Homeಮುಖಪುಟಕಾಂಗ್ರೆಸ್‌ ಅನ್ನು ಬಲಪಡಿಸುವಲ್ಲಿ ಅಹಮದ್ ಪಟೇಲ್ ಪಾತ್ರ ಅವಿಸ್ಮರಣೀಯ - ಪ್ರಧಾನಿ ಮೋದಿ

ಕಾಂಗ್ರೆಸ್‌ ಅನ್ನು ಬಲಪಡಿಸುವಲ್ಲಿ ಅಹಮದ್ ಪಟೇಲ್ ಪಾತ್ರ ಅವಿಸ್ಮರಣೀಯ – ಪ್ರಧಾನಿ ಮೋದಿ

ಸೋನಿಯಾ ಗಾಂಧಿಯವರ ಅಪ್ತ ಸಹಾಯಕ ಮತ್ತು ಕಾಂಗ್ರೆಸ್‌ನ ಟ್ರಬಲ್‌ಶೂಟರ್ ಎಂದೇ ಖ್ಯಾತಿಯಾಗಿದ್ದ ಅಹಮದ್ ಪಟೇಲ್ ಇಂದು ಗುರಗ್ರಾಮ್ ಆಸ್ಪತ್ರೆಯಲ್ಲಿ ನಿಧರಾದರು

- Advertisement -
- Advertisement -

ಇಂದು ಮುಂಜಾನೆ ಕಾಂಗ್ರೆಸ್ ಹಿರಿಯ ಮುಖಂಡ ಅಹಮದ್ ಪಟೇಲ್ ನಿಧಾನರಾಗಿದ್ದು, ಪ್ರಧಾನಿ ಮೋದಿ ಸಂತಾಪ ಸೂಚಿಸಿದ್ದಾರೆ. ಈ ಕುರಿತು ಟ್ವೀಟ್ ಮಾಡಿರುವ ನರೇಂದ್ರ ಮೋದಿ, “ಕಾಂಗ್ರೆಸ್ ಅನ್ನು ಬಲಗೊಳಿಸುವಲ್ಲಿ ಪಟೇಲ್ ಪಾತ್ರ ಅವಿಸ್ಮರಣೀಯ” ಎಂದಿದ್ದಾರೆ.

ಸೋನಿಯಾ ಗಾಂಧಿಯವರ ಅಪ್ತ ಸಹಾಯಕ ಮತ್ತು ಕಾಂಗ್ರೆಸ್‌ನ ಟ್ರಬಲ್‌ಶೂಟರ್ ಎಂದೇ ಖ್ಯಾತಿಯಲ್ಲಿದ್ದ ಅಹಮದ್ ಪಟೇಲ್ ಇಂದು ಗುರಗ್ರಾಮ್ ಆಸ್ಪತ್ರೆಯಲ್ಲಿ ನಿಧರಾದರು ಎಂದು ಅವರ ಪುತ್ರ ಫೈಸಲ್ ಟ್ವೀಟ್ ಮಾಡಿದ್ದರು.

ಇವರಿಗೆ ಅನೆಕ ರಾಜಕಾರಣಿಗಳು ಸಂತಾಪ ಸೂಚಿಸಿದ್ದಾರೆ.

ಇದನ್ನೂ ಓದಿ: ಗುಜರಾತ್: ಕಾಂಗ್ರೆಸ್ ಹಿರಿಯ ಮುಖಂಡ ಅಹಮದ್ ಪಟೇಲ್ ನಿಧನ!

ನರೇಂದ್ರ ಮೊದಿ ಟ್ವೀಟ್ ಮಾಡಿ, “ಅಹಮದ್ ಜೀ ನಿಧನದಿಂದ ದುಃಖವಾಗಿದೆ. ಹಲವು ವರ್ಷಗಳನ್ನು ಸಾರ್ವಜನಿಕ ಜೀವನದಲ್ಲಿ ಮತ್ತು ಸಮಾಜಸೇವೆಗಾಗಿಯೇ ಮುಡಿಪಾಗಿಟ್ಟಿದ್ದರು. ಕಾಂಗ್ರೆಸ್‌ ಪಕ್ಷವನ್ನು ಬಲಪಡಿಸುವಲ್ಲಿ ಅವರ ಪಾತ್ರ ಅವಿಸ್ಮರಣೀಯವಾದುದು ಮತ್ತು ಇದು ಅವರ ತೀಕ್ಷ್ಣಮತಿಗೆ ಉದಾಹರಣೆಯಾಗಿದೆ. ಅವರ ಮಗನೊಂದಿಗೆ ಮಾತನಾಡಿ ಸಂತಾಪ ಸೂಚಿಸಿದ್ದೇನೆ. ಅವರ ಅತ್ಮಕ್ಕೆ ಶಾಂತಿ ಸಿಗಲಿ” ಎಂದು ಬರೆದುಕೊಂಡಿದ್ದಾರೆ.

ಇದನ್ನೂ ಓದಿ: ‘ಆನ್‌ಲೈನ್ ತರಗತಿ ಮತ್ತು ಆನ್‌ಲೈನ್ ಶಿಕ್ಷಣ ಬೇಡ’ – ಸಾಮಾನ್ಯ ಖಾಸಗಿ ಶಾಲೆಗಳ ಮನವಿ!

ಮಾಜಿ ಮುಖ್ಯಮಂತ್ರಿ ಸಿದ್ದರಾಮಯ್ಯ ಟ್ವೀಟ್ ಮಾಡಿ, “ಅಹಮದ್ ಪಟೇಲ್ ನಿಧನದಿಂದ ಕಾಂಗ್ರೆಸ್ ಪಕ್ಷವು ನಿಷ್ಠಾವಂತ ನಾಯಕನನ್ನು ಮತ್ತು ನಾನು ನಂಬಿಕಸ್ತ ಗೆಳೆಯನನ್ನು ಕಳೆದುಕೊಂಡಿದ್ದೇವೆ. ನನ್ನ ರಾಜಕೀಯ ಬದುಕಿನ ಪ್ರಮುಖ ನಿರ್ಧಾರಕ್ಕೆ ಕಾರಣರಾಗಿದ್ದ ಪಟೇಲ್ ಅವರು ಕೊನೆಯವರೆಗೆ ಹಿತೈಷಿಯಾಗಿದ್ದವರು. ಈ ಸಾವಿನ ದು:ಖ ಮಾತುಗಳನ್ನು ಮೀರಿದ್ದು. ಹೋಗಿ ಬನ್ನಿ ಪಟೇಲ್‌ಜಿ” ಎಂದು ಸಂತಾಪ ವ್ಯಕ್ತಪಡಿಸಿದ್ದಾರೆ.

ಇದನ್ನೂ ಓದಿ: ಗ್ರಾಮ ಪಂಚಾಯಿತಿ ಚುನಾವಣೆಯಲ್ಲಿ ಗುತ್ತಿಗೆದಾರರು ಸ್ಪರ್ಧಿಸುವಂತಿಲ್ಲ; ಚುನಾವಣಾ ಆಯೋಗ

ಮುಖ್ಯಮಂತ್ರಿ ಯಾಡಿಯೂರಪ್ಪ ಟ್ವೀಟ್ ಮಾಡಿ, “ಪ್ರಖ್ಯಾತ ಕಾಂಗ್ರೆಸ್ ನಾಯಕ ಅಹಮದ್ ಪಟೇಲ್‌ ಜಿ ನಿಧನದಿಂದ ಅತೀವ ದುಃಖವಾಗಿದೆ. ಅವರ ಕುಟುಂಬ ಮತ್ತು ಹಿತೈಷಿಗಳಿಗಳಿಗೆ ನನ್ನ ಹೃದಯಸ್ಪರ್ಷಿ ಸಂತಾಪಗಳು. ಓಮ್ ಶಾಂತಿ” ಎಂದು ಸಂತಾಪ ಸೂಚಿಸಿದ್ದಾರೆ.

ಇದನ್ನೂ ಓದಿ: ಉತ್ತರಪ್ರದೇಶ: ಬಲವಂತದ ಮತಾಂತರಕ್ಕೆ 1-10 ವರ್ಷ ಜೈಲು, 25000 ದಂಡ!

ಅಶೋಕ್ ಗೆಹ್ಲೋಟ್ ಟ್ವೀಟ್ ಮಾಡಿ, “ಕಾಂಗ್ರೆಸ್ ನಾಯಕ ಮತ್ತು ನನ್ನ ಗೆಳೆಯನ ನಿಧನದಿಂದ ದುಃಖವಾಗಿದೆ. ಇದು ಕಾಂಗ್ರೆಸ್ ಪಕ್ಷಕ್ಕೆ ಮತ್ತು ನನ್ನಂತಹ ಕಾರ್ಯಕರ್ತರಿಗೆ ಅತಿದೊಡ್ಡ ನಷ್ಟ. ಪಕ್ಷಕ್ಕೆ ಅವರ ಕೊಡುಗೆ ಸದಾ ಅವಿಸ್ಮರಣೀಯ” ಎಂದು ಬೆರೆದುಕೊಂಡಿದ್ದಾರೆ.

ಇದನ್ನೂ ಓದಿ: ಬಿಜೆಪಿ-ಜೆಡಿಎಸ್‌ನ ಒಳ ಒಪ್ಪಂದದಿಂದ ಉಪಚುನಾವಣೆಯನ್ನು ಗೆಲ್ಲಲಾಗಿದೆ: ಸಿದ್ದರಾಮಯ್ಯ

ಹೀಗೆ ಇನ್ನೂ ಹತ್ತಾರು ನಾಯಕರು ಅಹಮದ್ ಪಟೇಲ್ ನಿಧನಕ್ಕೆ ಸಂತಾಪ ಸೂಚಿಸಿದ್ದಾರೆ.

ಕಾಂಗ್ರೆಸ್ ಹಿರಿಯ ಮುಖಂಡ 71 ವರ್ಷದ ಅಹಮದ್ ಪಟೇಲ್ ಇಂದು ನಸುಕಿನ ಜಾವ ಬಹು ಅಂಗಾಂಗ ವೈಫಲ್ಯದಿಂದ ನಿಧನರಾಗಿದ್ದು, ಕೊರೊನಾ ಸೋಂಕಿಗೆ ಒಳಗಾಗಿದ್ದ ಇವರು ಗುರುಗ್ರಾಮ್ ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡೆಯುತ್ತಿದ್ದರು ಎಂದು ಪುತ್ರ ಫೈಸಲ್ ಹೇಳಿದ್ದಾರೆ.

ಗುಜರಾತ್ ರಾಜ್ಯಸಭಾ ಸಂಸದ ಬುಧವಾರ ಮುಂಜಾನೆ 3.30 ಕ್ಕೆ ನಿಧನರಾಗಿದ್ದಾರೆ ಎಂದು ಫೈಸಲ್ ಟ್ವೀಟ್‌ನಲ್ಲಿ ತಿಳಿಸಿದ್ದಾರೆ.

ಇದನ್ನೂ ಓದಿ: ಹಾವೇರಿಯಲ್ಲಿ ಫೆ. 26 ರಿಂದ 86ನೇ ಅಖಿಲ ಭಾರತ ಕನ್ನಡ ಸಾಹಿತ್ಯ ಸಮ್ಮೇಳನ

“25/11/2020, 03:30 AM ಕ್ಕೆ ನನ್ನ ತಂದೆ ಅಹ್ಮದ್ ಪಟೇಲ್ ಅಕಾಲಿಕವಾಗಿ ನಿಧನರಾದರೆಂದು ಘೋಷಿಸಲು ಅತೀವ ದುಃಖ ಮತ್ತು ವಿಷಾದವಾಗಿತ್ತಿದೆ. ಒಂದು ತಿಂಗಳ ಹಿಂದೆ ಕೊರೊನಾ ಸೋಂಕಿಗೆ ಒಳಗಾದ ನಂತರ ಅವರ ಆರೋಗ್ಯ ಸ್ಥಿರವಾಗಿರಲಿಲ್ಲ. ಬಹು ಅಂಗಾಂಗ ವೈಫಲ್ಯಗಳಿಂದಾಗಿ ಅದು ಇನ್ನಷ್ಟು ಹದಗೆಟ್ಟಿತ್ತು. ಅಲ್ಲಾಹನು ಅವರಿಗೆ ಜನ್ನತ್‌ ಉಲ್ ಫಿರ್ದೌಸ್, ಇನ್ಶಅಲ್ಲಾವನ್ನು ನೀಡಲಿ” ಎಂದು ಟ್ವೀಟ್ ಮಾಡಿದ್ದಾರೆ.

ಭಾರತೀಯ ರಾಷ್ಟ್ರೀಯ ಕಾಂಗ್ರೆಸ್‌ನ ಖಜಾಂಚಿಯೂ ಆಗಿದ್ದ ಅಹಮದ್ ಪಟೇಲ್ ಅವರು ಅಕ್ಟೋಬರ್ 1 ರಂದು ಕೊರೊನಾ ಸೋಂಕಿಗೆ ಒಳಗಾಗಿದ್ದರು. ನಂತರ ಅವರನ್ನು ನವೆಂಬರ್ 15 ರಂದು ಗುರುಗ್ರಾಮ್‌ನ ಮೆಡಂತಾ ಆಸ್ಪತ್ರೆಯ ತೀವ್ರ ನಿಗಾ ಘಟಕಕ್ಕೆ ದಾಖಲಿಸಲಾಯಿತು.


ಇದನ್ನೂ ಓದಿ: ಆಯ್ಕೆಯಾಗಿದ್ದರೂ ಆದೇಶ ಪತ್ರ ನೀಡದ ಕಾಲೇಜು ಶಿಕ್ಷಣ ಇಲಾಖೆ; ಧರಣಿ ಕೂತ ಪ್ರಾಧ್ಯಾಪಕರು

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ರಾಜಸ್ಥಾನ ಸ್ಥಳೀಯ ಸಂಸ್ಥೆ ಚುನಾವಣೆ: ಬಿಕಾನೇರ್‌ನ ನೋಖಾದಲ್ಲಿ ಸಿಪಿಐ(ಎಂ) ಐತಿಹಾಸಿಕ ಜಯಭೇರಿ

ರಾಜಸ್ಥಾನ ಸ್ಥಳೀಯ ಸಂಸ್ಥೆಗಳ ಚುನಾವಣೆಯಲ್ಲಿ ಎಡಪಕ್ಷವಾದ ಸಿಪಿಐ(ಎಂ) (CPI-M) ಐತಿಹಾಸಿಕ ಸಾಧನೆ ಮಾಡಿದ್ದು, ಬಿಕಾನೇರ್ ಜಿಲ್ಲೆಯ ನೋಖಾ ನಗರ ಪಾಲಿಕೆಯ ಆಡಳಿತದ ಚುಕ್ಕಾಣಿಯನ್ನು ತನ್ನದಾಗಿಸಿಕೊಂಡಿದೆ. ಹಲವು ವರ್ಷಗಳಿಂದ ಬಿಜೆಪಿ ಹಾಗೂ ಎನ್‌ಸಿಪಿ (NCP)...

ಏಕರೂಪ ನಾಗರಿಕ ಸಂಹಿತೆಯನ್ನು ಸಂಸತ್ತಿನ ಬದಲು ರಾಜ್ಯಗಳ ಮೂಲಕವೇ ಜಾರಿಗೆ ಅಮಿತ್ ಶಾ ಮುಂದಾಗಿದ್ದೇಕೆ?

ಕೇಂದ್ರ ಗೃಹ ಸಚಿವ ಅಮಿತ್ ಶಾ ಅವರು ಸೆಪ್ಟೆಂಬರ್ 13ರಂದು ಮುಂಬೈನಲ್ಲಿ ನಡೆದ ಸುದ್ದಿಗೋಷ್ಠಿಯಲ್ಲಿ, 2029ರ ಲೋಕಸಭಾ ಚುನಾವಣೆಗೂ ಮುನ್ನ ಬಿಜೆಪಿ ಮತ್ತು ಎನ್‌ಡಿಎ ಆಡಳಿತವಿರುವ ಎಲ್ಲಾ 21 ರಾಜ್ಯಗಳಲ್ಲಿ ಏಕರೂಪ ನಾಗರಿಕ...

ದಿಶಾ ಸಾಲಿಯಾನ್ ಸಾವಿನ ಪ್ರಕರಣ : ಸಿಬಿಐ ಎಫ್ಐಆರ್‌ನಲ್ಲಿ ಆದಿತ್ಯ ಠಾಕ್ರೆ, ರಿಯಾ ಚಕ್ರವರ್ತಿ ಸೇರಿದಂತೆ ಹಲವರ ಹೆಸರು

ಬಾಂಬೆ ಹೈಕೋರ್ಟ್ ಆದೇಶದ ಮೇರೆಗೆ, ಕೇಂದ್ರೀಯ ತನಿಖಾ ದಳವು (ಸಿಬಿಐ) ನಟ ಸುಶಾಂತ್ ಸಿಂಗ್ ರಜಪೂತ್ ಅವರ ಮಾಜಿ ಮ್ಯಾನೇಜರ್ ದಿಶಾ ಸಾಲಿಯಾನ್ ಅವರ ನಿಗೂಢ ಸಾವಿಗೆ ಸಂಬಂಧಿಸಿದಂತೆ ಸೋಮವಾರ(ಸೆ.14) ಎಫ್‌ಐಆರ್ ದಾಖಲಿಸಿದೆ. ಶಿವಸೇನೆ...

ಟಿ. ನರಸೀಪುರ ಇನ್ಸ್‌ಪೆಕ್ಟರ್‌ ಧನಂಜಯ್‌ ಹೇಳಿದ್ದರಲ್ಲಿ ತಪ್ಪೇನಿದೆ? ಸಾರ್ವಜನಿಕರಿಂದ ಬೆಂಬಲ

ಮಸೀದಿಗಳ ಮುಂಭಾಗ ಯಾವುದೇ ಪ್ರಚೋದನಕಾರಿ ಕೃತ್ಯಗಳಿಗೆ ಆಸ್ಪದ ನೀಡದೆ, ರಾತ್ರಿ 10:30ರ ಒಳಗಾಗಿ ಡಿಜೆ ಸದ್ದಿಲ್ಲದೆ ನಿಯಮಾನುಸಾರ ಮೆರವಣಿಗೆ ಮುಗಿಸಲು ಕಟ್ಟುನಿಟ್ಟಿನ ಕ್ರಮ ಕೈಗೊಂಡ ಇನ್ಸ್‌ಪೆಕ್ಟರ್ ಧನಂಜಯ್ ಅವರ ಪರವಾಗಿ ಈಗ ಸಾಮಾಜಿಕ...

ಅತ್ಯಾಚಾರ ಪ್ರಕರಣದಲ್ಲಿ 10 ವರ್ಷ ಜೈಲು ಶಿಕ್ಷೆ: ‘ತೆಹಲ್ಕಾ’ ಸಂಸ್ಥಾಪಕ ತರುಣ್ ತೇಜ್‌ಪಾಲ್ ನ್ಯಾಯಾಲಯಕ್ಕೆ ಶರಣು, ಜೈಲಿಗೆ ರವಾನೆ 

ಪಣಜಿ: 2013ರ ಲೈಂಗಿಕ ದೌರ್ಜನ್ಯ ಪ್ರಕರಣದಲ್ಲಿ ಬಾಂಬೆ ಹೈಕೋರ್ಟ್‌ನ ಗೋವಾ ಪೀಠದಿಂದ ದೋಷಿ ಎಂದು ತೀರ್ಪುಗೊಂಡು 10 ವರ್ಷಗಳ ಕಠಿಣ ಕಾರಾಗೃಹ ಶಿಕ್ಷೆಗೆ ಗುರಿಯಾಗಿರುವ ‘ತೆಹಲ್ಕಾ’ ಸಂಸ್ಥಾಪಕ ಹಾಗೂ ಮಾಜಿ ಪ್ರಧಾನ ಸಂಪಾದಕ...

ಹೈದರಾಬಾದ್‌ನಲ್ಲಿ ಗಣೇಶ ವಿಗ್ರಹ ಖರೀದಿ ವಿಚಾರಕ್ಕೆ ಘರ್ಷಣೆ: 34 ವರ್ಷದ ವ್ಯಕ್ತಿ ಸಾವು: ತಪ್ಪಿತಸ್ಥರ ವಿರುದ್ಧ ಕ್ರಮಕ್ಕೆ ಆಗ್ರಹ

ಹೈದರಾಬಾದ್: ಗಣೇಶ ಚತುರ್ಥಿ ಆಚರಣೆಗೆ ಮುನ್ನ ಗಣೇಶ ವಿಗ್ರಹ ಖರೀದಿಸುವ ವಿಚಾರಕ್ಕೆ ಸಂಬಂಧಿಸಿದಂತೆ ನಡೆದ ವಾಗ್ವಾದವು ಹಿಂಸಾತ್ಮಕ ಘರ್ಷಣೆಗೆ ತಿರುಗಿ 34 ವರ್ಷದ ವ್ಯಕ್ತಿಯೊಬ್ಬರು ಮೃತಪಟ್ಟಿರುವ ಘಟನೆ ಹೈದರಾಬಾದ್‌ನ ಜೋಡಿಮೆಟ್ಲಾ ಪ್ರದೇಶದಲ್ಲಿ ನಡೆದಿದೆ....

ಮಹಿಳಾ ಬೈಕರ್‌ಗೆ ಬೇಕಂತಲೇ ಢಿಕ್ಕಿ ಹೊಡೆದು ಪರಾರಿಯಾದ ಕಾರು ಸವಾರ! ಬೆಚ್ಚಿಬೀಳಿಸುವ ವಿಡಿಯೋ ವೈರಲ್

ಹರ್ಯಾಣದ ಗುರುಗ್ರಾಮದ ಗಾಲ್ಫ್ ಕೋರ್ಸ್ ರಸ್ತೆಯಲ್ಲಿ ಅತಿವೇಗವಾಗಿ ಬಂದ ಕಾರೊಂದು ಮಹಿಳಾ ಬೈಕ್ ಸವಾರಿಗೆ ಉದ್ದೇಶಪೂರ್ವಕವಾಗಿ ಢಿಕ್ಕಿ ಹೊಡೆದು ಪರಾರಿಯಾಗಿರುವ ಭೀಕರ ಘಟನೆ ನಡೆದಿದೆ. ಹಿಟ್ ಆ್ಯಂಡ್ ರನ್ ಶಂಕೆ ವ್ಯಕ್ತವಾಗಿರುವ ಈ...

ಪ. ಬಂಗಾಳ | 252 ಮದ್ರಸಾಗಳನ್ನು ಮುಚ್ಚಲು ಆದೇಶಿಸಿದ ಬಿಜೆಪಿ ಸರ್ಕಾರ; 100 ಸಂಸ್ಥೆಗಳಿಗೆ ಕಾರಣ ಕೇಳಿ ನೋಟಿಸ್

ರಾಜ್ಯದಾದ್ಯಂತ ಮದ್ರಸಾಗಳ ಸಮೀಕ್ಷೆಯನ್ನು ಪ್ರಾರಂಭಿಸಿದ ಮೂರು ತಿಂಗಳ ನಂತರ, ಬಿಜೆಪಿ ನೇತೃತ್ವದ ಪಶ್ಚಿಮ ಬಂಗಾಳ ಸರ್ಕಾರವು ಅನುಮೋದನೆಯ ಕೊರತೆ ಅಥವಾ ಇತರ ಅಕ್ರಮಗಳನ್ನು ಉಲ್ಲೇಖಿಸಿ 252 ಸಂಸ್ಥೆಗಳನ್ನು ಮುಚ್ಚಲು ಆದೇಶಿಸಿದೆ ಮತ್ತು ಇತರ...

ಟಿ. ನರಸೀಪುರ ಪ್ರತಿಭಟನೆ ವೇಳೆ ವಾಕ್ಸಮರ: ಪ್ರತಾಪ್ ಸಿಂಹ ಹಾಗೂ ಎಲ್. ನಾಗೇಂದ್ರ ನಡುವೆ ಬಹಿರಂಗ ನೂಕಾಟ-ತಳ್ಳಾಟ!

ಟಿ. ನರಸೀಪುರದಲ್ಲಿ ಗಣೇಶೋತ್ಸವ ಮೆರವಣಿಗೆಗೆ ಸಂಬಂಧಿಸಿದ ವಿವಾದದ ಹಿನ್ನೆಲೆಯಲ್ಲಿ ಬಿಜೆಪಿ ಹಮ್ಮಿಕೊಂಡಿದ್ದ ಪ್ರತಿಭಟನೆ ವೇಳೆ ಮೈಸೂರು ಬಿಜೆಪಿಯಲ್ಲಿನ ಆಂತರಿಕ ಭಿನ್ನಮತ ಬಹಿರಂಗಗೊಂಡಿದೆ. ಪೊಲೀಸ್ ಇನ್ಸ್‌ಪೆಕ್ಟರ್ ಧನಂಜಯ್ ವಿರುದ್ಧ ನಡೆದ ಪ್ರತಿಭಟನೆಯ ಸಂದರ್ಭದಲ್ಲಿ ಮಾಜಿ...

ಉಮರ್ ಖಾಲಿದ್ ಕುರಿತ ಸಾಕ್ಷ್ಯಚಿತ್ರ ಪ್ರದರ್ಶನ ಮುಂದೂಡಿದ NLSIU ವಿದ್ಯಾರ್ಥಿ ಸಂಘ; ಯಾವುದೇ ಒತ್ತಡಕ್ಕೆ ಮಣಿದಿಲ್ಲವೆಂದು ಸ್ಪಷ್ಟನೆ

ಬೆಂಗಳೂರಿನ ನ್ಯಾಷನಲ್ ಲಾ ಸ್ಕೂಲ್ ಆಫ್ ಇಂಡಿಯಾ ಯೂನಿವರ್ಸಿಟಿಯ (NLSIU) ಲಾ ಅಂಡ್ ಸೊಸೈಟಿ ಕಮಿಟಿಯು (LawSoc) ಉಮರ್ ಖಾಲಿದ್ ಅವರ ಜೈಲುವಾಸದ ಕುರಿತು ಲಲಿತ್ ವಾಚಾನಿ ನಿರ್ಮಿಸಿರುವ 'ಪ್ರಿಸನರ್ ನಂ. 626710...