Homeಮುಖಪುಟಅಹಮದಾಬಾದ್| ಮ್ಯಾನ್‌ಹೋಲ್‌ನಲ್ಲಿ ಉಸಿರುಗಟ್ಟಿ ಇಬ್ಬರು ದಲಿತ ಯುವಕರು ಸಾವು

ಅಹಮದಾಬಾದ್| ಮ್ಯಾನ್‌ಹೋಲ್‌ನಲ್ಲಿ ಉಸಿರುಗಟ್ಟಿ ಇಬ್ಬರು ದಲಿತ ಯುವಕರು ಸಾವು

- Advertisement -
- Advertisement -

ಅಹಮದಾಬಾದ್‌ನ ಒಳಚರಂಡಿ ಸ್ವಚ್ಛಗೊಳಿಸುವಾಗ ಅಮೇಥಿಯ ಇಬ್ಬರು ದಲಿತ ಯುವಕರ ಸಾವನ್ನಪ್ಪಿದ್ದು, ಪ್ರಕರಣಕ್ಕೆ ಸಂಬಂಧಿಸಿದಂತೆ  ಎಂಜಿನಿಯರ್, ಗುತ್ತಿಗೆದಾರ ಸೇರಿದಂತೆ ಮೂವರ ವಿರುದ್ಧ ಪ್ರಕರಣ ದಾಖಲಿಸಲಾಗಿದೆ.

ನಗರದ ಬೋಪಾಲ್ ಪ್ರದೇಶದಲ್ಲಿ ಕೆಲಸ ಮಾಡುವಾಗ ವಿಕಾಸ್ ಲಾಲ್‌ಬಹಾದ್ದೂರ್ ಕೋರಿ (20) ಮತ್ತು ಕನ್ಹಯ್ಯಾಲಾಲ್ ಖುಷಿರಾಮ್ ಕೋರಿ (21) ಇಬ್ಬರೂ ಸೆಪ್ಟೆಂಬರ್ 5 ರಂದು ಸಾವನ್ನಪ್ಪಿದ್ದರು.

ಆರಂಭದಲ್ಲಿ ಗುತ್ತಿಗೆ ಕಾರ್ಮಿಕ ಮೇಲೆ ಮಾತ್ರ ಪ್ರಕರಣ ದಾಖಲಿಸಿ ಬಂಧಿಸಲಾಗಿತ್ತು, ಅಹಮದಾಬಾದ್ ಗ್ರಾಮೀಣ ಪೊಲೀಸರು ಈಗ ಈ ಪ್ರಕರಣದಲ್ಲಿ ಗುತ್ತಿಗೆದಾರ ಮತ್ತು ಎಂಜಿನಿಯರ್‌ಗಳ ಹೆಸರುಗಳನ್ನೂ ಪ್ರಕರಣದಲ್ಲಿ ಸೇರಿಸಿದ್ದಾರೆ; ಅವರನ್ನೂ ಬಂಧಿಸಲು ಬಲೆ ಬೀಸಿದ್ದಾರೆ.

ಮುಖೇಶ್‌ಕುಮಾರ್, ಸೋಮೇಶ್ವರ್ ಅದಾಲತ್ ಠಾಕೂರ್ ವಿರುದ್ಧ ಭಾರತೀಯ ನ್ಯಾಯ ಸಂಹಿತಾ (ಬಿಎನ್‌ಎಸ್) ಸೆಕ್ಷನ್‌ಗಳು 105 (ಕೊಲೆಗೆ ಸಮಾನವಲ್ಲದ ಅಪರಾಧಿ ನರಹತ್ಯೆ) ಮತ್ತು 125 (ಮಾನವ ಜೀವ ಅಥವಾ ವೈಯಕ್ತಿಕ ಸುರಕ್ಷತೆಗೆ ಅಪಾಯವನ್ನುಂಟುಮಾಡುವುದು), ಹಾಗೆಯೇ ಮ್ಯಾನುಯಲ್ ಸ್ಕ್ಯಾವೆಂಜರ್‌ಗಳ ಉದ್ಯೋಗ ನಿಷೇಧ ಮತ್ತು ಅವರ ಪುನರ್ವಸತಿ ಕಾಯ್ದೆಯ ಸೆಕ್ಷನ್ 7 ಮತ್ತು 9 ರ ಅಡಿಯಲ್ಲಿ ಪ್ರಕರಣ ದಾಖಲಿಸಲಾಗಿದೆ. ಅವರ ವಿರುದ್ಧ ದೌರ್ಜನ್ಯ ಕಾಯ್ದೆಯ ಸೆಕ್ಷನ್ 3(2)(v) ಅಡಿಯಲ್ಲಿಯೂ ಪ್ರಕರಣ ದಾಖಲಿಸಲಾಗಿದೆ.

ಉತ್ತರ ಪ್ರದೇಶದ ಅಮೇಥಿಯ ಲಾಲ್‌ಬಹಾದೂರ್ ಛೋಟೆಲಾಲ್ ಕೋರಿ (48) ಎಂಬುವರು ನೀಡಿದ ದೂರಿನ ಮೇರೆಗೆ ಬೋಪಾಲ್ ಪೊಲೀಸ್ ಠಾಣೆಯಲ್ಲಿ ಎಫ್‌ಐಆರ್ ದಾಖಲಿಸಲಾಗಿದೆ. ಅವರ ಮಗ ವಿಕಾಸ್ ಕಳೆದ ಮೂರು ವರ್ಷಗಳಿಂದ ಅಹಮದಾಬಾದ್‌ನಲ್ಲಿ ಪ್ಲಂಬರ್ ಆಗಿ ಕೆಲಸ ಮಾಡುತ್ತಿದ್ದ ಎಂದು ಎಫ್‌ಐಆರ್‌ನಲ್ಲಿ ಉಲ್ಲೇಖಿಸಲಾಗಿದೆ.

ಸೆಪ್ಟೆಂಬರ್ 6 ರಂದು, ಲಾಲ್‌ಬಹಾದೂರ್ ತನ್ನ ಸಂಬಂಧಿ ಅನೀಶ್‌ನಿಂದ ವಿಕಾಸ್ ಮತ್ತು ಅವನ ಸ್ನೇಹಿತ ಕನ್ಹಯ್ಯಾಲಾಲ್ ಅವರನ್ನು ಭೋಪಾಲ್‌ನ ‘ದಿ ಗಾರ್ಡನ್ ಬಂಗಲೋಸ್’ ಬಳಿಯ ಮ್ಯಾನ್‌ಹೋಲ್‌ಗೆ (ಒಳಚರಂಡಿ) ಇಳಿಯಲು ಒತ್ತಾಯಿಸಲಾಗಿದೆ. ಇಳಿದಕೂಡಲೇ ಅವರು ಅವರು ಪ್ರಜ್ಞಾಹೀನರಾಗಿದ್ದಾರೆ ಎಂದು ಕರೆ ಬಂದಿತು. ಚಿಕಿತ್ಸೆಗಾಗಿ ಆಂಬ್ಯುಲೆನ್ಸ್ ಮೂಲಕ ವಿಕಾಸ್ ಅವರನ್ನು ಆಸ್ಪತ್ರೆಗೆ ಸಾಗಿಸಲಾಗುವುದು ಎಂದು ಅವರಿಗೆ ತಿಳಿಸಲಾಯಿತು. ಆದದೆ, ಮರುದಿನ ಸೆಪ್ಟೆಂಬರ್ 7 ರಂದು ಆಂಬ್ಯುಲೆನ್ಸ್ ಅಮೇಥಿಯಲ್ಲಿರುವ ಅವರ ಮನೆಗೆ ತಲುಪಿದಾಗ, ವಾಹನದಿಂದ ಕೆಳಗಿಳಿಸಿದ್ದು ವಿಕಾಸ್‌ನ ನಿರ್ಜೀವ ದೇಹವನ್ನು ಎಂದು ಅವರು ಎಫ್‌ಐಆರ್‌ನಲ್ಲಿ ತಿಳಿಸಿದ್ದಾರೆ.

ವಿಕಾಸ್ ಸಾವಿನ ಬಗ್ಗೆ ಅನೀಶ್ ಅವರನ್ನು ಕೇಳಿದಾಗ, ಲಾಲ್‌ಬಹಾದ್ದೂರ್ ಅವರು ಎಫ್‌ಐಆರ್‌ನಲ್ಲಿ ಸೆಪ್ಟೆಂಬರ್ 5 ರಂದು ಮಧ್ಯಾಹ್ನ 1.30 ರ ಸುಮಾರಿಗೆ ಗುತ್ತಿಗೆದಾರ ಠಾಕೂರ್ ಯಂತ್ರ ತಂದು ವಿಕಾಸ್ ಅವರನ್ನು ಗಟಾರಕ್ಕೆ ಇಳಿಸಿ ಯಾವುದೇ ಸುರಕ್ಷತಾ ಸಾಧನಗಳನ್ನು ಒದಗಿಸದೆ ಅದನ್ನು ಸ್ವಚ್ಛಗೊಳಿಸಲು ಕೇಳಿಕೊಂಡಿದ್ದಾರೆ ಎಂದು ತಿಳಿದು ಬಂದಿದೆ ಎಂದು ಹೇಳಿದ್ದಾರೆ. ವಿಕಾಸ್ ಪ್ರಜ್ಞೆ ತಪ್ಪಿದಾಗ, ಕನ್ಹಯಲಾಲ್ ಅವರಿಗೆ ಸಹಾಯ ಮಾಡಲು ಒಳಗೆ ಹೋದರು. ಆದರೆ, ಅವರೂ ಸಹ ಮೂರ್ಛೆ ಹೋದರು. ಸ್ಥಳದಲ್ಲಿದ್ದ ಇತರ ಜನರು ನಂತರ ಅಗ್ನಿಶಾಮಕ ಇಲಾಖೆಗೆ ಕರೆ ಮಾಡಿ ಇಬ್ಬರನ್ನೂ ರಕ್ಷಿಸಿ ಹತ್ತಿರದ ಖಾಸಗಿ ಆಸ್ಪತ್ರೆಗೆ ಕರೆದೊಯ್ದರು.

ಕನ್ಹಯಲಾಲ್ ಮಧ್ಯಾಹ್ನ 3.40 ಕ್ಕೆ ಸಾವನ್ನಪ್ಪಿದ್ದಾರೆ ಎಂದು ಘೋಷಿಸಲ್ಪಟ್ಟರೆ, ವಿಕಾಸ್ ರಾತ್ರಿ 10.40 ಕ್ಕೆ ಕೊನೆಯುಸಿರೆಳೆದರು.

ಗುರುವಾರ, ಅಹಮದಾಬಾದ್ ಗ್ರಾಮೀಣ ಪೊಲೀಸರ ಎಸ್‌ಸಿ/ಎಸ್‌ಟಿ ಸೆಲ್‌ನ ಉಪ ಎಸ್‌ಪಿ (ಪೊಲೀಸ್ ವರಿಷ್ಠಾಧಿಕಾರಿ) ತಪನ್‌ಸಿನ್ಹ್ ದೋಡಿಯಾ ಅವರು ಮೃತ ಇಬ್ಬರು ವ್ಯಕ್ತಿಗಳನ್ನು ನಿರ್ಮಾಣ ಸ್ಥಳದ ಖಾಸಗಿ ಒಳಚರಂಡಿ ಮಾರ್ಗದಲ್ಲಿ ಕೆಲಸ ಮಾಡಲು ಗುತ್ತಿಗೆ ಪಡೆದಿದ್ದರು ಎಂದು ಹೇಳಿದರು.

“ಪ್ಲಂಬಿಂಗ್ ಕೆಲಸ ಮುಗಿಸಿದ ನಂತರ ಅವರು ಪುರಸಭೆಯ ಮುಖ್ಯ ಒಳಚರಂಡಿ ಮಾರ್ಗಕ್ಕೆ ಸಂಪರ್ಕಿಸಬೇಕಾಗಿತ್ತು. ಆದರೆ, ಮಳೆಯಿಂದಾಗಿ ಮಾರ್ಗವು ಮುಚ್ಚಿಹೋಗಿತ್ತು. ನಂತರ ಖಾಸಗಿ ಒಳಚರಂಡಿಯನ್ನು ಮುಖ್ಯ ಮಾರ್ಗಕ್ಕೆ ಸಂಪರ್ಕಿಸುವ ಮಾರ್ಗವನ್ನು ಸ್ವಚ್ಛಗೊಳಿಸಲು ಇಬ್ಬರನ್ನು ಕೇಳಲಾಗಿದೆ ಎಂದು ನಾವು ಕಂಡುಕೊಂಡಿದ್ದೇವೆ. ಈ ಸಂದರ್ಭದಲ್ಲಿ ಅವರ ಸಾವು ಸಂಭವಿಸಿದೆ” ಎಂದು ಅವರು ಹೇಳಿದರು.

ಗುಜರಾತ್ ಹೈಕೋರ್ಟ್‌ನಲ್ಲಿ ಪ್ರಸ್ತುತ ವಿಚಾರಣೆಯಲ್ಲಿರುವ ನೈರ್ಮಲ್ಯ ಕಾರ್ಮಿಕರ ಸಾವಿನ ಕುರಿತು ಪಿಐಎಲ್‌ನಲ್ಲಿ ಅರ್ಜಿದಾರನಾಗಿರುವ ಮಾನವ್ ಗರಿಮಾ ಎನ್‌ಜಿಒದ ಪರ್ಶೋತ್ತಮ್ ವಘೇಲಾ, “ಉಸ್ತುವಾರಿ ವಹಿಸಿಕೊಂಡಿರುವ ಸರ್ಕಾರಿ ಅಧಿಕಾರಿಗಳು ಸೇರಿದಂತೆ ಕಾರ್ಮಿಕರ ಸಾವಿಗೆ ಕಾರಣರಾದವರನ್ನು ಹೊಣೆಗಾರರನ್ನಾಗಿ ಮಾಡಬೇಕು ಎಂದು ಕಾನೂನು ಸ್ಪಷ್ಟವಾಗಿದೆ” ಎಂದು ಹೇಳಿದರು.

ಗುಜರಾತ್‌: ಕಳ್ಳತನ ಆರೋಪದಡಿ ಮುಸ್ಲಿಂ ಬಾಲಕನ ಮೇಲೆ ಪೊಲೀಸ್ ಕಸ್ಟಡಿಯಲ್ಲಿ ಚಿತ್ರಹಿಂಸೆ: ಶಾಸಕ ಜಿಗ್ನೇಶ್‌ ಮೇವಾನಿ  ಕ್ರಮಕ್ಕೆ ಆಗ್ರಹ

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ಕೇರಳ ಹೆಸರು ಇನ್ನು ಮುಂದೆ ‘ಕೇರಳಂ’; ಕೇಂದ್ರ ಸಚಿವ ಸಂಪುಟ ಅನುಮೋದನೆ

ವಿಧಾನಸಭೆ ಚುನಾವಣೆ ಸಮೀಪಿಸುತ್ತಿರುವ ಹೊತ್ತಿನಲ್ಲಿ ಮಹತ್ವದ ಬೆಳವಣಿಗೆಯೊಂದರಲ್ಲಿ, ರಾಜ್ಯದ ಹೆಸರನ್ನು ಕೇರಳಂ ಎಂದು ಬದಲಾಯಿಸುವ ಪ್ರಸ್ತಾವನೆಗೆ ಕೇಂದ್ರ ಸಚಿವ ಸಂಪುಟ ಮಂಗಳವಾರ ಅನುಮೋದನೆ ನೀಡಿದೆ. "ಕೇರಳವನ್ನು ಕೇರಳಂ ಎಂದು ಮರುನಾಮಕರಣ ಮಾಡಲು ಕೇಂದ್ರ...

ನಾಡೋಜ ಗೌರವ ತಿರಸ್ಕರಿಸಿದ ಹಿರಿಯ ಚಿಂತಕ ಡಾ ಜಿ. ರಾಮಕೃಷ್ಣ; ರಾಜ್ಯಪಾಲರಿಂದ ಗೌರವ ಸ್ವೀಕರಿಸದಿರಲು ನಿರ್ಧಾರ

ಹಿರಿಯ ಚಿಂತಕ ಡಾ.ಜಿ.ರಾಮಕೃಷ್ಣ ಅವರು ಹಂಪಿ ಕನ್ನಡ ವಿಶ್ವವಿದ್ಯಾಲಯ ಕೊಡಮಾಡುವ ನಾಡೋಜ ಪ್ರಶಸ್ತಿಯನ್ನು ರಾಜ್ಯಪಾಲರಿಂದ ಸ್ವೀಕರಿಸಲು ನಿರಾಕರಿಸಿದ್ದಾರೆ. ಹಂಪಿ ಕನ್ನಡ ವಿಶ್ವವಿದ್ಯಾಲಯದ ವಿದ್ಯಾರಣ್ಯ ಕ್ಯಾಂಪಸ್‌ನ ‘ನವರಂಗ’ ಬಯಲು ರಂಗಮಂದಿರದಲ್ಲಿ ಮಂಗಳವಾರ ನಡೆಯುವ 34ನೇ ನುಡಿಹಬ್ಬದಲ್ಲಿ...

‘ಕೇರಳ ಸಂಪೂರ್ಣ ಸಾಮರಸ್ಯದಿಂದ ಬದುಕುತ್ತಿದೆ, ಸಿನಿಮಾದಲ್ಲಿ ತಪ್ಪು ಚಿತ್ರಣವಿದೆ’: ‘ದಿ ಕೇರಳ ಸ್ಟೋರಿ 2’ ಕುರಿತು ಕೇರಳ ಹೈಕೋರ್ಟ್

ವಿವಾದಾತ್ಮಕ 'ದಿ ಕೇರಳ ಸ್ಟೋರಿ 2 -ಗೋಸ್ ಬಿಯಾಂಡ್' ಸಿನಿಮಾಗೆ ಸರ್ಟಿಫಿಕೇಟ್ ನೀಡಿರುವ ಕುರಿತು ಕೇರಳ ಹೈಕೋರ್ಟ್ ಮಂಗಳವಾರ (ಫೆ.24) ಕೇಂದ್ರ ಚಲನಚಿತ್ರ ಪ್ರಮಾಣೀಕರಣ ಮಂಡಳಿಯನ್ನು (ಸಿಬಿಎಫ್‌ಸಿ) ಪ್ರಶ್ನಿಸಿದೆ ಎಂದು ಕಾನೂನು ಸುದ್ದಿ...

‘ಸರ್ವಾಧಿಕಾರಿ ಪ್ರವೃತ್ತಿ, ಹೇಡಿತನಕ್ಕೆ ಸಾಕ್ಷಿ’ : ಯುವ ಕಾಂಗ್ರೆಸ್‌ ನಾಯಕರ ಬಂಧನ ಖಂಡಿಸಿದ ರಾಹುಲ್ ಗಾಂಧಿ

ಯುವ ಕಾಂಗ್ರೆಸ್ ರಾಷ್ಟ್ರೀಯ ಅಧ್ಯಕ್ಷ ಉದಯ್ ಭಾನು ಚಿಬ್ ಮತ್ತು ಪಕ್ಷದ ಇತರ ಸದಸ್ಯರ ಬಂಧನವನ್ನು ತೀವ್ರವಾಗಿ ಖಂಡಿಸಿರುವ ಲೋಕಸಭೆಯ ವಿರೋಧ ಪಕ್ಷದ ನಾಯಕ ರಾಹುಲ್ ಗಾಂಧಿ, "ಇದು ಸರ್ವಾಧಿಕಾರಿ ಪ್ರವೃತ್ತಿ ಮತ್ತು...

‘ಸ್ವಾತಂತ್ರ್ಯದ 75 ವರ್ಷಗಳ ನಂತರವೂ ಭಾರತದ ಸಾಮಾಜಿಕ ರಚನೆಯಲ್ಲಿ ಬಿರುಕುಗಳು ಆಳವಾಗಿ ಅಡಗಿದೆ’; ನ್ಯಾಯಮೂರ್ತಿ ಉಜ್ವಲ್  ಭೂಯಾನ್

ಹೊಸದಿಲ್ಲಿ: ಭಾರತದ ಸಂವಿಧಾನವು ಪ್ರತಿಯೊಬ್ಬರಿಗೂ ಸಮಾನತೆ ಮತ್ತು ಘನತೆಯ ಭರವಸೆ ನೀಡುತ್ತದೆ. ಆದರೆ ಸ್ವಾತಂತ್ರ್ಯದ 75 ವರ್ಷಗಳ ನಂತರವೂ ಭಾರತದ ಸಾಮಾಜಿಕ ರಚನೆಯಲ್ಲಿ ಬಿರುಕುಗಳು ಆಳವಾಗಿ ಅಡಗಿದೆ ಎಂದು ಸುಪ್ರೀಂ ಕೋರ್ಟ್ ನ್ಯಾಯಮೂರ್ತಿ...

ಹೈದರಾಬಾದ್ ವಿಶ್ವವಿದ್ಯಾಲಯದಲ್ಲಿ ದಲಿತ ವಿದ್ಯಾರ್ಥಿಯ ಮೇಲೆ ಹಲ್ಲೆ ಆರೋಪ; ಎಎಸ್ಎ ಪ್ರತಿಭಟನೆ

ದಲಿತ ವಿದ್ಯಾರ್ಥಿಯ ಮೇಲೆ ಜಾತಿ ಆಧಾರಿತ ಹಲ್ಲೆ ನಡೆದಿದ್ದರೂ ಪ್ರಕರಣದಲ್ಲಿ ಹೈದರಾಬಾದ್ ವಿಶ್ವವಿದ್ಯಾಲಯದ (ಯುಒಎಚ್) ಆಡಳಿತಾತ್ಮಕ ನಿಷ್ಕ್ರಿಯತೆ ಇದೆ ಎಂದು ಆರೋಪಿಸಿ, ಅಂಬೇಡ್ಕರ್ ವಿದ್ಯಾರ್ಥಿ ಸಂಘ (ಎಎಸ್ಎ) ಸೋಮವಾರ (ಫೆ.23) ಪ್ರತಿಭಟನೆ ನಡೆಸಿತು...

ಎಐ ಶೃಂಗಸಭೆಯಲ್ಲಿ ಪ್ರತಿಭಟನೆ : ಯುವ ಕಾಂಗ್ರೆಸ್ ರಾಷ್ಟ್ರೀಯ ಅಧ್ಯಕ್ಷ ಉದಯ್ ಭಾನು ಬಂಧನ

ಭಾರತೀಯ ಯುವ ಕಾಂಗ್ರೆಸ್ (ಐವೈಸಿ) ರಾಷ್ಟ್ರೀಯ ಅಧ್ಯಕ್ಷ ಉದಯ್ ಭಾನು ಚಿಬ್ ಅವರನ್ನು ದೆಹಲಿ ಪೊಲೀಸರು ಮಂಗಳವಾರ (ಫೆ. 24) ಮುಂಜಾನೆ ಸುಮಾರು 4:30ಕ್ಕೆ ಬಂಧಿಸಿದ್ದಾರೆ. ಕಳೆದ ವಾರ ದೆಹಲಿಯ ಭಾರತ್ ಮಂಟಪದಲ್ಲಿ ನಡೆದ...

ಭೂ ವಿವಾದದಲ್ಲಿ ಸಹೋದರರ ಹತ್ಯೆ; ಒಂದೇ ಕುಟುಂಬದ 13 ಮಂದಿಗೆ ಜೀವಾವಧಿ ಶಿಕ್ಷೆ

ಭೂ ವಿವಾದಕ್ಕೆ ಸಂಬಂಧಿಸಿದಂತೆ ಸುಮಾರು 10 ವರ್ಷಗಳ ಹಿಂದೆ ಇಬ್ಬರು ಸಹೋದರರನ್ನು ಹತ್ಯೆಗೈದ ಪ್ರಕರಣದಲ್ಲಿ ಒಂದೇ ಕುಟುಂಬದ 13 ಮಂದಿಗೆ ಉತ್ತರ ಪ್ರದೇಶದ ಸಹರಾನ್‌ಪುರದ ಸ್ಥಳೀಯ ನ್ಯಾಯಾಲಯ ಜೀವಾವಧಿ ಶಿಕ್ಷೆ ವಿಧಿಸಿದೆ ಎಂದು...

ಉತ್ತರ ಪ್ರದೇಶ: ಬಜರಂಗದಳ ದೂರಿನ ಮೇರೆಗೆ ಮತಾಂತರ ವಿರೋಧಿ ಕಾನೂನಿನಡಿಯಲ್ಲಿ ಕೇರಳ ಮೂಲದ ಪಾದ್ರಿಯ ಬಂಧನ

ಬಜರಂಗದಳ ಸದಸ್ಯರು ನೀಡಿದ ದೂರಿನ ಮೇರೆಗೆ ಧಾರ್ಮಿಕ ಮತಾಂತರದ ಆರೋಪದ ಮೇಲೆ ಕೇರಳದ ಪಾದ್ರಿಯೊಬ್ಬರನ್ನು ಉತ್ತರ ಪ್ರದೇಶದಲ್ಲಿ ಬಂಧಿಸಲಾಗಿದೆ ಎಂದು ಪೊಲೀಸ್ ಅಧಿಕಾರಿಗಳು ತಿಳಿಸಿದ್ದಾರೆ. ಪೊಲೀಸರ ಪ್ರಕಾರ, ತಿರುವನಂತಪುರಂ ಮೂಲದ ಪಾದ್ರಿ ಜೋಸ್ ಥಾಮಸ್,...

‘ನಾಚಿಕೆಗೇಡು ಅಂದ್ರೇನು ನಾನು ಹೇಳ್ತೇನೆ’: ಅಮೆರಿಕ ವ್ಯಾಪಾರ ಒಪ್ಪಂದ, ಎಪ್‌ಸ್ಟೀನ್ ಫೈಲ್ಸ್ ಉಲ್ಲೇಖಿಸಿ ಮೋದಿ ವಿರುದ್ಧ ರಾಹುಲ್ ಗಾಂಧಿ ವಾಗ್ದಾಳಿ

ಎಐ ಶೃಂಗಸಭೆಯಲ್ಲಿ ಯುವ ಕಾಂಗ್ರೆಸ್‌ ಕಾರ್ಯಕರ್ತರು ಶರ್ಟ್‌ ಬಿಚ್ಚಿ ಪ್ರತಿಭಟಿಸಿದ್ದನ್ನು 'ಗಲೀಜು, ನಾಚಿಕೆಗೇಡು'ಎಂದಿದ್ದ ಪ್ರಧಾನಿ ನರೇಂದ್ರ ಮೋದಿಯವರಿಗೆ ವಿಪಕ್ಷ ನಾಯಕ ರಾಹುಲ್ ಗಾಂಧಿ ತಿರುಗೇಟು ನೀಡಿದ್ದಾರೆ. ವಿಡಿಯೋ ಮೂಲಕ ಪ್ರತಿಕ್ರಿಯಿಸಿರುವ ರಾಹುಲ್ ಗಾಂಧಿ, "ಪ್ರಧಾನಿ...