Homeಮುಖಪುಟಅಹಮದಾಬಾದ್| ಮ್ಯಾನ್‌ಹೋಲ್‌ನಲ್ಲಿ ಉಸಿರುಗಟ್ಟಿ ಇಬ್ಬರು ದಲಿತ ಯುವಕರು ಸಾವು

ಅಹಮದಾಬಾದ್| ಮ್ಯಾನ್‌ಹೋಲ್‌ನಲ್ಲಿ ಉಸಿರುಗಟ್ಟಿ ಇಬ್ಬರು ದಲಿತ ಯುವಕರು ಸಾವು

- Advertisement -
- Advertisement -

ಅಹಮದಾಬಾದ್‌ನ ಒಳಚರಂಡಿ ಸ್ವಚ್ಛಗೊಳಿಸುವಾಗ ಅಮೇಥಿಯ ಇಬ್ಬರು ದಲಿತ ಯುವಕರ ಸಾವನ್ನಪ್ಪಿದ್ದು, ಪ್ರಕರಣಕ್ಕೆ ಸಂಬಂಧಿಸಿದಂತೆ  ಎಂಜಿನಿಯರ್, ಗುತ್ತಿಗೆದಾರ ಸೇರಿದಂತೆ ಮೂವರ ವಿರುದ್ಧ ಪ್ರಕರಣ ದಾಖಲಿಸಲಾಗಿದೆ.

ನಗರದ ಬೋಪಾಲ್ ಪ್ರದೇಶದಲ್ಲಿ ಕೆಲಸ ಮಾಡುವಾಗ ವಿಕಾಸ್ ಲಾಲ್‌ಬಹಾದ್ದೂರ್ ಕೋರಿ (20) ಮತ್ತು ಕನ್ಹಯ್ಯಾಲಾಲ್ ಖುಷಿರಾಮ್ ಕೋರಿ (21) ಇಬ್ಬರೂ ಸೆಪ್ಟೆಂಬರ್ 5 ರಂದು ಸಾವನ್ನಪ್ಪಿದ್ದರು.

ಆರಂಭದಲ್ಲಿ ಗುತ್ತಿಗೆ ಕಾರ್ಮಿಕ ಮೇಲೆ ಮಾತ್ರ ಪ್ರಕರಣ ದಾಖಲಿಸಿ ಬಂಧಿಸಲಾಗಿತ್ತು, ಅಹಮದಾಬಾದ್ ಗ್ರಾಮೀಣ ಪೊಲೀಸರು ಈಗ ಈ ಪ್ರಕರಣದಲ್ಲಿ ಗುತ್ತಿಗೆದಾರ ಮತ್ತು ಎಂಜಿನಿಯರ್‌ಗಳ ಹೆಸರುಗಳನ್ನೂ ಪ್ರಕರಣದಲ್ಲಿ ಸೇರಿಸಿದ್ದಾರೆ; ಅವರನ್ನೂ ಬಂಧಿಸಲು ಬಲೆ ಬೀಸಿದ್ದಾರೆ.

ಮುಖೇಶ್‌ಕುಮಾರ್, ಸೋಮೇಶ್ವರ್ ಅದಾಲತ್ ಠಾಕೂರ್ ವಿರುದ್ಧ ಭಾರತೀಯ ನ್ಯಾಯ ಸಂಹಿತಾ (ಬಿಎನ್‌ಎಸ್) ಸೆಕ್ಷನ್‌ಗಳು 105 (ಕೊಲೆಗೆ ಸಮಾನವಲ್ಲದ ಅಪರಾಧಿ ನರಹತ್ಯೆ) ಮತ್ತು 125 (ಮಾನವ ಜೀವ ಅಥವಾ ವೈಯಕ್ತಿಕ ಸುರಕ್ಷತೆಗೆ ಅಪಾಯವನ್ನುಂಟುಮಾಡುವುದು), ಹಾಗೆಯೇ ಮ್ಯಾನುಯಲ್ ಸ್ಕ್ಯಾವೆಂಜರ್‌ಗಳ ಉದ್ಯೋಗ ನಿಷೇಧ ಮತ್ತು ಅವರ ಪುನರ್ವಸತಿ ಕಾಯ್ದೆಯ ಸೆಕ್ಷನ್ 7 ಮತ್ತು 9 ರ ಅಡಿಯಲ್ಲಿ ಪ್ರಕರಣ ದಾಖಲಿಸಲಾಗಿದೆ. ಅವರ ವಿರುದ್ಧ ದೌರ್ಜನ್ಯ ಕಾಯ್ದೆಯ ಸೆಕ್ಷನ್ 3(2)(v) ಅಡಿಯಲ್ಲಿಯೂ ಪ್ರಕರಣ ದಾಖಲಿಸಲಾಗಿದೆ.

ಉತ್ತರ ಪ್ರದೇಶದ ಅಮೇಥಿಯ ಲಾಲ್‌ಬಹಾದೂರ್ ಛೋಟೆಲಾಲ್ ಕೋರಿ (48) ಎಂಬುವರು ನೀಡಿದ ದೂರಿನ ಮೇರೆಗೆ ಬೋಪಾಲ್ ಪೊಲೀಸ್ ಠಾಣೆಯಲ್ಲಿ ಎಫ್‌ಐಆರ್ ದಾಖಲಿಸಲಾಗಿದೆ. ಅವರ ಮಗ ವಿಕಾಸ್ ಕಳೆದ ಮೂರು ವರ್ಷಗಳಿಂದ ಅಹಮದಾಬಾದ್‌ನಲ್ಲಿ ಪ್ಲಂಬರ್ ಆಗಿ ಕೆಲಸ ಮಾಡುತ್ತಿದ್ದ ಎಂದು ಎಫ್‌ಐಆರ್‌ನಲ್ಲಿ ಉಲ್ಲೇಖಿಸಲಾಗಿದೆ.

ಸೆಪ್ಟೆಂಬರ್ 6 ರಂದು, ಲಾಲ್‌ಬಹಾದೂರ್ ತನ್ನ ಸಂಬಂಧಿ ಅನೀಶ್‌ನಿಂದ ವಿಕಾಸ್ ಮತ್ತು ಅವನ ಸ್ನೇಹಿತ ಕನ್ಹಯ್ಯಾಲಾಲ್ ಅವರನ್ನು ಭೋಪಾಲ್‌ನ ‘ದಿ ಗಾರ್ಡನ್ ಬಂಗಲೋಸ್’ ಬಳಿಯ ಮ್ಯಾನ್‌ಹೋಲ್‌ಗೆ (ಒಳಚರಂಡಿ) ಇಳಿಯಲು ಒತ್ತಾಯಿಸಲಾಗಿದೆ. ಇಳಿದಕೂಡಲೇ ಅವರು ಅವರು ಪ್ರಜ್ಞಾಹೀನರಾಗಿದ್ದಾರೆ ಎಂದು ಕರೆ ಬಂದಿತು. ಚಿಕಿತ್ಸೆಗಾಗಿ ಆಂಬ್ಯುಲೆನ್ಸ್ ಮೂಲಕ ವಿಕಾಸ್ ಅವರನ್ನು ಆಸ್ಪತ್ರೆಗೆ ಸಾಗಿಸಲಾಗುವುದು ಎಂದು ಅವರಿಗೆ ತಿಳಿಸಲಾಯಿತು. ಆದದೆ, ಮರುದಿನ ಸೆಪ್ಟೆಂಬರ್ 7 ರಂದು ಆಂಬ್ಯುಲೆನ್ಸ್ ಅಮೇಥಿಯಲ್ಲಿರುವ ಅವರ ಮನೆಗೆ ತಲುಪಿದಾಗ, ವಾಹನದಿಂದ ಕೆಳಗಿಳಿಸಿದ್ದು ವಿಕಾಸ್‌ನ ನಿರ್ಜೀವ ದೇಹವನ್ನು ಎಂದು ಅವರು ಎಫ್‌ಐಆರ್‌ನಲ್ಲಿ ತಿಳಿಸಿದ್ದಾರೆ.

ವಿಕಾಸ್ ಸಾವಿನ ಬಗ್ಗೆ ಅನೀಶ್ ಅವರನ್ನು ಕೇಳಿದಾಗ, ಲಾಲ್‌ಬಹಾದ್ದೂರ್ ಅವರು ಎಫ್‌ಐಆರ್‌ನಲ್ಲಿ ಸೆಪ್ಟೆಂಬರ್ 5 ರಂದು ಮಧ್ಯಾಹ್ನ 1.30 ರ ಸುಮಾರಿಗೆ ಗುತ್ತಿಗೆದಾರ ಠಾಕೂರ್ ಯಂತ್ರ ತಂದು ವಿಕಾಸ್ ಅವರನ್ನು ಗಟಾರಕ್ಕೆ ಇಳಿಸಿ ಯಾವುದೇ ಸುರಕ್ಷತಾ ಸಾಧನಗಳನ್ನು ಒದಗಿಸದೆ ಅದನ್ನು ಸ್ವಚ್ಛಗೊಳಿಸಲು ಕೇಳಿಕೊಂಡಿದ್ದಾರೆ ಎಂದು ತಿಳಿದು ಬಂದಿದೆ ಎಂದು ಹೇಳಿದ್ದಾರೆ. ವಿಕಾಸ್ ಪ್ರಜ್ಞೆ ತಪ್ಪಿದಾಗ, ಕನ್ಹಯಲಾಲ್ ಅವರಿಗೆ ಸಹಾಯ ಮಾಡಲು ಒಳಗೆ ಹೋದರು. ಆದರೆ, ಅವರೂ ಸಹ ಮೂರ್ಛೆ ಹೋದರು. ಸ್ಥಳದಲ್ಲಿದ್ದ ಇತರ ಜನರು ನಂತರ ಅಗ್ನಿಶಾಮಕ ಇಲಾಖೆಗೆ ಕರೆ ಮಾಡಿ ಇಬ್ಬರನ್ನೂ ರಕ್ಷಿಸಿ ಹತ್ತಿರದ ಖಾಸಗಿ ಆಸ್ಪತ್ರೆಗೆ ಕರೆದೊಯ್ದರು.

ಕನ್ಹಯಲಾಲ್ ಮಧ್ಯಾಹ್ನ 3.40 ಕ್ಕೆ ಸಾವನ್ನಪ್ಪಿದ್ದಾರೆ ಎಂದು ಘೋಷಿಸಲ್ಪಟ್ಟರೆ, ವಿಕಾಸ್ ರಾತ್ರಿ 10.40 ಕ್ಕೆ ಕೊನೆಯುಸಿರೆಳೆದರು.

ಗುರುವಾರ, ಅಹಮದಾಬಾದ್ ಗ್ರಾಮೀಣ ಪೊಲೀಸರ ಎಸ್‌ಸಿ/ಎಸ್‌ಟಿ ಸೆಲ್‌ನ ಉಪ ಎಸ್‌ಪಿ (ಪೊಲೀಸ್ ವರಿಷ್ಠಾಧಿಕಾರಿ) ತಪನ್‌ಸಿನ್ಹ್ ದೋಡಿಯಾ ಅವರು ಮೃತ ಇಬ್ಬರು ವ್ಯಕ್ತಿಗಳನ್ನು ನಿರ್ಮಾಣ ಸ್ಥಳದ ಖಾಸಗಿ ಒಳಚರಂಡಿ ಮಾರ್ಗದಲ್ಲಿ ಕೆಲಸ ಮಾಡಲು ಗುತ್ತಿಗೆ ಪಡೆದಿದ್ದರು ಎಂದು ಹೇಳಿದರು.

“ಪ್ಲಂಬಿಂಗ್ ಕೆಲಸ ಮುಗಿಸಿದ ನಂತರ ಅವರು ಪುರಸಭೆಯ ಮುಖ್ಯ ಒಳಚರಂಡಿ ಮಾರ್ಗಕ್ಕೆ ಸಂಪರ್ಕಿಸಬೇಕಾಗಿತ್ತು. ಆದರೆ, ಮಳೆಯಿಂದಾಗಿ ಮಾರ್ಗವು ಮುಚ್ಚಿಹೋಗಿತ್ತು. ನಂತರ ಖಾಸಗಿ ಒಳಚರಂಡಿಯನ್ನು ಮುಖ್ಯ ಮಾರ್ಗಕ್ಕೆ ಸಂಪರ್ಕಿಸುವ ಮಾರ್ಗವನ್ನು ಸ್ವಚ್ಛಗೊಳಿಸಲು ಇಬ್ಬರನ್ನು ಕೇಳಲಾಗಿದೆ ಎಂದು ನಾವು ಕಂಡುಕೊಂಡಿದ್ದೇವೆ. ಈ ಸಂದರ್ಭದಲ್ಲಿ ಅವರ ಸಾವು ಸಂಭವಿಸಿದೆ” ಎಂದು ಅವರು ಹೇಳಿದರು.

ಗುಜರಾತ್ ಹೈಕೋರ್ಟ್‌ನಲ್ಲಿ ಪ್ರಸ್ತುತ ವಿಚಾರಣೆಯಲ್ಲಿರುವ ನೈರ್ಮಲ್ಯ ಕಾರ್ಮಿಕರ ಸಾವಿನ ಕುರಿತು ಪಿಐಎಲ್‌ನಲ್ಲಿ ಅರ್ಜಿದಾರನಾಗಿರುವ ಮಾನವ್ ಗರಿಮಾ ಎನ್‌ಜಿಒದ ಪರ್ಶೋತ್ತಮ್ ವಘೇಲಾ, “ಉಸ್ತುವಾರಿ ವಹಿಸಿಕೊಂಡಿರುವ ಸರ್ಕಾರಿ ಅಧಿಕಾರಿಗಳು ಸೇರಿದಂತೆ ಕಾರ್ಮಿಕರ ಸಾವಿಗೆ ಕಾರಣರಾದವರನ್ನು ಹೊಣೆಗಾರರನ್ನಾಗಿ ಮಾಡಬೇಕು ಎಂದು ಕಾನೂನು ಸ್ಪಷ್ಟವಾಗಿದೆ” ಎಂದು ಹೇಳಿದರು.

ಗುಜರಾತ್‌: ಕಳ್ಳತನ ಆರೋಪದಡಿ ಮುಸ್ಲಿಂ ಬಾಲಕನ ಮೇಲೆ ಪೊಲೀಸ್ ಕಸ್ಟಡಿಯಲ್ಲಿ ಚಿತ್ರಹಿಂಸೆ: ಶಾಸಕ ಜಿಗ್ನೇಶ್‌ ಮೇವಾನಿ  ಕ್ರಮಕ್ಕೆ ಆಗ್ರಹ

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ಅಂದು ಪಿಣರಾಯಿ ಮನೆ ಮೇಲೆ ದಾಳಿ; ಈಗ ವೀಣಾ ವಿಜಯನ್‌ಗೆ ಸಮನ್ಸ್‌: ಹಿರಿಯ ಕಮ್ಯುನಿಸ್ಟ್‌ ನಾಯಕನ ಕುಟುಂಬದ ಮೇಲೆ ಇಡಿ ಕಣ್ಣು

ಹಣ ಅಕ್ರಮ ವರ್ಗಾವಣೆ ಪ್ರಕರಣದಲ್ಲಿ ಕೇರಳದ ಮಾಜಿ ಮುಖ್ಯಮಂತ್ರಿ ಪಿಣರಾಯಿ ವಿಜಯನ್ ಅವರ ಮನೆ ಮೇಲೆ ಕಳೆದ ತಿಂಗಳು ಜಾರಿ ನಿರ್ದೇಶನಾಲಯ ದಾಳಿ ಮಾಡಿತ್ತು. ಕೊನೆಗೆ ಅಲ್ಲಿ ಏನೂ ಸಿಗದೆ ಬರಿಗೈನಲ್ಲಿ ಅಧಿಕಾರಿಗಳು...

ಮೋದಿ ಸರ್ಕಾರಕ್ಕೆ 12 ವರ್ಷ : 12 ರಿಂದ 4ಕ್ಕೆ ಇಳಿದ ಉಜ್ವಲ ಯೋಜನೆ ಸಿಲಿಂಡರ್

ಪ್ರಧಾನ ಮಂತ್ರಿ ನರೇಂದ್ರ ಮೋದಿ ನೇತೃತ್ವದ ಕೇಂದ್ರದ ಎನ್‌ಡಿಎ ಸರ್ಕಾರ 12 ವರ್ಷಗಳ ಆಡಳಿತಾವಧಿಯನ್ನು ಪೂರ್ಣಗೊಳಿಸಿದೆ ಅಥವಾ ಮೋದಿ ಅವರು ಮೂರನೇ ಅವಧಿಗೆ ಪ್ರಧಾನಿಯಾಗಿ 2026ರ ಜೂನ್ 9ಕ್ಕೆ ಎರಡು ವರ್ಷಗಳು ಪೂರ್ಣಗೊಂಡಿವೆ....

ಬಿರ್ಸಾ ಮುಂಡಾ 150ನೇ ಜಯಂತಿ ಹೆಸರಿನಲ್ಲಿ ಆದಿವಾಸಿ ಹಕ್ಕುಗಳ ಮೇಲೆ ಸಂಘ ಪರಿವಾರದ ಕಣ್ಣು?

ಮೇ 24 ರಂದು ನವದೆಹಲಿಯ ಕೆಂಪುಕೋಟೆಯಲ್ಲಿ (Red Fort) ಭಾರತದಾದ್ಯಂತದ ಲಕ್ಷಾಂತರ ಪರಿಶಿಷ್ಟ ಪಂಗಡದ (ST) ಸಮುದಾಯಗಳ ಜನರು ಒಟ್ಟಿಗೆ ಸೇರಿದ್ದರು. ‘ಜಂಜಾತಿ ಸುರಕ್ಷಾ ಮಂಚ್’ (ಬುಡಕಟ್ಟು ರಕ್ಷಣಾ ವೇದಿಕೆ) ಆಯೋಜಿಸಿದ್ದ ಈ...

ಆಪರೇಷನ್ ಕಮಲ ಭೀತಿ: ರಾಜ್ಯಸಭಾ ಚುನಾವಣೆಗೂ ಮುನ್ನ ಮಧ್ಯಪ್ರದೇಶದ ಕಾಂಗ್ರೆಸ್ ಶಾಸಕರು ಕರ್ನಾಟಕಕ್ಕೆ ಶಿಫ್ಟ್‌?

ಜೂನ್ 18 ರ ರಾಜ್ಯಸಭಾ ಚುನಾವಣೆಗೆ ಮುನ್ನ ಬಿಜೆಪಿಯಿಂದ ಅಕ್ರಮವಾಗಿ ಹಣ ವರ್ಗಾವಣೆ ಪ್ರಯತ್ನಗಳು ನಡೆಯುತ್ತಿವೆ ಎಂದು ಮಧ್ಯಪ್ರದೇಶ ಕಾಂಗ್ರೆಸ್ ನಾಯಕರು ಆರೋಪಿಸಿದ್ದಾರೆ. ಅಡ್ಡ ಮತದಾನ ತಡೆಗಟ್ಟುವ ಜೊತೆಗೆ ತನ್ನ ಶಿಬಿರದ ಒಗ್ಗಟ್ಟು...

ವೀರಪ್ಪನ್ ಹೇಳಿದ ಕಥೆಗೆ 30 ವರ್ಷಗಳ ಬಳಿಕ ಕ್ಲೈಮ್ಯಾಕ್ಸ್ : ಸನ್ ಟಿವಿ ವಿರುದ್ಧ ಕಾನೂನು ಸಮರದಲ್ಲಿ ಗೆದ್ದ ನಟಿ ಸುಕನ್ಯಾ​

ತೊಂಬತ್ತರ ದಶಕದಲ್ಲಿ ತಮಿಳು ಮತ್ತು ಮಲಯಾಳಂ ಚಿತ್ರರಂಗದಲ್ಲಿ ಪ್ರಮುಖ ನಟರೊಂದಿಗೆ ನಟಿಸಿ, ಅಪಾರ ಜನಪ್ರಿಯತೆ ಗಳಿಸಿದ್ದ ನಟಿ ಸುಕನ್ಯಾ ರಮೇಶ್, ಪ್ರಸ್ತುತ ಕೆಲವು ಅಪರೂಪದ ಪಾತ್ರಗಳನ್ನು ಹೊರತುಪಡಿಸಿದರೆ ಚಿತ್ರರಂಗದಲ್ಲಿ ಅಷ್ಟಾಗಿ ಸಕ್ರಿಯರಾಗಿಲ್ಲ. ಈ ನಡುವೆ 2024ರಲ್ಲಿ...

“ರಾಜೀನಾಮೆ ನೀಡಿ, ಬಿಜೆಪಿ ಟಿಕೆಟ್‌ನಲ್ಲಿ ಸ್ಪರ್ಧಿಸಿ”: ಟಿಎಂಸಿ ಬಂಡುಕೋರರಿಗೆ ಮಹುವಾ ಮೊಯಿತ್ರಾ ನೇರ ಸವಾಲು

ಪಶ್ಚಿಮ ಬಂಗಾಳದ ತೃಣಮೂಲ ಕಾಂಗ್ರೆಸ್ (TMC) ಪಕ್ಷದೊಳಗೆ ತೀವ್ರ ಭಿನ್ನಾಭಿಪ್ರಾಯ ಸ್ಫೋಟಗೊಂಡಿದೆ. ಕೇಂದ್ರದ ಬಿಜೆಪಿ ನೇತೃತ್ವದ ಎನ್‌ಡಿಎ (NDA) ಮೈತ್ರಿಕೂಟಕ್ಕೆ ಬೆಂಬಲ ನೀಡಲು ಮುಂದಾಗಿರುವ ಸ್ವಪಕ್ಷದ ಬಂಡಾಯ ಸಂಸದರ ವಿರುದ್ಧ ಟಿಎಂಸಿ ಸಂಸದೆ...

ಪಶ್ಚಿಮ ಬಂಗಾಳದ ಸೋಲಿನ ಬಳಿಕ ‘ಇಂಡಿಯಾದ ಆಸರೆ’ ಬಯಸಿದ ಮಮತಾ

2026ರ ಪಶ್ಚಿಮ ಬಂಗಾಳ ವಿಧಾನಸಭಾ ಚುನಾವಣೆಯ ಸೋಲಿನ ನಂತರ ಮಮತಾ ಬ್ಯಾನರ್ಜಿ ಅವರು ಇದ್ದಕ್ಕಿದ್ದಂತೆ ‘ಇಂಡಿಯಾ’ (INDIA) ಒಕ್ಕೂಟ ಮತ್ತು ರಾಷ್ಟ್ರೀಯ ಮಟ್ಟದ ವಿರೋಧ ಪಕ್ಷಗಳ ಒಗ್ಗಟ್ಟಿಗೆ ಇಷ್ಟೊಂದು ಪ್ರಾಮುಖ್ಯತೆ ನೀಡುತ್ತಿರುವುದು ಏಕೆ? ದೀರ್ಘಕಾಲದವರೆಗೆ...

ಪಶ್ಚಿಮ ಬಂಗಾಳ| ಮತದಾರರ ಪಟ್ಟಿಯಿಂದ ಡಿಲೀಟ್‌ ಆದವರಿಗೆ ಪಡಿತರ ಪ್ರಯೋಜನಗಳಿಲ್ಲ

ಚುನಾವಣಾ ಆಯೋಗದ ವಿಶೇಷ ತೀವ್ರ ಪರಿಷ್ಕರಣೆ (ಎಸ್‌ಐಆರ್) ಯಿಂದಾಗಿ ಪಶ್ಚಿಮ ಬಂಗಾಳದ ಚುನಾವಣಾ ಪ್ರಕ್ರಿಯೆಯಿಂದ ಹೊರಗುಳಿದವರಿಗೆ ಈಗ ಎರಡು ಹೊಡೆತ ಎದುರಾಗಿದೆ. ರಾಜ್ಯ ಸರ್ಕಾರವು ಈಗ ಅವರ ಪಡಿತರ ಚೀಟಿಗಳನ್ನು ಸಹ ನಿಷ್ಕ್ರಿಯಗೊಳಿಸಲು...

ಇಂಡಿಯಾ ಮೈತ್ರಿಕೂಟದ ಸಭೆ: ಎಸ್‌ಐಆರ್, ಬೆಲೆ ಏರಿಕೆ, ನಿರುದ್ಯೋಗದ ಕುರಿತು ಖರ್ಗೆ ಕಳವಳ; ಒಗ್ಗಟ್ಟಿನ ಹೋರಾಟಕ್ಕೆ ಕರೆ

ರಾಜಕೀಯ, ಆರ್ಥಿಕ, ಸಾಮಾಜಿಕ ಮತ್ತು ವಿದೇಶಾಂಗ ನೀತಿ ರಂಗಗಳಲ್ಲಿ ಮೋದಿ ಸರ್ಕಾರದ ವೈಫಲ್ಯಗಳನ್ನು ಎದುರಿಸಲು ತನ್ನ ಒಗ್ಗಟ್ಟನ್ನು ಬಲಪಡಿಸಿಕೊಳ್ಳುವಂತೆ ಕಾಂಗ್ರೆಸ್ ಅಧ್ಯಕ್ಷ ಮಲ್ಲಿಕಾರ್ಜುನ ಖರ್ಗೆ ಅವರು ಸೋಮವಾರ (ಜೂ.8) ಇಂಡಿಯಾ ಮೈತ್ರಿಕೂಟಕ್ಕೆ ಕರೆ...

ಟೆಹ್ರಾನ್ ಮೇಲಿನ ದಾಳಿಗೆ ಪ್ರತೀಕಾರ: ಇಸ್ರೇಲ್ ಮೇಲೆ ಕ್ಷಿಪಣಿ ಹಾರಿಸಿದ ಇರಾನ್

ಟೆಹ್ರಾನ್, ತಬ್ರಿಜ್ ಮತ್ತು ಇಸ್ಫಹಾನ್‌ ಮೇಲಿನ ದಾಲಿಗಳಿಗೆ ಪ್ರತೀಕಾರವಾಗಿ, ಇರಾನ್ ಸೇನೆಯು ಇಸ್ರೇಲ್‌ ಮೇಲೆ ಎರಡನೇ ತರಂಗದ ಕ್ಷಿಪಣಿಗಳನ್ನು ಹಾರಿಸಿದೆ. ದೇಶಾದ್ಯಂತ ಸೈರನ್‌ಗಳು ಮೊಳಗುತ್ತಿವೆ ಎಂದು ಇಸ್ರೇಲ್ ಮಿಲಿಟರಿ ಹೇಳಿದೆ ಎಂದು ಅಂತರಾಷ್ಟ್ರೀಯ...