Homeಮುಖಪುಟಕಾಂಗ್ರೆಸ್‌ ಅನ್ನು ಬಲಪಡಿಸುವಲ್ಲಿ ಅಹಮದ್ ಪಟೇಲ್ ಪಾತ್ರ ಅವಿಸ್ಮರಣೀಯ - ಪ್ರಧಾನಿ ಮೋದಿ

ಕಾಂಗ್ರೆಸ್‌ ಅನ್ನು ಬಲಪಡಿಸುವಲ್ಲಿ ಅಹಮದ್ ಪಟೇಲ್ ಪಾತ್ರ ಅವಿಸ್ಮರಣೀಯ – ಪ್ರಧಾನಿ ಮೋದಿ

ಸೋನಿಯಾ ಗಾಂಧಿಯವರ ಅಪ್ತ ಸಹಾಯಕ ಮತ್ತು ಕಾಂಗ್ರೆಸ್‌ನ ಟ್ರಬಲ್‌ಶೂಟರ್ ಎಂದೇ ಖ್ಯಾತಿಯಾಗಿದ್ದ ಅಹಮದ್ ಪಟೇಲ್ ಇಂದು ಗುರಗ್ರಾಮ್ ಆಸ್ಪತ್ರೆಯಲ್ಲಿ ನಿಧರಾದರು

- Advertisement -
- Advertisement -

ಇಂದು ಮುಂಜಾನೆ ಕಾಂಗ್ರೆಸ್ ಹಿರಿಯ ಮುಖಂಡ ಅಹಮದ್ ಪಟೇಲ್ ನಿಧಾನರಾಗಿದ್ದು, ಪ್ರಧಾನಿ ಮೋದಿ ಸಂತಾಪ ಸೂಚಿಸಿದ್ದಾರೆ. ಈ ಕುರಿತು ಟ್ವೀಟ್ ಮಾಡಿರುವ ನರೇಂದ್ರ ಮೋದಿ, “ಕಾಂಗ್ರೆಸ್ ಅನ್ನು ಬಲಗೊಳಿಸುವಲ್ಲಿ ಪಟೇಲ್ ಪಾತ್ರ ಅವಿಸ್ಮರಣೀಯ” ಎಂದಿದ್ದಾರೆ.

ಸೋನಿಯಾ ಗಾಂಧಿಯವರ ಅಪ್ತ ಸಹಾಯಕ ಮತ್ತು ಕಾಂಗ್ರೆಸ್‌ನ ಟ್ರಬಲ್‌ಶೂಟರ್ ಎಂದೇ ಖ್ಯಾತಿಯಲ್ಲಿದ್ದ ಅಹಮದ್ ಪಟೇಲ್ ಇಂದು ಗುರಗ್ರಾಮ್ ಆಸ್ಪತ್ರೆಯಲ್ಲಿ ನಿಧರಾದರು ಎಂದು ಅವರ ಪುತ್ರ ಫೈಸಲ್ ಟ್ವೀಟ್ ಮಾಡಿದ್ದರು.

ಇವರಿಗೆ ಅನೆಕ ರಾಜಕಾರಣಿಗಳು ಸಂತಾಪ ಸೂಚಿಸಿದ್ದಾರೆ.

ಇದನ್ನೂ ಓದಿ: ಗುಜರಾತ್: ಕಾಂಗ್ರೆಸ್ ಹಿರಿಯ ಮುಖಂಡ ಅಹಮದ್ ಪಟೇಲ್ ನಿಧನ!

ನರೇಂದ್ರ ಮೊದಿ ಟ್ವೀಟ್ ಮಾಡಿ, “ಅಹಮದ್ ಜೀ ನಿಧನದಿಂದ ದುಃಖವಾಗಿದೆ. ಹಲವು ವರ್ಷಗಳನ್ನು ಸಾರ್ವಜನಿಕ ಜೀವನದಲ್ಲಿ ಮತ್ತು ಸಮಾಜಸೇವೆಗಾಗಿಯೇ ಮುಡಿಪಾಗಿಟ್ಟಿದ್ದರು. ಕಾಂಗ್ರೆಸ್‌ ಪಕ್ಷವನ್ನು ಬಲಪಡಿಸುವಲ್ಲಿ ಅವರ ಪಾತ್ರ ಅವಿಸ್ಮರಣೀಯವಾದುದು ಮತ್ತು ಇದು ಅವರ ತೀಕ್ಷ್ಣಮತಿಗೆ ಉದಾಹರಣೆಯಾಗಿದೆ. ಅವರ ಮಗನೊಂದಿಗೆ ಮಾತನಾಡಿ ಸಂತಾಪ ಸೂಚಿಸಿದ್ದೇನೆ. ಅವರ ಅತ್ಮಕ್ಕೆ ಶಾಂತಿ ಸಿಗಲಿ” ಎಂದು ಬರೆದುಕೊಂಡಿದ್ದಾರೆ.

ಇದನ್ನೂ ಓದಿ: ‘ಆನ್‌ಲೈನ್ ತರಗತಿ ಮತ್ತು ಆನ್‌ಲೈನ್ ಶಿಕ್ಷಣ ಬೇಡ’ – ಸಾಮಾನ್ಯ ಖಾಸಗಿ ಶಾಲೆಗಳ ಮನವಿ!

ಮಾಜಿ ಮುಖ್ಯಮಂತ್ರಿ ಸಿದ್ದರಾಮಯ್ಯ ಟ್ವೀಟ್ ಮಾಡಿ, “ಅಹಮದ್ ಪಟೇಲ್ ನಿಧನದಿಂದ ಕಾಂಗ್ರೆಸ್ ಪಕ್ಷವು ನಿಷ್ಠಾವಂತ ನಾಯಕನನ್ನು ಮತ್ತು ನಾನು ನಂಬಿಕಸ್ತ ಗೆಳೆಯನನ್ನು ಕಳೆದುಕೊಂಡಿದ್ದೇವೆ. ನನ್ನ ರಾಜಕೀಯ ಬದುಕಿನ ಪ್ರಮುಖ ನಿರ್ಧಾರಕ್ಕೆ ಕಾರಣರಾಗಿದ್ದ ಪಟೇಲ್ ಅವರು ಕೊನೆಯವರೆಗೆ ಹಿತೈಷಿಯಾಗಿದ್ದವರು. ಈ ಸಾವಿನ ದು:ಖ ಮಾತುಗಳನ್ನು ಮೀರಿದ್ದು. ಹೋಗಿ ಬನ್ನಿ ಪಟೇಲ್‌ಜಿ” ಎಂದು ಸಂತಾಪ ವ್ಯಕ್ತಪಡಿಸಿದ್ದಾರೆ.

ಇದನ್ನೂ ಓದಿ: ಗ್ರಾಮ ಪಂಚಾಯಿತಿ ಚುನಾವಣೆಯಲ್ಲಿ ಗುತ್ತಿಗೆದಾರರು ಸ್ಪರ್ಧಿಸುವಂತಿಲ್ಲ; ಚುನಾವಣಾ ಆಯೋಗ

ಮುಖ್ಯಮಂತ್ರಿ ಯಾಡಿಯೂರಪ್ಪ ಟ್ವೀಟ್ ಮಾಡಿ, “ಪ್ರಖ್ಯಾತ ಕಾಂಗ್ರೆಸ್ ನಾಯಕ ಅಹಮದ್ ಪಟೇಲ್‌ ಜಿ ನಿಧನದಿಂದ ಅತೀವ ದುಃಖವಾಗಿದೆ. ಅವರ ಕುಟುಂಬ ಮತ್ತು ಹಿತೈಷಿಗಳಿಗಳಿಗೆ ನನ್ನ ಹೃದಯಸ್ಪರ್ಷಿ ಸಂತಾಪಗಳು. ಓಮ್ ಶಾಂತಿ” ಎಂದು ಸಂತಾಪ ಸೂಚಿಸಿದ್ದಾರೆ.

ಇದನ್ನೂ ಓದಿ: ಉತ್ತರಪ್ರದೇಶ: ಬಲವಂತದ ಮತಾಂತರಕ್ಕೆ 1-10 ವರ್ಷ ಜೈಲು, 25000 ದಂಡ!

ಅಶೋಕ್ ಗೆಹ್ಲೋಟ್ ಟ್ವೀಟ್ ಮಾಡಿ, “ಕಾಂಗ್ರೆಸ್ ನಾಯಕ ಮತ್ತು ನನ್ನ ಗೆಳೆಯನ ನಿಧನದಿಂದ ದುಃಖವಾಗಿದೆ. ಇದು ಕಾಂಗ್ರೆಸ್ ಪಕ್ಷಕ್ಕೆ ಮತ್ತು ನನ್ನಂತಹ ಕಾರ್ಯಕರ್ತರಿಗೆ ಅತಿದೊಡ್ಡ ನಷ್ಟ. ಪಕ್ಷಕ್ಕೆ ಅವರ ಕೊಡುಗೆ ಸದಾ ಅವಿಸ್ಮರಣೀಯ” ಎಂದು ಬೆರೆದುಕೊಂಡಿದ್ದಾರೆ.

ಇದನ್ನೂ ಓದಿ: ಬಿಜೆಪಿ-ಜೆಡಿಎಸ್‌ನ ಒಳ ಒಪ್ಪಂದದಿಂದ ಉಪಚುನಾವಣೆಯನ್ನು ಗೆಲ್ಲಲಾಗಿದೆ: ಸಿದ್ದರಾಮಯ್ಯ

ಹೀಗೆ ಇನ್ನೂ ಹತ್ತಾರು ನಾಯಕರು ಅಹಮದ್ ಪಟೇಲ್ ನಿಧನಕ್ಕೆ ಸಂತಾಪ ಸೂಚಿಸಿದ್ದಾರೆ.

ಕಾಂಗ್ರೆಸ್ ಹಿರಿಯ ಮುಖಂಡ 71 ವರ್ಷದ ಅಹಮದ್ ಪಟೇಲ್ ಇಂದು ನಸುಕಿನ ಜಾವ ಬಹು ಅಂಗಾಂಗ ವೈಫಲ್ಯದಿಂದ ನಿಧನರಾಗಿದ್ದು, ಕೊರೊನಾ ಸೋಂಕಿಗೆ ಒಳಗಾಗಿದ್ದ ಇವರು ಗುರುಗ್ರಾಮ್ ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡೆಯುತ್ತಿದ್ದರು ಎಂದು ಪುತ್ರ ಫೈಸಲ್ ಹೇಳಿದ್ದಾರೆ.

ಗುಜರಾತ್ ರಾಜ್ಯಸಭಾ ಸಂಸದ ಬುಧವಾರ ಮುಂಜಾನೆ 3.30 ಕ್ಕೆ ನಿಧನರಾಗಿದ್ದಾರೆ ಎಂದು ಫೈಸಲ್ ಟ್ವೀಟ್‌ನಲ್ಲಿ ತಿಳಿಸಿದ್ದಾರೆ.

ಇದನ್ನೂ ಓದಿ: ಹಾವೇರಿಯಲ್ಲಿ ಫೆ. 26 ರಿಂದ 86ನೇ ಅಖಿಲ ಭಾರತ ಕನ್ನಡ ಸಾಹಿತ್ಯ ಸಮ್ಮೇಳನ

“25/11/2020, 03:30 AM ಕ್ಕೆ ನನ್ನ ತಂದೆ ಅಹ್ಮದ್ ಪಟೇಲ್ ಅಕಾಲಿಕವಾಗಿ ನಿಧನರಾದರೆಂದು ಘೋಷಿಸಲು ಅತೀವ ದುಃಖ ಮತ್ತು ವಿಷಾದವಾಗಿತ್ತಿದೆ. ಒಂದು ತಿಂಗಳ ಹಿಂದೆ ಕೊರೊನಾ ಸೋಂಕಿಗೆ ಒಳಗಾದ ನಂತರ ಅವರ ಆರೋಗ್ಯ ಸ್ಥಿರವಾಗಿರಲಿಲ್ಲ. ಬಹು ಅಂಗಾಂಗ ವೈಫಲ್ಯಗಳಿಂದಾಗಿ ಅದು ಇನ್ನಷ್ಟು ಹದಗೆಟ್ಟಿತ್ತು. ಅಲ್ಲಾಹನು ಅವರಿಗೆ ಜನ್ನತ್‌ ಉಲ್ ಫಿರ್ದೌಸ್, ಇನ್ಶಅಲ್ಲಾವನ್ನು ನೀಡಲಿ” ಎಂದು ಟ್ವೀಟ್ ಮಾಡಿದ್ದಾರೆ.

ಭಾರತೀಯ ರಾಷ್ಟ್ರೀಯ ಕಾಂಗ್ರೆಸ್‌ನ ಖಜಾಂಚಿಯೂ ಆಗಿದ್ದ ಅಹಮದ್ ಪಟೇಲ್ ಅವರು ಅಕ್ಟೋಬರ್ 1 ರಂದು ಕೊರೊನಾ ಸೋಂಕಿಗೆ ಒಳಗಾಗಿದ್ದರು. ನಂತರ ಅವರನ್ನು ನವೆಂಬರ್ 15 ರಂದು ಗುರುಗ್ರಾಮ್‌ನ ಮೆಡಂತಾ ಆಸ್ಪತ್ರೆಯ ತೀವ್ರ ನಿಗಾ ಘಟಕಕ್ಕೆ ದಾಖಲಿಸಲಾಯಿತು.


ಇದನ್ನೂ ಓದಿ: ಆಯ್ಕೆಯಾಗಿದ್ದರೂ ಆದೇಶ ಪತ್ರ ನೀಡದ ಕಾಲೇಜು ಶಿಕ್ಷಣ ಇಲಾಖೆ; ಧರಣಿ ಕೂತ ಪ್ರಾಧ್ಯಾಪಕರು

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ರಾಜ್ಯಸಭಾ ಚುನಾವಣೆ: ಕರ್ನಾಟದಿಂದ ಆಯ್ಕೆಯಾದ ಪ್ರತಿನಿಧಿಗಳಿಂದ ರಾಜ್ಯಕ್ಕೆ ಲಾಭವಾಗಿದೆಯೇ?

ರಾಜ್ಯಸಭೆಗೆ ಪ್ರತಿಬಾರಿ ಚುನಾವಣೆ ನಡೆಯುವಾಗಲೂ ಈ ಚರ್ಚೆಗಳು ಸಾಮಾನ್ಯ. ಕನ್ನಡೇತರರು ಇಲ್ಲಿಂದ ಆಯ್ಕೆಯಾಗಿ ಇಲ್ಲಿಯ ಸಮಸ್ಯೆಗಳ ಬಗ್ಗೆ ಮಾತನಾಡುವುದಿಲ್ಲ ಎಂಬ ವಾಸ್ತವದ ಜೊತೆಜೊತೆಗೆ, ರಾಜ್ಯಸಭೆಗೆ ಆಯ್ಕೆಯಾಗುವ ಕನ್ನಡವರಾದರೂ ಮಾತನಾಡುತ್ತಾರಾ? ಎಂದರೆ ಅದಕ್ಕೂ ನಮ್ಮಲ್ಲಿ...

ಬಂಗಾಳದಲ್ಲಿ ಬಿಜೆಪಿ ಬೆಂಬಲಿಗರ ಕ್ರೌರ್ಯ: ಅಭಿಷೇಕ್ ಬಳಿಕ ಕಲ್ಯಾಣ್‌ ಬ್ಯಾನರ್ಜಿ ಮೇಲೆ ಮಾರಣಾಂತಿಕ ದಾಳಿ

ಪಶ್ಚಿಮ ಬಂಗಾಳದ ತೃಣಮೂಲ ಕಾಂಗ್ರೆಸ್ (ಟಿಎಂಸಿ) ಸಂಸದ ಕಲ್ಯಾಣ್ ಬ್ಯಾನರ್ಜಿ ಅವರು ಭಾನುವಾರ (ಮೇ 31), ಹೂಗ್ಲಿ ಜಿಲ್ಲೆಯಲ್ಲಿ ನಡೆದಿದ್ದ ಚುನಾವಣೋತ್ತರ ಹಿಂಸಾಚಾರದಲ್ಲಿ ಕಾರ್ಯಕರ್ತರ ಬಂಧನದ ವಿರುದ್ಧ ಮನವಿ ಪತ್ರ ಸಲ್ಲಿಸಲು ಭೇಟಿ...

ಬಸ್ತಾರ್‌: ಬುಡಕಟ್ಟು ಕ್ರಿಶ್ಚಿಯನ್ ಕುಟುಂಬಗಳಿಗೆ ಬೆದರಿಕೆ, ಥಳಿತ, ಹಿಂದೂ ಧರ್ಮ ಸ್ವೀಕರಿಸಲು ಬಲವಂತ: ಘನತೆಯ ಬದುಕಿಗಾಗಿ ಆದಿವಾಸಿಗಳ ಹೋರಾಟ

ಛತ್ತೀಸ್‌ಗಢದ ದಟ್ಟ ಅರಣ್ಯಗಳು ಮತ್ತು ಕಡಿದಾದ ಬೆಟ್ಟಗಳಿಂದ ಆವೃತವಾಗಿರುವ ಬಸ್ತಾರ್ ಕಣಿವೆಯು ತನ್ನ ವಿಶಿಷ್ಟ ಬುಡಕಟ್ಟು ಸಂಸ್ಕೃತಿ ಮತ್ತು ಪ್ರಾಕೃತಿಕ ಸಂಪತ್ತಿಗೆ ಹೆಸರುವಾಸಿ. ಆದರೆ ಇತ್ತೀಚಿನ ವರ್ಷಗಳಲ್ಲಿ, ಈ ಪ್ರಶಾಂತ ಭೂಭಾಗವು ತೀವ್ರಗಾಮಿ...

ಗಾಝಾದಲ್ಲಿ ರಕ್ತಸಿಕ್ತ ಈದ್: ಇಸ್ರೇಲ್ ಭೀಕರ ದಾಳಿಗೆ 26 ಪ್ಯಾಲೆಸ್ಟೀನಿಯನ್ನರು ಬಲಿ, ವಿಶ್ವಸಂಸ್ಥೆ ತೀವ್ರ ಆತಂಕ

ಗಾಝಾ: ಇಸ್ಲಾಂ ಧರ್ಮದ ಅತ್ಯಂತ ಪವಿತ್ರ ದಿನಗಳಲ್ಲಿ ಒಂದಾದ ‘ಈದ್ ಅಲ್-ಅಧಾ’ ಹಬ್ಬದ ಸಂದರ್ಭದಲ್ಲೂ ಗಾಝಾ ಪಟ್ಟಿಯಲ್ಲಿ ರಕ್ತಪಾತ ಮುಂದುವರಿದಿದ್ದು, ಹಬ್ಬದ ಮುನ್ನಾದಿನದಿಂದ ಆರಂಭಿಸಿ ಇಸ್ರೇಲ್ ಪಡೆಗಳು ನಡೆಸಿದ ಸರಣಿ ದಾಳಿಗಳಲ್ಲಿ ಕನಿಷ್ಠ...

ಜನರಿಗೆ ಇಂಧನ ಉಳಿಸುವ ಪಾಠ, ಪ್ರಧಾನಿಗೆ ರೋಡ್‌ಶೋಗಳ ಆಟ

ಮೇ 10 ರಂದು ಪ್ರಧಾನಮಂತ್ರಿ ನರೇಂದ್ರ ಮೋದಿ ಅವರು ಸಾರ್ವಜನಿಕರಲ್ಲಿ ಮಿತವ್ಯಯದ ಅಪೀಲು ಮಾಡಿದ್ದು, ಇಂಧನ ಬಳಕೆಯನ್ನು ಕನಿಷ್ಠ ಮಟ್ಟಕ್ಕೆ ಇಳಿಸುವಂತೆ ಕೋರಿದ್ದರು. ಜನರು ಖಾಸಗಿ ವಾಹನಗಳ ಬಳಕೆಯನ್ನು ಬಿಟ್ಟು ಸಾರ್ವಜನಿಕ ಸಾರಿಗೆಯನ್ನು...

ಏಷ್ಯನ್ ಗೇಮ್ಸ್‌ ಟ್ರಯಲ್ಸ್‌ನಲ್ಲಿ ಸ್ಪರ್ಧಿಸಲು ವಿನೇಶ್ ಫೋಗಟ್‌ಗೆ ಅನುಮತಿಸಿದ ಭಾರತೀಯ ಕುಸ್ತಿ ಒಕ್ಕೂಟ

ಮಾಜಿ ವಿಶ್ವ ಚಾಂಪಿಯನ್‌ಶಿಪ್ ಪದಕ ವಿಜೇತೆ ವಿನೇಶ್ ಫೋಗಟ್ ಅವರು (ಮೇ 30) ಏಷ್ಯನ್ ಗೇಮ್ಸ್ ಆಯ್ಕೆ ಟ್ರಯಲ್ಸ್‌ನಲ್ಲಿ ಮಹಿಳೆಯರ 53 ಕೆಜಿ ವಿಭಾಗದಲ್ಲಿ ಸ್ಪರ್ಧಿಸಲು ಅವಕಾಶ ಪಡೆದಿದ್ದಾರೆ. ಭಾರತೀಯ ಕುಸ್ತಿ ಒಕ್ಕೂಟ...

Uttarakhand | ಬಜರಂಗದಳದ ಕಾರ್ಯಕರ್ತರು ಈಗ ದ್ವೇಷ ಬಿತ್ತುವ ವೃತ್ತಿಪರ ಇನ್‌ಫ್ಲ್ಯುಯೆನ್ಸರ್ಸ್!

ಈ ವರ್ಷದ ಆರಂಭದಲ್ಲಿ ಉತ್ತರಾಖಂಡದ ಕೋಟದ್ವಾರದಲ್ಲಿ ಹಿಂದುತ್ವ ಗುಂಪೊಂದು ವೃದ್ಧ ಮುಸ್ಲಿಂ ವ್ಯಕ್ತಿಯೊಬ್ಬರ ಅಂಗಡಿಗೆ ನುಗ್ಗಿ, ಅಂಗಡಿಯ ಹೆಸರಾದ ‘ಬಾಬಾ’ ಎಂಬುವುದನ್ನು ಬದಲಾಯಿಸುವಂತೆ ಒತ್ತಾಯಿಸಿತ್ತು. ‘ಬಾಬಾ’ ಎಂಬುವುದು ‘ಹಿಂದೂ’ ಹೆಸರಾಗಿದೆ ಎಂದು ಆ...

​ನಿಗಿ ನಿಗಿ ಕೆಂಡದಂತಾಗಿರುವ ಬಿಡದಿ, ಡಿಕೆಶಿಗೆ ಬಿಸಿ ತುಪ್ಪದಂತಾದ ರೈತರು

​ಬದಲಾದ ರಾಜಕೀಯ ಸಂದರ್ಭದಲ್ಲಿ ಕರ್ನಾಟಕದ ಮುಂದಿನ ಮುಖ್ಯಮಂತ್ರಿ ಎಂದೇ ಬಿಂಬಿತವಾಗಿರುವ ಡಿ.ಕೆ. ಶಿವಕುಮಾರ್ ಪ್ರತಿಷ್ಠೆಯಾಗಿ ತೆಗೆದುಕೊಂಡಿರುವ ಬಿಡದಿಯ ಟೌನ್‌ಶಿಪ್ ಯೋಜನೆಯ ವಿರುದ್ಧ ನಡೆಯುತ್ತಿರುವ ರೈತರ ಹೋರಾಟ ದಿನದಿಂದ ದಿನಕ್ಕೆ ಉಗ್ರ ರೂಪ ಪಡೆಯುತ್ತಿದೆ. ​ಭೂಸ್ವಾಧೀನದ...

ಪ್ರಜಾಪ್ರಭುತ್ವವನ್ನು ಹತ್ತಿಕ್ಕಲು ‘SIR’ ಅನ್ನೇ ಅಸ್ತ್ರವನ್ನಾಗಿಸಿಕೊಂಡ ನರೇಂದ್ರ ಮೋದಿ!

ಪಶ್ಚಿಮ ಬಂಗಾಳದ ವಿಧಾನಸಭಾ ಚುನಾವಣೆಯ ಫಲಿತಾಂಶ ಪ್ರಕಟವಾದ ತಕ್ಷಣ (ಮೇ 4 ರಂದು), ಕಾಳೀಘಾಟ್‌ನಲ್ಲಿರುವ ತಮ್ಮ ನಿವಾಸದಲ್ಲಿ ಸುದ್ದಿಗೋಷ್ಠಿ ನಡೆಸಿದ ಮಾಜಿ ಮುಖ್ಯಮಂತ್ರಿ ಮಮತಾ ಬ್ಯಾನರ್ಜಿ ಅತ್ಯಂತ ಆಕ್ರೋಶದಿಂದ ಮಾತನಾಡಿದ್ದರು. ಅಷ್ಟೇ ಅಲ್ಲದೆ,...

ಕೇರಳದಲ್ಲಿ ಶಾಲಾ ಬಾಲಕಿಯರಿಗೆ ಮೂರು ದಿನ ಮುಟ್ಟಿನ ರಜೆ, ಅಸಂಘಟಿತ ವಲಯದ ಮಹಿಳೆಯರಿಗೆ ಆರು ತಿಂಗಳ ಹೆರಿಗೆ ರಜೆ ಘೋಷಣೆ 

ತಿರುವನಂತಪುರಂ: ಕೇರಳದ ವಿ.ಡಿ. ಸತೀಶನ್ ನೇತೃತ್ವದ ಕಾಂಗ್ರೆಸ್ ಸರ್ಕಾರವು ಮಹಿಳೆಯರಿಗೆ ಹಲವಾರು ಕಲ್ಯಾಣ ಕ್ರಮಗಳನ್ನು ಘೋಷಿಸಿದೆ, ಇದರಲ್ಲಿ ಶಾಲಾ ವಿದ್ಯಾರ್ಥಿಗಳಿಗೆ ಮೂರು ದಿನಗಳ ಮಾಸಿಕ ಮುಟ್ಟಿನ ರಜೆ, ಕೆಲಸದ ಸ್ಥಳಗಳಲ್ಲಿ ಮಹಿಳೆಯರಿಗೆ ಸಮಾನ...