Homeಮುಖಪುಟಅಹಮದಾಬಾದ್| ಮ್ಯಾನ್‌ಹೋಲ್‌ನಲ್ಲಿ ಉಸಿರುಗಟ್ಟಿ ಇಬ್ಬರು ದಲಿತ ಯುವಕರು ಸಾವು

ಅಹಮದಾಬಾದ್| ಮ್ಯಾನ್‌ಹೋಲ್‌ನಲ್ಲಿ ಉಸಿರುಗಟ್ಟಿ ಇಬ್ಬರು ದಲಿತ ಯುವಕರು ಸಾವು

- Advertisement -
- Advertisement -

ಅಹಮದಾಬಾದ್‌ನ ಒಳಚರಂಡಿ ಸ್ವಚ್ಛಗೊಳಿಸುವಾಗ ಅಮೇಥಿಯ ಇಬ್ಬರು ದಲಿತ ಯುವಕರ ಸಾವನ್ನಪ್ಪಿದ್ದು, ಪ್ರಕರಣಕ್ಕೆ ಸಂಬಂಧಿಸಿದಂತೆ  ಎಂಜಿನಿಯರ್, ಗುತ್ತಿಗೆದಾರ ಸೇರಿದಂತೆ ಮೂವರ ವಿರುದ್ಧ ಪ್ರಕರಣ ದಾಖಲಿಸಲಾಗಿದೆ.

ನಗರದ ಬೋಪಾಲ್ ಪ್ರದೇಶದಲ್ಲಿ ಕೆಲಸ ಮಾಡುವಾಗ ವಿಕಾಸ್ ಲಾಲ್‌ಬಹಾದ್ದೂರ್ ಕೋರಿ (20) ಮತ್ತು ಕನ್ಹಯ್ಯಾಲಾಲ್ ಖುಷಿರಾಮ್ ಕೋರಿ (21) ಇಬ್ಬರೂ ಸೆಪ್ಟೆಂಬರ್ 5 ರಂದು ಸಾವನ್ನಪ್ಪಿದ್ದರು.

ಆರಂಭದಲ್ಲಿ ಗುತ್ತಿಗೆ ಕಾರ್ಮಿಕ ಮೇಲೆ ಮಾತ್ರ ಪ್ರಕರಣ ದಾಖಲಿಸಿ ಬಂಧಿಸಲಾಗಿತ್ತು, ಅಹಮದಾಬಾದ್ ಗ್ರಾಮೀಣ ಪೊಲೀಸರು ಈಗ ಈ ಪ್ರಕರಣದಲ್ಲಿ ಗುತ್ತಿಗೆದಾರ ಮತ್ತು ಎಂಜಿನಿಯರ್‌ಗಳ ಹೆಸರುಗಳನ್ನೂ ಪ್ರಕರಣದಲ್ಲಿ ಸೇರಿಸಿದ್ದಾರೆ; ಅವರನ್ನೂ ಬಂಧಿಸಲು ಬಲೆ ಬೀಸಿದ್ದಾರೆ.

ಮುಖೇಶ್‌ಕುಮಾರ್, ಸೋಮೇಶ್ವರ್ ಅದಾಲತ್ ಠಾಕೂರ್ ವಿರುದ್ಧ ಭಾರತೀಯ ನ್ಯಾಯ ಸಂಹಿತಾ (ಬಿಎನ್‌ಎಸ್) ಸೆಕ್ಷನ್‌ಗಳು 105 (ಕೊಲೆಗೆ ಸಮಾನವಲ್ಲದ ಅಪರಾಧಿ ನರಹತ್ಯೆ) ಮತ್ತು 125 (ಮಾನವ ಜೀವ ಅಥವಾ ವೈಯಕ್ತಿಕ ಸುರಕ್ಷತೆಗೆ ಅಪಾಯವನ್ನುಂಟುಮಾಡುವುದು), ಹಾಗೆಯೇ ಮ್ಯಾನುಯಲ್ ಸ್ಕ್ಯಾವೆಂಜರ್‌ಗಳ ಉದ್ಯೋಗ ನಿಷೇಧ ಮತ್ತು ಅವರ ಪುನರ್ವಸತಿ ಕಾಯ್ದೆಯ ಸೆಕ್ಷನ್ 7 ಮತ್ತು 9 ರ ಅಡಿಯಲ್ಲಿ ಪ್ರಕರಣ ದಾಖಲಿಸಲಾಗಿದೆ. ಅವರ ವಿರುದ್ಧ ದೌರ್ಜನ್ಯ ಕಾಯ್ದೆಯ ಸೆಕ್ಷನ್ 3(2)(v) ಅಡಿಯಲ್ಲಿಯೂ ಪ್ರಕರಣ ದಾಖಲಿಸಲಾಗಿದೆ.

ಉತ್ತರ ಪ್ರದೇಶದ ಅಮೇಥಿಯ ಲಾಲ್‌ಬಹಾದೂರ್ ಛೋಟೆಲಾಲ್ ಕೋರಿ (48) ಎಂಬುವರು ನೀಡಿದ ದೂರಿನ ಮೇರೆಗೆ ಬೋಪಾಲ್ ಪೊಲೀಸ್ ಠಾಣೆಯಲ್ಲಿ ಎಫ್‌ಐಆರ್ ದಾಖಲಿಸಲಾಗಿದೆ. ಅವರ ಮಗ ವಿಕಾಸ್ ಕಳೆದ ಮೂರು ವರ್ಷಗಳಿಂದ ಅಹಮದಾಬಾದ್‌ನಲ್ಲಿ ಪ್ಲಂಬರ್ ಆಗಿ ಕೆಲಸ ಮಾಡುತ್ತಿದ್ದ ಎಂದು ಎಫ್‌ಐಆರ್‌ನಲ್ಲಿ ಉಲ್ಲೇಖಿಸಲಾಗಿದೆ.

ಸೆಪ್ಟೆಂಬರ್ 6 ರಂದು, ಲಾಲ್‌ಬಹಾದೂರ್ ತನ್ನ ಸಂಬಂಧಿ ಅನೀಶ್‌ನಿಂದ ವಿಕಾಸ್ ಮತ್ತು ಅವನ ಸ್ನೇಹಿತ ಕನ್ಹಯ್ಯಾಲಾಲ್ ಅವರನ್ನು ಭೋಪಾಲ್‌ನ ‘ದಿ ಗಾರ್ಡನ್ ಬಂಗಲೋಸ್’ ಬಳಿಯ ಮ್ಯಾನ್‌ಹೋಲ್‌ಗೆ (ಒಳಚರಂಡಿ) ಇಳಿಯಲು ಒತ್ತಾಯಿಸಲಾಗಿದೆ. ಇಳಿದಕೂಡಲೇ ಅವರು ಅವರು ಪ್ರಜ್ಞಾಹೀನರಾಗಿದ್ದಾರೆ ಎಂದು ಕರೆ ಬಂದಿತು. ಚಿಕಿತ್ಸೆಗಾಗಿ ಆಂಬ್ಯುಲೆನ್ಸ್ ಮೂಲಕ ವಿಕಾಸ್ ಅವರನ್ನು ಆಸ್ಪತ್ರೆಗೆ ಸಾಗಿಸಲಾಗುವುದು ಎಂದು ಅವರಿಗೆ ತಿಳಿಸಲಾಯಿತು. ಆದದೆ, ಮರುದಿನ ಸೆಪ್ಟೆಂಬರ್ 7 ರಂದು ಆಂಬ್ಯುಲೆನ್ಸ್ ಅಮೇಥಿಯಲ್ಲಿರುವ ಅವರ ಮನೆಗೆ ತಲುಪಿದಾಗ, ವಾಹನದಿಂದ ಕೆಳಗಿಳಿಸಿದ್ದು ವಿಕಾಸ್‌ನ ನಿರ್ಜೀವ ದೇಹವನ್ನು ಎಂದು ಅವರು ಎಫ್‌ಐಆರ್‌ನಲ್ಲಿ ತಿಳಿಸಿದ್ದಾರೆ.

ವಿಕಾಸ್ ಸಾವಿನ ಬಗ್ಗೆ ಅನೀಶ್ ಅವರನ್ನು ಕೇಳಿದಾಗ, ಲಾಲ್‌ಬಹಾದ್ದೂರ್ ಅವರು ಎಫ್‌ಐಆರ್‌ನಲ್ಲಿ ಸೆಪ್ಟೆಂಬರ್ 5 ರಂದು ಮಧ್ಯಾಹ್ನ 1.30 ರ ಸುಮಾರಿಗೆ ಗುತ್ತಿಗೆದಾರ ಠಾಕೂರ್ ಯಂತ್ರ ತಂದು ವಿಕಾಸ್ ಅವರನ್ನು ಗಟಾರಕ್ಕೆ ಇಳಿಸಿ ಯಾವುದೇ ಸುರಕ್ಷತಾ ಸಾಧನಗಳನ್ನು ಒದಗಿಸದೆ ಅದನ್ನು ಸ್ವಚ್ಛಗೊಳಿಸಲು ಕೇಳಿಕೊಂಡಿದ್ದಾರೆ ಎಂದು ತಿಳಿದು ಬಂದಿದೆ ಎಂದು ಹೇಳಿದ್ದಾರೆ. ವಿಕಾಸ್ ಪ್ರಜ್ಞೆ ತಪ್ಪಿದಾಗ, ಕನ್ಹಯಲಾಲ್ ಅವರಿಗೆ ಸಹಾಯ ಮಾಡಲು ಒಳಗೆ ಹೋದರು. ಆದರೆ, ಅವರೂ ಸಹ ಮೂರ್ಛೆ ಹೋದರು. ಸ್ಥಳದಲ್ಲಿದ್ದ ಇತರ ಜನರು ನಂತರ ಅಗ್ನಿಶಾಮಕ ಇಲಾಖೆಗೆ ಕರೆ ಮಾಡಿ ಇಬ್ಬರನ್ನೂ ರಕ್ಷಿಸಿ ಹತ್ತಿರದ ಖಾಸಗಿ ಆಸ್ಪತ್ರೆಗೆ ಕರೆದೊಯ್ದರು.

ಕನ್ಹಯಲಾಲ್ ಮಧ್ಯಾಹ್ನ 3.40 ಕ್ಕೆ ಸಾವನ್ನಪ್ಪಿದ್ದಾರೆ ಎಂದು ಘೋಷಿಸಲ್ಪಟ್ಟರೆ, ವಿಕಾಸ್ ರಾತ್ರಿ 10.40 ಕ್ಕೆ ಕೊನೆಯುಸಿರೆಳೆದರು.

ಗುರುವಾರ, ಅಹಮದಾಬಾದ್ ಗ್ರಾಮೀಣ ಪೊಲೀಸರ ಎಸ್‌ಸಿ/ಎಸ್‌ಟಿ ಸೆಲ್‌ನ ಉಪ ಎಸ್‌ಪಿ (ಪೊಲೀಸ್ ವರಿಷ್ಠಾಧಿಕಾರಿ) ತಪನ್‌ಸಿನ್ಹ್ ದೋಡಿಯಾ ಅವರು ಮೃತ ಇಬ್ಬರು ವ್ಯಕ್ತಿಗಳನ್ನು ನಿರ್ಮಾಣ ಸ್ಥಳದ ಖಾಸಗಿ ಒಳಚರಂಡಿ ಮಾರ್ಗದಲ್ಲಿ ಕೆಲಸ ಮಾಡಲು ಗುತ್ತಿಗೆ ಪಡೆದಿದ್ದರು ಎಂದು ಹೇಳಿದರು.

“ಪ್ಲಂಬಿಂಗ್ ಕೆಲಸ ಮುಗಿಸಿದ ನಂತರ ಅವರು ಪುರಸಭೆಯ ಮುಖ್ಯ ಒಳಚರಂಡಿ ಮಾರ್ಗಕ್ಕೆ ಸಂಪರ್ಕಿಸಬೇಕಾಗಿತ್ತು. ಆದರೆ, ಮಳೆಯಿಂದಾಗಿ ಮಾರ್ಗವು ಮುಚ್ಚಿಹೋಗಿತ್ತು. ನಂತರ ಖಾಸಗಿ ಒಳಚರಂಡಿಯನ್ನು ಮುಖ್ಯ ಮಾರ್ಗಕ್ಕೆ ಸಂಪರ್ಕಿಸುವ ಮಾರ್ಗವನ್ನು ಸ್ವಚ್ಛಗೊಳಿಸಲು ಇಬ್ಬರನ್ನು ಕೇಳಲಾಗಿದೆ ಎಂದು ನಾವು ಕಂಡುಕೊಂಡಿದ್ದೇವೆ. ಈ ಸಂದರ್ಭದಲ್ಲಿ ಅವರ ಸಾವು ಸಂಭವಿಸಿದೆ” ಎಂದು ಅವರು ಹೇಳಿದರು.

ಗುಜರಾತ್ ಹೈಕೋರ್ಟ್‌ನಲ್ಲಿ ಪ್ರಸ್ತುತ ವಿಚಾರಣೆಯಲ್ಲಿರುವ ನೈರ್ಮಲ್ಯ ಕಾರ್ಮಿಕರ ಸಾವಿನ ಕುರಿತು ಪಿಐಎಲ್‌ನಲ್ಲಿ ಅರ್ಜಿದಾರನಾಗಿರುವ ಮಾನವ್ ಗರಿಮಾ ಎನ್‌ಜಿಒದ ಪರ್ಶೋತ್ತಮ್ ವಘೇಲಾ, “ಉಸ್ತುವಾರಿ ವಹಿಸಿಕೊಂಡಿರುವ ಸರ್ಕಾರಿ ಅಧಿಕಾರಿಗಳು ಸೇರಿದಂತೆ ಕಾರ್ಮಿಕರ ಸಾವಿಗೆ ಕಾರಣರಾದವರನ್ನು ಹೊಣೆಗಾರರನ್ನಾಗಿ ಮಾಡಬೇಕು ಎಂದು ಕಾನೂನು ಸ್ಪಷ್ಟವಾಗಿದೆ” ಎಂದು ಹೇಳಿದರು.

ಗುಜರಾತ್‌: ಕಳ್ಳತನ ಆರೋಪದಡಿ ಮುಸ್ಲಿಂ ಬಾಲಕನ ಮೇಲೆ ಪೊಲೀಸ್ ಕಸ್ಟಡಿಯಲ್ಲಿ ಚಿತ್ರಹಿಂಸೆ: ಶಾಸಕ ಜಿಗ್ನೇಶ್‌ ಮೇವಾನಿ  ಕ್ರಮಕ್ಕೆ ಆಗ್ರಹ

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

SIR: ಕೇಂದ್ರ ಸರ್ಕಾರದ SIRಗೆ ಕೌಂಟರ್‌, ಮಹತ್ವದ ಆದೇಶಗಳನ್ನು ಹೊರಡಿಸಿದ ಕರ್ನಾಟಕ ಸರ್ಕಾರ

ಕೇಂದ್ರ ಸರ್ಕಾರ ಚುನಾವಣಾ ಆಯೋಗದ ಮೂಲಕ ನಡೆಸುತ್ತಿರುವ ವಿಶೇಷ ಮತದಾರ ಪಟ್ಟಿ ಪರಿಷ್ಕರಣೆ ಕುರಿತಂತೆ ದೇಶದಾದ್ಯಂತ ಭಾರೀ ವಿರೋಧ ವ್ಯಕ್ತವಾಗಿದ್ದವು. ಸುಪ್ರೀಂ ಕೋರ್ಟ್‌ ಆ ಪ್ರಕ್ರಿಯೆಯನ್ನು ಮಾನ್ಯ ಮಾಡಿತ್ತು. ಕರ್ನಾಟಕದಲ್ಲಿ ನಾಳೆಯಿಂದ (ಜೂನ್.30)‌...

ರಾಮಮಂದಿರದ ದೇಣಿಗೆ ಕಳ್ಳತನ: ಆರೋಪಿಗಳ ಪರ ಯಾವುದೇ ವಕೀಲರು ವಾದಿಸುವಂತಿಲ್ಲ , ವಾದಿಸಿದರೆ ರೂ. 5ಲಕ್ಷ ದಂಡ

ರಾಮಮಂದಿರದ ದೇಣಿಗೆ ಕಳ್ಳತನ ಪ್ರಕರಣದಲ್ಲಿ ಬಂಧಿತರಾಗಿರುವ ಆರೋಪಿಗಳ ಪರವಾಗಿ ಯಾವುದೇ ವಕೀಲರು ನ್ಯಾಯಾಲಯದಲ್ಲಿ ವಕಾಲತ್ತು ವಹಿಸಬಾರದು ಎಂದು ಅಯೋಧ್ಯೆ ಬಾರ್ ಅಸೋಸಿಯೇಷನ್ ಮಹತ್ವದ ನಿರ್ಧಾರ ಕೈಗೊಂಡಿದೆ. ಒಂದು ವೇಳೆ ಸಂಘದ ಈ ತೀರ್ಮಾನವನ್ನು...

ವೋಟರ್ ಲಿಸ್ಟ್‌ನಿಂದ ಹೆಸರು ಡಿಲೀಟ್: ದಿ ಟೆಲಿಗ್ರಾಫ್’ ಪತ್ರಿಕೆಯ ಮಾಜಿ ಸಂಪಾದಕ ರಾಜಗೋಪಾಲ್ ಪಾಸ್‌ಪೋರ್ಟ್ ನವೀಕರಣಕ್ಕೆ ಬ್ರೇಕ್! ಬಂಗಾಳ ಸಿಎಂ ಗೆ ಪತ್ರ ಬರೆದ ಕೇರಳ ಸಿಎಂ

ಹಿರಿಯ ಪತ್ರಕರ್ತ ಮತ್ತು ‘ದಿ ಟೆಲಿಗ್ರಾಫ್’ ಪತ್ರಿಕೆಯ ಮಾಜಿ ಸಂಪಾದಕ ರಾಜಗೋಪಾಲ್ ರಾಮದಾಸ್ ಅವರ ಪಾಸ್‌ಪೋರ್ಟ್ ನವೀಕರಣ ವಿವಾದವು ಸೋಮವಾರ ಮತ್ತಷ್ಟು ತೀವ್ರಗೊಂಡಿದೆ. ಈ ಸಮಸ್ಯೆಯನ್ನು ತಕ್ಷಣವೇ ಬಗೆಹರಿಸಲು ಮಧ್ಯಪ್ರವೇಶಿಸಬೇಕು ಎಂದು ಕೋರಿ...

ರಾಮ ಮಂದಿರ ದೇಣಿಗೆ ಹಗರಣ: ಅರ್ಜಿ ವಿಚಾರಣೆ ಕೆಲ ದಿನ ತಡವಾದರೆ ‘ಆಕಾಶವೇನೂ ಉರುಳಿ ಬೀಳುವುದಿಲ್ಲ’ ಎಂದ ಸುಪ್ರೀಂ ಕೋರ್ಟ್

ಅಯೋಧ್ಯೆಯ ರಾಮ ಮಂದಿರಕ್ಕೆ ಭಕ್ತರಿಂದ ಬಂದ ದೇಣಿಗೆ ಹಣ ದುರುಪಯೋಗ ಆಗಿರುವ ಕುರಿತು ಸಿಬಿಐ ನೇತೃತ್ವದ ಬಹು-ಸಂಸ್ಥೆಗಳ ಜಂಟಿ ತನಿಖೆಗೆ ಆದೇಶಿಸಬೇಕೆಂದು ಕೋರಿ ಸಲ್ಲಿಕೆಯಾಗಿದ್ದ ಅರ್ಜಿಗಳ ತುರ್ತು ವಿಚಾರಣೆಯನ್ನು ಸುಪ್ರೀಂ ಕೋರ್ಟ್ ಸೋಮವಾರ...

ಕಾಕ್ರೋಚ್ ಪಾರ್ಟಿ ಧರಣಿ : ಅನಿರ್ದಿಷ್ಟಾವಧಿ ಉಪವಾಸ ಸತ್ಯಾಗ್ರಹ ಆರಂಭಿಸಿದ ಸೋನಮ್ ವಾಂಗ್‌ಚುಕ್

ನೀಟ್ ಸೇರಿದಂತೆ ವಿವಿಧ ಪರೀಕ್ಷೆಗಳ ಪ್ರಶ್ನೆ ಪತ್ರಿಕೆ ಸೋರಿಕೆ, ಹಲವು ಅಕ್ರಮ, ಶೈಕ್ಷಣಿಕ ಅವ್ಯವಸ್ಥೆಗಳ ಹೊಣೆ ಹೊತ್ತು ಕೇಂದ್ರ ಶಿಕ್ಷಣ ಸಚಿವ ಧರ್ಮೇಂದ್ರ ಪ್ರಧಾನ್ ರಾಜೀನಾಮೆ ನೀಡಬೇಕು ಎಂದು ಒತ್ತಾಯಿಸಿ ಕಾಕ್ರೋಚ್ ಜನತಾ...

SIR ವೇಳೆ ಮತಪಟ್ಟಿಯಿಂದ ಹೆಸರು ಡಿಲೀಟ್: ‘ದಿ ಟೆಲಿಗ್ರಾಫ್’ ಮಾಜಿ ಸಂಪಾದಕ ರಾಜಗೋಪಾಲ್ ಪಾಸ್‌ಪೋರ್ಟ್ ನವೀಕರಣಕ್ಕೆ ತಡೆ

ವಿಶೇಷ ತೀವ್ರ ಪರಿಷ್ಕರಣೆ (ಎಸ್‌ಐಆರ್‌) ವೇಳೆ ಮತದಾರರ ಪಟ್ಟಿಯಿಂದ ಹೆಸರು ತೆಗೆದುಹಾಕಿದ ಕಾರಣ ಪಾಸ್‌ಪೋರ್ಟ್ ನವೀಕರಿಸಲು ಆಗುತ್ತಿಲ್ಲ ಎಂದು ದೇಶದ ಖ್ಯಾತ ಇಂಗ್ಲಿಷ್ ದಿನಪತ್ರಿಕೆ ‘ದಿ ಟೆಲಿಗ್ರಾಫ್’ನ ಮಾಜಿ ಸಂಪಾದಕ ಆರ್. ರಾಜಗೋಪಾಲ್...

‘ಈಗಲೂ ಮಮತಾ ಬ್ಯಾನರ್ಜಿಯೇ ನಮ್ಮ ನಾಯಕಿ’ : ಟಿಎಂಸಿ ಬಂಡಾಯ ಬಣದ ಅಧ್ಯಕ್ಷ ಅರೂಪ್ ರಾಯ್ ಹೇಳಿಕೆ

"ಮಮತಾ ಬ್ಯಾನರ್ಜಿ ಅವರೇ ಇಂದಿಗೂ ನಮ್ಮ ನಾಯಕಿ. ಅವರೇ ಈ ಪಕ್ಷವನ್ನು ಸ್ಥಾಪಿಸಿದವರು. ಅವರೇ ನಮ್ಮ ಪಕ್ಷದ ಕಾಂದಾರಿ (ಮಾರ್ಗದರ್ಶಕರು ಅಥವಾ ಪಕ್ಷವನ್ನು ಮುನ್ನಡೆಸುವವರು). ಮಮತಾ ಬ್ಯಾನರ್ಜಿ ಅವರಿಂದಾಗಿಯೇ ನಾವು ಈ ಪಕ್ಷವನ್ನು...

ಪಶ್ಚಿಮ ಬಂಗಾಳದ ಆಹಾರ ಸಂಸ್ಕೃತಿಯನ್ನು ಗೌರವಿಸುತ್ತೇವೆ ಎಂಬ ಬಿಜೆಪಿಯ ಚುನಾವಣಾ ಭರವಸೆಗೆ ಈಗ ‘ಮೊಟ್ಟೆ’ ಮೊದಲ ಬಲಿ

ಚುನಾವಣಾ ಸಮಯದಲ್ಲಿ, ಬಿಜೆಪಿ ಪರಿಸ್ಥಿತಿಯನ್ನು ಮತ್ತು ಮೀನಿನ ಮಾರುಕಟ್ಟೆಯ ನಾಡಿಮಿಡಿತವನ್ನು ಸರಿಯಾಗಿಯೇ ಅರ್ಥಮಾಡಿಕೊಂಡಿತ್ತು. ಅವರ ನಾಯಕರು ಟಿವಿ ಕ್ಯಾಮೆರಾಗಳ ಮುಂದೆ ಮೀನುಗಳನ್ನು ಪ್ರದರ್ಶಿಸಿದರು ಮತ್ತು ಕುರಿ ಮಾಂಸದೂಟವನ್ನು ಸವಿದಿದ್ದರು. ಬಂಗಾಳಿಗಳ ತಟ್ಟೆಗೆ (ಆಹಾರಕ್ಕೆ)...

24 ಗಂಟೆಗೂ ಮೊದಲೇ ಮಹಾರಾಷ್ಟ್ರದಲ್ಲಿ TET ಪ್ರಶ್ನೆ ಪತ್ರಿಕೆ ಸೋರಿಕೆ: ರದ್ದಾದ ಪರೀಕ್ಷೆ

ಮಹಾರಾಷ್ಟ್ರದಲ್ಲಿ ಮತ್ತೊಂದು ಪರೀಕ್ಷಾ ಅಕ್ರಮದ ಆಘಾತಕಾರಿ ಘಟನೆ ಬೆಳಕಿಗೆ ಬಂದಿದೆ. ಜೂನ್ 28ರ ಭಾನುವಾರ ನಡೆಯಬೇಕಿದ್ದ ‘ಶಿಕ್ಷಕರ ಅರ್ಹತಾ ಪರೀಕ್ಷೆ’ (TET) ಆರಂಭಕ್ಕೆ ಕೇವಲ 24 ಗಂಟೆಗಳ ಮುನ್ನವೇ ಪ್ರಶ್ನೆ ಪತ್ರಿಕೆ ಸೋರಿಕೆಯಾದ...

ಸೌತೆಕಾಯಿ ಕೃಷಿಗೆ ತನ್ನ ಸಚಿವಾಲಯದಿಂದಲೇ ₹99 ಲಕ್ಷ ಸಬ್ಸಿಡಿ ಪಡೆದ ಕೇಂದ್ರ BJP ಸಚಿವ ಭಾಗೀರಥ್ ಚೌಧರಿ

ಕೇಂದ್ರ ಕೃಷಿ ಖಾತೆ ರಾಜ್ಯ ಸಚಿವ ಭಾಗೀರಥ್ ಚೌಧರಿ ಅವರು ತಮ್ಮದೇ ಸಚಿವಾಲಯದ ವ್ಯಾಪ್ತಿಗೆ ಒರುವ ಯೋಜನೆಯಡಿ, ವಾಣಿಜ್ಯ ಸೌತೆಕಾಯಿ ಕೃಷಿ ಯೋಜನೆಗಾಗಿ 99.03 ಲಕ್ಷ ರೂ. ಸಬ್ಸಿಡಿ (ಸಹಾಯಧನ) ಪಡೆದಿರುವುದು ತನಿಖಾ...