Homeಮುಖಪುಟರೈತರನ್ನು ಹೇಡಿಗಳು ಎಂದ ಬಿ.ಸಿ.ಪಾಟೀಲ್: ಎಚ್.ಡಿ. ಕುಮಾರಸ್ವಾಮಿ ತಿರುಗೇಟು

ರೈತರನ್ನು ಹೇಡಿಗಳು ಎಂದ ಬಿ.ಸಿ.ಪಾಟೀಲ್: ಎಚ್.ಡಿ. ಕುಮಾರಸ್ವಾಮಿ ತಿರುಗೇಟು

’ರೈತ ರಾಜಕಾರಣಿಗಳಂತೆ ಅಧಿಕಾರಕ್ಕಾಗಿ ಬಣ್ಣ ಬದಲಿಸುವ ಗೋಸುಂಬೆ ವ್ಯಕ್ತಿತ್ವದವನಲ್ಲ. ಕೃಷಿ ಸಚಿವ ರೈತ ಸಮುದಾಯದ ವಿರುದ್ಧ ಎಲುಬಿಲ್ಲದ ನಾಲಿಗೆ ಹರಿ ಬಿಟ್ಟಿರುವುದು ಖಂಡನೀಯ.

- Advertisement -
- Advertisement -

ದೇಶದ ರೈತರು ವಿವಾದಾತ್ಮಕ ಕೃಷಿ ಕಾನೂನುಗಳನ್ನು ವಿರೋಧಿಸಿ ರಾಜಧಾನಿ ದೆಹಲಿಯಲ್ಲಿ ಕಳೆದ ಎಂಟು ದಿನಗಳಿಂದ ಬೃಹತ್ ಪ್ರತಿಭಟನೆ ನಡೆಸುತ್ತಿದ್ದಾರೆ. ಇಂತಹ ಸಮಯದಲ್ಲಿ ರಾಜ್ಯದ ಕೃಷಿ ಸಚಿವ ಬಿ.ಸಿ.ಪಾಟೀಲ್ ’ಆತ್ಮಹತ್ಯೆ ಮಾಡಿಕೊಳ್ಳುವ ರೈತರು ಹೇಡಿಗಳು’ ಎಂದು ವಿವಾದಾತ್ಮಕ ಹೇಳಿಕೆ ನೀಡಿದ್ದಾರೆ.

ಕೊಡಗು ಜಿಲ್ಲೆಯ ಪೊನ್ನಂಪೇಟೆಯ ಸಮೀಪದ  ಕೃಷಿ ಕಾಲೇಜಿನಲ್ಲಿ ಬಿದಿರು ಸಂಪನ್ಮೂಲ ಕೇಂದ್ರ ಉದ್ಘಾಟನಾ ಕಾರ್ಯಕ್ರಮದಲ್ಲಿ ಮಾತನಾಡಿದ ಕೃಷಿ ಸಚಿವ ಬಿ.ಸಿ. ಪಾಟೀಲ್, ಸಾಲ ಮತ್ತಿತರ ಕಾರಣಕ್ಕೆ ಹೆದರಿ ಆತ್ಮಹತ್ಯೆ ಮಾಡಿಕೊಳ್ಳುವ ರೈತರು ಹೇಡಿಗಳು ಎಂದಿದ್ದಾರೆ.

ಕೃಷಿ ಕೆಲಸ ಮಾಡಿ ಉತ್ತಮ‌ ಬದುಕು ಕಟ್ಟಿಕೊಂಡು, ಒಳ್ಳೆಯ ಜೀವನ ನಡೆಸುತ್ತಿರುವ ರೈತರಿದ್ದಾರೆ. ತನ್ನ ಹೆಂಡತಿ, ಮಕ್ಕಳನ್ನ ನೋಡಿಕೊಳ್ಳಲಾಗದೇ, ಆತ್ಮಹತ್ಯೆ ಮಾಡಿಕೊಳ್ಳುವವರು ಹೇಡಿ. ಹೇಡಿಗಳು ಮಾತ್ರ ಆತ್ಮಹತ್ಯೆ ಮಾಡಿಕೊಳ್ಳುತ್ತಾರೆ ಎಂದಿದ್ದಾರೆ.

ಇದನ್ನೂ ಓದಿ: ಅನ್ನದ ಋಣ ತೀರಿಸಲು ಸುವರ್ಣಾವಕಾಶ- ರೈತ ಹೋರಾಟವನ್ನು ಹೀಗೂ ಬೆಂಬಲಿಸಬಹುದು

ಬದುಕಿನಲ್ಲಿ ಈಸಬೇಕು, ಈಸಿ ಜಯಿಸಬೇಕು. ರೈತರು ಆತ್ಮಹತ್ಯೆ ಮಾಡಿಕೊಳ್ಳಬಾರದು ಅನ್ನೋದಕ್ಕೆ ಸ್ವಾವಲಂಬಿ ರೈತರು ಮಾದರಿ ಎಂದು ಬಿ.ಸಿ. ಪಾಟೀಲ್ ಹೇಳಿಕೆ ನೀಡಿದ್ದಾರೆ.

ರೈತರನ್ನು ಹೇಡಿಗಳು ಎಂದ ಸಚಿವ ಬಿ.ಸಿ.ಪಾಟೀಲ್ ಹೇಳಿಕೆಗೆ ಮಾಜಿ ಮುಖ್ಯಮಂತ್ರಿ ಎಚ್.ಡಿ.ಕುಮಾರಸ್ವಾಮಿ ಆಕ್ರೋಶ ವ್ಯಕ್ತಪಡಿಸಿ, ಬಹಿರಂಗವಾಗಿ ರೈತ ಸಮುದಾಯದ ಕ್ಷಮೆಯಾಚಿಸುವಂತೆ ಆಗ್ರಹಿಸಿದ್ದಾರೆ.

ತಮ್ಮ ಟ್ವಿಟರ್‌ ಖಾತೆಯಲ್ಲಿ ಸರಣಿ ಟ್ವೀಟ್‌ಗಳನ್ನು ಮಾಡಿರುವ ಕುಮಾರಸ್ವಾಮಿ, ’ಕೃಷಿ ಸಚಿವರೇ ರೈತ ಸಮುದಾಯದ ವಿರುದ್ಧ ಎಲುಬಿಲ್ಲದ ನಾಲಿಗೆ ಹರಿ ಬಿಟ್ಟಿರುವುದು ಖಂಡನೀಯ. ರೈತ ಸಮುದಾಯಕ್ಕೆ ಬಹಿರಂಗವಾಗಿ ಕ್ಷಮೆಯಾಚಿಸುವಂತೆ ಆಗ್ರಹಿಸುತ್ತೇನೆ’ ಎಂದು ಆಕ್ರೋಶ ವ್ಯಕ್ತಪಡಿಸಿದ್ದಾರೆ.

ಇದನ್ನೂ ಓದಿ: ಕೇಂದ್ರದೊಂದಿಗೆ ರೈತ ಮುಖಂಡರ ಸಭೆ: ಸಂಸತ್ ಅಧಿವೇಶನ ಕರೆದು ಕಾಯ್ದೆಗಳನ್ನು ಹಿಂತೆಗೆದುಕೊಳ್ಳಲು ರೈತರ ತಾಕೀತು

’ರೈತ, ರಾಜಕಾರಣಿಗಳಂತೆ ಅಧಿಕಾರಕ್ಕಾಗಿ ಬಣ್ಣ ಬದಲಿಸುವ ಗೋಸುಂಬೆ ವ್ಯಕ್ತಿತ್ವದವನಲ್ಲ. ನೆಲವನ್ನೇ ನಂಬಿ ಬದುಕುವ ಕಡು ಕಷ್ಟ ಜೀವಿ. ಇಂತಹ ರೈತ ಸಮುದಾಯಕ್ಕೆ ಕೇಂದ್ರ-ರಾಜ್ಯ ಸರ್ಕಾರಗಳು ರಟ್ಟೆಗೆ ಬಲ ತುಂಬುವ ಯೋಜನೆಗಳನ್ನು ರೂಪಿಸಿ ಅನುಷ್ಠಾನಗೊಳಿಸಬೇಕೇ ಹೊರತು, ಹೇಡಿ ಎಂಬ ಪಟ್ಟ ಕಟ್ಟಿ ಹೊಣೆಗೇಡಿತನ ಪ್ರದರ್ಶಿಸಬಾರದು’ ಎಂದು ಸರ್ಕಾರ ಮತ್ತು ಸಚಿವರ ವಿರುದ್ಧ ವಾಗ್ದಾಳಿ ನಡೆಸಿದ್ದಾರೆ.

’ರೈತ ಹುಟ್ಟು ಸ್ವಾಭಿಮಾನಿ ಹಾಗೂ ಮರ್ಯಾದಸ್ತ. ಸಾಲ ಕೊಟ್ಟವರು ಬಂದು ಕಿಬ್ಬದಿಯ ಕೀಲು ಮುರಿದಂತೆ ಪೀಡಿಸುವಾಗ ಮರ್ಯಾದೆಗೆ ಅಂಜಿ ದಿಕ್ಕು ತೋಚದಂತಾಗಿ ಆತ್ಮಹತ್ಯೆಗೆ ಶರಣಾಗುತ್ತಾನೆ. ಕೃಷಿ ಸಚಿವರು ಹೇಳಿದಂತೆ ರೈತ ಹೇಡಿಯಲ್ಲ’ ಎಂದು ಬಿ.ಸಿ.ಪಾಟೀಲ್ ವಿರುದ್ಧ ಆಕ್ರೋಶ ವ್ಯಕ್ತಪಡಿಸಿದ್ದಾರೆ.

ರೈತರಿಗೆ ಕನಿಷ್ಟ ಬೆಂಬಲ ಬೆಲೆ ನೀಡಲು, ಸರಿಯಾದ ಮಾರುಕಟ್ಟೆ ಒದಗಿಸಲು, ಬೀಜ-ರಸಗೊಬ್ಬರ ಒದಗಿಸಲು ಪ್ರಯತ್ನಿಸದೇ, ರೈತರನ್ನೇ ಹೇಡಿಗಳು ಎನ್ನುವ ಸರ್ಕಾರದ ವಿರುದ್ಧ ರೈತ ಮುಖಂಡರು ಆಕ್ರೋಶ ಹೊರಹಾಕಿದ್ದಾರೆ.


ಇದನ್ನೂ ಓದಿ: ’ಶಾಹೀನ್ ಬಾಗ್‌ ದಾದಿ’ಯ ಕುರಿತು ಆಕ್ಷೇಪಾರ್ಹ ಹೇಳಿಕೆ- ನಟಿ ಕಂಗನಾಗೆ ಕಾನೂನು ನೋಟಿಸ್

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ಕರಾವಳಿ ಸಮಸ್ಯೆಗೆ ಶಾಶ್ವತ ಪರಿಹಾರದ ಭರವಸೆ: ಸಚಿವ ಕೆ.ಎಸ್.ಬಸವಂತಪ್ಪ

ರಾಜ್ಯದ ಕರಾವಳಿ ಭಾಗದಲ್ಲಿ ಮೀನುಗಾರಿಕೆ ಕ್ಷೇತ್ರದ ಅಭಿವೃದ್ಧಿ ಕುಂಠಿತವಾಗುತ್ತಿರುವ ಕುರಿತು ಕಳವಳ ವ್ಯಕ್ತವಾಗುತ್ತಿರುವ ಬೆನ್ನಲ್ಲೇ, ಸ್ಥಳೀಯ ಸಮಸ್ಯೆಗಳಿಗೆ ಸ್ಪಂದಿಸಲು ಸರ್ಕಾರ ಮುಂದಾಗಿದೆ. ಕರಾವಳಿ ವ್ಯಾಪ್ತಿಯ ಬಂದರುಗಳು, ಮೀನು ಮಾರುಕಟ್ಟೆಗಳು, ಬ್ರೇಕ್‌ವಾಟರ್‌ಗಳು ಹಾಗೂ ಜೆಟ್ಟಿಗಳಿಗೆ...

SIR ಪ್ರಕ್ರಿಯೆಯಲ್ಲಿ ಯಾರ ಹೆಸರು ಬಿಟ್ಟುಹೋಗಬಾರದು: PRC ನೀಡಲು ವಿಳಂಬ ಬೇಡ ಡಾ. ಜಿ. ಪರಮೇಶ್ವರ್

ಉದ್ಯೋಗ ಅಥವಾ ವಿವಿಧ ಕಾರಣಗಳಿಂದಾಗಿ ತಮ್ಮ ಸ್ವಂತ ಊರು ತೊರೆದು ಬೇರೆಡೆಗೆ ಸ್ಥಳಾಂತರಗೊಂಡು ನೆಲೆಸಿರುವ ರಾಜ್ಯದ ಯಾವುದೇ ನಾಗರಿಕರು ಯಾವುದೇ ಕಾರಣಕ್ಕೂ ಮತದಾರರ ಪಟ್ಟಿಯಿಂದ ಹೊರಗುಳಿಯಬಾರದು ಎಂದು ಉಪಮುಖ್ಯಮಂತ್ರಿ ಹಾಗೂ ಕಂದಾಯ ಸಚಿವರಾದ...

ಬಿಹಾರ ಪ್ರವಾಹದ ನಡುವೆ ಮೋದಿ ಹುಟ್ಟುಹಬ್ಬದ ಪ್ರಯುಕ್ತ ದೀಪೋತ್ಸವ; ‘ಆಶೀರ್ವಾದ್ ಕಾ ದಿಯಾ’ ಕಾರ್ಯಕ್ರಮಕ್ಕೆ ತೇಜಸ್ವಿ ಯಾದವ್ ಆಕ್ಷೇಪ

ಬಿಹಾರದಲ್ಲಿ ಪ್ರವಾಹ ಪರಿಸ್ಥಿತಿ ಮುಂದುವರಿದಿರುವ ನಡುವೆಯೇ ಪ್ರಧಾನಿ ನರೇಂದ್ರ ಮೋದಿ ಅವರ ಹುಟ್ಟುಹಬ್ಬದ ಅಂಗವಾಗಿ ಸೆಪ್ಟೆಂಬರ್ 17ರಂದು ‘ಆಶೀರ್ವಾದ್ ಕಾ ದಿಯಾ’ ಕಾರ್ಯಕ್ರಮ ಆಯೋಜಿಸಿರುವುದು ರಾಜಕೀಯ ಚರ್ಚೆಗೆ ಕಾರಣವಾಗಿದೆ. ರಾಜ್ಯದ 15 ಜಿಲ್ಲೆಗಳಲ್ಲಿ...

ಉಮರ್ ಖಾಲಿದ್ ಅವರನ್ನು ‘ದೇಶಪ್ರೇಮಿ’ ಎಂದ ಬಿ.ಕೆ. ಹರಿಪ್ರಸಾದ್; ವಿಧಾನಸೌಧ ಪೊಲೀಸ್ ಠಾಣೆಯಲ್ಲಿ ದೂರು ದಾಖಲು

ಬೆಂಗಳೂರಿನ ರಾಷ್ಟ್ರೀಯ ಕಾನೂನು ಶಾಲೆ (ಎನ್‌ಎಲ್‌ಎಸ್‌ಐಯು) ಯೂನಿವರ್ಸಿಟಿಯಲ್ಲಿ ಜೈಲಿನಲ್ಲಿರುವ ಹೋರಾಟಗಾರ ಉಮರ್ ಖಾಲಿದ್ ಕುರಿತಾದ ಸಾಕ್ಷ್ಯಚಿತ್ರಕ್ಕೆ ಸಂಬಂಧಿಸಿದಂತೆ ನಡೆಯುತ್ತಿರುವ ವಿವಾದದ ನಡುವೆ, ಅವರನ್ನು "ರಾಷ್ಟ್ರಪ್ರೇಮಿ" ಎಂದು ಕರೆದಿರುವ ಕರ್ನಾಟಕ ಪ್ರದೇಶ ಕಾಂಗ್ರೆಸ್ ಸಮಿತಿ...

ಇಂದಿರಾ ಗಾಂಧಿಯಂತೆ ನೇರವಾಗಿ ನಿಲ್ಲಿ, ಟ್ರಂಪ್ ಮುಂದೆ ಮಂಡಿಯೂರುತ್ತಿದ್ದೀರಿ: ‘UPI ಟ್ಯಾಕ್ಸ್’ ಬಗ್ಗೆ ಮೋದಿ ವಿರುದ್ಧ ರಾಹುಲ್ ವಾಗ್ದಾಳಿ!

ಯುಪಿಐ (UPI) ವಹಿವಾಟುಗಳಿಗೆ ಸಂಬಂಧಿಸಿದಂತೆ ಜಾರಿಯಾಗುತ್ತಿರುವ ಹೊಸ 'ಮರ್ಚೆಂಟ್ ಡಿಸ್ಕೌಂಟ್ ರೇಟ್' (MDR) ವ್ಯವಸ್ಥೆ ಇದೀಗ ತೀವ್ರ ರಾಜಕೀಯ ಸಂಘರ್ಷಕ್ಕೆ ಕಾರಣವಾಗಿದೆ. ಇದನ್ನು "ಬ್ಯಾಂಕ್‌ಗಳು ವಿಧಿಸುವ ಸೇವಾ ಶುಲ್ಕ" ಎಂದು ಸರ್ಕಾರ ಸಮರ್ಥಿಸಿಕೊಳ್ಳುತ್ತಿದ್ದರೂ,...

ಲಿಯೋನೆಲ್ ಮೆಸ್ಸಿ ಕೇರಳ ಭೇಟಿ ಪ್ರಕರಣ: ಕೊಚ್ಚಿಯ ‘ರಿಪೋರ್ಟರ್ ಟಿವಿ’ ಕಚೇರಿಯಲ್ಲಿ ಪೊಲೀಸರಿಂದ ಶೋಧ

ಮಲಯಾಳಂ ಸುದ್ದಿ ವಾಹಿನಿ 'ರಿಪೋರ್ಟರ್ ಟಿವಿ'ಯ ಕೊಚ್ಚಿ ಪ್ರಧಾನ ಕಚೇರಿಯಲ್ಲಿ ಬುಧವಾರ (ಸೆ.16) ಮುಂಜಾನೆ ಪೊಲೀಸ್ ತಂಡವೊಂದು ಶೋಧ ಕಾರ್ಯ ನಡೆಸಿದ್ದು, ಇದರಿಂದಾಗಿ ತನ್ನ ಸುದ್ದಿ ಪ್ರಸಾರ ಕಾರ್ಯಾಚರಣೆಗೆ ಅಡಚಣೆಯಾಗಿದೆ ಎಂದು ವಾಹಿನಿ...

‘ಏಕರೂಪತೆ ಸಮಾನತೆಯಲ್ಲ’: 2029ಕ್ಕೂ ಮುನ್ನ 21 ರಾಜ್ಯಗಳಲ್ಲಿ ಯುಸಿಸಿ ಜಾರಿ ಘೋಷಿಸಿದ ಅಮಿತ್ ಶಾಗೆ ಪ್ರತಿಪಕ್ಷಗಳ ತೀವ್ರ ತಿರುಗೇಟು

ನವದೆಹಲಿ/ಮುಂಬೈ: 2029ರ ಲೋಕಸಭಾ ಚುನಾವಣೆಗೂ ಮುನ್ನ ಬಿಜೆಪಿ ನೇತೃತ್ವದ ಎನ್‌ಡಿಎ ಸರ್ಕಾರಗಳಿರುವ 21 ರಾಜ್ಯಗಳಲ್ಲಿ ಏಕರೂಪ ನಾಗರಿಕ ಸಂಹಿತೆ (ಯುಸಿಸಿ) ಜಾರಿಗೆ ತರಲಾಗುವುದು ಎಂಬ ಕೇಂದ್ರ ಗೃಹ ಸಚಿವ ಅಮಿತ್ ಶಾ ಅವರ...

KPSC ಅಧ್ಯಕ್ಷರ ಪುತ್ರಿಯ ನಕಲಿ ಪ್ರಮಾಣಪತ್ರ ಹಗರಣ: ಅಕ್ರಮಕ್ಕೆ ಸಾಥ್ ನೀಡಿದ್ದ ಅಧಿಕಾರಿಯ ಜಾಮೀನು ಅರ್ಜಿ ವಜಾ

ಕೆಪಿಎಸ್‌ಸಿ (KPSC) ಅಧ್ಯಕ್ಷರ ಪುತ್ರಿಗೆ ಅಕ್ರಮವಾಗಿ ನಕಲಿ ಆದಾಯ ಪ್ರಮಾಣಪತ್ರ ನೀಡಿದ ಆರೋಪ ಎದುರಿಸುತ್ತಿರುವ ಕಂದಾಯ ಅಧಿಕಾರಿಯ ನಿರೀಕ್ಷಣಾ ಜಾಮೀನು ಅರ್ಜಿಯನ್ನು ಬೆಂಗಳೂರಿನ ನಗರ ಸಿವಿಲ್ ಮತ್ತು ಸೆಷನ್ಸ್ ನ್ಯಾಯಾಲಯ ಮಂಗಳವಾರ ವಜಾಗೊಳಿಸಿದೆ....

ಬಂಗಾಳದಲ್ಲಿ ಬಿಜೆಪಿ ಸರ್ಕಾರದ ನಿರ್ಬಂಧ; ನೆಲಕಚ್ಚಿದ ದನದ ಮಾಂಸ ವ್ಯಾಪಾರ

ಪಶು ಹತ್ಯೆಯ ಕುರಿತು ಮುಖ್ಯಮಂತ್ರಿ ಸುವೇಂಧು ಅಧಿಕಾರಿ ನೇತೃತ್ವದ ಪಶ್ಚಿಮ ಬಂಗಾಳ ಸರ್ಕಾರವು ಸೂಚನೆ ಹೊರಡಿಸಿದ ನಂತರ, ಮಾಂಸದ ವ್ಯಾಪಾರಿ ಮುಷ್ತಾಕ್ ಕಳೆದ ಮೂರು ತಿಂಗಳಿನಿಂದ ಒಂದು ಪೈಸೆಯನ್ನೂ ಗಳಿಸಿಲ್ಲ. "ಚುನಾವಣೆಯ ಕಾರಣದಿಂದ...

ತೀವ್ರಗೊಂಡ ಸೌದಿ-ಹೌತಿ ಸಂಘರ್ಷ : ಮಕ್ಕಾ ಗುರಿಯಾಗಿಸಿದ್ದ ಡ್ರೋನ್ ಹೊಡೆದುರುಳಿಸಿದ್ದೇವೆ ಎಂದ ಸೌದಿ; ತಳ್ಳಿಹಾಕಿದ ಹೌತಿ

ಯೆಮನ್‌ನ ರೆಬೆಲ್ ಗ್ರೂಪ್ ಹೌತಿ ಮತ್ತು ಸೌದಿ ಬೆಂಬಲಿತ ಪಡೆಗಳ ಸಂಘರ್ಷ ತೀವ್ರಗೊಂಡಿದ್ದು, ಇತಿಹಾಸದಲ್ಲೇ ಮೊದಲ ಬಾರಿಗೆ ಮುಸ್ಲಿಮರ ಪವಿತ್ರ ನಗರ ಮಕ್ಕಾದಲ್ಲಿ ಸೌದಿ ಅರೇಬಿಯಾದ ನಾಗರಿಕ ರಕ್ಷಣಾ (ಸಿವಿಲ್ ಡಿಫೆನ್ಸ್) ಇಲಾಖೆಯು...