Homeಮುಖಪುಟಕಾಂಗ್ರೆಸ್‌ ಅನ್ನು ಬಲಪಡಿಸುವಲ್ಲಿ ಅಹಮದ್ ಪಟೇಲ್ ಪಾತ್ರ ಅವಿಸ್ಮರಣೀಯ - ಪ್ರಧಾನಿ ಮೋದಿ

ಕಾಂಗ್ರೆಸ್‌ ಅನ್ನು ಬಲಪಡಿಸುವಲ್ಲಿ ಅಹಮದ್ ಪಟೇಲ್ ಪಾತ್ರ ಅವಿಸ್ಮರಣೀಯ – ಪ್ರಧಾನಿ ಮೋದಿ

ಸೋನಿಯಾ ಗಾಂಧಿಯವರ ಅಪ್ತ ಸಹಾಯಕ ಮತ್ತು ಕಾಂಗ್ರೆಸ್‌ನ ಟ್ರಬಲ್‌ಶೂಟರ್ ಎಂದೇ ಖ್ಯಾತಿಯಾಗಿದ್ದ ಅಹಮದ್ ಪಟೇಲ್ ಇಂದು ಗುರಗ್ರಾಮ್ ಆಸ್ಪತ್ರೆಯಲ್ಲಿ ನಿಧರಾದರು

- Advertisement -
- Advertisement -

ಇಂದು ಮುಂಜಾನೆ ಕಾಂಗ್ರೆಸ್ ಹಿರಿಯ ಮುಖಂಡ ಅಹಮದ್ ಪಟೇಲ್ ನಿಧಾನರಾಗಿದ್ದು, ಪ್ರಧಾನಿ ಮೋದಿ ಸಂತಾಪ ಸೂಚಿಸಿದ್ದಾರೆ. ಈ ಕುರಿತು ಟ್ವೀಟ್ ಮಾಡಿರುವ ನರೇಂದ್ರ ಮೋದಿ, “ಕಾಂಗ್ರೆಸ್ ಅನ್ನು ಬಲಗೊಳಿಸುವಲ್ಲಿ ಪಟೇಲ್ ಪಾತ್ರ ಅವಿಸ್ಮರಣೀಯ” ಎಂದಿದ್ದಾರೆ.

ಸೋನಿಯಾ ಗಾಂಧಿಯವರ ಅಪ್ತ ಸಹಾಯಕ ಮತ್ತು ಕಾಂಗ್ರೆಸ್‌ನ ಟ್ರಬಲ್‌ಶೂಟರ್ ಎಂದೇ ಖ್ಯಾತಿಯಲ್ಲಿದ್ದ ಅಹಮದ್ ಪಟೇಲ್ ಇಂದು ಗುರಗ್ರಾಮ್ ಆಸ್ಪತ್ರೆಯಲ್ಲಿ ನಿಧರಾದರು ಎಂದು ಅವರ ಪುತ್ರ ಫೈಸಲ್ ಟ್ವೀಟ್ ಮಾಡಿದ್ದರು.

ಇವರಿಗೆ ಅನೆಕ ರಾಜಕಾರಣಿಗಳು ಸಂತಾಪ ಸೂಚಿಸಿದ್ದಾರೆ.

ಇದನ್ನೂ ಓದಿ: ಗುಜರಾತ್: ಕಾಂಗ್ರೆಸ್ ಹಿರಿಯ ಮುಖಂಡ ಅಹಮದ್ ಪಟೇಲ್ ನಿಧನ!

ನರೇಂದ್ರ ಮೊದಿ ಟ್ವೀಟ್ ಮಾಡಿ, “ಅಹಮದ್ ಜೀ ನಿಧನದಿಂದ ದುಃಖವಾಗಿದೆ. ಹಲವು ವರ್ಷಗಳನ್ನು ಸಾರ್ವಜನಿಕ ಜೀವನದಲ್ಲಿ ಮತ್ತು ಸಮಾಜಸೇವೆಗಾಗಿಯೇ ಮುಡಿಪಾಗಿಟ್ಟಿದ್ದರು. ಕಾಂಗ್ರೆಸ್‌ ಪಕ್ಷವನ್ನು ಬಲಪಡಿಸುವಲ್ಲಿ ಅವರ ಪಾತ್ರ ಅವಿಸ್ಮರಣೀಯವಾದುದು ಮತ್ತು ಇದು ಅವರ ತೀಕ್ಷ್ಣಮತಿಗೆ ಉದಾಹರಣೆಯಾಗಿದೆ. ಅವರ ಮಗನೊಂದಿಗೆ ಮಾತನಾಡಿ ಸಂತಾಪ ಸೂಚಿಸಿದ್ದೇನೆ. ಅವರ ಅತ್ಮಕ್ಕೆ ಶಾಂತಿ ಸಿಗಲಿ” ಎಂದು ಬರೆದುಕೊಂಡಿದ್ದಾರೆ.

ಇದನ್ನೂ ಓದಿ: ‘ಆನ್‌ಲೈನ್ ತರಗತಿ ಮತ್ತು ಆನ್‌ಲೈನ್ ಶಿಕ್ಷಣ ಬೇಡ’ – ಸಾಮಾನ್ಯ ಖಾಸಗಿ ಶಾಲೆಗಳ ಮನವಿ!

ಮಾಜಿ ಮುಖ್ಯಮಂತ್ರಿ ಸಿದ್ದರಾಮಯ್ಯ ಟ್ವೀಟ್ ಮಾಡಿ, “ಅಹಮದ್ ಪಟೇಲ್ ನಿಧನದಿಂದ ಕಾಂಗ್ರೆಸ್ ಪಕ್ಷವು ನಿಷ್ಠಾವಂತ ನಾಯಕನನ್ನು ಮತ್ತು ನಾನು ನಂಬಿಕಸ್ತ ಗೆಳೆಯನನ್ನು ಕಳೆದುಕೊಂಡಿದ್ದೇವೆ. ನನ್ನ ರಾಜಕೀಯ ಬದುಕಿನ ಪ್ರಮುಖ ನಿರ್ಧಾರಕ್ಕೆ ಕಾರಣರಾಗಿದ್ದ ಪಟೇಲ್ ಅವರು ಕೊನೆಯವರೆಗೆ ಹಿತೈಷಿಯಾಗಿದ್ದವರು. ಈ ಸಾವಿನ ದು:ಖ ಮಾತುಗಳನ್ನು ಮೀರಿದ್ದು. ಹೋಗಿ ಬನ್ನಿ ಪಟೇಲ್‌ಜಿ” ಎಂದು ಸಂತಾಪ ವ್ಯಕ್ತಪಡಿಸಿದ್ದಾರೆ.

ಇದನ್ನೂ ಓದಿ: ಗ್ರಾಮ ಪಂಚಾಯಿತಿ ಚುನಾವಣೆಯಲ್ಲಿ ಗುತ್ತಿಗೆದಾರರು ಸ್ಪರ್ಧಿಸುವಂತಿಲ್ಲ; ಚುನಾವಣಾ ಆಯೋಗ

ಮುಖ್ಯಮಂತ್ರಿ ಯಾಡಿಯೂರಪ್ಪ ಟ್ವೀಟ್ ಮಾಡಿ, “ಪ್ರಖ್ಯಾತ ಕಾಂಗ್ರೆಸ್ ನಾಯಕ ಅಹಮದ್ ಪಟೇಲ್‌ ಜಿ ನಿಧನದಿಂದ ಅತೀವ ದುಃಖವಾಗಿದೆ. ಅವರ ಕುಟುಂಬ ಮತ್ತು ಹಿತೈಷಿಗಳಿಗಳಿಗೆ ನನ್ನ ಹೃದಯಸ್ಪರ್ಷಿ ಸಂತಾಪಗಳು. ಓಮ್ ಶಾಂತಿ” ಎಂದು ಸಂತಾಪ ಸೂಚಿಸಿದ್ದಾರೆ.

ಇದನ್ನೂ ಓದಿ: ಉತ್ತರಪ್ರದೇಶ: ಬಲವಂತದ ಮತಾಂತರಕ್ಕೆ 1-10 ವರ್ಷ ಜೈಲು, 25000 ದಂಡ!

ಅಶೋಕ್ ಗೆಹ್ಲೋಟ್ ಟ್ವೀಟ್ ಮಾಡಿ, “ಕಾಂಗ್ರೆಸ್ ನಾಯಕ ಮತ್ತು ನನ್ನ ಗೆಳೆಯನ ನಿಧನದಿಂದ ದುಃಖವಾಗಿದೆ. ಇದು ಕಾಂಗ್ರೆಸ್ ಪಕ್ಷಕ್ಕೆ ಮತ್ತು ನನ್ನಂತಹ ಕಾರ್ಯಕರ್ತರಿಗೆ ಅತಿದೊಡ್ಡ ನಷ್ಟ. ಪಕ್ಷಕ್ಕೆ ಅವರ ಕೊಡುಗೆ ಸದಾ ಅವಿಸ್ಮರಣೀಯ” ಎಂದು ಬೆರೆದುಕೊಂಡಿದ್ದಾರೆ.

ಇದನ್ನೂ ಓದಿ: ಬಿಜೆಪಿ-ಜೆಡಿಎಸ್‌ನ ಒಳ ಒಪ್ಪಂದದಿಂದ ಉಪಚುನಾವಣೆಯನ್ನು ಗೆಲ್ಲಲಾಗಿದೆ: ಸಿದ್ದರಾಮಯ್ಯ

ಹೀಗೆ ಇನ್ನೂ ಹತ್ತಾರು ನಾಯಕರು ಅಹಮದ್ ಪಟೇಲ್ ನಿಧನಕ್ಕೆ ಸಂತಾಪ ಸೂಚಿಸಿದ್ದಾರೆ.

ಕಾಂಗ್ರೆಸ್ ಹಿರಿಯ ಮುಖಂಡ 71 ವರ್ಷದ ಅಹಮದ್ ಪಟೇಲ್ ಇಂದು ನಸುಕಿನ ಜಾವ ಬಹು ಅಂಗಾಂಗ ವೈಫಲ್ಯದಿಂದ ನಿಧನರಾಗಿದ್ದು, ಕೊರೊನಾ ಸೋಂಕಿಗೆ ಒಳಗಾಗಿದ್ದ ಇವರು ಗುರುಗ್ರಾಮ್ ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡೆಯುತ್ತಿದ್ದರು ಎಂದು ಪುತ್ರ ಫೈಸಲ್ ಹೇಳಿದ್ದಾರೆ.

ಗುಜರಾತ್ ರಾಜ್ಯಸಭಾ ಸಂಸದ ಬುಧವಾರ ಮುಂಜಾನೆ 3.30 ಕ್ಕೆ ನಿಧನರಾಗಿದ್ದಾರೆ ಎಂದು ಫೈಸಲ್ ಟ್ವೀಟ್‌ನಲ್ಲಿ ತಿಳಿಸಿದ್ದಾರೆ.

ಇದನ್ನೂ ಓದಿ: ಹಾವೇರಿಯಲ್ಲಿ ಫೆ. 26 ರಿಂದ 86ನೇ ಅಖಿಲ ಭಾರತ ಕನ್ನಡ ಸಾಹಿತ್ಯ ಸಮ್ಮೇಳನ

“25/11/2020, 03:30 AM ಕ್ಕೆ ನನ್ನ ತಂದೆ ಅಹ್ಮದ್ ಪಟೇಲ್ ಅಕಾಲಿಕವಾಗಿ ನಿಧನರಾದರೆಂದು ಘೋಷಿಸಲು ಅತೀವ ದುಃಖ ಮತ್ತು ವಿಷಾದವಾಗಿತ್ತಿದೆ. ಒಂದು ತಿಂಗಳ ಹಿಂದೆ ಕೊರೊನಾ ಸೋಂಕಿಗೆ ಒಳಗಾದ ನಂತರ ಅವರ ಆರೋಗ್ಯ ಸ್ಥಿರವಾಗಿರಲಿಲ್ಲ. ಬಹು ಅಂಗಾಂಗ ವೈಫಲ್ಯಗಳಿಂದಾಗಿ ಅದು ಇನ್ನಷ್ಟು ಹದಗೆಟ್ಟಿತ್ತು. ಅಲ್ಲಾಹನು ಅವರಿಗೆ ಜನ್ನತ್‌ ಉಲ್ ಫಿರ್ದೌಸ್, ಇನ್ಶಅಲ್ಲಾವನ್ನು ನೀಡಲಿ” ಎಂದು ಟ್ವೀಟ್ ಮಾಡಿದ್ದಾರೆ.

ಭಾರತೀಯ ರಾಷ್ಟ್ರೀಯ ಕಾಂಗ್ರೆಸ್‌ನ ಖಜಾಂಚಿಯೂ ಆಗಿದ್ದ ಅಹಮದ್ ಪಟೇಲ್ ಅವರು ಅಕ್ಟೋಬರ್ 1 ರಂದು ಕೊರೊನಾ ಸೋಂಕಿಗೆ ಒಳಗಾಗಿದ್ದರು. ನಂತರ ಅವರನ್ನು ನವೆಂಬರ್ 15 ರಂದು ಗುರುಗ್ರಾಮ್‌ನ ಮೆಡಂತಾ ಆಸ್ಪತ್ರೆಯ ತೀವ್ರ ನಿಗಾ ಘಟಕಕ್ಕೆ ದಾಖಲಿಸಲಾಯಿತು.


ಇದನ್ನೂ ಓದಿ: ಆಯ್ಕೆಯಾಗಿದ್ದರೂ ಆದೇಶ ಪತ್ರ ನೀಡದ ಕಾಲೇಜು ಶಿಕ್ಷಣ ಇಲಾಖೆ; ಧರಣಿ ಕೂತ ಪ್ರಾಧ್ಯಾಪಕರು

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

‘ಸಾವರ್ಕರ್ ದೇವರನ್ನು, ಧಾರ್ಮಿಕ ನಂಬಿಕೆಗಳನ್ನು ಪ್ರಶ್ನಿಸಿದ್ದರು’: ಪುಣೆ ನ್ಯಾಯಾಲಯದಲ್ಲಿ ಮೊಮ್ಮಗ ಸತ್ಯಕಿ ಸಾವರ್ಕರ್ ಒಪ್ಪಿಗೆ

ಪುಣೆ: ಕಾಂಗ್ರೆಸ್ ನಾಯಕ ಹಾಗೂ ಸಂಸತ್ತಿನ ವಿರೋಧ ಪಕ್ಷದ ನಾಯಕ ರಾಹುಲ್ ಗಾಂಧಿ ವಿರುದ್ಧ ದಾಖಲಾಗಿರುವ ಕ್ರಿಮಿನಲ್ ಮಾನನಷ್ಟ ಮೊಕದ್ದಮೆಯ ವಿಚಾರಣೆಯು ಅತ್ಯಂತ ಕುತೂಹಲಕಾರಿ ಮತ್ತು ರಾಜಕೀಯ-ಸೈದ್ಧಾಂತಿಕ ತಿರುವನ್ನು ಪಡೆದುಕೊಂಡಿದೆ. ವಿನಾಯಕ ದಾಮೋದರ್...

ಮಾಜಿ ಸಚಿವ ಧರ್ಮೇಂದ್ರ ಪ್ರಧಾನ್ ಮಗಳ ಫೋನ್ ಬಿಲ್ ವಿವಾದ: ₹68 ಸಾವಿರ ಬಿಲ್-ಪೇ ಆಗಿದ್ದು ಸರ್ಕಾರಿ ಹಣದಲ್ಲಾ?

ಮಾಜಿ ಕೇಂದ್ರ ಶಿಕ್ಷಣ ಸಚಿವ ಧರ್ಮೇಂದ್ರ ಪ್ರಧಾನ್ ಅವರ ಪುತ್ರಿ ನೈಮಿಷಾ ಪ್ರಧಾನ್ ಅವರು ಮತ್ತೊಮ್ಮೆ ವಿವಾದದ ಕೇಂದ್ರಬಿಂದುವಾಗಿದ್ದಾರೆ. ವಾರಗಳ ಹಿಂದೆ ನೀಟ್ ಪರೀಕ್ಷೆಯ ಪತ್ರಿಕೆ ಸೋರಿಕೆ ಖಂಡಿಸಿ ಕಾಕ್ರೋಚ್ ಜನತಾ ಪಾರ್ಟಿ...

ಇರಾನ್ ವಸತಿ ಕಟ್ಟಡದ ಮೇಲೆ ಅಮೆರಿಕಾ ದಾಳಿ: ಎರಡು ವರ್ಷದ ಮಗು ಸೇರಿ ಒಂದೇ ಕುಟುಂಬದ ಮೂವರ ಸಾವು

ಮಧ್ಯಪ್ರಾಚ್ಯದಲ್ಲಿ ಅಮೆರಿಕ ತನ್ನ ಸಾಮ್ರಾಜ್ಯಶಾಹಿ ಆಧಿಪತ್ಯ ಸ್ಥಾಪನೆಗಾಗಿ ನಡೆಸುತ್ತಿರುವ ಯುದ್ಧಕೋರ ನೀತಿ ಮತ್ತೊಮ್ಮೆ ನಿರಪರಾಧಿ ಸಾರ್ವಜನಿಕರ ರಕ್ತ ಹರಿಸಿದೆ. ಇರಾನ್ ಮೇಲಿನ ಅಮೆರಿಕ ಪಡೆಗಳ ಸರಣಿ ಮತ್ತು ಭೀಕರ ಬಾಂಬ್ ದಾಳಿಗಳು ಕೇವಲ...

SIR: ASDDO ಪಟ್ಟಿಯಲ್ಲಿ ಬೆಂಗಳೂರಿಗೆ ಪ್ರಥಮ ಸ್ಥಾನ, ರಾಜ್ಯದಲ್ಲಿ 2 ಕೋಟಿ ಮತದಾರರ ಹೆಸರು ರದ್ದಾಗುವ ಬೀತಿ

ಕರ್ನಾಟಕದಲ್ಲಿ ನಡೆಯುತ್ತಿರುವ ಮತದಾರರ ಪಟ್ಟಿಯ ವಿಶೇಷ ಸಮಗ್ರ ಪರಿಷ್ಕರಣೆ (SIR) ಪ್ರಕ್ರಿಯೆಯಲ್ಲಿ ರಾಜಧಾನಿ ಬೆಂಗಳೂರು ಅತ್ಯಂತ ಪ್ರಮುಖ ಹಾಗೂ ಕಳವಳಕಾರಿ ಕೇಂದ್ರವಾಗಿ ಹೊರಹೊಮ್ಮಿದೆ. ರಾಜ್ಯದಲ್ಲಿರುವ ಒಟ್ಟು 5.54 ಕೋಟಿ ನೋಂದಾಯಿತ ಮತದಾರರ ಪೈಕಿ...

ಉಮರ್ ಖಾಲಿದ್ ಜಾಮೀನು ಅರ್ಜಿ; ಪೊಲೀಸರ ನಿಲುವು ಕೇಳಿದ ದೆಹಲಿ ಹೈಕೋರ್ಟ್

ಫೆಬ್ರವರಿ 2020 ರಲ್ಲಿ ಈಶಾನ್ಯ ದೆಹಲಿಯಲ್ಲಿ ನಡೆದ ಗಲಭೆಯ ಹಿಂದಿನ "ದೊಡ್ಡ ಪಿತೂರಿ"ಗೆ ಸಂಬಂಧಿಸಿದಂತೆ ಭಯೋತ್ಪಾದನಾ ವಿರೋಧಿ ಕಾನೂನು ಯುಎಪಿಎ ಅಡಿಯಲ್ಲಿ ಪ್ರಕರಣದಲ್ಲಿ ಜಾಮೀನು ಕೋರಿ ಉಮರ್ ಖಾಲಿದ್ ಸಲ್ಲಿಸಿದ ಅರ್ಜಿಯ ಕುರಿತು...

ಮುಂಬೈ: ‘ಶಾಲಾ ಜಿಹಾದ್’ ಎಂಬ ಬಿಜೆಪಿ ನಾಯಕನ ಕೋಮುದ್ವೇಷಕ್ಕೆ ಶಾಲೆಗೆ ನುಗ್ಗಿದ ಬುಲ್ಡೋಜರ್: ಬಿಎಂಸಿಗೆ ಚಾಟಿ ಬೀಸಿದ ಬಾಂಬೆ ಹೈಕೋರ್ಟ್

ಬಿಜೆಪಿ ನಾಯಕ ಕಿರೀಟ್ ಸೋಮಯ್ಯ ಅವರ “ಶಾಲಾ ಜಿಹಾದ್” ಎಂಬ ವಿಷಕಾರಿ ಹೇಳಿಕೆಯ ನಂತರ ಮುಂಬೈನ ಗೋವಂಡಿಯಲ್ಲಿ ಬಡ ಮುಸ್ಲಿಂ ಮಕ್ಕಳ ಶಿಕ್ಷಣದ ಆಶಾಕಿರಣವಾಗಿದ್ದ ತೆಹ್ಜೀಬ್ ಇಸ್ಲಾಮಿಕ್ ಇಂಗ್ಲಿಷ್ ಶಾಲೆಯನ್ನು ಬೃಹನ್ಮುಂಬೈ ಮುನ್ಸಿಪಲ್...

ಹಾಕಿ ತಂಡಕ್ಕೆ ಕೇಸರಿ ಜರ್ಸಿ: ‘ನಮ್ಮ ಗುರುತೇ ನೀಲಿ, ಕೇಸರಿ ಬಣ್ಣದ ತರ್ಕವೇನು?’: ಮಾಜಿ ಹಾಕಿ ಪಟು ಆಕ್ರೋಶ: ಬಿಜೆಪಿ ನಡೆಗೆ ವಿಪಕ್ಷಗಳ ಟೀಕೆ

ಭಾರತೀಯ ಕ್ರೀಡಾರಂಗದ ಹೆಮ್ಮೆಯ ಸಾಂಪ್ರದಾಯಿಕ 'ನೀಲಿ' (ಬ್ಲೂ) ಬಣ್ಣವನ್ನು ಕಳಚಿ, ಹಾಕಿ ತಂಡಕ್ಕೆ ಬಲವಂತವಾಗಿ ಕೇಸರಿ ಬಣ್ಣದ ಜೆರ್ಸಿ ತೊಡಿಸಲು ಹೊರಟಿರುವುದು ಇದೀಗ ತೀವ್ರ ಆಕ್ರೋಶಕ್ಕೆ ಕಾರಣವಾಗಿದೆ. ಮುಂಬರುವ ಎಫ್‌ಐಎಚ್ (FIH) ವಿಶ್ವಕಪ್‌ಗಾಗಿ...

ತಮಿಳುನಾಡು: ಶಾಲಾ ಮಕ್ಕಳಿಗೆ ವಾರಕ್ಕೊಮ್ಮೆ ಚಿಕನ್ ಬಿರಿಯಾನಿ ನೀಡಲು ಚಿಂತನೆ

ತಮಿಳುನಾಡಿನ ಸರ್ಕಾರಿ ಶಾಲೆಗಳ ಮಧ್ಯಾಹ್ನದ ಬಿಸಿಊಟದ ಯೋಜನೆಯಡಿಯಲ್ಲಿ ವಿದ್ಯಾರ್ಥಿಗಳಿಗೆ ವಾರಕ್ಕೊಮ್ಮೆ ಚಿಕನ್ ಬಿರಿಯಾನಿ ನೀಡುವ ಪ್ರಸ್ತಾವನೆಯನ್ನು ತಮಿಳುನಾಡು ಸರ್ಕಾರ ಪರಿಶೀಲಿಸುತ್ತಿದ್ದು, ಶಾಲಾ ಶಿಕ್ಷಣ ಸಚಿವ ರಾಜ್‌ಮೋಹನ್ ಅವರು ಈ ಕುರಿತು ಮುಖ್ಯಮಂತ್ರಿ ಸಿ....

ಪ್ರಶ್ನೆಪತ್ರಿಕೆ ಸೋರಿಕೆ ವಿರೋಧಿ ಮಸೂದೆಯಲ್ಲಿ ಸುಧಾರಣೆಗಳಿಲ್ಲ, ರಾಜಕೀಯ ಮಾತ್ರ: ಕೇಂದ್ರದ ವಿರುದ್ಧ ಖರ್ಗೆ ವಾಗ್ದಾಳಿ

ಪಬ್ಲಿಕ್ ಪರೀಕ್ಷೆಗಳ (ಅನ್ಯಾಯಯುತ ವಿಧಾನಗಳ ತಡೆಗಟ್ಟುವಿಕೆ) ತಿದ್ದುಪಡಿ ಮಸೂದೆ 2026 ರ ಚರ್ಚೆಯ ಸಂದರ್ಭದಲ್ಲಿ ಮಾತನಾಡಿದ ರಾಜ್ಯಸಭೆ ವಿರೋಧ ಪಕ್ಷದ ನಾಯಕ ಮಲ್ಲಿಕಾರ್ಜುನ ಖರ್ಗೆ ಕೇಂದ್ರ ಸರ್ಕಾರದ ಮೇಲೆ ತೀವ್ರ ವಾಗ್ದಾಳಿ ನಡೆಸಿದರು....

ವಿದ್ಯಾರ್ಥಿಗಳ ಮೇಲೆ ಪೆಲೆಟ್ ಗನ್ ಬಳಕೆ ಆರೋಪ; ಗೃಹ ಸಚಿವ ಅಮಿತ್‌ ಶಾ ಮೌನ ಪ್ರಶ್ನಿಸಿದ ಕಪಿಲ್ ಸಿಬಲ್

ಜುಲೈ 20 ರಂದು ದೆಹಲಿಯಲ್ಲಿ ನಡೆದ ಸಂಶತ್ ಚಲೋ ಪ್ರತಿಭಟನಾ ಮೆರವಣಿಗೆಯಲ್ಲಿ ವಿದ್ಯಾರ್ಥಿಗಳ ಮೇಲೆ ಪೆಲೆಟ್ ಗನ್ ಬಳಸಲಾಗಿದೆ ಎಂಬ ಆರೋಪದ ಬಗ್ಗೆ ಕೇಂದ್ರ ಗೃಹ ಸಚಿವ ಅಮಿತ್ ಶಾ ಅವರ ಮೌನವನ್ನು...