Homeಮುಖಪುಟರೈತರನ್ನು ಹೇಡಿಗಳು ಎಂದ ಬಿ.ಸಿ.ಪಾಟೀಲ್: ಎಚ್.ಡಿ. ಕುಮಾರಸ್ವಾಮಿ ತಿರುಗೇಟು

ರೈತರನ್ನು ಹೇಡಿಗಳು ಎಂದ ಬಿ.ಸಿ.ಪಾಟೀಲ್: ಎಚ್.ಡಿ. ಕುಮಾರಸ್ವಾಮಿ ತಿರುಗೇಟು

’ರೈತ ರಾಜಕಾರಣಿಗಳಂತೆ ಅಧಿಕಾರಕ್ಕಾಗಿ ಬಣ್ಣ ಬದಲಿಸುವ ಗೋಸುಂಬೆ ವ್ಯಕ್ತಿತ್ವದವನಲ್ಲ. ಕೃಷಿ ಸಚಿವ ರೈತ ಸಮುದಾಯದ ವಿರುದ್ಧ ಎಲುಬಿಲ್ಲದ ನಾಲಿಗೆ ಹರಿ ಬಿಟ್ಟಿರುವುದು ಖಂಡನೀಯ.

- Advertisement -
- Advertisement -

ದೇಶದ ರೈತರು ವಿವಾದಾತ್ಮಕ ಕೃಷಿ ಕಾನೂನುಗಳನ್ನು ವಿರೋಧಿಸಿ ರಾಜಧಾನಿ ದೆಹಲಿಯಲ್ಲಿ ಕಳೆದ ಎಂಟು ದಿನಗಳಿಂದ ಬೃಹತ್ ಪ್ರತಿಭಟನೆ ನಡೆಸುತ್ತಿದ್ದಾರೆ. ಇಂತಹ ಸಮಯದಲ್ಲಿ ರಾಜ್ಯದ ಕೃಷಿ ಸಚಿವ ಬಿ.ಸಿ.ಪಾಟೀಲ್ ’ಆತ್ಮಹತ್ಯೆ ಮಾಡಿಕೊಳ್ಳುವ ರೈತರು ಹೇಡಿಗಳು’ ಎಂದು ವಿವಾದಾತ್ಮಕ ಹೇಳಿಕೆ ನೀಡಿದ್ದಾರೆ.

ಕೊಡಗು ಜಿಲ್ಲೆಯ ಪೊನ್ನಂಪೇಟೆಯ ಸಮೀಪದ  ಕೃಷಿ ಕಾಲೇಜಿನಲ್ಲಿ ಬಿದಿರು ಸಂಪನ್ಮೂಲ ಕೇಂದ್ರ ಉದ್ಘಾಟನಾ ಕಾರ್ಯಕ್ರಮದಲ್ಲಿ ಮಾತನಾಡಿದ ಕೃಷಿ ಸಚಿವ ಬಿ.ಸಿ. ಪಾಟೀಲ್, ಸಾಲ ಮತ್ತಿತರ ಕಾರಣಕ್ಕೆ ಹೆದರಿ ಆತ್ಮಹತ್ಯೆ ಮಾಡಿಕೊಳ್ಳುವ ರೈತರು ಹೇಡಿಗಳು ಎಂದಿದ್ದಾರೆ.

ಕೃಷಿ ಕೆಲಸ ಮಾಡಿ ಉತ್ತಮ‌ ಬದುಕು ಕಟ್ಟಿಕೊಂಡು, ಒಳ್ಳೆಯ ಜೀವನ ನಡೆಸುತ್ತಿರುವ ರೈತರಿದ್ದಾರೆ. ತನ್ನ ಹೆಂಡತಿ, ಮಕ್ಕಳನ್ನ ನೋಡಿಕೊಳ್ಳಲಾಗದೇ, ಆತ್ಮಹತ್ಯೆ ಮಾಡಿಕೊಳ್ಳುವವರು ಹೇಡಿ. ಹೇಡಿಗಳು ಮಾತ್ರ ಆತ್ಮಹತ್ಯೆ ಮಾಡಿಕೊಳ್ಳುತ್ತಾರೆ ಎಂದಿದ್ದಾರೆ.

ಇದನ್ನೂ ಓದಿ: ಅನ್ನದ ಋಣ ತೀರಿಸಲು ಸುವರ್ಣಾವಕಾಶ- ರೈತ ಹೋರಾಟವನ್ನು ಹೀಗೂ ಬೆಂಬಲಿಸಬಹುದು

ಬದುಕಿನಲ್ಲಿ ಈಸಬೇಕು, ಈಸಿ ಜಯಿಸಬೇಕು. ರೈತರು ಆತ್ಮಹತ್ಯೆ ಮಾಡಿಕೊಳ್ಳಬಾರದು ಅನ್ನೋದಕ್ಕೆ ಸ್ವಾವಲಂಬಿ ರೈತರು ಮಾದರಿ ಎಂದು ಬಿ.ಸಿ. ಪಾಟೀಲ್ ಹೇಳಿಕೆ ನೀಡಿದ್ದಾರೆ.

ರೈತರನ್ನು ಹೇಡಿಗಳು ಎಂದ ಸಚಿವ ಬಿ.ಸಿ.ಪಾಟೀಲ್ ಹೇಳಿಕೆಗೆ ಮಾಜಿ ಮುಖ್ಯಮಂತ್ರಿ ಎಚ್.ಡಿ.ಕುಮಾರಸ್ವಾಮಿ ಆಕ್ರೋಶ ವ್ಯಕ್ತಪಡಿಸಿ, ಬಹಿರಂಗವಾಗಿ ರೈತ ಸಮುದಾಯದ ಕ್ಷಮೆಯಾಚಿಸುವಂತೆ ಆಗ್ರಹಿಸಿದ್ದಾರೆ.

ತಮ್ಮ ಟ್ವಿಟರ್‌ ಖಾತೆಯಲ್ಲಿ ಸರಣಿ ಟ್ವೀಟ್‌ಗಳನ್ನು ಮಾಡಿರುವ ಕುಮಾರಸ್ವಾಮಿ, ’ಕೃಷಿ ಸಚಿವರೇ ರೈತ ಸಮುದಾಯದ ವಿರುದ್ಧ ಎಲುಬಿಲ್ಲದ ನಾಲಿಗೆ ಹರಿ ಬಿಟ್ಟಿರುವುದು ಖಂಡನೀಯ. ರೈತ ಸಮುದಾಯಕ್ಕೆ ಬಹಿರಂಗವಾಗಿ ಕ್ಷಮೆಯಾಚಿಸುವಂತೆ ಆಗ್ರಹಿಸುತ್ತೇನೆ’ ಎಂದು ಆಕ್ರೋಶ ವ್ಯಕ್ತಪಡಿಸಿದ್ದಾರೆ.

ಇದನ್ನೂ ಓದಿ: ಕೇಂದ್ರದೊಂದಿಗೆ ರೈತ ಮುಖಂಡರ ಸಭೆ: ಸಂಸತ್ ಅಧಿವೇಶನ ಕರೆದು ಕಾಯ್ದೆಗಳನ್ನು ಹಿಂತೆಗೆದುಕೊಳ್ಳಲು ರೈತರ ತಾಕೀತು

’ರೈತ, ರಾಜಕಾರಣಿಗಳಂತೆ ಅಧಿಕಾರಕ್ಕಾಗಿ ಬಣ್ಣ ಬದಲಿಸುವ ಗೋಸುಂಬೆ ವ್ಯಕ್ತಿತ್ವದವನಲ್ಲ. ನೆಲವನ್ನೇ ನಂಬಿ ಬದುಕುವ ಕಡು ಕಷ್ಟ ಜೀವಿ. ಇಂತಹ ರೈತ ಸಮುದಾಯಕ್ಕೆ ಕೇಂದ್ರ-ರಾಜ್ಯ ಸರ್ಕಾರಗಳು ರಟ್ಟೆಗೆ ಬಲ ತುಂಬುವ ಯೋಜನೆಗಳನ್ನು ರೂಪಿಸಿ ಅನುಷ್ಠಾನಗೊಳಿಸಬೇಕೇ ಹೊರತು, ಹೇಡಿ ಎಂಬ ಪಟ್ಟ ಕಟ್ಟಿ ಹೊಣೆಗೇಡಿತನ ಪ್ರದರ್ಶಿಸಬಾರದು’ ಎಂದು ಸರ್ಕಾರ ಮತ್ತು ಸಚಿವರ ವಿರುದ್ಧ ವಾಗ್ದಾಳಿ ನಡೆಸಿದ್ದಾರೆ.

’ರೈತ ಹುಟ್ಟು ಸ್ವಾಭಿಮಾನಿ ಹಾಗೂ ಮರ್ಯಾದಸ್ತ. ಸಾಲ ಕೊಟ್ಟವರು ಬಂದು ಕಿಬ್ಬದಿಯ ಕೀಲು ಮುರಿದಂತೆ ಪೀಡಿಸುವಾಗ ಮರ್ಯಾದೆಗೆ ಅಂಜಿ ದಿಕ್ಕು ತೋಚದಂತಾಗಿ ಆತ್ಮಹತ್ಯೆಗೆ ಶರಣಾಗುತ್ತಾನೆ. ಕೃಷಿ ಸಚಿವರು ಹೇಳಿದಂತೆ ರೈತ ಹೇಡಿಯಲ್ಲ’ ಎಂದು ಬಿ.ಸಿ.ಪಾಟೀಲ್ ವಿರುದ್ಧ ಆಕ್ರೋಶ ವ್ಯಕ್ತಪಡಿಸಿದ್ದಾರೆ.

ರೈತರಿಗೆ ಕನಿಷ್ಟ ಬೆಂಬಲ ಬೆಲೆ ನೀಡಲು, ಸರಿಯಾದ ಮಾರುಕಟ್ಟೆ ಒದಗಿಸಲು, ಬೀಜ-ರಸಗೊಬ್ಬರ ಒದಗಿಸಲು ಪ್ರಯತ್ನಿಸದೇ, ರೈತರನ್ನೇ ಹೇಡಿಗಳು ಎನ್ನುವ ಸರ್ಕಾರದ ವಿರುದ್ಧ ರೈತ ಮುಖಂಡರು ಆಕ್ರೋಶ ಹೊರಹಾಕಿದ್ದಾರೆ.


ಇದನ್ನೂ ಓದಿ: ’ಶಾಹೀನ್ ಬಾಗ್‌ ದಾದಿ’ಯ ಕುರಿತು ಆಕ್ಷೇಪಾರ್ಹ ಹೇಳಿಕೆ- ನಟಿ ಕಂಗನಾಗೆ ಕಾನೂನು ನೋಟಿಸ್

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

BJP ವಿರುದ್ಧದ ಆಕ್ರೋಶವೇ Gen-Z ಹೋರಾಟದ ಮೂಲ: ವಿಪಕ್ಷಗಳಿಗೆ ಇದು ದೊಡ್ಡ ಪಾಠ

ಜಂತರ್ ಮಂತರ್‌ನಲ್ಲಿ ನಡೆದ ವಿದ್ಯಾರ್ಥಿಗಳ ಹೋರಾಟವನ್ನು ನಿಮ್ಮ ರಾಜಕೀಯ ದೃಷ್ಟಿಕೋನಕ್ಕೆ ತಕ್ಕಂತೆ ನೀವು ಕ್ರಾಂತಿ ಎಂದಾದರೂ ನೋಡಬಹುದು, ಅಥವಾ ಕ್ಷಣಿಕವಾಗಿ ಎದ್ದ ಬಿರುಗಾಳಿ ಎಂದಾದರೂ ಭಾವಿಸಬಹುದು. ಆದರೆ ಇಲ್ಲಿ ನಿಜವಾಗಿಯೂ ಆಗಿದ್ದೇನು ಮತ್ತು...

ಇನ್‌ಸ್ಟಾಗ್ರಾಮ್‌ನಲ್ಲಿ ಕ್ಷಮಿಸಿದರೆ ಸಾಲದು, ವಿದ್ಯಾರ್ಥಿಗಳ ಮೇಲಿನ ಕೇಸ್ ವಾಪಸ್ ಪಡೆಯಿರಿ: ಪ್ರಧಾನಿಗೆ ದೀಪ್ಕೆ ನೇರ ಪ್ರಶ್ನೆ

ಪ್ರಧಾನಿ ನರೇಂದ್ರ ಮೋದಿ ಅವರು ಇನ್‌ಸ್ಟಾಗ್ರಾಮ್ ವಿಡಿಯೋವೊಂದರಲ್ಲಿ ತಮ್ಮ ವಿರುದ್ಧ ನಿಂದನಾತ್ಮಕ ಪದ ಬಳಸಿದ್ದ ‘ಕಾಕ್ರೋಚ್ ಜನತಾ ಪಾರ್ಟಿ’ (CJP) ಪ್ರತಿಭಟನಾ ನಿರತ ವಿದ್ಯಾರ್ಥಿಗಳನ್ನು ಕ್ಷಮಿಸಿದ್ದೇನೆ ಎಂದು ಹೇಳಿರುವುದಕ್ಕೆ ಸಿಜೆಪಿ ಸಂಸ್ಥಾಪಕ ಅಭಿಜೀತ್...

ಪ್ರತಿಭಟನೆ ಭೀತಿ : ಸಿಜೆಐ ಸೂರ್ಯಕಾಂತ್ ಭಾಗವಹಿಸಬೇಕಿದ್ದ ಘಟಿಕೋತ್ಸವ ದಿಢೀರ್ ಮುಂದೂಡಿದ TISS

ಮುಂಬೈನ ಟಾಟಾ ಇನ್‌ಸ್ಟಿಟ್ಯೂಟ್ ಆಫ್ ಸೋಷಿಯಲ್ ಸೈನ್ಸಸ್ (ಟಿಐಎಸ್‌ಎಸ್‌) ಸಂಸ್ಥೆಯು ಆಗಸ್ಟ್ 2ರಂದು ನಡೆಸಲು ನಿಗದಿಪಡಿಸಿದ್ದ ತನ್ನ 86ನೇ ವಾರ್ಷಿಕ ಘಟಿಕೋತ್ಸವವನ್ನು ದಿಢೀರ್ ಮುಂದೂಡಿದೆ. ಕ್ಯಾಂಪಸ್ ಭದ್ರತೆಯ ಬಗೆಗಿನ ಕಳವಳಗಳು ಮತ್ತು ವಿದ್ಯಾರ್ಥಿಗಳ...

ಪ್ರಧಾನಿಗಳೇ ನಿಮ್ಮ ರೀಲ್‌ಗಳನ್ನು ಅಂಧಭಕ್ತರು ಮೆಚ್ಚಬಹುದು, ಆದರೆ ಇತಿಹಾಸ ನಿಮ್ಮನ್ನು ಕ್ಷಮಿಸುವುದಿಲ್ಲ: ಬಿ.ಕೆ. ಹರಿಪ್ರಸಾದ್

ಪ್ರಧಾನಿ ನರೇಂದ್ರ ಮೋದಿ ಬಿಡುಗಡೆ ಮಾಡಿರುವ ಇತ್ತೀಚಿನ ವಿಡಿಯೋ (ರೀಲ್) ಕುರಿತು ಕಾಂಗ್ರೆಸ್ ಹಿರಿಯ ನಾಯಕ ಮತ್ತು ಕೆಪಿಸಿಸಿ ಅಧ್ಯಕ್ಷರಾದ ಬಿ.ಕೆ. ಹರಿಪ್ರಸಾದ್ ತೀವ್ರ ವಾಗ್ದಾಳಿ ನಡೆಸಿದ್ದಾರೆ. ತಾನು ಮಾಡಿದರೆ ರಾಜತಂತ್ರ, ಬೇರೆಯವರು...

ಪ್ರಧಾನಿ ಮೋದಿ ವಿರುದ್ಧ ನಿಂದನೆ: ನನಗೆ ಕೇವಲ 15 ವರ್ಷ ‘ಅನ್ಯರ ಪ್ರಭಾವಕ್ಕೆ ಒಳಗಾಗಿದ್ದೆ’ ಎಂದು ಕ್ಷಮೆ ಕೇಳಿದ ವಿದ್ಯಾರ್ಥಿನಿ ವಿಡಿಯೋ ವೈರಲ್

ಪ್ರಧಾನಮಂತ್ರಿ ನರೇಂದ್ರ ಮೋದಿ ಅವರ ವಿರುದ್ಧ ಆಕ್ಷೇಪಾರ್ಹ ಹೇಳಿಕೆ ನೀಡಿ ಭಾರಿ ಆಕ್ರೋಶಕ್ಕೆ ಗುರಿಯಾಗಿದ್ದ ಸಿಜೆಪಿ (CJP) ಪ್ರತಿಭಟನಾಕಾರ ಯುವತಿಯೊಬ್ಬಳು ಸೋಶಿಯಲ್ ಮೀಡಿಯಾದಲ್ಲಿ ಕ್ಷಮೆಯಾಚಿಸಿದ್ದಾಳೆ ಎನ್ನಲಾದ ವೀಡಿಯೊವೊಂದು ಹರಿದಾಡುತ್ತಿದೆ. ಸಾಮಾಜಿಕ ಮಾಧ್ಯಮಗಳಲ್ಲಿ ವೈರಲ್...

ಸ್ಪೇನ್‌ಗೆ ನುಗ್ಗಿದ ಸಾವಿರಾರು ಮೊರಾಕನ್ನರು : ಬೃಹತ್ ವಲಸೆಯ ಹಿಂದೆ ಇಸ್ರೇಲ್ ಕುತಂತ್ರ?

ಮೊರಾಕೊದಿಂದ ಸ್ಪೇನ್‌ನ ಸಿಯುಟಾ ನಗರಕ್ಕೆ ಸಾವಿರಾರು ವಲಸಿಗರು ನುಗ್ಗಿದ ಬಿಕ್ಕಟ್ಟಿನ ಹಿಂದೆ ಇಸ್ರೇಲ್ ಕೈವಾಡವಿದೆ ಎಂಬ ಆರೋಪಗಳು ಕೇಳಿ ಬಂದಿದ್ದು, ಸಾಮಾಜಿಕ ಜಾಲತಾಣಗಳಲ್ಲಿ ಇಸ್ರೇಲ್‌ನ ಕುತಂತ್ರ ಬುದ್ದಿಯ ಬಗ್ಗೆ ಭಾರೀ ಚರ್ಚೆಗಳು ನಡೆಯುತ್ತಿವೆ. ಇದೇ...

‘ಸಾವರ್ಕರ್ ದೇವರನ್ನು, ಧಾರ್ಮಿಕ ನಂಬಿಕೆಗಳನ್ನು ಪ್ರಶ್ನಿಸಿದ್ದರು’: ಪುಣೆ ನ್ಯಾಯಾಲಯದಲ್ಲಿ ಮೊಮ್ಮಗ ಸತ್ಯಕಿ ಸಾವರ್ಕರ್ ಒಪ್ಪಿಗೆ

ಪುಣೆ: ಕಾಂಗ್ರೆಸ್ ನಾಯಕ ಹಾಗೂ ಸಂಸತ್ತಿನ ವಿರೋಧ ಪಕ್ಷದ ನಾಯಕ ರಾಹುಲ್ ಗಾಂಧಿ ವಿರುದ್ಧ ದಾಖಲಾಗಿರುವ ಕ್ರಿಮಿನಲ್ ಮಾನನಷ್ಟ ಮೊಕದ್ದಮೆಯ ವಿಚಾರಣೆಯು ಅತ್ಯಂತ ಕುತೂಹಲಕಾರಿ ಮತ್ತು ರಾಜಕೀಯ-ಸೈದ್ಧಾಂತಿಕ ತಿರುವನ್ನು ಪಡೆದುಕೊಂಡಿದೆ. ವಿನಾಯಕ ದಾಮೋದರ್...

ಮಾಜಿ ಸಚಿವ ಧರ್ಮೇಂದ್ರ ಪ್ರಧಾನ್ ಮಗಳ ಫೋನ್ ಬಿಲ್ ವಿವಾದ: ₹68 ಸಾವಿರ ಬಿಲ್-ಪೇ ಆಗಿದ್ದು ಸರ್ಕಾರಿ ಹಣದಲ್ಲಾ?

ಮಾಜಿ ಕೇಂದ್ರ ಶಿಕ್ಷಣ ಸಚಿವ ಧರ್ಮೇಂದ್ರ ಪ್ರಧಾನ್ ಅವರ ಪುತ್ರಿ ನೈಮಿಷಾ ಪ್ರಧಾನ್ ಅವರು ಮತ್ತೊಮ್ಮೆ ವಿವಾದದ ಕೇಂದ್ರಬಿಂದುವಾಗಿದ್ದಾರೆ. ವಾರಗಳ ಹಿಂದೆ ನೀಟ್ ಪರೀಕ್ಷೆಯ ಪತ್ರಿಕೆ ಸೋರಿಕೆ ಖಂಡಿಸಿ ಕಾಕ್ರೋಚ್ ಜನತಾ ಪಾರ್ಟಿ...

ಇರಾನ್ ವಸತಿ ಕಟ್ಟಡದ ಮೇಲೆ ಅಮೆರಿಕಾ ದಾಳಿ: ಎರಡು ವರ್ಷದ ಮಗು ಸೇರಿ ಒಂದೇ ಕುಟುಂಬದ ಮೂವರ ಸಾವು

ಮಧ್ಯಪ್ರಾಚ್ಯದಲ್ಲಿ ಅಮೆರಿಕ ತನ್ನ ಸಾಮ್ರಾಜ್ಯಶಾಹಿ ಆಧಿಪತ್ಯ ಸ್ಥಾಪನೆಗಾಗಿ ನಡೆಸುತ್ತಿರುವ ಯುದ್ಧಕೋರ ನೀತಿ ಮತ್ತೊಮ್ಮೆ ನಿರಪರಾಧಿ ಸಾರ್ವಜನಿಕರ ರಕ್ತ ಹರಿಸಿದೆ. ಇರಾನ್ ಮೇಲಿನ ಅಮೆರಿಕ ಪಡೆಗಳ ಸರಣಿ ಮತ್ತು ಭೀಕರ ಬಾಂಬ್ ದಾಳಿಗಳು ಕೇವಲ...

SIR: ASDDO ಪಟ್ಟಿಯಲ್ಲಿ ಬೆಂಗಳೂರಿಗೆ ಪ್ರಥಮ ಸ್ಥಾನ, ರಾಜ್ಯದಲ್ಲಿ 2 ಕೋಟಿ ಮತದಾರರ ಹೆಸರು ರದ್ದಾಗುವ ಬೀತಿ

ಕರ್ನಾಟಕದಲ್ಲಿ ನಡೆಯುತ್ತಿರುವ ಮತದಾರರ ಪಟ್ಟಿಯ ವಿಶೇಷ ಸಮಗ್ರ ಪರಿಷ್ಕರಣೆ (SIR) ಪ್ರಕ್ರಿಯೆಯಲ್ಲಿ ರಾಜಧಾನಿ ಬೆಂಗಳೂರು ಅತ್ಯಂತ ಪ್ರಮುಖ ಹಾಗೂ ಕಳವಳಕಾರಿ ಕೇಂದ್ರವಾಗಿ ಹೊರಹೊಮ್ಮಿದೆ. ರಾಜ್ಯದಲ್ಲಿರುವ ಒಟ್ಟು 5.54 ಕೋಟಿ ನೋಂದಾಯಿತ ಮತದಾರರ ಪೈಕಿ...