Homeಮುಖಪುಟಕಾಂಗ್ರೆಸ್‌ ಅನ್ನು ಬಲಪಡಿಸುವಲ್ಲಿ ಅಹಮದ್ ಪಟೇಲ್ ಪಾತ್ರ ಅವಿಸ್ಮರಣೀಯ - ಪ್ರಧಾನಿ ಮೋದಿ

ಕಾಂಗ್ರೆಸ್‌ ಅನ್ನು ಬಲಪಡಿಸುವಲ್ಲಿ ಅಹಮದ್ ಪಟೇಲ್ ಪಾತ್ರ ಅವಿಸ್ಮರಣೀಯ – ಪ್ರಧಾನಿ ಮೋದಿ

ಸೋನಿಯಾ ಗಾಂಧಿಯವರ ಅಪ್ತ ಸಹಾಯಕ ಮತ್ತು ಕಾಂಗ್ರೆಸ್‌ನ ಟ್ರಬಲ್‌ಶೂಟರ್ ಎಂದೇ ಖ್ಯಾತಿಯಾಗಿದ್ದ ಅಹಮದ್ ಪಟೇಲ್ ಇಂದು ಗುರಗ್ರಾಮ್ ಆಸ್ಪತ್ರೆಯಲ್ಲಿ ನಿಧರಾದರು

- Advertisement -
- Advertisement -

ಇಂದು ಮುಂಜಾನೆ ಕಾಂಗ್ರೆಸ್ ಹಿರಿಯ ಮುಖಂಡ ಅಹಮದ್ ಪಟೇಲ್ ನಿಧಾನರಾಗಿದ್ದು, ಪ್ರಧಾನಿ ಮೋದಿ ಸಂತಾಪ ಸೂಚಿಸಿದ್ದಾರೆ. ಈ ಕುರಿತು ಟ್ವೀಟ್ ಮಾಡಿರುವ ನರೇಂದ್ರ ಮೋದಿ, “ಕಾಂಗ್ರೆಸ್ ಅನ್ನು ಬಲಗೊಳಿಸುವಲ್ಲಿ ಪಟೇಲ್ ಪಾತ್ರ ಅವಿಸ್ಮರಣೀಯ” ಎಂದಿದ್ದಾರೆ.

ಸೋನಿಯಾ ಗಾಂಧಿಯವರ ಅಪ್ತ ಸಹಾಯಕ ಮತ್ತು ಕಾಂಗ್ರೆಸ್‌ನ ಟ್ರಬಲ್‌ಶೂಟರ್ ಎಂದೇ ಖ್ಯಾತಿಯಲ್ಲಿದ್ದ ಅಹಮದ್ ಪಟೇಲ್ ಇಂದು ಗುರಗ್ರಾಮ್ ಆಸ್ಪತ್ರೆಯಲ್ಲಿ ನಿಧರಾದರು ಎಂದು ಅವರ ಪುತ್ರ ಫೈಸಲ್ ಟ್ವೀಟ್ ಮಾಡಿದ್ದರು.

ಇವರಿಗೆ ಅನೆಕ ರಾಜಕಾರಣಿಗಳು ಸಂತಾಪ ಸೂಚಿಸಿದ್ದಾರೆ.

ಇದನ್ನೂ ಓದಿ: ಗುಜರಾತ್: ಕಾಂಗ್ರೆಸ್ ಹಿರಿಯ ಮುಖಂಡ ಅಹಮದ್ ಪಟೇಲ್ ನಿಧನ!

ನರೇಂದ್ರ ಮೊದಿ ಟ್ವೀಟ್ ಮಾಡಿ, “ಅಹಮದ್ ಜೀ ನಿಧನದಿಂದ ದುಃಖವಾಗಿದೆ. ಹಲವು ವರ್ಷಗಳನ್ನು ಸಾರ್ವಜನಿಕ ಜೀವನದಲ್ಲಿ ಮತ್ತು ಸಮಾಜಸೇವೆಗಾಗಿಯೇ ಮುಡಿಪಾಗಿಟ್ಟಿದ್ದರು. ಕಾಂಗ್ರೆಸ್‌ ಪಕ್ಷವನ್ನು ಬಲಪಡಿಸುವಲ್ಲಿ ಅವರ ಪಾತ್ರ ಅವಿಸ್ಮರಣೀಯವಾದುದು ಮತ್ತು ಇದು ಅವರ ತೀಕ್ಷ್ಣಮತಿಗೆ ಉದಾಹರಣೆಯಾಗಿದೆ. ಅವರ ಮಗನೊಂದಿಗೆ ಮಾತನಾಡಿ ಸಂತಾಪ ಸೂಚಿಸಿದ್ದೇನೆ. ಅವರ ಅತ್ಮಕ್ಕೆ ಶಾಂತಿ ಸಿಗಲಿ” ಎಂದು ಬರೆದುಕೊಂಡಿದ್ದಾರೆ.

ಇದನ್ನೂ ಓದಿ: ‘ಆನ್‌ಲೈನ್ ತರಗತಿ ಮತ್ತು ಆನ್‌ಲೈನ್ ಶಿಕ್ಷಣ ಬೇಡ’ – ಸಾಮಾನ್ಯ ಖಾಸಗಿ ಶಾಲೆಗಳ ಮನವಿ!

ಮಾಜಿ ಮುಖ್ಯಮಂತ್ರಿ ಸಿದ್ದರಾಮಯ್ಯ ಟ್ವೀಟ್ ಮಾಡಿ, “ಅಹಮದ್ ಪಟೇಲ್ ನಿಧನದಿಂದ ಕಾಂಗ್ರೆಸ್ ಪಕ್ಷವು ನಿಷ್ಠಾವಂತ ನಾಯಕನನ್ನು ಮತ್ತು ನಾನು ನಂಬಿಕಸ್ತ ಗೆಳೆಯನನ್ನು ಕಳೆದುಕೊಂಡಿದ್ದೇವೆ. ನನ್ನ ರಾಜಕೀಯ ಬದುಕಿನ ಪ್ರಮುಖ ನಿರ್ಧಾರಕ್ಕೆ ಕಾರಣರಾಗಿದ್ದ ಪಟೇಲ್ ಅವರು ಕೊನೆಯವರೆಗೆ ಹಿತೈಷಿಯಾಗಿದ್ದವರು. ಈ ಸಾವಿನ ದು:ಖ ಮಾತುಗಳನ್ನು ಮೀರಿದ್ದು. ಹೋಗಿ ಬನ್ನಿ ಪಟೇಲ್‌ಜಿ” ಎಂದು ಸಂತಾಪ ವ್ಯಕ್ತಪಡಿಸಿದ್ದಾರೆ.

ಇದನ್ನೂ ಓದಿ: ಗ್ರಾಮ ಪಂಚಾಯಿತಿ ಚುನಾವಣೆಯಲ್ಲಿ ಗುತ್ತಿಗೆದಾರರು ಸ್ಪರ್ಧಿಸುವಂತಿಲ್ಲ; ಚುನಾವಣಾ ಆಯೋಗ

ಮುಖ್ಯಮಂತ್ರಿ ಯಾಡಿಯೂರಪ್ಪ ಟ್ವೀಟ್ ಮಾಡಿ, “ಪ್ರಖ್ಯಾತ ಕಾಂಗ್ರೆಸ್ ನಾಯಕ ಅಹಮದ್ ಪಟೇಲ್‌ ಜಿ ನಿಧನದಿಂದ ಅತೀವ ದುಃಖವಾಗಿದೆ. ಅವರ ಕುಟುಂಬ ಮತ್ತು ಹಿತೈಷಿಗಳಿಗಳಿಗೆ ನನ್ನ ಹೃದಯಸ್ಪರ್ಷಿ ಸಂತಾಪಗಳು. ಓಮ್ ಶಾಂತಿ” ಎಂದು ಸಂತಾಪ ಸೂಚಿಸಿದ್ದಾರೆ.

ಇದನ್ನೂ ಓದಿ: ಉತ್ತರಪ್ರದೇಶ: ಬಲವಂತದ ಮತಾಂತರಕ್ಕೆ 1-10 ವರ್ಷ ಜೈಲು, 25000 ದಂಡ!

ಅಶೋಕ್ ಗೆಹ್ಲೋಟ್ ಟ್ವೀಟ್ ಮಾಡಿ, “ಕಾಂಗ್ರೆಸ್ ನಾಯಕ ಮತ್ತು ನನ್ನ ಗೆಳೆಯನ ನಿಧನದಿಂದ ದುಃಖವಾಗಿದೆ. ಇದು ಕಾಂಗ್ರೆಸ್ ಪಕ್ಷಕ್ಕೆ ಮತ್ತು ನನ್ನಂತಹ ಕಾರ್ಯಕರ್ತರಿಗೆ ಅತಿದೊಡ್ಡ ನಷ್ಟ. ಪಕ್ಷಕ್ಕೆ ಅವರ ಕೊಡುಗೆ ಸದಾ ಅವಿಸ್ಮರಣೀಯ” ಎಂದು ಬೆರೆದುಕೊಂಡಿದ್ದಾರೆ.

ಇದನ್ನೂ ಓದಿ: ಬಿಜೆಪಿ-ಜೆಡಿಎಸ್‌ನ ಒಳ ಒಪ್ಪಂದದಿಂದ ಉಪಚುನಾವಣೆಯನ್ನು ಗೆಲ್ಲಲಾಗಿದೆ: ಸಿದ್ದರಾಮಯ್ಯ

ಹೀಗೆ ಇನ್ನೂ ಹತ್ತಾರು ನಾಯಕರು ಅಹಮದ್ ಪಟೇಲ್ ನಿಧನಕ್ಕೆ ಸಂತಾಪ ಸೂಚಿಸಿದ್ದಾರೆ.

ಕಾಂಗ್ರೆಸ್ ಹಿರಿಯ ಮುಖಂಡ 71 ವರ್ಷದ ಅಹಮದ್ ಪಟೇಲ್ ಇಂದು ನಸುಕಿನ ಜಾವ ಬಹು ಅಂಗಾಂಗ ವೈಫಲ್ಯದಿಂದ ನಿಧನರಾಗಿದ್ದು, ಕೊರೊನಾ ಸೋಂಕಿಗೆ ಒಳಗಾಗಿದ್ದ ಇವರು ಗುರುಗ್ರಾಮ್ ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡೆಯುತ್ತಿದ್ದರು ಎಂದು ಪುತ್ರ ಫೈಸಲ್ ಹೇಳಿದ್ದಾರೆ.

ಗುಜರಾತ್ ರಾಜ್ಯಸಭಾ ಸಂಸದ ಬುಧವಾರ ಮುಂಜಾನೆ 3.30 ಕ್ಕೆ ನಿಧನರಾಗಿದ್ದಾರೆ ಎಂದು ಫೈಸಲ್ ಟ್ವೀಟ್‌ನಲ್ಲಿ ತಿಳಿಸಿದ್ದಾರೆ.

ಇದನ್ನೂ ಓದಿ: ಹಾವೇರಿಯಲ್ಲಿ ಫೆ. 26 ರಿಂದ 86ನೇ ಅಖಿಲ ಭಾರತ ಕನ್ನಡ ಸಾಹಿತ್ಯ ಸಮ್ಮೇಳನ

“25/11/2020, 03:30 AM ಕ್ಕೆ ನನ್ನ ತಂದೆ ಅಹ್ಮದ್ ಪಟೇಲ್ ಅಕಾಲಿಕವಾಗಿ ನಿಧನರಾದರೆಂದು ಘೋಷಿಸಲು ಅತೀವ ದುಃಖ ಮತ್ತು ವಿಷಾದವಾಗಿತ್ತಿದೆ. ಒಂದು ತಿಂಗಳ ಹಿಂದೆ ಕೊರೊನಾ ಸೋಂಕಿಗೆ ಒಳಗಾದ ನಂತರ ಅವರ ಆರೋಗ್ಯ ಸ್ಥಿರವಾಗಿರಲಿಲ್ಲ. ಬಹು ಅಂಗಾಂಗ ವೈಫಲ್ಯಗಳಿಂದಾಗಿ ಅದು ಇನ್ನಷ್ಟು ಹದಗೆಟ್ಟಿತ್ತು. ಅಲ್ಲಾಹನು ಅವರಿಗೆ ಜನ್ನತ್‌ ಉಲ್ ಫಿರ್ದೌಸ್, ಇನ್ಶಅಲ್ಲಾವನ್ನು ನೀಡಲಿ” ಎಂದು ಟ್ವೀಟ್ ಮಾಡಿದ್ದಾರೆ.

ಭಾರತೀಯ ರಾಷ್ಟ್ರೀಯ ಕಾಂಗ್ರೆಸ್‌ನ ಖಜಾಂಚಿಯೂ ಆಗಿದ್ದ ಅಹಮದ್ ಪಟೇಲ್ ಅವರು ಅಕ್ಟೋಬರ್ 1 ರಂದು ಕೊರೊನಾ ಸೋಂಕಿಗೆ ಒಳಗಾಗಿದ್ದರು. ನಂತರ ಅವರನ್ನು ನವೆಂಬರ್ 15 ರಂದು ಗುರುಗ್ರಾಮ್‌ನ ಮೆಡಂತಾ ಆಸ್ಪತ್ರೆಯ ತೀವ್ರ ನಿಗಾ ಘಟಕಕ್ಕೆ ದಾಖಲಿಸಲಾಯಿತು.


ಇದನ್ನೂ ಓದಿ: ಆಯ್ಕೆಯಾಗಿದ್ದರೂ ಆದೇಶ ಪತ್ರ ನೀಡದ ಕಾಲೇಜು ಶಿಕ್ಷಣ ಇಲಾಖೆ; ಧರಣಿ ಕೂತ ಪ್ರಾಧ್ಯಾಪಕರು

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ಚುನಾವಣಾ ಸಮಯದಲ್ಲಿ ಉಚಿತ ಕೊಡುಗೆಗಳ ಪ್ರವೃತ್ತಿ ಪ್ರಶ್ನಿಸಿದ ಸುಪ್ರೀಂ ಕೋರ್ಟ್

ರಾಜಕೀಯ ಪಕ್ಷಗಳು ಮತ್ತು ರಾಜ್ಯ ಸರ್ಕಾರಗಳು ಚುನಾವಣೆಗೆ ಮುನ್ನ "ಉಚಿತ ಕೊಡುಗೆಗಳ" ಜಾಹೀರಾತು ನೀಡುವ ಅಭ್ಯಾಸ ಹೆಚ್ಚುತ್ತಿರುವ ಬಗ್ಗೆ ಸುಪ್ರೀಂ ಕೋರ್ಟ್ ಗುರುವಾರ ಬಲವಾದ ಮೌಖಿಕ ಅವಲೋಕನಗಳನ್ನು ನೀಡಿದೆ. ವಿದ್ಯುತ್ (ತಿದ್ದುಪಡಿ) ನಿಯಮಗಳು, 2024...

ರಾಹುಲ್ ಗಾಂಧಿಗೆ ಕರ್ಣಿ ಸೇನೆಯಿಂದ ಜೀವ ಬೆದರಿಕೆ: ಬಿಜೆಪಿ-ಆರ್‌ಎಸ್‌ಎಸ್ ಜಾಲವೇ ‘ಗೋಡ್ಸೆ ಕಾರ್ಖಾನೆ’ ಎಂದ ಕಾಂಗ್ರೆಸ್

ನವದೆಹಲಿ: ಲೋಕಸಭಾ ಸ್ಪೀಕರ್ ಓಂ ಬಿರ್ಲಾ ವಿರುದ್ಧ ನಡೆದ ಪ್ರತಿಭಟನೆಗೆ ಸಂಬಂಧಿಸಿದಂತೆ ಲೋಕಸಭೆಯ ವಿರೋಧ ಪಕ್ಷದ ನಾಯಕ ರಾಹುಲ್ ಗಾಂಧಿ ಅವರಿಗೆ ಕರ್ಣಿ ಸೇನೆ ಜೀವ ಬೆದರಿಕೆ ಹಾಕಿದ್ದು, ಇದು "ಏಕಾಂಗಿ ಸ್ಫೋಟವಲ್ಲ"...

ಬಿಹಾರ| ವಿಧಾನಸಭೆಯಲ್ಲಿ ‘ತಂಬಾಕು’ ತಿಂದ ಉಪಮುಖ್ಯಮಂತ್ರಿ ಸಾಮ್ರಾಟ್ ಚೌಧರಿ

ಬಿಹಾರ ವಿಧಾನಸಭೆಯ ಬಜೆಟ್ ಅಧಿವೇಶನದ ವಿಡಿಯೋ ಸಾಮಾಜಿಕ ಮಾಧ್ಯಮದಲ್ಲಿ ವೈರಲ್ ಆದ ಬಳಿಕ ರಾಜಕೀಯ ವಿವಾದಕ್ಕೆ ಕಾರಣವಾಗಿದೆ. ವಿಡಿಯೋದಲ್ಲಿ, ಉಪಮುಖ್ಯಮಂತ್ರಿ ಹಾಗೂ ಹಿರಿಯ ಬಿಜೆಪಿ ನಾಯಕ ಸಾಮ್ರಾಟ್ ಚೌಧರಿ ಕಲಾಪದ ಸಮಯದಲ್ಲಿ ವಸ್ತುವೊಂದನ್ನು...

‘ಬೆದರಿಕೆ, ಚಿತ್ರಹಿಂಸೆ, ಅತ್ಯಾಚಾರ ‘: ಇಸ್ರೇಲ್‌ ಜೈಲಿನ ದೌರ್ಜನ್ಯ ಬಿಚ್ಚಿಟ್ಟ ಪ್ಯಾಲೆಸ್ತೀನ್ ಪತ್ರಕರ್ತರು

ಇಸ್ರೇಲ್ ಜೈಲುಗಳಲ್ಲಿ ಬಂಧಿತರಾಗಿರುವ ಪ್ಯಾಲೆಸ್ತೀನ್ ಪತ್ರಕರ್ತರು ತೀವ್ರವಾದ ದೌರ್ಜನ್ಯಗಳನ್ನು ಎದುರಿಸುತ್ತಿದ್ದಾರೆ ಎಂದು ಅಂತಾರಾಷ್ಟ್ರೀಯ ಪತ್ರಕರ್ತರ ರಕ್ಷಣಾ ಸಮಿತಿ (ಸಿಪಿಜೆ) ಹೇಳಿದೆ. ಬಂಧನದಿಂದ ಬಿಡುಗಡೆಯಾಗಿರುವ ಪತ್ರಕರ್ತರನ್ನು ಸಂದರ್ಶಿಸಿರುವ ಸಿಪಿಜೆ, ಜೈಲಿನಲ್ಲಿರುವ ಪತ್ರಕರ್ತರು ನಿರಂತರವಾಗಿ ದೈಹಿಕ...

ಪಾಕಿಸ್ತಾನದ ಕರಾಚಿಯಲ್ಲಿ ಶಂಕಿತ ಅನಿಲ ಸೋರಿಕೆ: ಮಕ್ಕಳು ಸೇರಿದಂತೆ 16 ಮಂದಿ ಸಾವು

ಕರಾಚಿ: ಪಾಕಿಸ್ತಾನದ ಕರಾಚಿಯಲ್ಲಿ ಗುರುವಾರ ಬೆಳಿಗ್ಗೆ ವಸತಿ ಕಟ್ಟಡವೊಂದರಲ್ಲಿ ಶಂಕಿತ ಅನಿಲ ಸೋರಿಕೆಯಿಂದಾಗಿ ಸ್ಫೋಟ ಸಂಭವಿಸಿ, ಮಕ್ಕಳು ಸೇರಿದಂತೆ ಕನಿಷ್ಠ 16 ಜನರು ಸಾವನ್ನಪ್ಪಿದ್ದು, 14 ಜನರು ಗಾಯಗೊಂಡಿದ್ದಾರೆ. "ಓಲ್ಡ್ ಸೋಲ್ಜರ್ ಬಜಾರ್...

ಮಹಾರಾಷ್ಟ್ರ| 10 ದಿನಗಳ ಮಗುವಿನೊಂದಿಗೆ 12 ನೇ ತರಗತಿ ಪರೀಕ್ಷೆ ಬರೆದ ಮಹಿಳೆ

ಮಹಾರಾಷ್ಟ್ರದ ನಾಂದೇಡ್ ನಗರದಲ್ಲಿ 12 ನೇ ತರಗತಿಯ ಮಹಾರಾಷ್ಟ್ರ ಬೋರ್ಡ್ ಪರೀಕ್ಷೆಗೆ ಹಾಜರಾದ ಮಹಿಳೆಯೊಬ್ಬರು ತನ್ನ 10 ದಿನಗಳ ಮಗುವನ್ನು ಪರೀಕ್ಷಾ ಕೇಂದ್ರಕ್ಕೆ ಕರೆತಂದಿದ್ದಾರೆ. ಮಹಿಳೆ ಪರೀಕ್ಷೆ ಬರೆಯುವ ಕಾರಣಕ್ಕೆ ಕೇಂದ್ರದ ವಿಶೇಷ...

ಒಡಿಶಾ| ದಲಿತರು ವಾಸಿಸುವ ಪ್ರದೇಶಕ್ಕೆ ಕುಡಿಯುವ ನೀರು-ವಿದ್ಯುತ್ ಸಂಪರ್ಕ ಕಡಿತ

ಒಡಿಶಾದ ಬಲಂಗೀರ್ ಜಿಲ್ಲೆಯಲ್ಲಿ ಜಾತಿ ಆಧಾರಿತ ತಾರತಮ್ಯವಿದೆ ಎಂದು ಸ್ಥಳೀಯ ನಿವಾಸಿಗಳು ಆರೋಪಿಸಿದ್ದಾರೆ. ಆದರೆ, ಗ್ರಾಮದ ಅಧಿಕಾರಿಯೊಬ್ಬರು ಈ ಅಡಚಣೆಗೆ ಸ್ಥಳೀಯ ಕಲಹ ಕಾರಣ ಎಂದು ಆರೋಪಿಸಿದ್ದಾರೆ. ಜಿಲ್ಲೆಯ ತುರೆಕೆಲಾ ಬ್ಲಾಕ್‌ನ ಡುಮೆರ್ಚುವಾನ್ ಗ್ರಾಮದಲ್ಲಿ...

ತಮಿಳುನಾಡು ವಿಧಾನಸಭಾ ಚುನಾವಣೆ: ಡಿಎಂಕೆ ನೇತೃತ್ವದ ಮೈತ್ರಿಕೂಟಕ್ಕೆ ಡಿಎಂಡಿಕೆ ಸೇರ್ಪಡೆ

ಚೆನ್ನೈ: ದಿವಂಗತ ನಟ ವಿಜಯಕಾಂತ್ ಅವರ ದೇಶೀಯ ಮುರ್ಪೋಕ್ಕು ದ್ರಾವಿಡ ಕಳಗಂ (ಡಿಎಂಡಿಕೆ) ಗುರುವಾರ ದ್ರಾವಿಡ ಮುನ್ನೇತ್ರ ಕಳಗಂ ನೇತೃತ್ವದ ಜಾತ್ಯತೀತ ಪ್ರಗತಿಪರ ಒಕ್ಕೂಟ (ಎಸ್‌ಪಿಎ)ವನ್ನು 21ವರ್ಷಗಳ ಅಸ್ತಿತ್ವದ ನಂತರ ಮೊದಲ ಬಾರಿಗೆ...

ಟ್ರಕ್ ಚಾಲಕ ರಸ್ತೆಯಲ್ಲಿ ನಮಾಝ್ ಮಾಡಿದ್ದರಿಂದ ಟ್ರಾಫಿಕ್ ಜಾಮ್ ಎಂದು ಸುಳ್ಳು ಸುದ್ದಿ ಪ್ರಸಾರ : ಝೀ ನ್ಯೂಸ್‌ಗೆ 1 ಲಕ್ಷ ರೂ. ದಂಡ

ಮುಸ್ಲಿಂ ವ್ಯಕ್ತಿಯೊಬ್ಬರು ನಮಾಝ್ ಮಾಡಲು ಹೆದ್ದಾರಿ ಮಧ್ಯೆ ಟ್ರಕ್‌ ನಿಲ್ಲಿಸಿದ್ದರಿಂದ ಟ್ರಾಫಿಕ್ ಜಾಮ್‌ ಉಂಟಾಗಿದೆ ಎಂದು ಸುಳ್ಳು ಸುದ್ದಿ ಹಬ್ಬಿದ ಝೀ ನ್ಯೂಸ್‌ ಚಾನೆಲ್‌ಗೆ ಸುದ್ದಿ ಪ್ರಸಾರಕರು ಮತ್ತು ಡಿಜಿಟಲ್ ಮಾನದಂಡಗಳ ಪ್ರಾಧಿಕಾರ(ಎನ್‌ಬಿಡಿಎಸ್‌ಎ)...

ಗುಜರಾತ್‌| ಜಾತಿ ಆಧಾರಿತ ಜಗಳದಲ್ಲಿ ದಲಿತ ಯುವಕನ ಮೇಲೆ ಚಾಕುವಿನಿಂದ ದಾಳಿ

ಶನಿವಾರ ತಡರಾತ್ರಿ ರಾಣಿಪ್‌ನಲ್ಲಿ ನಡೆದ ಸಣ್ಣ ಭಿನ್ನಾಭಿಪ್ರಾಯವೊಂದು ಹಿಂಸಾಚಾರಕ್ಕೆ ತಿರುಗಿದ್ದು, 25 ವರ್ಷದ ದಲಿತ ಯುವಕ ಸಾಹಿಲ್ ವಘೇಲಾ ಮೇಲೆ ಚಾಕುವಿನಿಂದ ಹಲ್ಲೆ ನಡೆಸಲಾಗಿದೆ. ಯುವಕ ಗಂಭೀರವಾಗಿ ಗಾಯಗೊಂಡಿದ್ದು, ಘಟನೆಯು ಈ ಪ್ರದೇಶದಲ್ಲಿ...