸರ್ಕಾರ ನಿರ್ಧರಿಸಿದೆ. ಇದು ರೈತರಿಗೆ ಸಂದ ಗೆಲುವು” ಎಂದು ಕಿಸಾನ್‌ ಏಕ್ತಾ ಮೋರ್ಚಾ ಟ್ವೀಟ್‌ ಮಾಡಿದೆ.


ಇದನ್ನೂ ಓದಿ; ವಿವಾದಿತ ಕೃಷಿ ಕಾಯ್ದೆಗಳು ರದ್ದು: ಕ್ಷಮೆಯಾಚಿಸಿದ ಮೋದಿ, ರೈತರ ಹೋರಾಟಕ್ಕೆ ಗೆಲುವು

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

1 COMMENT

  1. ಹೊಸ ಕೃಷಿ ಕಾಯ್ದೆ ಯಿಂದ ಪಾಪ ಈ ಮುಟ್ಟಾಳರಿಗೆ ಬರ್ತಿದ್ದ ಕಮಿಷನ್ ನಿಂತುಹೋಗಿರಬೇಕು ಅನಿಸುತ್ತೆ ,ಮೊದಲು ಇವನಿಗೆ ಬರುತ್ತಿರುವ ಆದಾಯ ಮೂಲಗಳ ಬಗ್ಗೆ ತನಿಖೆ ಮಾಡಬೇಕು ,ಆಗ ತಿಳಿಯುತ್ತದೆ ಇವನು ಇವನ ಪರಿವಾರ ತಮ್ಮ ಬೇಳೆ ಬೇಯಿಸಿಕೊಳ್ಳೋಕೆ ವಿದೇಶಗಳಿಂದ ಹಣ ಪಡೆಯುವ ದಂದೆಗಳ ಬಗ್ಗೆ ….ಇವರಿಗೆ ರೈತ ನೆಮ್ಮದಿ ಬೇಕಿಲ್ಲಾ ,ದೇಶ ಅಭಿವೃದ್ಧಿಯ ಬಗ್ಗೆ ಬೇಕಿಲ್ಲಾ ,ಚೈನಿಗಳ ಭಟ್ ನೆಕ್ಕಿ ಕಮೀಷನ್ ಪಡೆದು ಜನರ ದಾರಿ ತಪ್ಪಿಸಿ ದೇಶನ ಅತಂತ್ರ ಮಾಡೋದು ಇವರ ಗುರಿ ,ಅವರಿಂದ ಪ್ರೋತ್ಸಾಹ ನೀಡಲು ನಿಮ್ಮಂತ ಕೆಲ ಪತ್ರಿಕೆಗಳು ,ನಾಚಿಕೆ ಆಗಬೇಕು

LEAVE A REPLY

Please enter your comment!
Please enter your name here

- Advertisment -

ಕೋಟ್ಯಾಂತರ ವಿದ್ಯಾರ್ಥಿಗಳ ಭವಿಷ್ಯದ ಜೊತೆ NTA ಚೆಲ್ಲಾಟ: RTI ನಲ್ಲಿ ಬಯಲಾಯ್ತು NTA ಕರ್ಮಕಾಂಡ

ನ್ಯಾಷನಲ್ ಟೆಸ್ಟಿಂಗ್ ಏಜೆನ್ಸಿ (NTA) ಎನ್ನುವ ಈ ಸರ್ಕಾರಿ ಸಂಸ್ಥೆಯ ಮೇಲೆ ಪ್ರತಿವರ್ಷ ಕೋಟ್ಯಂತರ ವಿದ್ಯಾರ್ಥಿಗಳು ತಮ್ಮ ಭವಿಷ್ಯದ ಕನಸುಗಳನ್ನು ಇಟ್ಟುಕೊಳ್ಳುತ್ತಾರೆ. 2018ರಲ್ಲಿ ಸ್ಥಾಪನೆಯಾದ ದಿನದಿಂದ ಇಲ್ಲಿಯವರೆಗೆ ಎನ್‌ಟಿಎ ಸುಮಾರು 270ಕ್ಕೂ ಹೆಚ್ಚು...

ಬಾಗಲಕೋಟೆ: ಪತಿಯಿಂದ 23 ವರ್ಷದ ಪತ್ನಿಯ ಕ್ರೂರ ಕೊಲೆ, ಪೋಷಕರಿಗೆ ವೀಡಿಯೊ ಕರೆ ಮಾಡಿ ಮಗಳ ಸಾವು-ಬದುಕಿನ ಹೋರಾಟ ತೋರಿಸಿದ ವಿಕೃತ ಪತಿ

ಬಾಗಲಕೋಟೆ: ಪತಿಯೋರ್ವ ತನ್ನ 23 ವರ್ಷದ ಪತ್ನಿಯ ಮೇಲೆ ವಿವಾಹೇತರ ಅನೈತಿಕ ಸಂಬಂಧದ ಶಂಕೆ ವ್ಯಕ್ತಪಡಿಸಿ, ಆಕೆಯ ಮೇಲೆ ಮರದ ದಿಮ್ಮಿಯಿಂದ ಕ್ರೂರವಾಗಿ ಹಲ್ಲೆ ನಡೆಸಿ, ತದನಂತರ ನೇಣಿಗೆ ಬಿಗಿದು ಅತ್ಯಂತ ಅಮಾನವೀಯವಾಗಿ...

ಕಾನೂನು-ಸುವ್ಯವಸ್ಥೆಗೆ ವಿದ್ಯಾರ್ಥಿಗಳು ಸಮಸ್ಯೆಯಾಗುತ್ತಾರೆ ಎಂದು ಪರಿಗಣಿಸಿದ್ದು ಏಕೆ: ಅಭಿಷೇಕ್ ಬ್ಯಾನರ್ಜಿ

ರಾಷ್ಟ್ರ ರಾಜಧಾನಿ ದೆಹಲಿ ಮತ್ತು ದೆಶದಾದ್ಯಂತ ಕಾಕ್ರೋಚ್ ಜನತಾ ಪಕ್ಷದ (ಸಿಜೆಪಿ) ನೇತೃತ್ವದಲ್ಲಿ ನಡೆದ ಪ್ರತಿಭಟನೆಗಳ ಸಂದರ್ಭದಲ್ಲಿ ವಿದ್ಯಾರ್ಥಿಗಳ ಮೇಲೆ ನಡೆದ ಭಾರೀ ಪೊಲೀಸ್ ಬಲಪ್ರಯೋವನ್ನು ವಿಪಕ್ಷಗಳು ಇಂದು ಲೋಕಸಭೆಯಲ್ಲಿ ಖಂಡಿಸಿವೆ. ವಿದ್ಯಾರ್ಥಿಗಳ...

ಪಬ್ಲಿಕ್ ಟಿವಿ ನಿರೂಪಕ ಅರುಣ್ ಬಡಿಗೇರ್ ವಿರುದ್ದ ಮೈಸೂರಿನಲ್ಲಿ ದೂರು ದಾಖಲು

ಸಂವಿಧಾನಬದ್ಧ ಮೀಸಲಾತಿಯ ಕುರಿತು ಅತ್ಯಂತ ನಿಂದನಾತ್ಮಕ, ಅವಹೇಳನಕಾರಿ ಹಾಗೂ ಸಮಾಜದಲ್ಲಿ ದ್ವೇಷ ಪ್ರಚೋದಿಸುವ ರೀತಿಯ ಹೇಳಿಕೆ ನೀಡಿರುವ 'ಪಬ್ಲಿಕ್ ಟಿವಿ' ನಿರೂಪಕ ಅರುಣ್ ಬಡಿಗೇರ್ ವಿರುದ್ಧ ಮೈಸೂರಿನಲ್ಲಿ ಕಾನೂನು ಕ್ರಮಕ್ಕೆ ಆಗ್ರಹಿಸಿ ಪೊಲೀಸ್‌...

ಕೇರಳ: ತಪ್ಪು ಪ್ರಕರಣದಲ್ಲಿ ಪೊಲೀಸರಿಂದ ಚಿತ್ರಹಿಂಸೆ: 29 ವರ್ಷದ ಮುಸ್ಲಿಂ ಯುವಕ ಸಾವು: ಕುಟುಂಬಕ್ಕಿದ್ದ ಒಂದೇ ಆಧಾರ ಕಳೆದುಕೊಂಡ ಪೋಷಕರು

ತಪ್ಪು ಗ್ರಹಿಕೆಯಿಂದ ಪೊಲೀಸ್ ಕಸ್ಟಡಿಗೆ ಪಡೆದ 29 ವರ್ಷದ ಮುಸ್ಲಿಂ ಯುವಕನೋರ್ವ, ಪೊಲೀಸರ ಕಠೋರ ಕಸ್ಟಡಿ ಚಿತ್ರಹಿಂಸೆಯಿಂದಾಗಿ ಪಕ್ಕೆಲುಬು ಮುರಿತಕ್ಕೊಳಗಾಗಿ, ಶ್ವಾಸಕೋಶದ ಸೋಂಕು ತೀವ್ರಗೊಂಡು ಚಿಕಿತ್ಸೆ ಫಲಕಾರಿಯಾಗದೆ ಸಾವನ್ನಪ್ಪಿರುವ ಅಮಾನವೀಯ ಹಾಗೂ ಆಘಾತಕಾರಿ...

ಮಾಧ್ಯಮ ತನಿಖಾ ವರದಿಗೆ ಹೆದರಿ ₹ 99 ಲಕ್ಷ ಸಬ್ಸಿಡಿ ವಾಪಸ್ ಮಾಡಿದ ಕೇಂದ್ರ BJP ಸಚಿವ

ತಮ್ಮದೇ ಸಚಿವಾಲಯದ ಯೋಜನೆಯಡಿ ಬರೋಬ್ಬರಿ 99 ಲಕ್ಷ ರೂಪಾಯಿ ಸರ್ಕಾರಿ ಸಬ್ಸಿಡಿ ಪಡೆದು ಸಾರ್ವಜನಿಕರ ಆಕ್ರೋಶಕ್ಕೆ ಗುರಿಯಾಗಿದ್ದ ಕೇಂದ್ರ ಕೃಷಿ ಮತ್ತು ರೈತರ ಕಲ್ಯಾಣ ರಾಜ್ಯ ಸಚಿವ ಭಾಗೀರಥ್ ಚೌಧರಿ, ಕೊನೆಗೂ ಆ...

ಕಾಮನ್‌ವೆಲ್ತ್ ಕ್ರೀಡಾಕೂಟ: ಚಿನ್ನದ ಪದಕ ಗೆದ್ದ ಭಾರತದ ಮೊದಲ ಪ್ಯಾರಾ-ಅಥ್ಲೀಟ್ ಶರ್ಮಿಳಾ ಧನ್ಖರ್

ಎರಡು ವರ್ಷವಿದ್ದಾಗ ಪೋಲಿಯೊದಿಂದ ಅಂಗವಿಕಲಳಾಗಿ, ಬಾಲ್ಯದಲ್ಲಿ ದೌರ್ಜನ್ಯಕ್ಕೊಳಗಾದ, ವಿವಾಹದ ಆಘಾತದಿಂದ ಬದುಕುಳಿದ ಮಹಿಳೆ ಶರ್ಮಿಳಾ ಧನ್ಖರ್, ಕಾಮನ್‌ವೆಲ್ತ್ ಕ್ರೀಡಾಕೂಟದಲ್ಲಿ ಚಿನ್ನದ ಪದಕ ಗೆದ್ದ ಭಾರತದ ಮೊದಲ ಪ್ಯಾರಾ-ಅಥ್ಲೀಟ್ ಎಂಬ ಹೆಗ್ಗಳಿಕೆಗೆ ಪಾತ್ರರಾಗಿದ್ದಾರೆ. ಗ್ಲ್ಯಾಸ್ಗೋದಲ್ಲಿ...

ಬಿಹಾರ: ವಿದ್ಯಾರ್ಥಿಗಳ ವಿರುದ್ಧ ಎಕೆ-47 ರೈಫಲ್ ಬಳಕೆ: ಗುಂಡು ಹಾರಿಸಲು ಆದೇಶಿಸಿದವರ ವಿರುದ್ಧ ತನಿಖೆಗೆ ಮನೋಜ್ ಝಾ ಆಗ್ರಹ; ಸುಪ್ರೀಂ ಮೆಟ್ಟಿಲೇರಿದ ಪ್ರಕರಣ

ನೀಟ್ (NEET) ಪ್ರಶ್ನೆ ಪತ್ರಿಕೆ ಸೋರಿಕೆ ಆರೋಪವನ್ನು ಖಂಡಿಸಿ ನಡೆದ ಪ್ರತಿಭಟನೆಯ ಸಂದರ್ಭದಲ್ಲಿ, ಬಿಹಾರದ ಸಿವಾನ್ ಜಿಲ್ಲೆಯಲ್ಲಿ ಪೊಲೀಸ್ ಸಿಬ್ಬಂದಿಯೊಬ್ಬರು ಎಕೆ-47 ರೈಫಲ್‌ನಿಂದ ಗಾಳಿಯಲ್ಲಿ ಗುಂಡು ಹಾರಿಸುತ್ತಿದ್ದ ವೀಡಿಯೊ ಸಾಮಾಜಿಕ ಜಾಲತಾಣಗಳಲ್ಲಿ ವೈರಲ್...

ಧರ್ಮೇಂದ್ರ ಪ್ರಧಾನ್ ಖಾತೆ ಬದಲಾವಣೆ ಪ್ರಸ್ತಾವನೆ ತಿರಸ್ಕರಿಸಿದ್ದ ಸಿಜೆಪಿ: ವರದಿ

ಕೇಂದ್ರ ಶಿಕ್ಷಣ ಸಚಿವ ಧರ್ಮೇಂದ್ರ ಪ್ರಧಾನ್ ಜುಲೈ 25 ರಂದು ಪ್ರಧಾನಿ ನರೇಂದ್ರ ಮೋದಿ ಅವರಿಗೆ ತಮ್ಮ ರಾಜೀನಾಮೆ ಸಲ್ಲಿಸಿದ್ದಾರೆ. ಆದರೆ, ಅದಕ್ಕೂ ಮೊದಲು ಕೇಂದ್ರ ಸರ್ಕಾರವು ಕಾಕ್ರೋಚ್ ಜನತಾ ಪಕ್ಷ (ಸಿಜೆಪಿ)...

ಹೈದರಾಬಾದ್| ಎಕ್ಸ್‌ಪ್ರೆಸ್‌ವೇನಲ್ಲಿ ನೇಮಕಾತಿ ಪರೀಕ್ಷೆ ಓಎಂಆರ್ ಹಾಳೆಗಳು ಪತ್ತೆ: ತನಿಖೆಗೆ ಆದೇಶ

ನೇಮಕಾತಿ ಪರೀಕ್ಷೆಯ ಮೂಲ ಆಪ್ಟಿಕಲ್ ಮಾರ್ಕ್ ರೆಕಗ್ನಿಷನ್ (ಒಎಂಆರ್) ಹಾಳೆಗಳು ಹೈದರಾಬಾದ್‌ನ ರಸ್ತೆಬದಿಯಲ್ಲಿ ರಾಶಿ ರಾಶಿಯಾಗಿ ಬಿದ್ದಿರುವುದು ಕಂಡುಬಂದ ನಂತರ ತೆಲಂಗಾಣ ಸಾರ್ವಜನಿಕ ಸೇವಾ ಆಯೋಗ (ಟಿಜಿಪಿಎಸ್‌ಸಿ) ತನಿಖೆಗೆ ಆದೇಶಿಸಿದೆ. 2018 ರ ಹಾಸ್ಟೆಲ್...