Homeಮುಖಪುಟರಾಜ್ಯಸಭೆಯಲ್ಲಿ ಕೃಷಿ ಮಸೂದೆ ಅಂಗಿಕಾರ: ಖಂಡಿಸಿ '#KisanVirodhiNarendraModi' ಟ್ವೀಟಾಂದೋಲನ...

ರಾಜ್ಯಸಭೆಯಲ್ಲಿ ಕೃಷಿ ಮಸೂದೆ ಅಂಗಿಕಾರ: ಖಂಡಿಸಿ ‘#KisanVirodhiNarendraModi’ ಟ್ವೀಟಾಂದೋಲನ…

ವಿರೋಧ ಪಕ್ಷಗಳು ಸೇರಿದಂತೆ, ಅನೇಕರು ಟ್ವೀಟ್ ಮಾಡಿ, ನರೇಂದ್ರ ಮೋದಿ ಮತ್ತು ಕೇಂದ್ರ ಸರ್ಕಾರವು ರೈತವಿರೋಧಿ ಕಾಯ್ದೆಗಳನ್ನು ಜಾರಿಗೆ ತರುವುದರ ಮೂಲಕ ತಮ್ಮ ಬಂಡವಾಳಶಾಹಿ ಧೋರಣೆಯನ್ನು ವ್ಯಕ್ತಪಡಿಸಿದೆ ಎಂದು ಕಿಡಿಕಾರಿದ್ದಾರೆ.

- Advertisement -
- Advertisement -

ಕೇಂದ್ರ ಸರ್ಕಾರ ಜಾರಿಗೆ ತರಲು ಹೊರಟಿರುವ, ಕೃಷಿಗೆ ಸಂಬಂಧಿಸಿದ ಮಸೂದೆಗಳನ್ನು ರಾಜ್ಯಸಭೆಯಲ್ಲಿ ಇಂದು ಅಂಗೀಕರಿಸಲಾಗಿದೆ. ಈ ವಾರ ಲೋಕಸಭೆಯಲ್ಲಿ ಅಂಗೀಕಾರ ಪಡೆದು ರಾಜ್ಯಸಭೆಯಲ್ಲಿ ಅನುಮೋದನೆಗಾಗಿ ಇಂದು ಕಳುಹಿಸಿತ್ತು.

ವಿರೋಧ ಪಕ್ಷಗಳ ಖಂಡನೆಯ ನಡುವೆಯೂ ಧ್ವನಿ ಮತದ ಮೂಲಕ ಮಸೂದೆಗಳನ್ನು ಅಂಗೀಕರಿಸಲಾಯಿತು. ಇದನ್ನು ವಿರೋಧಿಸಿ ಸಾಮಾಜಿಕ ಮಾಧ್ಯಮ ಟ್ವಿಟ್ಟರ್‌ನಲ್ಲಿ #KisanVirodhiNarendraModi (ರೈತ ವಿರೋಧಿ ನರೇಂದ್ರ ಮೋದಿ) ಎಂದು ಟ್ವೀಟಾಂದೋಲನ ಆಗುತ್ತಿದೆ.

ಇದನ್ನೂ ಓದಿ: ಭೂಮಿ ಸ್ವಾಭಿಮಾನದ ಸಂಕೇತ, ಅದು ಆರ್ಥಿಕ ಭದ್ರತೆ ನೀಡಲಿದೆ – ಕುಮಾರ್ ಸಮತಳ ಸಂದರ್ಶನ

ಟ್ವಿಟ್ಟರ್‌ನಲ್ಲಿ ಈ ಹ್ಯಾಶ್‌ಟ್ಯಾಗ್ ಬಳಸಿ, ಈ ವರದಿ ಬರೆಯುವ ವೇಳೆಗೆ, ಸುಮಾರು 2.14 ಲಕ್ಷ ಟ್ವೀಟ್‌ಗಳನ್ನು ಮಾಡಿ, ಕೇಂದ್ರ ಸರ್ಕಾರ ಜಾರಿಗೆ ತರಲು ಮುಂದಾಗಿರುವ ರೈತವಿರೋಧಿ ಕಾಯ್ದೆಗಳನ್ನು ವಿರೋಧಿಸಿದ್ದಾರೆ.

 

ವಿರೋಧ ಪಕ್ಷಗಳು ಸೇರಿದಂತೆ, ಅನೇಕರು ಟ್ವೀಟ್ ಮಾಡಿ, ನರೇಂದ್ರ ಮೋದಿ ಮತ್ತು ಕೇಂದ್ರ ಸರ್ಕಾರವು ರೈತವಿರೋಧಿ ಕಾಯ್ದೆಗಳನ್ನು ಜಾರಿಗೆ ತರುವುದರ ಮೂಲಕ ತಮ್ಮ ಬಂಡವಾಳಶಾಹಿ ಧೋರಣೆಯನ್ನು ವ್ಯಕ್ತಪಡಿಸಿದೆ ಎಂದು ಕಿಡಿಕಾರಿದ್ದಾರೆ.

“ರಾಕೇಶ್ ಯಾದವ್ ಟ್ವೀಟ್ ಮಾಡಿ, “ಮೋದಿ ಸರ್ಕಾರ ಯಾರ ಪರವಾಗಿದೆ? ನಿರುದ್ಯೋಗಿ ಯುವಕರು, ರೈತರು, ಐಐಟಿ/ಮೆಡಿಕಲ್ ವಿದ್ಯಾರ್ಥಿಗಳು, ಮಧ್ಯಮ ಮತ್ತು ಸಣ್ಣ ಕೈಗಾರಿಕೆಗಳು, ಸಣ್ಣ ಅಂಗಡಿ ಮಾಲೀಕರು,  ಎಲ್ಲರೂ ಅವರ ಮೇಲಿನ ಕೋಪವನ್ನು ಹೊರಹಾಕುತ್ತಿದ್ದಾರೆ. #KisanVirodhiNarendraModi (ರೈತ ವಿರೋಧಿ ನರೇಂದ್ರ ಮೋದಿ, #StudentsLivesMatter (ವಿದ್ಯಾರ್ಥಿಗಳ ಬದುಕಿನ ವಿಷಯ), #speakup (ಮಾತನಾಡಿ)” ಎಂದು ಟ್ವೀಟ್ ಮಾಡಿದ್ದಾರೆ.

ಇದನ್ನೂ ಓದಿ: ಐದು ವರ್ಷದಲ್ಲಿ ಎಲ್ಲಾ ಬಡವರ ಭೂಮಿ ಕಿತ್ತುಕೊಳ್ಳುತ್ತಾರೆ: ಸಸಿಕಾಂತ್ ಸೆಂಥಿಲ್ ಆತಂಕ

ಸಂಸತ್ತಿನಲ್ಲಿ ಅಂಗೀಕಾರವಾಗಿರುವ ಮೂರು ಕೃಷಿ ಸುಗ್ರೀವಾಜ್ಞೆಗಳ ವಿರುದ್ಧ ಪಂಜಾಬ್, ಹರಿಯಾಣ, ತೆಲಂಗಾಣ ಸೇರಿ ದೇಶದ ಹಲವೆಡೆ ಕಳೆದೊಂದು ವಾರದಿಂದ ಪ್ರತಿಭಟನೆ ನಡೆಯುತ್ತಿದೆ. ನಿನ್ನೆ ಪಂಜಾಬ್‌ನಲ್ಲಿ ರೈತರೊಬ್ಬರು ವಿಷ ಸೇವಿಸಿ ಮೃತಪಟ್ಟಿದ್ದಾರೆ.

ಹೊಸ ಮಸೂದೆಗಳು ರೈತರನ್ನು, ಕೃಷಿ ಕ್ಷೇತ್ರವನ್ನು ಕಾರ್ಪೊರೇಟ್ ಶಕ್ತಿಗಳ ಸೆರೆಯಾಗುವಂತೆ ಮಾಡುತ್ತಿವೆ ಎಂದು ಆರೋಪಿಸುತ್ತಿದ್ದಾರೆ. ಪಂಜಾಬ್‌ನಲ್ಲಿ ಕಿಸಾನ್ ಮಜ್ದೂರ್‌ ಸಂಘರ್ಷ್ ಸಂಘಟನೆ ಸೆಪ್ಟೆಂಬರ್ 24 ರಿಂದ ಸೆಪ್ಟೆಂಬರ್ 26 ರವರೆಗೆ ರಾಜ್ಯಾದ್ಯಂತ ‘ರೈಲ್ ರೋಕೊ’ ಆಂದೋಲನಕ್ಕೆ ಕರೆ ನೀಡಿದೆ. ಇತರ ರೈತ ಸಂಘಟನೆಗಳು ಸೆಪ್ಟೆಂಬರ್ 25ಕ್ಕೆ ಪಂಜಾಬ್ ಬಂದ್‌ಗೆ ಕರೆ ನೀಡಿವೆ.

ಇದನ್ನೂ ಓದಿ: ‘ಭೂಸುಧಾರಣಾ ಕಾಯ್ದೆ ತಿದ್ದುಪಡಿಯಿಂದ ಟೆಕ್ಕಿಗಳಿಗೆ ಲಾಭ: ಸಚಿವ ಮಾಧುಸ್ವಾಮಿ

ಸೆಪ್ಟಂಬರ್ 21ರಿಂದ ಕರ್ನಾಟಕ ರಾಜ್ಯ ಸರ್ಕಾರವು ವಿಧಾನಸೌಧದಲ್ಲಿ ಅಧಿವೇಶನ ನಡೆಸಲು ಮುಂದಾಗಿದೆ. ಈ ಸಂದರ್ಭದಲ್ಲಿ ಕರ್ನಾಟಕದಲ್ಲಿರುವ ದಲಿತ, ಕಾರ್ಮಿಕ, ರೈತ ಸಂಘಟನೆಗಳೆಲ್ಲಾ ಒಟ್ಟಾಗಿ ಐಕ್ಯ ಹೋರಾಟ ನಡೆಸಬೇಕೆಂದು ಕರೆ ನೀಡಿವೆ. ಅಧಿವೇಶನ ನಡೆಯುವ ಪ್ರತಿದಿನವೂ ತಮ್ಮ ಪ್ರತಿಭಟನೆಯನ್ನು ಕೈಗೊಂಡು, ತಮ್ಮ ಬೇಡಿಕೆಗಳನ್ನು ಈಡೇರಿಸುವಂತೆ ಸರ್ಕಾರವನ್ನು ಒತ್ತಾಯಿಸಲಿವೆ. ತುರ್ತಾಗಿ ಹಿಂಪಡೆಯಲೇಬೇಕಾದ ಮತ್ತು ಸುಗ್ರೀವಾಜ್ಞೆ ತಂದು ಜಾರಿಗೊಳಿಸಲು ಹೊರಟಿರುವ ಕೆಲವು ಕಾಯ್ದೆಗಳನ್ನು ತಕ್ಷಣವೇ ಹಿಂಪಡೆಯುವಂತೆ ಒತ್ತಾಯಿಸಿ ಪ್ರತಿಭಟನೆ ಮಾಡಲಾಗುತ್ತಿದೆ.

ಇಷ್ಟೆಲ್ಲಾ ನಡೆಯುತ್ತಿದ್ದರೂ, ‘ಇದು ರೈತರ ಅನುಕೂಲಕ್ಕಾಗಿ’ ಎಂದುಕೊಂಡು ಕೇಂದ್ರ ಸರ್ಕಾರ ಈ ಕಾನೂನುಗಳನ್ನು ಜಾರಿಗೆ ತಂದು, ಮಧ್ಯವರ್ತಿಗಳಿಂದ ರೈತರನ್ನು ರಕ್ಷಿಸುತ್ತದೆ ಎನ್ನುತ್ತಿದೆ. ಪ್ರಧಾನಿ ನರೇಂದ್ರ ಮೋದಿ ಕೂಡ  ಮಸೂದೆಗಳ ಅಂಗೀಕಾರಕ್ಕೆ ಸಂತಸ ವ್ಯಕ್ತಪಡಿಸಿದ್ದು, ಮಸೂದೆ ವಿರೋಧಿಗಳು ರೈತರನ್ನು ತಪ್ಪು ದಾರಿಗೆ ಎಳೆಯುತ್ತಿದ್ದಾರೆ ಎಂದು ವಿಪಕ್ಷಗಳ ಮೇಲೆ ಕಿಡಿ ಕಾರಿದ್ದಾರೆ.


ಇದನ್ನೂ ಓದಿ: ಭೂ ಸುಧಾರಣಾ ಕಾಯ್ದೆಗೆ ತಿದ್ದುಪಡಿ : ದೇಶವ್ಯಾಪಿ ಅಸಹಕಾರ ಚಳವಳಿಯ ಅಗತ್ಯವಿದೆ

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ರಾಜಸ್ಥಾನ ಸ್ಥಳೀಯ ಸಂಸ್ಥೆ ಚುನಾವಣೆ: ಬಿಕಾನೇರ್‌ನ ನೋಖಾದಲ್ಲಿ ಸಿಪಿಐ(ಎಂ) ಐತಿಹಾಸಿಕ ಜಯಭೇರಿ

ರಾಜಸ್ಥಾನ ಸ್ಥಳೀಯ ಸಂಸ್ಥೆಗಳ ಚುನಾವಣೆಯಲ್ಲಿ ಎಡಪಕ್ಷವಾದ ಸಿಪಿಐ(ಎಂ) (CPI-M) ಐತಿಹಾಸಿಕ ಸಾಧನೆ ಮಾಡಿದ್ದು, ಬಿಕಾನೇರ್ ಜಿಲ್ಲೆಯ ನೋಖಾ ನಗರ ಪಾಲಿಕೆಯ ಆಡಳಿತದ ಚುಕ್ಕಾಣಿಯನ್ನು ತನ್ನದಾಗಿಸಿಕೊಂಡಿದೆ. ಹಲವು ವರ್ಷಗಳಿಂದ ಬಿಜೆಪಿ ಹಾಗೂ ಎನ್‌ಸಿಪಿ (NCP)...

ಏಕರೂಪ ನಾಗರಿಕ ಸಂಹಿತೆಯನ್ನು ಸಂಸತ್ತಿನ ಬದಲು ರಾಜ್ಯಗಳ ಮೂಲಕವೇ ಜಾರಿಗೆ ಅಮಿತ್ ಶಾ ಮುಂದಾಗಿದ್ದೇಕೆ?

ಕೇಂದ್ರ ಗೃಹ ಸಚಿವ ಅಮಿತ್ ಶಾ ಅವರು ಸೆಪ್ಟೆಂಬರ್ 13ರಂದು ಮುಂಬೈನಲ್ಲಿ ನಡೆದ ಸುದ್ದಿಗೋಷ್ಠಿಯಲ್ಲಿ, 2029ರ ಲೋಕಸಭಾ ಚುನಾವಣೆಗೂ ಮುನ್ನ ಬಿಜೆಪಿ ಮತ್ತು ಎನ್‌ಡಿಎ ಆಡಳಿತವಿರುವ ಎಲ್ಲಾ 21 ರಾಜ್ಯಗಳಲ್ಲಿ ಏಕರೂಪ ನಾಗರಿಕ...

ದಿಶಾ ಸಾಲಿಯಾನ್ ಸಾವಿನ ಪ್ರಕರಣ : ಸಿಬಿಐ ಎಫ್ಐಆರ್‌ನಲ್ಲಿ ಆದಿತ್ಯ ಠಾಕ್ರೆ, ರಿಯಾ ಚಕ್ರವರ್ತಿ ಸೇರಿದಂತೆ ಹಲವರ ಹೆಸರು

ಬಾಂಬೆ ಹೈಕೋರ್ಟ್ ಆದೇಶದ ಮೇರೆಗೆ, ಕೇಂದ್ರೀಯ ತನಿಖಾ ದಳವು (ಸಿಬಿಐ) ನಟ ಸುಶಾಂತ್ ಸಿಂಗ್ ರಜಪೂತ್ ಅವರ ಮಾಜಿ ಮ್ಯಾನೇಜರ್ ದಿಶಾ ಸಾಲಿಯಾನ್ ಅವರ ನಿಗೂಢ ಸಾವಿಗೆ ಸಂಬಂಧಿಸಿದಂತೆ ಸೋಮವಾರ(ಸೆ.14) ಎಫ್‌ಐಆರ್ ದಾಖಲಿಸಿದೆ. ಶಿವಸೇನೆ...

ಟಿ. ನರಸೀಪುರ ಇನ್ಸ್‌ಪೆಕ್ಟರ್‌ ಧನಂಜಯ್‌ ಹೇಳಿದ್ದರಲ್ಲಿ ತಪ್ಪೇನಿದೆ? ಸಾರ್ವಜನಿಕರಿಂದ ಬೆಂಬಲ

ಮಸೀದಿಗಳ ಮುಂಭಾಗ ಯಾವುದೇ ಪ್ರಚೋದನಕಾರಿ ಕೃತ್ಯಗಳಿಗೆ ಆಸ್ಪದ ನೀಡದೆ, ರಾತ್ರಿ 10:30ರ ಒಳಗಾಗಿ ಡಿಜೆ ಸದ್ದಿಲ್ಲದೆ ನಿಯಮಾನುಸಾರ ಮೆರವಣಿಗೆ ಮುಗಿಸಲು ಕಟ್ಟುನಿಟ್ಟಿನ ಕ್ರಮ ಕೈಗೊಂಡ ಇನ್ಸ್‌ಪೆಕ್ಟರ್ ಧನಂಜಯ್ ಅವರ ಪರವಾಗಿ ಈಗ ಸಾಮಾಜಿಕ...

ಅತ್ಯಾಚಾರ ಪ್ರಕರಣದಲ್ಲಿ 10 ವರ್ಷ ಜೈಲು ಶಿಕ್ಷೆ: ‘ತೆಹಲ್ಕಾ’ ಸಂಸ್ಥಾಪಕ ತರುಣ್ ತೇಜ್‌ಪಾಲ್ ನ್ಯಾಯಾಲಯಕ್ಕೆ ಶರಣು, ಜೈಲಿಗೆ ರವಾನೆ 

ಪಣಜಿ: 2013ರ ಲೈಂಗಿಕ ದೌರ್ಜನ್ಯ ಪ್ರಕರಣದಲ್ಲಿ ಬಾಂಬೆ ಹೈಕೋರ್ಟ್‌ನ ಗೋವಾ ಪೀಠದಿಂದ ದೋಷಿ ಎಂದು ತೀರ್ಪುಗೊಂಡು 10 ವರ್ಷಗಳ ಕಠಿಣ ಕಾರಾಗೃಹ ಶಿಕ್ಷೆಗೆ ಗುರಿಯಾಗಿರುವ ‘ತೆಹಲ್ಕಾ’ ಸಂಸ್ಥಾಪಕ ಹಾಗೂ ಮಾಜಿ ಪ್ರಧಾನ ಸಂಪಾದಕ...

ಹೈದರಾಬಾದ್‌ನಲ್ಲಿ ಗಣೇಶ ವಿಗ್ರಹ ಖರೀದಿ ವಿಚಾರಕ್ಕೆ ಘರ್ಷಣೆ: 34 ವರ್ಷದ ವ್ಯಕ್ತಿ ಸಾವು: ತಪ್ಪಿತಸ್ಥರ ವಿರುದ್ಧ ಕ್ರಮಕ್ಕೆ ಆಗ್ರಹ

ಹೈದರಾಬಾದ್: ಗಣೇಶ ಚತುರ್ಥಿ ಆಚರಣೆಗೆ ಮುನ್ನ ಗಣೇಶ ವಿಗ್ರಹ ಖರೀದಿಸುವ ವಿಚಾರಕ್ಕೆ ಸಂಬಂಧಿಸಿದಂತೆ ನಡೆದ ವಾಗ್ವಾದವು ಹಿಂಸಾತ್ಮಕ ಘರ್ಷಣೆಗೆ ತಿರುಗಿ 34 ವರ್ಷದ ವ್ಯಕ್ತಿಯೊಬ್ಬರು ಮೃತಪಟ್ಟಿರುವ ಘಟನೆ ಹೈದರಾಬಾದ್‌ನ ಜೋಡಿಮೆಟ್ಲಾ ಪ್ರದೇಶದಲ್ಲಿ ನಡೆದಿದೆ....

ಮಹಿಳಾ ಬೈಕರ್‌ಗೆ ಬೇಕಂತಲೇ ಢಿಕ್ಕಿ ಹೊಡೆದು ಪರಾರಿಯಾದ ಕಾರು ಸವಾರ! ಬೆಚ್ಚಿಬೀಳಿಸುವ ವಿಡಿಯೋ ವೈರಲ್

ಹರ್ಯಾಣದ ಗುರುಗ್ರಾಮದ ಗಾಲ್ಫ್ ಕೋರ್ಸ್ ರಸ್ತೆಯಲ್ಲಿ ಅತಿವೇಗವಾಗಿ ಬಂದ ಕಾರೊಂದು ಮಹಿಳಾ ಬೈಕ್ ಸವಾರಿಗೆ ಉದ್ದೇಶಪೂರ್ವಕವಾಗಿ ಢಿಕ್ಕಿ ಹೊಡೆದು ಪರಾರಿಯಾಗಿರುವ ಭೀಕರ ಘಟನೆ ನಡೆದಿದೆ. ಹಿಟ್ ಆ್ಯಂಡ್ ರನ್ ಶಂಕೆ ವ್ಯಕ್ತವಾಗಿರುವ ಈ...

ಪ. ಬಂಗಾಳ | 252 ಮದ್ರಸಾಗಳನ್ನು ಮುಚ್ಚಲು ಆದೇಶಿಸಿದ ಬಿಜೆಪಿ ಸರ್ಕಾರ; 100 ಸಂಸ್ಥೆಗಳಿಗೆ ಕಾರಣ ಕೇಳಿ ನೋಟಿಸ್

ರಾಜ್ಯದಾದ್ಯಂತ ಮದ್ರಸಾಗಳ ಸಮೀಕ್ಷೆಯನ್ನು ಪ್ರಾರಂಭಿಸಿದ ಮೂರು ತಿಂಗಳ ನಂತರ, ಬಿಜೆಪಿ ನೇತೃತ್ವದ ಪಶ್ಚಿಮ ಬಂಗಾಳ ಸರ್ಕಾರವು ಅನುಮೋದನೆಯ ಕೊರತೆ ಅಥವಾ ಇತರ ಅಕ್ರಮಗಳನ್ನು ಉಲ್ಲೇಖಿಸಿ 252 ಸಂಸ್ಥೆಗಳನ್ನು ಮುಚ್ಚಲು ಆದೇಶಿಸಿದೆ ಮತ್ತು ಇತರ...

ಟಿ. ನರಸೀಪುರ ಪ್ರತಿಭಟನೆ ವೇಳೆ ವಾಕ್ಸಮರ: ಪ್ರತಾಪ್ ಸಿಂಹ ಹಾಗೂ ಎಲ್. ನಾಗೇಂದ್ರ ನಡುವೆ ಬಹಿರಂಗ ನೂಕಾಟ-ತಳ್ಳಾಟ!

ಟಿ. ನರಸೀಪುರದಲ್ಲಿ ಗಣೇಶೋತ್ಸವ ಮೆರವಣಿಗೆಗೆ ಸಂಬಂಧಿಸಿದ ವಿವಾದದ ಹಿನ್ನೆಲೆಯಲ್ಲಿ ಬಿಜೆಪಿ ಹಮ್ಮಿಕೊಂಡಿದ್ದ ಪ್ರತಿಭಟನೆ ವೇಳೆ ಮೈಸೂರು ಬಿಜೆಪಿಯಲ್ಲಿನ ಆಂತರಿಕ ಭಿನ್ನಮತ ಬಹಿರಂಗಗೊಂಡಿದೆ. ಪೊಲೀಸ್ ಇನ್ಸ್‌ಪೆಕ್ಟರ್ ಧನಂಜಯ್ ವಿರುದ್ಧ ನಡೆದ ಪ್ರತಿಭಟನೆಯ ಸಂದರ್ಭದಲ್ಲಿ ಮಾಜಿ...

ಉಮರ್ ಖಾಲಿದ್ ಕುರಿತ ಸಾಕ್ಷ್ಯಚಿತ್ರ ಪ್ರದರ್ಶನ ಮುಂದೂಡಿದ NLSIU ವಿದ್ಯಾರ್ಥಿ ಸಂಘ; ಯಾವುದೇ ಒತ್ತಡಕ್ಕೆ ಮಣಿದಿಲ್ಲವೆಂದು ಸ್ಪಷ್ಟನೆ

ಬೆಂಗಳೂರಿನ ನ್ಯಾಷನಲ್ ಲಾ ಸ್ಕೂಲ್ ಆಫ್ ಇಂಡಿಯಾ ಯೂನಿವರ್ಸಿಟಿಯ (NLSIU) ಲಾ ಅಂಡ್ ಸೊಸೈಟಿ ಕಮಿಟಿಯು (LawSoc) ಉಮರ್ ಖಾಲಿದ್ ಅವರ ಜೈಲುವಾಸದ ಕುರಿತು ಲಲಿತ್ ವಾಚಾನಿ ನಿರ್ಮಿಸಿರುವ 'ಪ್ರಿಸನರ್ ನಂ. 626710...