Homeಮುಖಪುಟರಾಜ್ಯಸಭೆಯಲ್ಲಿ ಕೃಷಿ ಮಸೂದೆ ಅಂಗಿಕಾರ: ಖಂಡಿಸಿ '#KisanVirodhiNarendraModi' ಟ್ವೀಟಾಂದೋಲನ...

ರಾಜ್ಯಸಭೆಯಲ್ಲಿ ಕೃಷಿ ಮಸೂದೆ ಅಂಗಿಕಾರ: ಖಂಡಿಸಿ ‘#KisanVirodhiNarendraModi’ ಟ್ವೀಟಾಂದೋಲನ…

ವಿರೋಧ ಪಕ್ಷಗಳು ಸೇರಿದಂತೆ, ಅನೇಕರು ಟ್ವೀಟ್ ಮಾಡಿ, ನರೇಂದ್ರ ಮೋದಿ ಮತ್ತು ಕೇಂದ್ರ ಸರ್ಕಾರವು ರೈತವಿರೋಧಿ ಕಾಯ್ದೆಗಳನ್ನು ಜಾರಿಗೆ ತರುವುದರ ಮೂಲಕ ತಮ್ಮ ಬಂಡವಾಳಶಾಹಿ ಧೋರಣೆಯನ್ನು ವ್ಯಕ್ತಪಡಿಸಿದೆ ಎಂದು ಕಿಡಿಕಾರಿದ್ದಾರೆ.

- Advertisement -
- Advertisement -

ಕೇಂದ್ರ ಸರ್ಕಾರ ಜಾರಿಗೆ ತರಲು ಹೊರಟಿರುವ, ಕೃಷಿಗೆ ಸಂಬಂಧಿಸಿದ ಮಸೂದೆಗಳನ್ನು ರಾಜ್ಯಸಭೆಯಲ್ಲಿ ಇಂದು ಅಂಗೀಕರಿಸಲಾಗಿದೆ. ಈ ವಾರ ಲೋಕಸಭೆಯಲ್ಲಿ ಅಂಗೀಕಾರ ಪಡೆದು ರಾಜ್ಯಸಭೆಯಲ್ಲಿ ಅನುಮೋದನೆಗಾಗಿ ಇಂದು ಕಳುಹಿಸಿತ್ತು.

ವಿರೋಧ ಪಕ್ಷಗಳ ಖಂಡನೆಯ ನಡುವೆಯೂ ಧ್ವನಿ ಮತದ ಮೂಲಕ ಮಸೂದೆಗಳನ್ನು ಅಂಗೀಕರಿಸಲಾಯಿತು. ಇದನ್ನು ವಿರೋಧಿಸಿ ಸಾಮಾಜಿಕ ಮಾಧ್ಯಮ ಟ್ವಿಟ್ಟರ್‌ನಲ್ಲಿ #KisanVirodhiNarendraModi (ರೈತ ವಿರೋಧಿ ನರೇಂದ್ರ ಮೋದಿ) ಎಂದು ಟ್ವೀಟಾಂದೋಲನ ಆಗುತ್ತಿದೆ.

ಇದನ್ನೂ ಓದಿ: ಭೂಮಿ ಸ್ವಾಭಿಮಾನದ ಸಂಕೇತ, ಅದು ಆರ್ಥಿಕ ಭದ್ರತೆ ನೀಡಲಿದೆ – ಕುಮಾರ್ ಸಮತಳ ಸಂದರ್ಶನ

ಟ್ವಿಟ್ಟರ್‌ನಲ್ಲಿ ಈ ಹ್ಯಾಶ್‌ಟ್ಯಾಗ್ ಬಳಸಿ, ಈ ವರದಿ ಬರೆಯುವ ವೇಳೆಗೆ, ಸುಮಾರು 2.14 ಲಕ್ಷ ಟ್ವೀಟ್‌ಗಳನ್ನು ಮಾಡಿ, ಕೇಂದ್ರ ಸರ್ಕಾರ ಜಾರಿಗೆ ತರಲು ಮುಂದಾಗಿರುವ ರೈತವಿರೋಧಿ ಕಾಯ್ದೆಗಳನ್ನು ವಿರೋಧಿಸಿದ್ದಾರೆ.

 

ವಿರೋಧ ಪಕ್ಷಗಳು ಸೇರಿದಂತೆ, ಅನೇಕರು ಟ್ವೀಟ್ ಮಾಡಿ, ನರೇಂದ್ರ ಮೋದಿ ಮತ್ತು ಕೇಂದ್ರ ಸರ್ಕಾರವು ರೈತವಿರೋಧಿ ಕಾಯ್ದೆಗಳನ್ನು ಜಾರಿಗೆ ತರುವುದರ ಮೂಲಕ ತಮ್ಮ ಬಂಡವಾಳಶಾಹಿ ಧೋರಣೆಯನ್ನು ವ್ಯಕ್ತಪಡಿಸಿದೆ ಎಂದು ಕಿಡಿಕಾರಿದ್ದಾರೆ.

“ರಾಕೇಶ್ ಯಾದವ್ ಟ್ವೀಟ್ ಮಾಡಿ, “ಮೋದಿ ಸರ್ಕಾರ ಯಾರ ಪರವಾಗಿದೆ? ನಿರುದ್ಯೋಗಿ ಯುವಕರು, ರೈತರು, ಐಐಟಿ/ಮೆಡಿಕಲ್ ವಿದ್ಯಾರ್ಥಿಗಳು, ಮಧ್ಯಮ ಮತ್ತು ಸಣ್ಣ ಕೈಗಾರಿಕೆಗಳು, ಸಣ್ಣ ಅಂಗಡಿ ಮಾಲೀಕರು,  ಎಲ್ಲರೂ ಅವರ ಮೇಲಿನ ಕೋಪವನ್ನು ಹೊರಹಾಕುತ್ತಿದ್ದಾರೆ. #KisanVirodhiNarendraModi (ರೈತ ವಿರೋಧಿ ನರೇಂದ್ರ ಮೋದಿ, #StudentsLivesMatter (ವಿದ್ಯಾರ್ಥಿಗಳ ಬದುಕಿನ ವಿಷಯ), #speakup (ಮಾತನಾಡಿ)” ಎಂದು ಟ್ವೀಟ್ ಮಾಡಿದ್ದಾರೆ.

ಇದನ್ನೂ ಓದಿ: ಐದು ವರ್ಷದಲ್ಲಿ ಎಲ್ಲಾ ಬಡವರ ಭೂಮಿ ಕಿತ್ತುಕೊಳ್ಳುತ್ತಾರೆ: ಸಸಿಕಾಂತ್ ಸೆಂಥಿಲ್ ಆತಂಕ

ಸಂಸತ್ತಿನಲ್ಲಿ ಅಂಗೀಕಾರವಾಗಿರುವ ಮೂರು ಕೃಷಿ ಸುಗ್ರೀವಾಜ್ಞೆಗಳ ವಿರುದ್ಧ ಪಂಜಾಬ್, ಹರಿಯಾಣ, ತೆಲಂಗಾಣ ಸೇರಿ ದೇಶದ ಹಲವೆಡೆ ಕಳೆದೊಂದು ವಾರದಿಂದ ಪ್ರತಿಭಟನೆ ನಡೆಯುತ್ತಿದೆ. ನಿನ್ನೆ ಪಂಜಾಬ್‌ನಲ್ಲಿ ರೈತರೊಬ್ಬರು ವಿಷ ಸೇವಿಸಿ ಮೃತಪಟ್ಟಿದ್ದಾರೆ.

ಹೊಸ ಮಸೂದೆಗಳು ರೈತರನ್ನು, ಕೃಷಿ ಕ್ಷೇತ್ರವನ್ನು ಕಾರ್ಪೊರೇಟ್ ಶಕ್ತಿಗಳ ಸೆರೆಯಾಗುವಂತೆ ಮಾಡುತ್ತಿವೆ ಎಂದು ಆರೋಪಿಸುತ್ತಿದ್ದಾರೆ. ಪಂಜಾಬ್‌ನಲ್ಲಿ ಕಿಸಾನ್ ಮಜ್ದೂರ್‌ ಸಂಘರ್ಷ್ ಸಂಘಟನೆ ಸೆಪ್ಟೆಂಬರ್ 24 ರಿಂದ ಸೆಪ್ಟೆಂಬರ್ 26 ರವರೆಗೆ ರಾಜ್ಯಾದ್ಯಂತ ‘ರೈಲ್ ರೋಕೊ’ ಆಂದೋಲನಕ್ಕೆ ಕರೆ ನೀಡಿದೆ. ಇತರ ರೈತ ಸಂಘಟನೆಗಳು ಸೆಪ್ಟೆಂಬರ್ 25ಕ್ಕೆ ಪಂಜಾಬ್ ಬಂದ್‌ಗೆ ಕರೆ ನೀಡಿವೆ.

ಇದನ್ನೂ ಓದಿ: ‘ಭೂಸುಧಾರಣಾ ಕಾಯ್ದೆ ತಿದ್ದುಪಡಿಯಿಂದ ಟೆಕ್ಕಿಗಳಿಗೆ ಲಾಭ: ಸಚಿವ ಮಾಧುಸ್ವಾಮಿ

ಸೆಪ್ಟಂಬರ್ 21ರಿಂದ ಕರ್ನಾಟಕ ರಾಜ್ಯ ಸರ್ಕಾರವು ವಿಧಾನಸೌಧದಲ್ಲಿ ಅಧಿವೇಶನ ನಡೆಸಲು ಮುಂದಾಗಿದೆ. ಈ ಸಂದರ್ಭದಲ್ಲಿ ಕರ್ನಾಟಕದಲ್ಲಿರುವ ದಲಿತ, ಕಾರ್ಮಿಕ, ರೈತ ಸಂಘಟನೆಗಳೆಲ್ಲಾ ಒಟ್ಟಾಗಿ ಐಕ್ಯ ಹೋರಾಟ ನಡೆಸಬೇಕೆಂದು ಕರೆ ನೀಡಿವೆ. ಅಧಿವೇಶನ ನಡೆಯುವ ಪ್ರತಿದಿನವೂ ತಮ್ಮ ಪ್ರತಿಭಟನೆಯನ್ನು ಕೈಗೊಂಡು, ತಮ್ಮ ಬೇಡಿಕೆಗಳನ್ನು ಈಡೇರಿಸುವಂತೆ ಸರ್ಕಾರವನ್ನು ಒತ್ತಾಯಿಸಲಿವೆ. ತುರ್ತಾಗಿ ಹಿಂಪಡೆಯಲೇಬೇಕಾದ ಮತ್ತು ಸುಗ್ರೀವಾಜ್ಞೆ ತಂದು ಜಾರಿಗೊಳಿಸಲು ಹೊರಟಿರುವ ಕೆಲವು ಕಾಯ್ದೆಗಳನ್ನು ತಕ್ಷಣವೇ ಹಿಂಪಡೆಯುವಂತೆ ಒತ್ತಾಯಿಸಿ ಪ್ರತಿಭಟನೆ ಮಾಡಲಾಗುತ್ತಿದೆ.

ಇಷ್ಟೆಲ್ಲಾ ನಡೆಯುತ್ತಿದ್ದರೂ, ‘ಇದು ರೈತರ ಅನುಕೂಲಕ್ಕಾಗಿ’ ಎಂದುಕೊಂಡು ಕೇಂದ್ರ ಸರ್ಕಾರ ಈ ಕಾನೂನುಗಳನ್ನು ಜಾರಿಗೆ ತಂದು, ಮಧ್ಯವರ್ತಿಗಳಿಂದ ರೈತರನ್ನು ರಕ್ಷಿಸುತ್ತದೆ ಎನ್ನುತ್ತಿದೆ. ಪ್ರಧಾನಿ ನರೇಂದ್ರ ಮೋದಿ ಕೂಡ  ಮಸೂದೆಗಳ ಅಂಗೀಕಾರಕ್ಕೆ ಸಂತಸ ವ್ಯಕ್ತಪಡಿಸಿದ್ದು, ಮಸೂದೆ ವಿರೋಧಿಗಳು ರೈತರನ್ನು ತಪ್ಪು ದಾರಿಗೆ ಎಳೆಯುತ್ತಿದ್ದಾರೆ ಎಂದು ವಿಪಕ್ಷಗಳ ಮೇಲೆ ಕಿಡಿ ಕಾರಿದ್ದಾರೆ.


ಇದನ್ನೂ ಓದಿ: ಭೂ ಸುಧಾರಣಾ ಕಾಯ್ದೆಗೆ ತಿದ್ದುಪಡಿ : ದೇಶವ್ಯಾಪಿ ಅಸಹಕಾರ ಚಳವಳಿಯ ಅಗತ್ಯವಿದೆ

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ರೈಲುಗಳಲ್ಲಿ ಹಲಾಲ್ ಮಾಂಸ; ರೈಲ್ವೆಗೆ ಮಾನವ ಹಕ್ಕುಗಳ ಆಯೋಗ ನೋಟಿಸ್

ಭಾರತೀಯ ರೈಲ್ವೆ ತನ್ನ ರೈಲುಗಳಲ್ಲಿ ಹಲಾಲ್-ಸಂಸ್ಕರಿಸಿದ ಮಾಂಸವನ್ನು ಮಾತ್ರ ಪೂರೈಸುತ್ತದೆ ಎಂಬ ದೂರು ಬಂದ ನಂತರ ರಾಷ್ಟ್ರೀಯ ಮಾನವ ಹಕ್ಕುಗಳ ಆಯೋಗ (ಎನ್‌ಎಚ್‌ಆರ್‌ಸಿ) ರೈಲ್ವೆ ಮಂಡಳಿಗೆ ನೋಟಿಸ್ ನೀಡಿದೆ. "ಇದು ತಾರತಮ್ಯವನ್ನು ಸೃಷ್ಟಿಸುತ್ತದೆ,...

ಕರ್ತವ್ಯದಲ್ಲಿದ್ದಾಗ ಧಾರ್ಮಿಕ ಆಚರಣೆಗೆ ನಿರಾಕರಣೆ; ಹೈದರಾಬಾದ್ ಪೊಲೀಸರ ವಿರುದ್ಧ ಹಿಂದುತ್ವ ಗುಂಪಿನಿಂದ ಪ್ರತಿಭಟನೆ

ಕರ್ತವ್ಯದಲ್ಲಿರುವಾಗ ಸಬ್-ಇನ್ಸ್‌ಪೆಕ್ಟರ್ ಅವರಿಗೆ ಅಯ್ಯಪ್ಪ ದೀಕ್ಷಾ ಪದ್ಧತಿಗಳನ್ನು ಅನುಸರಿಸಲು ಅನುಮತಿ ನಿರಾಕರಿಸಿದ ಪೊಲೀಸ್ ಆಂತರಿಕ ಜ್ಞಾಪಕ ಪತ್ರವು ಸಾರ್ವಜನಿಕವಾಗಿ ಪ್ರಸಾರವಾದ ನಂತರ ಹೈದರಾಬಾದ್‌ನ ಆಗ್ನೇಯ ವಲಯ ಪೊಲೀಸರು ರಾಜಕೀಯ ವಿವಾದದ ಮಧ್ಯದಲ್ಲಿ ಸಿಲುಕಿದ್ದಾರೆ. ಮೇಲಧಿಕಾರಿಗಳು...

ಆನ್‌ಲೈನ್‌ ವಿಷಯಗಳ ನಿಯಂತ್ರಣ : ಸ್ವಾಯತ್ತ ಸಂಸ್ಥೆಯ ಅಗತ್ಯವಿದೆ ಎಂದ ಸುಪ್ರೀಂ ಕೋರ್ಟ್

ಆನ್‌ಲೈನ್ ಪ್ಲಾಟ್‌ಫಾರ್ಮ್‌ಗಳಲ್ಲಿ ಅಶ್ಲೀಲ, ಆಕ್ರಮಣಕಾರಿ ಅಥವಾ ಕಾನೂನುಬಾಹಿರ ವಿಷಯವನ್ನು ನಿಯಂತ್ರಿಸಲು 'ತಟಸ್ಥ, ಸ್ವತಂತ್ರ ಮತ್ತು ಸ್ವಾಯತ್ತ' ಸಂಸ್ಥೆಯ ಅಗತ್ಯವಿದೆ ಎಂದು ಸುಪ್ರೀಂ ಕೋರ್ಟ್ ಗುರುವಾರ (ನ. 27) ಒತ್ತಿ ಹೇಳಿದೆ. ಮಾಧ್ಯಮ ಸಂಸ್ಥೆಗಳು...

ಆರು ವರ್ಷದ ಬಾಲಕಿ ಮೇಲೆ ಅತ್ಯಾಚಾರ: ಕೃತ್ಯ ಎಸಗಿದವನನ್ನು ಗಲ್ಲಿಗೇರಿಸುವಂತೆ ಹಿಂದೂ-ಮುಸ್ಲಿಂ ಸಮುದಾಯ ಆಗ್ರಹ

ಮಧ್ಯಪ್ರದೇಶದ ಪಂಜ್ರಾ ಗ್ರಾಮದಲ್ಲಿ ಆರು ವರ್ಷದ ಬಾಲಕಿಯ ಮೇಲೆ ನಡೆದ ಅತ್ಯಾಚಾರ ಪ್ರಕರಣ ಪ್ರತಿಭಟನೆಗೆ ಕಾರಣವಾಯಿತು. ಕೃತ್ಯ ಎಸಗಿದ ಸಲ್ಮಾನ್‌ನನ್ನು ಗಲಗಲಿಗೇರಿಸುವಂತೆ ಹಿಂದೂ-ಮುಸ್ಲಿಂ ಸಮುದಾಯ ಒಗ್ಗಟ್ಟಾಗಿ ಆಗ್ರಹಿಸಿದೆ. ನ್ಯಾಯಕ್ಕಾಗಿ ಒತ್ತಾಯಿಸುತ್ತಿರುವ ಎರಡೂ ಸಮುದಾಯಗಳು ಕೃತ್ಯವನ್ನು...

ತೆಲಂಗಾಣ ಮಾಜಿ ಸರಪಂಚ್ ಭೀಕರ ಹತ್ಯೆ ಪ್ರಕರಣ; ಸುಪಾರಿ ಗ್ಯಾಂಗ್ ಬಂಧನ

ತೆಲಂಗಾಣ ರಾಜ್ಯದ ಗದ್ವಾಲ ಜಿಲ್ಲೆಯ ನಂದಿನ್ನಿ ಗ್ರಾಮದ ಮಾಜಿ ಸರಪಂಚ ಚಿನ್ನ ಭೀಮರಾಯ ಎಂಬುವವರನ್ನು ಕಳೆದ ಶುಕ್ರವಾರ ಮಧ್ಯಾಹ್ನ ಜಾಂಪಲ್ಲಿ ಗ್ರಾಮದ ಹತ್ತಿರ ದ್ವಿಚಕ್ರ ವಾಹನಕ್ಕೆ ಕಾರಿನಿಂದ ಡಿಕ್ಕಿ ಹೊಡೆದು ಕೊಲೆ ಮಾಡಲಾಗಿತ್ತು....

ಹಿರಿಯ ನಾಯಕರೊಂದಿಗೆ ಚರ್ಚಿಸಿ ಸಿಎಂ ಬದಲಾವಣೆ ಗೊಂದಲಕ್ಕೆ ತೆರೆ : ಮಲ್ಲಿಕಾರ್ಜುನ ಖರ್ಗೆ

ಕರ್ನಾಟಕದಲ್ಲಿ ಹೆಚ್ಚುತ್ತಿರುವ ನಾಯಕತ್ವದ ಜಗಳವನ್ನು ಪರಿಹರಿಸಲು ರಾಹುಲ್ ಗಾಂಧಿ, ಮುಖ್ಯಮಂತ್ರಿ ಸಿದ್ದರಾಮಯ್ಯ ಮತ್ತು ಉಪಮುಖ್ಯಮಂತ್ರಿ ಡಿ.ಕೆ ಶಿವಕುಮಾರ್ ಸೇರಿದಂತೆ ಪಕ್ಷದ ಹಿರಿಯ ನಾಯಕರೊಂದಿಗೆ ನವದೆಹಲಿಯಲ್ಲಿ ಸಭೆ ನಡೆಸುವುದಾಗಿ ಎಐಸಿಸಿ ಅಧ್ಯಕ್ಷ ಮಲ್ಲಿಕಾರ್ಜುನ ಖರ್ಗೆ...

ದಲಿತ ಎಂಬ ಕಾರಣಕ್ಕೆ ಅಯೋಧ್ಯೆ ಧ್ವಜಾರೋಹಣಕ್ಕೆ ನನ್ನನ್ನು ಆಹ್ವಾನಿಸಿಲ್ಲ: ಎಸ್‌ಪಿ ಸಂಸದ ಅವಧೇಶ್ ಪ್ರಸಾದ್

ಅಯೋಧ್ಯೆಯ ಶ್ರೀ ರಾಮ ಜನ್ಮಭೂಮಿ ದೇವಾಲಯದಲ್ಲಿ ನಡೆದ ಧ್ವಜಾರೋಹಣ ಸಮಾರಂಭಕ್ಕೆ ತಮ್ಮನ್ನು ಆಹ್ವಾನಿಸಲಾಗಿಲ್ಲ ಎಂದು ಸಮಾಜವಾದಿ ಪಕ್ಷದ ಸಂಸದ ಅವಧೇಶ್ ಪ್ರಸಾದ್ ಹೇಳಿದ್ದಾರೆ. ದಲಿತ ಸಮುದಾಯಕ್ಕೆ ಸೇರಿದವರಾಗಿರುವುದರಿಂದ ನನ್ನನ್ನು ಹೊರಗಿಡಲಾಗಿದೆ ಎಂದು ಅವರು...

ನೂರಾರು ಹುಡುಗಿಯರ ಮೇಲೆ ಲೈಂಗಿಕ ದೌರ್ಜನ್ಯ, ಜೈಲಿನಲ್ಲಿ ನಿಗೂಢ ಸಾವು : ಅಮೆರಿಕವನ್ನು ತಲ್ಲಣಗೊಳಿಸಿದ ಜೆಫ್ರಿ ಎಪ್‌ಸ್ಟೀನ್ ಯಾರು?

ಜೆಫ್ರಿ ಎಪ್‌ಸ್ಟೀನ್ ಎಂಬ ಅಮೆರಿಕದ ಈ ಪ್ರಭಾವಿ ವ್ಯಕ್ತಿಯ ಹೆಸರು ಕಳೆದ ದಿನಗಳಿಂದ ಭಾರೀ ಚರ್ಚೆಯಲ್ಲಿದೆ. 2019ರಿಂದಲೂ ಈತನ ಬಗ್ಗೆ ಜಾಗತಿಕ ಮಟ್ಟದಲ್ಲಿ ಚರ್ಚೆಗಳು ನಡೆದರೂ, ಈಗ ಮತ್ತೊಮ್ಮೆ ಈತನ ವಿಷಯ ಮುನ್ನೆಲೆಗೆ...

ಎಕ್ಸ್‌ಪ್ರೆಸ್ ರೈಲಿನಲ್ಲಿ ನೂಡಲ್ಸ್‌ ಬೇಯಿಸಿದ ಮಹಿಳೆ ಪುಣೆಯಲ್ಲಿ ಪತ್ತೆ; ಕ್ಷಮೆಯಾಚನೆ

ಎಕ್ಸ್‌ಪ್ರೆಸ್ ರೈಲಿನ ಕೋಚ್‌ನ ಪವರ್ ಸಾಕೆಟ್‌ಗೆ ಪ್ಲಗ್ ಮಾಡಲಾದ ಎಲೆಕ್ಟ್ರಿಕ್ ಕೆಟಲ್‌ನಿಂದ ಬಳಸಿ ನೂಡಲ್ಸ್ ತಯಾರಿಸುವ ವೀಡಿಯೊ ಸಾಮಾಜಿಕ ಮಾಧ್ಯಮದಲ್ಲಿ ವೈರಲ್ ಆಗಿತ್ತು; ಆ ಮಹಿಳೆಯನ್ನು ಕೇಂದ್ರ ರೈಲ್ವೆ ಪತ್ತೆಹಚ್ಚಿದೆ. ಸರಿತಾ ಲಿಂಗಾಯತ್...

ಬೆಂಗಳೂರು ಪೊಲೀಸರಲ್ಲಿ ವಿಶ್ವಾಸಾರ್ಹತೆಯ ಬಿಕ್ಕಟ್ಟು: ಕಳೆದ ಹತ್ತು ತಿಂಗಳಲ್ಲಿ 124 ಪೊಲೀಸ್ ಸಿಬ್ಬಂದಿ ಅಮಾನತು

ಕಳೆದ ಹತ್ತು ತಿಂಗಳಲ್ಲಿ ಬೆಂಗಳೂರಿನಲ್ಲಿ ಕಾನ್‌ಸ್ಟೆಬಲ್‌ಗಳಿಂದ ಹಿಡಿದು ಐಪಿಎಸ್ ಅಧಿಕಾರಿಗಳವರೆಗೆ ಸುಮಾರು 124 ಪೊಲೀಸ್ ಸಿಬ್ಬಂದಿಯನ್ನು, ಭ್ರಷ್ಟಾಚಾರ, ಸುಲಿಗೆ, ದರೋಡೆ, ಕರ್ತವ್ಯ ಲೋಪ ಮತ್ತು ಮಾದಕವಸ್ತು ಮಾರಾಟದಂತಹ ಅಪರಾಧಗಳಿಗಾಗಿ ಅಮಾನತುಗೊಳಿಸಲಾಗಿದೆ. ಆದರೆ ಯಾವುದೇ ಪ್ರಕರಣವೂ...