Homeಮುಖಪುಟರೈತರನ್ನು ಹೇಡಿಗಳು ಎಂದ ಬಿ.ಸಿ.ಪಾಟೀಲ್: ಎಚ್.ಡಿ. ಕುಮಾರಸ್ವಾಮಿ ತಿರುಗೇಟು

ರೈತರನ್ನು ಹೇಡಿಗಳು ಎಂದ ಬಿ.ಸಿ.ಪಾಟೀಲ್: ಎಚ್.ಡಿ. ಕುಮಾರಸ್ವಾಮಿ ತಿರುಗೇಟು

’ರೈತ ರಾಜಕಾರಣಿಗಳಂತೆ ಅಧಿಕಾರಕ್ಕಾಗಿ ಬಣ್ಣ ಬದಲಿಸುವ ಗೋಸುಂಬೆ ವ್ಯಕ್ತಿತ್ವದವನಲ್ಲ. ಕೃಷಿ ಸಚಿವ ರೈತ ಸಮುದಾಯದ ವಿರುದ್ಧ ಎಲುಬಿಲ್ಲದ ನಾಲಿಗೆ ಹರಿ ಬಿಟ್ಟಿರುವುದು ಖಂಡನೀಯ.

- Advertisement -
- Advertisement -

ದೇಶದ ರೈತರು ವಿವಾದಾತ್ಮಕ ಕೃಷಿ ಕಾನೂನುಗಳನ್ನು ವಿರೋಧಿಸಿ ರಾಜಧಾನಿ ದೆಹಲಿಯಲ್ಲಿ ಕಳೆದ ಎಂಟು ದಿನಗಳಿಂದ ಬೃಹತ್ ಪ್ರತಿಭಟನೆ ನಡೆಸುತ್ತಿದ್ದಾರೆ. ಇಂತಹ ಸಮಯದಲ್ಲಿ ರಾಜ್ಯದ ಕೃಷಿ ಸಚಿವ ಬಿ.ಸಿ.ಪಾಟೀಲ್ ’ಆತ್ಮಹತ್ಯೆ ಮಾಡಿಕೊಳ್ಳುವ ರೈತರು ಹೇಡಿಗಳು’ ಎಂದು ವಿವಾದಾತ್ಮಕ ಹೇಳಿಕೆ ನೀಡಿದ್ದಾರೆ.

ಕೊಡಗು ಜಿಲ್ಲೆಯ ಪೊನ್ನಂಪೇಟೆಯ ಸಮೀಪದ  ಕೃಷಿ ಕಾಲೇಜಿನಲ್ಲಿ ಬಿದಿರು ಸಂಪನ್ಮೂಲ ಕೇಂದ್ರ ಉದ್ಘಾಟನಾ ಕಾರ್ಯಕ್ರಮದಲ್ಲಿ ಮಾತನಾಡಿದ ಕೃಷಿ ಸಚಿವ ಬಿ.ಸಿ. ಪಾಟೀಲ್, ಸಾಲ ಮತ್ತಿತರ ಕಾರಣಕ್ಕೆ ಹೆದರಿ ಆತ್ಮಹತ್ಯೆ ಮಾಡಿಕೊಳ್ಳುವ ರೈತರು ಹೇಡಿಗಳು ಎಂದಿದ್ದಾರೆ.

ಕೃಷಿ ಕೆಲಸ ಮಾಡಿ ಉತ್ತಮ‌ ಬದುಕು ಕಟ್ಟಿಕೊಂಡು, ಒಳ್ಳೆಯ ಜೀವನ ನಡೆಸುತ್ತಿರುವ ರೈತರಿದ್ದಾರೆ. ತನ್ನ ಹೆಂಡತಿ, ಮಕ್ಕಳನ್ನ ನೋಡಿಕೊಳ್ಳಲಾಗದೇ, ಆತ್ಮಹತ್ಯೆ ಮಾಡಿಕೊಳ್ಳುವವರು ಹೇಡಿ. ಹೇಡಿಗಳು ಮಾತ್ರ ಆತ್ಮಹತ್ಯೆ ಮಾಡಿಕೊಳ್ಳುತ್ತಾರೆ ಎಂದಿದ್ದಾರೆ.

ಇದನ್ನೂ ಓದಿ: ಅನ್ನದ ಋಣ ತೀರಿಸಲು ಸುವರ್ಣಾವಕಾಶ- ರೈತ ಹೋರಾಟವನ್ನು ಹೀಗೂ ಬೆಂಬಲಿಸಬಹುದು

ಬದುಕಿನಲ್ಲಿ ಈಸಬೇಕು, ಈಸಿ ಜಯಿಸಬೇಕು. ರೈತರು ಆತ್ಮಹತ್ಯೆ ಮಾಡಿಕೊಳ್ಳಬಾರದು ಅನ್ನೋದಕ್ಕೆ ಸ್ವಾವಲಂಬಿ ರೈತರು ಮಾದರಿ ಎಂದು ಬಿ.ಸಿ. ಪಾಟೀಲ್ ಹೇಳಿಕೆ ನೀಡಿದ್ದಾರೆ.

ರೈತರನ್ನು ಹೇಡಿಗಳು ಎಂದ ಸಚಿವ ಬಿ.ಸಿ.ಪಾಟೀಲ್ ಹೇಳಿಕೆಗೆ ಮಾಜಿ ಮುಖ್ಯಮಂತ್ರಿ ಎಚ್.ಡಿ.ಕುಮಾರಸ್ವಾಮಿ ಆಕ್ರೋಶ ವ್ಯಕ್ತಪಡಿಸಿ, ಬಹಿರಂಗವಾಗಿ ರೈತ ಸಮುದಾಯದ ಕ್ಷಮೆಯಾಚಿಸುವಂತೆ ಆಗ್ರಹಿಸಿದ್ದಾರೆ.

ತಮ್ಮ ಟ್ವಿಟರ್‌ ಖಾತೆಯಲ್ಲಿ ಸರಣಿ ಟ್ವೀಟ್‌ಗಳನ್ನು ಮಾಡಿರುವ ಕುಮಾರಸ್ವಾಮಿ, ’ಕೃಷಿ ಸಚಿವರೇ ರೈತ ಸಮುದಾಯದ ವಿರುದ್ಧ ಎಲುಬಿಲ್ಲದ ನಾಲಿಗೆ ಹರಿ ಬಿಟ್ಟಿರುವುದು ಖಂಡನೀಯ. ರೈತ ಸಮುದಾಯಕ್ಕೆ ಬಹಿರಂಗವಾಗಿ ಕ್ಷಮೆಯಾಚಿಸುವಂತೆ ಆಗ್ರಹಿಸುತ್ತೇನೆ’ ಎಂದು ಆಕ್ರೋಶ ವ್ಯಕ್ತಪಡಿಸಿದ್ದಾರೆ.

ಇದನ್ನೂ ಓದಿ: ಕೇಂದ್ರದೊಂದಿಗೆ ರೈತ ಮುಖಂಡರ ಸಭೆ: ಸಂಸತ್ ಅಧಿವೇಶನ ಕರೆದು ಕಾಯ್ದೆಗಳನ್ನು ಹಿಂತೆಗೆದುಕೊಳ್ಳಲು ರೈತರ ತಾಕೀತು

’ರೈತ, ರಾಜಕಾರಣಿಗಳಂತೆ ಅಧಿಕಾರಕ್ಕಾಗಿ ಬಣ್ಣ ಬದಲಿಸುವ ಗೋಸುಂಬೆ ವ್ಯಕ್ತಿತ್ವದವನಲ್ಲ. ನೆಲವನ್ನೇ ನಂಬಿ ಬದುಕುವ ಕಡು ಕಷ್ಟ ಜೀವಿ. ಇಂತಹ ರೈತ ಸಮುದಾಯಕ್ಕೆ ಕೇಂದ್ರ-ರಾಜ್ಯ ಸರ್ಕಾರಗಳು ರಟ್ಟೆಗೆ ಬಲ ತುಂಬುವ ಯೋಜನೆಗಳನ್ನು ರೂಪಿಸಿ ಅನುಷ್ಠಾನಗೊಳಿಸಬೇಕೇ ಹೊರತು, ಹೇಡಿ ಎಂಬ ಪಟ್ಟ ಕಟ್ಟಿ ಹೊಣೆಗೇಡಿತನ ಪ್ರದರ್ಶಿಸಬಾರದು’ ಎಂದು ಸರ್ಕಾರ ಮತ್ತು ಸಚಿವರ ವಿರುದ್ಧ ವಾಗ್ದಾಳಿ ನಡೆಸಿದ್ದಾರೆ.

’ರೈತ ಹುಟ್ಟು ಸ್ವಾಭಿಮಾನಿ ಹಾಗೂ ಮರ್ಯಾದಸ್ತ. ಸಾಲ ಕೊಟ್ಟವರು ಬಂದು ಕಿಬ್ಬದಿಯ ಕೀಲು ಮುರಿದಂತೆ ಪೀಡಿಸುವಾಗ ಮರ್ಯಾದೆಗೆ ಅಂಜಿ ದಿಕ್ಕು ತೋಚದಂತಾಗಿ ಆತ್ಮಹತ್ಯೆಗೆ ಶರಣಾಗುತ್ತಾನೆ. ಕೃಷಿ ಸಚಿವರು ಹೇಳಿದಂತೆ ರೈತ ಹೇಡಿಯಲ್ಲ’ ಎಂದು ಬಿ.ಸಿ.ಪಾಟೀಲ್ ವಿರುದ್ಧ ಆಕ್ರೋಶ ವ್ಯಕ್ತಪಡಿಸಿದ್ದಾರೆ.

ರೈತರಿಗೆ ಕನಿಷ್ಟ ಬೆಂಬಲ ಬೆಲೆ ನೀಡಲು, ಸರಿಯಾದ ಮಾರುಕಟ್ಟೆ ಒದಗಿಸಲು, ಬೀಜ-ರಸಗೊಬ್ಬರ ಒದಗಿಸಲು ಪ್ರಯತ್ನಿಸದೇ, ರೈತರನ್ನೇ ಹೇಡಿಗಳು ಎನ್ನುವ ಸರ್ಕಾರದ ವಿರುದ್ಧ ರೈತ ಮುಖಂಡರು ಆಕ್ರೋಶ ಹೊರಹಾಕಿದ್ದಾರೆ.


ಇದನ್ನೂ ಓದಿ: ’ಶಾಹೀನ್ ಬಾಗ್‌ ದಾದಿ’ಯ ಕುರಿತು ಆಕ್ಷೇಪಾರ್ಹ ಹೇಳಿಕೆ- ನಟಿ ಕಂಗನಾಗೆ ಕಾನೂನು ನೋಟಿಸ್

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ಡಿಸೆಂಬರ್ 15 ರ ಪ್ರತಿಭಟನೆಯಲ್ಲಿ ಭಾಗವಹಿಸಿದ್ದಕ್ಕಾಗಿ ಜಾಮಿಯಾ ಮಿಲಿಯಾ ವಿದ್ಯಾರ್ಥಿಗಳಿಗೆ ವಿಶ್ವವಿದ್ಯಾಲಯದಿಂದ ಶೋಕಾಸ್ ನೋಟಿಸ್‌

2019 ರಲ್ಲಿ ವಿದ್ಯಾರ್ಥಿಗಳ ಮೇಲಿನ ಹಿಂಸಾಚಾರ ನಡೆದು ಆರು ವರ್ಷಗಳು ತುಂಬಿದ್ದು, ಅದರ ವಾರ್ಷಿಕ ನೆನಪಿನಲ್ಲಿ ಜಾಮಿಯಾ ಮಿಲಿಯಾ ಇಸ್ಲಾಮಿಯಾ ವಿದ್ಯಾರ್ಥಿಗಳು ಡಿಸೆಂಬರ್ 15 ರಂದು ಕ್ಯಾಂಪಸ್ ಒಳಗೆ ದೊಡ್ಡ ಪ್ರತಿಭಟನೆ ನಡೆಸಿದ್ದರು....

ಅಮೆರಿಕದ ಸುಂಕಗಳು ತಮಿಳುನಾಡಿನ ರಫ್ತು ಕೈಗಾರಿಕೆಗಳನ್ನು ಅಂಚಿಗೆ ತಳ್ಳುತ್ತವೆ: ಪ್ರಧಾನಿ ಮೋದಿಗೆ ಸಿಎಂ ಸ್ಟಾಲಿನ್ ಎಚ್ಚರಿಕೆ

ತಮಿಳುನಾಡು ಮುಖ್ಯಮಂತ್ರಿ ಎಂ.ಕೆ. ಸ್ಟಾಲಿನ್ ಅವರು ಪ್ರಧಾನಿ ನರೇಂದ್ರ ಮೋದಿ ಅವರಿಗೆ ಪತ್ರ ಬರೆದಿದ್ದು, ಭಾರತದ ರಫ್ತಿನ ಮೇಲೆ ಅಮೆರಿಕ ವಿಧಿಸಿರುವ ಭಾರೀ ಸುಂಕಗಳು ರಾಜ್ಯದ ಕೆಲವು ಉದ್ಯೋಗ- ಕೈಗಾರಿಕೆಗಳನ್ನು ತೀವ್ರ ಬಿಕ್ಕಟ್ಟಿನತ್ತ...

ಐದು ವರ್ಷಗಳಲ್ಲಿ 84 ಸಾವಿರ ಸರ್ಕಾರಿ ಶಾಲೆಗಳು ಬಿಸಿಯೂಟ ಯೋಜನೆಯಿಂದ ಹೊರಕ್ಕೆ : ಸಂಸತ್ತಿಗೆ ತಿಳಿಸಿದ ಕೇಂದ್ರ

ಕಳೆದ ಐದು ವರ್ಷಗಳಲ್ಲಿ 84 ಸಾವಿರ ಸರ್ಕಾರಿ ಶಾಲೆಗಳು 'ಪ್ರಧಾನಮಂತ್ರಿ ಪೋಷಣ್ ಯೋಜನೆ'ಯಿಂದ (ಮಧ್ಯಾಹ್ನದ ಬಿಸಿಯೂಟ) ಹೊರ ಬಿದ್ದಿವೆ. 2020-21ರಲ್ಲಿ 11.19 ಲಕ್ಷ ಇದ್ದ ಶಾಲೆಗಳ ಸಂಖ್ಯೆ 2024-25ರಲ್ಲಿ 10.35ಕ್ಕೆ ಕುಸಿದಿದೆ ಎಂದು...

ಭೀಮಾ ಕೋರೆಗಾಂವ್ ಪ್ರಕರಣ: ಗೌತಮ್ ನವಲಖಾಗೆ ಜಾಮೀನಿನ ಮೇಲೆ ದೆಹಲಿಗೆ ತೆರಳಲು ಅನುಮತಿ ನೀಡಿದ ಬಾಂಬೆ ಹೈಕೋರ್ಟ್

ಭೀಮಾ ಕೋರೆಗಾಂವ್ ಯುಎಪಿಎ ಪ್ರಕರಣದಲ್ಲಿ ಜಾಮೀನಿನ ಮೇಲೆ ಹೊರಗಿರುವ ಮಾನವ ಹಕ್ಕುಗಳ ಕಾರ್ಯಕರ್ತ ಗೌತಮ್ ನವಲಖಾ ಅವರಿಗೆ ಪ್ರಕರಣದ ವಿಚಾರಣೆ ನಡೆಯುತ್ತಿರುವಾಗ ನವದೆಹಲಿಯಲ್ಲಿ ವಾಸಿಸಲು ಬಾಂಬೆ ಹೈಕೋರ್ಟ್ ಬುಧವಾರ ಅನುಮತಿ ನೀಡಿದೆ. ಆದಾಗಲೂ, ಮಾನವ...

ಕಾರವಾರ ನೌಕಾ ಪ್ರದೇಶದ ಸುತ್ತಮುತ್ತ ಆತಂಕ ಮೂಡಿಸಿದ ‘ಸೀಗಲ್‌’ ಪಕ್ಷಿ; ಚೀನಾ ನಿರ್ಮಿತ ಜಿಪಿಎಸ್ ಸಾಧನ ಪತ್ತೆ

ಉತ್ತರ ಕನ್ನಡ ಜಿಲ್ಲೆಯ ಕಾರವಾರದ ಕರಾವಳಿ ಪ್ರದೇಶದ ಬಳಿ, ಸೂಕ್ಷ್ಮ ನೌಕಾ ವಲಯದ ಬಳಿ ಚೀನಾ ನಿರ್ಮಿತ ಜಿಪಿಎಸ್ ಟ್ರ್ಯಾಕಿಂಗ್ ಸಾಧನವೊಂದು 'ಸೀಗಲ್' (ಸಮುದ್ರಹಕ್ಕಿ) ಪಕ್ಷಿಗೆ ಅಳವಡಿಸಿರುವುದು ಕಂಡುಬಂದ ನಂತರ ಭದ್ರತಾ ಸಂಸ್ಥೆಗಳು...

ಅಣು ಶಕ್ತಿಯ ಖಾಸಗೀಕರಣ : ‘ಶಾಂತಿ’ ಮಸೂದೆಗೆ ಲೋಕಸಭೆ ಅಸ್ತು

ಭಾರತದ ಅಣು ವಿದ್ಯುತ್ ಕ್ಷೇತ್ರದಲ್ಲಿ ಖಾಸಗಿ ವಲಯದ ಪ್ರವೇಶಕ್ಕೆ ದಾರಿ ಮಾಡಿಕೊಡುವ, 'ಭಾರತದ ಪ್ರಗತಿಗಾಗಿ ಅಣು ಶಕ್ತಿಯ ಸುಸ್ಥಿರ ಉತ್ಪಾದನೆ (ಎಸ್‌ಎಚ್‌ಎಎನ್‌ಟಿಐ– ಶಾಂತಿ ಮಸೂದೆ) ಮಸೂದೆಯನ್ನು ಲೋಕಸಭೆ ಬುಧವಾರ (ಡಿ.17) ಅಂಗೀಕರಿಸಿತು. ವಿಪಕ್ಷಗಳ ಸದಸ್ಯರು...

ಮಾದಕ ದ್ರವ್ಯ ಸೇವನೆ, ಲೈಂಗಿಕ ಕಿರುಕುಳಕ್ಕೆ 3 ಲಕ್ಷ ರೂ. ದಂಡ ವಸೂಲಿ: ಬೆಂಗಳೂರಿನ ಅಪಾರ್ಟ್‌ಮೆಂಟ್ ಅಸೋಸಿಯೇಷನ್ ​​ವಿರುದ್ಧ ಪ್ರಕರಣ ದಾಖಲು

ಬೆಂಗಳೂರು: ಪಶ್ಚಿಮ ಬೆಂಗಳೂರಿನ ದೊಡ್ಡಬೆಲೆ ಬಳಿಯ ವಸತಿ ಸಂಕೀರ್ಣವೊಂದರ ಅಪಾರ್ಟ್‌ಮೆಂಟ್ ಮಾಲೀಕರ ಸಂಘದ ವಿರುದ್ಧ ಅಪರಾಧ ಚಟುವಟಿಕೆಗಳಲ್ಲಿ ತೊಡಗಿರುವ ನಿವಾಸಿಗಳಿಂದ ದಂಡ ವಸೂಲಿ ಮಾಡಿದ ಮತ್ತು ಅಪರಾಧಗಳನ್ನು ಮುಚ್ಚಿಟ್ಟ ಆರೋಪದ ಮೇಲೆ ಕುಂಬಳಗೋಡು...

2020ರ ದೆಹಲಿ ಗಲಭೆ ಪ್ರಕರಣ: ಐವರು ಆರೋಪಿಗಳನ್ನು ಖುಲಾಸೆಗೊಳಿಸಿದ ನ್ಯಾಯಾಲಯ

2020 ರ ದೆಹಲಿ ಗಲಭೆಗೆ ಸಂಬಂಧಿಸಿದಂತೆ ಬೆಂಕಿ ಹಚ್ಚುವಿಕೆ, ಗಲಭೆ ಮತ್ತು ವಿಧ್ವಂಸಕ ಕೃತ್ಯದ ಆರೋಪ ಹೊತ್ತಿರುವ ಐವರನ್ನು ನ್ಯಾಯಾಲಯ ಖುಲಾಸೆಗೊಳಿಸಿದೆ. ಅಬ್ದುಲ್ ಸತ್ತಾರ್, ಮುಹಮ್ಮದ್ ಖಾಲಿದ್, ಹುನೈನ್, ತನ್ವೀರ್ ಮತ್ತು ಆರಿಫ್ ವಿರುದ್ಧದ...

ಕಾರ್‌ ಚಲಾಯಿಸುವಾಗ ಫೋನ್‌ನಲ್ಲಿ ಮಾತನಾಡದಂತೆ ಹೇಳಿದ್ದಕ್ಕೆ ಪತ್ರಕರ್ತನ ಮೇಲೆ ರಾಡ್‌ನಿಂದ ಹಲ್ಲೆ

ಆ್ಯಪ್ ಆಧಾರಿತ ಟ್ಯಾಕ್ಸಿ ಬುಕಿಂಗ್‌ ಮಾಡುವ ಪ್ರಯಾಣಿಕರ ಸುರಕ್ಷತೆ ಮತ್ತು ಚಾಲಕರ ನಡವಳಿಕೆಯ ಕುರಿತ ಕಳವಳವಳಕಾರಿ ಘಟನೆಯೊಂದು ಹರಿಯಾಣದ ಫರಿದಾಬಾದ್‌ನಲ್ಲಿ ಬೆಳಕಿಗೆ ಬಂದಿದೆ. ರ್ಯಾಪಿಡೋ ಟ್ಯಾಕ್ಸಿ ಚಾಲಕನೊಬ್ಬ ಪ್ರಯಾಣಿಕನ ಮೇಲೆ ಕಬ್ಬಿಣದ ರಾಡ್‌ನಿಂದ...

ರಾಜಸ್ಥಾನ| ಎಥೆನಾಲ್ ಸ್ಥಾವರದ ವಿರುದ್ಧ ಪ್ರತಿಭಟನೆ: 40 ಜನರ ಬಂಧನ

ರಾಜಸ್ಥಾನದ ಹನುಮಾನ್‌ಗಢ ಜಿಲ್ಲೆಯ ರೈತರು, ಪ್ರಸ್ತಾವಿತ ಎಥೆನಾಲ್ ಕಾರ್ಖಾನೆಯ ವಿರುದ್ಧ ಎರಡನೇ ದಿನವೂ ಪ್ರತಿಭಟನೆ ಮುಂದುವರೆಸಿದ್ದಾರೆ, ಈ ಪ್ರದೇಶದಲ್ಲಿ ಹೆಚ್ಚಿನ ಭದ್ರತೆ ಮತ್ತು ಇಂಟರ್ನೆಟ್ ಸೇವೆಗಳನ್ನು ಸ್ಥಗಿತಗೊಳಿಸಲಾಗಿದೆ. ಗುರುವಾರ ಮುಂಜಾನೆ ಟಿಬ್ಬಿ ಬಳಿಯ ಗುರುದ್ವಾರದಲ್ಲಿ...