ಕೇಂದ್ರ ಕೃಷಿ ಕಾನೂನುಗಳನ್ನು ತಿದ್ದುಪಡಿ ರೂಪದಲ್ಲಿ ಮರು ಪರಿಚಯಿಸುವುದಿಲ್ಲ ಎಂದು ಕೇಂದ್ರ ಕೃಷಿ ಸಚಿವ ನರೇಂದ್ರ ಸಿಂಗ್ ತೋಮರ್ ಸ್ಪಷ್ಟಪಡಿಸಿದ್ದಾರೆ.
ಐದು ರಾಜ್ಯಗಳ ವಿಧಾನಸಭಾ ಚುನಾವಣೆಯ ನಂತರ ತಿದ್ದುಪಡಿಗಳೊಂದಿಗೆ ಕೇಂದ್ರವು ಮೂರು ಕೃಷಿ ಕಾನೂನುಗಳನ್ನು (ಈಗ ರದ್ದುಗೊಳಿಸಲಾಗಿದೆ) ಮರಳಿ ತರಲು ಯತ್ನಿಸುತ್ತಿದೆ ಎಂದು ಕಾಂಗ್ರೆಸ್ ಆರೋಪಿಸಿದ ನಂತರ, ಸಂಯುಕ್ತ ಕಿಸಾನ್ ಮೋರ್ಚಾ ಎಚ್ಚರಿಕೆಯನ್ನು ನೀಡಿದ ಬೆನ್ನಲ್ಲೇ ಕೇಂದ್ರ ಕೃಷಿ ಸಚಿವರು ಸ್ಪಷ್ಟನೆ ನೀಡಿದ್ದಾರೆ.
ವಿವಾದಿತ ಕೃಷಿ ಕಾನೂನುಗಳ ಕುರಿತು ನಾಗ್ಪುರದ ಕಾರ್ಯಕ್ರಮವೊಂದರಲ್ಲಿ ಶುಕ್ರವಾರ ಮಾತನಾಡಿದ್ದ ಸಚಿವ ತೋಮರ್, “ಕೃಷಿ ಕಾಯ್ದೆಗಳನ್ನು ವಾಪಸ್ ತರಬಹುದು” ಎಂದು ಹೇಳಿರುವ ಕುರಿತು ಕೇಳಿದಾಗ, “ನಾನು ಹೀಗೆ ಹೇಳಲಿಲ್ಲ” ಎಂದು ಪ್ರತಿಕ್ರಿಯೆ ನೀಡಿರುವುದಾಗಿ ಎನ್ಡಿಟಿವಿ ವರದಿ ಮಾಡಿದೆ.
“ಸರ್ಕಾರವು ಉತ್ತಮ (ಕೃಷಿ) ಕಾನೂನುಗಳನ್ನು ಮಾಡಿದೆ ಎಂದು ನಾನು ಹೇಳಿದ್ದೇನೆ. ಕೆಲವು ಕಾರಣಗಳಿಂದ ನಾವು ಅವುಗಳನ್ನು ಹಿಂದಕ್ಕೆ ತೆಗೆದುಕೊಂಡಿದ್ದೇವೆ. ಸರ್ಕಾರವು ರೈತರ ಕಲ್ಯಾಣಕ್ಕಾಗಿ ಕೆಲಸ ಮಾಡುತ್ತದೆ” ಎಂದು ಸಚಿವರು ತಿಳಿಸಿದ್ದಾರೆ.
“ನಾವು ಕೃಷಿ ಕಾನೂನುಗಳನ್ನು ತಂದಿದ್ದೇವೆ. ಕೆಲವರು ಅದನ್ನು ಇಷ್ಟಪಡಲಿಲ್ಲ. ಆದರೆ ಸ್ವಾತಂತ್ರ್ಯ ಬಂದ 70 ವರ್ಷಗಳ ನಂತರ ನರೇಂದ್ರ ಮೋದಿಯವರ ನಾಯಕತ್ವದಲ್ಲಿ ಜಾರಿಗೊಳಿಸಿದ ಅತಿದೊಡ್ಡ ಸುಧಾರಣೆಗಳು ಈ ಕಾಯ್ದೆಗಳಾಗಿದ್ದವು. ಸರ್ಕಾರ ನಿರಾಶೆಗೊಂಡಿಲ್ಲ, ನಾವು ಒಂದು ಹೆಜ್ಜೆ ಹಿಂದೆ ಸರಿದಿದ್ದೇವೆ ಮತ್ತು ನಾವು ಮತ್ತೆ ಮುಂದುವರಿಯುತ್ತೇವೆ. ಏಕೆಂದರೆ ರೈತರು ಭಾರತದ ಬೆನ್ನೆಲುಬು. ಬೆನ್ನುಮೂಳೆಯನ್ನು ಬಲಪಡಿಸಿದರೆ ದೇಶವು ಬಲಗೊಳ್ಳುತ್ತದೆ” ಎಂದು ನಾಗ್ಪುರದಲ್ಲಿ ಹೇಳಿಕೆ ನೀಡಿದ್ದರು.
ಈ ಹೇಳಿಕೆಯನ್ನು ಉಲ್ಲೇಖಿಸಿದ ಕಾಂಗ್ರೆಸ್ ಪ್ರಧಾನ ಕಾರ್ಯದರ್ಶಿ ರಣದೀಪ್ ಸುರ್ಜೆವಾಲಾ ಅವರು, “ತೋಮರ್ ಅವರ ಹೇಳಿಕೆಯು ಮೂರು ರೈತ ವಿರೋಧಿ ಕಾನೂನುಗಳನ್ನು ಮತ್ತೆ ಜಾರಿಗೊಳಿಸುವ ಕೇಂದ್ರದ ಷಡ್ಯಂತ್ರವನ್ನು ಮತ್ತೊಮ್ಮೆ ಬಹಿರಂಗಪಡಿಸಿದೆ. ಐದು ರಾಜ್ಯಗಳ ವಿಧಾನಸಭಾ ಚುನಾವಣೆಗಳ ಬಳಿಕ ಕೇಂದ್ರ ಸರ್ಕಾರವು ಮೂರು ಕರಾಳ ಕಾನೂನುಗಳನ್ನು ಹೊಸ ರೂಪದಲ್ಲಿ ಮರಳಿ ತರಲು ಯೋಜಿಸುತ್ತಿದೆ. ಬಿಜೆಪಿ ಸರ್ಕಾರ ಬಂಡವಾಳಶಾಹಿಗಳ ಒತ್ತಡದಲ್ಲಿ ಇದನ್ನು ಮಾಡುತ್ತಿದೆ” ಎಂದು ಆರೋಪಿಸಿದ್ದರು.
ಐದು ರಾಜ್ಯಗಳ ಚುನಾವಣೆಯಲ್ಲಿ ಸೋಲಿನ ಭೀತಿಯಿಂದಾಗಿ ಪ್ರಧಾನಿ ನರೇಂದ್ರ ಮೋದಿಯವರು ಸಂಸತ್ತಿನಲ್ಲಿ ಕ್ಷಮೆಯಾಚಿಸಿದ್ದು, ಮೂರು ಕರಾಳ ಕಾನೂನುಗಳನ್ನು ರದ್ದುಗೊಳಿಸಿದ್ದಾರೆ ಎಂದು ಅವರು ತಿಳಿಸಿದ್ದಾರೆ.
ರಾಹುಲ್ ಗಾಂಧಿ ಪ್ರತಿಕ್ರಿಯೆ ನೀಡಿದ್ದು, “ಪ್ರಧಾನಿ ನರೇಂದ್ರ ಮೋದಿಯವರ ಕ್ಷಮೆಯಾಚನೆಯನ್ನು ತೋಮರ್ ಅವಮಾನಿಸಿದ್ದಾರೆ” ಎಂದು ಟೀಕಿಸಿದ್ದಾರೆ.
ಕಿಸಾನ್ ಮೋರ್ಚಾ ಎಚ್ಚರಿಕೆ
“ಹಿಂತೆಗೆದುಕೊಂಡ ಮೂರು ಕೃಷಿ ಕಾನೂನುಗಳನ್ನು ನಂತರದ ದಿನಗಳಲ್ಲಿ ಮತ್ತೆ ಜಾರಿಗೆ ತರಬಹುದು” ಎಂದು ಕೇಂದ್ರ ಕೃಷಿ ಸಚಿವ ನರೇಂದ್ರ ಸಿಂಗ್ ತೋಮರ್ ಹೇಳಿಕೆ ಹೊರಬಿದ್ದ ಬೆನ್ನಲ್ಲೇ ರೈತ ಒಕ್ಕೂಟ ಸಂಯುಕ್ತ ಕಿಸಾನ್ ಮೋರ್ಚಾ ಹೇಳಿಕೆ ನೀಡಿ, “ಸರ್ಕಾರದ ಅಹಂ ಮುರಿಯಲು ಎಲ್ಲಾ ಸಮಯದಲ್ಲಿಯೂ ಸಜ್ಜಾಗಿದ್ದೇವೆ” ಎಂದಿತ್ತು.
ಈ ಕುರಿತು ಟ್ವೀಟ್ ಮಾಡಿರುವ ಸಂಯುಕ್ತ ಕಿಸಾನ್ ಮೋರ್ಚಾ, “ಕೃಷಿ ಸಚಿವ ನರೇಂದ್ರ ತೋಮರ್ ಅವರ ಈ ಹೇಳಿಕೆ ದುರಹಂಕಾರದಿಂದ ಕೂಡಿದೆ. ಬಿಜೆಪಿ ಸರ್ಕಾರ ಒಂದು ಹೆಜ್ಜೆ ಹಿಂದೆ ಸರಿದು ಮತ್ತು ಎರಡು ಹೆಜ್ಜೆ ಮುಂದೆ ಹೋಗಬೇಕೆಂದು ಭಾವಿಸಿದರೆ ಅದು ಸಾಧ್ಯವಿಲ್ಲ. ರೈತರು ಮತ್ತು ರೈತ ಸಂಘಟನೆಗಳು ಎಂಎಸ್ಪಿ ಸೇರಿದಂತೆ ಎಲ್ಲಾ ವಿಷಯಗಳಲ್ಲಿ ಒಗ್ಗಟ್ಟಾಗಿವೆ ಮತ್ತು ಈ ಸರ್ಕಾರದ ಅಹಂ ಮುರಿಯಲು ಎಲ್ಲಾ ಸಮಯದಲ್ಲೂ ಸಿದ್ಧವಾಗಿದ್ದೇವೆ” ಎಂದು ಹೇಳಿತ್ತು.
ಇದನ್ನೂ ಓದಿರಿ: ಪಂಜಾಬ್ ಚುನಾವಣೆಯಲ್ಲಿ ಸ್ಪರ್ಧಿಸಲು ಕೆಲ ರೈತ ಸಂಘಟನೆಗಳ ನಿರ್ಧಾರ: ಅಂತರ ಕಾಯ್ದುಕೊಂಡ SKM



Not proper
😎 , AGRICULTURE INDUSTRIES PRODUCT MAFIA, Openly black marketing, gambling in marketing, government allowed, India is still not indipendent from British APMC system
What is the profit % limitations on consumer rate from agriculture industries according to law ?
Which law penalize unauthorised buyers and sellers at any rate from agriculture industries to the consumers ?
Other than agriculture industries, every INDUSTRIES know that what prices consumers pay for his INDUSTRY PRODUCT
Agriculture industries suffering losses about 453% to 8569% every year in the APMC system
Work on legalize agriculture industries product marketing
GOOD LUCK