Homeಮುಖಪುಟಉಪ ಚುನಾವಣೆಯ ಅಭ್ಯರ್ಥಿಗೆ ಬಿಜೆಪಿ ಸರ್ಕಾರದಲ್ಲಿ ಸಚಿವ ಸ್ಥಾನ: ಚುನಾವಣಾ ಆಯೋಗದ ಮೊರೆ ಹೋದ ಕಾಂಗ್ರೆಸ್

ಉಪ ಚುನಾವಣೆಯ ಅಭ್ಯರ್ಥಿಗೆ ಬಿಜೆಪಿ ಸರ್ಕಾರದಲ್ಲಿ ಸಚಿವ ಸ್ಥಾನ: ಚುನಾವಣಾ ಆಯೋಗದ ಮೊರೆ ಹೋದ ಕಾಂಗ್ರೆಸ್

- Advertisement -
- Advertisement -

ಉಪ ಚುನಾವಣೆಯ ಅಭ್ಯರ್ಥಿಗೆ ರಾಜಸ್ಥಾನದ ಬಿಜೆಪಿ ಸರ್ಕಾರ ಸಚಿವ ಸ್ಥಾನ ನೀಡಿದ್ದು, ಅವರನ್ನು ಚುನಾವಣಾ ಕಣದಿಂದ ಅನರ್ಹಗೊಳಿಸುವಂತೆ ಕಾಂಗ್ರೆಸ್ ಚುನಾವಣಾ ಆಯೋಗದ ಮೊರೆ ಹೋಗಿದೆ.

ಸುರೇಂದ್ರ ಪಾಲ್ ಸಿಂಗ್ ಟಿಟಿ ರಾಜಸ್ಥಾನದ ನೂತನ ಸಚಿವರಾಗಿ ಡಿಸೆಂಬರ್ 30ರಂದು ಪ್ರಮಾಣವಚನ ಸ್ವೀಕರಿಸಿದ್ದಾರೆ. ಅಚ್ಚರಿಯ ವಿಷಯವೆಂದರೆ, ಇದೇ ಸುರೇಂದ್ರ ಪಾಲ್ ಜನವರಿ 5ರಂದು ಕರಣ್‌ಪುರ ವಿಧಾನಸಭಾ ಕ್ಷೇತ್ರಕ್ಕೆ ನಡೆಯಲಿರುವ ಉಪ ಚನಾವಣೆಯ ಬಿಜೆಪಿಯ ಅಭ್ಯರ್ಥಿ ಕೂಡ ಹೌದು. ಅಭ್ಯರ್ಥಿಗೆ ಸಚಿವ ಸ್ಥಾನ ಕೊಟ್ಟರೆ ಅವರು ಚುನಾವಣೆಯ ಮೇಲೆ ಪ್ರಭಾವ ಬೀರುವುದು ಖಚಿತ ಎಂದು ಕಾಂಗ್ರೆಸ್ ಹೇಳಿದೆ.

ಚುನಾವಣೆಗೆ ಕೆಲವೇ ದಿನಗಳು ಬಾಕಿ ಇರುವಾಗ ಅಭ್ಯರ್ಥಿಗೆ ಸಚಿವ ಸ್ಥಾನ ನೀಡುವುದು ಮಾದರಿ ನೀತಿ ಸಂಹಿತೆಯ ಸ್ಪಷ್ಟ ಉಲ್ಲಂಘನೆ. ವಿಶೇಷವಾಗಿ ಕಲಂ 32ರ ಪ್ರಕಾರ ಚುನಾವಣೆ ಘೋಷಣೆಯಾದ ಬಳಿಕ ತಾತ್ಕಾಲಿಕ ನೇಮಕಾತಿಗಳನ್ನು ಮಾಡಬಾರದು. ಇಲ್ಲಿ ಅಭ್ಯರ್ಥಿಗೆ ಸಚಿವ ಸ್ಥಾನ ನೀಡಲಾಗಿದೆ. ಇದರಿಂದ ನ್ಯಾಯಯುತ ಚುನಾವಣೆ ನಡೆಯಲು ಸಾಧ್ಯವಿಲ್ಲ ಎಂದು ರಾಜ್ಯ ಕಾಂಗ್ರೆಸ್‌ ಅಧ್ಯಕ್ಷ ಗೋವಿಂದ್ ಸಿಂಗ್ ಡೋಟಸಾರ ಮತ್ತು ಹಿರಿಯ ಕಾಂಗ್ರೆಸ್ ನಾಯಕ ರಾಘು ಶರ್ಮಾ ಚುನಾವಣಾ ಆಯೋಗಕ್ಕೆ ಪತ್ರ ಬರೆದಿದ್ದಾರೆ.

ನವೆಂಬರ್ 25, 2023ರಂದು ರಾಜಸ್ಥಾನ ವಿಧಾನಸಭೆಯ 200 ಸ್ಥಾನಗಳ ಪೈಕಿ 199 ಸ್ಥಾನಗಳಿಗೆ ಮತದಾನ ನಡೆದಿತ್ತು. ಕರಣ್‌ಪುರ ಕ್ಷೇತ್ರದ ಹಾಲಿ ಶಾಸಕ ಮತ್ತು ಕಾಂಗ್ರೆಸ್ ಅಭ್ಯರ್ಥಿಯಾಗಿದ್ದ ಗುರ್ಮೀತ್ ಸಿಂಗ್ ಕೂನರ್ ಅವರು ನವೆಂಬರ್ 15ರಂದು ಹಠಾತ್ ಸಾವನ್ನಪ್ಪಿದ ಹಿನ್ನೆಲೆ, ಇಲ್ಲಿನ ಚುನಾವಣೆ ಮುಂದೂಡಲಾಗಿತ್ತು. ಜನವರಿ 5ರಂದು ಕರಣ್‌ಪುರಕ್ಕೆ ಉಪ ಚುನಾವಣೆ ನಡೆಯಲಿದೆ.

ಮೃತ ಗುರ್ಮೀತ್ ಸಿಂಗ್ ಕೂನರ್ ಅವರ ಪುತ್ರ ರೂಪಿಂದರ್ ಸಿಂಗ್ ಅವರನ್ನು ಕಾಂಗ್ರೆಸ್ ಕಣಕ್ಕಿಳಿಸಿದೆ. ಇವರ ಪ್ರತಿಸ್ಪರ್ಧಿಯಾಗಿ ಬಿಜೆಪಿಯಿಂದ ಸುರೇಂದ್ರ ಪಾಲ್ ಸ್ಪರ್ಧಿಸಿದ್ದಾರೆ. ಇದೇ ಸುರೇಂದ್ರ ಪಾಲ್‌ಗೆ ಈಗ ಸಚಿವ ಸ್ಥಾನ ನೀಡಲಾಗಿದೆ.

ಇದನ್ನೂ ಓದಿ : ಪಂಜಾಬ್ ಟ್ಯಾಬ್ಲೋ ತಿರಸ್ಕರಿಸಿದ ಕೇಂದ್ರ; ‘ದೇಶಭಕ್ತರಿಗೆ ಘೋರ ಅವಮಾನ’ ಎಂದ ಸಿಎಂ ಮಾನ್

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ತೆಲಂಗಾಣ: ಆರು ಜನ ಹಿರಿಯರು ಸೇರಿದಂತೆ 41 ಜನ ನಕ್ಸಲ್ ಕಾರ್ಯಕರ್ತರು ಪೊಲೀಸರಿಗೆ ಶರಣು

ದೇಶದಲ್ಲಿ ಮಾವೋವಾದಿ ವಿರೋಧಿ ಕಾರ್ಯಾಚರಣೆಗಳಲ್ಲಿ ಪ್ರಮುಖ ಬೆಳವಣಿಗೆಯಲ್ಲಿ, ಆರು ಜನ ಹಿರಿಯರು ಸೇರಿದಂತೆ 41 ಜನ ಕಮ್ಯುನಿಸ್ಟ್ ಪಾರ್ಟಿ ಆಫ್ ಇಂಡಿಯಾ (ಮಾವೋವಾದಿ) ಕಾರ್ಯಕರ್ತರು ತೆಲಂಗಾಣ ಪೊಲೀಸರ ಮುಂದೆ ಇಂದು ಶರಣಾಗಿದ್ದಾರೆ. ಶರಣಾಗತಿ ಪ್ರಕ್ರಿಯೆಯ...

‘ವೀಸಾ ಅವಧಿ ಮುಗಿಯುವ ಮೊದಲು ಪಾಕ್ ಮಹಿಳೆಯ ಪೌರತ್ವ ಅರ್ಜಿ ಪರಿಗಣಿಸಿ..’; ಕೇಂದ್ರ ಸರ್ಕಾರಕ್ಕೆ ಕರ್ನಾಟಕ ಹೈಕೋರ್ಟ್‌ ಸೂಚನೆ

ಭಾರತದಲ್ಲಿ ವಾಸಿಸುತ್ತಿರುವ ಪಾಕಿಸ್ತಾನಿ ಪ್ರಜೆಯ ಹೊಸ ಪೌರತ್ವ ಅರ್ಜಿಯನ್ನು ಸಕ್ರಿಯವಾಗಿ ಪರಿಗಣಿಸುವ ಜೊತೆಗೆ ಅವರ ದೀರ್ಘಾವಧಿಯ ವೀಸಾ ಅವಧಿ ಮುಗಿಯುವ ಮೊದಲೇ ಪ್ರಕ್ರಿಯೆಯನ್ನು ಪೂರ್ಣಗೊಳಿಸಬೇಕು ಎಂದು, ವಿದೇಶಾಂಗ ಸಚಿವಾಲಯ, ಗೃಹ ಸಚಿವಾಲಯ ಮತ್ತು...

ಎಚ್‌ಐವಿ ಪಾಸಿಟಿವ್ ಎಂದು ವಜಾಗೊಳಿಸಲಾದ ಬಿಎಸ್‌ಎಫ್ ಯೋಧನನ್ನು ಮತ್ತೆ ನೇಮಿಸುವಂತೆ ಹೈಕೋರ್ಟ್ ಆದೇಶ

ಜುಲೈ 2017 ರಲ್ಲಿ ಎಚ್‌ಐವಿ ಪಾಸಿಟಿವ್ ಎಂಬ ಕಾರಣಕ್ಕೆ ಸೇವೆಯಿಂದ ವಜಾಗೊಳಿಸಲಾದ ಗಡಿ ಭದ್ರತಾ ಪಡೆಯ ಕಾನ್‌ಸ್ಟೆಬಲ್‌ ಒಬ್ಬರನ್ನು ಮರುನೇಮಕ ಮಾಡುವಂತೆ ದೆಹಲಿ ಹೈಕೋರ್ಟ್ ಆದೇಶಿಸಿದೆ.  ನ್ಯಾಯಮೂರ್ತಿಗಳಾದ ಸಿ ಹರಿಶಂಕರ್ ಮತ್ತು ಓಂ ಪ್ರಕಾಶ್...

ವೈದ್ಯೆ ಬುರ್ಖಾ ಎಳೆದ ನಿತೀಶ್‌ಕುಮಾರ್: ಶ್ರೀನಗರದಲ್ಲಿ ದೂರು ದಾಖಲಿಸಿದ ಇಲ್ತಿಜಾ ಮುಫ್ತಿ

ಪಾಟ್ನಾದಲ್ಲಿ ನಡೆದ ಸರ್ಕಾರಿ ಕಾರ್ಯಕ್ರಮದ ಸಂದರ್ಭದಲ್ಲಿ ಮುಸ್ಲಿಂ ಮಹಿಳಾ ವೈದ್ಯರ ನಿಖಾಬ್ (ಬುರ್ಖಾ) ಎಳೆಯುತ್ತಿರುವುದನ್ನು ತೋರಿಸುವ ವೈರಲ್ ವೀಡಿಯೊದ ಕುರಿತು ಬಿಹಾರ ಮುಖ್ಯಮಂತ್ರಿ ನಿತೀಶ್ ಕುಮಾರ್ ವಿರುದ್ಧ ಎಫ್ಐಆರ್ ದಾಖಲಿಸಲು ಪೀಪಲ್ಸ್ ಡೆಮಾಕ್ರಟಿಕ್...

ಪ್ರಶ್ನೆಗಾಗಿ ಕಾಸು ಪ್ರಕರಣ: ಮಹುವಾ ಮೊಯಿತ್ರಾ ವಿರುದ್ಧ ಚಾರ್ಜ್‌ಶೀಟ್‌ ಸಲ್ಲಿಸಲು ಅನುಮತಿಸಿದ್ದ ಲೋಕಪಾಲ್ ಆದೇಶ ರದ್ದು ಪಡಿಸಿದ ದೆಹಲಿ ಹೈಕೋರ್ಟ್

‘ಪ್ರಶ್ನೆಗಾಗಿ ಕಾಸು’ ಪ್ರಕರಣದಲ್ಲಿ ತೃಣಮೂಲ ಕಾಂಗ್ರೆಸ್(ಟಿಎಂಸಿ) ಸಂಸದೆ ಮಹುವಾ ಮೊಯಿತ್ರಾ ವಿರುದ್ಧ ಚಾರ್ಜ್‌ಶೀಟ್ ಸಲ್ಲಿಸಲು ಸಿಬಿಐಗೆ ಅನುಮತಿ ನೀಡಿದ್ದ ಲೋಕಪಾಲ್ ಆದೇಶವನ್ನು ದೆಹಲಿ ಹೈಕೋರ್ಟ್ ಶುಕ್ರವಾರ ರದ್ದುಗೊಳಿಸಿದೆ. ಇದರಿಂದಾಗಿ ಮೊಯಿತ್ರಾ ಅವರಿಗೆ ಈ...

ಜಮ್ಮು-ಕಾಶ್ಮೀರ: ಪತ್ರಕರ್ತನ ಮೊಬೈಲ್ ಫೋನ್ ವಶಪಡಿಸಿಕೊಂಡ ಪೊಲೀಸರು

ಕಿಶ್ತ್ವಾರ್‌ನಲ್ಲಿನ ವಿದ್ಯುತ್ ಯೋಜನೆಯಲ್ಲಿ ಸ್ವಜನಪಕ್ಷಪಾತ ಮತ್ತು ಭ್ರಷ್ಟಾಚಾರದ ಆರೋಪಗಳ ಕುರಿತು ವರದಿ ಮಾಡುತ್ತಿದ್ದಾಗ, ದಿ ವೈರ್ ಸುದ್ದಿ ಪೋರ್ಟಲ್‌ನ ಪತ್ರಕರ್ತ ಜೆಹಾಂಗೀರ್ ಅಲಿ ಅವರ ಮೊಬೈಲ್ ಫೋನ್ ಅನ್ನು ಬುಧವಾರ (ಡಿಸೆಂಬರ್ 17)...

ಕೇರಳದಲ್ಲಿ ಗುಂಪುಹತ್ಯೆ: ಛತ್ತೀಸ್‌ಗಢ ವಲಸೆ ಕಾರ್ಮಿಕನನ್ನು ‘ಕಳ್ಳ’ ಎಂದು ಥಳಿಸಿ ಕೊಂದ ಗುಂಪು 

ಕೇರಳದ ಪಾಲಕ್ಕಾಡ್ ಜಿಲ್ಲೆಯಲ್ಲಿ ಗುರುವಾರ ಛತ್ತೀಸ್‌ಗಢದಿಂದ ಬಂದ ವಲಸೆ ಕಾರ್ಮಿಕನೊಬ್ಬನನ್ನು ಕಳ್ಳನೆಂದು ಶಂಕಿಸಿ ಗುಂಪೊಂದು ಥಳಿಸಿ ಕೊಂದಿದೆ. ಕೊಲೆಯಾದ ವ್ಯಕ್ತಿಯನ್ನು ರಾಮನಾರಾಯಣ್ ಭಯಾರ್ (31) ಎಂದು ಗುರುತಿಸಲಾಗಿದ್ದು, ಕಳೆದ ಒಂದು ತಿಂಗಳಿನಿಂದ ಪಾಲಕ್ಕಾಡ್‌ನ ಕಾಂಜಿಕೋಡ್‌ನಲ್ಲಿರುವ...

ನೋಯ್ಡಾ ಪೊಲೀಸ್ ಠಾಣೆಯೊಳಗೆ ವಕೀಲೆ ಮೇಲೆ ಲೈಂಗಿಕ ದೌರ್ಜನ್ಯ ಆರೋಪ; ಸಿಸಿಟಿವಿ ದೃಶ್ಯಾವಳಿ ಕೇಳಿದ ಸುಪ್ರೀಂ ಕೋರ್ಟ್

ಮಹಿಳಾ ವಕೀಲೆಯೊಬ್ಬರನ್ನು 14 ಗಂಟೆಗಳ ಕಾಲ ಅಕ್ರಮವಾಗಿ ಬಂಧಿಸಿ ಪೊಲೀಸರು ಲೈಂಗಿಕ ದೌರ್ಜನ್ಯ esgi, ಕಸ್ಟಡಿಯಲ್ಲಿ ಚಿತ್ರಹಿಂಸೆ ನೀಡಿದ ಆರೋಪದ ಪ್ರಕರಣವನ್ನು ಗಂಭೀರವಾಗಿ ಪರಿಗಣಿಸಿರುವ ಸುಪ್ರೀಂ ಕೋಡರ್ಟ್, ಮುಚ್ಚಿದ ಕವರ್‌ನಲ್ಲಿ ಸಿಸಿಟಿವಿ ದೃಶ್ಯಾವಳಿಗಳನ್ನು...

ಹಾಲು ಉತ್ಪಾದಕರಿಗೆ 1 ಲೀಟರ್ ಹಾಲಿನ ಪ್ರೋತ್ಸಾಹಧನ 5 ರಿಂದ 7 ರೂಗೆ ಏರಿಕೆ: ಅಧಿವೇಶನದಲ್ಲಿ ಸಿದ್ದರಾಮಯ್ಯ ಘೋಷಣೆ

ರೈತರ ಹಿತದೃಷ್ಠಿಯಿಂದ 1 ಲೀಟರ್ ಹಾಲಿಗೆ ಪ್ರೋತ್ಸಾಹಧನವನ್ನು 7 ರೂಪಾಯಿಗೆ ಏರಿಕೆ ಮಾಡುತ್ತೇವೆ ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ಘೋಷಿಸಿದ್ದಾರೆ. ಡಿಸೆಂಬರ್ 19ರಂದು ಬೆಳಗಾವಿ ಅಧಿವೇಶನದ ಕೊನೆಯ ದಿನ ಮಾತನಾಡಿದ ಅವರು, ರೈತರಿಗೆ ಹಸುಗಳನ್ನು ಸಾಕಿ...

ಬಾಂಗ್ಲಾ ದಂಗೆ: ಮಾಧ್ಯಮ ಸಂಸ್ಥೆಗಳಿಗೆ ಬೆಂಕಿ ಹಚ್ಚಿದ ಪ್ರತಿಭಟನಾಕಾರರು, ಉರಿಯುತ್ತಿದ್ದ ಕಚೇರಿಗಳಿಂದ 25 ಕ್ಕೂ ಹೆಚ್ಚು ಪತ್ರಕರ್ತರ ರಕ್ಷಣೆ

ಜುಲೈ ದಂಗೆಯ ನಾಯಕ ಷರೀಫ್ ಉಸ್ಮಾನ್ ಹಾದಿ ಅವರ ನಿಧನದ ಸುದ್ದಿ ಕೇಳಿದ ಬೆನ್ನಲ್ಲೇ ಶುಕ್ರವಾರ ಬಾಂಗ್ಲಾದೇಶದ ವಿವಿಧ ಭಾಗಗಳಲ್ಲಿ ತೀವ್ರ ಪ್ರತಿಭಟನೆಗಳು ಆರಂಭವಾಗಿದ್ದು ಹಿಂಸಾಚಾರಕ್ಕೆ ನಾಂದಿ ಹಾಡಿವೆ. ಅನೇಕ ಪ್ರತಿಭಟನಾಕಾರರು ಬೀದಿಗಿಳಿದಿದ್ದು,...